Connect with us

Chikmagalur

ಹುಯಿಗೆರೆಯಲ್ಲಿ ಶಂಕರ ಭಾರತಿ ಗೋಸೇವಾ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ

Published

on

ಬಾಳೆಹೊನ್ನೂರು: ಸಿಎಂ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಲ್ಪ ಸಂಖ್ಯಾತರ ತುಷ್ಟೀಕರಣದ ಪಕ್ಷವಾಗಿದೆ ಇವರ ಆಡಳಿತದಲ್ಲಿ ರಾಜ್ಯಾದ್ಯಂತ ಅವ್ಯಾಹತವಾಗಿ ಗೋ ಸಾಗಾಣಿಕೆ, ಹತ್ಯೆ, ಹಿಂದೂಗಳ ಮೇಲೆ ದೌರ್ಜನ್ಯ, ಲವ್ ಜಿಹಾದ್ ನಿರಂತರವಾಗಿ ಮುಂದುವರೆಯುತ್ತಿರುವುದು ಆತಂಕ ಸೃಷ್ಠಿಸಿದೆ ಎಂದು ವಿಶ್ವ ಹಿಂದೂ ಪರಿಷತ್ ರಾಷ್ಟ್ರೀಯ ಸಹ ಕಾರ್ಯದರ್ಶಿ ಗೋಪಾಲ್ ಜಿ ತಿಳಿಸಿದರು .

ಅವರು ಬಾಳೆಹೊನ್ನುರು ಸಮೀಪದ ಹುಯಿಗೆರೆಯಲ್ಲಿರುವ ಶಂಕರ ಭಾರತಿ ಗೋಸೇವಾ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ & ಹಸು, ಕರುವನ್ನು ಪೂಜಿಸಿ ಬಿಡುವ ಮೂಲಕ ಉದ್ಘಾಟಿಸಲಾಯಿತು.

ಸತತ 500 ವರ್ಷಗಳ ಸಂಘರ್ಷದ ಬಳಿಕ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಗೊಂಡಿರುವುದು ನಾವು ಹೆಮ್ಮೆಪಡುವ ವಿಚಾರವಾಗಿದೆ. 30 ಸಾವಿರಕ್ಕೂ ಹೆಚ್ಚು ಹಿಂದೂ ದೇವಸ್ಥಾನಗಳನ್ನು ಆಕ್ರಮಣಕಾರಿಗಳು ಧ್ವಂಸ ಮಾಡಿದ್ದು, ಅದರಲ್ಲಿ ಅಯೋಧ್ಯೆಯನ್ನು ವ್ಯಾಪಕ ಜನಾಂದೋಲನ, ಕಾನೂನಿನ ಮೂಲಕ ಕಡೆಗೂ ನಮ್ಮದಾಗಿಸಿಕೊಳ್ಳಲಾಗಿದೆ.

ವಿಶ್ವ ಹಿಂದೂ ಪರಿಷತ್ ಸಂಘಟನೆಯು ಮುಂದಿನ ದಿನಗಳಲ್ಲಿ ಕಾಶಿ, ಮಥುರಾ, ಅಯೋಧ್ಯೆಯ ಉಳಿವಿನ ಛಲದ ಹೋರಾಟಕ್ಕೆ ಹಂತಹಂತವಾಗಿ ಜಯ ಲಭಿಸುವ ಕಾಲ ಸನ್ನಿಹಿತವಾಗುತ್ತಿದ್ದು, ಮುಂದೆ ಐತಿಹಾಸಿಕ ಮಥುರೆ, ಕಾಶಿಯನ್ನು ನಮ್ಮದಾಗಿಸಿಕೊಳ್ಳುವ ನಿಟ್ಟಿನಲ್ಲಿ ಹೋರಾಟ ಚುರುಕು ಗತಿಯಲ್ಲಿ ಸಾಗಲಿದೆ.

