Connect with us

Manglore

ಮಂಗಳೂರು ಉತ್ತರ ವಲಯ ಹಾಗೂ ದ. ಕ. ಜಿ. ಪಂ. ಹಿ. ಪ್ರಾ. ಶಾಲೆ ಕಾವೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಕಬ್ಬಡ್ಡಿ ಪಂದ್ಯಾಟ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ಉತ್ತರ ವಲಯ ಹಾಗೂ ದ. ಕ. ಜಿ. ಪಂ. ಹಿ. ಪ್ರಾ. ಶಾಲೆ ಕಾವೂರು ಇವುಗಳ ಸಂಯುಕ್ತ ಆಶ್ರಯದಲ್ಲಿ 2024-2025 ನೇ ಸಾಲಿನ ಮಂಗಳೂರು ಹೋಬಳಿ ಮಟ್ಟದ ಕಬ್ಬಡ್ಡಿ ಪಂದ್ಯಾಟ ದಿನಾಂಕ 28ರಂದು ಶಾಲಾ ಮೈದಾನದಲ್ಲಿ ನಡೆಯಿತು.
ಸ್ಥಳೀಯ ಕಾರ್ಪೋರೇಟರ್ ಸುಮಂಗಲಾ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜೇಮ್ಸ್ ಕುಟಿನೋ, ದೈಹಿಕ ಶಿಕ್ಷಣಾಧಿಕಾರಿಗಳಾದ ಭರತ್, ಕರ್ನಾಟಕ ರಾಜ್ಯ ಸರಕಾರದ ಆಹಾರ ಆಯೋಗದ ಸದಸ್ಯ ಸುಮಂತ್ ರಾವ್, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿ ನಿತೇಶ್ ಕೊಂಡೆ, ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ವಾಣಿ, CRP ದೀಪಿಕಾ, ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷರಾದ ಚೆಲುವಮ್ಮ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಲಕ್ಷ್ಮಣ ಛಲವಾದಿ, ಶಾಲಾ ಹಳೆ ವಿದ್ಯಾರ್ಥಿ ಹಸನಬ್ಬ, ಪ್ರವೀಣ್ ಲೋಬೊ, ನಿವೃತ್ತ ಮುಖ್ಯ ಶಿಕ್ಷಕಿ ಚಂದ್ರಾವತಿ, ಮುಖ್ಯ ಶಿಕ್ಷಕಿ ಸೀತಮ್ಮ. ಜೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.


ಈ ಕಬಡ್ಡಿ ಪಂದ್ಯಾಟದಲ್ಲಿ 28 ಶಾಲೆಗಳು ಭಾಗವಹಿಸಿದ್ದವು. ಬಾಲಕರ ವಿಭಾಗ- MGC ಬೋಂದೆಲ್( ಪ್ರಥಮ.)
ವಿದ್ಯಾಜ್ಯೋತಿ ಕಾವೂರು( ದ್ವಿತೀಯ)
ಬಾಲಕಿಯರ ವಿಭಾಗ – B.E. M ಕಾರ್ ಸ್ಟ್ರೀಟ್ (ಪ್ರಥಮ ) ವಿದ್ಯಾ ಆಂಗ್ಲ ಮಾಧ್ಯಮ ಹಿ. ಪ್ರಾಥಮಿಕ ಶಾಲೆ ಕೊಂಚಾಡಿ (ದ್ವಿತೀಯ ) ಶಾಲಾ ಮುಖ್ಯ ಶಿಕ್ಷಕಿ ಸೀತಮ್ಮ. ಜೆ ಸ್ವಾಗತಿಸಿದರು. ಸುನೀತಾ ಪ್ಲಾವಿಯಾ ಡಿಕೋಸ್ತಾ ನಿರೂಪಿಸಿದರು. ಕೋಕಿಲವಾಣಿ ವಂದಿಸಿದರು. ಶಿಕ್ಷಕಿ ಆಶಾ ಮತ್ತು ದೈಹಿಕ ಶಿಕ್ಷಕಿ ವಿಜಯಲಕ್ಷ್ಮಿ ಹಾಗೂ SDMC ಸದಸ್ಯರು ಸಹಕರಿಸಿದರು.

