Connect with us

Hassan

ಇನ್ನೊಂದು ತಿಂಗಳಲ್ಲಿ ಕ್ರಮಕೈಗೊಳ್ಳದಿದ್ರೆ ಉಪವಾಸ ಸತ್ಯಗ್ರಹ: ಜಯಲಕ್ಷ್ಮಿ- ಬಿ.ಕೆ. ಮಂಜುನಾಥ್

Published

on

ಹಾಸನ : ಎಲ್ಲಾ ವಾರ್ಷಿಕ ಸಭೆಯಲ್ಲಿ ಸಂಸ್ಥೆಯ ಸಾಮಾನ್ಯ ಅಜೀವ ಮತ್ತು ಪೋಷಕರ ಸಂಖ್ಯೆಯನ್ನು ಮುದ್ರಿಸುತ್ತಿದ್ದು, ಆದರೇ ೬೫ನೇ ಸಭೆಯಲ್ಲಿ ಸದಸ್ಯರ ಸಂಖ್ಯೆಯನ್ನೆ ನಮೂದಿಸಿಲ್ಲ. ಈ ಬಗ್ಗೆ ಇನ್ನೊಂದು ತಿಂಗಳಲ್ಲಿ ಕ್ರಮ ಕೈಗೊಳ್ಳದಿದ್ದರೇ ಶಾಂತಿಯುತ ಉಪವಾಸ ಸತ್ಯಾಗ್ರಹವನ್ನು ಮಾಡುವುದಾಗಿ ಹಿರಿಯ ನಾಗರೀಕರ ವೇದಿಕೆಯ ಜಯಲಕ್ಷ್ಮಿ ಆರ್. ಗೌಡ ಮತ್ತು ಹುಡಾ ಮಾಜಿ ಅಧ್ಯಕ್ಷ ಬಿ.ಕೆ. ಮಂಜುನಾಥ್ ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ಎಂ.ಟಿ.ಇ.ಎಸ್. ಸೊಸೈಟಿಯಲ್ಲಿ ೧೯೫೮ರಲ್ಲಿ ಭಾರತ ದೇಶದ ೨ನೇ ಪಂಚವಾರ್ಷಿಕ ಯೋಜನೆಯಲ್ಲಿ ಅಂದಿನ ಪ್ರಧಾನಿಗಳಾದ ಜವಹರ್‌ಲಾಲ್ ನೆಹರುರವರು ದೇಶದ ಹಳ್ಳಿಗಾಡಿನ ರೈತ ಮಕ್ಕಳಿಗೆ ಅನುಕೂಲವಾಗಲೆಂದು ಎಲ್ಲ ರಾಜ್ಯದಲ್ಲಿ ತಾಂತ್ರಿಕ ವಿದ್ಯಾಲಯಗಳನ್ನು ತೆರದ ಸಂದರ್ಭದಲ್ಲಿ ಕರ್ನಾಟಕ ಮಲೆನಾಡು ಪ್ರದೇಶವಾದ ಕೂರ್ಗ್ (ಹಿಂದಿನ ಮಡಿಕೇರಿ) ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯನ್ನು ಸೇರಿ ಈ ಮೂರು ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಈ ೩ ಜಿಲ್ಲೆಯ ಜಿಲ್ಲಾಧಿಕಾರಿಗಳು ಲೋಕಸಭಾ ಸದಸ್ಯರು ಶಾಸಕರು ಪುರಸಭೆ ಮತ್ತು ಪಂಚಾಯಿತಿ ಸದಸ್ಯರು ಹಾಗು ಸಂಘ ಸಂಸ್ಥೆಗಳ ಸದಸ್ಯರು ಸೇರಿ ೩೧ ಜನ

