Connect with us

Politics

ರಾಹುಲ್ ಗಾಂಧಿ ಹಿಟ್ಲರ್ ಧೋರಣೆ ‘ಕೈ’ ಅಧಃಪತನಕ್ಕೆ ಮುನ್ನುಡಿ?

Published

on

ವಿಶೇಷ ವರದಿ: ಪ್ರೀತಮ್ ಹೆಬ್ಬಾರ್

ರಾಹುಲ್ ವಿರುದ್ಧ ಆಡಿದ ಒಂದೇ ಒಂದು ಮಾತಿಗೆ ಸಿದ್ದರಾಮಯ್ಯನವರ ಆಪ್ತರಾದ ಕೆ.ಎನ್. ರಾಜಣ್ಣನವರನ್ನು ಕಿತ್ತೆಸೆಯಲಾಗಿದೆ. ಈ ಬಗ್ಗೆ ಸಾರ್ವಜನಿಕರು ಹೇಳುವಂತೆ ಕಾಂಗ್ರೆಸ್ ಅಂದರೆ ಹೀಗೆ, ಹೈ ಕಮಾಂಡ್ ಗೆ ತಗ್ಗಿ ಬಗ್ಗಿ ನಡೆದಿಲ್ಲ ಅಂದರೆ ಹೈಕಮಾಂಡ್ ನಿಂದ ಹಿಟ್ಲರ್ ಧೋರಣೆ ಆಗುತ್ತೆ ಅನ್ನೊದು ಮತ್ತೊಮ್ಮೆ ಜಗಜ್ಜಾಹಿರವಾಗಿದೆ ಎಂಬುವುದು ಸಾರ್ವಜನಿಕರ ಆರೋಪವಾಗಿದೆ. ಹಿಂದೊಮ್ಮೆ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಕೂಡ ತನ್ನ ಅಧಿಕಾರ ಕಳೆದುಕೊಳ್ಳುವ ಭೀತಿಯಿಂದ ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿ ತನ್ನನ್ನು ತಾನು ರಕ್ಷಿಸಿಕೊಳ್ಳಲು ಹರಸಾಹಸ ಪಟ್ಟಿದ್ದರು ಎಂಬುವುದು ಇನ್ನೂ ಕೂಡ ಇತಿಹಾಸ ಪುಟದಲ್ಲಿ ಅಚ್ಚಳಿಯದೆ ಉಳಿದಿದೆ.

ರಾಗಾ ಪ್ರತಾಪಕ್ಕೆ ರಾಜಣ್ಣ ಕಿಕ್ ಔಟ್!

ಸೋನಿಯಾ ಗಾಂಧಿ ಕುಟುಂಬದ ಹಿಡಿತ ಕಾಂಗ್ರೆಸ್ ಮೇಲೆ ಎಷ್ಟಿದೆ ಅಂದರೆ ರಾಜಣ್ಣ ಈ ಹಿಂದೆ ಹಲವು ಎಡವಟ್ಟು ಹೇಳಿಕೆಯನ್ನು ನೀಡಿದ್ದರೂ ಕೂಡ ಅವರ ಮೇಲೆ ಯಾವುದೇ ಕ್ರಮವನ್ನು ಕೈಗೊಳ್ಳದಿದ್ದ ಹೈಕಮಾಂಡ್ ರಾಹುಲ್ ಗಾಂಧಿ ಮಾತಿಗೆ ಅಪಸ್ವರ ಎತ್ತಿದ ಕೂಡಲೇ ರಾಜಣ್ಣರವರನ್ನು ಕಿಕ್ ಔಟ್ ಮಾಡಿ ಆದೇಶ ಹೊರಡಿಸಿದ್ದು ವಿಪರ್ಯಾಸವೇ ಸರಿ.
ಕೆ.ಎನ್. ರಾಜಣ್ಣ ರಾಜಕೀಯ ಹಿನ್ನೆಲೆ ನೋಡೋದಾದರೆ ಅವರು ರಾಜಕೀಯದಲ್ಲಿ ಸಾಕಷ್ಟು ಅನುಭವವನ್ನು ಹೊಂದಿದ್ದಾರೆ. ಕೆ.ಎನ್. ರಾಜಣ್ಣ ಸಹಕಾರಿ ಕ್ಷೇತ್ರದಿಂದ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟದ ನಿರ್ದೇಶಕರಾಗಿ ಮತ್ತು ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್‌ನ ಅಧ್ಯಕ್ಷರಾಗಿಯು ಕೆ.ಎನ್. ರಾಜಣ್ಣ ಸೇವೆ ಸಲ್ಲಿಸಿದ್ದಾರೆ. 1972ರಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಅವರು 1998 ರಿಂದ 2004 ರವರೆಗೆ ವಿಧಾನ ಪರಿಷತ್ ಸದಸ್ಯರಾಗಿದ್ದರು. 2004ರಲ್ಲಿ ಬೆಳ್ಳಾವಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಮಧುಗಿರಿಯಲ್ಲಿ ನಡೆದ ಉಪಚುನಾವಣೆಯಲ್ಲೂ ಕೂಡ ರಾಜಣ್ಣ ಜಯಭೇರಿ ಬಾರಿಸಿದ್ದರು.


