Connect with us

Mandya

ಐಸ್ ಕ್ರೀಂ ತಿಂದು ಅವಳಿ ಮಕ್ಕಳು‌ ಸಾವು

Published

on

ಶ್ರೀರಂಗಪಟ್ಟಣ: ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಮೃತಪಟ್ಟಿದ್ದು, ತಾಯಿ ಅಸ್ವಸ್ಥಗೊಂಡಿರುವ ಘಟನೆ ತಾಲ್ಲೂಕಿನ ಅರಕೆರೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಟ್ಟಹಳ್ಳಿ ಗ್ರಾಮದಲ್ಲಿ ಈ‌ ಧಾರುಣ ಘಟನೆ ನಢದಿದ್ದು, ಗ್ರಾಮದ ಪೂಜಾ ಮತ್ತು ಪ್ರಸನ್ನ ದಂಪತಿಯ ಅವಳಿ ಮಕ್ಕಳು‌ ಸಾವನ್ನಪ್ಪಿದ್ದಾರೆ.

ನಿನ್ನೆ ಸಂಜೆ ಗ್ರಾಮಕ್ಕೆ ಐಸ್ ಕ್ರೀಂ ಮಾರಲು ಬಂದಿದ್ದ ವ್ಯಕ್ತಿಯಿಂದ ಐಸ್ ಕ್ರೀಂ ಖರೀದಿಸಿ ತಿಂದಿದ್ದ ತಾಯಿ ಮತ್ತು ಮಕ್ಕಳು,
ಐಸ್ ಕ್ರೀ ತಿಂದು ಅಸ್ವಸ್ಥರಾಗಿ ಮಕ್ಕಳು ಮನೆಯಲ್ಲಿ ಸಾವಾಗಿದ್ದು, ತಾಯಿ ತೀವ್ರ ಅಸ್ವಸ್ಥಗೊಂಡಿದ್ದಾರೆ.

ಮಕ್ಕಳ ಮೃತ ದೇಹವನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ತಾಯಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ‌ ನೀಡಲಾಗುತ್ತಿದೆ.

ಐಸ್ ಕ್ರೀಂ ಮಾರಲು ಬಂದಿದ್ದ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದು, ಈ ಸಂಬಂಧ ಅರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.

Continue Reading
Click to comment

Leave a Reply

Your email address will not be published. Required fields are marked *

Mandya

ಪಿ.ಇ.ಎಸ್. ಇಂಜಿನಿಯರಿಂಗ್ ಕಾಲೇಜಿನಲ್ಲಿ ತರಬೇತಿ ಪಡೆದ ವಿಟಿಯು ತಂಡದ ಐತಿಹಾಸಿಕ ಸಾಧನೆ — ರನ್ನರ್ಸ್-ಅಪ್, ಅಖಿಲ ಭಾರತ ಸ್ಪರ್ಧೆಗೆ ಆಯ್ಕೆ

Published

on

ಮಂಡ್ಯ : ನಗರದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ (ವಿ.ಟಿ.ಯು.), ಬೆಳಗಾವಿ, ಕರ್ನಾಟಕದ ಪುರುಷರ ಕ್ರಿಕೆಟ್ ತಂಡವು ವಿಶ್ವವಿದ್ಯಾನಿಲಯದ ಇತಿಹಾಸದಲ್ಲೇ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿ, ಮೈಸೂರಿನ ಜೆಎಸ್‌ಎಸ್ ಸೈನ್ಸ್ ಅಂಡ್ ಟೆಕ್ನಾಲಜಿ ಯೂನಿವರ್ಸಿಟಿಯಲ್ಲಿ ದಿನಾಂಕ 27 ಜನವರಿ 2026 ರಿಂದ 5 ಫೆಬ್ರವರಿ 2026 ರವರೆಗೆ ಆಯೋಜಿಸಲಾದ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯಗಳ ಪುರುಷರ ಕ್ರಿಕೆಟ್ ಪಂದ್ಯಾವಳಿ 2025–26ರಲ್ಲಿ ರನ್ನರ್ಸ್-ಅಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡು ಐತಿಹಾಸಿಕ ಸಾಧನೆ ಮಾಡಿದೆ.