ಮಲೆನಾಡಿನ ಗ್ರಾಮೀಣ ಪ್ರದೇಶಗಳಲ್ಲಿ ಗೋಶಾಲೆಗಳು ಹೆಚ್ಚಿನ ಪ್ರಮಾಣದಲ್ಲಿ ನಿರ್ಮಾಣಗೊಳ್ಳುವ ಮೂಲಕ ಗೋ ಸಂರಕ್ಷಣೆಯ ಆಂದೋಲನದಲ್ಲಿ ಹೊಸ ಆತ್ಮ ವಿಶ್ವಾಸ, ಚೈತನ್ಯವನ್ನು ಹೆಚ್ಚಿಸಿದೆ. ಪ್ರವೀಣ್ ಖಾಂಡ್ಯ ಮತ್ತು ತಂಡ ನಿರ್ವಹಣೆ ಮಾಡುತ್ತಿರುವ ಈ ಗೋ ಸೇವಾ ಕೈಂಕರ್ಯಕ್ಕೆ ಶೃಂಗೇರಿ ಶಾರದಾ ಪೀಠದ ಅನುಗ್ರಹ, ಸಹಕಾರ ದೊರೆತಿದ್ದು, ಅನೇಕ ಕಾರ್ಯಕರ್ತರು ಈ ಸೇವೆಯಲ್ಲಿ ತೊಡಗಿಕೊಂಡಿರುವುದು ಹೆಮ್ಮೆಯ ವಿಚಾರವಾಗಿದೆ.

ಸಾಕಲು ಅಸಹಾಯಕರಾದ ರೈತರು, ಕಸಾಯಿಖಾನೆಗೆ ಸಾಗಿಸುತ್ತಿದ್ದಾಗ ಹಿಡಿದು ರಕ್ಷಿಸಿದ ಗೋವುಗಳಿಗೆ ಆಶ್ರಯ ನೀಡಿ ಪುನರ್ಜನ್ಮ ಕಲ್ಪಿಸುವಲ್ಲಿ ಗೋ ಸೇವಾ ಕೇಂದ್ರಗಳು ಸಹಕಾರಿಯಾಗಿದೆ. ಸಮಾಜ, ಮಠ, ಮಾನ್ಯಗಳ ಬೆಂಬಲ ಸಿಗದೆ ಇದ್ದಲ್ಲಿ ಇವುಗಳು ಉಳಿಯಲಾರವು. ಪ್ರತಿಯೊಬ್ಬರೂ ಆರ್ಥಿಕ ನೆರವು, ಆಹಾರ, ಮೇವಿನ ರೂಪದಲ್ಲಿ ಧರ್ಮಾಭಿಮಾನಿಗಳು ಗೋಗ್ರಾಸದ ರೂಪದಲ್ಲಿ ದಾನ ನೀಡಬೇಕು ಎಂದರು.

ಆಳುವ ಕಾಂಗ್ರೆಸ್ ಸರಕಾರವು ಮತಾಂಧತೆಗೆ ಬೆಂಬಲ ನೀಡುತ್ತಿದ್ದು, ಹಿಂದೂ ಸಮಾಜ ಅದನ್ನು ದಿಟ್ಟ ಹೋರಾಟದ ಮೂಲಕ ಎದುರಿಸಬೇಕಾಗಿದೆ. ದತ್ತಪೀಠದ ವಿವಾದದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಉಚ್ಚ ನ್ಯಾಯಾಲಯದ ತೀರ್ಪಿನಂತೆ ರಾಮ ಮಂದಿರಕ್ಕೆ ಅಯೋಧ್ಯೆ ಮೀಸಲಿಟ್ಟು, ಮುಸ್ಲಿಮರಿಗೆ ಪ್ರತ್ಯೇಕ ಜಾಗ ನೀಡಿದ ಕ್ರಮವನ್ನೇ ದತ್ತಪೀಠಕ್ಕೂ ಅನ್ವಯಿಸುವಂತೆ ಮಾಡುವ ತೀರ್ಪು ಬಂದಾಗ ಸಮಸ್ಯೆ ಬಗೆಹರಿಯಬಲ್ಲದು ಎಂದರು.

ಇದರ ಅಂಗವಾಗಿ ರುದ್ರ, ಶತರುದ್ರ ಹೋಮ ಮುಂತಾದ ಧಾರ್ಮಿಕ ಕಾರ್ಯಗಳು ನಡೆದವು. ಬೆಂಗಳೂರಿನ ಐಎಎಸ್ ಅಧಿಕಾರಿ ವಿಶ್ವನಾಥ್ ಹಿರೇಮಠ್, ವಿಹಿಂಪ ಮುಖಂಡ ದಾವಣಗೆರೆಯ ಮುರಳಿ, ಶಂಕರ ಭಾರತಿ ಗೋಶಾಲೆ ಟ್ರಸ್ಟ್ ಅಧ್ಯಕ್ಷೆ ಶೃತಿ ಪ್ರವೀಣ್, ಉಪಾಧ್ಯಕ್ಷ ಮುರಳಿಧರ್, ಖಜಾಂಚಿ ಪ್ರವೀಣ್ ಖಾಂಡ್ಯ, ಸಾವಿತ್ರಮ್ಮ ಕೇಶವಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

