Connect with us

Chikmagalur

ಜಾನಪದ ಕಲಾವಿದೆ ಚಿಕ್ಕಬಾಸೂರು ಸೋಬಾನೆ ಚೌಡಮ್ಮಗೆ ರಾಜ್ಯೋತ್ಸವ ಪ್ರಶಸ್ತಿ

Published

on

ಚಿಕ್ಕಮಗಳೂರು : ಜಿಲ್ಲೆಯ ಕಡೂರು ತಾಲೂಕಿನ ಚಿಕ್ಕಬಾಸೂರು ಗ್ರಾಮದ ಜಾನಪದ ಕಲಾವಿದೆ ಚೌಡಮ್ಮಗೆ ಈ ಬಾರಿಯ ರಾಜೋತ್ಸವ ಪ್ರಶಸ್ತಿ ಒಲಿದಿದೆ. ಬಾಲ್ಯದಿಂದಲೂ ತನ್ನ ತಾಯಿಯಿಂದ ಬಳುವಳಿಯಾಗಿ ಬಂದ ಸೋಬಾನೆ ಪದಗಳನ್ನು ಹಾಡುತ್ತಾ, ರೈತಾಪಿ ಜೀವನದೊಂದಿಗೆ ಬದುಕು ಕಟ್ಟಿಕೊಂಡಿದ್ದು, ಸೋಬಾನೆ ಚೌಡಮ್ಮ ಎಂದೇ ಈ ಭಾಗದಲ್ಲಿ ಖ್ಯಾತಿ ಪಡೆದುಕೊಂಡಿದ್ದಾರೆ.

ತಾಲೂಕಿನ ಚಿಕ್ಕಬಾಸೂರು ಗ್ರಾಮದ ಚೌಡಮ್ಮ ತಮ್ಮ ಪತಿ ಬೇಲೂರಯ್ಯ( ಭೈರಪ್ಪ)ರ ಸಹಕಾರದಿಂದಾಗಿ
ಜಾನಪದ ಕಲೆಯಲ್ಲಿ ತೊಡಗಿಸಿಕೊಂಡಿರುವ ಚೌಡಮ್ಮ ಅವರು ಸುತ್ತಮುತ್ತಲ‌ ಭಾಗದ ಗ್ರಾಮಗಳಲ್ಲಿ ಮದುವೆ, ಶುಭ ಸಮಾರಂಭಗಳಲ್ಲಿ ಸೋಬಾನೆ ಪದ ಹಾಡುವ ಮೂಲಕ ಖ್ಯಾತಿಯನ್ನು ಪಡೆದಿದ್ದಾರೆ.

ಸೋಬಾನ ಪದಗಳ ಮೂಲಕ ಗ್ರಾಮೀಣ ಸಂಪ್ರದಾಯಗಳನ್ನು ನೆರವೇರಿಸುತ್ತಾ ಬಂದವರು. ಇವರ ಗಾಯನ ಪ್ರತಿಭೆಯನ್ನು ಗುರುತಿಸಿ ಭದ್ರಾವತಿ ಆಕಾಶವಾಣಿಯು ಬಿ ಗ್ರೇಡ್ ಕಲಾವಿದೆಯಾಗಿ ಮನ್ನಣೆ ನೀಡಿ ಅನೇಕ ಬಾರಿ ಇವರು ಹಾಡಿದ ಸೋಬಾನೆ ಪದಗಳನ್ನು ಪ್ರಸಾರ ಮಾಡಿದ್ದಾರೆ.. ಅನಕ್ಷರಸ್ಥೆಯಾಗಿದ್ದರೂ ಸಹ ತನ್ನ ಜ್ಞಾಪಕ ಶಕ್ತಿಯಿಂದಲೇ ನೂರಾರು ಪದಗಳನ್ನು ಕಟ್ಟಿ ಹಾಡುತ್ತಾ ಬಂದಿದ್ದಾರೆ.

ಕೇವಲ ತಾವು ಈ ಕಲೆಯನ್ನು ಮೈಗೂಡಿಸಿಕೊಂಡಿದ್ದಲ್ಲದೆ ಅನೇಕ ಗ್ರಾಮೀಣ ಮಹಿಳೆಯರಿಗೂ ಸೋಬಾನೆ ಪದಗಳನ್ನು ಕಲಿಸುತ್ತಾ ಬಂದಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಮ್ಮ ಹಾಡುಗಾರಿಕೆಯನ್ನು ಇಲಾಖೆಯ ಗುರು ಶಿಷ್ಯ ಪರಂಪರೆ ಯೋಜನೆ ಅಡಿಯಲ್ಲಿ ತನ್ನ ಗ್ರಾಮದ ಸುತ್ತಮುತ್ತಲ ಅನೇಕ ಮಹಿಳೆಯರಿಗೆ ಸೋಬಾನೆ ಪದಗಳನ್ನು ಕಲಿಸುವ ಮೂಲಕ ಕಲೆಯ ಉಳಿವಿಗೆ ಶ್ರಮಿಸಿದ್ದಾರೆ.

