Deficiency
ರೈಲ್ವೆ ಪ್ರಯಾಣಿಕರಿಗೆ ಬಿಗ್ ಶಾಕ್ – ಇನ್ಮುಂದೆ ಸೀಟ್ ರಿಸರ್ವ್ ಮಾಡಿದ್ರೂ ಆ ಸೀಟು ಸಿಗಲ್ಲ ನಿಮಗೆ !! ಅಚ್ಚರಿ ಮೂಡಿಸಿದ ಇಲಾಖೆಯ ಹೊಸ ಗೈಡ್ ಲೈನ್

Indian Railway: ದೂರ ಪ್ರಯಾಣಕ್ಕಾಗಿ ರೈಲನ್ನು ಅವಲಂಬಿಸುವವರ ಸಂಖ್ಯೆ ಹೆಚ್ಚಿದೆ. ಹಾಗಾಗಿ ಅನುಕೂಲಕರ ಟಿಕೆಟ್ ಮೊದಲೇ ಬುಕ್ ಮಾಡುತ್ತೇವೆ. ಸಾಮಾನ್ಯವಾಗಿ ರೈಲು ಪ್ರಯಾಣದಲ್ಲಿ ನಾವು ಮೊದಲೇ ಸೀಟುಗಳನ್ನು ಬುಕ್ ಮಾಡಿದ್ದರೆ ಆ ಸೀಟು ನಮಗೇ ಮೀಸಲಾಗಿರುತ್ತದೆ. ಬೇರೆ ಯಾರೂ ಆ ಸೀಟಿನಲ್ಲಿ ಮಾತ್ರ ಕುಳಿತುಕೊಳ್ಳುವಂತಿಲ್ಲ. ಇದರಿಂದ ಆರಾಮವಾಗಿ ಪ್ರಯಾಣ ಮಾಡಬಹುದಿತ್ತು. ಇನ್ನು ಸಾಮಾನ್ಯವಾಗಿ ರೈಲಿನಲ್ಲಿ ಪ್ರಯಾಣಿಸುವವರು ಲೋವರ್ ಬರ್ತ್ ನ್ನು ಹೆಚ್ಚು ಪ್ರಿಫರ್ ಮಾಡುತ್ತಾರೆ. ಮಲಗಲು, ಏಳಲು ಸುಲಭ ಅನ್ನೋ ಕಾರಣಕ್ಕೆ ಕೆಳಗಿನ ಸೀಟನ್ನೇ ಆಯ್ಕೆ ಮಾಡುತ್ತಾರೆ. ಆದ್ರೆ ಇನ್ಮುಂದೆ ಲೋವರ್ ಬರ್ತ್ ಆಯ್ಕೆ ಮಾಡಿದ್ರೂ ಎಲ್ಲರಿಗೂ ಆ ಸೀಟ್ ಸಿಗೋದಿಲ್ಲವಂತೆ.
ಭಾರತೀಯ ರೈಲು (Indian Railway) ಪ್ರಯಾಣದಲ್ಲಿ ಹೆಚ್ಚಿನ ಜನರ ಆದ್ಯತೆಯ ಆಸನವೆಂದರೆ ಲೋವರ್ ಬರ್ತ್ ಅಥವಾ ಸೈಡ್ ಲೋವರ್ ಬರ್ತ್. ಆದರೆ ಈಗ ಎಲ್ಲರೂ ಬಹುಶಃ ಈ ಆಸನವನ್ನು ಕಾಯ್ದಿರಿಸಲು ಸಾಧ್ಯವಾಗುವುದಿಲ್ಲ. ಹೌದು, ಭಾರತೀಯ ರೈಲ್ವೇ ಈ ಕುರಿತು ಆದೇಶ ಹೊರಡಿಸಿದೆ. ಆದೇಶದ ಪ್ರಕಾರ, ರೈಲಿನ ಕೆಳ ಬರ್ತ್ ಅನ್ನು ನಿರ್ದಿಷ್ಟ ವರ್ಗದ ಜನರಿಗೆ ಮೀಸಲಿಡಲಾಗುತ್ತದೆ.
