Agriculture
25 ಲಕ್ಷದವರೆಗೆ ಸಾಲ ಮತ್ತು ಅದಕ್ಕೆ 35% ಸಬ್ಸಿಡಿ : ಕೇಂದ್ರ ಸರ್ಕಾರದ ಈ ಯೋಜನೆಯಡಿ ಯಾರಿಗೆ ಸಿಗಲಿದೆ ಈ ಸೌಲಭ್ಯ?
PMEGP Scheme | How to apply? – ಕೇಂದ್ರ ಸರ್ಕಾರವು ಹೊಸದಾಗಿ ಸ್ವಂತ ಉದ್ಯಮ ಆರಂಭಿಸುವ ಯುವ ಜನತೆಗೆ ಅನೇಕ ರೀತಿಯಲ್ಲಿ ಸಹಾಯ ಮಾಡುತ್ತದೆ. ಆದರೆ ಹಲವು ಜನರಿಗೆ ಈ ಯೋಜನೆಗಳ ಮಾಹಿತಿ ತಿಳಿದಿರುವುದೇ ಇಲ್ಲ. ಈ ಒಂದು ಲೇಖನದಲ್ಲಿ ಕೇಂದ್ರ ಸರ್ಕಾರದ ಒಂದು ಉತ್ತಮ ಯೋಜನೆಯ ಬಗ್ಗೆ ತಿಳಿಸಲಿದ್ದೇವೆ.
ಯಾವುದು ಈ ಯೋಜನೆ?
ಈ ಯೋಜನೆಯ ಹೆಸರು ” ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ “. ಈ ಯೋಜನೆಯನ್ನು 2008 ಆಗಸ್ಟ್ 15ರಂದು ಅಂದಿನ ಪ್ರಧಾನ ಮಂತ್ರಿ ಮನಮೋಹನ ಸಿಂಗ್ ಅವರು ಜಾರಿಗೋಳಿಸಿದ್ದರು. ಈ ಯೋಜನೆಯ ಮುಖ್ಯ ಉದ್ದೇಶವೇನೆಂದರೆ ಹೊಸದಾಗಿ ಸ್ವಂತ ಉದ್ಯಮ ಆರಂಭಿಸುವವರಿಗೆ ಆರ್ಥಿಕ ಸಹಾಯ ಮಾಡುವುದಾಗಿದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಸಂಬಂಧಪಟ್ಟ ಬ್ಯಾಂಕಗಳು ನಿಮ್ಮ ಯೋಜನಾ ಮೊತ್ತದ ಗರಿಷ್ಟ 90% ನಿಂದ 95% ವರೆಗಿನ ಹಣವನ್ನು ಮಂಜೂರು ಮಾಡುತ್ತವೆ. ನೀವು ಪಡೆದ ಸಾಲದ ಮೊತ್ತದ ಮೇಲೆ PMEGP ಯೋಜನೆಯ ಅಡಿಯಲ್ಲಿ 15% ನಿಂದ 35% ನವರೆಗೆ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ನೀಡುತ್ತದೆ.
ಹಾಗಿದ್ದರೆ ಈ ಯೋಜನೆಗೆ ಅರ್ಜಿ ಯಾರು ಸಲ್ಲಿಸಬಹುದು? ಹೇಗೆ ಅರ್ಜಿ ಸಲ್ಲಿಸಬೇಕು? ಯಾವ ದಾಖಲೆಗಳು ಬೇಕು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಯಾರು ಅರ್ಹರು?
ಕನಿಷ್ಠ 8ನೇ ತರಗತಿ ಪಾಸಾದಂತಹ 18 ವರ್ಷದ ಮೇಲಿನ ಭಾರತೀಯ ಪ್ರಜೆಗಳಾಗಿರಬೇಕು. ಈ ಮೊದಲು ಉದ್ಯಮ ಆರಂಭಿಸಲು ಸರ್ಕಾರದಿಂದ ಯಾವುದೇ ರೀತಿಯ ಲಾಭ ಪಡೆದುಕೊಂಡಿರಬಾರದು.