ಕಿರಿಯ ಜಗದ್ಗುರುಗಳ ಆಪ್ತ ಸಹಾಕ ಕೃಷ್ಣಮೂರ್ತಿ ಮಾತನಾಡಿ, ಶ್ರೀ ಪೀಠದಿಂದ ಸಹಕಾರ ಧರ್ಮ, ಸಂಸ್ಕೃತಿ, ಪರಂಪರೆಗಳ ಉಳಿವಿಗಾಗಿ ಯಾವ ಸಂಘಟನೆ, ವ್ಯಕ್ತಿಗಳು ಮುಂದೆ ಬರುತ್ತಾರೋ ಅವರಿಗೆ ಶ್ರೀ ಪೀಠದ ಉಭಯ ಜಗದ್ಗುರುಗಳ ಅನುಗ್ರಹ ಹಾಗೂ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು

Continue Reading

Chikmagalur

ಕಾಡಾನೆಗಳಿಂದ ಶಾಶ್ವತ ಪರಿಹಾರಕ್ಕಾಗಿ ಒತ್ತಾಯಿಸಿ ವಿವಿಧ ಗ್ರಾಮಸ್ಥರಿಂದ ಪ್ರತಿಭಟನೆ

Published

on

ಮೂಡಿಗೆರೆ: ಕಾಡಾನೆಗಳಿಂದ ಶಾಶ್ವತ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ ಮಾಕೋನಹಳ್ಳಿ ಹಾಗೂ ನಂದೀಪುರ ಗ್ರಾ.ಪಂ. ವ್ಯಾಪ್ತಿಯ ಗ್ರಾಮಸ್ಥರು ಶನಿವಾರ ತಾಲೂಕಿನ ಮಾಕೋನಹಳ್ಳಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಇಲ್ಲಾ ಉಪಾಧ್ಯಕ್ಷ ಗಬ್ಬಳ್ಳಿ ಚಂದ್ರೇಗೌಡ ಮಾತನಾಡಿ, ಈ ಹಿಂದೆ ಕಾಡಾನೆಗಳು ಬಂದು ಹೋಗುತ್ತಿತ್ತು. ಆದರೆ ಈಗ ಇಲ್ಲಿಯೇ ನೆಲೆಸಿಬಿಟ್ಟಿದೆ. ತೋಟದಲ್ಲಿ ಬೆಳೆದ ಬೆಳೆ ಸಂಪೂರ್ಣ ನಾಶಪಡಿಸುತ್ತಿವೆ. ನಮಗೆ ಬೆಳೆ ಪರಿಹಾರಕ್ಕಿಂತ ಜೀವ ಉಳಿಸಿಕೊಂಡರೆ ಸಾಕೆಂಬ ಸ್ಥಿತಿಗೆ ಬಂದಿದ್ದೇವೆ. ಯಾವ ಸಮಯದಲ್ಲಾದರು ಪ್ರಾಣ ಹಾನಿಯಾಗುವ ಸಂಭವವಿದೆ. ಆದರೂ ಇಲ್ಲಿನ ಸಮಸ್ಯೆ ಬಗ್ಗೆ ಸ್ಥಳೀಯ ಶಾಸಕರು ಹಾಗೂ ಉಪಸಭಾಪತಿಗಳು ತಲೆಕೆಡಿಸಿಕೊಂಡಿಲ್ಲ. ಇನ್ನು ಅರಣ್ಯ ಸಚಿವರು ಕಳೆದೇ ಹೋಗಿದ್ದಾರೆ. ನಮ್ಮ ಸಮಸ್ಯೆ ಕೇಳುವವರೇ ಇಲ್ಲದಂತಾಗಿದೆ. ಕಾಡು ಪ್ರಾಣಿಗಳಿಂದ ರಕ್ಷಣೆ ಕೊಡದ ಅರಣ್ಯ ಇಲಾಖೆ ನಮಗೆ ಅಗತ್ಯವಿಲ್ಲ. ಇನ್ನು ೨ ದಿನದಲ್ಲಿ ಕಾಡಾನೆಗಳನ್ನು ಸ್ಥಳಾಂತರಿಸಬೇಕು. ಇಲ್ಲವಾದರೆ ಅರಣ್ಯ ಇಲಾಖೆಗೆ ಗೆರಾವ್ ಹಾಕಲಾಗುವುದು. ನಂತರ ಶಾಸಕರ ಮನೆ ಮುಂದೆ ಅನಿರ್ಧಿಷ್ಟಾವದಿ ದರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ರೈತ ಮುಖಂಡ ಎಸ್.