Continue Reading

Manglore

ಮಂಗಳೂರು: ಕಾರಿನಿಂದ ಅಡಿಕೆ ವ್ಯಾಪಾರದ 1.28ಲಕ್ಷ ಹಣ ಎಗರಿಸಿದ ಆರೋಪಿ ಅರೆಸ್ಟ್

Published

on

ಮಂಗಳೂರು: ಅಡಿಕೆ ವ್ಯಾಪಾರದಲ್ಲಿ ಬಂದ 1.28ಲಕ್ಷ ರೂ ಹಣವನ್ನು ಅಡಿಕೆ ವ್ಯಾಪಾರಿಯ ಕಾರಿನಿಂದ ಎಗರಿಸಿದ ಪ್ರಕರಣವನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೇಧಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಂಗಳೂರು ಜಪ್ಪು ಮಾರ್ಕೆಟ್ ಬಳಿಯ ಗುಜ್ಜರೆಕೆರೆ ನಿವಾಸಿ ಝಾಕೀರ್ ಹುಸೈನ್(38) ಬಂಧಿತ ಆರೋಪಿ.

ಮಹಮ್ಮದ್ ನಿಜಾಮುದ್ದಿನ್ ಎಂಬವರು ಶ್ರೀಧರ ಆಳ್ವರವರಿಗೆ ಸೇರಿದ ಅಡಿಕೆಯನ್ನು ಫೆ.7ರಂದು ಟಾಟಾ ಇಂಟ್ರಾ ವಾಹನದಲ್ಲಿ ತುಂಬಿಸಿಕೊಂಡು‌ ಮಂಗಳೂರಿನ ಬೀಬಿ ಅಲಾಬಿ ರಸ್ತೆಯಲ್ಲಿರುವ ಅಂಗಡಿಗೆ ಮಾರಾಟ ಮಾಡಿದ್ದರು. ಅದರಿಂದ ಬಂದ 1,28,740 ಹಣವನ್ನು ವಾಹನದ ಡ್ಯಾಶ್ ಬೋರ್ಡ್ ನಲ್ಲಿಟ್ಟಿದ್ದರು. ಬಳಿಕ ವಾಹನವನ್ನು ಚಲಾಯಿಸಿಕೊಂಡು ಬಂದರ್‌ನ ಜೆ.ಎಂ.ರೋಡ್ ನಲ್ಲಿರುವ ಸದರ್ನ್ ಏಜೆನ್ಸಿಯಲ್ಲಿ ಎಸಿಪಿ ಶೀಟ್ ಖರೀದಿಸಿದ್ದಾರೆ‌. ಅಲ್ಲಿಂದ ಬಂದಾಗ ವಾಹನದ ಡ್ಯಾಶ್ ಬೋರ್ಡ್ ತೆರೆದಿದ್ದು, ಅದರಲ್ಲಿಟ್ಟಿದ್ದ ಹಣ ಕಳ್ಳತನವಾಗಿತ್ತು.

ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ನಂಬರ್‌ 18/2026 ಕಲಂ 303(2) ಬಿ.ಎನ್.ಎಸ್ ಯಂತೆ ಪ್ರಕರಣ ದಾಖಲಾಗಿತ್ತು.

ತಕ್ಷಣ ಪೊಲೀಸರು ಕಾರ್ಯಾಚರಣೆ ನಡೆಸಿ ಮರುದಿನವೇ ಆರೋಪಿಯನ್ನು ಮಣ್ಣಗುಡ್ಡ ಜಂಕ್ಷನ್ ಬಳಿ ವಶಕ್ಕೆ ಪಡೆದಿದ್ದಾರೆ. ಬಂಧಿತನಿಂದ ಕಳವು ಮಾಡಿದ 70,000ರೂ. ನಗದು ಕೃತ್ಯಕ್ಕೆ ಬಳಸಿದ ದ್ವಿಚಕ್ರವಾಹನ, ಕಳ್ಳತನದ ಹಣದಿಂದ ಖರೀದಿಸಿದ ವಿವೋ ಕಂಪನಿಯ ಮೊಬೈಲ್ ಪೋನ್‌ಅನ್ನು ಸ್ವಾಧೀನಪಡಿಸಲಾಗಿದೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