ನಿರ್ದೇಶಕರನ್ನು ನೇಮಿಸಲಾಗಿ ಆ ೩೧ ಜನ ನಿರ್ದೇಶಕ ಪೈಕಿ ಅಂದಿನ ಮೈಸೂರು ಡಿವಿಜಿನಲ್ ಕಮಿಷನರ್ ಆದ ಶಫಿದರ್ ಶಾ ಐಎಎಸ್ ಇವರನ್ನ ಎಂ.ಟಿ.ಇ.ಎಸ್ ಸೊಸೈಟಿಯ ಅಧ್ಯಕ್ಷರಾಗಿ ನೇಮಿಸಲಾಯಿತು. ಹಾಗೂ ಹಾಸನದ ಅಂದಿನ ಜಿಲ್ಲಾಧಿಕಾರಿ ಚಂದ್ರಪ್ಪ ಪಾಟೀಲ್ ಐಎಎಸ್ ಅವರನ್ನು ಕಾರ್ಯದರ್ಶಿಯಾಗಿ ನೇಮಿಸಲಾಯಿತು. ಹಾಗೂ ಲೋಕಸಭಾ ಸದಸ್ಯರಾಗಿದ್ದ ಸಿದ್ಧನಂಜಪ್ಪ ಅವರನ್ನು ಉಪಾಧ್ಯಕ್ಷರಾಗಿ ನೇಮಿಸಿ ಹಾಗೂ ಹಾಸನ ಪುರಸಭಾ ಅಧ್ಯಕ್ಷರು, ೩ ಜಿಲ್ಲೆಯ ಶಾಸಕರು, ಲೋಕಸಭಾ ಸದಸ್ಯರು ಮತ್ತು ಸಂಘಸಂಸ್ಥೆಯ ಪರವಾಗಿ ೩೧ ಜನ ನಿರ್ದೇಶಕರನ್ನು ನೇಮಿಸಿ ಕೇಂದ್ರ ಸರ್ಕಾರದಿಂದ ಶೇ ೫೦ ರಷ್ಟು ಹಣ ರಾಜ್ಯ ಸರ್ಕಾರದಿಂದ ಶೇ ೨೫ ರಷ್ಟು ಹಣ ಹಾಗೂ ೩ ಜಿಲ್ಲೆಯ ರೈತರಿಂದ ಶೇ ೨೫ ರಷ್ಟು ಹಣ ಸೇರಿಸಿ ಸುಮಾರು ೪೦ ಎಕರೆಗೂ ಹೆಚ್ಚು ಜಮೀನನ್ನು ರೈತರಿಂದ ಸರ್ಕಾರ ವಶಪಡಿಸಿಕೊಂಡು ಎಂ.ಟಿ.ಇ.ಎಸ್ ಸೊಸೈಟಿಗೆ

ಉಚಿತವಾಗಿ ನೀಡಿರುತ್ತಾರೆ ಎಂದರು. ಇಂತಹ ಬೃಹತ್ ಸಂಸ್ಥೆಯಲ್ಲಿ ಸಂಸ್ಥೆಯ ಅನೇಕ ಸದಸ್ಯರು ಈ ಹಿಂದೆ ದಿವಂಗತ ಜಿ.ಎಲ್ ಕೃಷ್ಣಗೌಡ, ತಿಮ್ಮೇಗೌಡ, ಸಿ.ಎಸ್ ಕೃಷ್ಣಸ್ವಾಮಿ, ಬಿ.ಬಿ ಶಿವಪ್ಪ ಹಾಗೂ ಶ್ರೀಯುತ ಜಿ.ಎಲ್ ಮುದ್ದೇಗೌಡ ಅಧ್ಯಕ್ಷರು ಒಕ್ಕಲಿಗರ ಸಂಘ ಹಾಗೂ ಶ್ರೀಯುತ ಐಸ್ವಾಮಿಗೌಡ ಅಧ್ಯಕ್ಷರು ವೀರಶೈವ ಸಮಾಜ, ಹಾಗೂ ಇನ್ನೂ ಇತರರು ಕಳೆದ ದಶಕಗಳಿಂದ ಅನೇಕ ಪತ್ರಗಳನ್ನು ಬರೆದು ಎಚ್ಚರಿಸಿದ್ದರೂ ಯಾವುದಕ್ಕೂ ಲೆಕ್ಕಿಸದೆ ಆರ್.ಟಿ ದೇವೇಗೌಡರು ಹಿರಿಯ ವಕೀಲರು ನಡೆದುಕೊಳ್ಳುತ್ತಿರುವ ಬಗ್ಗೆ ಎಚ್ಚರಿಸುತ್ತೇವೆ. ೨೦೧೨ ರಿಂದ ೨೦೨೪ರವರೆಗೆ ಎಂ.ಟಿ.ಇ.ಎಸ್ ಸೊಸೈಟಿಯ ವಾರ್ಷಿಕ ಸಭೆಯಲ್ಲಿ ಹಲವಾರು ವಿಷಯಗಳನ್ನು ಚರ್ಚಿಸಲು ನಿಗದಿತ ೭ ದಿನಗಳೊಳಗೆ ವಿಷಯ ಲಿಖಿತವಾಗಿ ಮಂಡಿಸಿದರು ಯಾವುದೇ ವಿಷಯವನ್ನು ಸಭೆಯ ಗಮನಕ್ಕೆ ತರದೇ ಆರ್.ಟಿ ದೇವೇಗೌಡರು ಸ್ವತಃ ಮನಬಂದಂತೆ ಉತ್ತರ ನೀಡಿರುವ ಬಗ್ಗೆ ಈ ಸಂಬಂಧ ಸುಮಾರು ೪೦ಕ್ಕೂ ಹೆಚ್ಚು ಸದಸ್ಯರು ಲಿಖಿತವಾಗಿ ಕೇಳಿದರು ಉತ್ತರ ನೀಡದ ಬಗ್ಗೆ ಅಂದೇ ಜಿಲ್ಲಾಧಿಕಾರಿಗಳಿಗೆ ಮತ್ತು ಸರ್ಕಾರಕ್ಕೆ ಬಿ ಬಿ ಶಿವಪ್ಪ ಮತ್ತು ಸಿ.ಎಸ್.ಕೆಯವರು ದೂರು ನೀಡಿದ್ದರು ಕ್ರಮ ಕೈಗೊಂಡಿರುವುದಿಲ್ಲ ಎಂದು ದೂರಿದರು.