ನಂತರ 2013 ರಲ್ಲಿ ಮಧುಗಿರಿ ಕ್ಷೇತ್ರದಿಂದ ಸ್ಪರ್ಧಿಸಿ ಭರ್ಜರಿಯಾಗಿ ಗೆಲುವು ಸಾಧಿಸಿದ್ದರು 2023ರ ಚುನಾವಣೆಯಲ್ಲೂ ಕೂಡ ಮತ್ತೆ ಮಧುಗಿರಿಯಿಂದಲೇ ಸ್ಪರ್ಧಿಸಿ ಕರ್ನಾಟಕ ಸರ್ಕಾರದಲ್ಲಿ ಸಹಕಾರ ಸಚಿವರಾಗಿದ್ದರು.

ರಾಜಣ್ಣಗೆ ಮುಳುವಾದ ಅವರ ನಾಲಿಗೆ!

ರಾಜಣ್ಣ ಸಚಿವರಾದಾಗಿನಿಂದಲೂ ಅವರಿಗೆ ಅವರ ನಾಲಿಗೆಯೇ ಮುಳುವಾಗಿದೆ. ಸದಾ ಒಂದಲ್ಲ ಒಂದು ಯಡವಟ್ಟು ಹೇಳಿಕೆಯಿಂದ ಸಾಕಷ್ಟು ಬಾರಿ ಪಕ್ಷಕ್ಕೆ ಡ್ಯಾಮೇಜ್ ಆಗುವಂತಹ ಹೇಳಿಕೆ ನೀಡಿದ್ದರು. ಆದರೆ ಸಿದ್ದರಾಮಯ್ಯ ಅವರು ತನ್ನ ಆಪ್ತನನ್ನು ಹಲವು ಬಾರಿ ರಕ್ಷಿಸಿದ್ದರು. ಇದೀಗ ನೇರ ಹೈ ಕಮಾಂಡ್ ಗೆ ಟಕ್ಕರ್ ಕೊಡಲು ಹೋಗಿ ತಮ್ಮ ಸ್ಥಾನಕ್ಕೆ ತಾವೇ ಕೊಡಲಿ ಏಟು ಕೊಟ್ಟಹಾಗೆ ಆಗಿದೆ.

ಇತ್ತೀಚೆಗಷ್ಟೇ ರಾಜ್ಯಾದ್ಯಂತ ಸಾಕಷ್ಟು ಚರ್ಚೆಗೆ ಒಳಗಾಗಿದ್ದ ಹನಿ ಟ್ರ್ಯಾಪ್‌ಗೆ ಸಂಬಂಧಿಸಿದಂತೆ ರಾಜಣ್ಣ ನೀಡಿದ್ದ ಹೇಳಿಕೆ ತೀವ್ರ ಕೋಲಾಹಲಕ್ಕೆ ಕಾರಣವಾಗಿತ್ತು. ಸದನದಲ್ಲಿ ಕೂಡ ಈ ವಿಚಾರ ಚರ್ಚೆಯಾಗಿತ್ತು. ರಾಜಣ್ಣ ಅವರು ತಾವೂ ಸೇರಿ 48 ರಾಜಕಾರಣಿಗಳು ಹನಿ ಟ್ರ್ಯಾಪ್‌ಗೆ ಒಳಗಾಗಿದ್ದೇವೆ ಎಂದಿದ್ದರು. ಇದು ಎಲ್ಲೋ ಒಂದು ಕಡೆ ಪಕ್ಷಕ್ಕೆ ಮತ್ತು ಇವರ ವೈಯಕ್ತಿಕ ವರ್ಚಸ್ಸಿಗೂ ಸ್ವಲ್ಪ ಹಿನ್ನೆಡೆಯಾಗಿತ್ತು.

