Kodagu
ಬೆಂಗಳೂರು ಕೊಡವ ಸಮಾಜಕ್ಕೆ ಏಳು ಏಕರೆ ಜಾಗ: ಎಪ್ಪತ್ತು ವರ್ಷಗಳ ಬಳಿಕ ಮರುಕಳಿಸಿದ ಇತಿಹಾಸ
ಬರಹ : ತೆನ್ನೀರ ಮೈನಾ, ಕಾಂಗ್ರೆಸ್ ಮುಖಂಡರು
ಬೆಂಗಳೂರು: ಕೊಡವ ಸಮಾಜ, ಕರ್ನಾಟಕದ ರಾಜ್ಯಧಾನಿ ಬೆಂಗಳೂರಿನಲ್ಲಿ ಸ್ಥಾಪಿತವಾಗಿರುವ ಸಂಸ್ಥೆ. ವಿಶ್ವದಲ್ಲಿಯೇ ಅಪರೂಪದ ಸಂಸ್ಕೃತಿ, ಪರಂಪರೆಯನ್ನು ಹೊಂದಿರುವ ಕೊಡವ ಜನಾಂಗದ ಆಚರಣೆಗಳನ್ನು ನಗರೀಕರಣದ ನಡುವೆಯೂ ನಾಶವಾಗದ ಹಾಗೆ ಕಾಪಾಡಿಕೊಂಡು ಬರುತ್ತಿರುವ ಸಂಸ್ಥೆಯಾಗಿದೆ.

1911 ರಲ್ಲಿ ಕೂರ್ಗ್ ಅಸೋಸಿಯೇಷನ್ ಎಂಬ ಹೆಸರಿನಲ್ಲಿ ಕೇವಲ 30 ಸದಸ್ಯರಿಂದ ಸ್ಥಾಪಿತವಾಗಿ ನಂತರ ಬೆಂಗಳೂರು ಕೊಡವ ಸಮಾಜ ಎಂದು ನಾಮಕರಣಗೊಂಡು ಕೊಡವ ಸಾಹಿತ್ಯ, ಸಂಸ್ಕೃತಿ,ಭಾಷೆ,ಉಡುಗೆ ತೊಡುಗೆ ,ಪದ್ದತಿ ಪರಂಪರೆಯ ಬೆಳವಣಿಗೆಗೆ ತನ್ನದೇ ಆದ ಅಪರಿಮಿತ ಕೊಡುಗೆ ನೀಡುವ ಮೂಲಕ ಬೃಹತ್ತಾಗಿ ಬೆಳೆದಿದೆ. ಸ್ಥಾಪಕ ಅಧ್ಯಕ್ಷ ಕುಪ್ಪಂಡ ಮುದ್ದಪ್ಪರವರಿಂದ ಪ್ರಸ್ತುತ ಅಧ್ಯಕ್ಷ ಕರೋಟಿರ ಪೆಮ್ಮಯ್ಯನವರ ವರೆಗೆ ಸೇವೆ ಸಲ್ಲಿಸಿದ ಎಲ್ಲಾ ಅಧ್ಯಕ್ಷರು ಮತ್ತು ಅವರ ಪಧಾಧಿಕಾರಿಗಳ ಪರಿಶ್ರಮದಿಂದ ಉಚ್ಛ್ರಾಯ ಸ್ಥಿತಿಯಲ್ಲಿ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ.20 ಸಾವಿರಕ್ಕೂ ಅಧಿಕ ಸದಸ್ಯರನ್ನು ಹೊಂದಿದ್ದು ಬೆಂಗಳೂರಿನಲ್ಲಿರುವ ಸುಮಾರು 40 ಸಾವಿರದಷ್ಟಿರುವ ಕೊಡವರಿಗೆ ಬೆಂಗಳೂರು ಕೊಡವ ಸಮಾಜ ಗುರುಮನೆಯಂತಿದೆ.
