National
ಭಾರತ ಟಿ-20 ತಂಡ ಪ್ರಕಟ: ಶ್ರೇಯಸ್ ಅಯ್ಯರ್ಗೆ ನಾಯಕತ್ವ, ಸೂರ್ಯಕುಮಾರ್ ಔಟ್
National
ಅಯೋಧ್ಯೆ ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ: ರಾಜಕೀಯ ಮಾಡದಂತೆ ಸುಪ್ರೀಂ ಕೋರ್ಟ್ ಎಚ್ಚರಿಕೆ
ನವದೆಹಲಿ: ಅಯೋಧ್ಯೆಯ ರಾಮ ಮಂದಿರಕ್ಕೆ ಸಂಬಂಧಿಸಿದ ದೇಣಿಗೆ ಕಳ್ಳತನ ಆರೋಪದ ತನಿಖೆಯನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಿಬಿಐಗೆ ವಹಿಸಬೇಕೆಂದು ಸಲ್ಲಿಸಲಾದ ಅರ್ಜಿಗಳ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ರಾಜಕೀಯಗೊಳಿಸದಂತೆ ಎಚ್ಚರಿಕೆ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನ್ ಅವರ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು. ಉತ್ತರ ಪ್ರದೇಶ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸ್ಥಿತಿಗತಿ ವರದಿ ಸಲ್ಲಿಸಿದ್ದು, ಪ್ರಕರಣದಲ್ಲಿ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

ವರದಿಯನ್ನು ಪರಿಶೀಲಿಸಿದ ಪೀಠವು ತನಿಖೆಯ ಸ್ವರೂಪದ ಬಗ್ಗೆ ಪ್ರಶ್ನಿಸಿತು. ಆರೋಪಗಳ ಸತ್ಯಾಸತ್ಯತೆ ಪತ್ತೆಹಚ್ಚಲು ಎಸ್ಐಟಿ ತನಿಖೆ ನಡೆಸಲಾಗಿದ್ದು, ಪ್ರಸ್ತುತ ಪೊಲೀಸ್ ತನಿಖೆ ಮುಂದುವರಿದಿದೆ ಎಂದು ಮೆಹ್ತಾ ಹೇಳಿದರು.
ಸುಪ್ರೀಂ ಕೋರ್ಟ್ ಎಸ್ಐಟಿ ತನಿಖೆಯನ್ನು ಮುಂದುವರಿಸಬಹುದೆಂದು ಸೂಚಿಸಿ, ಅದನ್ನು ಹಿರಿಯ ಅಧಿಕಾರಿಗಳನ್ನು ಒಳಗೊಂಡಂತೆ ಪುನರ್ರಚಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಸ್ಥಿತಿಗತಿ ವರದಿಯನ್ನು ಸಂಪೂರ್ಣವಾಗಿ ಪರಿಶೀಲಿಸಲು ಕೆಲವು ದಿನಗಳ ಕಾಲಾವಕಾಶ ಬೇಕಿದ್ದು, ಮುಂದಿನ ವಿಚಾರಣೆಯನ್ನು ಜುಲೈ 27ರಂದು ನಡೆಸಲಾಗುವುದು ಎಂದು ಪೀಠ ತಿಳಿಸಿದೆ.
National
ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ
ನವದೆಹಲಿ,ಜು.: ಸಂಸತ್ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಲಿದೆ. ಆಗಸ್ಟ್ 13 ರವರೆಗೆ ಒಟ್ಟು 19 ದಿನಗಳ ಕಾಲ ನಡೆಯಲಿರುವ ಈ ಅಧಿವೇಶನದಲ್ಲಿ ಹಲವು ಪ್ರಮುಖ ಮಸೂದೆಗಳ ಮಂಡನೆಯಾಗಲಿದೆ.
ದೇಶದ ವಿವಿಧ ವಿಷಯಗಳ ಕುರಿತು ಆಡಳಿತಾರೂಢ ಎನ್ಡಿಎ ಮತ್ತು ವಿರೋಧ ಪಕ್ಷಗಳ ನಡುವೆ ಭಾರಿ ವಾಗ್ವಾದಗಳು ನಡೆಯುವ ಸಾಧ್ಯತೆಯಿದೆ. ಅಧಿವೇಶನ ಶುರುವಾಗುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಇಂದಿನಿಂದ ಆಗಸ್ಟ್ 13 ರವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ ಪರಿಶೀಲನೆಗಾಗಿ ಎಂಟು ಪ್ರಮುಖ ಮಸೂದೆಗಳನ್ನು ಪಟ್ಟಿ ಮಾಡಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರೆನ್ ರಿಜಿಜು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.