ಕಾಂಗ್ರೆಸ್ ಪಕ್ಷದಲ್ಲಿದ್ದ ಎಸ್ ಸಿ ಹಾಗೂ ಎಸ್ ಟಿ ಶಾಸಕರೊಂದಿಗೆ ಪ್ರತ್ಯೇಕವಾಗಿ ರಾಜಣ್ಣ ಸಭೆಯನ್ನು ಕೂಡ ನಡೆಸಿದ್ದರು ಇದೂ ಕೂಡ ಕೆಲವು ಕಾಂಗ್ರೆಸ್ ಮುಖಂಡರನ್ನು ಕೆರಳಿಸುವಂತೆ ಮಾಡಿತ್ತು.

ಮುಖ್ಯಮಂತ್ರಿ ಬದಲಾವಣೆ ಹಾಗೂ ಕಳೆದ ಕೆಲವು ತಿಂಗಳಿನಿಂದ ಸೆಪ್ಟೆಂಬರ್ ತಿಂಗಳಿನಲ್ಲಿ ರಾಜಕೀಯದಲ್ಲಿ ಬಹುದೊಡ್ಡ ಕ್ರಾಂತಿ ನಡೆಯಲಿದೆ ಎಂದೆಲ್ಲಾ ರಾಜಣ್ಣ ನೀಡಿದ್ದ ಹೇಳಿಕೆ ‘ಕೈ’ಗೆ ಹಿನ್ನೆಡೆಯಾಗಿತ್ತು.

ಇದೆಲ್ಲದರ ನಡುವೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆಯ ವಿರುದ್ಧ ಸ್ವತಃ ಡಿಕೆ ಶಿವಕುಮಾರ್ ಡಿಕೆ ಸುರೇಶ್ ಆದಿಯಾಗಿ ಸಾಕಷ್ಟು ಜನ ರಾಜಣ್ಣ ವಿರುದ್ಧವೇ ತಿರುಗಿ ಬಿದ್ದಿದ್ದರು.

ರಾಜಣ್ಣ ಜನರನ್ನು ತಮ್ಮ ಮಾತಲ್ಲೇ ತಿವಿದಿದ್ದಲ್ಲದೆ ಅಯೋಧ್ಯೆಯ ಶ್ರೀರಾಮನ ಬಗ್ಗೆಯೂ ಅಯೋಧ್ಯೆ ಟೆಂಟ್ ನಲ್ಲಿ 2 ಬೊಂಬೆಗಳನ್ನು ಇಟ್ಟು ಶ್ರೀರಾಮ ಎನ್ನುತ್ತಿದ್ದರು ಎಂದು ವಿವಾದಾತ್ಮಕ ಹೇಳಿಕೆ ನೀಡಿ ರಾಮ ಭಕ್ತರ ಕೆಂಗಣ್ಣಿಗೆ ಗುರಿಯಾಗಿದ್ದರು.
ಡಿಕೆ ವಿರುದ್ಧ ಮುಸುಕಿನ ಗುದ್ದಾಟ, ಸುರ್ಜೆವಾಲಗೂ ಡೋಂಟ್ ಕೇರ್ ಕೆ.ಎನ್. ರಾಜಣ್ಣ ಅವರು ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರವಾಗಿ ಸಾಕಷ್ಟು ಬಾರಿ ಹೇಳಿಕೆ ನೀಡಿದ್ದರು ಇದು ಕೆಲವು ಗೊಂದಲವನ್ನು ಉಂಟುಮಾಡಿತ್ತಲ್ಲದೆ ಡಿಕೆಶಿ ಕೂಡ ಇದರ ವಿರುದ್ಧ ಅಸಮಾಧಾನಗೊಂಡು ಹೈ ಕಮಾಂಡ್ ಗೂ ದೂರು ನೀಡಿದ್ದರು.

