Connect with us

Hassan

ಹಾಸ್ಟೆಲ್‌ನಿಂದ ಅಕ್ರಮವಾಗಿ ಅಕ್ಕಿ ಸಾಗಾಟ ಪ್ರಕರಣ : ವಾರ್ಡನ್ ಅಮಾನತು

Published

on

ಹಾಸನ : ಹಾಸ್ಟೆಲ್‌ನಿಂದ ಅಕ್ರಮವಾಗಿ ಅಕ್ಕಿ ಸಾಗಾಟ ಪ್ರಕರಣ

ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದ ವಾರ್ಡನ್ ಅಮಾನತು

ಕಾಂತರಾಜು ಅಮಾನತ್ತಾದ ವಾರ್ಡನ್

ಹಾಸನ ಜಿಲ್ಲೆ, ಆಲೂರು ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದ ವಾರ್ಡನ್ ಕಾಂತರಾಜು

ಕಾಂತರಾಜು ಜೊತೆ ಹೊರಗುತ್ತಿಗೆ ನೌಕರ ಕೃಷ್ಣೇಗೌಡ ಕೂಡ ಅಮಾನತು

ಸರ್ಕಾರದಿಂದ ಬಂದಿದ್ದ ಅಕ್ಕಿ ಮೂಟೆಯನ್ನು ರಾತ್ರೋ ರಾತ್ರಿ ಅಕ್ರಮವಾಗಿ ಬೇರೆಡೆ ಸಾಗಿಸಲಾಗುತ್ತಿದೆ ಎಂಬ ಆರೋಪ

ವೈರಲ್ ಆಗಿದ್ದ ಹಾಸ್ಟೆಲ್‌ನ ವಿದ್ಯಾರ್ಥಿಗಳೇ ಸ್ಕೂಟರ್‌ನಲ್ಲಿ ಅಕ್ಕಿ ಸಾಗಿಸುತ್ತಿದ್ದ ವಿಡಿಯೋ

ಈ ಹಿನ್ನಲೆ ವಾರ್ಡನ್ ಕಾಂತರಾಜುಗೆ ಕಾರಣ ಕೇಳಿ ನೋಟೀಸ್ ನೀಡಿದ್ದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಲಕ್ಷಣೇಗೌಡ

ಸಮಾಜ ಕಲ್ಯಾಣ ಇಲಾಖೆ ಆಯುಕ್ತರಿಗೆ ವರದಿ ಸಲ್ಲಿಸಿದ್ದ ಲಕ್ಷಣೇಗೌಡ

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಆಯುಕ್ತರು

ವಾರ್ಡನ್ ಕಾಂತರಾಜು ಹಾಗೂ ಕೃಷ್ಣೇಗೌಡ ಅವರನ್ನು ಅಮಾನತುಗೊಳಿಸಿ ಆದೇಶ

Continue Reading
Click to comment

Leave a Reply

Your email address will not be published. Required fields are marked *

Hassan

ಬಿರುಗಾಳಿ ಸಹಿತ ಮಳೆಗೆ ಭಾರೀ ಪ್ರಮಾಣದಲ್ಲಿ ಭೂಕುಸಿತ

Published

on

ಹಾಸನ : ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಭಾರೀ  ಪ್ರಮಾಣದಲ್ಲಿ ಭೂಕುಸಿತ ಉಂಟಾಗಿದೆ.

ಈ ಘಟನೆ ಸಕಲೇಶಪುರ ತಾಲ್ಲೂಕಿನ, ಹೆಗ್ಗದ್ದೆ ಗ್ರಾಮದ ಬಳಿ ಶಿರಾಡಿಘಾಟ್ ರಸ್ತೆ ಎನ್‌ಎಚ್‌- 75 ರಲ್ಲಿ ನಡೆದಿದೆ. ಮೊದಲೇ ಭೂಕುಸಿತವಾಗಿದ್ದರಿಂದ ಒಂದು ಬದಿ ರಸ್ತೆ ಸಂಚಾರ ಬಂದ್ ಮಾಡಿದ್ದ ಅಧಿಕಾರಿಗಳು ಇಟಾಚಿ ಮೂಲಕ ನಡೆಯುತ್ತಿದ್ದ ಮಣ್ಣು ತೆರವು ಕಾರ್ಯಾಚರಣೆ ಮಾಡುತ್ತಿದ್ದರು. ಹೀಗಾಗಿ  ವಾಹನಗಳ ಸಂಚಾರ ಬಂದ್ ಮಾಡಲಾಗಿತ್ತು.