ಮಂಡ್ಯದ ಪಿ.ಇ.ಎಸ್. ಇಂಜಿನಿಯರಿಂಗ್ ಕಾಲೇಜಿನ ಪಿ.ಟಿ. ಕ್ರೀಡಾ ಸಮುಚ್ಚಯದಲ್ಲಿ ನಡೆದ ಉತ್ತಮ ಯೋಜಿತ ಆಯ್ಕೆ ಪ್ರಕ್ರಿಯೆ ಮತ್ತು ತೀವ್ರ ತರಬೇತಿ ಶಿಬಿರವು ತಂಡದ ದೈಹಿಕ ಸಾಮರ್ಥ್ಯ ಹಾಗೂ ಸ್ಪರ್ಧಾತ್ಮಕ ಸಿದ್ಧತೆಯನ್ನು ಗಮನಾರ್ಹವಾಗಿ ಬಲಪಡಿಸಿತು. ಈ ಸಿದ್ಧತೆಯ ಫಲವಾಗಿ ಟೂರ್ನಿಯ ಪಯಣದಲ್ಲಿ ವಿಟಿಯು ತಂಡವು ಸರಣಿ ಗೆಲುವುಗಳ ಮೂಲಕ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿತು.

ಮೊದಲ ಪಂದ್ಯದಲ್ಲಿ ವಿಗ್ನಾನ್ ವಿಶ್ವವಿದ್ಯಾನಿಲಯ ವಿರುದ್ಧ 80 ರನ್ ಗುರಿಯನ್ನು 8.2 ಓವರ್‌ಗಳಲ್ಲಿ ಬೆನ್ನಟ್ಟಿಸಿ 8 ವಿಕೆಟ್‌ಗಳ ಜಯ ಸಾಧಿಸಿತು. ನಂತರ ಪುದುಚೇರಿ ತಾಂತ್ರಿಕ ವಿಶ್ವವಿದ್ಯಾನಿಲಯ ವಿರುದ್ಧ 7 ವಿಕೆಟ್‌, ಮಲ್ಲಾ ರೆಡ್ಡಿ ವಿಶ್ವವಿದ್ಯಾನಿಲಯ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು. ಮದುರೈ ಕಾಮರಾಜ್ ವಿಶ್ವವಿದ್ಯಾನಿಲಯ ವಿರುದ್ಧ 44 ರನ್‌ಗಳ ಅಂತರದಿಂದ ಗೆಲುವು ಸಾಧಿಸಿತು.

ಮುಂದಿನ ಪಂದ್ಯದಲ್ಲಿ ಸಿಎಂಆರ್ ವಿಶ್ವವಿದ್ಯಾನಿಲಯ ವಿರುದ್ಧ 150 ರನ್ ಗುರಿಯನ್ನು ರೋಚಕವಾಗಿ ಬೆನ್ನಟ್ಟಿಸಿ 3 ವಿಕೆಟ್ ಜಯ ದಾಖಲಿಸಿತು. ಪ್ರೀ-ಕ್ವಾರ್ಟರ್ ಫೈನಲ್‌ನಲ್ಲಿ ಜೆಪ್ಪಿಯಾರ್ ವಿಶ್ವವಿದ್ಯಾನಿಲಯ ವಿರುದ್ಧ 9 ವಿಕೆಟ್ ಜಯ ಸಾಧಿಸಿತು. ಸೆಮಿಫೈನಲ್‌ನಲ್ಲಿ ಅನ್ನಾ ವಿಶ್ವವಿದ್ಯಾನಿಲಯ ವಿರುದ್ಧ 6 ವಿಕೆಟ್‌ಗಳ ಗೆಲುವು ಪಡೆದು ಫೈನಲ್‌ಗೆ ಪ್ರವೇಶಿಸಿತು.

