Connect with us

State

ವೃದ್ಧದಂಪತಿಯ ಹಲ್ಲೆಗೈದು ದರೋಡೆ – ಘಟನೆ ನಡೆದು 5ಗಂಟೆಯೊಳಗೆ ಚಡ್ಡಿಗ್ಯಾಂಗ್‌ನ ನಾಲ್ವರು ಅಂದರ್

Published

on

 


ಮಂಗಳೂರು: ನಗರದ ಕೋಟೆಕಣಿಯ ಮನೆಯೊಂದಕ್ಕೆ ಕಿಟಕಿ ಸರಳು ಕತ್ತರಿಸಿ ನುಗ್ಗಿ ವೃದ್ಧದಂಪತಿಯನ್ನು ಬೆದರಿಸಿ ಲಕ್ಷಾಂತರ ಮೌಲ್ಯದ ಕಾರು, ಚಿನ್ನಾಭರಣ ದರೋಡೆಗೈದು ಪರಾರಿಯಾಗಿದ್ದ ಚಡ್ಡಿಗ್ಯಾಂಗ್‌ ಅನ್ನು ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿ ಕಂಬಿ ಹಿಂದೆ ಕಳುಹಿಸಿದೆ.

ಮಧ್ಯಪ್ರದೇಶ ರಾಜ್ಯ ಮೂಲದ ರಾಜು ಸಿಂಗ್ವಾನಿಯ(24), ಮಯೂರ್(30), ಬಾಲಿ(22), ವಿಕ್ಕಿ(21)‌ ಬಂಧಿತ ಚಡ್ಡಿಗ್ಯಾಂಗ್‌ ದರೋಡೆಕೋರರು.