ಗ್ರಾಮೀಣ ಭಾಗದ ಈ ಜಾನಪದ ಕಲೆಯಲ್ಲಿ ಸೋಬಾನೆ ಪದಗಳು, ಬಿಸೋ ಕಲ್ಲಿನ ಪದ ಮುಂತಾದ ಈ ನೆಲದ ಸಂಸ್ಕೃತಿಯನ್ನು ಯುವ ಜನತೆಗೆ ಅನೇಕ ಕಾರ್ಯಕ್ರಮಗಳಲ್ಲಿ ಹಾಡಿ ಪರಿಚಯಿಸುವ ಮೂಲಕ ಅವರಲ್ಲಿ ಆಸಕ್ತಿಯನ್ನು ಬೆಳೆಸುವಲ್ಲಿ ಮುತುವರ್ಜಿ ವಹಿಸಿರುವ. ಚೌಡಮ್ಮ ಅವರ ಕಲಾ ನೈಪುಣ್ಯವನ್ನು ಗಮನಿಸಿರುವ ಅನೇಕ ಸಂಘ ಸಂಸ್ಥೆಗಳು ಇವರನ್ನು ಗುರುತಿಸಿ ಗೌರವಿಸಿ ಸನ್ಮಾನಿಸಿವೆ.

70 ರ ಇಳಿ ವಯಸ್ಸಿನಲ್ಲೂ ಸಹ ಕುಂದದ ಉತ್ಸಾಹ ಇವರದಾಗಿದ್ದು, ಯುವ ಜನಾಂಗಕ್ಕೆ ಕಲೆಯ ಜೀವಂತಿಕೆಯನ್ನು ಉಳಿಸುತ್ತಿರುವ ಚೌಡಮ್ಮ ಅವರ ಜಾನಪದ ಕಲಾ‌ಕ್ಷೇತ್ರ ಹಾಗೂ ಸೋಬಾನೆ ಪದಗಳನ್ನು‌ ಕಟ್ಟಿ‌ ಹಾಡುವಲ್ಲಿ‌ ಇನ್ನಷ್ಟು ಉತ್ತಂಗಕ್ಕೇರಲಿ‌ಎಂಬುದು ಎಲ್ಲರ ಆಶಯವಾಗಿದೆ.

ತನ್ನ ತಾಯಿಯ ಜೊತೆಗೂಡಿ ಕಲಿತ ಸೊಬಾನೆ ಪದಗಳನ್ನು ಇಂದಿಗೂ ಉಳಿಸಿಕೊಂಡು ಬರಲಾಗಿದೆ. ಈ ಕಲೆಯನ್ನು ಮುಂದಿನ ಪೀಳಿಗೆಗೆ ಉಳಿಸಬೇಕೆಂಬ ಮಹಾದಾಸೆ ಇದೆ. ಸುಮಾರು 200ಕ್ಕೂ ಅಧಿಕ ಸೋಬಾನೆ ಪದಗಳನ್ನು ಅನೇಕ ಶುಭ ಸಮಾರಂಭಗಳಲ್ಲಿ ಹಾಡಿದ್ದೇನೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಚೌಡಮ್ಮ ತಮ್ಮ ಅನಿಸಿಕೆಯನ್ನು ಜನಮಿತ್ರದೊಂದಿಗೆ ಹಂಚಿಕೊಂಡಿದ್ದಾರೆ