ಇದರ ಜೊತೆಗೆ ಡಿ.ಕೆ. ಶಿವಕುಮಾರ್ ವಿರುದ್ಧ ಪರೋಕ್ಷವಾಗಿ ಸಮರ ಸಾರಿದ್ಧ ರಾಜಣ್ಣ ಕೆಪಿಸಿಸಿ ಅಧ್ಯಕ್ಷರು ಬದಲಾವಣೆ ಆಗಲೇಬೇಕು ಎಂದು ಪಟ್ಟು ಹಿಡಿದರು. ಹಾಗೂ ರಾಜ್ಯ ಕಾಂಗ್ರೆಸ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಭೆಗೂ ಗೈರಾಗಿ ಅವರಿಗೆ ಶಾಸಕರ ಜೊತೆಗೆ ಸಭೆ ನಡೆಸಲು ಯಾವುದೇ ಅಧಿಕಾರ ಇಲ್ಲ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು.
5 ವರ್ಷ ‘ಸಿದ್ದು’ ಸಿಎಂ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದ ರಾಜಣ್ಣ ಹೋದಲೆಲ್ಲಾ ಸಿಎಂ ಬದಲಾವಣೆ ಇಲ್ಲ ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿ ಮುಂದುವರಿಯುತ್ತಾರೆ ಎಂಬ ಹೇಳಿಕೆ ಕಾಂಗ್ರೆಸ್ ನಲ್ಲೇ ಭಿನ್ನಮತಕ್ಕೆ ಕಾರಣವಾಗಿತ್ತು.

ರಾಹುಲ್ ಗೆ ಟಾಂಗ್ ರಾಜಣ್ಣಗೆ ಗೇಟ್ ಪಾಸ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗಷ್ಟೇ ಬಿಜೆಪಿ ವಿರುದ್ಧ ಮತಗಳ್ಳತನದ ವಿರುದ್ಧ ಬಹು ದೊಡ್ಡ ಆರೋಪ ಮಾಡಿದ್ದರು ಹಾಗೂ ಅದನ್ನು ದೊಡ್ಡ ಮಟ್ಟದಲ್ಲೇ ಸುದ್ದಿ ಮಾಡುವ ಯೋಜನೆ ಕೂಡ ಇತ್ತು ಆದರೆ ಇದಕ್ಕೆ ತದ್ವಿರುದ್ಧ ಎಂಬಂತೆ ಮತ ಪಟ್ಟಿ ಪರಿಷ್ಕರಣೆ ಆಗಿದ್ದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಎಂದು ರಾಜಣ್ಣ ಹೇಳುವ ಮೂಲಕ ರಾಹುಲ್ ಗಾಂಧಿಯ ಹೇಳಿಕೆಯ ವಿರುದ್ಧವಾಗಿ ತಮ್ಮ ಹೇಳಿಕೆಯನ್ನು ನೀಡಿದ ಪರಿಣಾಮ ತಮ್ಮ ಸಚಿವ ಸ್ಥಾನವನ್ನೇ ಕಳೆದುಕೊಳ್ಳುವಂತಾಯಿತು.