ಅನೇಕ ವಿಷಯಗಳ ಬಗ್ಗೆ ಸದಸ್ಯರು ಅರ್ಜಿಸಲ್ಲಿಸಿದರೆ ಯಾವುದಕ್ಕೂ ಉತ್ತರ ನೀಡದ ಬಗ್ಗೆ ಸದಸ್ಯರು ಆರ್.ಟಿ.ಐ ಮುಖಾಂತರ ಕೇಳಲಾಗಿ ಅವರಿಗೆ ಜಿಲ್ಲಾ ನೊಂದಣಾಧಿಕಾರಿಗಳ ಕಛೇರಿಯಲ್ಲಿ ನೊಂದಣಿಯಾದ ಬೈಲಾ ವಿರುದ್ಧವಾಗಿ ಅವರೇ ಮುದ್ರಿಸಿಕೊಂಡಿರುವ ಬೈಲಾವನ್ನು ನೀಡಿರುತ್ತಾರೆ. ಈ ಸಂಬಂಧ ಸಿ.ಎಸ್.ಕೃಷ್ಣಸ್ವಾಮಿ ಹಾಗೂ ಬಿ.ಬಿ ಶಿವಪ್ಪನವರು ಅನೇಕ ವಾರ್ಷಿಕ ಸಭೆಯಲ್ಲಿ ಲಿಖಿತವಾಗಿ ಪ್ರಶ್ನಿಸಿದರು. ಯಾವುದೇ ಉತ್ತರ ನೀಡದ ಬಗ್ಗೆ ಸದಸ್ಯರು ನ್ಯಾಯಾಲಯಕ್ಕೆ ಹೋಗಲಾಗಿ ನ್ಯಾಯಾಲಯದಲ್ಲೂ ಆರ್.ಟಿ ದೇವೇಗೌಡರು ಈ ಸಂಸ್ಥೆ ಸಾರ್ವಜನಿಕ ಸಂಸ್ಥೆಯಲ್ಲ ಎಂದು ಹೈಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಿರುತ್ತಾರೆ. ಈ ಸಂಬಂಧ ಹೈಕೋರ್ಟ್ ನ್ಯಾಯಾದೀಶರಿಗೆ ವಕೀಲರಾದ ಇಮ್ರಾನ್ ಅಹಮದ್ ರವರು ರಿಜಿಸ್ಟರ್ ಹೈಕೋರ್ಟ್ ಆಪ್ ಕರ್ನಾಟಕ ಅವರಿಗೆ ಪತ್ರವನ್ನ ಬರೆಸಿದ್ದಾರೆ. ಈ ಸಂಬಂಧ ಹಾಸನ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳಾದ ಸತ್ಯಭಾಮರವರು ಕರೆದಿದ್ದ ಜನಸ್ಪಂಧನಾ ಸಭೆಯಲ್ಲಿ ಈ ವಿಷಯವನ್ನು ಲಿಖಿತವಾಗಿ ಪ್ರಸ್ತಾಪಿಸಲಾಗಿ ಗೌರವಾನ್ವಿತ ಜಿಲ್ಲಾ ನೊಂದಣಾಧಿಕಾರಿಗಳಿಗೆ ತುರ್ತು ತನಿಖೆ ನಡೆಸಿ ನ್ಯಾಯ ಒದಗಿಸಿ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ.