ಈ ವೇಳೆ ಮತ್ತೆ ದೊಡ್ಡ ಪ್ರಮಾಣದಲ್ಲಿ ಕುಸಿದ ಭೂಮಿ ಮರಗಳ ಸಮೇತ ಕುಸಿದು ರಸ್ತೆ ಪೂರ್ತಿ ಜಖಂಗೊಂಡಿದೆ. ಇನ್ನೂ ವಾಹನಗಳ ಸಂಚಾರವನ್ನು ಬಂದ್  ಮಾಡಿದ್ದರಿಂದ  ದೊಡ್ಡ ಅನಾಹುತ ತಪ್ಪಿದೆ.

Continue Reading

Hassan

ಮರಿ ಸತ್ತು ಮೂರು ದಿನವಾದರೂ ಸ್ಥಳ ಬಿಟ್ಟು ಕದಲದ ತಾಯಿಯಾನೆ

Published

on

ಅರೇಹಳ್ಳಿ: ತನ್ನ ಮರಿ ಸತ್ತು ಮೂರು ದಿನ ಕಳೆದರೂ ತಾಯಿಯಾನೆ ತಾನು ಹೋದಲೆಲ್ಲಾ ಮೃತ ಮರಿಯಾನೆಯನ್ನು ತನ್ನೊಂದಿಗೆ ಎಳೆದುಕೊಂಡು ಹೋಗುತ್ತಿರುವ ಮನಕಲಕುವ ಘಟನೆ ಬೇಲೂರು ತಾಲೂಕು ಅರೇಹಳ್ಳಿ ಹೋಬಳಿಯ ಶಿರಗುರ ಗ್ರಾಮದ ಜಾಕ್‌ನಳ್ಳಿ ಎಸ್ಟೇಟ್ ಬಳಿ ನಡೆದಿದೆ.

ಘಟನೆ ಹಿನ್ನೆಲೆ:

ಕಳೆದ ಶನಿವಾರ ಗರ್ಭಿಣಿ ಹೆಣ್ಣಾನೆ ಮರಿಯಾನೆಗೆ ಜನ್ಮ ನೀಡಿದೆ. ಆದರೆ ಹುಟ್ಟುವ ವೇಳೆ ಮರಿಯು ಸ್ಥಳದಲ್ಲೆ ಮೃತಪಟ್ಟಿದೆ. ತಾಯಿ ಆನೆ ತನ್ನ ಮರಿ ಜೀವಂತವಾಗಿದೆ ಎಂದು ತಿಳಿದು ಕಾಲಿನಿಂದ ಒದ್ದು ಬದುಕಿಸುವ ಪ್ರಯತ್ನ ಮಾಡಿದರೂ ಸಹ ಮೃತ ಮರಿ ಮೇಲೇಳದಿರುವುದನ್ನು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ದೃಶ್ಯ ಸೆರೆಹಿಡಿದಿದ್ದಾರೆ.

ಜೋರು ಮಳೆ ಸುರಿಯುತ್ತಿರುವುದರ ಜೊತೆಗೆ ಸತ್ತ ಮರಿಯನ್ನು ಎಳೆದುಕೊಂಡು ಹೋಗುತ್ತಿರುವುದು ಎಂಥ ಕಲ್ಲು ಮನಸ್ಸಿನವರಿಗೂ ಕರುಳು ಚುರುಕ್ ಎನ್ನುವಂತಿದೆ ಈ ದೃಶ್ಯಾವಳಿ. ತನ್ನ ಕರುಳ ಕುಡಿ ಇನ್ನೂ ಬದುಕಿದೆ ಎಂಬ ಭ್ರಮೆಯಲ್ಲಿರುವ ಮಾತೃ ಹೃದಯ ಯಾರನ್ನೂ ಕೂಡ ಹತ್ತಿರ ಹೋಗಲು ಬಿಡುತ್ತಿಲ್ಲ. ಭಾನುವಾರವಷ್ಟೆ ಅರೇಹಳ್ಳಿ ಸಮೀಪದ ಕೆಸಗುಲಿ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಮರಿಯೊಂದಿಗೆ ತಾಯಿಯಾನೆಯೂ ಸಹ ಮೃತಪಟ್ಟಿತ್ತು. ಈ ಘಟನೆ ಜನಮಾನಸದಲ್ಲಿ ಮಾಸುವ ಮುನ್ನವೇ ಮತ್ತೊಂದು ಮರಿ ಮೃತಪಟ್ಟಿರುವುದು ಪ್ರಾಣಿ ಪ್ರಿಯರಿಗೆ ಅತೀವ ನೋವನ್ನುಂಟುಮಾಡಿದೆ.