‘ಕೈ’ ಬಿಡದ ಕುಟುಂಬ ರಾಜಕಾರಣ

ಕಾಂಗ್ರೆಸ್ ಪಕ್ಷಕ್ಕೆ ಸಾಕಷ್ಟು ವರ್ಷಗಳ ಇತಿಹಾಸವಿದೆ ಇಂದಿರಾ ಗಾಂಧಿ ಅವರಿಂದ ಹಿಡಿದು ಇದೂವರೆಗೂ ಅವರ ಕುಟುಂಬದವರೆ ಹೇಳಿದಂತೆ ಪಕ್ಷ ನಡೆದುಕೊಳ್ಳುತ್ತಿರುವುದು ವಿಪರ್ಯಾಸವೇ ಸರಿ. ರಾಜಣ್ಣ ಮಂತ್ರಿಯಾದಗಿನಿಂದ ಹಿಡಿದು ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ಮಾತನಾಡುವವರೆಗೂ ಸಾಕಷ್ಟು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಆದರೆ ಅದಕೆಲ್ಲ ಕಾರಣ ಕೇಳಿ ನೋಟಿಸ್ ನೀಡದ ಕಾಂಗ್ರೆಸ್ ಹೈಕಮಾಂಡ್ ರಾಹುಲ್ ಗಾಂಧಿ ಹೇಳಿಕೆಯ ವಿರುದ್ಧ ರಾಜಣ್ಣ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಮಂತ್ರಿ ಪದವಿಗೆ ರಾಜೀನಾಮೆ ನೀಡೂವುದಕ್ಕೂ ಸಮಯ ನೀಡದೆ ಏಕಾಏಕಿಯಾಗಿ ಮಂತ್ರಿ ಪದವಿಯಿಂದ ಅನರ್ಹಗೊಳಿಸಿ ರಾಹುಲ್ ಗಾಂಧಿ ತಮ್ಮ ಹಿಟ್ಲರ್ ಧೋರಣೆಯನ್ನು ಪ್ರಯೋಗಿಸಿದ್ದು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಃಪಥನಕ್ಕೂ ಮುನ್ನಡಿಯಾಗಬಹುದು.

 

Continue Reading

Politics

ಡಿಕೆ ಬ್ರದರ್ಸ್‌ಗೆ ನೋಟಿಸ್‌ ಜಾರಿ ಮಾಡಿದ ದೆಹಲಿ ಪೊಲೀಸರು

Published

on

ನವದೆಹಲಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಮತ್ತು ಅವರ  ಸಹೋದರ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರಿಗೆ ದೆಹಲಿ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ.

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ  ಸಂಬಂಧಿಸಿದಂತೆ ಆರ್ಥಿಕ ಅಪರಾಧ ವಿಭಾಗದಿಂದ ನೋಟಿಸ್‌ ನೀಡಲಾಗಿದೆ. ಪ್ರಕರಣದ ತನಿಖೆಯ ಭಾಗವಾಗಿ ವಿವರವಾದ ಹಣಕಾಸು ಹಾಗೂ ವಹಿವಾಟು ಮಾಹಿತಿಯನ್ನು ಕೋರಿ ನೋಟಿಸ್ ನೀಡಿದ್ದಾರೆ.

ನ.29 ರಂದು ನೋಟಿಸ್ ನೀಡಿರುವ ಪೊಲೀಸರು, ಡಿ.19 ರೊಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ಅಥವಾ ಅಗತ್ಯ ದಾಖಲೆಗಳನ್ನು ಸಲ್ಲಿಸಲು ಸೂಚಿಸಿದ್ದಾರೆ.

ಡಿ.ಕೆ.ಸುರೇಶ್ ಅವರಿಗೂ ನೋಟಿಸ್ ನೀಡಿರುವ ದೆಹಲಿ ಪೊಲೀಸರು, ಎಷ್ಟು ದುಡ್ಡು ನೀಡಿದ್ದೀರಿ, ಯಾವ ಉದ್ದೇಶಕ್ಕೆ ಬಳಕೆಯಾಗಿದೆ, ಹಣವನ್ನು ನೀಡಿದ್ದು ಹೇಗೆ, ಎಷ್ಟು ಹಣ ನೀಡಿದ್ದೀರಿ ಎಂಬ ಪ್ರಶ್ನೆಗಳಿಗೆ ವಿವರ ಕೇಳಿದ್ದಾರೆ.