ಅಚ್ಚರಿಯ ವಿಷಯವೇನೆಂದರೆ ಎಲ್ಲಾ ವಾರ್ಷಿಕ ಸಭೆಯಲ್ಲಿ ಸಂಸ್ಥೆಯ ಸಾಮಾನ್ಯ ಅಜೀವ ಮತ್ತು ಪೋಷಕರ ಸಂಖ್ಯೆಯನ್ನು ಮುದ್ರಿಸುತ್ತಿದ್ದರು. ಆದರೆ ೬೫ನೇ ವಾರ್ಷಿಕ ಸಭೆಯಲ್ಲಿ ಸದಸ್ಯರ ಸಂಖ್ಯೆಯನ್ನೆ ನಮೂದಿಸಿಲ್ಲ. ಈ ಹಿನ್ನೆಲೆಯಲ್ಲಿ ಈ ಎಲ್ಲದರ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಸಂಬಂಧಪಟ್ಟವರನ್ನ ಕೋರುತ್ತಾ ಮತ್ತೊಮ್ಮೆ ಸರ್ಕಾರಕ್ಕೆ ವರದಿಯನ್ನು ಜಿಲ್ಲಾ ಶಾಸಕರು ಮತ್ತು ಮಂತ್ರಿಗಳಿಗೆ ನೀಡಿ ಕ್ರಮ ಕೈಗೊಳ್ಳಬೇಕೆಂದು ತಪ್ಪಿದ್ದಲ್ಲಿ ಶಾಂತಿಯುತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ತಮ್ಮ ಮೂಲಕ ಕೋರುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಪತ್ರಕರ್ತರಾದ ವೆಂಕಟೇಶ್, ಎಸ್.ಎನ್. ಮೂರ್ತಿ, ಜಾನೆಕೆರೆ ಹೇಮಂತ್ ವಕೀಲರಾದ ಮಂಜುಳಾ ಇತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Hassan