ಆರಂಭದಲ್ಲಿ ಬೆಂಗಳೂರು ಕೊಡವ ಸಮಾಜಕ್ಕೆ ಸ್ವಂತ ಕಟ್ಟಡವಾಗಲಿ ನಿವೇಶನವಾಗಲಿ ಇರಲಿಲ್ಲ. ಬಸವನಗುಡಿ ಬಳಿಯ ಖಾಸಗಿ ಜಾಗದಲ್ಲಿ ತಮ್ಮ ಕಾರ್ಯಕ್ರಮಗಳನ್ನು( ಪುತ್ತರಿ ನಮ್ಮೆ,ಕೈಲ್ ಪೊಳ್ದ್ ನಮ್ಮೆ,ಊರೊರ್ಮೆ ಮುಂತಾದವು) ನಡೆಸುತ್ತಿದ್ದರು. ಭಾರತದ ಮಹಾನ್ ಸೇನಾ ದಂಡನಾಯಕರಾಗಿ ಸೇವೆ ಸಲ್ಲಿಸಿದ್ದ,ಶಿಸ್ತು ಮತ್ತು ಪ್ರಾಮಾಣಿಕತೆಯನ್ನೇ ಉಸಿರಾಗಿಸಿಕೊಂಡಿದ್ದ ಜನರಲ್ ಕೊಡಂದೇರ.ಎಂ.ಕಾರ್ಯಪ್ಪ ( ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ) ನವರು ಭಾರತೀಯ ಸೈನ್ಯಕ್ಕೆ ಹಾಗೂ ದೇಶಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಸ್ವತಂತ್ರ ಭಾರತದ ಅಂದಿನ ವಿಶಾಲ ಮೈಸೂರು ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಜಯಚಾಮರಾಜೇಂದ್ರ ಒಡೆಯರ್ ರವರು ಬೆಂಗಳೂರಿನ ಹೃದಯ ಭಾಗದಲ್ಲಿರುವ ವಸಂತ ನಗರದಲ್ಲಿ ಒಂದು ಏಕರೆ ಜಾಗವನ್ನು ಉಡುಗೊರೆಯಾಗಿ ನೀಡಿದ್ದರು.ಆ ಜಾಗವನ್ನು 1956 ರಲ್ಲಿ ಬೆಂಗಳೂರು ಕೊಡವ ಸಮಾಜಕ್ಕೆ ದಾನವಾಗಿ ನೀಡಿದರು.ನಂತರದಲ್ಲಿ ಬೆಂಗಳೂರು ಕೊಡವ ಸಮಾಜ ಆ ಜಾಗದಲ್ಲಿ ಬೃಹತ್ ಬಹುಮಹಡಿ ಕಟ್ಟಡಗಳನ್ನು ಹಂತ ಹಂತವಾಗಿ ಕಟ್ಟಿ ದೊಡ್ಡ ಸಂಸ್ಥೆಯಾಗಿ ಬೆಳೆಸಿತು.ಸಂಸ್ಕೃತಿಯ ಬೆಳವಣಿಗೆಗಳ ಜೊತೆಗೆ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಮತ್ತಷ್ಟು ಮೇಲ್ಪಂಕ್ತಿಯನ್ನು ಸಂಸ್ಥೆ ತಲುಪಿತು.

ಸುಮಾರು ಎಪ್ಪತ್ತು ವರ್ಷಗಳ ಹಿಂದೆ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪನವರು ಮಾಡಿದ ಕಾರ್ಯ ಇತಿಹಾಸ ನಿರ್ಮಿಸಿದರೆ ಆ ರೀತಿಯ ಇತಿಹಾಸ ಮತ್ತೊಮ್ಮೆ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ.ಎಸ್.ಪೊನ್ನಣ್ಣ ನವರಿಂದ ಮತ್ತೊಮ್ಮೆ ಮರುಕಳಿಸಿದೆ.ಅದಕ್ಕೆ ಕಾರಣ ಬೆಂಗಳೂರು ಕೊಡವ ಸಮಾಜದ ಹೆಸರಿಗೆ ಬೆಂಗಳೂರು ನಗರ ಜಿಲ್ಲೆಯ ಯಲಹಂಕ ಹೊಸಹಳ್ಳಿ ಯ ಸರ್ವೆ ನಂ 21 ರಲ್ಲಿ ವರ್ಗಾವಣೆಗೊಂಡ ಏಳು ಏಕರೆ ಅತ್ಯಮೂಲ್ಯ ಜಾಗ.
