Kodagu
ಕೊಡವ ಹೆರಿಟೇಜ್ಗೆ ಸಚಿವರ ಭೇಟಿ
ಜನಮಿತ್ರ ಮಡಿಕೇರಿ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ಅವರು ಮಂಗಳವಾರ ‘ಕೊಡವ ಹೆರಿಟೇಜ್’ ಕೇಂದ್ರಕ್ಕೆ ಭೇಟಿ ನೀಡಿ ವೀಕ್ಷಿಸಿದರು.
ಈಗಾಗಲೇ 3 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆದಿದ್ದು, ಉಳಿದ ಕಾಮಗಾರಿ ಆಗದಿರುವ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದರು. ಈಗ ಆಗಿರುವ ಕಾಮಗಾರಿಗಳು ಮತ್ತು ಆಗಬೇಕಿರುವ ಕಾಮಗಾರಿ ಬಗ್ಗೆ ಒಂದು ವಾರದಲ್ಲಿ ವರದಿ ನೀಡುವಂತೆ ಸಂಬಂಧಪಟ್ಟ ಎಂಜಿನಿಯರ್ಗೆ ಸೂಚಿಸಿದರು.
ಕೊಡಗು ಜಿಲ್ಲೆಯಲ್ಲಿ ಹಲವು ಕಾಮಗಾರಿಗಳು ಅರ್ಧಕ್ಕೆ ನಿಂತಿದ್ದು, ಕೆಲವು ಯೋಜನೆಗಳಿಗೆ ಹಣ ಇದ್ದರೂ ಸಹ ಪೂರ್ಣಗೊಳಿಸುತ್ತಿಲ್ಲ ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಸಿದ್ದೇಗೌಡ ಇತರರು ಇದ್ದರು.
Kodagu
ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ: ಅಪ್ಪಚೆಟ್ಟೋಳಂಡ ಡಿಯಾ ಗೆ ಪ್ರಶಸ್ತಿ
ವರದಿ: ಝಕರಿಯ ನಾಪೋಕ್ಲು
ನಾಪೋಕ್ಲು: ಕರ್ನಾಟಕ ರಾಜ್ಯ ಮಕ್ಕಳ ಕಲ್ಯಾಣ ಸಮಿತಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಪ್ರಯುಕ್ತ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ನಾಪೋಕ್ಲು ಬಳಿಯ ಬಲ್ಲಮಾಟಿ ಗ್ರಾಮದ ಅಪ್ಪಚೆಟ್ಟೋಳಂಡ ಎ.ಎಂ. ಡಿಯಾ ಪಾಲ್ಗೊಂಡು ಪ್ರಥಮ ಸ್ಥಾನ ಗಳಿಸಿ ಪ್ರಶಸ್ತಿ ಪಡೆದಿದ್ದಾರೆ.
ಕೊಡಗಿನ ಜವಾಹರ್ ನವೋದಯ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಯಾಗಿರುವ ಡಿಯಾ ಬಲ್ಲಮಾವಟಿ ಗ್ರಾಮದ ಅಪ್ಪಚೆಟ್ಟೊಳಂಡ ಮಿಥುನ್ ಮಾಚಯ್ಯ ಹಾಗೂ ನೀನಾ ಮಾಚಯ್ಯ ದಂಪತಿಗಳ ಪುತ್ರಿಯಾಗಿದ್ದಾರೆ.
Kodagu
ಕೊಡಗು ಎನ್.ಐ.ಎಂ.ಎ ಗೆ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ
ಮಡಿಕೇರಿ: ಕೊಡಗು ಜಿಲ್ಲೆಯ ನಿಮಾ 2022-24 ಸಾಲಿನಲ್ಲಿ ತೋರಿದ ಸರ್ವಾಂಗೀಣ ಚಟುವಟಿಕೆಗಳಿಗೆ ರಾಜ್ಯದ 34 ಶಾಖೆಗಳ ಪೈಕಿ ಪ್ರಥಮ ಸ್ಥಾನವನ್ನು ಪಡೆದ ಹಿರಿಮೆಗೆ ಪಾತ್ರವಾಯಿತು.
ರಾಣಿಬೆನ್ನೂರು ನಲ್ಲಿ ನಡೆದ ಎನ್.ಐ.ಎಂ.ಎ ರಾಜ್ಯ ಸಮಿತಿ ಸಭೆಯಲ್ಲಿ ಕೊಡಗು ಜಿಲ್ಲೆಯ ನಿಮಾ, ಪ್ರಥಮ ಸ್ಥಾನ ಪಡೆದುಕೊಂಡಿರುವ ಅಧಿಕೃತ ಘೋಷಣೆ ಮಾಡಲಾಯಿತು.
ಕೊಡಗು ಜಿಲ್ಲೆಯಿಂದ ರಾಜ್ಯ ಪ್ರತಿನಿಧಿಗಳಾದ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ.ಶ್ಯಾಮ ಪ್ರಸಾದ್ ಪಿ.ಎಸ್ ಹಾಗೂ ಕೊಡಗು ಜಿಲ್ಲಾ ಅಧ್ಯಕ್ಷ ಡಾ.ರಾಜಾರಾಮ.ಎ.ಆರ್.ಜಿಲ್ಲೆಯ ಪರವಾಗಿ ಪ್ರಶಸ್ತಿ ಪಡೆದುಕೊಂಡರು.
