State
2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿ ಆಗಿರುವ ವಾಹನಗಳ ಮಾಲೀಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್

ಎಚ್ ಎಸ್ ಆರ್ ಪಿ ಬಡಿಕೆ ಸಮಯ ವಿಸ್ತರಣೆ : ಫೆ 17ರವರೆಗೆ ಅವಕಾಶಕ್ಕೆ ಸಾರಿಗೆ ಇಲಾಖೆ ನಿರ್ಧಾರ.
ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಆದೇಶ ಹೊರಡಿಸಿದ್ದ ರಾಜ್ಯ ಸಾರಿಗೆ ಇಲಾಖೆ ನವೆಂಬರ್ 17ಕ್ಕೆ ಅಂತಿಮ ಗಡಗು ನೀಡಿತ್ತು.
2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿ ಆಗಿರುವ ವಾಹನಗಳ ಮಾಲೀಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.
ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಕೆಗೆ ನೀಡಲಾಗಿದ್ದ ಗಡುವನ್ನು ಮೂರು ತಿಂಗಳ ಕಾಲ ವಿಸ್ತರಣೆ ಮಾಡಿದ್ದು ವಾಹನ ಸವಾರರು ತರಾತುರಿ ಇಲ್ಲದೆ ಹೆಚ್ ಎಸ್ ಆರ್ ಪಿ ಅಳವಡಿಸಿಕೊಳ್ಳಬಹುದಾಗಿದೆ.
ಹೈ ಸೆಕ್ಯೂರಿಟಿ ನೋಂದಣಿ ಫಲಕ ಅಳವಡಿಕೆ ಸಮಯದ ಡೆಡ್ ಲೈನ್ ಗೆ ಕಡಿಯ ಮೂರು ದಿನ ಬಾಕಿ ಇದ್ದು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳದೆ ಆತಂಕಕ್ಕೆ ಸಿಲುಕಿರುವ ವಾಹನ ಮಾಲೀಕರಿಗೆ ರಾಜ್ಯ ಸರ್ಕಾರ ಮತ್ತೊಂದು ಅವಕಾಶ ನೀಡಿದೆ.
ನವೆಂಬರ್ 17ಕ್ಕೆ ಅಂತಿಮ ಗಡುವು ಇದ್ದರೂ ರಾಜ್ಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಅತಿ ಸುರಕ್ಷಿತ ನೊಂದಣಿ ಫಲಕ ಅಳವಡಿಕೆ ಕಾರ್ಯ ನಡೆದಿರುವುದರಿಂದಾಗಿ ವಾಹನ ಮಾಲೀಕರನ್ನು ದೃಷ್ಟಿಯಲ್ಲಿರಿಸಿಕೊಂಡು ಮತ್ತೊಂದು ಅವಕಾಶ ನೀಡಬೇಕು ಎನ್ನುವ ನಿರ್ಧಾರಕ್ಕೆ ಸಾರಿಗೆ ಇಲಾಖೆ ಬಂದಿದೆ. ಹಾಗಾಗಿ ನವೆಂಬರ್ 17ಕ್ಕೆ ಬದಲಾಗಿ 2024ರ ಫೆಬ್ರವರಿ 17ಕ್ಕೆ ಡೆಡ್ ಲೈನ್ ನಿಗದಿಪಡಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ರಾಜ್ಯದಲ್ಲಿ ಎಚ್ ಎಸ್ ಆರ್ ಪಿ ಅಳವಡಿಕೆ ಕಾರ್ಯ ನಡೆಯುತ್ತಿದೆ ಆದರೆ ಕೆಲವರು ಕೋರ್ಟ್ ಗೆ ಹೋಗಿದ್ದರಿಂದ ವಿಳಂಬವಾಗಿದೆ ಇನ್ನೂ ಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ ಆದ್ದರಿಂದ ವಾಹನ ಮಾಲೀಕರ ಹಿತದೃಷ್ಟಿಯಿಂದಾಗಿ ಗಡುವನ್ನು ಮೂರು ತಿಂಗಳ ಕಾಲ ವಿಸ್ತರಣೆ ಮಾಡಲು ನಿರ್ಧರಿಸಿದ್ದೇವೆ 2024ರ ಫೆಬ್ರವರಿ 17ರವರೆಗೆ ಕಾಲಾವಕಾಶ ವಿಸ್ತರಣೆ ಮಾಡಿದ್ದೇವೆ ಇನ್ನು ಮೂರು ತಿಂಗಳ ಕಾಲ ದಂಡ ಶುಲ್ಕವಿಲ್ಲದೆ ಹೆಚ್ ಎಸ್ ಆರ್ ಪಿ ಅಳವಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ
State
ಮುಂದಿನ ಬಾರಿ ನಮ್ಮದೇ ಪಕ್ಷ ಅಧಿಕಾರಕ್ಕೆ ಬರುತ್ತದೆ: ಮಾಜಿ ಸಿಎಂ ಬಿಎಸ್ವೈ

ಬೆಳಗಾವಿ: ಮುಂದಿನ ದಿನಗಳಲ್ಲಿ ನೂರಕ್ಕೆ ನೂರರಷ್ಟು ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ಬಿಜೆಪಿಯಲ್ಲಿ ವಾತಾವರಣ ತುಂಬಾ ಚನ್ನಾಗಿದೆ. ಬರುವ ದಿನಗಳಲ್ಲಿ ನೂರಕ್ಕೆ ನೂರರಷ್ಟು ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ. ಆ ದಿಕ್ಕಿನಲ್ಲಿ ನಾವು ಒಟ್ಟಾಗಿ ಸೇರಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಬಿಜೆಪಿಗರಿಗೆ ಏನೂ ಸಲಹೆ ಕೊಡುವ ಪ್ರಶ್ನೆಯೇ ಇಲ್ಲ. ಎಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡುತ್ತೇವೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಎಲ್ಲರೂ ಶ್ರಮ ವಹಿಸುತ್ತೇವೆ. ಹೈಕಮಾಂಡ್ ಸಲಹೆ ಪಡೆದು ಪಕ್ಷ ಸಂಘಟನೆಗೆ ಮುಂದಾಗುತ್ತೇವೆ. ಮುಂದಿನ ಬಾರಿ ನಮ್ಮದೇ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದರು.
