Chikmagalur
ಜಾನಪದ ಕಲಾವಿದೆ ಚಿಕ್ಕಬಾಸೂರು ಸೋಬಾನೆ ಚೌಡಮ್ಮಗೆ ರಾಜ್ಯೋತ್ಸವ ಪ್ರಶಸ್ತಿ

ಚಿಕ್ಕಮಗಳೂರು : ಜಿಲ್ಲೆಯ ಕಡೂರು ತಾಲೂಕಿನ ಚಿಕ್ಕಬಾಸೂರು ಗ್ರಾಮದ ಜಾನಪದ ಕಲಾವಿದೆ ಚೌಡಮ್ಮಗೆ ಈ ಬಾರಿಯ ರಾಜೋತ್ಸವ ಪ್ರಶಸ್ತಿ ಒಲಿದಿದೆ. ಬಾಲ್ಯದಿಂದಲೂ ತನ್ನ ತಾಯಿಯಿಂದ ಬಳುವಳಿಯಾಗಿ ಬಂದ ಸೋಬಾನೆ ಪದಗಳನ್ನು ಹಾಡುತ್ತಾ, ರೈತಾಪಿ ಜೀವನದೊಂದಿಗೆ ಬದುಕು ಕಟ್ಟಿಕೊಂಡಿದ್ದು, ಸೋಬಾನೆ ಚೌಡಮ್ಮ ಎಂದೇ ಈ ಭಾಗದಲ್ಲಿ ಖ್ಯಾತಿ ಪಡೆದುಕೊಂಡಿದ್ದಾರೆ.
ತಾಲೂಕಿನ ಚಿಕ್ಕಬಾಸೂರು ಗ್ರಾಮದ ಚೌಡಮ್ಮ ತಮ್ಮ ಪತಿ ಬೇಲೂರಯ್ಯ( ಭೈರಪ್ಪ)ರ ಸಹಕಾರದಿಂದಾಗಿ
ಜಾನಪದ ಕಲೆಯಲ್ಲಿ ತೊಡಗಿಸಿಕೊಂಡಿರುವ ಚೌಡಮ್ಮ ಅವರು ಸುತ್ತಮುತ್ತಲ ಭಾಗದ ಗ್ರಾಮಗಳಲ್ಲಿ ಮದುವೆ, ಶುಭ ಸಮಾರಂಭಗಳಲ್ಲಿ ಸೋಬಾನೆ ಪದ ಹಾಡುವ ಮೂಲಕ ಖ್ಯಾತಿಯನ್ನು ಪಡೆದಿದ್ದಾರೆ.
ಸೋಬಾನ ಪದಗಳ ಮೂಲಕ ಗ್ರಾಮೀಣ ಸಂಪ್ರದಾಯಗಳನ್ನು ನೆರವೇರಿಸುತ್ತಾ ಬಂದವರು. ಇವರ ಗಾಯನ ಪ್ರತಿಭೆಯನ್ನು ಗುರುತಿಸಿ ಭದ್ರಾವತಿ ಆಕಾಶವಾಣಿಯು ಬಿ ಗ್ರೇಡ್ ಕಲಾವಿದೆಯಾಗಿ ಮನ್ನಣೆ ನೀಡಿ ಅನೇಕ ಬಾರಿ ಇವರು ಹಾಡಿದ ಸೋಬಾನೆ ಪದಗಳನ್ನು ಪ್ರಸಾರ ಮಾಡಿದ್ದಾರೆ.. ಅನಕ್ಷರಸ್ಥೆಯಾಗಿದ್ದರೂ ಸಹ ತನ್ನ ಜ್ಞಾಪಕ ಶಕ್ತಿಯಿಂದಲೇ ನೂರಾರು ಪದಗಳನ್ನು ಕಟ್ಟಿ ಹಾಡುತ್ತಾ ಬಂದಿದ್ದಾರೆ.