ರೈಲು ಪ್ರಯಾಣದಲ್ಲಿ ಸೀಟು ಕಾಯ್ದಿರಿಸುವ ರೂಲ್ಸ್ನಲ್ಲಿ ಐಆರ್ಸಿಟಿಸಿ ಕೆಲವೊಂದು ಬದಲಾವಣೆಗಳನ್ನು ಮಾಡಿದೆ. ಕೆಳ ಬರ್ತ್ಗೆ ಸಂಬಂಧಿಸಿದಂತೆ ರೈಲ್ವೆ ಹೊಸ ನಿಯಮ (New Rules)ವನ್ನು ಹೊರಡಿಸಿದೆ. ರೈಲ್ವೆಯು ರೈಲಿನ ಕೆಳ ಬರ್ತ್ ಅನ್ನು ವಿಶೇಷ ಚೇತನರಿಗಾಗಿ ಕಾಯ್ದಿರಿಸಿದೆ. ಅವರ ಪ್ರಯಾಣ (Travel)ವನ್ನು ಹೆಚ್ಚು ಅನುಕೂಲಕರವಾಗಿಸಲು, ಭಾರತೀಯ ರೈಲ್ವೇ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
ರೈಲ್ವೆ ಮಂಡಳಿಯ ಆದೇಶದ ಪ್ರಕಾರ, ಸ್ಲೀಪರ್ ಕ್ಲಾಸ್ನಲ್ಲಿ ವಿಶೇಷ ಚೇತನರಿಗೆ ನಾಲ್ಕು ಸೀಟುಗಳು, ಎರಡು ಲೋವರ್, ಎರಡು ಮಿಡ್ಲ್, ಥರ್ಡ್ ಎಸಿಯಲ್ಲಿ ಎರಡು ಮತ್ತು ಎಸಿ3 ಎಕಾನಮಿಯಲ್ಲಿ ಎರಡು ಸೀಟುಗಳನ್ನು ಮೀಸಲಿಡಲಾಗಿದೆ. ಅವನು ಅಥವಾ ಅವನೊಂದಿಗೆ ಪ್ರಯಾಣಿಸುವ ಜನರು ಈ ಆಸನ (Seat)ದಲ್ಲಿ ಕುಳಿತುಕೊಳ್ಳಲು ಸಾಧ್ಯವಾಗುತ್ತದೆ. ಅದೇ ಸಮಯದಲ್ಲಿ, ಗರೀಬ್ ರಥ ರೈಲಿನಲ್ಲಿ, 2 ಕೆಳಗಿನ ಸೀಟುಗಳು ಮತ್ತು 2 ಮೇಲಿನ ಸೀಟುಗಳನ್ನು ಅಂಗವಿಕಲರಿಗೆ ಮೀಸಲಿಡಲಾಗಿದೆ. ಈ ಆಸನಗಳಿಗೆ ಅವರು ಸಂಪೂರ್ಣ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಇವುಗಳ ಹೊರತಾಗಿ, ಭಾರತೀಯ ರೈಲ್ವೇಯು ಹಿರಿಯ ನಾಗರಿಕರಿಗೆ ಕೇಳದೆಯೇ ಲೋವರ್ ಬರ್ತ್ಗಳನ್ನು ನೀಡುತ್ತದೆ. 45 ವರ್ಷ ಮತ್ತು ಮೇಲ್ಪಟ್ಟ ಮಹಿಳೆಯರು ಮತ್ತು ಗರ್ಭಿಣಿಯರಿಗೆ, ಸ್ಲೀಪರ್ ಕ್ಲಾಸ್ನಲ್ಲಿ 6ರಿಂದ 7 ಲೋವರ್ ಬರ್ತ್ಗಳು, ಥರ್ಡ್ ಎಸಿಯ ಪ್ರತಿ ಕೋಚ್ನಲ್ಲಿ 4-5 ಲೋವರ್ ಬರ್ತ್ಗಳು, ಸೆಕೆಂಡ್ ಎಸಿಯ ಪ್ರತಿ ಕೋಚ್ನಲ್ಲಿ 3-4 ಲೋವರ್ ಬರ್ತ್ಗಳನ್ನು ರೈಲಿನಲ್ಲಿ ಕಾಯ್ದಿರಿಸಲಾಗಿದೆ. ಯಾವುದೇ ಆಯ್ಕೆಯನ್ನು ಆಯ್ಕೆ ಮಾಡದೆಯೇ ಅವರು ಸೀಟು ಪಡೆಯಬಹುದಾಗಿದೆ.
ಒಂದು ವೇಳೆ ಟಿಕೆಟ್ ಕಾಯ್ದಿರಿಸುವಾಗ ಹಿರಿಯ ನಾಗರಿಕರು, ಅಂಗವಿಕಲರು ಅಥವಾ ಗರ್ಭಿಣಿ ಮಹಿಳೆಗೆ ಮೇಲಿನ ಸೀಟ್ ಪಡೆದರೆ, ನಂತರ ಆನ್ಬೋರ್ಡ್ ಟಿಕೆಟ್ ಪರಿಶೀಲನೆಯ ಸಮಯದಲ್ಲಿ, ಟಿಟಿ ಅವರಿಗೆ ಲೋವರ್ ಸೀಟ್ ನೀಡಲು ಅವಕಾಶ ಕೂಡ ಇದೆ.
