Connect with us

Hassan

ದಲಿತ ಅಧಿಕಾರಿ ವಿರುದ್ಧ ದೌರ್ಜನ್ಯ ನಿಲ್ಲಿಸದಿದ್ದರೆ ವ್ಯವಸ್ಥೆ ವಿರುದ್ಧ ಹೋರಾಟ: ಎಂ.ಆರ್.ವೆಂಕಟೇಶ್

Published

on

ಹಾಸನ: ಶೋಷಿತ ಸಮಾಜದ ಸರ್ಕಾರಿ ಅಧಿಕಾರಿ ರಾಮಚಂದ್ರ ಅವರ ಮೇಲೆ ದೌರ್ಜನ್ಯ ಮತ್ತು ಮಾನಸಿಕ ಕಿರುಕುಳ ನೀಡುತ್ತಿರುವ ಸೂಕ್ಷ್ಮವಾದ ವಿಚಾರವಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಹಿಂಸೆ ಕೊಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಫಾಯಿ ಕರ್ಮಚಾರಿ ಆಯೋಗದ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಎಂ.ಆರ್. ವೆಂಕಟೇಶ್ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಬೇಲೂರು ಶಾಸಕರ ಹಿಂಬಾಲಕರಾದ ವಿನಯ್ ಎಂಬುವರಿಂದ ಹಿಂಸೆ ಮಾಡಲಾಗುತ್ತಿದೆ ಎಂಬುದು ಆಡಿಯೋದಲ್ಲಿ ಹೇಳಿದೆ. ರಾಮಚಂದ್ರ ಅವರು ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಅವರಿಗೆ ಮಾನಸಿಕವಾಗಿ ಹಿಂಸೆ ನೀಡಲಾಗುತ್ತಿದೆ. ಲ್ಲೆಯಲ್ಲಿ ದಲಿತ ಅಧಿಕಾರಿಗಳಿಗೆ ಕಿರುಕುಳ ಕೊಡುವುದು ಹೊಸದೇನಲ್ಲ. ಬೇಲೂರಿನ ಶಾಸಕರು ಹಾಗೂ ಕೆಲ ಹಿರಿಯ ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದು, ರಾಮಚಂದ್ರ ಅವರೆ ವರ್ಗಾವಣೆ ಮಾಡಿಕೊಂಡು ಹೋಗಲಿ ಎನ್ನುವ ಉದ್ದೇಶದಿಂದ ಇದರಲ್ಲಿ ದೊಡ್ಡ ಹುನ್ನಾರ ನಡೆಸಿದೆ ಎಂದು ಆರೋಪಿಸಿದರು.

ಈ ಜಿಲ್ಲೆಯಲ್ಲಿ ದಲಿತ ಯಾವ ಅಧಿಕಾರಿಗಳಿಗೂ ರಕ್ಷಣೆ ಇಲ್ಲ. ಶಾಸಕರು ಮತ್ತು ಮಂತ್ರಿಗಳು ಯಾರು ಬೇಕಾದರೂ ಆಗಬಹುದು. ಆದರೇ ಕಷ್ಟುಪಟ್ಟು ಓದಿದವರು ಮಾತ್ರ ಅಧಿಕಾರಿಗಳು ಆಗಲು ಸಾಧ್ಯ. ಅಧಿಕಾರಿಗಳಿಗೆ ನಾವುಗಳು ಗೌರವ ಕೊಡಬೇಕು. ಯಾವ ಅಧಿಕಾರಿಗಳು ಭ್ರಷ್ಠಾಚಾರ ಮಾಡುತ್ತಾರೆ ಅವರನ್ನ ಶಿಕ್ಷಸಲಿ. ನ್ಮಮ ಸಮುದಾಯದ ಅಧಿಕಾರಿಗಳ ಪರ ನಾವು ನಿಲ್ಲಲೇಬೇಕು. ಇಂತಹ ಪ್ರಕರಣಗಳು ಮತ್ತೆ ನಡೆಯಬಾರದು ಎಂದರು.