Continue Reading
Click to comment

Leave a Reply

Your email address will not be published. Required fields are marked *

Chikmagalur

ಪಕ್ಕದ ಮನೆ ನಾಯಿ ಬೊಗಳಿದ್ದಕ್ಕೆ ಆಸಿಡ್ ದಾಳಿ

Published

on

ಚಿಕ್ಕಮಗಳೂರು : ಪಕ್ಕದ ಮನೆ ನಾಯಿ ಬೊಗಳಿದ್ದಕ್ಕೆ ಆಸಿಡ್ ದಾಳಿ

ನಾಯಿ ಮಾಲೀಕರ ಮೇಲೆ ಆಸಿಡ್ ದಾಳಿ ಮಾಡಿದ ಪಕ್ಕದ ಮನೆಯವರು

ಸಾಕಿದ ನಾಯಿ ಬೊಗಳಿದ್ದಕ್ಕೆ ಯಜಮಾನ ಸುಂದರನಿಂದ ನಾಯಿಗೆ ಬೈಗುಳ

ನಮಗೆ ಬೈಯುತ್ತಿದ್ದಾನೆ ಎಂದು ತಿಳಿದು ಆಸಿಡ್ ದಾಳಿ

ಎನ್.ಆರ್.ಪುರ ತಾಲೂಕಿನ ಕುರಗುಂದ ಗ್ರಾಮದಲ್ಲಿ ಘಟನೆ

ಸುಂದರ್ ರಾಜ್ ಎಂಬುವರ ಮೇಲೆ ಆಸಿಡ್ ದಾಳಿ

ಆಸಿಡ್ ದಾಳಿಗೊಳಗಾದ ಬಳಿಕ ಸುಂದರರಾಜ್ ಪರಿಸ್ಥಿತಿ ಗಂಭೀರ

ಎಡಗಣ್ಣಿಗೆ ಗಂಭೀರ ಗಾಯ, ಕಣ್ಣಿನ ಪದರ ಬದಲಿಸುವಂತೆ ವೈದ್ಯರ ಸೂಚನೆ

ಗಾಯಾಳು ಸುಂದರ್ ರಾಜ್ ಶಿವಮೊಗ್ಗದ ಮೆಗ್ಹಾನ್ ಆಸ್ಪತ್ರೆಗೆ ದಾಖಲು

ಜೇಮ್ಸ್, ಸುಂದರ್ ರಾಜ್ ಮೇಲೆ ಆಸಿಡ್ ದಾಳಿದ ವ್ಯಕ್ತಿ

ನಾಯಿ ಹೆಸರಿನಲ್ಲಿ ಜೇಮ್ಸ್ ಗೆ ಬೈಯುತ್ತಿರುವ ಆರೋಪ

ಸುಂದರಾಜ್ ಮೇಲಿನ ಸಿಟ್ಟಿನಿಂದ ಆಸಿಡ್ ನಿಂದ ದಾಳಿ ಮಾಡಿದ ಜೇಮ್ಸ್

ಜೇಮ್ಸ್ ವಿರುದ್ಧ ಎನ್.ಆರ್. ಪುರ ಠಾಣೆಯಲ್ಲಿ ಪ್ರಕರಣ ದಾಖಲು

ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕು

Continue Reading

Chikmagalur

ಚಿಕ್ಕಮಗಳೂರು ನಗರ ವ್ಯಾಪ್ತಿಯ ಎಲ್ಲ ಠಾಣೆಯ ಸಿಬ್ಬಂದಿಗಳಿಂದ ಠಾಣೆಯಲ್ಲೇ ಮಾಹಿತಿ ಪಡೆಯಲಾಗುವುದು : ಐಜಿಪಿ ಚಂದ್ರಗುಪ್ತ

Published

on

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ ಎಸ್ ಪಿ ವರದಿ ನೀಡಿದ್ದಾರೆ. ಪೊಲೀಸ್ ಸಿಬ್ಬಂದಿಗಳಿಗೆ ಯಾವ ರೀತಿ ಸಮಸ್ಯೆಯಾಗುತ್ತಿದೆ ಎಂಬ ಬಗ್ಗೆ ಎಲ್ಲಾ ಸಿಬ್ಬಂದಿಗಳ ಜೊತೆ ಠಾಣೆಗಳಲ್ಲಿಯೇ ಮಾಹಿತಿ ಪಡೆಯುತ್ತೇವೆ ಎಂದು ಐಜಿಪಿ ಚಂದ್ರಗುಪ್ತ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಕ್ಕಮಗಳೂರು ನಗರ ವ್ಯಾಪ್ತಿಯ 6 ಪೊಲೀಸ್ ಠಾಣೆಗಳಲ್ಲಿ ಸಿಬ್ಬಂದಿಗಳಿಂದ ಈಗಾಗಲೇ ಮಾಹಿತಿ ಪಡೆಯಲಾಗಿದೆ ಎಂದರು.
ಪೊಲೀಸ್ ಇಲಾಖೆಗೆ ಹೆಚ್ಚಿನ ಜವಾಬ್ದಾರಿಯಿದೆ. ನಮ್ಮ ತೊಂದರೆಯ ಜೊತೆಗೆ ಬೇರೆಯವರ ತೊಂದರೆಯನ್ನು ನಾವು ನೋಡಬೇಕಿದೆ. ಹೀಗಾಗಿ ಸಿಬ್ಬಂದಿಗಳ ಜೊತೆ ಮಾತನಾಡಿ ಧೈರ್ಯ ತುಂಬಿದ್ದೇವೆ. ಎಲ್ಲರೂ ಅವರವರ ಕೆಲಸ ಮಾಡಿಕೊಂಡು ಹೋದರೆ ಸಮಸ್ಯೆ ಬರುವುದಿಲ್ಲ. ಶನಿವಾರ ನಡೆದ ಘಟನೆಯ ಬಗ್ಗೆಯೂ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.
ವಕೀಲರು ಹಾಗೂ ಪೊಲೀಸ್ ಸಿಬ್ಬಂದಿ ಮೇಲಿನ ಕೇಸ್ ಗಳ ಬಗ್ಗೆ ನಾವು ಮಾತನಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Continue Reading