State
ವಿಷಾಹಾರ ಸೇವಿಸಿ ವಿದ್ಯಾರ್ಥಿ ಸಾವು: ಸಿಎಂ ಫಸ್ಟ್ ರಿಯಾಕ್ಷನ್

ಬೆಂಗಳೂರು: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ಟಿ.ಕಾಗೇಪುರ ಖಾಸಗಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಅದರಲ್ಲಿ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, ವಿದ್ಯಾರ್ಥಿ ನಿಧನಕ್ಕೆ ಸಂತಾಒಪ ಸೂಚಿಸಿದ್ದಾರೆ.
ತಮ್ಮ ಟ್ವೀಟ್ನಲ್ಲಿ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಹಲವು ಮಕ್ಕಳು ತೀವ್ರ ಅಸ್ವಸ್ಥಗೊಂಡ ವಿಚಾರ ತಿಳಿದು ನೋವಾಯಿತು.
ಘಟನೆ ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮಕ್ಕಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಹಾಗೂ ಘಟನೆಗೆ ಕಾರಣರಾದವರ ಮೇಲೆಯೂ ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದೆ, ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.
ಈ ದುರ್ಘಟನೆಯಲ್ಲಿ ಮಡಿದ ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು. ಬೇರೆಡೆ ತಯಾರಿಸಿದ ಆಹಾರವನ್ನು ಸೇವಿಸುವ ಮುನ್ನ ಅದರಲ್ಲಿಯೂ ಚಿಕ್ಕ ಮಕ್ಕಳಿಗೆ ನೀಡುವ ಮುನ್ನ ಹೆಚ್ಚು ಜಾಗೃತೆ ವಹಿಸಿ. ಅಜಾಗರೂಕತೆಗೆ ಅಮೂಲ್ಯ ಜೀವಗಳು ಬಲಿಯಾಗದಿರಲಿ ಎಂದು ಬರೆದುಕೊಂಡು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
State
ಬೆಂಗಳೂರು ನಮ್ಮ ಮೆಟ್ರೋ ನೇಮಕಾತಿ : ಟ್ರೈನ್ ಆಪರೇಟರ್ ಹುದ್ದೆಗಳ ಭರ್ತಿ

BMRCL Train Operator’s Recruitment 2025 : ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಟ್ರೈನ್ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ನೋಟಿಫಿಕೇಷನ್ ಬಿಡುಗಡೆ ಮಾಡಿದ್ದಾರೆ.
ನಮ್ಮ ಮೆಟ್ರೋ, BMRCL ನಲ್ಲಿ ಒಟ್ಟು 50 ಟ್ರೈನ್ ಆಪರೇಟರ್ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೆಟ್ರೋ ಇಲಾಖೆಯ ಏನೆಲ್ಲಾ ಅರ್ಹತೆಗಳನ್ನು ನಿಗದಿಪಡಿಸಿದೆ? ಯಾವ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸುವ ವಿಧಾನ ಹೇಗೆ ಎಂಬ ಮಾಹಿತಿ ಇಲ್ಲಿದೆ..
ಹುದ್ದೆಗಳ ವಿವರ :
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟ್ರೇನ್ ಆಪರೇಟರ್ ಹುದ್ದೆಗಳನ್ನು 5 ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನಂತರದಲ್ಲಿ ಅಭ್ಯರ್ಥಿಯು ಮಾಡುವ ಕೆಲಸದ ಆಧಾರದ ಮೇಲೆ ಸೇವಾ ಅವಧಿಯನ್ನು ಹೆಚ್ಚಿಸಲಾಗುವುದು.
