Connect with us

Chamarajanagar

ಜಲಾಯನ‌ ಯಾತ್ರೆಗೆ ಚಾಲನೆ ನೀಡಿದ ಜಂಟಿ ನಿರ್ದೇಶಕ ಎಸ್ ಎಸ್ ಅಭೀದ್

Published

on

ವರದಿ : ಗೋವಿಂದ ಕೆ ಗೌಡ ಹನೂರು

ಹನೂರು: ಪ್ರತಿಯೊಬ್ಬ ರೈತರು ಮಣ್ಣು ಮತ್ತು ನೀರಿನ ಸಂರಕ್ಷಣೆ ಮಾಡುವ ಕಾರ್ಯಕ್ಕೆ ಮುಂದಾಗಬೇಕು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಎಸ್ ಎಸ್ ಅಭೀದ್ ತಿಳಿಸಿದರು.

ಹನೂರು ತಾಲೂಕಿನ ಕೊರಟ್ಟಿ ಹೊಸೂರು ಗ್ರಾಮದಲ್ಲಿ ಕೃಷಿ ಇಲಾಖೆ ಮತ್ತು ಜಲಾನಯನ ಅಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಲಾಯನ ಯಾತ್ರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿಯೊಂದು ಹನಿ ಹನಿ ನೀರನ್ನು ಸಂರಕ್ಷಣೆ ಮಾಡಬೇಕಾಗಿರುವುದು ಪ್ರತಿಯೊಬ್ಬರ ಜವಾಬ್ದಾರಿ. ಬೇಸಿಗೆ ಕಾಲದಲ್ಲಿ ನೀರಿನ ಬಳಕೆಯನ್ನು ಮುನ್ನೆಚ್ಚರಿಕೆಯಿಂದ ಬಳಸುವ ಮೂಲಕ ನಾವು ಪರಿಸರವನ್ನು ಸಂರಕ್ಷಣೆ ಮಾಡಿಕೊಳ್ಳಬಹುದು.. ಮುಂದಿನ ಪೀಳಿಗೆಗೆ ಸ್ವಚ್ಛ ಹಾಗೂ ಸಮೃದ್ಧ ಪರಿಸರವನ್ನು ಕಲ್ಪಿಸಬಹುದು. ಈ ನಿಟ್ಟಿನಲ್ಲಿ ಕೃಷಿ ಇಲಾಖೆಯಿಂದ ದೊರೆಯುವ ವೈಜ್ಞಾನಿಕ ತಂತ್ರಜ್ಞಾನ ಹಾಗೂ ಮಾರ್ಗದರ್ಶನಗಳನ್ನು ಅನುಸರಿಸಿದರೆ ರೈತರು ಕೃಷಿಯಲ್ಲಿ ಆರ್ಥಿಕವಾಗಿ ಸಬಲರಾಗಬಹುದು. ಜೊತೆಗೆ ಮಣ್ಣು ಫಲವತ್ತಾಗಿ, ಪರಿಸರ ಸ್ನೇಹಿಯಾಗಿಸಲು ಸಾಧ್ಯವಿದೆ. ಈ ಎಲ್ಲಾ ಕಾರ್ಯಕ್ರಮವು ನಮ್ಮ ಪರಿಸರ ಮತ್ತು ಕೃಷಿಯ ಭವಿಷ್ಯವನ್ನು ಸುರಕ್ಷಿತವಾಗಿಡಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ರಾಮಾಪುರ ರೈತ ಸಂಪನ್ಮೂಲ ಕೇಂದ್ರದ ಕೃಷಿ ಅಧಿಕಾರಿ ಮನೋಹರ್ ಮಾತನಾಡಿ ದೇಶಕ್ಕೆ ಸೈನಿಕ ಎಷ್ಟು ಮುಖ್ಯವೋ, ರೈತನು ಕೂಡ ಅಷ್ಟೇ ಮುಖ್ಯ, ಸೈನಿಕ ದೇಶವನ್ನು ಸಂರಕ್ಷಣೆ ಮಾಡಿದರೆ ರೈತ ಇಡೀ ದೇಶಕ್ಕೆ ಅನ್ನ ನೀಡುತ್ತಾನೆ. ರೈತರು ವಲಸೆ ಹೋಗುವುದನ್ನು ತಪ್ಪಿಸಲು ಕೃಷಿ ಇಲಾಖೆ ವತಿಯಿಂದ ಸರ್ಕಾರ ವಿವಿಧ ಯೋಜನೆಗಳ ಮೂಲಕ ಮನೆಯ ಬಾಗಿಲಿಗೆ ಹಲವು ಕಾರ್ಯಕ್ರಮಗಳನ್ನು ತಲುಪಿಸುತ್ತಿದೆ. ಪ್ರತಿಯೊಬ್ಬರು ಆಗಾಗ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಸರ್ಕಾರದಿಂದ ಸಿಗುವ ಸೌಲತ್ತುಗಳ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಲಾನಯನ ಕಾರ್ಯಕ್ರಮದ ಬಗ್ಗೆ ಚಿತ್ರಕಲೆ ಪ್ರಬಂಧ ಸೇರಿ ಹಲವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ ಪ್ರಥಮ ದ್ವಿತೀಯ ಹಾಗೂ ತೃತೀಯ ಬಹುಮಾನ ಹಾಗೂ ಪ್ರಶಸ್ತಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ನೀರು ಮಣ್ಣಿನ ಪಾತ್ರದ ಮಹತ್ವದ ಕುರಿತು ಜನರಲ್ಲಿ ಹರಿವು ಮೂಡಿಸಲು ಜಲಾಯನ ಯಾತ್ರೆಯ ಕಿರುಚಿತ್ರವನ್ನು ಪ್ರದರ್ಶನದ ಜೊತೆಗೆ ರಂಗವಾಹಿನಿ ಚಾಮರಾಜನಗರ ತಂಡದಿಂದ ನಾಟಕ ಪ್ರದರ್ಶನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀ ನಟರಾಜು, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಗಸ್ವಾಮಿ, ಅಧಿಕಾರಿಗಳಾದ ನಿಶಾಂತ್, ನಾಗೇಂದ್ರ, ಧರ್ಮೇಂದ್ರ, ಉಪೇಂದ್ರ, ಜಗದೀಶ್ ಸ್ಥಳಿಯ ಮುಖಂಡರಾದ ಶಿವಣ್ಣ ಪೊನ್ನು ಶೆಟ್ಟಿ ಜಗ ಮಲ್ಲೇಶ್ ಸೇರಿದಂತೆ ಇತರರು ಹಾಜರಿದ್ದರು.

