Mysore
ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ನಂಜನಗೂಡು: ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ರವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು.
ಶಾಸಕ ದರ್ಶನ್ ಧ್ರುವ ನಾರಾಯಣ್ ಸಭೆಯಲ್ಲಿ ಗೈರಾದ ಅಧಿಕಾರಿಗಳ ವಿರುದ್ಧ ತಾಲ್ಲೂಕು ಬಿಟ್ಟು ತೊಲಗಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರ ತವರು ಜಿಲ್ಲೆ ಎಂಬುವುದನ್ನು ತಾಲ್ಲೂಕು ಮಟ್ಟದ ಅಧಿಕಾರಿಗಳು ಮರೆಯಬಾರದು ಜಾಗೃತಿಯಿಂದ ಮತ್ತು ಪ್ರಾಮಾಣಿಕವಾಗಿ ಜನರ ಸೇವೆ ಮಾಡುವುದಕ್ಕೆ ಆಗುವುದಿಲ್ಲ ಕಳ್ಳಾಟ ಹಾಡಿ ದಿನದೊಡುತ್ತೇವೆ ಸಂಬಳ ಪಡೆಯುತ್ತೇವೆ ಎಂಬ ಮನಸ್ಥಿತಿ ಇರುವ ಅಧಿಕಾರಿಗಳೇ ನೀವಾಗಿ ನೀವೇ ತಾಲ್ಲೂಕು ಬಿಟ್ಟು ತೊಲಗಿ ಎಂದು ಖಡಕ್ಕಾಗಿ ಶಾಸಕ ದರ್ಶನ್ ಧ್ರುವನಾರಾಯಣ್ ಎಚ್ಚರಿಸಿದರು.
ನಂಜನಗೂಡು ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಶಾಸಕ ದರ್ಶನ್ ಧ್ರುವನಾರಾಯಣ್ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸಭೆಯಲ್ಲಿ ಬೆರಳೆಣಿಕೆಯಷ್ಟು ಮಾತ್ರ ಅಧಿಕಾರಿಗಳು ಹಾಜರಾಗಿದ್ದರು. ಕೆಲವೇ ಕೆಲವು ಅಧಿಕಾರಿಗಳು ಮಾತ್ರ ಹಾಜರಿದ್ದರು. ಸಂಘ ಸಂಸ್ಥೆಗಳ ಮುಖಂಡರು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಹೆಚ್ಚಿನ ರೀತಿಯಲ್ಲಿ ಹಾಜರಿದ್ದರು. ಇದನ್ನು ಗಮನಿಸಿದ ಶಾಸಕ ದರ್ಶನ್ ಧ್ರುವ ನಾರಾಯಣ್ ಗೈರಾದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇದೇ ತಿಂಗಳ 15ರಂದು ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮವನ್ನು ಅದ್ದೂರಿ ಮತ್ತು ಸಡಗರ ಸಂಭ್ರಮದಿಂದ ಆಚರಿಸಲು ತಾಲ್ಲೂಕು ಆಡಳಿತ ಮುಂದಾಗಿದೆ. ಪ್ರತಿ ವರ್ಷದಂತೆ ನಡೆಯುವ ಕಾರ್ಯಕ್ರಮದಂತೆ ಎಲ್ಲಾ ರೀತಿಯ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಅತಿ ಹೆಚ್ಚು ಶಿಕ್ಷಣ ಇಲಾಖೆಗೆ ಜವಾಬ್ದಾರಿ ನೀಡಲಾಗಿದೆ. ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಜೆ 4 ಗಂಟೆಗೆ ನಂಜನಗೂಡಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಧ್ವಜಾರೋಹಣ ಕಾರ್ಯಕ್ರಮ, ವಿದ್ಯಾರ್ಥಿಗಳು ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳ ಪಥಸಂಚಲನ ಹಾಗೂ ವಿವಿಧ ಬಗೆಯ ಜಾಗೃತಿ ಸಂದೇಶಗಳನ್ನು ತಿಳಿಸುವ ಕಾರ್ಯಕ್ರಮಗಳನ್ನು ಕೂಡ ಮಾಡಲು ತಯಾರಿ ನಡೆಸಲಾಗಿದೆ. ಇಂತಹ ಪ್ರಮುಖ ಕಾರ್ಯಕ್ರಮಕ್ಕೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಈ ಪೂರ್ವಭಾವಿ ಸಭೆಗೆ ಗೈರು ಹಾಜರಾಗಿರುವ ಅಧಿಕಾರಿಗಳ ವಿರುದ್ಧ ಕೂಡಲೇ ಶಿಸ್ತು ಕ್ರಮ ಕೈಗೊಳ್ಳುತ್ತೇವೆ. ಕಾರ್ಯಕ್ರಮದಲ್ಲಿ ಗೈರಾಗಿರುವ ಅಧಿಕಾರಿಗಳ ಪಟ್ಟಿ ಮಾಡಿ, ಅವರಿಗೆ ನೋಟಿಸ್ ನೀಡಿ, ಬೇಜವಾಬ್ದಾರಿಯಿಂದ ಕೆಲಸ ಮಾಡುವ ಅಧಿಕಾರಿಗಳು ಕ್ಷೇತ್ರ ಬಿಟ್ಟು ತೊಲಗಲಿ, ಇಲ್ಲವಾದಲ್ಲಿ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಸಸ್ಪೆಂಡ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ಸಿಡಿಪಿಒ ಭವ್ಯ ಶ್ರೀ, ನಗರಸಭಾ ಆಯುಕ್ತ ನಂಜುಂಡಸ್ವಾಮಿ ಪಿಎಸ್ಐ ಪ್ರಕಾಶ್ ಸಿದ್ದಪ್ಪ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
ನಂಜನಗೂಡು ಮಹದೇವಸ್ವಾಮಿ ಪಟೇಲ್.
Mysore
ಡಿಕೆಶಿ, ಮಲ್ಲಿಕಾರ್ಜುನ ಖರ್ಗೆ ಇಬ್ಬರಲ್ಲಿ ಒಬ್ಬರು ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್

ಮೈಸೂರು: ಈ ವರ್ಷದ ನವೆಂಬರ್ಗೆ ಸಿಎಂ ಬದಲಾವಣೆ ಆಗುತ್ತದೆ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಬ್ಬರಲ್ಲಿ ಒಬ್ಬರು ಮುಖ್ಯಮಂತ್ರಿ ಆಗುತ್ತಾರೆ ಎಂದು ಎಂಎಲ್ಸಿ ಎಚ್.ವಿಶ್ವನಾಥ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹತ್ತು ವರ್ಷದ ಹಿಂದೆಯೇ ಜಾತಿವಾರು ಜನಗಣತಿ ಮಾಡಿಸಿದ್ದರು. ಒಂದುವರೆ ಲಕ್ಷ ಶಿಕ್ಷಕರು 2 ವರ್ಷ ಗಣತಿ ಮಾಡಿದ್ದರು. ಅದಕ್ಕಾಗಿ 170 ಕೋಟಿ ರೂ. ಅಧಿಕ ಹಣ ಖರ್ಚಾಗಿತ್ತು. ಆಗಿನ ಕಾಲದಿಂದಲೂ ವರದಿ ಬಹಿರಂಗ ಮಾಡದೇ ಹಾಗೆಯೇ ಇಟ್ಟುಕೊಂಡಿದ್ದರು. ಇದೀಗ ಹೈಕಮಾಂಡ್ಗೆ ಹೆದರಿಕೊಂಡು ಮತ್ತೆ ಜಾತಿಗಣತಿ ಮಾಡಿರುವುದಾಗಿ ಹೇಳಿದ್ದಾರೆ. ಇದು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.