ಈ ಸಲದ ಗಣರಾಜ್ಯೋತ್ಸವ ಸನ್ಮಾನಕ್ಕೆ ಅಪರೂಪದ ವೈದ್ಯ ಡಾ.ನಿತಿನ್ ಆಯ್ಕೆ

Published

on

ಹಾಸನ: ನಗರದ ಪ್ರತಿಷ್ಠಿತ ರಾಜೀವ್ ಆಯುರ್ವೇದ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಪ್ರಾಂಶುಪಾಲರು ಮತ್ತು ಮುಖ್ಯ ವೈದ್ಯಾಧಿಕಾರಿಗಳಾಗಿರುವ ಡಾ.ಎಸ್.ಎ.ನಿತಿನ್ ಅವರು ಈ ಬಾರಿಯ ಜಿಲ್ಲಾಡಳಿತದ ಗಣರಾಜ್ಯೋತ್ಸವದ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಜಿಲ್ಲಾಡಳಿತ ಅಭಿನಂದಿಸುತ್ತಿದ್ದು, ಈ ಸಲ ವೈದ್ಯಕೀಯ ಕ್ಷೇತ್ರದಿಂದ ಡಾ.ನಿತಿನ್ ಅವರನ್ನು ಆಯ್ಮೆ ಮಾಡಲಾಗಿದೆ. 2001 ರಿಂದ ಆಯುರ್ವೇದ ವೈದ್ಯರಾಗಿ ಜಿಲ್ಲೆಯಲ್ಲಿ ವೃತ್ತಿ ಆರಂಭಿಸಿದ ಇವರು, 25 ವರ್ಷಗಳ ಕಾಲ ಸಾರ್ಥಕ ಸೇವೆ ಸಲ್ಲಿಸಿದ್ದಾರೆ.
ಹಾಸನದ ಪ್ರತಿಷ್ಠಿತ ರಾಜೀವ್ ಶಿಕ್ಷಣ ವಿದ್ಯಾಸಂಸ್ಥೆಯಲ್ಲಿ ವೈದ್ಯರಾಗಿ, ಶೈಕ್ಷಣಿಕ ಸಲಹೆಗಾರರಾಗಿ, ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2018 ರಿಂದ ರಾಜೀವ್ ಆಯುರ್ವೇದ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಪ್ರಾಂಶುಪಾಲರು ಮತ್ತು ಮುಖ್ಯ ವೈದ್ಯಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2024 ರಿಂದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಶೈಕ್ಷಣಿಕ ಮಂಡಳಿ ಸದಸ್ಯರಾಗಿದ್ದಾರೆ.
2017 ರಲ್ಲಿ ರಾಷ್ಟ್ರೀಯ ಜೈನ್ ಯುವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗೆ ಭಾಜರಾಗಿದ್ದಾರೆ,
ವೈದ್ಯ ಸೇವೆ ಜೊತೆಗೆ ಜನಪರ ಕೆಲಸ ಕಾರ್ಯವನ್ನೂ ಮಾಡುತ್ತಿದ್ದಾರೆ. ವಿಶೇಷವಾಗಿ ರೋಗಿಗಳ ಔಷಧ ಚೀಟಿಯನ್ನೂ ಕನ್ನಡದಲ್ಲೇ ಬರೆಯುತ್ತಿರುವುದು ಇವರ ಕನ್ನಡ ಪ್ರೀತಿಗೆ ಹಿಡಿದ ಕನ್ನಡಿ.
ಜಿಲ್ಲೆ ಹಾಗೂ ರಾಜ್ಯಮಟ್ಟದ ಪತ್ರಿಕೆಗಳಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ, ವಿವಿಧ ರೋಗ-ರುಜಿನಗಳ ಬಗ್ಗೆ ಅನುಸರಿಸಬೇಕಾದ ಮುನ್ನೆಚ್ಚರಿಕೆ ಬಗ್ಗೆ ಲೇಖನ ಬರೆದು ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡುತ್ತಿದ್ದಾರೆ. ಈ ರೀತಿಯ 250ಕ್ಕೂ ಹೆಚ್ಚು ಲೇಖನ ಬರೆದಿದ್ದಾರೆ. ಅಲ್ಲದೆ ಈಗಿನ ಸಂದರ್ಭಕ್ಕೆ ಆಯುರ್ವೇದ ಮಹತ್ವದ ಬಗ್ಗೆಯೂ ಹತ್ತಾರು ಲೇಖನ ಬರೆದು ವೈದ್ಯಕೀಯ ಸೇವೆ ಜೊತೆಗೆ ಸಾಮಾಜಿಕ ಅರಿವು, ಜಾಗೃತಿ ಕೆಲಸವನ್ನೂ ಮಾಡುತ್ತಿರುವ ಅಪರೂಪದ ವೈದ್ಯರು. ಜೊತೆಗೆ 200ಕ್ಕೂ ಹೆಚ್ಚು ಹನಿಗವನ, 100ಕ್ಕೂ ಹೆಚ್ಚು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ, 100ಕ್ಕೂ ಹೆಚ್ಚು ಆರೋಗ್ಯ ಮಾಹಿತಿ ಕುರಿತು ಉಪನ್ಯಾಸ, 70ಕ್ಕೂ ಹೆಚ್ಚು ಆರೋಗ್ಯ ಶಿಬಿರ ಮಾಡಿದ್ದಾರೆ. ಜಿಲ್ಲಾಮಟ್ಟದ ಗಣರಾಜ್ಯೋತ್ಸವ ಪುರಸ್ಕಾರಕ್ಕೆ ಭಾಜನರಾಗಿರುವುದಕ್ಕೆ ವಿವಿಧ ಕ್ಷೇತ್ರಗಳ ಗಣ್ಯರು ಹಾರ್ದಿಕ ಅಭಿನಂದನೆ ಸಲ್ಲಿಸಿದ್ದಾರೆ.
ಹಿರಿಯ ಪತ್ರಕರ್ತ ಶ್ರವಣಬೆಳಗೊಳದ ಎಸ್.ಎನ್.ಅಶೋಕ್ ಕುಮಾರ್-ಜಿ.ಪಿ.ಶ್ಯಾಮಲಾದೇವಿ ಅವರ ಸುಪುತ್ರರಾದ ನಿತಿನ್ ಅವರು, ಪ್ರಾಥಮಿಕ ಶಿಕ್ಷಣವನ್ನೇ ಶ್ರವಣಬೆಳಗೊಳದಲ್ಲೇ ಮುಗಿಸಿ ಪ್ರೌಢಶಿಕ್ಷಣವನ್ನು ಮಾವಿನಕೆರೆಯ ಜವಾಹರ್ ನವೋದಯ ವಿದ್ಯಾಲಯದಲ್ಲಿ ಪಡೆದರು. ಹಾಸನದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯದಲ್ಲಿ ಬಿಎಎಂಎಸ್, ಎಂಡಿ ಪಡೆದರು. ಬೆಂಗಳೂರು ರಾಜೀವ್ ಗಾಂಧಿ ಆರೋಗ್ಯ ವಿವಿಯಲ್ಲಿ ಪಿಹೆಚ್ಡಿ ಪಡೆದರು.