ಅಯೋಧ್ಯೆ ರಾಮಮಂದಿರದಲ್ಲಿನ ದೇಣಿಗೆ ಕಳ್ಳತನದ ಆರೋಪ, ನೀಟ್-ಯುಜಿ (NEET-UG) ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಎಥೆನಾಲ್ ಮಿಶ್ರಣಕ್ಕೆ ಸಂಬಂಧಿಸಿದ ವಿವಾದಗಳು ಅಧಿವೇಶನದ ಆರಂಭದಿಂದಲೇ ಪ್ರಮುಖವಾಗಿ ಚರ್ಚೆಯಾಗುವ ನಿರೀಕ್ಷೆಯಿದೆ.
ಚರ್ಚೆಗೆ ನಿಗದಿಯಾಗಿರುವ ಪ್ರಮುಖ ಮಸೂದೆಗಳಲ್ಲಿ ‘ವಿದೇಶಿ ಕೊಡುಗೆ (ನಿಯಂತ್ರಣ) ತಿದ್ದುಪಡಿ ಮಸೂದೆ, 2026’ ಸೇರಿದ್ದು, ಇದರ ಚರ್ಚೆಗೆ ನಾಲ್ಕು ಗಂಟೆಗಳ ಸಮಯವನ್ನು ನಿಗದಿಪಡಿಸಲಾಗಿದೆ. ಹಾಗೆಯೇ, ‘ಆದಾಯ ತೆರಿಗೆ (ತಿದ್ದುಪಡಿ) ಮಸೂದೆ, 2026’ ರ ಕುರಿತು ಲೋಕಸಭೆಯಲ್ಲಿ ಮೂರು ಗಂಟೆಗಳ ಕಾಲ ಚರ್ಚೆ ನಡೆಯಲಿದೆ.
National
ಮೆಸ್ಸಿಯ ಕೊನೆಯ ವಿಶ್ವಕಪ್ ಕನಸು ಭಗ್ನ’ : ಸ್ಪೇನ್ಗೆ ವಿಶ್ವಕಪ್, ಅರ್ಜೆಂಟೀನಾ ಸೋಲು
ನ್ಯೂಯಾರ್ಕ್: ಫುಟ್ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿಯ ಕೊನೆಯ ವಿಶ್ವಕಪ್ ಗೆಲ್ಲುವ ಕನಸು ಈಡೇರಲಿಲ್ಲ. 2026ರ ಫಿಫಾ ವಿಶ್ವಕಪ್ ಫೈನಲ್ನಲ್ಲಿ ಸ್ಪೇನ್ ವಿರುದ್ಧ ಅರ್ಜೆಂಟೀನಾ 1-0 ಗೋಲುಗಳ ಅಂತರದಲ್ಲಿ ಸೋತು, ಹಾಲಿ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳಲು ವಿಫಲವಾಯಿತು. ಹೆಚ್ಚುವರಿ ಸಮಯದ 106ನೇ ನಿಮಿಷದಲ್ಲಿ ಫೆರಾನ್ ಟೊರೆಸ್ ಬಾರಿಸಿದ ಏಕೈಕ ಗೋಲು ಸ್ಪೇನ್ಗೆ ವಿಶ್ವಕಪ್ ಕಿರೀಟ ತಂದುಕೊಟ್ಟಿತು.

ಪಂದ್ಯದ ಆರಂಭದಿಂದಲೇ ಸ್ಪೇನ್ ಚೆಂಡಿನ ಮೇಲೆ ಹಿಡಿತ ಸಾಧಿಸಿ ಅರ್ಜೆಂಟೀನಾ ಮೇಲೆ ನಿರಂತರ ಒತ್ತಡ ಹೇರಿತು. ಮೆಸ್ಸಿ ನೇತೃತ್ವದ ಅರ್ಜೆಂಟೀನಾ ಕೆಲ ಅವಕಾಶಗಳನ್ನು ಸೃಷ್ಟಿಸಿದರೂ, ಸ್ಪೇನ್ನ ಸಂಘಟಿತ ರಕ್ಷಣೆಯನ್ನು ಭೇದಿಸಲು ಸಾಧ್ಯವಾಗಲಿಲ್ಲ. ಗೋಲ್ಕೀಪರ್ ಎಮಿಲಿಯಾನೊ ಮಾರ್ಟಿನೆಸ್ ಹಲವು ಅದ್ಭುತ ಸೇವ್ಗಳನ್ನು ಮಾಡಿ ತಂಡವನ್ನು ಪಂದ್ಯದಲ್ಲಿ ಉಳಿಸಿದ್ದರು.