ಜುಲೈ 9ರ ನಸುಕಿನ ಜಾವ 4ಗಂಟೆ ಸುಮಾರಿಗೆ ಬರ್ಮುಡಾ ಚಡ್ಡಿ, ಬನಿಯನ್ ಧರಿಸಿರುವ ನಾಲ್ವರ ತಂಡ ಕೋಟೆಕಣಿ ರಸ್ತೆಯ ವಿಕ್ಟರ್ ಮೆಂಡೋನ್ಸಾ ಎಂಬವರ ಮನೆ ಕಿಟಕಿಯ ಗ್ರಿಲ್ ಕತ್ತರಿಸಿ ಒಳನುಗ್ಗಿದೆ‌. ತಂಡ ವಿಕ್ಟರ್‌ವರಿಗೆ ರಾಡಿನಿಂದ ಹಲ್ಲೆಗೈದು ಅವರ ಪತ್ನಿಗೂ ಹಲ್ಲೆಗೈದು ಬೊಬ್ಬೆ ಹಾಕದಂತೆ, ಯಾರಿಗೂ ಫೋನ್ ಮಾಡದಂತೆ ಬೆದರಿಸಿದೆ. ಬಳಿಕ ಕಪಾಟಿನಲ್ಲಿದ್ದ 12 ಲಕ್ಷ ಮೌಲ್ಯದ ಚಿನ್ನ, ವಜ್ರದಾಭರಣ, ಮೊಬೈಲ್ ಮತ್ತು 1 ಲಕ್ಷ ಮೌಲ್ಯದ 10 ಬ್ರಾಂಡೆಡ್ ವಾಚ್ ಗಳು, 3ಸಾವಿರ ನಗದು ಸುಲಿಗೆ ಮಾಡಿದೆ. ಅಲ್ಲದೆ ಸದ್ರಿ ಮನೆಯ ಹೊರಗೆ ಪಾರ್ಕ್ ಮಾಡಿದ್ದ ಕಾರಿನ ಸಮೇತ ಪರಾರಿಯಾಗಿದೆ. ಈ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರ ಆರೋಪಿಗಳ ಬೆನ್ನುಬಿದ್ದಿದ್ದಾರೆ. ಆರೋಪಿಗಳು ಕದ್ದೊಯ್ದ ಕಾರು ಮುಲ್ಕಿ ಬಳಿ ಪತ್ತೆಯಾಗಿದೆ. ಅಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಆರೋಪಿಗಳು ಅಲ್ಲಿಂದ ಕೆಎಸ್ಆರ್‌ಟಿಸಿ ಬಸ್‌ನಲ್ಲಿ ಮಂಗಳೂರಿಗೆ ಪ್ರಯಾಣಿಸಿದ್ದು ತಿಳಿದುಬಂದಿದೆ. ತಕ್ಷಣ ಕೆಎಸ್ಆರ್‌ಟಿಸಿ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಶಂಕಿತ ಆರೋಪಿಗಳು ಬೆಂಗಳೂರು ಕಡೆ ಪ್ರಯಾಣಿಸಿದ ಮಾಹಿತಿ ಲಭ್ಯವಾಗಿದೆ. ಅದರಂತೆ ಸಕಲೇಶಪುರ ಡಿವೈಎಸ್ಪಿ, ಸಿಪಿಸಿ ಹಾಗೂ ಸಿಬ್ಬಂದಿ ಸಕಲೇಶಪುರದಲ್ಲಿ ಬಸ್ಸು ತಡೆದು ಪ್ರಯಾಣಿಸುತ್ತಿದ್ದ ನಾಲ್ವರನ್ನು ವಶಕ್ಕೆ ಪಡೆದು ದರೋಡೆಗೈದ ಎಲ್ಲಾ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಿಚಾರಣೆ ನಡೆಸಲಾಗಿ ಅವರುಗಳು ಕೃತ್ಯವೆಸಗಿದ ಬಗ್ಗೆ ಒಪ್ಪಿದ್ದು, ಅವರ ವಶದಲ್ಲಿದ್ದ ಮಂಗಳೂರು ನಗರದಲ್ಲಿ ಸುಲಿಗೆ ಮಾಡಿದ್ದ ಎಲ್ಲಾ ಚಿನ್ನ ಹಾಗೂ ವಜ್ರದ ಆಭರಣಗಳು, ವಾಚ್ ಗಳು ಹಾಗೂ ಹಣವನ್ನು ಅಮಾನತ್ತು ಪಡಿಸಿ ಉರ್ವಾ ಪೊಲೀಸ್ ಅಧಿಕಾರಿಗಳಿಗೆ ವಶಕ್ಕೆ ನೀಡಿರುತ್ತಾರೆ. ಈ ಮೂಲಕ ಪೊಲೀಸರು ಘಟನೆ ನಡೆದ 5ಗಂಟೆಗಳೊಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

State

INDvsENG 1st t20: ಟೀಂ ಇಂಡಿಯಾ ಅಲ್‌ರೌಂಡರ್‌ ಪ್ರದರ್ಶನ; ಸೂರ್ಯ ಬಳಕ್ಕೆ ಮೊದಲ ಜಯ

Published

on

ಕೊಲ್ಕತ್ತಾ: ಭಾರತ ತಂಡದ ಸಂಘಟಿತ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ದಾಳಿಗೆ ನಲುಗಿದ ಇಂಗ್ಲೆಂಡ್‌ ತಂಡ ಭಾರತ ಹಾಗೂ ಇಂಗ್ಲೆಂಡ್‌ ನಡುವಣ ಐದು ಟಿ20 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್‌ಗಳ ಅಂತರದಿಂದ ಗೆಲುವು ದಾಖಲಿಸಿದೆ.

ಇಲ್ಲಿನ ಈಡೆನ್‌ ಗಾರ್ಡೆನ್‌ ಕ್ರೀಡಾಂಗಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಇಂಗ್ಲೆಂಡ್‌ ತಂಡ ನಿಗದಿತ 20 ಓವರ್‌ಗಳಲ್ಲಿ ಆಲ್‌ಔಟ್‌ ಆಗಿ 132 ರನ್‌ ಗಳಿಸಿ ಟೀಂ ಇಂಡಿಯಾಗೆ 133 ರನ್‌ಗಳ ಸಾಧಾರಣ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿ ಭಾರತ ತಂಡ 12.5 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 133 ರನ್‌ ಗಳಿಸಿ 7 ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗಿತು.