ಜಾತಿಗಣತಿ ಮಾಡಲು ಶಿಕ್ಷಕರು ಬೇಕು. ಈಗ ತಾನೇ ಶಾಲೆಗಳು ಪ್ರಾರಂಭವಾಗಿರುವುದರಿಂದ ಶಿಕ್ಷಕರು ಲಭ್ಯವಾಗೋದಿಲ್ಲ. ಸಿದ್ದರಾಮಯ್ಯ ಹಾವಾಡಿಗನ ರೀತಿ ಈಗ ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳುತ್ತಿದ್ದಾರೆ. ಮುಂದಿನ ನವೆಂಬರ್ ಮತ್ತು ಡಿಸೆಂಬರ್ಗೆ ಸಿಎಂ ಹುದ್ದೆಯಿಂದ ಸಿದ್ದರಾಮಯ್ಯ ಆಗುತ್ತಾರೆ. ಅದು ಹೇಗೆ ಜಾತಿಗಣತಿ ಮಾಡಿಸುತ್ತೀರಿ? ಮರುಜಾತಿಗಣತಿ ಮಾಡಿಸುವುದಿಲ್ಲವೆಂದು ಹೈಕಮಾಂಡ್ಗೆ ಹೇಳಿದ್ದರೇ ಸಿದ್ದರಾಮಯ್ಯ ಹೀರೋ ಆಗುತ್ತಿದ್ದರು. ಸಿದ್ದರಾಮಯ್ಯ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದರು. ಮೂರು ತಿಂಗಳೊಳಗೆ ಜಾತಿಗಣತಿ ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಸುಮ್ಮನೇ ದೇವರಾಜ ಹೆಸರು ಹೇಳಬೇಡಿ. ಪ್ರಾಮಾಣಿಕತೆ ಇಲ್ಲದ ಸಿಎಂ ಸಿದ್ದರಾಮಯ್ಯ ಎಂದು ಚರಿತ್ರೆಯಲ್ಲಿ ದಾಖಲಾಗಿ ಹೋದರು. ಸುಳ್ಳು ಹೇಳಿಕೊಂಡು ಓಡಾಡುತ್ತಿರುವ ಸಿಎಂ ಸಿದ್ದರಾಮಯ್ಯ ಎಂದು ಚರಿತ್ರೆಯಲ್ಲಿ ದಾಖಲಾಗುತ್ತಾರೆ. 170 ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿ ಜಾತಿಗಣತಿ ಮಾಡಿಸಿದ ವರದಿಯನ್ನು ತಿಪ್ಪೆಗೆ ಎಸೆದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಆರ್ಸಿಬಿ ಸಂಭ್ರಮಾಚರಣೆ ವೇಳೆ ಡಿ.ಕೆ.ಶಿವಕುಮಾರ್ ಎಲ್ಲವನ್ನೂ ಕೆಡಿಸಿಬಿಟ್ಟರು
ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದುಕೊಂಡಿದ್ದೆ, ಆದರೆ ಆರ್ಸಿಬಿ ಸಂಭ್ರಮಾಚರಣೆ ವೇಳೆ ಡಿಕೆ ಶಿವಕುಮಾರ್ ಎಲ್ಲವನ್ನೂ ಕೆಡಿಸಿಬಿಟ್ಟರು. ಆರ್ಸಿಬಿಯಲ್ಲಿ ಕರ್ನಾಟಕದ ಆಟಗಾರರೇ ಇಲ್ಲ. ಆರ್ಸಿಬಿಗೂ ನಮ್ಮ ರಾಜ್ಯಕ್ಕೂ ಸಂಬಂಧವೇ ಇಲ್ಲ. ಕಾಲ್ತುಳಿತ ಘಟನೆ ಸಂಬಂಧ ಸಿಎಂ ಸಿದ್ದರಾಮಯ್ಯ ನೀಡಿದ ಹೇಳಿಕೆಗಳು ವೈರುಧ್ಯದಿಂದ ಕೂಡಿವೆ ಎಂದು ಕಿಡಿಕಾರಿದರು.
ಚಿನ್ನಸ್ವಾಮಿ ಸ್ಟೇಡಿಯಂ ಬಳಿ 3:30ಕ್ಕೆ ಕಾಲ್ತುಳಿತ ಆದರೂ ಸಂಜೆ 5:30 ಕ್ಕೆ ಗೊತ್ತಾಯಿತು. ವಿಧಾನಸೌಧ ಕಾರ್ಯಕ್ರಮಕ್ಕೂ, ಚಿನ್ನಸ್ವಾಮಿ ಕ್ರೀಡಾಂಗಣ ಕಾರ್ಯಕ್ರಮಕ್ಕೂ ಸಂಬಂಧವಿಲ್ಲ. ರಾಜ್ಯಪಾಲರನ್ನು ಆಹ್ವಾನಿಸಿರಲಿಲ್ಲ ಎಂದೆಲ್ಲ ಸಿದ್ದರಾಮಯ್ಯ ಹೇಳಿದ್ದರು. ಆ ಬಳಿಕ ರಾಜ್ಯಪಾಲರನ್ನು ಆಹ್ವಾನಿಸಿದ್ದು ನಾನೇ ಎಂದು ಹೇಳಿದ್ದಾರೆ. ಇವರ ತಪ್ಪು ಇಲ್ಲದಿದ್ದರೇ ಗೋವಿಂದರಾಜು ಅವರನ್ನು ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಏಕೆ ತೆಗೆದರು ಎಂದು ಹೇಳಬೇಕು? ಎಂದು ಎಚ್ ವಿಶ್ವನಾಥ್ ಆಗ್ರಹಿಸಿದರು.