Deficiency
ತೆಂಗಿನ ಬೆಳೆಯಲ್ಲಿ ಕೀಟ ಮತ್ತು ರೋಗ ನಿಯಂತ್ರಣ ಹಾಗು ಸುಧಾರಿತ ಬೇಸಾಯ ಕ್ರಮಗಳ ಕುರಿತು ತರಬೇತಿ ಮತ್ತು ಪ್ರತ್ಯಕ್ಷಿತೆ ಕಾರ್ಯಕ್ರಮ

ಸಾಲಿಗ್ರಾಮ : ತೆಂಗಿನ ಬೆಳೆ ಕೀಟ ನಿಯಂತ್ರಣ ತರಬೇತಿ ತೋಟಗಾರಿಕೆ ಇಲಾಖೆ ಹಾಗು ತೋಟಗಾರಿಕೆ ಮಹಾವಿದ್ಯಾಲಯ ಇವರ ಸಹ ಬಾಗಿತ್ವದಲ್ಲಿ ತೆಂಗಿನ ಬೆಳೆಯಲ್ಲಿ ಕೀಟ ಮತ್ತು ರೋಗ ನಿಯಂತ್ರಣ ಹಾಗು ಸುಧಾರಿತ ಬೇಸಾಯ ಕ್ರಮಗಳ ಕುರಿತು ತರಬೇತಿ ಮತ್ತು ಪ್ರತ್ಯಕ್ಷಿತೆ ಕಾರ್ಯಕ್ರಮ ವನ್ನು ಮಿರ್ಲೆ ಹೋಬಳಿಯ ಎಲೆಮುದ್ದನಹಳ್ಳಿ ಕೊಪ್ಪಲು ಗ್ರಾಮದ ರೈತ ಪುಟ್ಟಸ್ವಾಮಿಗೌಡ ಅವರ ತೆಂಗಿನತೋಟದಲ್ಲಿ ಅಕ್ಟೋಬರ್ 31 ರ ಮಂಗಳವಾರ ಬೆಳ್ಳಿಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ಟಿ. ಎಸ್. ಭಾರತಿ ತಿಳಿಸಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಡಿ. ರವಿಶಂಕರ್ ನೆರವೇರಿಸಳಲಿದ್ದು, ಮುಖ್ಯ ಅತಿಥಿಗಳಾಗಿ ತೋಟಗಾರಿಕೆ ಉಪ ನಿರ್ದೇಶಕ ಡಾ: ಮಂಜುನಾಥ್ ಅಂಗಡಿ,ಡಾ : ಸುದರ್ಶನ್, ಡಾ : ಮುತ್ತು ರಾಜ್, ಭಾಗವಹಿಸಲಿದ್ದಾರೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತೆಂಗಿನ ಬೆಲೆಯಲ್ಲಿ ಕೀಟ ಮತ್ತು ರೋಗ ನಿಯಂತ್ರಣ ಹಾಗು ಸುಧಾರಿತ ಬೇಸಾಯ ಕ್ರಮಗಳ ಕುರಿತು ತರಬೇತಿ ಪಡೆದುಕೊಳ್ಳುವಂತೆ ಕೊರಿದ್ದಾರೆ.
ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ
Deficiency
ಅಧಿಕಾರಿಗಳು ಹಣ ಮಾಡೋದು ಒಂದೇ ದಾರಿಯಲ್ಲ ರೈತರ ಜೊತೆ ಸರಿಯಾಗಿ ನಡೆದುಕೊಳ್ಳಬೇಕು

ಹುಣಸೂರು : ಅಧಿಕಾರಿಗಳು ಹಣ ಮಾಡೋದು ಒಂದೇ ದಾರಿಯಲ್ಲ ರೈತರ ಜೊತೆ ಸರಿಯಾಗಿ ನಡೆದುಕೊಳ್ಳಬೇಕು ಎಂದು ಕೆಲವರು ಆರೋಪಿಸಿದರೆ, ಕೆಲವರು ಸಣ್ಣ ಪುಟ್ಟ ರೈತರ ಮೇಲೆ ನಡೆಯುವ ತೊಂದರೆಗಳನ್ನು ಪ್ರಶ್ನೆಸಿದರೆ ಆ ರೈತರಿಗೆ ಅಧಿಕಾರಿಗಳು ಮಾನಸಿಕವಾಗಿ ತೊಂದರೆ ನೀಡುತ್ತಾರೆ ಆದರೆ ಈಗ ರೈತನಿಗೆ ಶೂ ನಲ್ಲಿ ಹೊಡೆಯಲು ಮುಂದಾಗಿರೋ ಅಧಿಕಾರಿಗೆ ಏನು ಕ್ರಮ ಕೈಗೊಳ್ಳಬೇಕು ಎಂದು ರೈತರು ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಸಭೆಯಲ್ಲಿ ಹೊರಹಾಕಿದ್ದು ಹೀಗೆ.