Continue Reading

Hassan

ಅರೇಳ್ಳಿ: ಜ.26 ರಂದು 207ನೇ ಭೀಮ ಕೋರೇಗಾಂವ್ ವಿಜಯೋತ್ಸವ ಆಚರಣೆ

Published

on

ಹಾಸನ: ಸಂವಿಧಾನ ದಿನಾಚರಣೆ ಅಂಗವಾಗಿ ಜನವರಿ 26ರ ರಂದು ಬೇಲೂರು ತಾಲೂಕಿನ ಅರೇಳ್ಳಿಯಲ್ಲಿ 207ನೇ ಭೀಮ ಕೋರೇಗಾಂವ್ ವಿಜಯೋತ್ಸವ ಆಚರಿಸಲಾಗುವುದು ಎಂದು ದಲಿತ ಮುಖಂಡರಾದ ಅರೆಹಳ್ಳಿ ನಿಂಗರಾಜು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಭೀಮ ಕೋರೆಂಗಾವ್ ಯುದ್ಧ ದಲಿತರ ಸ್ವಾಭಿಮಾನದ ಪ್ರತೀಕವಾಗಿದೆ ಕೇವಲ ೫೦೦ ಜನ ಮಹರ್ ಸೈನಿಕರು ೨೮,೦೦೦ ಪೇಶ್ವೆ ಸೈನಿಕರನ್ನು ಬಗ್ಗುಬಡಿದ ವಿಜಯದ ದಿನವೇ ಭೀಮಾ ಕೋರೇಗಾಂವ್ ವಿಜಯೋತ್ಸವವನ್ನು ಪ್ರತಿ ವರ್ಷವೂ ಹರೇಹಳ್ಳಿಯಲ್ಲಿ ಆಚರಿಸಲಾಗುತ್ತಿದ್ದು ಅದೇ ರೀತಿ ಈ ವರ್ಷವೂ ವಿಜೃಂಭಣೆಯ ಉತ್ಸವ ನಡೆಯಲಿದೆ ಎಂದರು. ಜನವರಿ ೨೬ ರಂದು ಬೆಳಗ್ಗೆ ೧೧ ಗಂಟೆಗೆ ಅಂಬೇಡ್ಕರ್ ವೃತ್ತದ ಬಳಿ ಇರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಹೊರಡಲಿರುವ ಬೃಹತ್ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯ ಅಂಬೇಡ್ಕರ್ ಅಭಿಮಾನಿಗಳು ಹಾಗೂ ಅನುಯಾಯಿಗಳು ಭಾಗವಹಿಸಲಿದ್ದಾರೆ. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಲಿದ್ದು, ಅಂಬೇಡ್ಕರ್ ಭಾವಚಿತ್ರ ಹಾಗೂ ವಿಜಯ ಸ್ತಂಭದ ಮೆರವಣಿಗೆ ನಡೆಯಲಿದೆ ಎಂದರು.