ಯಾವ ಯಾವ ಅರ್ಹತೆಗಳನ್ನು ಹೊಂದಿರುವುದು ಕಡ್ಡಾಯವಾಗಿದೆ?
ಟ್ರೈನ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕಡ್ಡಾಯವಾಗಿ 38 ವರ್ಷದ ಒಳಗಿನ ಅಭ್ಯರ್ಥಿಗಳಾಗಿದ್ದು, ಈ ಕೆಳಗಿನ ಯಾವುದಾದರೂ ಒಂದು ವಿಷಯದಲ್ಲಿ ಡಿಪ್ಲೋಮಾ ಇನ್ ಇಂಜಿನಿಯರಿಂಗ ಕೋರ್ಸ್ ಮುಗಿಸಿರಬೇಕು.
Electrical Engineering / Electrical & Electronics
Engineering / Telecommunications/ Electronics & Communication Engineering/ Electrical
Power Systems /Industrial Electronics/ Mechanical Engineering
ಆಯ್ಕೆಯಾಗುವವರಿಗೆ ಸಿಗುವ ಸಂಬಳ : ನೇಮಕಾತಿಯಲ್ಲಿ ಅಂತಿಮವಾಗಿ ಕೆಲಸಕ್ಕೆ ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಮಾಸಿಕ 35,000 ರೂಪಾಯಿಯಿಂದ 82,660 ರೂಪಾಯಿವರೆಗೆ ನೀಡಲಾಗುವುದು.
ಅರ್ಜಿ ಸಲ್ಲಿಸುವುದು ಯಾವಾಗ?
ಈ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯೂ ಮಾರ್ಚ್ 12, 2025 ರಂದು ಬಿಡುಗಡೆಯಾಗಿದ್ದು ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವು ಏಪ್ರಿಲ್ 09, 2025 ಆಗಿರುತ್ತದೆ.
ಅರ್ಜಿ ಸಲ್ಲಿಕೆಯ ಪ್ರಕ್ರಿಯೆ :
ಮೊದಲು ಕೆಳಗೆ ನೀಡಿರುವ ಲಿಂಕ್ ಮೇಲೆ ಒತ್ತಿ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಿದ ನಂತರ ಅರ್ಜಿ ನಮೂನೆಯನ್ನು ಪ್ರಿಂಟ್ ತೆಗೆಸಿ ಅದಕ್ಕೆ ನಿಗದಿತ ಸ್ಥಳದಲ್ಲಿ ಪಾಸ್ ಪೋರ್ಟ್ ಅಳತೆಯ ಫೋಟೋ ಅಂಟಿಸಿ ಕೆಳಗಿನ ವಿಳಾಸಕ್ಕೆ ಕಳುಹಿಸಿ.
ವಿಳಾಸ : The General Manager (HR), Bangalore Metro Rail Corporation Limited, III Floor, BMTC Complex, K.H.Road, Shanthinagar, Bangalore 560027
ಅಧಿಕೃತ ಜಾಲತಾಣ – https://projectrecruit.bmrc.co.in/
-
Chamarajanagar21 hours ago
ಕಾಂಗ್ರೆಸ್ ಗೆ ಭರ್ಜರಿ ಗೆಲುವು
-
Uncategorized20 hours ago
ಕಾಡಾನೆ ಸೆರೆ ಕಾರ್ಯಾಚರಣೆ ಯಶಸ್ವಿ: ಪುಂಡಾನೆ ಸೆರೆ ಹಿಡಿದ ಕ್ಯಾಪ್ಟನ್ ಪ್ರಶಾಂತ್ ಅಂಡ್ ಟೀಮ್
-
Chamarajanagar22 hours ago
ಕಾರು ಅಪಘಾತ ಇಬ್ಬರು ಸ್ಥಳದಲ್ಲೇ ಮೃತ
-
Chikmagalur23 hours ago
ಹತ್ತು ಲಕ್ಷ ಮೌಲ್ಯದ 11 ಬೈಕ್ ಕದ್ದಿದ್ದ ಕಳ್ಳನ ಬಂಧನ
-
National - International13 hours ago
ಪಾಕ್ನ 90 ಮಂದಿ ಸೈನಿಕರನ್ನು ಹತ್ಯೆ ಮಾಡಿದ್ದೇವೆ ಎಂದ ಬಲೂಚ್ ಲಿಬರೇಶನ್ ಆರ್ಮಿ
-
Chamarajanagar16 hours ago
ತಲೆಯಲ್ಲಿ ಕೂದಲಿಲ್ಲ ಎಂದು ನಿಂದಿಸಿದ ಪತ್ನಿ: ಮನನೊಂದ ಪತಿ ಆತ್ಮ*ಹತ್ಯೆ
-
Kodagu15 hours ago
ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಬಾಲಕಿ ಮೃ*ತ
-
Mandya18 hours ago
ಮಳವಳ್ಳಿ ವಸತಿ ಶಾಲೆಯ ದುರ್ಘಟನೆ : ಎಚ್ಡಿಕೆ ಕಳವಳ