2011 ರಲ್ಲಿ ಬೆಂಗಳೂರು ಕೊಡವ ಸಮಾಜದ ಶತಮಾನೋತ್ಸವ ಕಾರ್ಯಕ್ರಮದ ಸಂಧರ್ಭದಲ್ಲಿ ಅಂದಿನ ಕರ್ನಾಟಕದ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡರು ಅಂದಿನ ಕರ್ನಾಟಕ ರಾಜ್ಯ ವಿಧಾನ ಸಭಾ ಅಧ್ಯಕ್ಷರಾದ ಕೆ.ಜಿ.ಬೋಪಯ್ಯ, ಮಡಿಕೇರಿ ಕ್ಷೇತ್ರದ ಶಾಸಕರಾದ ಅಪ್ಪಚ್ಚು ರಂಜನ್ ರವರಿಗೆ ಸಮಾಜದ ಪ್ರಮುಖರು ಏಳು ಏಕರೆ ಜಾಗದ ಪ್ರಸ್ತಾವನೆಯನ್ನು ಸಲ್ಲಿಸುತ್ತಾರೆ. ಸದಾನಂದ ಗೌಡರು ಒಪ್ಪಿಗೆ ಸೂಚಿಸುತ್ತಾರೆ. ನಂತರ ಆಡಳಿತಾತ್ಮಕ ಪ್ರಕ್ರಿಯೆ ಗಳು ನಡೆದು ದಿನಾಂಕ 8-3-2023 ರಂದು ಸರ್ಕಾರ ಸದರಿ ಜಾಗವನ್ನು ಕೃಷಿಯೇತರ ಜಮೀನಿನ ಪ್ರಸ್ತುತ ಮಾರುಕಟ್ಟೆ ದರ ಪಾವತಿಸಲು ಒಪ್ಪಿಗೆ ನೀಡುತ್ತದೆ. ಕೊಡವ ಸಮಾಜದ ಪಾಲಿಗೆ ಇದೊಂದು ನಿಲುಕದ ದ್ರಾಕ್ಷಿ. ಮಾರುಕಟ್ಟೆ ದರ ವೆಂದರೆ 40 ಕೋಟಿಯಿಂದ 50 ಕೋಟಿ ವೆಚ್ಚವಾಗುತ್ತದೆ.ಇದು ಆ ಸಂಸ್ಥೆಗೆ ಅಸಾಧ್ಯವಾದ ಕಾರ್ಯ. ಆದರೂ ಬೆಂಗಳೂರು ಕೊಡವ ಸಮಾಜ ಸುಮ್ಮನಾಗುವುದಿಲ್ಲ. ಭಗೀರಥ ಪ್ರಯತ್ನ ಮುಂದುವರಿಸುತ್ತದೆ.
ಬೆಂಗಳೂರು ಕೊಡವ ಸಮಾಜದ ಪ್ರಸ್ತುತ ಅಧ್ಯಕ್ಷರಾದ ಕರೋಟಿರ ಪೆಮ್ಮಯ್ಯ ನವರ ನೇತೃತ್ವದಲ್ಲಿ ಮತ್ತೊಂದು ಸಾಹಸಕ್ಕೆ ಮುನ್ನುಡಿ ಹಾಕುತ್ತಾರೆ.ಸರ್ಕಾರ ಬದಲಾಗಿ ವಿರಾಜಪೇಟೆ ಕ್ಷೇತ್ರದ ಶಾಸಕರಾಗಿ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದಲ್ಲಿ ಅಪಾರ ಅನುಭವ ಹೊಂದಿರುವ ಎ.ಎಸ್.ಪೊನ್ನಣ್ಣ ನವರು ಆಯ್ಕೆಯಾಗುತ್ತಾರೆ.

