Crime
ಚಾಮಲಾಪುರದ ಹುಂಡಿಯಲ್ಲಿಕುಡಿದ ಮತ್ತಿನಲ್ಲಿ ತುಂಬು ಗರ್ಭಿಣಿ ಹೆಂಡತಿಯನ್ನೇ ಕೊಲೆಗೈದ ಪಾಪಿ ಪತಿ!

ಕುಡಿದ ಮತ್ತಿನಲ್ಲಿ ತುಂಬು ಗರ್ಭಿಣಿ ಹೆಂಡತಿಯನ್ನೇ ಪಾಪಿ ಗಂಡ ಕೊಲೆಗೈದಿರುವ ಘಟನೆ ನಂಜನಗೂಡು ನಗರದ ಚಾಮಲಾಪುರ ಹುಂಡಿಯಲ್ಲಿ ನಡೆದಿದೆ.
26 ವರ್ಷದ ಶೋಭಾ ಮೃತ ದುರ್ದೈವಿಯಾಗಿದ್ದಾಳೆ. 27 ವರ್ಷದ ಮಂಜು ಅಲಿಯಾಸ್ ಮಂಜುನಾಥ್ ಈಗ ಪೊಲೀಸರ ಅತಿಥಿಯಾಗಿದ್ದಾನೆ.
8 ವರ್ಷಗಳ ಹಿಂದೆ ಶೋಭಾ ಮತ್ತು ಮಂಜು ಇಬ್ಬರು ಪರಸ್ಪರ ಪ್ರೀತಿಸಿಕೊಂಡು ಮದುವೆಯಾಗಿದ್ದರು. ಗಂಡ ಹೆಂಡತಿ ನಡುವೆ ಹಾಗಾಗ್ಗೆ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಈಗಾಗಲೇ ಒಂದು ಐದು ವರ್ಷದ ಗಂಡು ಮಗುವಿದ್ದು, ಮತ್ತೊಂದು ಮಗುವಿಗೆ ಶೋಭಾ ಎಂಟು ತಿಂಗಳ ಗರ್ಭಿಣಿಯಾಗಿದ್ದಳು. ತವರು ಮನೆಯಿಂದ ಗಂಡನ ಮನೆಗೆ ಪತ್ನಿ ಬರುತ್ತಿಲ್ಲವೆಂದು ಜಗಳ ತೆಗೆದ ಪತಿರಾಯ, ಕುಡಿದ ಮತ್ತಿನಲ್ಲಿ ಬ್ಲೇಡ್ ನಿಂದ ಕುತ್ತಿಗೆಗೆ ಕುತ್ತಿಗೆ ಕುಯ್ದು ಕೊಲೆ ಮಾಡಿದ್ದಾನೆ. ತಾಯಿಯ ಗರ್ಭದಲ್ಲಿದ್ದ ಮಗು, ಪ್ರಪಂಚವನ್ನು ನೋಡುವಷ್ಟರಲ್ಲಿ ಇಬ್ಬರ ಪ್ರಾಣವನ್ನು ತೆಗೆದಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ನಂಜನಗೂಡು ಪಟ್ಟಣ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮಾರಣಾಂತಿಕವಾಗಿ ಗಾಯಗೊಂಡಿದ್ದ ಗರ್ಭಿಣಿಯನ್ನು ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ವೈದ್ಯರು ಗರ್ಭಿಣಿ ಮತ್ತು ಮಗುವನ್ನು ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ನಡೆಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಇನ್ನೂ ಪೊಲೀಸರು ಭೇಟಿ ನೀಡಿ, ಮಹಜರು ನಡೆಸಿ, ತನಿಖೆ ಕೈಗೊಂಡಿದ್ದಾರೆ.
ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Crime
ಕಲ್ಲು ಗಣಿಗಾರಿಕೆ ವೇಳೆ ಸ್ಫೋಟ,ಮೂರಕ್ಕೂ ಹೆಚ್ಚು ಕಾರ್ಮಿಕರ ಸಾವಿನ ಶಂಕೆ

ಹಾಸನ: ತಾಲ್ಲೂಕಿನ ಶಾಂತಿಗ್ರಾಮ ದೂಮಗೆರೆ ಗ್ರಾಮದ ಕಲ್ಲು ಕ್ವಾರಿಯಲ್ಲಿ ಬೃಹತ್ ಸ್ಫೋಟ ನಡೆದು ಈ ಘಟನೆಯಲ್ಲಿ ಮೂವರು ಮೃತಪಟ್ಟಿರುವ ಶಂಕೆ ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಸದ್ಯ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಅದರಲ್ಲಿ ಒಬ್ಬನ ಪರಿಸ್ಥಿತಿ ಚಿಂತಾಜನಕವಾಗಿದೆ. ವಿಷಯ ತಿಳಿದ ಜಿಲ್ಲಾಧಿಕಾರಿ ಸಿ. ಸತ್ಯಭಾಮ, ಎಸ್ಪಿ ಮೊಹಮದ್ ಸುಜೀತಾ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕ ಶ್ರೀನಿವಾಸ್, ಉಪವಿಭಾಗಾಧಿಕಾರಿ ಮಾರುತಿ ಇವರು ತಡರಾತ್ರಿಯೇ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ಮುಂದಿನ ಕ್ರಮಕೈಗೊಂಡ ಪೊಲೀಸರು ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಡಿಸಿ ಸಿ.ಸತ್ಯಭಾಮ ಕ್ವಾರಿ ಗುತ್ತಿಗೆ ಪಡೆದಿರುವ ಮಾಲೀಕ ದೇವರಾಜು ವಿರುದ್ಧ ಹರಿಹಾಯ್ದರು. ಮಾಹಿತಿ ಮುಚ್ಚಿಟ್ಟ ಆರೋಪದಡಿ ದೇವರಾಜ್ ವಿರುದ್ಧ ಎಫ್ ಐಆರ್ ದಾಖಲಿಸಲು ಡಿಸಿ ಸೂಚಿಸಿದರು.
Crime
ಸಂಭ್ರಮಾಚರಣೆ ವೇಳೆ RCB ಅಭಿಮಾನಿಗೆ ಚಾ*ಕು ಇರಿತ

ಬೆಂಗಳೂರು, ಜೂನ್ 4: ಆರ್ಸಿಬಿ (RCB) ತಂಡ ಚೊಚ್ಚಲ ಐಪಿಎಲ್ ಟ್ರೋಫಿ (IPL Trophy) ಎತ್ತಿಹಿಡಿದ ಬೆನ್ನಲ್ಲೇ ಬೆಂಗಳೂರು ನಗರದಾದ್ಯಂತ ಸಂಭ್ರಮಾಚರಣೆ ಮುಗಿಲುಮುಟ್ಟಿತು. ಹಲವೆಡೆ ಪಟಾಕಿಗಳನ್ನು ಸಿಡಿಸಿ ಜನ ಸಂಭ್ರಮಿಸಿದರೆ, ಇನ್ನು ಕೆಲವೆಡೆ ರಸ್ತೆಗಳಲ್ಲಿ ಘೋಷಣೆಗಳನ್ನು ಕೂಗುತ್ತಾ ಸಂಭ್ರಮ ಆಚರಿಸಿದರು. ಈ ಸಂದರ್ಭದಲ್ಲಿ, ಬೆಂಗಳೂರಿನ ಪೀಣ್ಯದ ಜಾಲಹಳ್ಳಿ ಕ್ರಾಸ್ ಬಳಿ ದುಷ್ಕರ್ಮಿಗಳ ಗುಂಪು ಕ್ರೌರ್ಯ ಮೆರೆದಿದೆ. ಸಂಭ್ರಮಾಚರಣೆ ವೇಳೆ ಯುವಕನಿಗೆ ಚಾಕು ಇರಿದು ಪರಾರಿಯಾಗಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ರಾತ್ರಿಯಿಡೀ ಸಂಭ್ರಮಾಚರಣೆ ನೆರವೇರಿದೆ. ವಿವಿಧೆಡೆ ರಸ್ತೆಗಳಲ್ಲಿ ಘೋಷಣೆ ಕೂಗುತ್ತಾ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಈ ಸಂದರ್ಭದಲ್ಲಿ ದುಷ್ಕರ್ಮಿಗಳ ಗುಂಪೊಂದು ಯುವಕನಿಗೆ ಚಾಕು ಇರಿದ ಘಟನೆ ಜಾಲಹಳ್ಳಿ ಕ್ರಾಸ್ ಬಳಿ ನಡೆದಿದೆ.