ಅಂತಿಮ ಪಂದ್ಯದಲ್ಲಿ ವಿಟಿಯು ತಂಡವು ಒಸ್ಮಾನಿಯಾ ವಿಶ್ವವಿದ್ಯಾನಿಲಯ ವಿರುದ್ಧ ಹೋರಾಟಮಯ ಪ್ರದರ್ಶನ ನೀಡಿದರೂ, ಗುರಿಯನ್ನು ಸಮೀಪಿಸಿ ರನ್ನರ್ಸ್-ಅಪ್ ಸ್ಥಾನಕ್ಕೆ ತೃಪ್ತಿಪಟ್ಟಿತು.

ತಂಡದ ಈ ಪ್ರದರ್ಶನ ಅಧಿಕಾರಿಗಳು, ತರಬೇತುದಾರರು ಹಾಗೂ ಕ್ರೀಡಾಭಿಮಾನಿಗಳ ಪ್ರಶಂಸೆಗೆ ಪಾತ್ರವಾಯಿತು.
ಈ ಸಾಧನೆ ವಿಟಿಯು ಕ್ರೀಡಾ ಇತಿಹಾಸದಲ್ಲಿ ಮಹತ್ವದ ಮೈಲುಗಲ್ಲಾಗಿ ಗುರುತಿಸಲಾಗಿದೆ.

ಪಿ.ಇ.ಎಸ್. ಇಂಜಿನಿಯರಿಂಗ್ ಕಾಲೇಜಿನ ಪಿ.ಟಿ. ಕ್ರೀಡಾ ಸಮುಚ್ಚಯದಲ್ಲಿ ತರಬೇತಿ ಪಡೆದು ಇದೇ ಮೊದಲ ಬಾರಿ ಫೈನಲ್ ಹಂತಕ್ಕೆ ತಲುಪಿದ ವಿಟಿಯು ತಂಡವನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಕೆ.ಎಸ್. ವಿಜಯ್ ಆನಂದ್ ಅವರು ಅಭಿನಂದಿಸಿ, ಮುಂದಿನ ಪಂದ್ಯಾವಳಿಗಳಿಗೆ ಶುಭಾಶಯಗಳನ್ನು ಕೋರಿದರು.

ಇನ್ನಷ್ಟು ಹೆಮ್ಮೆಯ ವಿಷಯವೆಂದರೆ, ಈ ಸಾಧನೆಯ ಹಿನ್ನೆಲೆ ತಂಡವು ಈಗ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಅಂತರ್ ವಲಯ ಕ್ರಿಕೆಟ್ ಸ್ಪರ್ಧೆ 2025–26ರಲ್ಲಿ ಭಾಗವಹಿಸಲು ಆಯ್ಕೆಯಾಗಿದೆ. ಈ ಸ್ಪರ್ಧೆ ಗುಜರಾತಿನ ಸೌರಾಷ್ಟ್ರ ವಿಶ್ವವಿದ್ಯಾನಿಲಯದಲ್ಲಿ ಫೆಬ್ರವರಿ 8ರಿಂದ 14, 2026ರವರೆಗೆ ನಡೆಯಲಿದೆ. ಈ ಆಯ್ಕೆ ವಿಟಿಯು ಕ್ರಿಕೆಟ್‌ನ ಬೆಳವಣಿಗೆಗೆ ಸಾಕ್ಷಿಯಾಗಿದ್ದು, ಭವಿಷ್ಯದ ಕ್ರೀಡಾಪಟುಗಳಿಗೆ ಪ್ರೇರಣೆಯಾಗಿದೆ.