Chikmagalur

ಕೊನೆಗೂ ಪ್ರತಿಭಟನೆ ಕೈಬಿಟ್ಟ ಪೊಲೀಸರು

Published

on

ವಕೀಲರ ಮೇಲೆ ಪ್ರತ್ಯೇಕವಾಗಿ ನಾಲ್ಕು ಎಫ್ಐಆರ್ ದಾಖಲು

ಚಿಕ್ಕಮಗಳೂರು: ವಕೀಲರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ಆರಂಭಿಸಿದ್ದ ಪೊಲೀಸರು ಭಾನುವಾರ ಬೆಳಗಿನ ಜಾವ ಪ್ರತಿಭಟನೆ ಕೈಬಿಟ್ಟಿದ್ದಾರೆ.
ಐ ಜಿ ಪಿ ಶನಿವಾರ ರಾತ್ರಿ ಬಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದ ಕೆಲವೇ ಕ್ಷಣಗಳಲ್ಲಿ ಮತ್ತೆ ಪ್ರತಿಭಟನೆ ಆರಂಭಿಸಿದ್ದ ಪೊಲೀಸರು ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಸಲಾರಂಭಿಸಿದ್ದರು. ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಪೊಲೀಸರು ಪ್ರತಿಭಟನೆಗೆ ಸಾಥ್ ನೀಡಿದ್ದರು. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ಮುಂದುವರಿಸಿದ್ದ ಪೊಲೀಸರು. ಕೊನೆಗೂ ಪೊಲೀಸರ ಬೇಡಿಕೆಗೆ ಸ್ಪಂದಿಸಿದ ಹಿರಿಯ ಅಧಿಕಾರಿಗಳು. ಹೀಗಾಗಿ ಭಾನುವಾರ ಬೆಳಗ್ಗೆ ಐದು ಮೂವತ್ತಕ್ಕೆ ಪ್ರತಿಭಟನೆ ಹಿಂಪಡೆದ ಪೊಲೀಸರು.


ಪೊಲೀಸರ ಪ್ರತಿಭಟನೆ ಹಿನ್ನೆಲೆಯಲ್ಲಿ ವಕೀಲರ ಮೇಲೆ ಪ್ರತ್ಯೇಕವಾಗಿ ನಾಲ್ಕು ಎಫ್ಐಆರ್ ದಾಖಲಿಸಿರುವ ಪೊಲೀಸ್ ಅಧಿಕಾರಿಗಳು. ಇದರ ಜೊತೆಗೆ ಈಗಾಗಲೇ ಅಮಾನತ್ತಾಗಿರುವ ಪೊಲೀಸರ ಅಮಾನತು ಆದೇಶ ಹಿಂಪಡೆಯಲು ಸಮಯವಕಾಶ ಕೇಳಿದ ಎಸ್ ಪಿ. ಬೆಳಗಿನ ಜಾವ ದೂರವಾಣಿ ಕರೆಯಲ್ಲಿ ಸಿಬ್ಬಂದಿಗಳ ಜೊತೆ ಮಾತನಾಡಿದ ಎಸ್ ಪಿ. ಹೀಗಾಗಿ ಪ್ರತಿಭಟನೆ ಹಿಂಪಡೆದ ಪೊಲೀಸ್ ಸಿಬ್ಬಂದಿಗಳು. ಮಂಗಳವಾರ ಹೈಕೋರ್ಟ್ ನಲ್ಲಿ ಪ್ರಕರಣದ ವಿಚಾರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆದು ಇಲಾಖೆಗೆ ಸಹಕಾರ ನೀಡಿರುವ ಪೊಲೀಸ್ ಸಿಬ್ಬಂದಿ

Continue Reading

Trending