ಅರ್ಜಿ ಸಲ್ಲಿಸಲು ಬೇಕಾಗುವಂತಹ ಅವಶ್ಯಕ ದಾಖಲೆಗಳು :
ಈ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ಅರ್ಹರಿದ್ದರೆ ಈ ಕೆಳಗಿನ ದಾಖಲಾತಿಗಳನ್ನು ಸಿದ್ಧಪಡಿಸಿ ಇಟ್ಟುಕೊಳ್ಳಿ.
1. ಪಾಸ್ಪೋರ್ಟ್ ಅಳತೆಯ ಭಾವಚಿತ್ರ
2. ಶೈಕ್ಷಣಿಕ ಪ್ರಮಾಣಪತ್ರ
3. ವಿವರವಾದ ಯೋಜನಾ ವರದಿ
4. ಜಾತಿ ಪ್ರಮಾಣಪತ್ರ
5. ಗ್ರಾಮೀಣ ಪ್ರಮಾಣ ಪತ್ರ (ಅನ್ವಯವಾದಲ್ಲಿ ಮಾತ್ರ)
ಅರ್ಜಿ ಹೇಗೆ ಸಲ್ಲಿಸಬೇಕು?
ಅರ್ಹತೆ ಹೊಂದಿರುವ ಅಭ್ಯರ್ಥಿಗಳು PMEGP ಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ, ನೋಂದಣಿ ಮಾಡಿಕೊಂಡು ಬೇಕಾಗುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅವಶ್ಯಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು.
PMEGP ಅಧಿಕೃತ ಜಾಲತಾಣ –
https://www.kviconline.gov.in/pmegpeportal/pmegphome/index.jsp
Agriculture
ಮೆಕ್ಕೆಜೋಳಕ್ಕೆ ₹3,000 ಕನಿಷ್ಠ ಬೆಂಬಲ ಬೆಲೆ ಬೇಕು ಇಲ್ಲದಿದ್ದರೆ ಕಬ್ಬು ಬೆಳೆಗಾರರಂತೆ ಹೋರಾಟ : ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಎಚ್ಚರಿಕೆ
ಬೆಂಗಳೂರು : ಮೆಕ್ಕೆಜೋಳ ಬೆಳೆಗಾರರ ಹಿತಾಸಕ್ತಿಗಾಗಿ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರು ಎಚ್ಚರಿಸಿದ್ದಾರೆ. ಸರ್ಕಾರವು ಮೆಕ್ಕೆಜೋಳಕ್ಕೆ ₹3,000 ಕನಿಷ್ಠ ಬೆಂಬಲ ಬೆಲೆ (MSP) ನಿಗದಿ ಮಾಡದಿದ್ದರೆ, ಕಬ್ಬು ಬೆಳೆಗಾರರಂತೆ ರೈತರು ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಹಿನ್ನೆಲೆ:
ಇತ್ತೀಚಿನ ವರ್ಷಗಳಲ್ಲಿ ಮೆಕ್ಕೆಜೋಳದ ಮಾರುಕಟ್ಟೆ ಬೆಲೆ ನಿರಂತರ ಕುಸಿತ ಕಂಡಿದ್ದು, ರೈತರು ನಷ್ಟದ ಬಲೆಯಲ್ಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಉತ್ಪಾದನಾ ವೆಚ್ಚ ಹೆಚ್ಚಾಗಿರುವುದರಿಂದ ₹3,000 MSP ನೀಡುವುದು ನ್ಯಾಯಸಮ್ಮತ ಎಂದು ರೈತ ಸಂಘಟನೆಗಳು ಆಗ್ರಹಿಸುತ್ತಿವೆ.