ಅದೇ ದಿನ ಸಂಜೆ ೬ ಸುಮಾರಿಗೆ ಪಟ್ಟಣದ ಪದವಿಪೂರ್ವ ಕಾಲೇಜು ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮಕ್ಕೆ, ಬಾಬಾಸಾಹೇಬ್ ಅಂಬೇಡ್ಕರ್ ವಿಚಾರವಾದಿ ಬಿ.ಗೋಪಾಲ್, ಅಂಬೇಡ್ಕರ್ ಅನುಯಾಯಿ ಹಾಗೂ ನಟ ಚೇತನ್ ಅಹಿಂಸಾ, ಹಾಸ್ಯನಟ ಸಾಧುಕೋಕಿಲ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ವಿಚಾರಧಾರೆಗಳು ಹಾಗೂ ಭೀಮ ಕೋರೆಗಾಂವ್ ವಿಜಯೋತ್ಸವ ವಿಚಾರಗಳನ್ನು ಹಂಚಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಊಟ ಹಾಗೂ ಉಪಕಾರದ ವ್ಯವಸ್ಥೆ ಕಲ್ಪಿಸಲಾಗಿದ್ದು, ನಡೆಯಲಿರುವ ಅದ್ದೂರಿ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯ ಅಂಬೇಡ್ಕರ್ ಅಭಿಮಾನಿಗಳು, ಸಾರ್ವಜನಿಕರು, ಅರೆಹಳ್ಳಿ ಗ್ರಾಮಸ್ಥರು ಹಾಗೂ ಆ ಭಾಗದ ಎಲ್ಲಾ ಮುಖಂಡರು ಜನಪ್ರತಿನಿಧಿಗಳು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ವಿಜಯೋತ್ಸವ ಸಮಿತಿಯ ಅಧ್ಯಕ್ಷ ಎಸ್. ವಿರೂಪಾಕ್ಷ, ಲಿಂಗರಾಜು, ವಿಜಯೋತ್ಸವ ಸಮಿತಿಯ ಉಪಾಧ್ಯಕ್ಷ ಮಲ್ಲಿಕಾರ್ಜುನ್, ರಮೇಶ್, ಸಿದರಾಜು, ದಿನೇಶ್, ಸೋಮಶೇಖರ್ ಕುಮಾರ್ ಇತರರು ಉಪಸ್ಥಿತರಿದ್ದರು.

Continue Reading

Hassan

ಸಣ್ಣ ಕೈಗಾರಿಕ ಇಂಡಸ್ಟ್ರೀಯಸ್ ಅಸೋಸಿಯೇಷನ್ ಭವನದ ೨ನೇ ಅಂತಸ್ಥಿನ ಭವನದ ಶಂಕುಸ್ಥಾಪನೆ

Published

on

ಹಾಸನ: ನಗರದ ಡೈರಿ ವೃತ್ತ, ಅರಸೀಕೆರೆ ರಸ್ತೆ ಬಳಿ ಕೈಗಾರಿಕ ಪ್ರದೇಶದಲ್ಲಿ ಸಣ್ಣ ಕೈಗಾರಿಕ ಇಂಡಸ್ಟ್ರೀಯಸ್ ಅಸೋಸಿಯೇಷನ್ ಭವನದ ೨ನೇ ಅಂತಸ್ಥಿನ ಭವನದ ಶಂಕುಸ್ಥಾಪನೆ ಸಮಾರಂಭಕ್ಕೆ ಶುಕ್ರವಾರದಂದು ಗುದ್ದಲಿ ಪೂಜೆ ಸಲ್ಲಿಸಿ ಕಟ್ಟಡ ನಿರ್ಮಾಣಕ್ಕೆ ನಗರಸಭೆ ಅಧ್ಯಕ್ಷರಾದ ಎಂ. ಚಂದ್ರೇಗೌಡರು ಚಾಲನೆ ನೀಡಿದರು.

ನಂತರ ಮಾಧ್ಯಮದೊಂದಿಗೆ ಮಾತನಾಡಿ, ನಗರಸಭೆ ಅಧ್ಯಕ್ಷರಾದ ಎಂ. ಚಂದ್ರೇಗೌಡ ಮಾತನಾಡಿ, ಎರಡನೇ ಅಂತಸ್ಥಿತನ ನೂತನ ಕಟ್ಟಡ ನಿರ್ಮಾಣಕ್ಕೆ ಈಗಾಗಲೇ ಗುದ್ದಲಿಪೂಜೆ ನೆರವೇರಿದೆ. ಈ ಕಟ್ಟಡ ಸಂಘಕ್ಕೆ ಉಪಯೋಗವಾಗಲಿ ಎಂದು ಶುಭ ಹಾರೈಸುವುದಾಗಿ ಹೇಳಿದರು.