Mysore
ಕಾವೇರಿ ಆರತಿ ಹಾಗೂ ಅಮ್ಯೂಸ್ಮೆಂಟ್ ಪಾರ್ಕಿ ನಿರ್ಮಾಣ ಖಂಡಿಸಿ ಪ್ರತಿಭಟನೆ.

ಮೈಸೂರು: ಕೆ,ಆರ್,ಎಸ್, ಅಣೆಕಟ್ಟೆಯ ಬಳಿ ಕಾವೇರಿ ಆರತಿ ಹಾಗೂ ಅಮ್ಯೂಸ್ಮೆಂಟ್ ಪಾರ್ಕಿಗಲ್ಲ ನಿರ್ಮಾಣ ಮಾಡುವುದನ್ನು ಖಂಡಿಸಿ ಕನ್ನಡ ವೇದಿಕೆ ವತಿಯಿಂದ ಪ್ರತಿಭಟನೆ ನೆಡೆಸಲಾಯಿತು.
ಇಲ್ಲಿನ ಹಳೆ ಜಿಲ್ಲಾಧಿಕಾರಿ ಕಚೇರಿಯ ಬಳಿ ಶನಿವಾರ ಜಮಾಗೊಂಡ ಪ್ರತಿಭಟನಕಾರರು, ಕೆ. ಆರ್.ಎಸ್. ಅಣೆಕಟ್ಟೆ ನಿರ್ಮಾಸಿರೋದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮೋಜು ಮಸ್ತಿ ಮಾಡೋದಕ್ಕೆ ಅಲ್ಲ. ರೈತಾಪಿ ವರ್ಗದವರು ಕೃಷಿ ಚಟುವಟಿಕೆಗಳು, ಹಾಗೂ ಮೈಸೂರು ಬೆಂಗಳೂರಿನ ಕುಡಿಯುವ ನೀರಿನ ಯೋಜನೆಗಾಗಿ ರಾಣಿ ಕೆಂಪ ನಂಜಮ್ಮಣಿ ಕೃಷ್ಣರಾಜಸಾಗರ ಮೀಸಲಾಗಿದೆ. ವಿನಹ ಮೋಜು ಮಸ್ತಿ ಮಾಡುವಂತಹ ಅಮ್ಯೂಸ್ಮೆಂಟ್ ಪಾರ್ಕಿಗಲ್ಲ, ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡ ವೇದಿಕೆ ಅಧ್ಯಕ್ಷ ಎಸ್ ಬಾಲಕೃಷ್ಣ ಮಾತನಾಡಿ, ಕರ್ನಾಟಕ ಮತ್ತು ತಮಿಳುನಾಡು ಜನರ ಜೀವ ನದಿ ಕಾವೇರಿ ಮೈಸೂರಿನ ಇತಿಹಾಸ ತಿಳಿಯದ ಸಚಿವರು ವಿಧಾನಸೌಧದ ಎಲ್ಲೋ ಒಂದು ಮೂಲೆಯಲ್ಲಿ ಕುಳಿತು ಮನಸ್ಸಿಗೆ ಬಂದಂತೆ ಹೇಳಿಕೆ ನೀಡುವುದು ಎಷ್ಟು ಸಮಂಜಸ. ಈಗಾಗಲೇ ಡಿ.ಸಿಎಂ. ಡಿ.ಕೆ.ಶಿವಕುಮಾರ ಅವರ ನಿರ್ಧಾರದಿಂದ ಆರ್.ಸಿ.ಬಿ ಕ್ರಿಕೆಟಿನ ವಿಜಯ್ಯೋತ್ಸವ ಆಚರಣೆಯಲ್ಲಿ ಕಾಲು ತುಳಿತಕ್ಕೆ 11 ಅಮಾಯಕ ಜನ ಬಲಿಯಾಗಿದ್ದಾರೆ. ಮೈಸೂರು ಮತ್ತು ಮಂಡ್ಯ ಭಾಗದ ಕೆಲವು ಶಾಸಕರು,ರೈತ ಹೋರಾಟಗಾರರು, ಕನ್ನಡ ಪರ ಹೋರಾಟಗಾರರು ಅಮ್ಯುಸ್ಮೆಂಟ್ ಪಾರ್ಕ್ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಆದರೆ ಸರ್ಕಾರದ ಮಂತ್ರಿಮಂಡಲದವರು ನಾವೇ ಕೆ.ಆರ್.ಎಸ್ ಅಣೆಕಟ್ಟು ಕಟ್ಟಿದ ರೀತಿಯಲ್ಲಿ ಮನ ಬಂದಂತೆ ಮಾತನಾಡುತ್ತಿದ್ದಾರೆ ಎಂದರು.