ಪೊಲೀಸ್ ಇಲಾಖೆ ವ್ಯವಸ್ಥಿತವಾದಂತಹ ಕೆಲಸ ಮಾಡುತ್ತಿದೆ ಎಂದು ನನಗೆ ಅನಿಸುತ್ತಿಲ್ಲ. ಸಿಸಿ ಕ್ಯಾಮಾರ, ಸಾಕ್ಷಿ ಆಧರಿಸಿ ಆರೋಪಿಗಳನ್ನು ಬಂಧಿಸಬೇಕು. ಉದ್ದೇಶ ಪೂರ್ವಕವಾಗಿ ದಲಿತ ಅಧಿಕಾರಿಗಳಿಗೆ ತೊಂದರೆ ಕೊಟ್ಟಂತಹ ವೇಳೆ ಜಿಲ್ಲಾಡಳಿತ ಆಗಲಿ ಸರಕಾರಿ ಆಗಲಿ ತನಿಖೆ ಮಾಡಿ ಕ್ರಮ ಜರುಗಿಸಲು ಮುಂದಾಗಬೇಕು. ಇದರಲ್ಲಿ ಯಾವ ದುರುದ್ದೇಶವಿಲ್ಲ. ದಲಿತ ಅಧಿಕಾರಿ ಎಂದು ಈ ರೀತಿ ಮಾಡಬಾರದು ಎಂದು ಸಲಹೆ ನೀಡಿದರು.

ಮುಂದಿನ ದಿನಗಳಲ್ಲಿ ನಮ್ಮ ಸಂಘಟನೆ ಜೊತೆ ಚರ್ಚೆ ಮಾಡಿ ಶಾಸಕರ ಮತ್ತು ಈ ವ್ಯವಸ್ಥೆ ವಿರುದ್ಧ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಸಿದರು. ಜಿಲ್ಲೆಯಲ್ಲಿ ಯಾವುದೇ ಸಮುದಾಯದ ಸರ್ಕಾರಿ ಅಧಿಕಾರಿಗಳಿಗೆ ಭದ್ರತೆ ಇಲ್ಲದಾಗಿದೆ. ಬೇಲೂರಿನ ಶಾಸಕ ಸುರೇಶ್ ಅವರು ತಮ್ಮ ನಡವಳಿಕೆಯನ್ನು ತಿದ್ದಿಕೊಳ್ಳಬೇಕು ಎಂದರು.

Continue Reading

Hassan

ತಾಲೂಕಿನಾದ್ಯಂತ ಮಹಾಶಿವರಾತ್ರಿ ಸಂಭ್ರಮ

Published

on

ವರದಿ ಸತೀಶ್ ಚಿಕ್ಕಕಣಗಾಲು
ಆಲೂರು: ತಾಲೂಕಿನಾದ್ಯಂತ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿತ್ತು. ಶಿವನ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳಿಗೆ ನಸುಕಿನಿಂದಲೇ ಮಹಿಳೆಯರು, ಮಕ್ಕಳು, ವೃದ್ಧರು ಸೇರಿದಂತೆ ಕುಟುಂಬ ಸಮೇತರಾಗಿ ತೆರಳಿ ಶಿವನ ದರ್ಶನ ಪಡೆದು ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.