ಅವರು ಹುಣಸೂರು ತಾಲೂಕಿನ ಚಿಲ್ಕುಂದ ಗ್ರಾಮದ ತಂಬಾಕು ಮಂಡಳಿಯ ರೈತ ಭವನದಲ್ಲಿ ಪ್ಲಾಟ್ ಫಾರಂ ನಂಬರ್ 62ರ ಹರಾಜು ಅಧೀಕ್ಷಕ ಬ್ರಿಜ್ ಭೂಷಣ್ ವಿರುದ್ಧ ರೈತರು ಸೋಮವಾರ ಸಭೆ ಸೇರಿ ಚರ್ಚಿಸಿ ನಿರ್ಣಯ ಕೈಗೊಂಡು ತಂಬಾಕು ಮಂಡಳಿಯ ಅಧಿಕಾರಿ ಒಬ್ಬ ತಂಬಾಕು ರೈತನಿಗೆ ಶೂ ನಿಂದ ಹೊಡೆಯಲು ಮುಂದಾಗಿರುವುದು ರೈತ ಕುಲಕ್ಕೆ ಅವಮಾನ ಆ ಅಧಿಕಾರಿಯನ್ನು ಕರ್ನಾಟಕ ರಾಜ್ಯದಿಂದ ವರ್ಗಾವಣೆ ಮಾಡಬೇಕು, ಹಾಗೂ ಆತ ಸಭೆಯಲ್ಲಿ ಕ್ಷಮೆ ಕೇಳಬೇಕು ಜೊತೆಗೆ ಈ ವಿಷಯಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳು ವಿಚಾರಣೆ ಕೈಗೊಳ್ಳಬೇಕು ಎಂದು ಸಭೆಯಲ್ಲಿ ತೀರ್ಮಾನ ಕೈಗೊಂಡು ಈ ನಿರ್ಣಯವನ್ನು ಸಭೆಯಲ್ಲಿ ಸರ್ವ ಸದಸ್ಯರಿಂದ ಒಪ್ಪಿಗೆ ಪಡೆದ ಗೊಬ್ಬರ ಕಮಿಟಿಯ ಅಧ್ಯಕ್ಷ ಅಣ್ಣೂರು ಕಾಳೇಗೌಡ ಈ ನಿರ್ಣಯವನ್ನು ಓದಿ ತಿಳಿಸಿದರು.
ಈ ನಿರ್ಣಯದ ಮನವಿಯನ್ನು ಮೇಲಾಧಿಕಾರಿಗಳಿಗೆ ಕಳುಹಿಸಲು ಆರ್.ಎಂ. ಓ ಲಕ್ಷ್ಮಣ್ ರಾವ್ ರವರಿಗೆ ನೀಡಿದರು. ಕಾರ್ಯಕ್ರಮದಲ್ಲಿ ತಂಬಾಕು ಮಂಡಳಿಯ ಉಪಾಧ್ಯಕ್ಷ ಬಸವರಾಜಪ್ಪ, ಸದಸ್ಯರಾದ ವಿಕ್ರಂ ಗೌಡ ,ದಿನೇಶ್ , ಗೊಬ್ಬರ ಕಮಿಟಿಯ ಉಪಾಧ್ಯಕ್ಷ ಮಂಜುನಾಥ್ ಕೆರೆಗೋಡು, ಕಾರ್ಯದರ್ಶಿ ಮರಿಗೌಡ, ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಡಿಎಸ್ಎಸ್ ಸಂಚಾಲಕ ರಾಮಕೃಷ್ಣ ಅತ್ತಿಕುಪ್ಪೆ, ಪ್ರಭಾಕರ್, ಮೋದೂರು ಶಿವಣ್ಣ, ದೇವರಾಜ್, ಉಂಡವಾಡಿ ಚಂದ್ರೇಗೌಡ, ರವಿಕುಮಾರ್, ನವೀನ್, ಅಗ್ರಹಾರ ರಾಮೇಗೌಡ ಸೇರಿದಂತೆ ಸಾವಿರಾರು ರೈತರು ಭಾಗವಹಿಸಿದ್ದರು.