ಕೇವಲ ತಾವು ಈ ಕಲೆಯನ್ನು ಮೈಗೂಡಿಸಿಕೊಂಡಿದ್ದಲ್ಲದೆ ಅನೇಕ ಗ್ರಾಮೀಣ ಮಹಿಳೆಯರಿಗೂ ಸೋಬಾನೆ ಪದಗಳನ್ನು ಕಲಿಸುತ್ತಾ ಬಂದಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಮ್ಮ ಹಾಡುಗಾರಿಕೆಯನ್ನು ಇಲಾಖೆಯ ಗುರು ಶಿಷ್ಯ ಪರಂಪರೆ ಯೋಜನೆ ಅಡಿಯಲ್ಲಿ ತನ್ನ ಗ್ರಾಮದ ಸುತ್ತಮುತ್ತಲ ಅನೇಕ ಮಹಿಳೆಯರಿಗೆ ಸೋಬಾನೆ ಪದಗಳನ್ನು ಕಲಿಸುವ ಮೂಲಕ ಕಲೆಯ ಉಳಿವಿಗೆ ಶ್ರಮಿಸಿದ್ದಾರೆ.
ಗ್ರಾಮೀಣ ಭಾಗದ ಈ ಜಾನಪದ ಕಲೆಯಲ್ಲಿ ಸೋಬಾನೆ ಪದಗಳು, ಬಿಸೋ ಕಲ್ಲಿನ ಪದ ಮುಂತಾದ ಈ ನೆಲದ ಸಂಸ್ಕೃತಿಯನ್ನು ಯುವ ಜನತೆಗೆ ಅನೇಕ ಕಾರ್ಯಕ್ರಮಗಳಲ್ಲಿ ಹಾಡಿ ಪರಿಚಯಿಸುವ ಮೂಲಕ ಅವರಲ್ಲಿ ಆಸಕ್ತಿಯನ್ನು ಬೆಳೆಸುವಲ್ಲಿ ಮುತುವರ್ಜಿ ವಹಿಸಿರುವ. ಚೌಡಮ್ಮ ಅವರ ಕಲಾ ನೈಪುಣ್ಯವನ್ನು ಗಮನಿಸಿರುವ ಅನೇಕ ಸಂಘ ಸಂಸ್ಥೆಗಳು ಇವರನ್ನು ಗುರುತಿಸಿ ಗೌರವಿಸಿ ಸನ್ಮಾನಿಸಿವೆ.
70 ರ ಇಳಿ ವಯಸ್ಸಿನಲ್ಲೂ ಸಹ ಕುಂದದ ಉತ್ಸಾಹ ಇವರದಾಗಿದ್ದು, ಯುವ ಜನಾಂಗಕ್ಕೆ ಕಲೆಯ ಜೀವಂತಿಕೆಯನ್ನು ಉಳಿಸುತ್ತಿರುವ ಚೌಡಮ್ಮ ಅವರ ಜಾನಪದ ಕಲಾಕ್ಷೇತ್ರ ಹಾಗೂ ಸೋಬಾನೆ ಪದಗಳನ್ನು ಕಟ್ಟಿ ಹಾಡುವಲ್ಲಿ ಇನ್ನಷ್ಟು ಉತ್ತಂಗಕ್ಕೇರಲಿಎಂಬುದು ಎಲ್ಲರ ಆಶಯವಾಗಿದೆ.