ಉಪವಾಸ ಆಚರಣೆಯಲ್ಲಿ ತೊಡಗಿದ್ದ ಜನರು ಬೆಳಗ್ಗೆಯಿಂದಲೂ ಆಲೂರು ಪಟ್ಟಣದ ಕೆ.ಇ.ಬಿ ವೃತ್ತದ ಬಳಿ ಇರುವ ಸಂಗಮೇಶ್ವರ ಶಿವನ ದೇವಸ್ಥಾನ, ಬೇಡುಚವಳ್ಳಿ ಮಲ್ಲಿಕಾರ್ಜುನ ಸ್ವಾಮಿ ದೇವಾಲಯ, ಮರಸು ಗ್ರಾಮದ ಕಲ್ಲೇಶ್ವರ ಸ್ವಾಮಿ, ತೊಗರನಹಳ್ಳಿ ಬಸವಣ್ಣನವರ ದೇವಾಲಯ, ಕೆಂಚನಹಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನ, ಹೊಸೂರು ಚನ್ನಾಪುರ ಬಸವಣ್ಣ ದೇವಾಲಯ, ಬ್ಯಾಬ ಗ್ರಾಮದ ಮಲ್ಲೇಶ್ವರ ಸ್ವಾಮಿ ದೇವಸ್ಥಾನ, ಹುಣಸುವಳ್ಳಿ ಗ್ರಾಮದ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನ, ದೊಡ್ಡಕಣಗಾಲು ವೀರಭದ್ರೇಶ್ವರ ಸ್ವಾಮಿ ದೇವಸ್ಥಾನ, ಮರಸು ಹೊಸಳ್ಳಿ ಗ್ರಾಮದ ಬಸವಣ್ಣ ದೇವಾಲಯ, ದೊಡ್ಡಕಣಗಾಲು ಕಲ್ಲೇಶ್ವರ ಮತ್ತು ಮಲ್ಲೇಶ್ವರ ಸ್ವಾಮಿ ದೇವಸ್ಥಾನ, ಮುದಿಗೆರೆ ಮಲ್ಲೇಶ್ವರ ಸ್ವಾಮಿ ದೇವಸ್ಥಾನ, ನಾಕಲಗೂಡು ಮಲ್ಲೇಶ್ವರ ಸ್ವಾಮಿ ದೇವಸ್ಥಾನ, ಕಿರುಗಡಲು ಗ್ರಾಮದಶ ಪಂಚಲಿಂಗೇಶ್ವರ ಸ್ವಾಮಿ ದೇವಸ್ಥಾನ, ಸೊಂಪುರ ಗ್ರಾಮದ ನಂಜುಂಡೇಶ್ವರ ಸ್ವಾಮಿ ದೇವಸ್ಥಾನ, ಡಿ. ಕಣಗಾಲು ಗ್ರಾಮದ ಕಾಳಸ್ಥೆಶ್ವರ ಸ್ವಾಮಿ ದೇವಸ್ಥಾನ, ಪಾಳ್ಯ ಹೋಬಳಿ ವ್ಯಾಪ್ತಿಯ ಪಾಳ್ಯ ಗ್ರಾಮದ ರಾಮೇಶ್ವರ ಸ್ವಾಮಿ ದೇವಸ್ಥಾನ, ತ್ರಿಪುರಂತೇಶ್ವರ, ಜೆ. ತಿಮ್ಮನಹಳ್ಳಿಯ ಭೈರವೇಶ್ವರ ಸ್ವಾಮಿ ದೇವಸ್ಥಾನ, ಕಾರ್ಜುವಳ್ಳಿಯ ಕಲ್ಲೇಶ್ವರ ಸ್ವಾಮಿ ದೇವಸ್ಥಾನ, ಕಡದರವಳ್ಳಿ ಗ್ರಾಮದ ಮಲ್ಲೇಶ್ವರ ಸ್ವಾಮಿ ದೇವಸ್ಥಾನ, ಹುಲ್ಲಹಳ್ಳಿಯ ಮಲ್ಲೇಶ್ವರ ಸ್ವಾಮಿ ದೇವಸ್ಥಾನ, ಬಿಡದರವಳ್ಳಿಯ ಮಲ್ಲೇಶ್ವರ ಸ್ವಾಮಿ ದೇವಸ್ಥಾನ, ಅಳುವಳ್ಳಿಯ ಮಲ್ಲೇಶ್ವರ ಸ್ವಾಮಿ ದೇವಸ್ಥಾನ, ದೇತಾಪುರ ಗ್ರಾಮದ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ,

 