ಇಂಗ್ಲೆಂಡ್‌ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಇಂಗ್ಲೆಂಡ್‌ ಪರವಾಗಿ ಬೆನ್‌ ಡಕೆಟ್‌ ಹಾಗೂ ಫಿಲ್‌ ಸಾಲ್ಟ್‌ ಇನ್ನಿಂಗ್ಸ್‌ ಆರಂಭಿಸಿದರು. ಸಾಲ್ಟ್‌ ಶೂನ್ಯ ಸುತ್ತಿ ಹೊರನಡೆದರೇ, ಡಕೆಟ್‌ 4(4) ರನ್‌ ಗಳಿಸಿ ಇನ್ನಿಂಗ್ಸ್‌ ಮುಗಿಸಿದರು.

ನಾಯಕ ಜೋಸ್‌ ಬಟ್ಲರ್‌ 44 ಎಸೆತ 8 ಬೌಂಡರಿ, 2 ಸಿಕ್ಸರ್‌ ಸಹಿತ 68 ರನ್‌ ಗಳಿಸಿದ್ದೇ ತಂಡದ ಪರವಾಗಿ ಗಳಿಸಿದ ಅಧಿಕ ರನ್‌. ಬಟ್ಲರ್‌ ಏಕಾಂಕಿ ಹೋರಾಟದ ಫಲವಾಗಿ ಇಂಗ್ಲೆಂಡ್‌ ನೂರರ ಗಡಿ ದಾಟಿತು.

ಉಳಿದಂತೆ ಹ್ಯಾರಿ ಬ್ರೂಕ್‌ 17(14), ಲಿವಿಂಗ್‌ಸ್ಟೋನ್‌ ಡಕ್‌ಔಟ್‌, ಬೆಥೆಲ್‌ 7(14), ಓವರ್‌ಟನ್‌ 2(4), ಆಟ್ಕಿನ್ಸನ್‌ 2(13), ಜೋಫ್ರಾ ಆರ್ಚರ್‌ 12(10), ಮಾರ್ಕ್‌ವುಡ್‌ 1(1) ಹಾಗೂ ಆದಿಲ್‌ ರಶೀದ್‌ ಔಟಾಗದೇ 8(11) ರನ್‌ ಗಳಿಸಿದರು.

ಟೀಂ ಇಂಡಿಯಾ ಪರ ವರುಣ್‌ ಚಕ್ರವರ್ತಿ 3, ಅರ್ಶದೀಪ್‌ ಸಿಂಗ್‌, ಹಾರ್ದಿಕ್‌ ಪಾಂಡ್ಯ ಹಾಗೂ ಅಕ್ಷರ್‌ ಪಟೇಲ್‌ ತಲಾ 2 ವಿಕೆಟ್‌ ಕಬಳಿಸಿ ಮಿಂಚಿದರು.

ಟೀಂ ಇಂಡಿಯಾ ಇನ್ನಿಂಗ್ಸ್‌: ಈ ಸಾಧಾರಣ ಮೊತ್ತ ಬೆನ್ನತ್ತಿದ ಭಾರತ ತಂಡಕ್ಕೆ ಆರಂಭಿಕರಾದ ಸಂಜು ಸ್ಯಾಮ್ಸನ್‌ ಹಾಗೂ ಅಭಿಷೇಕ್‌ ಶರ್ಮಾ ಉತ್ತಮ ಇನ್ನಿಂಗ್ಸ್‌ ಕಟ್ಟಿದರು. ಸಂಜು ಸ್ಯಾಮ್ಸನ್‌ 26(20) ರನ್‌ ಗಳಿಸಿದರೇ, ನಾಯಕ ಸೂರ್ಯಕುಮಾರ್‌ ಯಾದವ್‌ ಡಕ್‌ಔಟ್‌ ಆಗಿ ಹೊರನಡೆದರು.