ಕೆಲವೇ ದಿನಗಳಲ್ಲಿ ಮುಖ್ಯಮಂತ್ರಿ ಗಳ ಕಾನೂನು ಸಲಹೆಗಾರರಾಗಿ ಸಂಪುಟ ದರ್ಜೆ ಸ್ಥಾನದೊಂದಿಗೆ ನೇಮಕಗೊಳ್ಳುತ್ತಾರೆ
ಸ್ವತಃ ವಕೀಲರಾದ ಕರೋಟಿರ ಪೆಮ್ಮಯ್ಯ ಮತ್ತು ಅವರ ತಂಡ ಪೊನ್ನಣ್ಣ ನವರಿಗೆ ಮನವಿ ಸಲ್ಲಿಸುತ್ತಾರೆ. ಹಲವು ಸುತ್ತಿನ ಮಾತುಕತೆಗಳು ಅಧಿಕಾರಿಗಳ ಮಟ್ಟದಲ್ಲಿ ನಡೆಯುತ್ತದೆ.ದಿನಾಂಕ 4-3-2024 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಎ.ಎಸ್.ಪೊನ್ನಣ್ಣ ನವರಿಂದ ನಡಾವಳಿ ಪತ್ರ ಸಲ್ಲಿಕೆಯಾಗುತ್ತದೆ. ಮಾನ್ಯ ಮುಖ್ಯಮಂತ್ರಿ ಗಳು ಸಂಪುಟ ಸಭೆಯಲ್ಲಿ ಪ್ರಸ್ತಾವನೆಯನ್ನು ಚರ್ಚೆಗೆ ತರುತ್ತಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮತ್ತು ಬೆಂಗಳೂರು ಉಸ್ತುವಾರಿ ಸಚಿವರಾದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಪೊನ್ನಣ್ಣ ನವರ ಕೋರಿಕೆಯನ್ನು ಒಪ್ಪುತ್ತಾರೆ. ಕಂದಾಯ ಸಚಿವ ಕೃಷ್ಣ ಬೈರೇಗೌಡರ ಸಹಮತದೊಂದಿಗೆ ಸಚಿವ ಸಂಪುಟವೇ ಪೊನ್ನಣ್ಣನವರ ನಡಾವಳಿಗೆ ಮನ್ನಣೆ ನೀಡುತ್ತದೆ.ವಿಶೇಷ ವಿನಾಯತಿಯಡಿ ಜಮೀನು ನೀಡಲು ( ಮಾರುಕಟ್ಟೆ ದರಕ್ಕಿಂತ ಶೇ 90 ರಷ್ಟು ರಿಯಾಯಿತಿ) ಒಪ್ಪಿಗೆ ನೀಡುತ್ತದೆ.ಭೂ ಮಂಜೂರಾತಿ ನಿಯಮಗಳು 1969 ರ ನಿಯಮ 22-ಎ(1)(i)(2) ರನ್ವಯ ಆದೇಶ ಸಂಖ್ಯೆ ನಂ.ಎಲ್.ಎನ್.ಡಿ (ಎನ್.ಎ)/203/2009-10 ದಿನಾಂಕ 2-6-2025 ರಂದು ಆದೇಶ ಹೊರಡಿಸುತ್ತದೆ. ಕೇವಲ ಒಂದು ಕೋಟಿ 7 ಲಕ್ಷ ರೂ.ಗಳನ್ನು ಪಾವತಿಸಿ ಕೊಡವ ಸಮಾಜ ಜಾಗವನ್ನು ಪಡೆಯುತ್ತದೆ.ದಶಕಗಳ ಕೊಡವ ಸಮಾಜದ ಕನಸು ನನಸಾಗುತ್ತದೆ.