Continue Reading

Chamarajanagar

ಪಿಎಂ ಶ್ರಮ ಯೋಗಿ ಮಾನ್‌ಧನ್ ಯೋಜನೆ ಸದುಪಯೋಗ ಪಡೆದುಕೊಳ್ಳಿ: ಅಮ್ಜದ್ ಪಾಷಾ

Published

on

ಯಳಂದೂರು: ಪ್ರಧಾನಮಂತ್ರಿ ಶ್ರಮ ಯೋಗಿ ಮನ್‌ಧನ್ ಯೋಜನೆಯ ಮೂಲಕ ಅಸಂಘಟಿತ ವಲಯ ಕಾರ್ಮಿಕರು 60 ವರ್ಷದ ನಂತರ ಮಾಸಿಕ ಪಿಂಚಣಿ ಮೂರು ಸಾವಿರ ರೂಪಾಯಿಗಳನ್ನು ಪಡೆಯಬಹುದು ಎಂದು ಜಿಲ್ಲಾ ಕೌಶಲ್ಯ ಅಭಿವೃದ್ಧಿ ಇಲಾಖೆ ಅಭಿಯಾನ ವ್ಯವಸ್ಥಾಪಕ ಅಮ್ಜದ್ ಪಾಷಾ ತಿಳಿಸಿದರು.