Continue Reading

Politics

ಕಾಂಗ್ರೆಸ್ ಹೈಕಮಾಂಡ್ ಮಲ್ಲಿಕಾರ್ಜುನ ಖರ್ಗೆ ಅಲ್ಲ, ವೇಣುಗೋಪಾಲ್: ಛಲವಾದಿ ನಾರಾಯಣಸ್ವಾಮಿ

Published

on

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಮಲ್ಲಿಕಾರ್ಜುನ ಖರ್ಗೆ ಅಲ್ಲ, ವೇಣುಗೋಪಾಲ್ ಕಾಂಗ್ರೆಸ್ ಹೈಕಮಾಂಡ್ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು  ಸಿಎಂ ಮತ್ತು ವೇಣುಗೋಪಾಲ್ ಭೇಟಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಇಷ್ಟು ದಿನ ರಾಜ್ಯದ ಗೊಂದಲಕ್ಕೆ ಎಐಸಿಸಿ ಅಧ್ಯಕ್ಷರು ಎಲ್ಲರನ್ನು ಕರೆದು ಮಾತುಕತೆ ಮಾಡಿ ನನ್ನಿಂದ ಏನು ಆಗಲ್ಲವೆಂದು ದೆಹಲಿ ಹೋಗಿದ್ದರು. ನನ್ಮ ಕೈಯಲ್ಲಿ ಏನು ಇಲ್ಲ, ಹೈಕಮಾಂಡ್ ಗಮನಕ್ಕೆ ತರುತ್ತೇನೆಂದು ಹೋದರು. ಯಾಕೆ ಮಲ್ಲಿಕಾರ್ಜುನ ಖರ್ಗೆ ಹೀಗೆ ಮಾತಾಡಿದರೆಂದು ರಾಜ್ಯದ ಜನರಿಗೆ ಗೊಂದಲ ಆಗಿತ್ತು. ಈಗ ಆ ಗೊಂದಲ ಏನೆಂದು ಕ್ಲಿಯರ್ ಆಗಿದೆ. ಕಾಂಗ್ರೆಸ್ ಹೈಕಮಾಂಡ್ ಯಾರು ಅಂದರೆ ವೇಣುಗೋಪಾಲ್ ಎಂದು ಗೊತ್ತಾಯಿತು. ಎಐಸಿಸಿ ಅಧ್ಯಕ್ಷರಿಗಿಂತ ವೇಣುಗೋಪಾಲ್ ದೊಡ್ಡವರೆಂದು ಗೊತ್ತಾಯಿತ್ತೆಂದು ಎಂದು ವ್ಯಂಗ್ಯ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆಗೂ ವೇಣುಗೋಪಾಲ್ ಹೈಕಮಾಂಡ್ ಆಗಿದ್ದಾರೆ. ಇದು ಕಾಂಗ್ರೆಸ್ ಪರಿಸ್ಥಿತಿ ಎಲ್ಲಿಗೆ ಬಂದಿದೆ ಗೊತ್ತಾಯ್ತು. ಯಾವುದೋ ಒಬ್ಬ ವ್ಯಕ್ತಿ ಕೈಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಇದೆ ಎಂದು ವಾಗ್ದಾಳಿ ನಡೆಸಿದರು.