ಈ ಭಾನುವಾರ ಅಂದರೆ ದಿನಾಂಕ 15-6-2025 ರಂದು ಬೆಂಗಳೂರು ಕೊಡವ ಸಮಾಜದವತಿಯಿಂದ ಸನ್ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾನಯ್ಯನವರು, ಸನ್ಮಾನ್ಯ ಡಿ.ಸಿ.ಎಂ.ಡಿ.ಕೆ ಶಿವಕುಮಾರ್, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಮುಖ ರುವಾರಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಸೇರಿದಂತೆ ಸಚಿವ ಸಂಪುಟದ ಸದಸ್ಯರಿಗೆ ಅಭಿನಂದನೆಗಳು ಮತ್ತು ಕೃತಜ್ಞತೆ ಸಮಾರಂಭ ಏರ್ಪಡಿಸಿದ್ದು ಬೆಂಗಳೂರು ಕೊಡವ ಸಮಾಜದ ಪಾಲಿಗೆ ಐತಿಹಾಸಿಕ ಕಾರ್ಯಕ್ರಮವಾಗಿದೆ.
Kodagu
ಡಾ.ಬಿ.ಆರ್.ಅಂಬೇಡ್ಕರ್ ಜೀವನ ಸಾಧನೆಗಳನ್ನು ಅಧ್ಯಯನ ಮಾಡಿ: ವೆಂಕಟ್ ರಾಜಾ
ಮಡಿಕೇರಿ : ಡಾ.ಬಿ.ಆರ್.ಅಂಬೇಡ್ಕರ್ ಅವರ ಮೌಲ್ಯ, ಜೀವನ ಸಾಧನೆಗಳನ್ನು ಅಧ್ಯಯನ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ‘ಪರಿನಿರ್ವಾಣ ದಿನ’ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶ ವಿದೇಶಗಳಲ್ಲಿ ಹಲವು ಸ್ನಾತಕೋತ್ತರ ಪದವಿ ಪಡೆದು ರಾಷ್ಟ್ರಕ್ಕೆ ಒಳ್ಳೆಯ ಸಂವಿಧಾನ ನೀಡಿದ್ದಾರೆ. ಅವರ ಜೀವನ ಸಂದೇಶಗಳನ್ನು ತಿಳಿದುಕೊಳ್ಳುವಂತಾಗಬೇಕು ಎಂದರು.
ದೇಶ ವಿದೇಶಗಳಲ್ಲಿ ಅಂಬೇಡ್ಕರ್ ಅವರ ಅಧ್ಯಯನ ಕೇಂದ್ರಗಳು ಹಾಗೂ ಸಂಶೋಧನಾ ಕೇಂದ್ರಗಳು ಇವೆ. ಇಡೀ ಪ್ರಪಂಚದಲ್ಲಿಯೇ ಅವರು ಅಜರಾಮರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ಸ್ಮರಿಸಿದರು.

ದೇಶ ವಿದೇಶಗಳಲ್ಲಿಯೂ ಸಹ ಅವರ ಪ್ರತಿಮೆಯನ್ನು ಕಾಣಬಹುದಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಅಧ್ಯಯನಶೀಲತೆ ಮತ್ತು ಸಾಮಾಜಿಕ ಹೋರಾಟ ರಾಷ್ಟ್ರದಲ್ಲಿ ಒಂದು ರೀತಿ ಮಹಾನ್ ಕ್ರಾಂತಿ ಎಂದು ಜಿಲ್ಲಾಧಿಕಾರಿ ಅವರು ವರ್ಣಿಸಿದರು.