ಅವರು ಪಟ್ಟಣದ ಸಿಡಿಎಸ್ ಸಮುದಾಯ ಭವನದಲ್ಲಿ ಪಟ್ಟಣ ಪಂಚಾಯಿತಿ, ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಚಾಮರಾಜನಗರ ವತಿಯಿಂದ ಹಮ್ಮಿಕೊಂಡಿದ್ದ ಸ್ವ ನಿಧಿ ಸೇ ಸಮೃದ್ಧಿ ಯೋಜನೆ ಅಡಿ ಬೀದಿ ಬದಿ ವ್ಯಾಪಾರಿಗಳು ಮತ್ತು ಅವರ ಕುಟುಂಬ ಸದಸ್ಯರಿಗೆ ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆಯ ಜೋಡಣೆ ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕೇಂದ್ರ ಸರ್ಕಾರವು ಚಂದಾದಾರರು ಪಾವತಿಸುವ ವಂತಿಕೆಗೆ ಸಮಾನಾಂತರ ವಂತಿಕೆಯನ್ನು ಪಿಂಚಣಿ ಖಾತೆಗೆ ಪಾವತಿಸುತ್ತದೆ ಫಲಾನುಭವಿಯ ವಯಸ್ಸು 60 ವರ್ಷ ಪೂರ್ಣಗೊಂಡ ನಂತರ ತಿಂಗಳಿಗೆ 3000 ರೂಪಾಯಿಗಳ ಖಚಿತ ಕನಿಷ್ಠ ಮಾಸಿಕ ಪಿಂಚಣಿಯನ್ನು ಪಡೆಯಲು ಅರ್ಹರಾಗಿರುತ್ತಾರೆ. ಯೋಜನೆಗೆ ಒಳಪಡುವ ಕಾರ್ಮಿಕರು ಆಸಂಘಟಿತ ವಲಯದ ಕಾರ್ಮಿಕರಾಗಿದ್ದು 18ರಿಂದ 40 ವರ್ಷದೊಳಗಿರಬೇಕು ಅವರ ಮಾಸಿಕ ಆದಾಯ 15,000 ಕ್ಕಿಂತ ಕಡಿಮೆ ಇರಬೇಕು, ಅವರು ಆದಾಯ ತೆರಿಗೆ, ಇ ಎಸ್ ಐ, ಪಿ ಎಫ್, ಎನ್ ಪಿ ಎಸ್ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರಬಾರದು,ಬ್ಯಾಂಕ್ ಉಳಿತಾಯ ಖಾತೆ ಮತ್ತು ಆಧಾರ್ ಸಂಖ್ಯೆ ಹೊಂದಿರಬೇಕು ಎಂದು ತಿಳಿಸಿದರು.

ಜಿಲ್ಲಾ ಕೌಶಲ್ಯ ಅಭಿವೃದ್ಧಿ ಇಲಾಖೆಯ ಅಭಿಯಾನ ವ್ಯವಸ್ಥಾಪಕರಾದ ಡಾಕ್ಟರ್ ಪುಟ್ಟಸ್ವಾಮಿ, ಎಮ್ ಟಿ ಓ ಅನ್ಸಾರ್ ಖಾನ್, ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಮಹೇಶ್ ಕುಮಾರ್, ಪಟ್ಟಣ ಪಂಚಾಯಿತಿ ಸಮುದಾಯ ಸಂಘಟನಾಧಿಕಾರಿ ಪರಶಿವಮೂರ್ತಿ, ಕಾರ್ಮಿಕ ಇಲಾಖೆ ಸಿಬ್ಬಂದಿಗಳಾದ ಸುಚಿತ್ರ, ಪ್ರಸಾದ್, ಸಿ ಎಸ್ ಸಿ ಸೆಂಟರ್ ಸಿಬ್ಬಂದಿಗಳು, ಪಪಂ ಸಿಬ್ಬಂದಿಗಳಾದ ಗಣೇಶ್, ರಿಹಾನ, ಬೀದಿ ಬದಿ ವ್ಯಾಪಾರಿಗಳು ಹಾಜರಿದ್ದರು.