“ಕಳೆದೆರಡು ದಿನಗಳ ಹಿಂದೆ ಮೃತಪಟ್ಟ ಮರಿಯೊಂದಿಗೆ ತಾಯಿಯಾನೆ ತೆರಳುತ್ತಿರುವುದು ಬೇಸರ ತಂದಿದೆ. ಹೀಗಾಗಿ ಸಿಬ್ಬಂದಿಗಳನ್ನು ಹತ್ತಿರ ಹೋಗಲು ಬಿಡುತ್ತಿಲ್ಲ. ಮರಿ ವಾಸನೆ ಬಂದರೆ ತಾಯಿಯಾನೆ ತನ್ನಿಂತಾನೆ ಬೇರೆಯಾಗುತ್ತದೆ” ಎಂದು
ಬೇಲೂರಿನ ಆರ್‌ಎಫ್‌ಒ ಅಧಿಕಾರಿ ಯತೀಶ್ ತಿಳಿಸಿದ್ದಾರೆ.

Continue Reading

Hassan

ಹಾಸನ: ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್‌ ನಾಗೇಂದ್ರರನ್ನು ಸನ್ಮಾನಿಸಿದ ತಾಲ್ಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ

Published

on

ಹಾಸನ: ಈ ಜಿಲ್ಲೆಯಲ್ಲಿ ನೂತನ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ನೇಮಕವಾಗಿರುವ ಹಾಗೂ ಸಮಾಜ ಸೇವಕ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕೇಂದ್ರ ಸಮಿತಿಯ ಮಾಜಿ ಕಾರ್ಯ ನಿರ್ವಾಹಕ ಸದಸ್ಯರಾಗಿದ್ದ ಸಿದ್ದೇಶ್‌ ನಾಗೇಂದ್ರ ಅವರಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ವತಿಯಿಂದ ಸನ್ಮಾಸಿದ್ದಾರೆ.

ಹಾಸನದ ಬಿಜೆಪಿ ಕಚೇರಿಯಲ್ಲಿ ಇಂದು ಸಿದ್ಧೇಶ್‌ ನಾಗೇಂದ್ರ ಅವರಿಗೆ ಸನ್ಮಾನಿಸಿ ಗೌರವ ಪುರಸ್ಕಾರ ನೀಡಿದ್ದಾರೆ.

ಈ ಸಂದರ್ಭದಲ್ಲಿ ಹಾಸನ ತಾಲ್ಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾದ ಅಧ್ಯಕ್ಷರಾದ ಕಟ್ಟಾಯ ಶಿವಕುಮಾರ್, ಮಹಿಳಾ ಘಟಕದ ಅಧ್ಯಕ್ಷರಾದ ಮಮತಾ ಪಾಟೀಲ್, ನಿರ್ದೇಶಕರಾದ ಮಯೂರಿ ಲೋಕೇಶ್, ಡಿ. ವಿ.ಮದನ್, ಹೆಚ್. ಕೆ.ಮಿಥುನ್, ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಧನಲಕ್ಷ್ಮೀ ಲೋಕೇಶ್, ಖಜಾಂಚಿ ಶೈಲಾ ಮದನ್‌, ನಿರ್ಧೇಶಕರಾದ ಭಾಮಿನಿಹೇಮಂತ್, ವೀಣಾ ದೇವರಾಜ್, ಡಿ. ಸಿ.ಅನೂಸೂಯ, ಸುಶೀಲ ಪಾಲನೇತ್ರ, ಸವಿತಾ ಭೂಷಣ್ ಮುಖಂಡರಾದ ನೇತ್ರವತಿ ಮಂಜುನಾಥ್‌ ಇತರರು ಉಪಸ್ಥಿತರಿದ್ದರು.

Continue Reading

Trending

error: Content is protected !!