ಅಂಬೇಡ್ಕರ್ ಅವರ ಮೌಲ್ಯಗಳು ಹಾಗೂ ಮಾರ್ಗದರ್ಶನದಂತೆ ನಡೆದುಕೊಳ್ಳಬೇಕು. ಅವರು ಬರೆದಿರುವ ಸಂವಿಧಾನವನ್ನು ಸ್ಮರಿಸಿಕೊಂಡು ಅಭಿವೃದ್ಧಿಯತ್ತ ಚಿಂತನೆ ಮಾಡಬೇಕು. ಮುಂದಿನ ಪೀಳಿಗೆಗೆ ಮಾರ್ಗದರ್ಶಕರಾಗಿ ನಡೆದುಕೊಳ್ಳಬೇಕು ಎಂದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ ಅವರು ಮಾತನಾಡಿ, ಸುಮಾರು ಆರು ದಶಕಗಳ ಹೋರಾಟದ ನಂತರ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣವಾಗುತ್ತಿರುವುದು ಶ್ಲಾಘನೀಯ ಎಂದರು.
ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಸಂಬಂಧ ಜಿಲ್ಲಾಧಿಕಾರಿ ಅವರು ನುಡಿದಂತೆ ನಡೆದಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು.

ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿದರು. ನಗರಸಭೆ ಸದಸ್ಯರಾದ ಎಸ್.ಸಿ.ಸತೀಶ್, ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಂಚಾಲಕರಾದ ದೀಪಕ್ ಪೊನ್ನಪ್ಪ, ಪ್ರಮುಖರಾದ ಮೋಹನ್ ಮೌರ್ಯ, ಪ್ರೇಮ್ ಕುಮಾರ್, ರಮೇಶ್, ಸಿದ್ದೇಶ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಿಬ್ಬಂದಿಗಳು ಇದ್ದರು.
Kodagu
ಪುತ್ತರಿ ಹಿನ್ನೆಲೆ “ಲಕ್ಡಿಕೋಟೆ ಕೊಡವ ಯುದ್ಧ ಸ್ಮಾರಕ”ದಲ್ಲಿ ಕೊಡವ ಯೋಧರಿಗೆ ಗೌರವ ನಮನ ಸಲ್ಲಿಸಿದ ಸಿಎನ್ಸಿ
ಮಡಿಕೇರಿ: ಪತ್ತ್ಕಟ್ಟ್ನಾಡಿನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ನಡೆದ 32ನೇ ವರ್ಷದ ’ಪುತ್ತರಿ ನಮ್ಮೆ’ಯ ಹಿನ್ನೆಲೆ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ “ಲಕ್ಡಿಕೋಟೆ ಕೊಡವ ಯುದ್ಧ ಸ್ಮಾರಕ”ದಲ್ಲಿ ಕೊಡವ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.
ವೀರ ಮರಣವನ್ನಪ್ಪಿದ ಕೊಡವರಿಗೆ ಗೌರವ ಸಲ್ಲಿಸಿ ಮಾತನಾಡಿದ ಎನ್.ಯು.ನಾಚಪ್ಪ ಅವರು 1790-92 ಮತ್ತು 1799ರ ನಡುವೆ ಕ್ರಮವಾಗಿ ಜನರಲ್ ಲಾರ್ಡ್ ಕಾರ್ನ್ವಾಲೀಸ್ ಹಾಗೂ ಜನರಲ್ ಲಾರ್ಡ್ ವೆಲ್ಲೆಸ್ಲಿ ನೇತೃತ್ವದಲ್ಲಿ ನಡೆದ 3ನೇ ಮತ್ತು 4ನೇ ಆಂಗ್ಲೋ-ಮೈಸೂರು ಯುದ್ಧಗಳಲ್ಲಿ ಆದಿಮ ಸಂಜಾತ ಏಕಜನಾಂಗೀಯ ಆನಿಮಿಸ್ಟಿಕ್ ನಂಬುಗೆಯ ಕೊಡವರು ತೋರಿದ ಶೌರ್ಯವನ್ನು ಸ್ಮರಿಸಿದರು.

