Connect with us

Uncategorized

ಅಕ್ರಮ ಬಾಂಗ್ಲಾ ವಲಸಿಗರು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಂಠವಾಗುವ ಸಾಧ್ಯತೆ: ಕವನ್ ಗೌಡ

Published

on

ಹಾಸನ: ಜಿಲ್ಲೆಯಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಹಾವಳಿ ಹೆಚ್ಚಾಗಿದ್ದು ಮುಂದಿನ ದಿನಗಳಲ್ಲಿ ಪ್ರಜಾ ಪ್ರಭುತ್ವ ವ್ಯವಸ್ಥೆಗೆ ಇದು ಪ್ರತಿಕೂಲ ಪರಿಣಾಮ ಬೀರಲಿದೆ. ಕೂಡಲೇ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕೂಡಲೇ ಇದಕ್ಕೆ ಕಡಿವಾಣ ಹಾಕಬೇಕು ಎಂದು ವಕೀಲ ಕವನ್ ಗೌಡ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತಾಡಿದ ಅವರು, ಆಲೂರು, ಸಕಲೇಶಪುರ, ಬೇಲೂರು ಸೇರಿದಂತೆ ಮಲೆನಾಡಿನ ವಿವಿದೆಡೆ ಕೂಲಿ ಕಾರ್ಮಿಕರ ಹೆಸರಿನಲ್ಲಿ ಬಂದು ಇಲ್ಲೇ ಬಾಡಿಗೆ ಮನೆ ಪಡೆದು ವ್ಯಾಪಾರ ವಹಿವಾಟುಗಳನ್ನು ಪಡೆದುಕೊಂಡು ಹಂತಃ ಹಂತವಾಗಿ ಆಧಾರ್ ಕಾರ್ಡ್, ಓಟರ್ ಐಡಿ ಪಡೆದು ಭಾರತ ದೇಶದ ಪ್ರಜೆಯಾಗಿ ಇಲ್ಲೇ ನೆಲೆಸುವ ತಂತ್ರಗಾರಿಕೆ ನಡೆಯುತ್ತಿದೆ. ಕಾನೂನು ಪ್ರಕಾರ ವಿದೇಶಿಗರಿಗೆ ಭಾರತ ದೇಶದಲ್ಲಿ ನೆಲೆಸಲು ಅವಕಾಶ ಇಲ್ಲ, ಆದರೂ ನುಸುಳು ಕೋರರು ಈಗಾಗಲೇ ಒಳ ನುಸುಳಿದ್ದಾರೆ, ಈ ವಿಚಾರವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಅಕ್ರಮ ಬಾಂಗ್ಲಾ ವಲಸಿಗರನ್ನು ಗುರುತಿಸಿ ಅವರ ಬಗ್ಗೆ ತನಿಖೆ ನಡೆಸಿ ಅಗತ್ಯ ದಾಖಲೆಗಳು ಇಲ್ಲದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಇಲ್ಲವಾದರೆ ದೇಶಿಯರಿಗೆ ಮುಂದಿನ ದಿನಗಳಲ್ಲಿ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದರು.

ವಲಸಿಗರು ಈಗಾಗಲೇ ಬಾಡಿಗೆ ಮನೆ ಪಡೆದುಕೊಂಡು ಕರಾರು ಪತ್ರ ಪಡೆದುಕೊಂಡು ಹಂತ ಹಂತವಾಗಿ ಭಾರತೀಯ ಪ್ರಜೆಯಾಗಿ ಉಳಿಯುವ ಒಳಸಂಚು ನಡೆದಿದೆ, ಇದನ್ನು ನಿರ್ಲಕ್ಷ್ಯ ಮಾಡುವುದು ಬೇಡ ಮುಂದಿನ ದಿನಗಳಲ್ಲಿ ಪ್ರಜಾ ಪ್ರಭುತ್ವ ವ್ಯವಸ್ಥೆಗೆ ಅಕ್ರಮ ಬಾಂಗ್ಲಾ ವಲಸಿಗರು ಕಂಟಕ ವಾಗಲಿದ್ದಾರೆ ಈ ಬಗ್ಗೆ ಎಚ್ಚರ ಅಗತ್ಯವಾಗಿದೆ ಎಂದು ಹೇಳಿದರು.