 

Continue Reading

Mandya

ಕೆ.ಆರ್. ಪೇಟೆ  ಅಭ್ಯರ್ಥಿ ಘೋಷಣೆ ವಿಚಾರ: ಸ್ಪಷ್ಟನೆ ನೀಡಿದ ನಿಖಿಲ್‌ ಕುಮಾರಸ್ವಾಮಿ

Published

on

ಮಂಡ್ಯ: ಕೆ.ಆರ್. ಪೇಟೆ  ಅಭ್ಯರ್ಥಿ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಇದು ಹಾದಿಬೀದಿಯಲ್ಲಿ ಚರ್ಚೆ ಮಾಡುವ ವಿಚಾರ ಅಲ್ಲ. ಅಂತಹ ಅನಿವಾರ್ಯ ಸೃಷ್ಠಿ ಆಗಿಲ್ಲ. ಕಾಮನ್ ಸೆನ್ಸ್ ಇರುವ ವ್ಯಕ್ತಿ ಹೇಗೆ ಮಾತಾಡಬೇಕೆಂದು ಅರಿಯಬೇಕು. ಕೆ.ಆರ್. ಪೇಟೆ ಜೆಡಿಎಸ್ ಶಾಸಕರಾಗಿ ಮಂಜಣ್ಣ ನೇಮಕವಾಗಿದ್ದಾರೆ. ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಸಹಜವಾಗಿ  ಹೇಳಿದ್ದೆ ಅಷ್ಟೆ.  ನನ್ನ ಹೇಳಿಕೆಯಲ್ಲಿ ತಪ್ಪೇನಿದೆ ಎಂದಿದ್ದಾರೆ.

ಮೈತ್ರಿ ಮೇಲ್ಮಟ್ಟದಲ್ಲಿ ಆಗಿದ್ದು, ಎಚ್ ಡಿಕೆ ವ್ಯಕ್ತಿತ್ವ ಬಗ್ಗೆ ರಾಜ್ಯದ ಜನತೆಗೆ ಗೊತ್ತಿದೆ. ಕುಮಾರಸ್ವಾಮಿ ಮೇಲೆ ಗೂಬೆ ಕೂರಿಸುವುದು ಬೇಡ. ವಿಶ್ವಾಸದ ಕೊರತ ಇದ್ದರೆ ಹಾದಿ ಬಿದಿಯಲ್ಲಿ ಏಕೆ ಚರ್ಚೆ ಮಾಡುತ್ತೀರಿ.  ಮೈತ್ರಿ ಉಳಿಸಿಕೊಳ್ಳಬೇಕೆಂದು ಇದ್ದರೆ ಬನ್ನಿ ಹೆಚ್ ಡಿಕೆ ಮನೆ ಬಾಗಿಲು ಯಾವಾಗಲೂ ತೆರೆದಿರುತ್ತದೆ.  ಸಮಸ್ಯೆ ಇದ್ದರೆ ಸರಿಪಡಿಸುವ ಕೆಲಸ ಮಾಡೋಣ ಎಂದು ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ನಿಖಿಲ್ ಕುಮಾರಸ್ವಾಮಿ ಅವರು, ಮುಂದೆಯೂ  ಶಾಸಕ ಮಂಜು ಅವರ ಕೈ ಹಿಡಿಯಿರಿ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಬಿಜೆಪಿ ಮುಖಂಡರಾದ ಮಾಜಿ ಶಾಸಕರಾದ ನಾರಾಯಣಗೌಡ,  ಪ್ರೀತಂ ಜೆ. ಗೌಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Continue Reading