Crime
*ಕ್ಷುಲ್ಲಕ ವಿಚಾರಕ್ಕೆ ಪತ್ನಿಯನ್ನು ಕೊಂದು ತಾನು ಆತ್ಮಹ*ತ್ಯೆಗೆ ಶರಣಾದ ಪತಿ*

ಬೆಂಗಳೂರು : ಸಣ್ಣ ವಿಚಾರಕ್ಕೆ ಶುರುವಾದ ಈ ಜಗಳ ಇಬ್ಬರ ಕೋಪದಿಂದ ಕುಟುಂಬವೇ ಬ* ಯಾಗಿರುವಂತಹ ಘಟನೆ ನಡೆದಿದೆ. , ಅಂದಹಾಗೆ ಗಂಡನೇ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿ ತಾನು ಆತ್ಮಹ* ಗೆ ಶರಣಾಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ನಡೆದಿದೆ.
ಮೂಲತಃ ಹಾಸನ ಮೂಲದ ಬಸವಾಚಾರಿ ಮತ್ತು ಸುಮಾ ದಂಪತಿ ಕಳೆದ 16 ವರ್ಷದ ಹಿಂದೆ ಮದುವೆಯಾಗಿ ವಿಜಯಪುರ ಪಟ್ಟಣಕ್ಕೆ ಬಂದಿದ್ದು, ವೆಲ್ಡಿಂಗ್ ಶಾಪ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು.ಮೊದಲಿಗೆ ವ್ಯಾಪಾರ ಚೆನ್ನಾಗಿದ್ದು, ಈ ಕಾರಣಕ್ಕೆ ಸ್ವಂತ ಮನೆ, ಸೈಟ್ ಎಲ್ಲಾ ಖರೀದಿ ಮಾಡಿದ್ದು ಎಲ್ಲವೂ ಚೆನ್ನಾಗೆ ನಡೆದುಕೊಂಡು ಬರುತಿತ್ತು . ಹೀಗಿರುವಾಗ ಒಂದು ದಿನ ಮನೆಯಲ್ಲಿದ್ದ ದಂಪತಿ ಬೆಳಗ್ಗೆ ಮಕ್ಕಳನ್ನ ಶಾಲೆಗೆ ಕಳಿಸಿದವರು ನಂತರ ಸೈಟ್ ಒಂದರ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಜಗಳ ಶುರುವಾಗಿದೆ. ಇನ್ನೂ ಇದೇ ಜಗಳ ನೋಡ ನೋಡುತ್ತಿದಂತೆ ಇಬ್ಬರ ನಡುವೆ ವಿಕೋಪಕ್ಕೆ ತೆರಳಿದ್ದು, ಪರಸ್ಪರ ಹೊಡೆದಾಡಿಕೊಳ್ಳುವ ಹಂತಕ್ಕೆ ಹೋಗಿದ್ದಾರೆ.
