Connect with us

State

ಮಾಜಿ ಸಿಎಂ ಕುಮಾರಸ್ವಾಮಿ ಯೋಗಕ್ಷೇಮ ವಿಚಾರಿಸಿದ ಸಂಸದ ಜಿ.ಎಂ.ಸಿದ್ದೇಶ್ವರ್

Published

on

ದಾವಣಗೆರೆ : ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದ ಡಾ.ಜಿ.ಎಂ.ಸಿದ್ದೇಶ್ವರ್ ಅವರು ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು.
ಎಚ್.ಡಿ.ಕುಮಾರಸ್ವಾಮಿ ಅವರು ಇತ್ತೀಚೆಗೆ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗೆ ಒಳಪಟ್ಟು ಚೇತರಿಸಿಕೊಳ್ಳುತ್ತಿದ್ದು, ಅವರನ್ನು ಭೇಟಿ ಮಾಡಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದರು.
ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಅವರು ಮತ್ತು ದೇವೇಗೌಡರು ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯ ಮೆಚ್ಚಿ ಕರ್ನಾಟಕದಲ್ಲಿ ಬಿಜೆಪಿ ಜೊತೆ ಸೀಟು ಹಂಚಿಕೆ ಮಾಡಿಕೊಂಡಿದ್ದಾರೆ ಎಂದರು.
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕು. ದಾವಣಗೆರೆಯಲ್ಲೂ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಅವರನ್ನು ಗೆಲ್ಲಿಸಲು ಒಟ್ಟಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಜೊತೆಯಲ್ಲಿದ್ದರು..

Continue Reading
Click to comment

Leave a Reply

Your email address will not be published. Required fields are marked *

State

ವಿಷಾಹಾರ ಸೇವಿಸಿ ವಿದ್ಯಾರ್ಥಿ ಸಾವು: ಸಿಎಂ ಫಸ್ಟ್‌ ರಿಯಾಕ್ಷನ್‌

Published

on

ಬೆಂಗಳೂರು: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ಟಿ.ಕಾಗೇಪುರ ಖಾಸಗಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಅದರಲ್ಲಿ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದು, ವಿದ್ಯಾರ್ಥಿ ನಿಧನಕ್ಕೆ ಸಂತಾಒಪ ಸೂಚಿಸಿದ್ದಾರೆ.

ತಮ್ಮ ಟ್ವೀಟ್‌ನಲ್ಲಿ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಹಲವು ಮಕ್ಕಳು ತೀವ್ರ ಅಸ್ವಸ್ಥಗೊಂಡ ವಿಚಾರ ತಿಳಿದು ನೋವಾಯಿತು.

ಘಟನೆ ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮಕ್ಕಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಹಾಗೂ ಘಟನೆಗೆ ಕಾರಣರಾದವರ ಮೇಲೆಯೂ ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದೆ, ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.

ಈ ದುರ್ಘಟನೆಯಲ್ಲಿ ಮಡಿದ ಬಾಲಕನ‌ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು. ಬೇರೆಡೆ ತಯಾರಿಸಿದ ಆಹಾರವನ್ನು ಸೇವಿಸುವ ಮುನ್ನ ಅದರಲ್ಲಿಯೂ ಚಿಕ್ಕ ಮಕ್ಕಳಿಗೆ ನೀಡುವ ಮುನ್ನ ಹೆಚ್ಚು ಜಾಗೃತೆ ವಹಿಸಿ. ಅಜಾಗರೂಕತೆಗೆ ಅಮೂಲ್ಯ ಜೀವಗಳು ಬಲಿಯಾಗದಿರಲಿ ಎಂದು ಬರೆದುಕೊಂಡು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

Continue Reading

State

ಬೆಂಗಳೂರು ನಮ್ಮ ಮೆಟ್ರೋ ನೇಮಕಾತಿ : ಟ್ರೈನ್ ಆಪರೇಟರ್ ಹುದ್ದೆಗಳ ಭರ್ತಿ

Published

on

BMRCL Train Operator’s Recruitment 2025 : ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಟ್ರೈನ್ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ನೋಟಿಫಿಕೇಷನ್ ಬಿಡುಗಡೆ ಮಾಡಿದ್ದಾರೆ.

ನಮ್ಮ ಮೆಟ್ರೋ, BMRCL ನಲ್ಲಿ ಒಟ್ಟು 50 ಟ್ರೈನ್ ಆಪರೇಟರ್ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೆಟ್ರೋ ಇಲಾಖೆಯ ಏನೆಲ್ಲಾ ಅರ್ಹತೆಗಳನ್ನು ನಿಗದಿಪಡಿಸಿದೆ? ಯಾವ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸುವ ವಿಧಾನ ಹೇಗೆ ಎಂಬ ಮಾಹಿತಿ ಇಲ್ಲಿದೆ..

ಹುದ್ದೆಗಳ ವಿವರ :

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟ್ರೇನ್ ಆಪರೇಟರ್ ಹುದ್ದೆಗಳನ್ನು 5 ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನಂತರದಲ್ಲಿ ಅಭ್ಯರ್ಥಿಯು ಮಾಡುವ ಕೆಲಸದ ಆಧಾರದ ಮೇಲೆ ಸೇವಾ ಅವಧಿಯನ್ನು ಹೆಚ್ಚಿಸಲಾಗುವುದು.

ಯಾವ ಯಾವ ಅರ್ಹತೆಗಳನ್ನು ಹೊಂದಿರುವುದು ಕಡ್ಡಾಯವಾಗಿದೆ?