Mandya

ಪೋಷಕರು ತಮ್ಮ ಮಕ್ಕಳ ಮೇಲೆ ನಿಗಾವಹಿಸಿ : ನ್ಯಾ.ಹೆಚ್. ಶಶಿಧರ ಶೆಟ್ಟಿ*

Published

on

ಮಂಡ್ಯ : ಯುವಜನತೆಗೆ ಕಾನೂನಿನ ಜ್ಞಾನ ಬಹಳ ಅಗತ್ಯವಾಗಿದ್ದು, ಕಾನೂನಿನ ಮಾಹಿತಿಗಳನ್ನು ತಿಳಿದುಕೊಳ್ಳಬೇಕು. ಕಾನೂನಿನ ನಿಯಮಗಳ ಉಲ್ಲಂಘನೆಯ ಬಗ್ಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಹೆಚ್. ಶಶಿಧರ ಶೆಟ್ಟಿ ರವರು ಹೇಳಿದರು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು, ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು ಬಾಲ ನ್ಯಾಯ ಸಮಿತಿ ಕರ್ನಾಟಕ ಉಚ್ಚ ನ್ಯಾಯಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಡ್ಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಕೀಲರ ಸಂಘ (ರಿ), ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ,ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯನ್ನು “ಬಾಲ್ಯವಿವಾಹ ಮುಕ್ತ ಮಾಡುವ ಸಂಕಲ್ಪ” ಅಭಿಯಾನದ ಅಂಗವಾಗಿ ಮಕ್ಕಳ ಸಂರಕ್ಷಣೆ ಮತ್ತು ಕಾನೂನು ಕುರಿತು ಬೃಹತ್ ತರಬೇತಿ ಕಾರ್ಯಾಗಾರ ಮಂಡ್ಯ ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಹೆಚ್. ಶಶಿಧರ ಶೆಟ್ಟಿ ರವರು ಕಾರ್ಯಕ್ರಮ ವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಯುವಜನತೆಯು ದೇಶಕ್ಕೆ ಪ್ರೇರಣೆಯಾಗಬೇಕು ಹೊರತು ಮಾದಕ ವಸ್ತುಗಳಿಗೆ ಮೊರೆ ಹೋಗಬಾರದು.
ಇತ್ತೀಚಿನ ದಿನಗಳಲ್ಲಿ ಡ್ರಗ್ಸ್ ಗೆ ಮಕ್ಕಳು ಮೊರೆ ಹೋಗುತ್ತಿದ್ದಾರೆ ಪೋಷಕರು ಮತ್ತು ಅಧಿಕಾರಿಗಳು ಮಕ್ಕಳ ಬಗ್ಗೆ ನಿಗ ವಹಿಸಬೇಕು ಎಂದು ಹೇಳಿದರು.

ಸಾರ್ವಜನಿಕರಲ್ಲಿ ಕಾನೂನಿನ ಅರಿವಿನ ಬಗ್ಗೆ ಮಾಹಿತಿ ತಿ ಕಾನೂನಿನ ಜ್ಞಾನ ಬಹಳ ಮುಖ್ಯ ವಾಹನ ಚಲಾಯಿಸುವ ಹೆಲ್ಮೆಟ್, ಚಾಲನಾ ಪರವಾನಗಿ,ವಾಹನದ ಭದ್ರತಾ ವಿಮೆಯನ್ನು ಹೊಂದಿರಬೇಕು ಎಂದು ಹೇಳಿದರು

ಮಕ್ಕಳ ಮೇಲೆ ದೌರ್ಜನ್ಯ ನಡೆದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಬೇಕು. ದೇಶದಲ್ಲಿ 43% ಸಣ್ಣ ಹುಡುಗರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ. ಆದ್ದರಿಂದ ಪೋಷಕರು ಮಕ್ಕಳ ಮೇಲೆ ಜ್ಞಾನ ವಹಿಸಬೇಕು ಎಂದು ಹೇಳಿದರು.

ಬಾಲ್ಯ ವಿವಾಹ ಮುಕ್ತ ಜಿಲ್ಲೆಯನಾಗಿಸಲು ಪೋಷಕರ ಪಾತ್ರ ಬಹಳ ಮುಖ್ಯ.ಮಕ್ಕಳನ್ನು ದೇಶದ ಸಂಪತ್ತನ್ನಾಗಿ ಮಾಡಬೇಕೆ ಹೊರತು ಮಕ್ಕಳ ಆಸೆ,ಆಕಾಂಕ್ಷೆ,ಭಾವನೆಯನ್ನು ಮೊಟಕುಗೊಳಿಸಬಾರದು ಎಂದು ಹೇಳಿದರು.