ಎಫ್.ಕೆ.ಸಿ.ಸಿ.ಐ. ಐಟಿ-ಬಿಟಿ ಸಮಿತಿ ಅಧ್ಯಕ್ಷ ಹೆಚ್.ಎ. ಕಿರಣ್ ಮಾತನಾಡಿ, ಸಂಘದ ಎರಡನೇ ಹಂತದ ಶಿಲನ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದ್ದು, ಕಳೆದ ಎರಡು ದಶಕಗಳಿಂದ ನಮ್ಮ ಸಂಘದ ಕಾರ್ಯಕ್ರಮಗಳು ಹಾಗೂ ಕಾರ್ಯವ್ಯಾಪ್ತಿ ಜಿಲ್ಲಾಧ್ಯಂತ ಹರಡಿದೆ. ಎರಡು ಸಾವಿರ ಜನ ಇದ್ದಂತಹ ಉದ್ಯಮಿಗಳು ಜಿಲ್ಲಾಧ್ಯಂತ ಈಗ ೨೦ ಸಾವಿರಕ್ಕೂ ಹೆಚ್ಚುಜನ ಉದ್ಯಮಿಗಳು ಇದ್ದಾರೆ. ಈ ಭಾಗವು ಕೂಡ ನಗರಸಭೆ ವ್ಯಾಪ್ತಿಗೆ ಸೇರಿದ್ದು, ಇ-ಖಾತೆ ವಿಚಾರವಾಗಿಯೂ ಕೂಡ ನಗರಸಭೆ ಅಧ್ಯಕ್ಷರು ಮಾಡಿಕೊಡುವ ಭರವಸೆ ನೀಡಿದ್ದಾರೆ ಎಂದರು.

ನಿರ್ಮಾಣವಾಗುತ್ತಿರುವ ಎರಡನೇ ಅಂತಸ್ಥಿನ ಕಟ್ಟಡವು ಕೈಗಾರಿಕ ಉದ್ಯಮಿಗಳ ಕಾರ್ಯಕ್ರಮಕ್ಕೆ ಮತ್ತು ಇಂಡಸ್ಟ್ರಿಯಲ್ ಕಾರ್ಯಕ್ರಮ ನಡೆಸುವುದಕ್ಕೆ ಒಂದು ಹಾಲ್ ನಿರ್ಮಾಣ ಮಾಡಲಾಗುತ್ತಿದೆ. ಮೊದಲನೇ ಅಂತಸ್ಥನ್ನು ಸ್ಕಿಲ್ ಡೆವಲಪ್ ಮೆಂಟ್ ಗೆ ಈಗಾಗಲೇ ಉದ್ಘಾಟನೆಗೊಂಡಿದೆ. ಉದ್ಯಮಿಗಳ ಹಲವಾರು ಜನರಿಗೆ ಕಾರ್ಯಕ್ರಮವನ್ನು ಸದ್ಯದಲ್ಲೆ ಮಾಡಲಾಗುವುದು ಎಂದು ಹೇಳಿದರು.

ಇದೆ ಸಂದರ್ಭದಲ್ಲಿ ಹೆಚ್.ಎ.ಡಿ.ಎಸ್.ಎಸ್.ಐ.ಎ. ಅಧ್ಯಕ್ಷ ಆರ್. ಶಿವರಾಮ್, ಉಪಾಧ್ಯಕ್ಷ ಪ್ರಕಾಶ್ ಎಸ್. ಯಾಜಿ, ಪ್ರಧಾನ ಕಾರ್ಯದರ್ಶಿ ಎನ್. ಸುದರ್ಶನ್, ಲಘು ಒದ್ಯೋಗ ಭಾರತೀ ಪ್ರಸನ್ನ ಕುಮಾರ್ ಮತ್ತು ಶಿವಾನಂದ್ ಇತರರು ಉಪಸ್ಥಿತರಿದ್ದರು.

Continue Reading

Trending

error: Content is protected !!