ಇನ್ನೂ ಈ ವೇಳೆ ಕೋಪದಲ್ಲಿ ಮನೆಯಲ್ಲಿದ್ದ ಜಿಮ್ ಡಂಬಲ್ನಿಂದ ಗಂಡ ಪತ್ನಿಯ ತಲೆಗೆ ಹೊಡೆದಿದ್ದು, ಪತ್ನಿ ಸ್ಥಳದಲ್ಲೇ ಕುಸಿದು ಬಿದ್ದು ತೀವ್ರ ರಕ್ತ ಸಾವ್ರವಾಗಿ ಸಾವನ್ನಪಿದ್ದಾಳೆ. ಇನ್ನೂ ಪತ್ನಿ ಸಾವನ್ನಪುತ್ತಿದ್ದಂತೆ ಗಂಡನಿಗೆ ಭಯ ಶುರುವಾಗಿದ್ದು, ಆತುರದಲ್ಲಿ ಪತ್ನಿಯನ್ನ ಕೊಂದ ಆತಂಕದಲ್ಲಿ ತಾನು ಸಹ ನೇಣು ಬಿಗಿದುಕೊಂಡು ಆತ್ಮಹ ಗೆ ಶರಣಾಗಿದ್ದಾರೆ.
ಶಾಲೆಗೆ ಹೋಗಿದ್ದ ಮಕ್ಕಳು ಮನೆಗೆ ಬಂದು ಬಾಗಿಲು ತೆಗೆಯುತ್ತಿದ್ದಂತೆ ತಾಯಿ ಬೆಡ್ ಮೇಲೆ ಕೊ* ಯಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದರೆ, ತಂದೆ ನೇ* ನ ಕುಣಿಕೆಯಲ್ಲಿ ನೇತಾಡುತ್ತಿರುವ ಭೀಕರ ದೃಶ್ಯ ಕಂಡು ಬೆಚ್ಚಿ ಬಿದಿದ್ದಾರೆ. ಇಂತಹ ಸನ್ನಿವೇಶ ಯಾವ ಶತ್ರುವಿಗೂ ಬೇಡ, ಇನ್ನೂ ತಂದೆ-ತಾಯಿಯ ಶವಗಳನ್ನ ನೋಡುತ್ತಿದಂತೆ ಮಕ್ಕಳು ಕೂಡಲೇ ದೊಡ್ಡಪ್ಪನಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ.
ಆ ಕುಟುಂಬ 20 ವರ್ಷಗಳ ಹಿಂದೆ ಹಾಸನದಿಂದ ಬೆಂಗಳೂರಿನ ಹೊರ ವಲಯಕ್ಕೆ ಬಂದಿದ್ದು ಬ್ಯುಸಿನೆಸ್ನಲ್ಲಿ ಚೆನ್ನಾಗೆ ದುಡಿದು ಸ್ವಂತ ಮನೆ, ಸೈಟ್ ಎಲ್ಲಾ ಮಾಡಿಕೊಂಡಿದ್ದರು. ಆದರೆ ಈ ನಡುವೆ ಸೈಟ್ ಮಾರುವ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಕಲಹ ಶುರುವಾಗಿದೆ.
ಡೆ *ತ್ ನೋಟ್ನಲ್ಲಿ ಏನಿದೆ?
ಮನೆ ವಿಚಾರ ತಿಳಿಯುತ್ತಿದ್ದಂತೆ ಸಂಬಂಧಿಕರು ಮತ್ತು ಪೊಲೀಸರು ಸಹ ಸ್ಥಳಕ್ಕೆ ದೌಡಾಯಿಸಿದ್ದು, ಮನೆಯಲ್ಲಿ ಪರಿಶೀಲನೆ ನಡೆಸಿದಾಗ ಡೆತ್ ನೋಟ್ ಸಿಕ್ಕಿದೆ. ಜೊತೆಗೆ ಡೆತ್ ನೋಟ್ನಲ್ಲಿ ಸೈಟ್ನ 26 ಲಕ್ಷ ರೂ ಹಣ ಬರಲಿದ್ದು, ಆ ಹಣವನ್ನ ಮಕ್ಕಳ ಹೆಸರಿನಲ್ಲಿ ಅಕೌಂಟ್ಗೆ ಹಾಕಿ. ನಮ್ಮ ಸಾವಿಗೆ ನಾವೇ ಹೊಣೆ ಅಂತ ಬರೆದಿದ್ದಾರೆ. ಇನ್ನೂ ವಿಚಾರ ತಿಳಿಯುತ್ತಿದ್ದಂತೆ ಹಾಸನದಿಂದ ಸಂಬಂಧಿಕರು ದೌಡಾಯಿಸಿದ್ದಾರೆ. ಮುಂದಿನ ಎರಡು ತಿಂಗಳಲ್ಲಿ ಹಾಸನಕ್ಕೆ ಕುಟುಂಬ ಶಿಫ್ಟ್ ಆಗುವ ಪ್ಲ್ಯಾನ್ ಮಾಡಿದ್ದರು, ಆದರೆ ಅಷ್ಟರಲ್ಲೇ ಈ ರೀತಿಯಾಗಿದೆ ಅಂತ ದಂಪತಿಗಳ ಸಾವಿಗೆ ಕಂಬನಿ ಮಿಡಿದಿದ್ದಾರೆ.