ತನ್ನ ತಾಯಿಯ ಜೊತೆಗೂಡಿ ಕಲಿತ ಸೊಬಾನೆ ಪದಗಳನ್ನು ಇಂದಿಗೂ ಉಳಿಸಿಕೊಂಡು ಬರಲಾಗಿದೆ. ಈ ಕಲೆಯನ್ನು ಮುಂದಿನ ಪೀಳಿಗೆಗೆ ಉಳಿಸಬೇಕೆಂಬ ಮಹಾದಾಸೆ ಇದೆ. ಸುಮಾರು 200ಕ್ಕೂ ಅಧಿಕ ಸೋಬಾನೆ ಪದಗಳನ್ನು ಅನೇಕ ಶುಭ ಸಮಾರಂಭಗಳಲ್ಲಿ ಹಾಡಿದ್ದೇನೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಚೌಡಮ್ಮ ತಮ್ಮ ಅನಿಸಿಕೆಯನ್ನು ಜನಮಿತ್ರದೊಂದಿಗೆ ಹಂಚಿಕೊಂಡಿದ್ದಾರೆ
Chikmagalur
ಜನರ ಜೀವನದಲ್ಲಿ ಅವಿಭಾಜ್ಯ ಅಂಗವಾಗಿರುವ ಅಂತರ್ಜಾಲ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ದಿನ ನಿತ್ಯ ಜೀವನದಲ್ಲಿ ಅಂತರ್ಜಾಲವನ್ನು ಉಪಯೋಗಿಸಿಕೊಂಡೆ ತಮ್ಮ ಎಲ್ಲಾ ಕೆಲಸವನ್ನು ಕುಳಿತ ಜಾಗದಲ್ಲೇ ಮಾಡುತ್ತಿದ್ದಾರೆ. ಆದರೆ ಈ ಅಂತರ್ಜಾಲ ಜನರನ್ನು ಮೋಸದ ಬಲೆಗೆ ಬೀಳಿಸುವ ಮಾಯಜಾಲವಾಗಿ ಪರಿವರ್ತನೆಯಾಗಿದೆ ಎಂದು ಕಾರ್ಯನಿರ್ವಾಹಣಾಧಿಕಾರಿ ಹೆಚ್.ಎಸ್ ಕೀರ್ತನಾ ಹೇಳಿದರು.
ಇಂದು ನಗರದ ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಸುರಕ್ಷಿತ ಅಂತರ್ಜಾಲ ದಿನ ಕಾರ್ಯಕ್ರಮದ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದರು.
ಯುವ ಜನತೆಯಂತೂ ಪ್ರತೀಕ್ಷಣವೆಂಬಂತೆ ಅಂತರ್ಜಾಲದಲ್ಲಿ ಜಾಲಾಡುವುದನ್ನು ಕಾಣಬಹುದು. ಇದೊಂದು ರೀತಿಯ ಮಾಯಾಜಾಲ. ಇಂದು ಪ್ರತಿಯೊಬ್ಬರೂ ಸ್ಮಾರ್ಟ್ಫೋನ್ ಹೊಂದಿದ್ದು, ಇಂಟರ್ನೆಟ್ ಕೂಡಾ ಬಳಸುತ್ತಿರುತ್ತಾರೆ. ಆದರೆ ಇಂಟರ್ನೆಟ್ ಬಳಸುವ ಪ್ರತಿಯೊಬ್ಬರಿಗೂ ಸುರಕ್ಷತೆಯ ಅಂತರ್ಜಾಲ ಬಳಕೆಯ ಕುರಿತು ತಿಳಿದಿರುವುದಿಲ್ಲ. ಈ ಪ್ರಭಾವಿ ಅಂತರ್ಜಾಲ ಪ್ರಪಂಚ ಮಕ್ಕಳಿಂದ ಹಿಡಿದು ಹಿರಿಯರವರೆಗೂ ವ್ಯಾಪಿಸಿದೆ.
ಸದ್ಯ ಕಚೇರಿ ಕೆಲಸಗಳನ್ನು ಕುಳಿತಲ್ಲಿಂದಲೇ ಮಾಡುವ ಪರಿಣತಿಯನ್ನು ಹೊಂದಿದ ಬಳಕೆದಾರರು ಅನೇಕರಿದ್ದಾರೆ. ಅಷ್ಟರ ಮಟ್ಟಿಗೆ ಇಂಟರ್ನೆಟ್ ಬಳಕೆ ಮತ್ತು ಅದರ ಉಪಯೋಗವಾಗುತ್ತಿದೆ. ಆದರೆ ಇಷ್ಟೆಲ್ಲಾ ಪ್ರಯೋಜನ ಒದಗಿಸುವ ಇಂಟರ್ನೆಟ್ನಿಂದ ತೊಂದರೆಯೂ ಇದೆ ಎಂದು ಹೇಳಿದರು.