ಮಂಡ್ಯ ಮತ್ತು ಮೈಸೂರು ಜನತೆಯನ್ನು ಗಣನೆಗೆ ತೆಗೆದುಕೊಳ್ಳದೆ ತುಘುಲಕ್ ದರ್ಬಾರಿನಂತೆ ಸರ್ಕಾರ ದರ್ಬಾರು ಮಾಡುತ್ತಿದೆ ಯಾವೊಬ್ಬ ರೈತನಿಗಾಗಲಿ ಕಿಂಚಿತ್ತು ಗೌರವ ನೀಡುತ್ತಿಲ್ಲ. ಕೋಟ್ಯಾಂತರ ಜನರಿಗೆ ಆಶ್ರಯವಾಗಿರುವ ಕಾವೇರಿ ನೀರು ಇವರ ಮನೆ ಸ್ವತ್ತಂತೆ ಮಾತನಾಡುತ್ತಿದ್ದಾರೆ ಎಂದು ಹೇಳಿದರು.
ನೂರು ಕೋಟಿ ರೂ ವೆಚ್ಚ ಮಾಡಿ ಕಾವೇರಿ ಆರತಿ ಮಾಡುತ್ತಿವೆ ಅಂತ ಹೇಳುತ್ತಿದ್ದಾರೆ ಅದೇ ಹಣವನ್ನು ರೈತರ ನಿಧಿಗೆಂದು ಉಪಯೋಗಿಸಿದರೆ ಬೆಳೆ ನಷ್ಟವಾದಾಗ ಅಥವಾ ಯಾವುದಾದರೂ ಬಡ ರೈತ ತೀರಿಕೊಂಡರೆ ಪರಿಹಾರ ನೀಡಬಹುದು. ಇವೆಲ್ಲವನ್ನೂ ಲೆಕ್ಕಿಸದೆ ನಾವು ಕಾವೇರಿ ಆರತಿ ಮಾಡೇ ಮಾಡುತ್ತೇವೆ ಎಂದು ಪಟ್ಟು ಹಿಡಿತಿರುವುದು ರೈತರ ದಂಗೆ ಉಂಟು ಮಾಡುವುದಕ್ಕೆ ಎಡೆ ಮಾಡಿಕೊಡುತ್ತಿದೆ ಎಂದರು.
ನಾಲಾ ಬೀದಿ ರವಿ, ಬೋಗಾದಿ ಸಿದ್ದೇಗೌಡ, ಪ್ಯಾಲೇಸ್ ಬಾಬು, ಗುರು ಬಸಪ್ಪ, ಮಾದಪ್ಪ, ಗೋವಿಂದರಾಜು, ಕಾವೇರಮ್ಮ, ಹರೀಶ್, ಮಾಲಿನಿ, ಪ್ರೇಮ, ಪುಷ್ಪ, ಸುನಿಲ್, ಶಿವು ಗೌಡ, ಚಿನ್ನಪ್ಪ, ಸ್ವಾಮಿ ಗೈಡ್, ಎಲ್ಐಸಿ ಸಿದ್ದಪ್ಪ, ಸ್ವಾಮಿ ಹೊನಕೆರೆ, ಮೋದಿ, ರಮೇಶ್ ಮುಂತಾದವರಿದ್ದರು.