ಮಕ್ಕಳನ್ನು ಸಾಮಾಜಿಕ ಪಿಡುಗಿನಿಂದ ಹೊರ ತರಲು ಆಶಾ ಕಾರ್ಯಕರ್ತರ ಮಹತ್ವ ಬಹಳ ಮುಖ್ಯವಾಗಿದೆ ಹಿರಿಯರನ್ನು ಮತ್ತು ಮಕ್ಕಳನ್ನು ಪ್ರೀತಿಯಿಂದ ನೋಡಿಕೊಳ್ಳಬೇಕು ಮತ್ತು ಗೌರವಿಸಬೇಕು ಎಂದು ತಿಳಿಸಿದರು

ಜಿಲ್ಲಾಧಿಕಾರಿಗಳಾದ ಡಾ. ಕುಮಾರ ರವರು ಕಾರ್ಯಕ್ರಮದ ಅಧ್ಯಕತೆಯನ್ನು ವಹಿಸಿ ಮಾತನಾಡಿ, ಪ್ರತಿ ವರ್ಷ ಸುಮಾರು 65 ರಿಂದ 70 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿದೆ ಆದರೆ ಕಳೆದ ವರ್ಷ ಕೇವಲ 14 ಪ್ರಕರಣಗಳು ಮಾತ್ರ ದಾಖಲಾಗಿವೆ ಜಿಲ್ಲೆಯಲ್ಲಿ ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಹಲವು ಕಾರ್ಯಕ್ರಮಗಳನ್ನು ಮಾಡಲಾಗಿದೆ ಎಂದು ಹೇಳಿದರು.

ಸರ್ಕಾರ, ಸಂಘ ಸಂಸ್ಥೆ, ಅಧಿಕಾರಿಗಳು, ಎಲ್ಲರೂ ಸಾರ್ವಜನಿಕರು ಜೊತೆಯಾಗಿ ಬಾಲ್ಯ ವಿವಾಹವನ್ನು ತೊಡೆದು ಹಾಕಬೇಕು ಎಂದು ಹೇಳಿದರು ಹೆಣ್ಣಿಗೆ ಸಿಗಬೇಕಾದಂತಹ ಗೌರವ, ಸ್ಥಾನಮಾನ ಎಲ್ಲವೂ ಕೂಡ ಸಿಗಬೇಕು. ಎಂದು ಹೇಳಿದರು.

ಜಿಲ್ಲಾ ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಪೋಷಕರು ಮತ್ತು ಸಮಾಜದ ಜವಾಬ್ದಾರಿ ಬಹಳ ಅಗತ್ಯ. ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಶಿಕ್ಷಣದಿಂದ ಮಾತ್ರ ಸಾಧ್ಯ. ಎಂದು ಹೇಳಿದರು.

ಬಾಲ್ಯ ವಿವಾಹ ಕುರಿತು ಅಂಗನವಾಡಿಕಾರ್ಯಕರ್ತರು ಹಾಗೂ ಆಶಾಕಾರ್ಯಕರ್ತೆಯರು ಗ್ರಾಮೀಣ ಪ್ರದೇಶಗಳಲ್ಲಿ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ಮಾಡಬೇಕು ಎಂದು ಸೂಚಿಸಿದರು.

ಬಾಲ್ಯ ವಿವಾಹ ಪದ್ಧತಿಯನ್ನು ಕಾನೂನಿನಿಂದ ಮಾತ್ರ ಹೋಗಲಾಡಿಸಲು ಸಾಧ್ಯವಿಲ್ಲ ಪೋಷಕರ ಮಾನವೀಯತೆ, ಹೃದಯವಂತಿಕೆದಿಂದ ಮಾತ್ರ ಸಾಧ್ಯ ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಪ್ರಭಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರಾದ ಶಿವಪ್ರಸಾದ್‌ ಮಾತನಾಡಿ ಎಲ್ಲರಿಗೂ ಸಮಾನವಾದ ಹಕ್ಕುಗಳು ಇವೆ. ಮಕ್ಕಳ ಪರಿಪೂರ್ಣ ಬೆಳವನೆಗೆ ತುಂಬಾ ಮುಖ್ಯ, ಮಕ್ಕಳ ಭಾವನೆಗಳನ್ನು ಕಟ್ಟಿ ಹಾಕಬಾರದು ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಆ‌ರ್. ನಂದಿನಿ ಮಾತನಾಡಿ ಕಾನೂನಿನ ನಿಯಮಗಳನ್ನು ಪಾಲಿಸಬೇಕು.
ಯುವಜನತೆ ಕಾನೂನಿನ ನಿಯಮಗಳನ್ನು ತಿಳಿದುಕೊಳ್ಳುವುದು ತುಂಬಾ ಅಗತ್ಯ ಎಂದು ಹೇಳಿದರು.