ಈ ದೇಶ ನಡೆಸೋ ಕಾಂಗ್ರೆಸ್ ಕೈಯಲ್ಲಿ ಇವತ್ತು ಬಂಡವಾಳ ಇಲ್ಲ. ಬಂಡವಾಳಕ್ಕೆ ಇರೋ ಒಂದೇ ಒಂದು ರಾಜ್ಯ ಕರ್ನಾಟಕ. ವೇಣುಗೋಪಾಲ್ ಅಲ್ಲಿ ಕುಳಿತು ಕಾಂಗ್ರೆಸ್‌ನಲ್ಲಿ ಇರೋ 2-3 ಗುಂಪುಗಳನ್ನು ಕರೆಯುತ್ತಿದ್ದಾರೆ. ಯಾವ ಗುಂಪು ಎಷ್ಟು ಬಾಳಿಕೆ ಬರುತ್ತದೆಂದು ವೇಣುಗೋಪಾಲ್ ನೋಡುತ್ತಿದ್ದಾರೆ. ಕಾಂಗ್ರೆಸ್‌ಗೆ ಮೊದಲು ಎಟಿಎಂ ಲೀಡರ್ ಬೇರೆ ಇದ್ದರು. ಆ ಜನರಲ್ ಸೆಕ್ರೆಟರಿ ಬೇರೆ. ಹೈಕಮಾಂಡ್ ಜನರಲ್ ಸೆಕ್ರೆಟರಿ ವೇಣುಗೋಪಾಲ್. ಇವರು ಯರ‍್ಯಾರು ಎಷ್ಟಕ್ಕೆ ಬಾಳುತ್ತೀರಾ. ನೀವು ಎಷ್ಟಕ್ಕೆ ಬಾಳುತ್ತೀರಾ ಅಂತ ಇಬ್ಬರನ್ನು ತೂಕ ಮಾಡೋ ಸ್ಥಿತಿಗೆ ಬಂದಿದೆ. ರಾಜ್ಯದ ಹಿತ ಮರೆತು ಅಧಿಕಾರ ಉಳಿಯೋಕೆ,  ಕುರ್ಚಿ ಉಳಿಸಿಕೊಳ್ಳಬೇಕೆಂದು ಸಿಎಂ-ಡಿಸಿಎಂ ಪೈಪೋಟಿಗೆ ಬಿದ್ದು ರಾಜ್ಯದ ಸ್ಥಿತಿ ಗಂಭೀರ ಮಾಡಿದ್ದಾರೆ ಎಂದು ಸಿಎಂ, ಡಿಸಿಎಂ ಮತ್ತು ಕಾಂಗ್ರೆಸ್‌ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಅನೇಕ ಸಮಸ್ಯೆ ಇದೆ, ರೈತರ ಬಗ್ಗೆ ದಲಿತರ ಬಗ್ಗೆ ಕೇಳೋರು ಇಲ್ಲ. ದಲಿತರ ಯೋಗ ಕ್ಷೇಮ ಈ ಸರ್ಕಾರ ನೋಡಿಲ್ಲ. ಕಾಂಗ್ರೆಸ್‌ನಲ್ಲಿರೋ ದಲಿತ ಲೀಡರ್‌ಗಳಿಗೂ ಕಾಂಗ್ರೆಸ್ ಉಳಿಯೋದು ಮುಖ್ಯ. ದಲಿತ ಸಮುದಾಯ ಉಳಿಯೋದು ಮುಖ್ಯ ಅಲ್ಲ. ಅಧಿವೇಶನ 8 ರಿಂದ ಪ್ರಾರಂಭ ಆಗುತ್ತಿದೆ. ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಮಾಡೋಕೆ ಅಧಿವೇಶನ ಮಾಡುತ್ತೇವೆ. ಆದರೆ ಈಗಾಗಲೇ 31 ಬಿಲ್‌ಗಳು ಇವೆ. ಈಗ ಮತ್ತೆ 22 ಹೊಸ ಬಿಲ್‌ಗಳು ಇವೆಂದು ಹೇಳುತ್ತಿದ್ದಾರೆ. ಇದು ಬಿಲ್ ಪಾಸ್ ಅಧಿವೇಶನಾ ಎಂದು ಪ್ರಶ್ನೆ ಮಾಡಿದ್ದಾರೆ.

ಸದನ ನಡೆಯೋದೆ 8-9 ದಿನ. ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಇಲ್ಲ. ರಾಜು ಕಾಗೆ ಪ್ರತ್ಯೇಕ ರಾಜ್ಯ ಬೇಕು ಅಂತ ಕೇಳುತ್ತಿದ್ದಾರೆ. ನಿಮ್ಮದೇ ಶಾಸಕರು. ಇದಕ್ಕೆ ಸರ್ಕಾರ ಉತ್ತರ ಕೊಡಬೇಕು. ಕಾಂಗ್ರೆಸ್ ದೇಶ, ರಾಜ್ಯ ಒಡೆಯೋದ್ರಲ್ಲಿ ನಿಪುಣರು. ಯುಪಿ, ಛತ್ತೀಸ್‌ಗಢ, ಆಂಧ್ರ ಪ್ರದೇಶ ಒಡೆದರು. ಈಗ ಕರ್ನಾಟಕ ಒಡೆಯೋಕೆ ಪ್ರಯತ್ನ ಮಾಡುತ್ತಿದ್ದಾರೆ ಎಂಬ ಅನುಮಾನ ಮೂಡುತ್ತಿದೆ. ಈ ಬಿಲ್ ಪಾಸ್ ಮಾಡೋಕೆ ವಿಶೇಷ ಅಧಿವೇಶನ ಕರೆಯಿರಿ. ಆದರೆ ಬೆಂಗಳೂರಿಗೆ ಸಂಬಂಧಿಸಿದ ಬಿಲ್ ಬೆಳಗಾವಿಯಲ್ಲಿ ಮಾಡೋದು ಸರಿಯಲ್ಲ ಎಂದರು.