Mysore
ಜಯನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನೂತನ ವೇದಿಕೆ ಉದ್ಘಾಟಿಸಿದ ರೊಟೇರಿಯನ್ ವಿಕ್ರಂದತ್ತ

ಮೈಸೂರು : ರೋಟರಿ ಕ್ಲಬ್ ಆಫ್ ಮೈಸೂರು ಸೌತ್ ಈಸ್ಟ್ ವತಿಯಿಂದ ಜಯನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 3 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ವೇದಿಕೆಯನ್ನು ಡಿಸ್ಟ್ರಿಕ್ ಗವರ್ನರ್ ರೊಟೇರಿಯನ್ ವಿಕ್ರಂದತ್ತ ಉದ್ಘಾಟಿಸಿದರು.
ಶುಕ್ರವಾರ ಬೆಳಗ್ಗೆ ಶಾಲಾ ಆವರಣದಲ್ಲಿ ನಿರ್ಮಿಸಿರುವ ನೂತನ ವೇದಿಕೆಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿ, ರೋಟರಿ ಕ್ಲಬ್ ಆಫ್ ಮೈಸೂರು ಸೌತ್ ಈಸ್ಟ್ನಲ್ಲಿ ಇದುವರೆಗೂ ಅಧ್ಯಕ್ಷರಾಗಿದ್ದ ಎಲ್ಲರೂ ಉತ್ತಮ ಸಮಾಜಮುಖಿ ಕೆಲಸಗಳನ್ನು ಮಾಡಿ ಗಮನಸೆಳೆದಿದ್ದಾರೆ. ಅದೇ ರೀತಿ ರೊಟೇರಿಯನ್ ಕೆ.ಎ.ಗೋವರ್ಧನ್ ಯಾದವ್ ಅವರೂ ಸಹ ಜಯನಗರ ಸರ್ಕಾರಿ ಶಾಲೆಗೆ ಅಗತ್ಯವಾಗಿ ಬೇಕಾದ ವೇದಿಕೆಯನ್ನು 3 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿಕೊಟ್ಟಿರುವುದು ಶ್ಲಾಘನೀಯ.
ಈ ವೇದಿಕೆಯಲ್ಲಿ ಮಕ್ಕಳು ಯಾವುದೇ ಸಭೆ ಸಮಾರಂಭ, ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಬಹುದು. ಪಠ್ಯ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಮಕ್ಕಳ ಪ್ರತಿಭೆ ಅನಾವರಣವಾಗುತ್ತದೆ. ಮಕ್ಕಳ ಪ್ರತಿಭೆ ಅನಾವರಣಕ್ಕೆ ಈ ವೇದಿಕೆ ಸಹಾಯ ಮಾಡುತ್ತದೆ. ಇಂತಹ ಶಾಶ್ವತ ಉಪಯೋಗಿ ಕಾರ್ಯಕ್ರಮಗಳನ್ನು ನಮ್ಮ ಸಂಸ್ಥೆ ಮಾಡುತ್ತಿದೆ ಈ ಚಟುವಟಿಕೆ ಕಾರ್ಯದಲ್ಲಿ ಕೈ ಜೋಡಿಸಿದ ಎಲ್ಲರೂ ಅಭಿನಂದನಾರ್ಹರು ಎಂದರು.
ಕಳೆದ ಮಾರ್ಚ್ನಲ್ಲಿ ಇದೇ ವೇದಿಕೆ ಕಟ್ಟಡಕ್ಕೆ ನಾನೇ ಗುದ್ದಲಿಪೂಜೆ ನೆರವೇರಿಸಿದ್ದೆ ಮೂರು ತಿಂಗಳ ಬಳಿಕ ನಾನೇ ಇದನ್ನು ಉದ್ಘಾಟಿಸುತ್ತಿರುವುದು ಸಂತಸ ತಂದಿದೆ. ಮಕ್ಕಳು ತಾವು ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿದ್ದೇವೆ ಎಂಬ ಕೀಳರಿಮೆ ಬಿಟ್ಟು ಉತ್ತಮವಾಗಿ ಕಲಿತು ನಿಮ್ಮ ಶಾಲೆಗೆ ನಾಡಿಗೆ ಪೋಷಕರಿಗೆ ಗೌರವ ತರುವ ಕೆಲಸ ಮಾಡಬೇಕು ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ರಾಜ್ಯ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ. ಮಕ್ಕಳಿಗೆ ಬಿಸಿಯೂಟ, ಬಾಳೆಹಣ್ಣು, ಮೊಟ್ಟೆ, ಉಚಿತ ಸಮವಸ್ತ್ರ, ಉಚಿತ ಪುಸ್ತಕಗಳನ್ನು ನೀಡುವುದರ ಜತೆಗೆ ವಿದ್ಯಾರ್ಥಿ ವೇತನವನ್ನು ನೀಡುತ್ತದೆ. ಈ ರೀತಿ ಹಲವಾರು ಕಾರ್ಯಕ್ರಮಗಳು ಸರ್ಕಾರ ಒದಗಿಸುತ್ತಿದೆ. ಇದರ ಜತೆಗೆ ಸಂಘ ಸಂಸ್ಥೆಗಳು ಸಹ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಹಕರಿಸುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆಯ ಪದಾಧಿಕಾರಿಗಳನ್ನು ಶಾಲೆ ವತಿಯಿಂದ ಸನ್ಮಾನಿಸಲಾಯಿತು. ನಂತರ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಬಡೆಸಿಕೊಟ್ಟರು.