Chikmagalur
ಧಾರಾಕಾರ ಮಳೆಗೆ ಎರಡು ಮನೆಗಳಿಗೆ ಹಾನಿ

ಚಿಕ್ಕಮಗಳೂರು : ಮಲೆನಾಡಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದೆ. ಕಳೆದ ಮೂರು ದಿನಗಳಿಂದ ಪಶ್ಚಿಮ ಘಟಕ್ಕೆ ಹೊಂದಿಕೊಂಡಂತೆ ಇರುವ ಮಲೆನಾಡಿನ ಪ್ರದೇಶಗಳಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಮೂಡಿಗೆರೆ ತಾಲೂಕಿನಲ್ಲಿ ಎರಡು ಮನೆಗಳು ಕುಸಿದಿವೆ. ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿಯ ಚಿನ್ನಿಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಣಜೂರು ಗ್ರಾಮದಲ್ಲಿ ದಿನೇಶ್ ಎಂಬುವವರು ಮನೆ ಶುಕ್ರವಾರ ರಾತ್ರಿ ಸುರಿದ ಮಳೆಗೆ ಕುಸಿದಿದೆ. ಹಾಗೆಯೇ ಬಾಳೂರು ಹೋಬಳಿ ಜಾವಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಗೂರು ಗ್ರಾಮದಲ್ಲಿ ಮನೆಯೊಂದು ಕುಸಿದಿದೆ.
ಮೇಗೂರು ಗ್ರಾಮದ ರಾಮಯ್ಯ ಎಂಬುವವರ ಮನೆ ಮಳೆಯಿಂದಾಗಿ ಕುಸಿದು ಬಿದ್ದಿದೆ. ಮನೆಯ ಗೋಡೆ ಮತ್ತು ಮೇಲ್ಚಾವಣಿ ಬಹುತೇಕ ಕುಸಿದು ಬಿದ್ದಿದೆ. ಈ ಸಮಯದಲ್ಲಿ ಮನೆಯವರು ಒಳಗಡೆಯೇ ಇದ್ದರು ಎಂದು ತಿಳಿದುಬಂದಿದ್ದು. ಮನೆಯವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಕಂದಾಯ ಮತ್ತು ಗ್ರಾಮ
ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅವರ ಮನೆಗೆ ತಾತ್ಕಾಲಿಕ ರಕ್ಷಣೆಗಾಗಿ ಟಾರ್ಪಲ್ ಹೊದಿಸಲು ವ್ಯವಸ್ಥೆ ಮಾಡಿದ್ದು. ಕುಟುಂಬದವರನ್ನು ಪಕ್ಕದ ಮನೆಗೆ ಸ್ಥಳಾಂತರಿಸಲಾಗಿದೆ.
-
Hassan1 month ago
ಮಲಗಿದಲ್ಲಿಯೇ ವ್ಯಕ್ತಿ ಸಾವು
-
Mysore1 month ago
KSRTC BUS – ಚಲಿಸುವಾಗ ನಿಯಂತ್ರಣ ತಪ್ಪಿ ಅಪಘಾತ
-
Mysore4 days ago
ಮುಖ್ಯ ಶಿಕ್ಷಕ ಮತ್ತು ಡಿ ದರ್ಜೆ ನೌಕರ, ಶಾಲಾ ಪ್ರವಾಸದ ಸಂದರ್ಭ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ – ಆರೋಪ
-
Hassan1 day ago
ಕಾಡಾನೆ ದಾಳಿಗೆ ಮೈಸೂರು ದಸರೆಯಲ್ಲಿ ಅಂಬಾರಿ ಹೊತ್ತು ಆನೆ ಅರ್ಜುನ ಬಲಿ
-
Crime3 weeks ago
ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
Hassan3 months ago
ಹಾಸನ-ಅರ್ಧ ಗಂಟೆಯಲ್ಲಿ 1 ಲೀಟರ್ ಮದ್ಯ ಕುಡಿಯುವ ಚಾಲೆಂಜ್- ಓರ್ವ ಸಾವು
-
Hassan1 week ago
ಜಿಲ್ಲಾಧಿಕಾರಿ ಕಛೇರಿ ಎಸ್ಡಿಎ ಆತ್ಮಹತ್ಯೆ
-
Mysore4 days ago
ಹಳೆ ಕಾಮಗಾರಿಗೆ ಗುದ್ದಲಿ ಪೂಜೆ ಮಾಡುವ ದರಿದ್ರ ನನಗೆ ಬಂದಿಲ್ಲ, ಹೊಸದಾಗಿ ತರುವ ತಾಕತ್ತು ನನಗೆ ಇದೆ – ಶಾಸಕ ಡಿ. ರವಿಶಂಕರ್