ಸಚಿವ ಹೆಚ್‌.ಕೆ. ಪಾಟೀಲ್‌ರನ್ನು ಏನೋ ಅಂದುಕೊಂಡಿದ್ದೆ. ಉತ್ತರ ಕರ್ನಾಟಕ ಭಾಗದ ನಾಯಕರಾಗಿ ಅವರು ಆ ಭಾಗಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕ ಹೀಗೆ ತಾರತಮ್ಯ ಆಗೋಕೆ ಉತ್ತರ ಕರ್ನಾಟಕದ ನಾಯಕರೇ ಕಾರಣ. ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಯಾಕೆ ಹಿಂದುಳಿದಿದೆ? ಅಲ್ಲಿಯವರೇ ಸಿಎಂ ಆಗಿದ್ದರು ಯಾಕೆ ಅಭಿವೃದ್ಧಿ ಆಗಿಲ್ಲ? ತಾರತಮ್ಯ ಮಾಡೋರಿಗೆ ತಕ್ಕ ಪಾಠ ಕಲಿಸೋ ಕೆಲಸ ಮಾಡಬೇಕು ಎಂದು ಹೇಳಿದರು.

Continue Reading

Politics

ನವೆಂಬರ್‌ ಕ್ರಾಂತಿ ಹೈಕಮಾಂಡ್‌ ಬಿಡಲ್ಲ: ಸತೀಶ್‌ ಜಾರಕಿಹೊಳಿ

Published

on

ಬೆಂಗಳೂರು: ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಆಗುವುದಿಲ್ಲ, ಹಾಗೇ ಮಾಡಲು  ಹೈಕಮಾಂಡ್ ಬಿಡಲ್ಲ ಎಂದು  ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ನವೆಂಬರ್ ಕ್ರಾಂತಿ ಆಗಲ್ಲ  ಕ್ರಾಂತಿ ಆಗಲು 20 ರಿಂದ 30 ದಿನ ಇದೆ. ಏನಾಗುತ್ತದೆ ಎಂದು ನೋಡೋಣ. ಕ್ರಾಂತಿ ಆಗಲು ಹೈಕಮಾಂಡ್ ಬಿಡಬೇಕಲ್ಲ ಹೈಕಮಾಂಡ್‌ ಹಾಗೇ ಮಾಡಲು ಬಿಡಲ್ಲ ಎಂದು ಹೇಳಿದರು.

ಏಕನಾಥ್ ಶಿಂಧೆ ಒಬ್ಬರೇ,  ಪವಾರ್ ಒಬ್ಬರೇ ಇನ್ನೊಬ್ಬ ಶಿಂಧೆ,  ಪವರ್ ಹುಟ್ಟಿಕೊಳ್ಳಲು ಆಗಲ್ಲ ಎಂದರು.

ದಲಿತ ಸಿಎಂ  ಕುರಿತು ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಅವಕಾಶ ಬರುವವರೆಗೆ ಕಾಯಬೇಕು. ಈಗಂತೂ ಅವಕಾಶ ಇಲ್ಲ ಸಮಯಕ್ಕಾಗಿ ಕಾಯಬೇಕು. ಅವಕಾಶ  ಸೃಷ್ಠಿಯಾಗಬೇಕು. ಅಲ್ಲಿವರೆಗೆ ಕಾಯಬೇಕು ಎಂದರು.

Continue Reading

Trending

error: Content is protected !!