Continue Reading

Chamarajanagar

ಯಳಂದೂರು: ಪಟ್ಟಣ ಪಂಚಾಯಿತಿ ವತಿಯಿಂದ ವಿವಿಧ ಬಾಬ್ತುಗಳಿಗೆ ಬಹಿರಂಗ ಹರಾಜು

Published

on

ಯಳಂದೂರು: ಪಟ್ಟಣ ಪಂಚಾಯಿತಿ ಕಚೇರಿ ಆವರಣದಲ್ಲಿ ಪಟ್ಟಣ ಪಂಚಾಯಿತಿ ವತಿಯಿಂದ ವಿವಿಧ ಬಾಬ್ತುಗಳಿಗೆ ಬಹಿರಂಗ ಹರಾಜು ಮಾಡಲಾಯಿತು.

ಪಟ್ಟಣ ಪಂಚಾಯಿತಿ ವಾರದ ಸಂತೆ ಸುಂಕ ವಸೂಲಾತಿ ಹಕ್ಕು ರೂ. 1,57,000 ರೂಪಾಯಿಗಳಿಗೆ, ಪಟ್ಟಣ ಪಂಚಾಯಿತಿ ಬಸ್ ನಿಲ್ದಾಣದ ಸುಂಕ ವಸೂಲಾತಿ ಹಕ್ಕು 2,5,000 ರೂಪಾಯಿಗಳಿಗೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನೆಲ ಸುಂಕ ವಸೂಲಾತಿ ಹಕ್ಕು 3,87,000 ರೂಪಾಯಿಗಳಿಗೆ, ಎಲೆಕೇರಿ ಮಾಂಸದ ಅಂಗಡಿ 26 ಸಾವಿರ ರೂಪಾಯಿಗಳಿಗೆ, ಎಲೆಕೇರಿ ಮಾಂಸದ ಅಂಗಡಿ 2 ಹನ್ನೊಂದು ಸಾವಿರ ರೂಪಾಯಿಗಳಿಗೆ, ಎಲೆಕೇರಿ ಕೋಳಿ ಮಾಂಸದ ಅಂಗಡಿ 55,000 ರೂಪಾಯಿಗಳಿಗೆ,ಎಲೆಕೇರಿ ಕೋಳಿ ಮಾಂಸದ ಅಂಗಡಿ -2 25,000 ರೂಪಾಯಿಗಳಿಗೆ ಮಾರಾಟವಾಯಿತು.

ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮಹೇಶ್ ಕುಮಾರ್ ಮಾತನಾಡಿ ಹರಾಜಿನಲ್ಲಿ ಬಿಡ್ ಆದ ಟೆಂಡರ್ ಮೊತ್ತಕ್ಕೆ ಶೇಕಡಾ 18 ರಷ್ಟು ಶೇಕಡಾ 18ರಷ್ಟು ಜಿಎಸ್‌ಟಿ ತೆರಿಗೆಯನ್ನು ಪಾವತಿಸಬೇಕು, ಪಟ್ಟಣ ಪಂಚಾಯಿತಿಯಿಂದ ನೀಡುವ ನಿರ್ದೇಶನಗಳಿಗೆ ಬದ್ಧರಾಗಿರಬೇಕು, ಏಕ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದರು.