ಡಿ.ವೀರರಾಜರ ಮಾರ್ಗದರ್ಶನದಲ್ಲಿ ಕೊಡವ ಸೈನ್ಯವು ಮೈಸೂರು ಸುಲ್ತಾನರ ವಿರುದ್ಧ ಬ್ರಿಟಿಷರೊಂದಿಗೆ ಸಮುದಾಯದ ಮಿಲಿಟರಿ ಮೈತ್ರಿಯನ್ನು ಮಾಡಿಕೊಂಡು ನಡೆಸಿದ ಯುದ್ಧದಲ್ಲಿ ಟಿಪ್ಪು ಸುಲ್ತಾನನಿಗೆ ಸೋಲಾಯಿತು. ಕೊಡವ ಯೋಧರ ವೀರಾವೇಶದಿಂದಲೇ ಮೈಸೂರು ಸುಲ್ತಾನರಿಗೆ 31 ಬಾರಿ ಸೋಲಾಗಿದೆ ಎಂದರು.
1785 ರಲ್ಲಿ ಮೈಸೂರು ಸುಲ್ತಾನರು ಹಾಗೂ ಫ್ರೆಂಚ್ ಪಡೆಗಳು ನಡೆಸಿದ ದೇವಟ್ ಪರಂಬು ದಾಳಿಯಿಂದಾದ ಕೊಡವ ನರಮೇಧದ ಪರಿಣಾಮ ಆಂಗ್ಲೋ-ಮೈಸೂರು ಯುದ್ಧಗಳಲ್ಲಿ ಕೊಡವ ಯೋಧರು ಭಾಗವಹಿಸಲು ಕಾರಣವಾಯಿತು. ವೀರ ಕೊಡವರ ಶೌರ್ಯವನ್ನು ಗೌರವಿಸುವುದಕ್ಕಾಗಿ ’ಪುತ್ತರಿ ನಮ್ಮೆ’ಯ ಪ್ರಯುಕ್ತ ಹಿತಿಯರನ್ನು ಸ್ಮರಿಸಲಾಯಿತು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಲಿಯಂಡ ಮೀನಾ ಪ್ರಕಾಶ್, ಕಲಿಯಂಡ ಪ್ರಕಾಶ್, ಜಮ್ಮಡ ಮೋಹನ್, ಕಾಂಡೇರ ಸುರೇಶ್, ಬೇಪಡಿಯಂಡ ದಿನು, ಅರೆಯಡ ಗಿರೀಶ್, ನಂದೇಟಿರ ರವಿ ಸುಬ್ಬಯ್ಯ, ಬೊಟ್ಟಂಗಡ ಗಿರೀಶ್, ಚಂಬಂಡ ಜನತ್, ಕಿರಿಯಮಾಡ ಶೆರಿನ್, ಪಾರ್ವಂಗಡ ನವೀನ್, ಕಿರಿಯಮಾಡ ಶಾನ್, ಮದ್ರಿರ ಕರುಂಬಯ್ಯ, ಅಪ್ಪೆಯಂಗಡ ಮಾಲೆ ಪೂಣಚ್ಚ ಹಾಗೂ ಚೊಕ್ಕಂಡ ಕಟ್ಟಿ ಪಾಲ್ಗೊಂಡಿದ್ದರು.
Kodagu
ಕಗ್ಗೋಡ್ಲುವಿನ ಹೂಕಾಡು ಪೈಸಾರಿಗೆ ಶಾಸಕ ಪೊನ್ನಣ್ಣ ಭೇಟಿ
ಮಡಿಕೇರಿ : ತಾಲೂಕು ಕಗ್ಗೋಡ್ಲುವಿನ ಹೂಕಾಡು ಪೈಸಾರಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಭೇಟಿ ನೀಡಿದರು.