“ರೈತರ ದುಡಿಮೆ ಗೌರವಿಸಲ್ಪಡಬೇಕು. ಸರ್ಕಾರವು ಮೆಕ್ಕೆಜೋಳದ ಬೆಲೆ ಸ್ಥಿರಪಡಿಸದಿದ್ದರೆ, ಕಬ್ಬು ಬೆಳೆಗಾರರ ಶೈಲಿಯ ಹೋರಾಟ ಅನಿವಾರ್ಯವಾಗಲಿದೆ. ರೈತರ ಹಿತಕ್ಕಾಗಿ ನಾವು ಹೋರಾಟಕ್ಕೆ ಸಿದ್ಧರಾಗಿದ್ದೇವೆ,” ಎಂದು ರೇಣುಕಾಚಾರ್ಯ ಅವರು ಹೇಳಿಕೆ ನೀಡಿದ್ದಾರೆ.
ಮುಖ್ಯ ಬೇಡಿಕೆಗಳು:
ಮೆಕ್ಕೆಜೋಳಕ್ಕೆ ಕನಿಷ್ಠ ₹3,000 MSP ನಿಗದಿ
ರೈತರಿಗೆ ಸಮಯಕ್ಕೆ ಸರಿಯಾದ ಪಾವತಿ ಖಾತರಿ
ಮಾರುಕಟ್ಟೆಯಲ್ಲಿ ಖರೀದಿ ಕೇಂದ್ರಗಳ ಸಂಖ್ಯೆಯ ಹೆಚ್ಚಳ
ರೈತರ ಶ್ರಮಕ್ಕೆ ನ್ಯಾಯ ದೊರಕಿಸಲು ಸರ್ಕಾರವು ಶೀಘ್ರ ಕ್ರಮ ಕೈಗೊಳ್ಳಬೇಕು ಎಂಬುದು ರೈತ ನಾಯಕರ ಸ್ಪಷ್ಟ ಸಂದೇಶ. ಸರ್ಕಾರದ ನಿರ್ಧಾರವನ್ನು ಎದುರು ನೋಡುತ್ತಿರುವ ರೈತರ ನಂಬಿಕೆ ಈಗ ಸರ್ಕಾರದ ಮುಂದಿನ ಹೆಜ್ಜೆಯ ಮೇಲೆ ಅವಲಂಬಿತವಾಗಿದೆ.
Agriculture
ಸಕ್ಕರೆ ಕಾರ್ಖಾನೆಗಳ ಕಬ್ಬು ದರ ನಿಗದಿ: ರೈತರಿಗೆ ಸಿಹಿ ಸುದ್ದಿ : ಅಂತಿಮ ದರ ಪ್ರಕಟಣೆ
ಇತ್ತೀಚಿಗೆ ನಡೆದ ಪ್ರತಿಭಟನೆಯ ಫಲವಾಗಿ ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತ ಮುಖಂಡರ ನಡುವೆ ಚರ್ಚೆ ನಡೆದಿದ್ದು, ರಾಜ್ಯ ಸರ್ಕಾರವು ಕಬ್ಬಿಗೆ ಹೊಸ ದರ ನಿಗದಿ ಮಾಡುವುದರ ಮೂಲಕ ರಾಜ್ಯದ ರೈತರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.
ಎಷ್ಟು ಹೆಚ್ಚಳ?
ಹೊಸ ದರದ ಪ್ರಕಾರ, ಪ್ರತಿ ಟನ್ ಕಬ್ಬಿಗೆ ₹3,300 ನಿಗದಿ ಮಾಡಲಾಗಿದೆ. ಹಿಂದಿನ ದರವಾದ ₹3,200 ಗೆ ಹೋಲಿಸಿದರೆ ₹100ರಷ್ಟು ಹೆಚ್ಚಳವಾಗಿದೆ. ಇದರಲ್ಲಿ ಕಾರ್ಖಾನೆಗಳು ₹50 ಹೆಚ್ಚುವರಿ ಪಾವತಿಸಲಿದ್ದು, ರಾಜ್ಯ ಸರ್ಕಾರವು ಒಂದು ಅವಧಿಯ ಪ್ರೋತ್ಸಾಹ ಧನವಾಗಿ ಮತ್ತೊಂದು ₹50 ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಇಳುವರಿ ಪ್ರಮಾಣವನ್ನು ಆಧರಿಸಿ ದರ ನಿಗದಿ ಮಾಡಲಾಗಿದ್ದು, ಶೇ.10.5 ಇಳುವರಿ ಪ್ರಮಾಣ ಇರುವ ಕಬ್ಬಿಗೆ ₹3,200 ಮತ್ತು ಶೇ.11.25 ಇಳುವರಿ ಪ್ರಮಾಣದ ಕಬ್ಬಿಗೆ ₹3,300 ದೊರೆಯಲಿದೆ. ಸಾಗಣೆ ಮತ್ತು ಕಟಾವು ವೆಚ್ಚಗಳನ್ನು ಹೊರತುಪಡಿಸಿ ಈ ದರ ನೀಡಲಾಗುತ್ತದೆ.