ಪೇಜ್ಗಳಿಂದ ಯಾವುದೇ ಆಪ್ಗಳನ್ನು ಡೌನಲೋಡ್ ಮಾಡಿಕೊಳ್ಳದಿರಿ. ನೀವು ಗೂಗಲ್ ಪ್ಲೇ ಸ್ಟೋರ್ನಿಂದ ಆಪ್ಗಳನ್ನು ಡೌನ್ಲೋಡ್ ಮಾಡಿಕೊಳ್ಳುವುದು ಉತ್ತಮ. ಆಂಡ್ರಾಯ್ಡ್ ಸ್ಮಾರ್ಟ್ಫೋನ್ಗಳಿಗೆ ಅಸುರಕ್ಷಿತ ಆಪ್ಗಳಿಂದ ಅಪಾಯ ಸಾಧ್ಯತೆ ಹೆಚ್ಚು. ಆದ್ದರಿಂದ ಇಂಥ ಅಸುರಕ್ಷಿತ ಆಪ್ಗಳನ್ನು ದೂರವಿಡಿ ಎಂದರು.
ಸುರಕ್ಷತೆಯ ಕುರಿತು ಪೋಷಕರು ಮಕ್ಕಳೊಂದಿಗೆ ಮುಕ್ತ ಸಂವಾದ ನಡೆಸಿ. ಸೈಬರ್ ವಂಚಕರು ತಮ್ಮ ವೈಯಕ್ತಿಕ ವಿವರಗಳನ್ನು ಬಹಿರಂಗಪಡಿಸಲು ಮಕ್ಕಳನ್ನು ಪ್ರಚೋದಿಸಬಹುದು. ಹುಟ್ಟಿದ ದಿನಾಂಕ ಅಥವಾ ವಿಳಾಸದಂತಹ ವೈಯಕ್ತಿಕ ಮಾಹಿತಿಯನ್ನು ವಿಶೇಷವಾಗಿ ಅಪರಿಚಿತರಿಗೆ ಬಹಿರಂಗಪಡಿಸದಂತೆ ಮಕ್ಕಳಿಗೆ ತಿಳಿಸಿ. ನಿಮ್ಮ ಮಕ್ಕಳಿಗೆ ಅನುಮಾನಾಸ್ಪದ ಚಟುವಟಿಕೆ ಬಗ್ಗೆ ತಿಳಿದರೆ , ತಕ್ಷಣವೇ ನಿಮಗೆ ಹೇಳಲು ತಿಳಿಸಬೇಕು. ನಿಮ್ಮ ಸ್ಮಾರ್ಟ್ಫೋನ್ಗೆ ಪಾಸ್ವರ್ಡ್ ಸ್ಟ್ರಾಂಗ್ ಇರಲಿ,. ಫೇಸ್ಬುಕ್, ಯೂಟ್ಯೂಬ್, ಜೀಮೇಲ್, ಗೂಗಲ್ ಮ್ಯಾಪ್ ಮತ್ತು ಗೂಗಲ್ ಅಕೌಂಟ್ ಸೇರಿದಂತೆ ನೀವು ಬಳಸುವ ಎಲ್ಲ ಸಾಮಾಜಿಕ ತಾಣಗಳಲ್ಲಿ ನಿಮ್ಮ ಮಾಹಿತಿ ಇರುತ್ತದೆ. ಹೀಗಾಗಿ ಈ ಸಾಮಾಜಿಕ ಜಾಲತಾಣಗಳ ಖಾತೆಗಳಿಗೆ ಕಠಿಣ ಪಾರ್ಸ್ವರ್ಡ್ ಇಡಬೇಕು. ಇದರಿಂದ ನಿಮ್ಮ ಅಂತರ್ಜಾಲ ಮಾಹಿತಿ ಸೋರಿಕೆ ತಡೆಯಬಹುದು ಎಂದು ತಿಳಿಸಿದರು.