ಗ್ರಾಮೀಣ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯ ಪಾತ್ರ ಬಹಳ ಮುಖ್ಯ. ಸಾಮಾಜಿಕವಾಗಿ ಆರ್ಥಿಕವಾಗಿ,ಧಾರ್ಮಿಕವಾಗಿ ಜಿಲ್ಲೆಯು ಶ್ರೀಮಂತ ಜಿಲ್ಲೆಯಾಗಿದೆ. ಜಿಲ್ಲೆಯಲ್ಲಿ ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸಬೇಕು ಪೋಷಕರು ಮಕ್ಕಳ ಪ್ರತಿಭೆಯನ್ನು ಗುರುತಿಸಬೇಕು ಮತ್ತು ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು.ಎಂದು ಹೇಳಿದರು.

ಗಂಡು – ಹೆಣ್ಣು ಎಂಬ ತಾರತಮ್ಯವಿಲ್ಲದೆ ಎಲ್ಲರಿಗೂ ಸಮಾನವಾದ ರೀತಿಯಲ್ಲಿ ನೋಡಬೇಕು ಹೆಣ್ಣು ಮಕ್ಕಳನ್ನ ದೇಶವನ್ನು ಪ್ರತಿನಿಧಿಸುವಂತಹ ಸ್ಥಾನಮಾನವನ್ನು ದೊರಕಿಸಬೇಕು ಎಂದು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಆನಂದ.ಎಂ ರವರು ಮಾತನಾಡಿ ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲಾಯಾಗಿ ಮಾಡಬೇಕು ಮತ್ತು ಭ್ರೂಣ ಹತ್ಯೆಯನ್ನು ತಡೆಯಬೇಕು.ಹೆಣ್ಣು ಮಕ್ಕಳ್ನನು ಗೌರವಿಸಬೇಕು ಮಕ್ಕಳನ್ನು ಪ್ರೇರಣೆ ಆಗುವಂತೆ ಮಾಡಬೇಕು.ವ್ಯಾಜ್ಯ ಮುಕ್ತ ಜಿಲ್ಲೆಯಾಗಿ ಮಾಡಬೇಕು ದೋರಣೆಯನ್ನು ತೊಲಗಿಸಬೇಕು ಸಾರ್ವಜನಿಕರು ಭಾರತ ಸಂವಿಧಾನ ಬದ್ದವಾಗಿ ಕಾರ್ಯವನ್ನು ನಿರ್ವಹಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿರ್ದೇಶನಾಲಯ ಜಂಟಿ ನಿರ್ದೇಶಕರಾದ ನಿಶ್ಚಲ್ ಬಿ.ಹೆಚ್, ಮಕ್ಕಳ ರಕ್ಷಣಾ ನಿರ್ದೇಶನಾಲಯ ನಿರ್ದೇಶಕರಾದ ಡಾ.ಸ್ನೇಹ ಸಿ.ವಿ ವಕೀಲರ ಸಂಘ,ಅಧ್ಯಕ್ಷರಾದ ಸತ್ಯಾನಂದ.ಟಿ.ಎಸ್‌. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪ ನಿರ್ದೇಶಕರಾದ ಆಶಾ, ರಶ್ಮಿ ರವರು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Continue Reading

Trending

error: Content is protected !!