ಈ ವಿಚಾರವಾಗಿ ಕಾಫಿ ಬೆಳೆಗಾರರು ಹಾಗೂ ಪೊಲೀಸ್ ಇಲಾಖೆಯ ಬಹುದೊಡ್ಡ ಜವಾಬ್ದಾರಿ ಇದೆ, ಆರಂಭದಲ್ಲಿಯೆ ಮುಂದಾಗಬಹುದಾದ ಅನಾಹುತಗಳಿಗೆ ಕಡಿವಾಣ ಹಾಕದಿದ್ದರೆ. ಭಾರತೀಯ ಪ್ರಜೆಗಳಿಗೆ ಸಮಸ್ಯೆ ಅಗಳಿವೆ ಜೊತೆಗೆ ದೇಶೀಯ ಪ್ರಜೆಗಳ ಹಕ್ಕು ಬಾಧ್ಯತೆಗಳನ್ನು ಕಿತ್ತುಕೊಳ್ಳುವ ಸ್ಥಿತಿ ನಿರ್ಮಾಣವಾಗಲಿದೆ. ಕೊಡಗು ಜಿಲ್ಲೆಯಲ್ಲಿ ಕೂಡ ಇದೆ ರೀತಿಯ ಸಮಸ್ಯೆ ಉಂಟಾದಾಗ ಅಲ್ಲಿನ ಎಸ್ಪಿ ಎಚ್ಚೆತ್ತುಕೊಂಡು ಅವರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ. ಅದೇ ರೀತಿ ಹಾಸನಲ್ಲಿ ಕೂಡ ಸ್ಥಳೀಯ ಪೊಲೀಸ್ ಠಾಣೆ ಹಂತದಲ್ಲಿ ಅವರ ದಾಖಲೆ ಪರಿಶೀಲನೆ ಮಾಡುವ ಕೆಲಸಗಳು ಆಗಬೇಕಿದೆ ಎಂದು ಸಲಹೆ ನೀಡಿದರು.

Continue Reading

Uncategorized

ದಿ. ರಾಕೇಶ್ ಸಿದ್ದರಾಮಯ್ಯ ಸ್ಮರಣಾರ್ಥ ಕಾರ್ ರೇಸ್ : ಕುಚುಕು ಗೆಳೆಯ ನನ್ನ ನೆನೆದ ಸಂಸದ ಸುನಿಲ್ ಬೋಸ್

Published

on

 ವರದಿ : ಮಹದೇವಸ್ವಾಮಿ ಪಟೇಲ್

ಆಬ್ಲೆಸ್ ಮೋಟರ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿವಂಗ ರಾಕೇಶ್ ಸಿದ್ದರಾಮಯ್ಯನವರ ಸ್ಮರಣಾರ್ಥ ಡರ್ಟಿ ಪ್ರಿಕ್ಸ್ ರೇಸ್ 2026 ನೇ ಸಾಲಿನ ಉದ್ಘಾಟನಾ ಸಮಾರಂಭವನ್ನು ಭಾನುವಾರ ಆಯೋಜಿಸಲಾಗಿತ್ತು.

ನಂಜನಗೂಡು ತಾಲೂಕು ಚಿಕ್ಕಯನ ಚಿತ್ರ ಹೋಬಳಿ ಕೈಗಾರಿಕಾ ಪ್ರದೇಶದಲ್ಲಿ ಆಯೋಜಿಸಿದ್ದ ಕಾರ್ ರೇಸ್ ಗೆ ಚಾಮರಾಜನಗರ ಸಂಸದ ಸುನಿಲ್ ಬೋಸ್ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.