ಕಾರ್ಯಗಾರದಲ್ಲಿ ಎನ್.ಐ.ಸಿಯ ಸೂಚನಾಧಿಕಾರಿ ಚಂದ್ರುಪ್ರಕಾಶ ಮಾತನಾಡಿ ಆನ್ಲೈನ್ ಮತ್ತು ವಿಡಿಯೋ ಕರೆ ಮಾಡಿ. ಪೋಷಕರಿಗೆ ಅಥವಾ ಮಕ್ಕಳಿಗೆ ಡಿಜಿಟಲ್ ಬಂಧನವೆಂದು ನಿಮ್ಮನ್ನು ಭಯಪಡಿಸಬಹುದು ಅದರಿಂದ ಅಪರಿಚಿತ ಸಂಖ್ಯೆಯಿಂದ ಕರೆಗಳು ಬಂದರೆ ನಿರ್ಲಕ್ಷಿಸಿ ಯಾವುದಾದರು ಆಪ್ ಅಥವಾ ವೆಬ್ಸೈಟ್ ಬಳಸಬೇಕಾದರೇ ಅವರು ನಿಮ್ಮ ಕಡೆಯಿಂದ ನಿಮ್ಮ ಕಾಂಟ್ಯಾಕ್ಟ್ಸ್, ಲೊಕೇಷನ್, ಕ್ಯಾಲೆಂಡರ್, ಕ್ಯಾಮೆರಾ ಹೀಗೆ ಕೆಲವು ಮಾಹಿತಿಗಳನ್ನು ಹಂಚಿಕೊಳ್ಳಲು ಅನುಮತಿ ಕೋರುತ್ತಾರೆ. ಆಗ ಅನಗತ್ಯವಾಗಿ ಎಲ್ಲ ಡಾಟಾ ಮಾಹಿತಿ ಹಂಚಿಕೆಗೆ ಅನುಮತಿ ನೀಡಬೇಡಿ. ಇದರಿಂದ ನಿಮ್ಮ ವೈಯಕ್ತಿಕ ದಾಖಲೆಗಳು ಸೋರಿಕೆಯಾಗುತ್ತದೆ ಹಾಗೂ ವ್ಯಕ್ತಿಯ ಖಾಸಗಿ ಮಾಹಿತಿ, ಬ್ಯಾಂಕ್ ಹಣ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ ಎಂದು ಹೇಳಿದರು.
ಕಾರ್ಯಗಾರದಲ್ಲಿ ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಶಿವಕುಮಾರ್, ಮುಖ್ಯ ಯೋಜನಾಧಿಕಾರಿ ರಾಜ್ ಗೋಪಾಲ್, ಜಿಲ್ಲಾ ಸಹಾಯಕ ಕಾರ್ಯದರ್ಶಿ ನಯನ, ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.