ಬಳಿಕ ಶಾಸಕರ ಅನುದಾನದ 25 ಲಕ್ಷಗಳಲ್ಲಿ ಕೈಗೆತ್ತಿಕೊಂಡಿರುವ ರಸ್ತೆ ದುರಸ್ತಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕರು, ಎಲ್ಲರಿಗೆ ಶುಭ ಕೋರಿದರು. ಬಳಿಕ ಮೇಕೇರಿಯ ಶಾಲೆ ಎದುರಿನ ಮುಖ್ಯ ರಸ್ತೆ ಬಳಿ, ನೂತನವಾಗಿ ಶಾಸಕರ ಅನುದಾನದಲ್ಲಿ ನಿರ್ಮಾಣ ಆಗುತ್ತಿರುವ ಬಸ್ ತಂಗುದಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ಹಾಕತ್ತುರು ವಲಯ ಅಧ್ಯಕ್ಷರು ಪಿಯೂಸ್, ಮೇಕೇರಿ ವಲಯ ಪೊನ್ನಪ್ಪ, ಶಾರದಾ, ಜಗತ್, ವಿಜಯಲಕ್ಷ್ಮಿ, ಬೂತ್ ಅಧ್ಯಕ್ಷರು ಕೊರಗಪ್ಪ, ಶಂಕರ ಪೂಜಾರಿ, ತಿಮ್ಮಯ್ಯ, ಪಂಚಾಯಿತಿ ಸದಸ್ಯರು ಹನೀಫ್, ಸೂರಜ್ ಹೊಸೂರು, ಉದಯ ಅಯ್ಯಪ್ಪ, ಸಾಕಿಬ್, ಪ್ರಕಾಶ್, ಆಪ್ರು ರವೀಂದ್ರ, ರತ್ನಕರ್ ರೈ,ಅಭಿನ್ ರೈ ಹಾಗೂ ಉಪಸ್ಥಿತರಿದ್ದರು.
-
State15 hours agoಡಿವೈಡರ್ಗೆ ಕಾರ್ ಡಿಕ್ಕಿ, ಹೊತ್ತಿ ಉರಿದ ಕಾರಿನೊಳಗೆ ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನ
-
Hassan12 hours agoನಗರದ ಇಂಜಿನಿಯರ್ ಕಾಲೇಜು ಆವರಣದಲ್ಲಿ ಸರ್ಕಾರಿ ಸೇವೆಗಳ ಸಮರ್ಪಣ ಸಮಾವೇಶ
-
Hassan15 hours agoಅಂಬೇಡ್ಕರ್ ತತ್ತ್ವ, ಸಿದ್ಧಾಂತಗಳು ಶಾಶ್ವತ: ಸಂಸದ ಶ್ರೇಯಸ್ ಪಟೇಲ್
-
Mandya11 hours agoಡಾ.ಬಿ.ಆರ್.ಅಂಬೇಡ್ಕರ್ ರವರ 69ನೇ ಪರಿನಿರ್ವಾಣ ದಿನ: ಮಾಲಾರ್ಪಣೆ ಮಾಡಿದ ಕೇಂದ್ರ ಸಚಿವ ಎಚ್ಡಿಕೆ
-
Chikmagalur18 hours agoಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಹ*ತ್ಯೆ
-
Hassan16 hours agoಸಿಎಂ, ಡಿಸಿಎಂ ಇಂದು ಹಾಸನ ಜಿಲ್ಲಾ ಪ್ರವಾಸ
-
Mysore16 hours agoಡ್ರೋನ್ ಕ್ಯಾಮರದ ರೆಕ್ಕೆ ತಗಲಿ ಶಾಸಕ ಅನಿಲ್ ಚಿಕ್ಕಮಾದು ಮುಖಕ್ಕೆ ಗಾಯ
-
Mysore9 hours agoಡಿ.14ರಂದು ‘ಮೈಸೂರು ಭವಿಷ್ಯದ ಅಭಿವೃದ್ಧಿ’ ಸಾರ್ವಜನಿಕ ಸಂವಾದ