ಈ ವೇಳೆ ರೇಸ್ಗೆ ಚಾಲನೆ ನೀಡಿ ಸಂಸದ ಸುನಿಲ್ ಬೋಸ್ ಮಾತನಾಡಿ, ದಿವಂಗತ ರಾಕೇಶ್ ಸಿದ್ಧರಾಮಯ್ಯನವರ ಸ್ಮರಣಾರ್ಥ ಡರ್ಟಿ ಟ್ರಿಕ್ಸ್ ರೇಸ್ ಅನ್ನು ಆಯೋಜನೆ ಮಾಡಲಾಗಿದೆ. ನಾನು ಮತ್ತು ರಾಕೇಶ್ ಸಿದ್ದರಾಮಯ್ಯನವರು ಸಹೋದರರಂತೆ ಇದ್ದವು. ಒಂದೇ ಕುಟುಂಬದ ಅಣ್ಣ ತಮ್ಮನಂತೆ ಜನರಿಗಾಗಿ ಕೆಲಸ ಮಾಡುತ್ತಿದ್ದೋ. ಅವರ ನೆನಪಿಗಾಗಿ ಇಂತಹ ಕಾರ್ಯಕ್ರಮಗಳು ನಡೆಯಬೇಕು, ಅವರಿಗೆ ಕಾರುಗಳ ಮೇಲೆ ಅಪಾರ ಆಸಕ್ತಿ ಇತ್ತು. ಒಬ್ಬ ಒಳ್ಳೆಯ ಸ್ನೇಹಿತನಾಗಿ, ಸಹೋದರನಾಗಿ ಅವರೊಂದಿಗೆ ಕಳೆದ ದಿನಗಳು ಈ ಕಾರ್ಯಕ್ರಮದ ಮೂಲಕ ನೆನಪಾಗುತ್ತಿದೆ. ದಿವಂಗತ ರಾಕೇಶ್ ಅವರ ಸ್ಮರಣಾರ್ಥ ಆಯೋಜಿಸಿರುವ ಕಾರ್ ರೇಸ್ ಮುಂದಿನ ದಿನಗಳಲ್ಲು ಮುಂದುವರೆಯಲಿ ಎಂದು ಕುಚುಕು ಗೆಳೆಯನೊಂದಿಗೆ ಕಳೆದ ಅಂದಿನ ದಿನಗಳನ್ನು ಮೆಲುಕು ಹಾಕುದರು.

ಕಾರು ಪ್ರಿಯರಿಗೆ ಈ ರೇಸ್ ಭರಪೂರ ಮನರಂಜನೆ ನೀಡಲಿದೆ. ಕಾರ್ ರೇಸ್ ಅಪಾಯಕಾರಿ ಕ್ರೀಡೆಯಾಗಿದ್ದು, ಎಚ್ಚರದಿಂದ ವಾಹನ ಚಲಾಯಿಸಿ, ಸ್ಪರ್ಧೆಯಲ್ಲಿ ಗೆಲ್ಲುವಂತೆ ಭಾಗವಹಿಸಿದ್ದ ಕ್ರೀಡಾಪಟುಗಳಿಗೆ ಸಲಹೆ ನೀಡಿದರು.

ವಿವಿಧ ಜಿಲ್ಲೆಗಳಿಂದ ನಾನಾ ಬಗೆಯ ಕಾರುಗಳು ರೇಸ್ ನಲ್ಲಿ ಭಾಗವಹಿಸಿದ್ದವು. ಕಿವಿ ಗುಂಯ್ ಗುಟ್ಟುವ ಭಾರಿ ಶಬ್ದದೊಂದಿಗೆ ಗೆಲುವಿಗಾಗಿ ಶರವೇಗದಲ್ಲಿ ಸವಾರರು ತಮ್ಮ ಕಾರುಗಳನ್ನ ಚಲಾಯಿಸುತ್ತಿದ್ದ ದೃಶ್ಯ ನೋಡುಗರನ್ನು ಮೈ ಜುಮ್ ಅನ್ನುವಂತೆ ಮಾಡುತ್ತದೆ ಎಂದರು.