ಒಟ್ಟಾರೆ ಇರುವುದಕ್ಕೆ ಒಂದು ಮನೆ, ದುಡಿಯೋಕ್ಕೆ ಒಂದು ಅಂಗಡಿ ಸೇರಿದಂತೆ ಎಲ್ಲವೂ ಚೆನ್ನಾಗಿದ್ದರೂ ಸಣ್ಣ ಹಣಕಾಸಿನ ವಿಚಾರ ದಂಪತಿಗಳ ಜೀವವನ್ನು ತೆಗೆದಿದ್ದು, ಇಬ್ಬರೂ ಮುದ್ದಾದ ಮಕ್ಕಳನ್ನ ಅನಾಥರನ್ನಾಗಿ ಮಾಡಿದ್ದು ಮಾತ್ರ ನಿಜಕ್ಕೂ ದುರಂತ.
-
Mandya23 hours ago
ನೇಣು ಬಿಗಿದ ಸ್ಥಿತಿಯಲ್ಲಿ ಪುರುಷ ಹಾಗೂ ಮಹಿಳೆಯ ಕೊಳೆತ ಶ*ವಗಳು ಪತ್ತೆ
-
State19 hours ago
ಹಾಸನ ಏರ್ಪೋರ್ಟ್ 2026ಕ್ಕೆ ಪೂರ್ಣ: ಚಿಕ್ಕಮಗಳೂರು-ಮಡಿಕೇರಿಯಲ್ಲಿ ಹೆಲಿಪೋರ್ಟ್ ನಿರ್ಮಾಣಕ್ಕೆ ವರದಿ ಸಿದ್ಧ
-
Kodagu23 hours ago
ಗೃಹಲಕ್ಷ್ಮಿ ಯೋಜನೆ ಇ-ಕೆವೈಸಿ ಫೆಲ್ಯೂರ್: ಹತ್ತಿರದ ಸಿಡಿಪಿಓ ಕಚೇರಿ ತೆರಳಿ Status ಪರಿಶೀಲನೆ ಮಾಡಿಸಿ
-
Hassan23 hours ago
ಬೆಳೆ ವಿಮೆ ಪ್ರಚಾರದ ವಾಹನಗಳಿಗೆ ಡಿಸಿ ಸಿ. ಸತ್ಯಭಾಮ ಚಾಲನೆ
-
Hassan20 hours ago
ಕಾಣೆಯಾಗಿದ್ದ ಮಹಿಳೆ ಶವವಾಗಿ ಪತ್ತೆ
-
State20 hours ago
16ನೇ ಹಣಕಾಸಿನ ಆಯೋಗಕ್ಕೆ ಹೆಚ್ಚುವರಿ ಜ್ಞಾಪನಾ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
-
State21 hours ago
ಕೇರಳದಲ್ಲಿ ಜೂ.17ರವರೆಗೂ ವ್ಯಾಪಕ ಮಳೆ: ರಾಜ್ಯದ ಮೀನುಗಾರರಿಗೆ ಐಎಂಡಿ ಎಚ್ಚರಿಕೆ
-
Kodagu23 hours ago
ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