ಈ ಸಂದರ್ಭದಲ್ಲಿ ರೊಟೇರಿಯನ್ಗಳಾದ ಎಂ.ರಾಜೀವ್, ಎಂ.ಮೋಹನ್, ಕೆ.ಎ.ಗೋವರ್ಧನ್ ಯಾದವ್, ಆರ್.ರಮೇಶ್ರಾವ್, ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಸರಾದ ಡಾ.ಈ.ಸಿ.ನಿಂಗರಾಜ್ ಗೌಡ, ವೆಂಕಟೇಶ್, ನಾಗರಾಜ್, ರಾಕೇಶ್ ಭಟ್, ಮುರಳಿ, ರವೀಂದ್ರ ಸೇರಿದಂತೆ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.
-
Mandya22 hours ago
ನೇಣು ಬಿಗಿದ ಸ್ಥಿತಿಯಲ್ಲಿ ಪುರುಷ ಹಾಗೂ ಮಹಿಳೆಯ ಕೊಳೆತ ಶ*ವಗಳು ಪತ್ತೆ
-
State19 hours ago
ಹಾಸನ ಏರ್ಪೋರ್ಟ್ 2026ಕ್ಕೆ ಪೂರ್ಣ: ಚಿಕ್ಕಮಗಳೂರು-ಮಡಿಕೇರಿಯಲ್ಲಿ ಹೆಲಿಪೋರ್ಟ್ ನಿರ್ಮಾಣಕ್ಕೆ ವರದಿ ಸಿದ್ಧ
-
Kodagu24 hours ago
ಬಾಡಗ ಮಹಿಳಾ ಸಾಂಸ್ಕೃತಿಕ ಮಂಡಳಿಗೆ ಬೆಳ್ಳಿ ಹಬ್ಬದ ಸಂಭ್ರಮ
-
Mandya23 hours ago
ಜೂ. 26ಕ್ಕೆ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಜಾಗೃತಿ ಕಾರ್ಯಕ್ರಮ: ಡಾ. ಕುಮಾರ
-
Kodagu23 hours ago
ಗೃಹಲಕ್ಷ್ಮಿ ಯೋಜನೆ ಇ-ಕೆವೈಸಿ ಫೆಲ್ಯೂರ್: ಹತ್ತಿರದ ಸಿಡಿಪಿಓ ಕಚೇರಿ ತೆರಳಿ Status ಪರಿಶೀಲನೆ ಮಾಡಿಸಿ
-
Hassan22 hours ago
ಬೆಳೆ ವಿಮೆ ಪ್ರಚಾರದ ವಾಹನಗಳಿಗೆ ಡಿಸಿ ಸಿ. ಸತ್ಯಭಾಮ ಚಾಲನೆ
-
Hassan20 hours ago
ಕಾಣೆಯಾಗಿದ್ದ ಮಹಿಳೆ ಶವವಾಗಿ ಪತ್ತೆ
-
Mandya23 hours ago
ಗೌರವ ಡಾಕ್ಟರೇಟ್ ಸ್ವೀಕರಿಸಲು ಪ್ರೊ.ಜಯಪ್ರಕಾಶ್ ಗೌಡ ಅವರಿಗೆ ಅಧಿಕೃತ ಆಹ್ವಾನ