ಟ್ರೈನ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕಡ್ಡಾಯವಾಗಿ 38 ವರ್ಷದ ಒಳಗಿನ ಅಭ್ಯರ್ಥಿಗಳಾಗಿದ್ದು, ಈ ಕೆಳಗಿನ ಯಾವುದಾದರೂ ಒಂದು ವಿಷಯದಲ್ಲಿ ಡಿಪ್ಲೋಮಾ ಇನ್ ಇಂಜಿನಿಯರಿಂಗ ಕೋರ್ಸ್ ಮುಗಿಸಿರಬೇಕು.

Electrical Engineering / Electrical & Electronics
Engineering / Telecommunications/ Electronics & Communication Engineering/ Electrical
Power Systems /Industrial Electronics/ Mechanical Engineering

ಆಯ್ಕೆಯಾಗುವವರಿಗೆ ಸಿಗುವ ಸಂಬಳ : ನೇಮಕಾತಿಯಲ್ಲಿ ಅಂತಿಮವಾಗಿ ಕೆಲಸಕ್ಕೆ ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಮಾಸಿಕ 35,000 ರೂಪಾಯಿಯಿಂದ 82,660 ರೂಪಾಯಿವರೆಗೆ ನೀಡಲಾಗುವುದು.

ಅರ್ಜಿ ಸಲ್ಲಿಸುವುದು ಯಾವಾಗ?

ಈ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯೂ ಮಾರ್ಚ್ 12, 2025 ರಂದು ಬಿಡುಗಡೆಯಾಗಿದ್ದು ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವು ಏಪ್ರಿಲ್ 09, 2025 ಆಗಿರುತ್ತದೆ.

ಅರ್ಜಿ ಸಲ್ಲಿಕೆಯ ಪ್ರಕ್ರಿಯೆ :

ಮೊದಲು ಕೆಳಗೆ ನೀಡಿರುವ ಲಿಂಕ್ ಮೇಲೆ ಒತ್ತಿ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಿದ ನಂತರ ಅರ್ಜಿ ನಮೂನೆಯನ್ನು ಪ್ರಿಂಟ್ ತೆಗೆಸಿ ಅದಕ್ಕೆ ನಿಗದಿತ ಸ್ಥಳದಲ್ಲಿ ಪಾಸ್ ಪೋರ್ಟ್ ಅಳತೆಯ ಫೋಟೋ ಅಂಟಿಸಿ ಕೆಳಗಿನ ವಿಳಾಸಕ್ಕೆ ಕಳುಹಿಸಿ.

ವಿಳಾಸ : The General Manager (HR), Bangalore Metro Rail Corporation Limited, III Floor, BMTC Complex, K.H.Road, Shanthinagar, Bangalore 560027

ಅಧಿಕೃತ ಜಾಲತಾಣ – https://projectrecruit.bmrc.co.in/

Continue Reading

State

ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ: ಬಸವರಾಜ ಬೊಮ್ಮಾಯಿ

Published

on

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದ್ದು, ವಿಶೇಷವಾಗಿ ಪ್ರೀತಿ ಹೆಸರಿನಲ್ಲಿ ಯುವತಿಯರನ್ನು ವಂಚಿಸಿ ಹತ್ಯೆ ಮಾಡುವ ಹೇಯ ಕೃತ್ಯಗಳು ಹೆಚ್ಚಾಗಿರುವುದು ಅತ್ಯಂತ ಆಘಾತಕಾರಿ ವಿಚಾರ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಹುಬ್ಬಳ್ಳಿಯಲ್ಲಿ ಕಾಲೇಜು ಯುವತಿ ನೇಹಾ ಹಿರೇಮಠ ಅವಳ ಬರ್ಬರ ಕೊಲೆಯ ನೋವು ಮಾಸುವ ಮುನ್ನ ಈಗ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲ್ಲೂಕಿನ ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಎನ್ನುವ ಯುವತಿಯ ಕೊಲೆಯಾಗಿದ್ದು, ಇದೂ ಕೂಡ ಲವ್ ಜಿಹಾದ್ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಇತ್ತೀಚಿನ ದಿನಗಳಲ್ಲಿ ಪ್ರೀತಿಯ ಹೆಸರಿನಲ್ಲಿ ಲವ್ ಜಿಹಾದ್ ಜಾಲ ರಾಜ್ಯದಲ್ಲಿ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದೆ. ಈ ಕೃತ್ಯ ನಡೆಸುವವರಿಗೆ ಪೊಲೀಸರ ಭಯ ಇಲ್ಲದಿರುವುದು ಇಂತಹ ಪ್ರಕರಣ ಹೆಚ್ಚಾಗಲು ಕಾರಣ. ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯದೇ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡುವುದರಿಂದ ಮಾತ್ರ ಇಂತಹ ಪ್ರಕರಣಗಳಿಗೆ ತಡೆ ಒಡ್ಡಬಹುದಾಗಿದೆ.

ಹೆಣ್ಣು ಮಕ್ಕಳ ಕುಟುಂಬ, ಬಂಧುಗಳು ಮತ್ತು ಸಮಾಜ ಅತ್ಯಂತ ನೋವು ಪಡುವ ಈ ಘಟನೆಯಲ್ಲಿ ಮೃತ ಕುಟುಂಬಕ್ಕೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ಕೊಡಬೇಕು ಮತ್ತು ನ್ಯಾಯ ದೊರಕಿಸಿ ಕೊಡಬೇಕು ಎಂದು ಆಗ್ರಹಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Continue Reading

Trending

error: Content is protected !!