ಈ ಕಾರ್ಯಕ್ರಮವನ್ನು ಅರ್ಕೇಶ್ವರ ಮತ್ತು ಆ ಸ್ನೇಹಿತರ ತಂಡ ಆಯೋಜನೆ ಮಾಡಲಾಯಿತು.

ಸಮಾರಂಭದಲ್ಲಿ ಶ್ರೀಕಂಠೇಶ್ವರ ಸ್ವಾಮಿಯ ಧರ್ಮದರ್ಶಿ ಮಾಜಿ ಅಧ್ಯಕ್ಷ ಇಂಧನ ಬಾಬು, ರೈತ ಸಂಘದ ರಾಜ್ಯ ಕಾರ್ಯಧ್ಯಕ್ಷ ವಿದ್ಯಾಸಾಗರ್, ರಾಜು, ಅರ್ಕೇಶ್, ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಘು, ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

Continue Reading

Uncategorized

ಫೆ.11ರಂದು ನಾಪೋಕ್ಲುವಿನಲ್ಲಿ ಮಸ್ಜಿದು ತೌಹೀದ್ ನೂತನ ಮಸೀದಿ ಉದ್ಘಾಟನೆ ಹಾಗೂ ದಅವಾ ಸಮ್ಮೇಳನ

Published

on

ವರದಿ :ಝಕರಿಯ ನಾಪೋಕ್ಲು

ನಾಪೋಕ್ಲು : ಫೆ.11ರಂದು ನಾಪೋಕ್ಲುವಿನ ಬೇತು ರಸ್ತೆಯಲ್ಲಿ ಅಲ್ ನೂರ್ ವೆಲ್ಫೇರ್ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ಮಸ್ಜಿದು ತೌಹೀದ್ ನೂತನ ಮಸೀದಿ ಉದ್ಘಾಟನಾ ಸಮಾರಂಭ ಹಾಗೂ ದಅವಾ ಸಮ್ಮೇಳನ ನಡೆಯಲಿದೆ.

ಫೆ.11ರಂದು ಸಂಜೆ 4ಗಂಟೆಗೆ ನೂತನ ಮಸೀದಿಯ ಉದ್ಘಾಟನೆ ನಡೆಯಲಿದ್ದು ವಿಸ್ಡಮ್ ಇಸ್ಲಾಮಿಕ್ ಆರ್ಗನೈಸೇಷನ್ ಅಧ್ಯಕ್ಷರಾದ ಪಿ.ಎನ್.ಅಬ್ದುಲ್ ಅತೀಫ್ ಮದನಿ ಅವರು ನೂತನ ಮಸೀದಿಯನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ, ಕರ್ನಾಟಕ ಸಲಫಿ

ಅಸೋಸಿಯೇಷನ್ ಅಧ್ಯಕ್ಷ ಹಫೀಸ್ ಸ್ವಲಾಹಿ,ಖಲೀಲ್ ತಲಪ್ಪಾಡಿ,ಶಿಹಾಬ್ ತಲಪ್ಪಾಡಿ,ಡಾ.ಸಣ್ಣುವಂಡ ಕಾವೇರಪ್ಪ ನಾಪೋಕ್ಲು, ನಾಪೋಕ್ಲು ಪೊಲೀಸ್ ಉಪನಿರೀಕ್ಷಕರಾದ ಪಿ.ಜಿ. ರಾಘವೇಂದ್ರ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಪಿ.ಎಂ. ಖಾಸಿಂ,ನಾಪೋಕ್ಲು ಗ್ರಾಮ ಪಂಚಾಯತಿ ಸದಸ್ಯರಾದ ಕುಶು ಕುಶಾಲಪ್ಪ, ಮಹಮ್ಮದ್ ಖುರಶಿ, ಅರುಣ್ ಬೇಬ,ಇಸ್ಮಾಯಿಲ್ ಭಾಗವಹಿಸಲಿದ್ದಾರೆ.
ಮಸೀದಿ ಉದ್ಘಾಟನಾ ಸಮಾರಂಭದ ಪ್ರಯುಕ್ತ ಸಂಜೆ 7 ಗಂಟೆಯಿಂದ ಮೌಲವಿ ಶಿಹಾಬ್ ಎಡಕ್ಕರ ಹಾಗೂ ಮುನೀರ್ ಶರಫಿ ಅವರ ನೇತೃತ್ವದಲ್ಲಿ ದಅವಾ ಸಮ್ಮೇಳನ ನಡೆಯಲಿದೆ ಎಂದು ಮಸ್ಜಿದು ತೌಹೀದ್ ನಾಪೋಕ್ಲು ಇದರ ಆಡಳಿತ ಮಂಡಳಿ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