ಪಿ.ರಾಜು ಮಾತನಾಡಿ, ಮಾಕೋನಹಳ್ಳಿ ಹಾಗೂ ನಂದೀಪುರ ಗ್ರಾ.ಪಂ. ವ್ಯಾಪ್ತಿಯ ಅನೇಕ ಗ್ರಾಮಗಳಲ್ಲಿ ಭುವನೇಶ್ವರಿ ಮತ್ತು ಕೆಪಿ ಕಾಲರ್ ತಂಡದ ಸುಮಾರು ೪೨ಕ್ಕೂ ಅಧಿಕ ಕಾಡಾನೆಗಳು ಕಳೆದ ೧೫ ದಿನದಿಂದ ಇಲ್ಲಿಯೇ ಬೀಡು ಬಿಟ್ಟಿವೆ. ಅವುಗಳು ಕಾಫಿ ತೋಟ ಹಾಳು ಮಾಡುವ ಜತೆಗೆ ಮನೆಗಳ ಸಮೀಪ ಬರುತ್ತಿವೆ. ಮನೆಯಲ್ಲಿ ಮಕ್ಕಳನ್ನು ಬಿಟ್ಟು ಹೋಗದ ಸ್ಥಿತಿ ಉಂಟಾಗಿದೆ. ತೋಟದಲ್ಲಾಗಿರುವ ಹಾನಿ ವೀಕ್ಷಿಸಲು ರೈತರು ತೋಟಕ್ಕೆ ಹೋಗಲು ಭಯಪಡುವಂತಾಗಿದೆ. ಅಲ್ಲದೇ ಕೂಲಿ ಕಾರ್ಮಿಕರು ಕೂಲಿ ಕೆಲಸಕ್ಕೆ ತೆರಳಲು ಸಾಧ್ಯವಾಗದೇ ಕುಟುಂಬ ನಿರ್ವಹಣೆಗೆ ಕಷ್ಟಪಡಬೇಕಾಗಿದೆ. ರಾತ್ರಿ ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿಲ್ಲ. ಜೀವ ಉಳಿಸಿಕೊಳ್ಳುವುದೇ ಕಷ್ಟವಾಗಿದೆ. ಕಾಡಾನೆಗಳನ್ನು ಕೂಡಲೇ ಸ್ಥಳಾಂತರಿಸುವ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಉತ್ತರಿಸಬೇಕೆಂದು ಒತ್ತಾಯಿಸಿದರು.
ನಂತರ ಎಸಿಎಫ್ ಮೋಹನ್ ಹಾಗೂ ಆರ್‌ಎಫ್‌ಒ ಕಾವ್ಯ ಸ್ಥಳಕ್ಕೆ ಆಗಮಿಸಿ, ಈಗಾಗಲೇ ೧೫ ಕಾಡಾನೆಗಳು ಕಾಡಿಗೆ ವಾಪಾಸು ತೆರಳಿವೆ. ಭುವನೇಶ್ವರಿ ಹಾಗೂ ಕೆ.ಪಿ.ಕಾಲರ್ ತಂಡದ ಸುಮಾರು ೨೦ ಕಾಡಾನೆಗಳು ಕೆಲ್ಲೂರು ಮತ್ತು ಬಾರದಹಳ್ಳಿ ಗ್ರಾಮದಲ್ಲಿವೆ. ಅವುಗಳನ್ನು ಏಕ ರೀತಿಯಲ್ಲಿ ಓಡಿಸಿದರೆ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಹಾಗಾಗಿ ಅವುಗಳ ಸ್ವಾಭಾವಿಕ ಸಂಚಾರಕ್ಕೆ ಅನುವು ಮಾಡಿ, ಹತ್ತಿರದ ಕಾಡಿಗೆ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿದರು.