ಪಟ್ಟಣ ಪಂಚಾಯತಿ ಅಧ್ಯಕ್ಷರಾದ ಲಕ್ಷ್ಮಿ ಮಲ್ಲು, ಉಪಾಧ್ಯಕ್ಷ ಶಾಂತಮ್ಮ, ಸದಸ್ಯರಾದ ಮಹೇಶ್, ರಂಗನಾಥ್, ಪ್ರಭಾವತಿ ರಾಜಶೇಖರ್, ಸುಶೀಲ ಪ್ರಕಾಶ್, ಶ್ರೀಕಂಠ ಮೂರ್ತಿ, ಮುನಾವಾರ ಬೇಗ್, ಪಟ್ಟಣ ಪಂಚಾಯಿತಿ ಸಿಬ್ಬಂದಿಗಳಾದ ಮಂಜು ಮಲ್ಲು,  ಲಕ್ಷ್ಮಿ , ಜಯಲಕ್ಷ್ಮಿ, ವಿಜಯ, ಮುಖಂಡರಾದ  ಮಲ್ಲು, ನಿಂಗರಾಜು, ಬಿಡ್ ದಾರರು, ಸಾರ್ವಜನಿಕರು ಹಾಜರಿದ್ದರು.

Continue Reading

Chamarajanagar

ಕೊಳ್ಳೇಗಾಲದಲ್ಲಿ ಭೀಕರ ಅಪಘಾ*ತ: ಇಬ್ಬರು ಮಹಿಳೆಯರ ಧಾರುಣ ಸಾ*ವು

Published

on

ಕೊಳ್ಳೇಗಾಲ ದ ಸಿದ್ದಯ್ಯನಪುರ ಗ್ರಾಮದ ಬಳಿ ಭೀಕರ ಅಪಘಾತ : ಇಬ್ಬರು ಮಹಿಳೆಯರು ಸಾವು,10 ಜನರಿಗೆ ಗಾಯ.

ವರದಿ :ಸುನೀಲ್ ಪ್ರಶಾಂತ್

ಕೊಳ್ಳೇಗಾಲ ಪಟ್ಟಣದ ಸಿದ್ದಯ್ಯನಪುರ ಗ್ರಾಮದ ಬಳಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಟಾಟಾ ಎಎಸ್ ಬೈಕ್ ನಡುವೆ ಮುಖ ಮುಖ ಡಿಕ್ಕಿ ಸ್ಥಳದಲ್ಲಿ ಇಬ್ಬರು ಮಹಿಳೆಯರ ಸಾವು.
ಕೊಳ್ಳೇಗಾಲ, ಶ್ರೀ ಮಲೆ ಮಹದೇಶ್ವರ ಬೆಟ್ಟ ದ ರಸ್ತೆ ಯಲ್ಲಿ ಬೆಳಿಗ್ಗೆ ಕೆಎಸ್ಆರ್ಟಿಸಿ ಹಾಗೂ ಟಾಟಾ ಎಎಸ್ ಬೈಕ್ ನಡುವೆ ಅಪಘಾತದಲ್ಲಿ ಹನೂರು ತಾಲ್ಲೂಕಿನ ಬಾಣಾವರ ಗ್ರಾಮದ 50 ವರ್ಷ ದ ಮಹಾದೇವಮ್ಮ,28 ವರ್ಷ ದ ಶೃತಿ ಮೃತ ಪಟ್ಟರೆ 10 ಕ್ಕೂ ಜನ ಗಾಯ ಗೊಂಡಿದಾರೆ.
ಗಾಯಳು ಗಳನ್ನು ಪಟ್ಟಣದ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆಲವರನ್ನು ಹೆಚ್ಚಿನ ಚಿಕಿತ್ಸೆ ಗೆ ಮೈಸೂರು, ಹಾಗೂ ಚಾಮರಾಜನಗರ ಜಿಲ್ಲಾ ಆಸ್ಪತ್ರೆ ಗೆ ಕಳುಹಿಸಲಾಗಿದೆ

Continue Reading

Trending

error: Content is protected !!