Chikmagalur
ಮರಕ್ಕೆ ಬೈಕ್ ಡಿಕ್ಕಿ ಸ್ಥಳದಲ್ಲೇ ಇಬ್ಬರ ಸಾ*ವು

ಚಿಕ್ಕಮಗಳೂರು :
ಮರಕ್ಕೆ ಬೈಕ್ ಡಿಕ್ಕಿ ಸ್ಥಳದಲ್ಲೇ ಇಬ್ಬರ ಸಾವು
ಅಜ್ಜಂಪುರ ತಾಲೂಕಿನ ತಮಟದಹಳ್ಳಿ ಗೇಟ್ ಬಳಿ ಘಟನೆ
ಪ್ರತಾಪ್ (28) ಗೋವಿಂದ (30) ಮೃತ ದುರ್ದೈವಿಗಳು
ಅಜ್ಜಂಪುರದ ಐತಿಹಾಸಿಕ ಅಂತರಘಟ್ಟೆ ಜಾತ್ರೆಗೆ ಹೋಗುವಾಗ ಘಟನೆ
11 ದಿನದ ಅಂತರಘಟ್ಟೆ ಜಾತ್ರೆಯಲ್ಲಿ ಇಂದು ಕಡೇ ದಿನ
ಮೃತರು ಅಜ್ಜಂಪುರ ತಾಲೂಕಿನ ಬಗ್ಗವಳ್ಳಿ ಮೂಲದವರು
ಓವರ್ ಸ್ಪೀಡ್ ನಲ್ಲಿ ಹೋಗಿ ಮರಕ್ಕೆ ಡಿಕ್ಕಿಯೊಡೆದ ಬೈಕ್
ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕು
Chikmagalur
ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯೇ ನನ್ನ ಗುರಿ: ಶಾಸಕ ಹೆಚ್.ಡಿ. ತಮ್ಮಯ್ಯ

ಚಿಕ್ಕಮಗಳೂರು: ಗ್ಯಾರಂಟಿ ಯೋಜನೆಗಳನ್ನು ಪ್ರತಿಯೊಬ್ಬ ನಾಗರೀಕರಿಗೂ ತಲುಪಿಸಿ ಅವರ ಜೀವನ ಸುಧಾರಣೆಗೆ ಸಹಕರಿಸುವುದರೊಂದಿಗೆ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಂಡು ಅಭಿವೃದ್ಧಿಗೊಳಿಸುವುದೇ ನನ್ನ ಗುರಿ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು.
ಸಖರಾಯಪಟ್ಟಣ ಆಟೋ ನಿಲ್ದಾಣ ನಿರ್ಮಾಣ ಕಾಮಗಾರಿ ಸೇರಿದಂತೆ ಸಖರಾಯಪಟ್ಟಣ ವ್ಯಾಪ್ತಿಯ ರಸ್ತೆ, ದೇವಸ್ಥಾನ, ಸಮುದಾಯ ಭವನ, ಕಾಂಪೌಂಡ್ ಹಾಗೂ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರೆವೇರಿಸುವುದರ ಮೂಲಕ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ರಾಜ್ಯದಲ್ಲಿ ಅಭಿವೃದ್ಧಿಯ ಪರ್ವ ಪ್ರಾರಂಭವಾಗಿದೆ. ಕ್ಷೇತ್ರದ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆ ಹಾಗೂ ಗ್ರಾಮಾಂತರ ಭಾಗವನ್ನು ಒಳಗೊಂಡಂತೆ ಕ್ಷೇತ್ರಕ್ಕೆ ಒಟ್ಟು ೨೫ ಕೋಟಿ ರೂ.ಗಳ ವಿಶೇಷ ಅನುದಾನ ನೀಡಲಾಗಿದೆ ಎಂದು ಹೇಳಿದರು.
ಸಖರಾಯಪಟ್ಟಣ ವ್ಯಾಪ್ತಿಯಲ್ಲಿ ದೇವಸ್ಥಾನ, ಆಟೋ ನಿಲ್ದಾಣ ಹಾಗೂ ರಸ್ತೆ ಸೇರಿದಂತೆ ಸುಮಾರು ೨ ಕೋಟಿಗೂ ಹೆಚ್ಚಿನ ಕಾಮಗಾರಿಗಳಿಗೆ ಇಂದು ಗುದ್ದಲಿ ಪೂಜೆ ನಡೆಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಮುಂದಿನ ೪ ತಿಂಗಳೊಳಗಾಗಿ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.
ಗುಬ್ಬಿಹಳ್ಳಿ ಗೇಟ್ನಿಂದ ದೇವನೂರುವರೆಗೂ ಒಟ್ಟು ೨೯ ಕೋಟಿ ರೂ. ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕೈಗೊಂಡು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದ ಅವರು ಅಭಿವೃದ್ಧಿ ಕಾರ್ಯಗಳೊಂದಿಗೆ ಜನರ ಸಮಸ್ಯೆಗಳನ್ನು ಬಗೆಹರಿಸುವ ಕಾರ್ಯಗಳನ್ನು ನಿಷ್ಠೆಯಿಂದ ನಿರ್ವಹಿಸಲಾಗುತ್ತಿದೆ ಎಂದು ಹೇಳಿದರು.