ಕುಂಬಾರಹಳ್ಳಿಯ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ, ಬೀರುಕನಳ್ಳಿಯ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನ, ಕಾಮತಿಯ ಬಸವಣ್ಣ ಸ್ವಾಮಿ ದೇವಸ್ಥಾನ, ಚಿಕ್ಕಕಣಗಾಲು ಗ್ರಾಮದ ಕಾಳೇಶ್ವರ, ಮಲ್ಲೇಶ್ವರ ಸ್ವಾಮಿ ದೇವಸ್ಥಾನ, ಬೆಳಮೆ ಬಸವಣ್ಣ ಸ್ವಾಮಿ ದೇವಸ್ಥಾನಗಳಲ್ಲಿ ಹಾಗೂ ಕುಂದೂರು ಹೋಬಳಿ ವ್ಯಾಪ್ತಿಯ ತುರುಗನವಳ್ಳಿ ಮಲ್ಲೇಶ್ವರ ಹಾಗೂ ಬಸವಣ್ಣ ಸ್ವಾಮಿ ದೇವಸ್ಥಾನ, ಹಸುಗನೂರು ಕೈಲಾಸನಾಥೇಶ್ವರ ಸ್ವಾಮಿ ದೇವಸ್ಥಾನ, ಕಡಗಬಲ ಕಲ್ಲೇಶ್ವರ ಸ್ವಾಮಿ ದೇವಸ್ಥಾನ, ಬಾಚನಹಳ್ಳಿ ಕಲ್ಲೇಶ್ವರ ಸ್ವಾಮಿ ದೇವಸ್ಥಾನ, ಹಂಚೂರು ಮಲ್ಲೇಶ್ವರ ಸ್ವಾಮಿ ದೇವಸ್ಥಾನ, ಮೇರ್ವೆ ಮಲ್ಲೇಶ್ವರ ಸ್ವಾಮಿ ದೇವಸ್ಥಾನ, ಚಟ್ಟನಹಳ್ಳ ಮಲ್ಲೇಶ್ವರ ಸ್ವಾಮಿ ದೇವಸ್ಥಾನ, ಕಾರಿಗನಹಳ್ಳಿ ಬಸವಣ್ಣ ಸ್ವಾಮಿ ದೇವಸ್ಥಾನ, ಕದಾಳು ಮಲ್ಲೇಶ್ವರ ಸ್ವಾಮಿ ದೇವಸ್ಥಾನ, ಮುದ್ದನಹಳ್ಳಿ ಬಸವಣ್ಣ ಸ್ವಾಮಿ ದೇವಸ್ಥಾನ, ಕುದರವಳ್ಳಿಯ ಜಂಗಮಾನ್ಯ ಸ್ವಾಮಿ ದೇವಸ್ಥಾನಗಳ್ಳಿ, ಕೆಂಚಮ್ಮ ಹೊಸಕೋಟೆ ಹೋಬಳಿಯ ವ್ಯಾಪ್ತಿಯಲ್ಲಿನ ಹರಹಳ್ಳಿಯ ಮಲ್ಲೇಶ್ವರ ಸ್ವಾಮಿ ದೇವಸ್ಥಾನ, ಮಾದಿಹಳ್ಳಿ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ, ಕಾರಗೋಡು ಬಸವಣ್ಣ ಸ್ವಾಮಿ ದೇವಸ್ಥಾನ, ಅಂಜಲಿಗೆ ಸೊಮೇಶ್ವರ ಸ್ವಾಮಿ ದೇವಸ್ಥಾನ, ಅಬ್ಬನ ಗ್ರಾಮದ ಅಮೃತ ಲಿಂಗೇಶ್ವರ ಸ್ವಾಮಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆದವು. ದೇವಸ್ಥಾನಗಳ ಅರ್ಚಕರಿಂದ ಶಿವಲಿಂಗ ಮೂರ್ತಿಗೆ ಅಭಿಷೇಕ ಪೂಜೆ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಜಲಾಭಿಷೇಕ, ಬಿಲ್ವಪತ್ರೆ ಅರ್ಪಣೆ ಮಾಡಲಾಯಿತು. ಪಲ್ಲಕ್ಕಿ ಉತ್ಸವ, ಬಳಿಕ ಮಹಾ ಆರತಿ ಕಾರ್ಯಕ್ರಮ ಸೇರಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು. ಭಕ್ತರು ಶ್ರದ್ಧಾ ಭಕ್ತಿಯಿಂದ ತೆರಳಿ ದರ್ಶನ ಪಡೆದು, ಪೂಜೆ ಸಲ್ಲಿಸುತ್ತಿದರು.

ಪುರೋಹಿತ ಶಶಿ ಮಾತನಾಡಿ, ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದಾದ ಮಹಾಶಿವರಾತ್ರಿ ಆಚರಣೆಗೂ ಹಿನ್ನೆಲೆಯಿದೆ, ಕೈಲಾಸವಾಸಿ ಶಿವನಿಗೆ ಶಿವರಾತ್ರಿ ಅತ್ಯಂತ ಪ್ರಿಯವಾದ ದಿನ. ಶಿವರಾತ್ರಿಯಂದು ತನ್ನನ್ನು ಪೂಜಿಸುವ ಭಕ್ತರಿಗೆ ತಾನು ವಿಶೇಷವಾಗಿ ಅನುಗ್ರಹ ನೀಡುವುದಾಗಿ ಸ್ವತಃ ಶಿವನೇ ಪಾರ್ವತಿಯಲ್ಲಿ ಅರುಹಿದ್ದಾನೆ ಎನ್ನುತ್ತದೆ ಶಿವಪುರಾಣ. ಮಹಾ ಶಿವರಾತ್ರಿಯಂದು ಬಿಲ್ವಪತ್ರೆಯನ್ನು ಶಿವಲಿಂಗದ ಮೇಲಿಟ್ಟು ಪೂಜಿಸಿದರೆ, ಯಾಗ ಮಾಡಿದ ಫಲ ದೊರೆಯುತ್ತದೆ ಎಂದೂ ಹಿರಿಯರು ಹೇಳುತ್ತಾರೆ. ಅಲ್ಲದೇ, ಶಿವರಾತ್ರಿಯ ಆಚರಣೆಗೆ ವೈಜ್ಞಾನಿಕ ಕಾರಣಗಳೂ ಇವೆ. ಭಾರತೀಯರು ಆಚರಿಸುವ ಯಾವುದೇ ಹಬ್ಬ-ಹರಿದಿನಗಳು, ಸಮಾರಂಭ, ದಿನಾಚರಣೆ, ಜಯಂತಿ, ಉತ್ಸವಗಳು ಸಾಮಾನ್ಯವಾಗಿ ಅಮರವಾಗಿ ಉಳಿದಿರುವ ಯಾವುದೋ ಗತ ವ್ಯಕ್ತಿಯ, ಶಕ್ತಿಯ ಅಥವಾ ಪ್ರಾಚೀನತೆಯ ಪ್ರತೀಕಗಳಾಗಿರುತ್ತವೆ ಎಂದು ತಿಳಿಸಿದರು.