ಈ ನಿರ್ಧಾರದಿಂದ ರಾಜ್ಯದ ಕಬ್ಬು ರೈತರಿಗೆ ಆರ್ಥಿಕ ನೆರವಾಗಲಿದ್ದು, ಸಕ್ಕರೆ ಕಾರ್ಖಾನೆಗಳು ಸಹ ರೈತರೊಂದಿಗೆ ಸಹಕಾರದ ಮನೋಭಾವದಿಂದ ಕೆಲಸ ಮಾಡಲಿವೆ ಎಂದು ಸರ್ಕಾರ ಆಶಾಭಾವನೆ ವ್ಯಕ್ತಪಡಿಸಿದೆ
Agriculture
ರೈತರಿಗೆ ಸಿಹಿ ಸುದ್ದಿ : ಬೆಳೆ ನಷ್ಟ ಪರಿಹಾರ ದರ ಪರಿಷ್ಕರಣೆಗೆ ಸರ್ಕಾರದ ನಿರ್ಧಾರ
Crop Loss Compensation Increase : ಕರ್ನಾಟಕ ರಾಜ್ಯದಲ್ಲಿ ಒಟ್ಟು ಅಂದಾಜು 5.20 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ ಎಂದು ಅಂದಾಜು ಮಾಡಲಾಗಿದ್ದು, SDRF ಮಾರ್ಗ ಸೂಚಿಯ ಪ್ರಕಾರ ಸದ್ಯಕ್ಕೆ ನೀಡುತ್ತಿರುವ ಪರಿಹಾರವು ರೈತರಿಗೆ ಸಾಲುವುದಿಲ್ಲ ಎಂಬ ಅಭಿಪ್ರಾಯದ ಹಿನ್ನಲೆಯಲ್ಲಿ ಸರ್ಕಾರವು ಪರಿಹಾರ ಮೊತ್ತ ಪರಿಷ್ಕರಣೆಗೆ ನಿರ್ಧಾರ ತೆಗೆದುಕೊಂಡಿದೆ.
ಈ ನಿರ್ಧಾರವನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ವರ್ಷ ಉತ್ತಮ ಮುಂಗಾರು ಮಳೆ ಆದ ಕಾರಣ ರೈತರು ಸರಿಯಾದ ಸಮಯಕ್ಕೆ ಬಿತ್ತನೆ ಮಾಡಿದ್ದರು. ಆದರೆ ಇದರ ಮಧ್ಯೆ ಮೂರರಿಂದ ನಾಲ್ಕು ವಾರ ಸರಿಯಾದ ಮಳೆ ಬರೆದ ಕಾರಣ ಹಲವಾರು ಕಡೆಯಲ್ಲಿ ಬೆಳೆ ಒಣಿಗಿದ್ದವು.