ನಿಗದಿತ 90 ನಿಮಿಷಗಳಲ್ಲಿ ಯಾವುದೇ ತಂಡ ಗೋಲು ದಾಖಲಿಸದ ಕಾರಣ ಪಂದ್ಯ ಹೆಚ್ಚುವರಿ ಸಮಯಕ್ಕೆ ಸಾಗಿತು. 106ನೇ ನಿಮಿಷದಲ್ಲಿ ಫೆರಾನ್ ಟೊರೆಸ್ ನಿರ್ಣಾಯಕ ಗೋಲು ಬಾರಿಸಿ ಸ್ಪೇನ್ಗೆ ಮುನ್ನಡೆ ತಂದುಕೊಟ್ಟರು. ಕೊನೆಯ ಕ್ಷಣಗಳಲ್ಲಿ ಅರ್ಜೆಂಟೀನಾ ಸಮಬಲ ಸಾಧಿಸಲು ಹೋರಾಡಿದರೂ ಯಶಸ್ವಿಯಾಗಲಿಲ್ಲ.

ಈ ಗೆಲುವಿನೊಂದಿಗೆ ಸ್ಪೇನ್ 2010ರ ಬಳಿಕ ಎರಡನೇ ಬಾರಿ ಫಿಫಾ ವಿಶ್ವಕಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಮತ್ತೊಂದೆಡೆ, ಮೆಸ್ಸಿಗೆ ಇದು ವಿಶ್ವಕಪ್ನಲ್ಲಿ ಕೊನೆಯ ಪಂದ್ಯವಾಗುವ ಸಾಧ್ಯತೆ ಇದ್ದು, ಮತ್ತೊಮ್ಮೆ ಟ್ರೋಫಿ ಎತ್ತುವ ಅವರ ಕನಸು ಭಗ್ನಗೊಂಡಿತು.
-
State20 hours agoಚೆನ್ನಮ್ಮ ಅಂತ್ಯಕ್ರಿಯೆ: ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಲು ಪ್ರಜ್ವಲ್ ರೇವಣ್ಣಗೆ ಅನುಮತಿ
-
Kodagu15 hours agoಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಕುಶಾಲನಗರದ ಐಎಎಸ್ ಅಧಿಕಾರಿ ಎಸ್.ಎಸ್. ನಕುಲ್ ನೇಮಕ
-
Hassan14 hours agoಪಂಚಭೂತಗಳಲ್ಲಿ ಲೀನರಾದ ಚೆನ್ನಮ್ಮ ದೇವೇಗೌಡ
-
Politics12 hours agoಬಿಡದಿ ಟೌನ್ಶಿಪ್ ಭೂಸ್ವಾಧೀನಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್; PIL ವಜಾ
-
National19 hours agoಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ
-
Kodagu15 hours agoಇಂದಿನಿಂದ ಪುಷ್ಯ ಮಳೆ : ಉತ್ತಮ ಮಳೆ ನಿರೀಕ್ಷೆಯಲ್ಲಿ ಜಿಲ್ಲೆಯ ರೈತರು
-
Chikmagalur12 hours agoಕಂಬಳದ ಕೆಸರುಗದ್ದೆಯಂತಾದ ಕೋಳೂರು ರಸ್ತೆ: ಶಾಲಾ ಮಕ್ಕಳ ಹರಸಾಹಸ, ಪಂಚಾಯತ್ ನಿರ್ಲಕ್ಷ್ಯಕ್ಕೆ ಆಕ್ರೋಶ
-
State21 hours agoರಾಷ್ಟ್ರಪತಿ ಭವನದತ್ತ ಶಿರಸಿಯ ಯುವ ವಿಜ್ಞಾನಿ!