Chikmagalur

ವಿವಾಹಿತ ಹಿಂದೂ ಮಹಿಳೆಯ ಜೊತೆ : ಸಿಕ್ಕಿ ಬಿದ್ದ ಕಾಂಗ್ರೆಸ್‌ ಮುಖಂಡ

Published

on

ಚಿಕ್ಕಮಗಳೂರು : ವಿವಾಹಿತ ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್‌ ಮುಖಂಡ ಸಿಕ್ಕಿ ಬಿದ್ದಿರುವ ಘಟನೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾತ್ರಿ ವೇಳೆ ಮಹಿಳೆಯಲ್ಲಿ ಕಾಂಗ್ರೆಸ್ ಮುಖಂಡ ರಾಹಿಲ್ ಶರೀಫ್ ಹಿಂದೂ ಮಹಿಳೆ ಇರುವುದನ್ನು ಕಂಡು ಯುವಕರು ಕೋಪಗೊಂಡಿದ್ದಾರೆ.

ಘಟನೆ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್‌ ಮುಖಂಡ ಮನೆಯಲ್ಲಿ ಇದ್ದ ವೇಳೆಯಲ್ಲಿ ಮನೆ ಮೇಲೆ ದಾಳಿ ನಡೆಸಿದ ಅಕ್ಕಪಕ್ಕದ ಹುಡುಗರು ಹಿಂದೂ ಮಹಿಳೆಯ ಮನೆಯಲ್ಲಿ ನಿನಗೇನು ಕೆಲಸ ಅಂತ ಹೇಳಿ ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದಾರೆ. ಈ ಘಟನೆಯು ಚಿಕ್ಕಮಗಳೂರಿನ ಚಿಕ್ಕಮಗಳೂರು ನಗರದ ಗಾಂಧಿನಗರದಲ್ಲಿ ನಡೆದಿದೆ.

ಇನ್ನೂ ಘಟನೆ ಬಗ್ಗೆ ವಿಡಿಯೋ ಮಾಡಿ ಮಾಹಿತಿ ಹಂಚಿಕೊಂಡಿರುವ ನೊಂದ ಮಹಿಳೆ ರಾಹಿಲ್ ನನ್ನ ಸ್ನೇಹಿತ, ನನಗೆ ಆರೋಗ್ಯ ಸರಿಯಿಲ್ಲದ ಕಾರಣ ಔಷಧಿ ಕೊಡಲು ಮನೆಗೆ ಬಂದಿದ್ದರು. ಈ ವೇಳೆ ಅಕ್ಕ ಪಕ್ಕದ ಮನೆಯವರು ನನ್ನ ಮನೆಗೆ ಬಂದು ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ. ಅಂತ ಆರೋಪಿಸಿದ್ದಾರೆ. ಸದ್ಯ ಘಟನೆ ಬಗ್ಗೆ ದೂರು ದಾಖಲಿಸಿಕೊಂಡಿರುವ ಚಿಕ್ಕಮಗಳೂರು ನಗರ ಪೊಲೀಸ್‌ನವರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

Trending

error: Content is protected !!