ಸರ್ಕಾರವು ಸಮಾಜದ ಎಲ್ಲಾ ಬಡವರು, ಹಿಂದುಳಿದ ವರ್ಗ ಹಾಗೂ ಶೋಷಿತ ವರ್ಗದವರ ಪರವಾದ ಯೋಜನೆಗಳನ್ನು ರೂಪಿಸಿ ಅವರ ಏಳಿಗೆಗಾಗಿ ದುಡಿಯುವುದಲ್ಲದೇ ಮಹಿಳಾ ಸಬಲೀಕರಣಕ್ಕೆ ಶ್ರಮಿಸುತ್ತಿದೆ. ಎತ್ತಿನ ಹೊಳೆ ಯೋಜನೆ ಮೂಲಕ ಯೋಜನಾ ವ್ಯಾಪ್ತಿಯಲ್ಲಿ ನಮ್ಮ ಕ್ಷೇತ್ರ ಇಲ್ಲದಿದ್ದರು ಸಹ ಮನವಿ ಮೇರೆಗೆ ಹಳೇಬೀಡು, ದೇವನೂರು, ಬೆಳವಾಡಿ ಕೆರೆಗಳನ್ನು ಭರ್ತಿಗೊಳಿಸಿರುವುದು ಇಲ್ಲಿನ ರೈತರ ಸಂತಸಕ್ಕೆ ಕಾರಣವಾಗಿದೆ ಹೇಳಿದರು.
ಈ ಸಂದರ್ಭದಲ್ಲಿ ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಜಮ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಡಿ ಮನೆ ಸತೀಶ್, ಗಣೇಶ್, ರಾಜಣ್ಣ, ಕಿರಣ್, ಲೋಕೇಶ್, ಸಚಿನ್ಎತ್ತಿನ ಮನೆ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
-
Kodagu13 hours ago
ಮಡಿಕೇರಿಯಲ್ಲಿ ಡಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
Kodagu13 hours ago
ಸ್ಪ್ರಿಂಕ್ಲರ್ ಪೈಪಿಗೆ ಕೃಷಿ ಇಲಾಖೆಯಿಂದ ಸಹಾಯಧನ
-
Kodagu16 hours ago
ಕೊಡಗು ಗೌಡ ಸಮಾಜಗಳ ಒಕ್ಕೂಟ ತೀವ್ರ ಅಸಮಾಧಾನ: ಕಾರಣವೇನು?
-
Hassan21 hours ago
HASSAN: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ವಿಂಗರ್ ವಾಹನ ಪಲ್ಟಿ
-
Mysore22 hours ago
ಅವಹೇಳನಕಾರಿ ಚಿತ್ರವುಳ್ಳ ಪೋಸ್ಟ್ : ಆರೋಪಿ ಬಂಧನಕ್ಕೆ ರಸ್ತೆ ತಡೆದು ಪ್ರತಿಭಟನೆ
-
Hassan17 hours ago
ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಅಕ್ರಮ: ಮರು ಚುನಾವಣೆಗೆ ಒತ್ತಾಯ
-
State14 hours ago
ನಮ್ಮ ಮೆಟ್ರೋ ದರ ಏರಿಕೆ: ಸಿಎಂ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ
-
Hassan21 hours ago
ಶ್ರೀ ಲಕ್ಷ್ಮೀ ವೆಂಕಟೇಶ್ವರಸ್ವಾಮಿ ಜಾತ್ರಾ ಮಹೋತ್ಸವ: ಜೆಡಿಎಸ್ ಹಾಗೂ ಕಾಂಗ್ರೆಸ್ನಿಂದ ಪ್ರತ್ಯೇಕವಾಗಿ ಆರ್ಕೆಸ್ಟ್ರಾ ಆಯೋಜನೆ