ಮಾಕೋನಹಳ್ಳಿ ಗ್ರಾ.ಪಂ. ಅಧ್ಯಕ್ಷೆ ಮಂಜುಳ, ಸದಸ್ಯ ಪುಟ್ಟರಾಜು, ಕೆಂಪೇಗೌಡ ಒಕ್ಕಲಿಗರ ಸಂಘದ ಅಧ್ಯಕ್ಷ ಬ್ರಿಜೇಶ್, ಗ್ರಾಮಸ್ಥರಾದ ಲಕ್ಷ್ಮಣ್‌ಗೌಡ ಗೌತಳ್ಳಿ, ವೀರೇಶ್ ಮಾಕೋನಹಳ್ಳಿ, ವಿಕ್ರಮ್, ಪ್ರಹ್ಲಾಧ್, ಅನಿಲ್ ಬಾರದಹಳ್ಳಿ, ಬಿ.ಎ.ಇಂದ್ರೇಶ್, ಸತ್ಯ ತುದಿಯಾಲ, ಶಶಿಕಿರಣ್ ಮತ್ತಿತರರಿದ್ದರು.

Continue Reading

Chikmagalur

ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತ ಸರ್ಕಾರಿ ಬಸ್‌ ಡ್ರೈವರ್‌ ಆತ್ಮ*ಹತ್ಯೆಗೆ ಶರಣು

Published

on

ಚಿಕ್ಕಮಗಳೂರು: ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಸರ್ಕಾರಿ ಬಸ್‌ ಚಾಲಕನೋರ್ವ ವಿಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿರುವ ಘಟನೆ ಕಡೂರು ಡಿಪೋದಲ್ಲಿ ನಡೆದಿದೆ.

ಚಂದ್ರು, ವಿಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕೆ.ಎಸ್.ಆ‌ರ್.ಟಿ.ಸಿ. ಚಾಲಕ. ರಜೆ ವಿಚಾರವಾಗಿ ಮೇಲಾಧಿಕಾರಿ ಪುಟ್ಟಸ್ವಾಮಿ ನೀಡುತ್ತಿರುವ ನೀಡುತ್ತಿರುವ ಕಿರುಕುಳಕ್ಕೆ ಬೇಸತ್ತು ಕಡೂರು ಡಿಪೋದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಆತ್ಮಹತ್ಯೆಗೆ ಯತ್ನಿಸಿದ ಚಾಲಕ ಚಂದ್ರು ನನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚಾಲಕ ಬರೆದಿಟ್ಟ ಡೆತ್ ನೋಟಲ್ಲಿ ‘ಹುಷಾರಿಲ್ಲದೆ ಕೆಲಸಕ್ಕೆ ಬಾರದಿದ್ದಕ್ಕೆ ಹಾಜರಾತಿಯಲ್ಲಿ ಗೈರು ಹಾಕಿದ್ದಾರೆ, ನನ್ನ ಖಾತೆಯಲ್ಲಿ ಸಾಕಷ್ಟು ರಜೆ ಇದೆ, ಆದರೂ ಗೈರು ಹಾಕಿದ್ದಾರೆ, ಹಣ ಕೊಟ್ಟರೆ ಎಷ್ಟು ದಿನ ಬೇಕಾದ್ರು ರಜೆ ನೀಡುತ್ತಾರೆ. ಪುಟ್ಟಸ್ವಾಮಿಯಿಂದ ನೌಕರರ ಮೇಲಾಗುತ್ತಿರು ದೌರ್ಜನ್ಯ ಸರಿಪಡಿಸುವಂತೆ ಮನವಿ ಮಾಡಿದ್ದಾನೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ

Continue Reading

Chikmagalur

ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ: ಪೋಷಕರಿಗೆ 25 ಸಾವಿರ ರೂ ದಂಡ.

Published

on

ಚಿಕ್ಕಮಗಳೂರು : ಮೂಡಿಗೆರೆ ಪಟ್ಟಣದ ಬಾಪು ನಗರದಲ್ಲಿ ಅಪ್ರಾಪ್ತ ಬಾಲಕನೋರ್ವ ಸ್ಕೂಟಿ ಚಾಲನೆ ಮಾಡುತ್ತಿದ್ದಾಗ ಮೂಡಿಗೆರೆ ಪೊಲೀಸರು ದ್ವಿಚಕ್ರ KA18 EC2707 ಸಂಖ್ಯೆಯ ಸ್ಕೂಟಿಯನ್ನು ವಶಕ್ಕೆ ಪಡೆದು ದಂಡ ವಿಧಿಸಿದರು.

 

ಬಾಲಕನ ಪೋಷಕರಾದ ಮೊಹಮ್ಮದ್ ಸಿರಾಜ್ ಮೇಲೆ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಸಿ ಮೂಡಿಗೆರೆ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರು ತೀರ್ಪು ನೀಡಿತು.

Continue Reading

Trending

error: Content is protected !!