ಇತ್ತ ಆರಂಭದಿಂದಲೇ ಭರ್ಜರಿಯಾಗಿ ಬ್ಯಾಟ್‌ ಬೀಸಿದ ಅಭಿಷೇಕ್‌ ಶರ್ಮಾ 34 ಎಸೆತಗಳಲ್ಲಿ 5 ಬೌಂಡರಿ ಹಾಗೂ ಭರ್ಜರಿ 8 ಸಿಕ್ಸರ್‌ಗಳ ಸಹಾಯದಿಂದ 79 ರನ್‌ ಗಳಿಸಿ ಔಟಾದರು. ಕೊನೆಯಲ್ಲಿ ಜೊತೆಯಾದ ತಿಲಕ್‌ ವರ್ಮಾ ಹಾಗೂ ಹಾರ್ದಿಕ್‌ ಪಾಂಡ್ಯ ಕ್ರಮವಾಗಿ 19 ಹಾಗೂ 3 ರನ್‌ ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ಇಂಗ್ಲೆಂಡ್‌ ಪರ ಜೋಫ್ರಾ ಆರ್ಚರ್‌ ಎರಡು, ಆದಿಲ್‌ ರಶೀದ್‌ ಒಂದು ವಿಕೆಟ್‌ ಕಬಳಿಸಿದರು.

Continue Reading

State

ಯಲ್ಲಾಪುರ, ಸಿಂಧನೂರಿನಲ್ಲಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ 3ಲಕ್ಷ ಪರಿಹಾರ ಘೋಷಿಸಿದ ಸಿಎಂ

Published

on

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ 14 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಎರಡು ಪ್ರತ್ಯೇಕ ಅಪಘಾತದಲ್ಲಿ ಮೃತರಾದವರ ಕುಟುಂಬಕ್ಕೆ ಸರ್ಕಾರದ ವತಿಯಿಂದ 3ಲಕ್ಷ ಪರಿಹಾರ ಘೋಷಿಸಲಾಗಿದೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು.

ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು. ಮೃತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು.

ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮನವಿ ಮಾಡುತ್ತೇನೆ ಎಂದು ಸಿಎಂ ಆಫ್‌ ಕರ್ನಾಟಕ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿ ಪರಿಹಾರ ಘೋಷಿಸಿದ್ದಾರೆ.

Continue Reading

State

ಮುಡಾ ಸೈಟು ಮುಟ್ಟುಗೋಲು: ಸಿಎಂ ಸಿದ್ದರಾಮಯ್ಯ ಏನಂದ್ರು?

Published

on

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) 50:50 ಅನುಪಾತದಲ್ಲಿ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ (ಜಾರಿ ನಿರ್ದೇಶನಾಲಯ) ಮುಡಾ ಸೈಟುಗಳನ್ನು ಮುಟ್ಟುಗೋಲು ಹಾಕಿಕೊಂಡು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.

ಈ ಸಂಬಂಧ ಮೊದಲ ಬಾರಿಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಇಡಿ ಅಧಿಕಾರಿಗಳ ಮಾಧ್ಯಮ ಪ್ರಕಟಣೆಗೂ ನನಗೂ ಯಾವುದೇ ಸಂಬಂಧವಿಲ್ಲ. 50:50 ಸೈಟುಗಳನ್ನು ಮುಟ್ಟುಗೋಲು ಹಾಕಿದ್ದೇವೆ ಎನ್ನುತ್ತಾರೆ. ಕೇವಲ ರಾಜಕೀಯ ಉದ್ದೇಶದಿಂದ ತನಿಖೆ ಮಾಡುತ್ತಿದ್ದಾರೆ. ಇದಕ್ಕೂ ನನಗೂ ಸಂಬಂಧವಿಲ್ಲ ಎಂದು ಟಾಂಗ್‌ ಕೊಟ್ಟರು.

ಇಡಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಿರುವುದು ಬಿಜೆಪಿ. ಇದೊಂದು ರಾಜಕೀಯ ಉದ್ದೇಶಪೂರಿತವಾದ ಪಿತೂರಿ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

Continue Reading

Trending

error: Content is protected !!