ಇದರಿಂದಾಗಿ ರೈತರು ಮರು ಬಿತ್ತನೆ ಮಾಡಿದರು. ಇದರ ಬೆನ್ನಲ್ಲೇ ಜುಲೈ ಮತ್ತು ಅಗಸ್ಟ್ ತಿಂಗಳಿನಲ್ಲಿ ಅತಿವೃಷ್ಟಿ ಮಳೆಯಾದ ಕಾರಣ ರಾಜ್ಯದ್ಯಂತ ಹಲವಾರು ಕಡೆ ವ್ಯಾಪಕ ಬೆಳೆ ಹಾನಿಯಾಗಿದೆ. ಇದರಿಂದಾಗಿ ರೈತರು ನಷ್ಟ ಹಾಗೂ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದು, ಇದರಿಂದಾಗಿ ಪರಿಹಾರ ಮೊತ್ತವನ್ನು ಹೆಚ್ಚಳ ಮಾಡಲು ಸರ್ಕಾರ ನಿರ್ಧಾರ ತೆಗೆದುಕೊಂಡಿದೆ.
ಪರಿಹಾರ ಮೊತ್ತ ಪರಿಷ್ಕರಣೆ ಅಂತಿಮ ಯಾವಾಗ?
ಕೃಷಿ ಇಲಾಖೆ ಮತ್ತು ಕಂದಾಯ ಇಲಾಖೆ ವತಿಯಿಂದ ನಷ್ಟದ ಜಂಟಿ ಸಮೀಕ್ಷೆ ನಡೆಯುತ್ತಿದ್ದು, ಗರಿಷ್ಠ 10 ದಿನದ ಒಳಗಾಗಿ ಸಮೀಕ್ಷೆ ಕಾರ್ಯ ಮುಗಿಸಿ ವರದಿ ಸಲ್ಲಿಸಲು ಸರ್ಕಾರ ಆದೇಶ ನೀಡಿದೆ. ಇದರ ನಂತರ ಪರಿಷ್ಕೃತ ಪರಿಹಾರ ಮೊತ್ತ ಬಿಡುಗಡೆಯಾಗಲಿದೆ.
-
State9 hours agoಡಿವೈಡರ್ಗೆ ಕಾರ್ ಡಿಕ್ಕಿ, ಹೊತ್ತಿ ಉರಿದ ಕಾರಿನೊಳಗೆ ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನ
-
State22 hours agoSSLC ಪಾಸ್ ಆದವರಿಗೆ ಸರ್ಕಾರಿ ನೌಕರಿ ಚಾನ್ಸ್! ಸಂಪೂರ್ಣ ಮಾಹಿತಿ ಇಲ್ಲಿದೆ…
-
Hassan6 hours agoನಗರದ ಇಂಜಿನಿಯರ್ ಕಾಲೇಜು ಆವರಣದಲ್ಲಿ ಸರ್ಕಾರಿ ಸೇವೆಗಳ ಸಮರ್ಪಣ ಸಮಾವೇಶ
-
Chikmagalur24 hours agoವಿದ್ಯಾರ್ಥಿಗಳಿಗೆ ಉಚಿತ ಪಠ್ಯ ನೋಟ್ ಪುಸ್ತಕ ವಿತರಣೆ, ಮುಂದಿನ ಶೈಕ್ಷಣಿಕ ವರ್ಷದಿಂದ ಅನುಷ್ಠಾನ: ಮಧು ಬಂಗಾರಪ್ಪ
-
Mysore23 hours agoನಾಳೆಯಿಂದ ಸಿಗ್ಮಾ ಆಸ್ಪತ್ರೆಯಲ್ಲಿ ಉಚಿತ ಥೈರಾಯ್ಡ್ ತಪಾಸಣೆ
-
National22 hours agoಪಲಾಶ್ ಮುಚ್ಚಲ್ರೊಂದಿಗೆ ಮದುವೆ ಮುಂದೂಡಿದ ನಂತರ ಮೊದಲ ಪೋಸ್ಟ್ ಹಂಚಿಕೆಕೊಂಡ ಸ್ಮೃತಿ ಮಂದಾನ
-
Hassan9 hours agoಅಂಬೇಡ್ಕರ್ ತತ್ತ್ವ, ಸಿದ್ಧಾಂತಗಳು ಶಾಶ್ವತ: ಸಂಸದ ಶ್ರೇಯಸ್ ಪಟೇಲ್
-
Chikmagalur11 hours agoಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಹ*ತ್ಯೆ