ಪೋಟೋ ಕ್ಯಾಪ್ಶನ್: ಆಲೂರು ಪಟ್ಟಣದ ಕೆಇಬಿ ವೃತ್ತದ ಬಳಿ ಇರುವ ಸಂಗಮೇಶ್ವರ ದೇವಸ್ಥಾನದಲ್ಲಿ ಪುರೋಹಿತ ಶಶಿ ರವರ ನೇತೃತ್ವದಲ್ಲಿ ಶಿವಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು.

Continue Reading

Hassan

ಸಂತ ಸೇವಾಲಾಲ್ ಜಯಂತಿ ಆಚರಣೆ : ಕೆ.ಎಂ.ಶಿವಲಿಂಗೇಗೌಡರವರಿಂದ ಪುಷ್ಪನಮನ

Published

on

ಅರಸೀಕೆರೆ : ಸಂತ ಸೇವಾಲಾಲ್ ಜಯಂತಿ ಅರಸೀಕೆರೆ ನಗರದ ಮಿನಿ ವಿಧಾನಸೌಧದ ಕಂದಾಯ ಭವನದಲ್ಲಿ ತಾಲೂಕು ಆಡಳಿತದ ಮಂಡಳಿ ವತಿಯಿಂದ ಏರ್ಪಡಿಸಿದ್ದ ಸಂತ ಸೇವಾಲಾಲ್ ಜಯಂತಿಯಲ್ಲಿ ಅರಸೀಕೆರೆ ಜನಪ್ರಿಯ ಶಾಸಕರಾದ ಕೆ,ಎಂ, ಶಿವಲಿಂಗೇಗೌಡರು ಭಾಗವಹಿಸಿ ಪುಷ್ಪನಮನ ಸಲ್ಲಿಸಿದರು.


ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ಸಂತೋಷ್ ಕುಮಾರ್, ತಾಲೂಕು ಭೂ ನ್ಯಾಯ ಮಂಡಳಿಯ ಸದಸ್ಯರಾದ ಹರತನಹಳ್ಳಿ ಜಯಣ್ಣ, ವಕೀಲರಾದ ಕುಮಾರನಾಯ್ಕ್, ಮಂಜುಳಾ ಬಾಯಿ, ಕೃಷ್ಣಾ ನಾಯ್ಕ್, ಪೃಥ್ವಿ ನಾಯಕ್ ಹಾಗೂ ಸಮಾಜದ ಮುಖಂಡರುಗಳು ಭಾಗವಹಿಸಿದ್ದರು.

Continue Reading

Hassan

ಕೊಟ್ಟೂರಪ್ಪ ನಿಧನ

Published

on

ಅರಸೀಕೆರೆ : ಅರಸೀಕೆರೆ ತಾಲೂಕಿನ ಮಾಡಾಳು ದಾಖಲೆ ಸೀತಾಪುರ ಗ್ರಾಮದ  ನಿವಾಸಿ

ಕೊಟ್ಟೂರಪ್ಪರವರು, (ಜುಮ್ಮಿ)75 ಶನಿವಾರ ರಾತ್ರಿ ನಿಧನರಾಗಿದ್ದಾರೆ.

ಪತ್ನಿ ಇಬ್ಬರು ಪುತ್ರರು ಹಾಗೂ ನಾಲ್ಕು ಮಂದಿ ಹೆಣ್ಣು ಮಕ್ಕಳು ಹಾಗೂ ಅಪಾರ ಬಂದು ವರ್ಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಭಾನುವಾರ ಮಧ್ಯಾನ ಅವರ ತೋಟದಲ್ಲಿ ನೆರವೇರಿತು.

Continue Reading

Trending

error: Content is protected !!