ಕೊಡಗು ಜಿಲ್ಲೆಯ ನೀಮಾ ಮಹಿಳಾ ಘಟಕ ಕೂಡ ಮಹಿಳಾ ವಿಭಾಗದಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದುಕೊಂಡಿತು.
25ನೇ ವರ್ಷದ ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಇರುವ ಕೊಡಗು ನೀಮಾ ಈ ವರ್ಷದಲ್ಲಿ ಸಾರ್ವಜನಿಕರಿಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದು ನಿಮಾ ಕೊಡಗು ಘಟಕದ ಅಧ್ಯಕ್ಷ ಡಾ. ರಾಜಾರಾಂ ತಿಳಿಸಿದ್ದಾರೆ.
Kodagu
ಜನವರಿ 26 ರಂದು ಲೋಕಾಪ೯ಣೆಯಾಗಲಿದೆ ಮತ್ತೆ ವಸಂತ
ಮಡಿಕೇರಿ : ಉಪನ್ಯಾಸಕಿ ಮತ್ತು ಲೇಖಕಿ ಕೆ. ಜಯಲಕ್ಷ್ಮಿ ಅವರು ಬರೆದಿರುವ ಮತ್ತೆ ವಸಂತ ಹೆಸರಿನ ಕಥಾ ಸಂಕಲನ ಇದೇ ಜನವರಿ 26 ರಂದು ಲೋಕಾರ್ಪಣೆಯಾಗಲಿದೆ.
ನಗರದ ರೆಡ್ ಬ್ರಿಕ್ಸ್ ಇನ್ ಸಭಾಂಗಣದಲ್ಲಿ ಜನವರಿ 26 ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ಮತ್ತೆ ವಸಂತ ಕಥಾ ಸಂಕಲನವನ್ನು ಆಕಾಶವಾಣಿಯ ಉದ್ಘೋಷಕ ಸುಬ್ರಾಯ ಸಂಪಾಜೆ ಲೋಕಾರ್ಪಣೆ ಮಾಡಲಿದ್ದಾರೆ.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷ ಟಿ. ಪಿ ರಮೇಶ್ ಅಧ್ಯಕ್ಷತೆಯ ಕಾರ್ಯಕ್ರಮದಲ್ಲಿ ಶಕ್ತಿ ಪತ್ರಿಕೆಯ ಸಂಪಾದಕ
ಜಿ . ಚಿದ್ವಿಲಾಸ್, ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಎಚ್ ಟಿ., ಬೆಳ್ತಂಗಡಿಯ ಎನ್. ಜಯಪ್ರಕಾಶ್ ಶರ್ಮ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಮತ್ತೆ ವಸಂತ ಕಥಾ ಸಂಕಲನದ ಕಥೆಗಾರ್ತಿ ಜಯಲಕ್ಷ್ಮಿ ತಿಳಿಸಿದ್ದಾರೆ.
-
Chamarajanagar19 hours ago
Hannur|ಒಂದೇ ಹುದ್ದೆಗಾಗಿ ಇಬ್ಬರು ಅಧಿಕಾರಿಗಳ ಜಟಾಪಟಿ
-
Hassan22 hours ago
Hassan| ಕಾಡಾನೆ ದಾಳಿಗೆ ಕಾರ್ಮಿಕ ಬ*ಲಿ
-
State14 hours ago
ಯಲ್ಲಾಪುರ, ಸಿಂಧನೂರಿನಲ್ಲಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ 3ಲಕ್ಷ ಪರಿಹಾರ ಘೋಷಿಸಿದ ಸಿಎಂ
-
National - International14 hours ago
ಪನಾಮಾ ಕಾಲುವೆ ವಿವಾದ: ಟ್ರಂಪ್ ಹೇಳಿಕೆ ತಿರಸ್ಕರಿಸಿದ ಪನಾಮಾ ಅಧ್ಯಕ್ಷ ಜೋಸ್ ರೌಲ್
-
Chamarajanagar10 hours ago
ಜ.23ರಂದು ಚಾಮರಾಜನಗರ ಪಟ್ಟಣದ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Hassan17 hours ago
ಕಾಡಾನೆ ದಾಳಿಯಿಂದ ವೃದ್ದ ಸಾ*ವು ಪ್ರಕರಣ
-
National - International12 hours ago
ರಾಜ್ಯದಲ್ಲಿ ಪ್ರತ್ಯೇಕ ಎರಡು ಕಡೆ ಅಪಘಾತ: ಮೃತರಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ
-
Hassan17 hours ago
ಮೊಟ್ಟ ಮೊದಲ ಬೃಹತ್ ಎಜುಕೇಷನ್ ಎಕ್ಸ್ ಪೋ 2025 ರ ಪ್ರಚಾರ ವಾಹನಕ್ಕೆ ಚಾಲನೆ