Continue Reading

Manglore

ಕಾರಿನಲ್ಲಿ ಕಾಲೇಜು ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ…?- ಆರೋಪ

Published

on

ಬೆಳ್ತಂಗಡಿ: ಕಾರಿನಲ್ಲಿ ಬಂದು ಕಾಲೇಜು ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನಿಸಿದ ಘಟನೆ ಬೆಳ್ತಂಗಡಿಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತಾನು ಸ್ಕೂಟಿಯಲ್ಲಿ ಕಾಲೇಜಿಗೆ ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ಮೂವರು ಮಾಸ್ಕ್‌ಧಾರಿಗಳು ಚೂರಿ ತೋರಿಸಿ ಬಲವಂತವಾಗಿ ಕಾರಿಗೆ ಎಳೆದು ಕೂರಿಸಲು ಯತ್ನಿಸಿದ್ದಾರೆ. ಎಂದು 16 ವರ್ಷದ ಪ್ರಥಮ ಪಿಯುಸಿ ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್ ಯತ್ನ ಆರೋಪ ಮಾಡಿದ್ದಾರೆ.

ಈ ವೇಳೆ ತಾನು ಕಿರುಚಾಡಿದ್ದೇನೆ. ಅಲ್ಕದೆ ಚೂರಿಯಿಂದ ಕೈಗೆ ಗಾಯಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ‌. ಆದರೆ ಆಗ ವ್ಯಕ್ತಿಯೋರ್ವರು ಅದೇ ದಾರಿಯಲ್ಲಿ ಬರುತ್ತಿರುವುದನ್ನು ಗಮನಿಸಿ ಮೂವರು ಆಗಂತುಕರು ಪರಾರಿಯಾಗಿದ್ದಾರೆ‌. ತಕ್ಷಣ ಆಕೆಯನ್ನು ಆ ವ್ಯಕ್ತಿ ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

Continue Reading

Manglore

 ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ನಗದು ಕಳವು- ಇಬ್ಬರು ಆರೋಪಿಗಳು ಅರೆಸ್ಟ್

Published

on

ಮಂಗಳೂರು: ನಗರದ ಹೊರವಲಯದ ಮನೆಯೊಂದಕ್ಕೆ ನುಗ್ಗಿ ಲಕ್ಷಾಂತರ ಮೌಲ್ಯದ  ನಗದು ಕಳವುಗೈದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕಳವಾರು ಬಳಿಯ, ಬಾಳ ಗ್ರಾಮದ ನಿವಾಸಿಗಳಾದ ಅಬ್ದುಲ್ ನಾಸರ್ ಮತ್ತು ಮಯ್ಯದ್ದಿ ಇಮ್ರಾನ್ ಬಂಧಿತ ಆರೋಪಿಗಳು.

2025ರ ಸೆಪ್ಟೆಂಬರ್ 23ರಂದು ಬಜಪೆ ಠಾಣಾ ವ್ಯಾಪ್ತಿಯ ಕೆಂಜಾರು ಜೋಕಟ್ಟೆಯ ಮೊಹಮ್ಮದ್ ಷರೀಫ್ ಅವರು ತಮ್ಮ ಸಂಬಂಧಿಕರ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದರು‌. ಅಂದು ರಾತ್ರಿ ಅವರ ಮನೆಗೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಸುಮಾರು 23 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು 1,25,000 ರೂಪಾಯಿ ನಗದು ಹಣ ಕಳವುಗೈದಿದ್ದರು. ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಮೊ.ನಂ 176/2025 ಕಲಂ ಕಲಂ 331(3), 331(4), 305 BNS 2023 ರಂತೆ ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣದ ಬೆನ್ನು ಬಿದ್ದ ಬಜಪೆ ಪೊಲೀಸರು ಆರೋಪಿತರನ್ನು ಪತ್ತೆ ಹಚ್ಚಿದ್ದಾರೆ. ಕಳವುಗೈದ ಬಳಿಕ ಅಬ್ದುಲ್ ನಾಸಿರ್ ವಿದೇಶಕ್ಕೆ ಹೋಗಿ ತಲೆಮರೆಸಿಕೊಂಡಿದ್ದ. ಈ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿದ ಪೊಲೀಸರು ಈತನ ವಿರುದ್ಧ ಎಲ್‌ಒಸಿ ಹೊರಡಿಸಿದ್ದರು. ಎಲ್‌ಒಸಿಯಲ್ಲಿ ಪತ್ತೆ ಮಾಡಿ ವಿಚಾರಣೆ ನಡೆಸಿದಾಗ ಮನೆಯ ಮಾಲಕ, ಪ್ರಕರಣದ ದೂರುದಾರ ಮೊಹಮ್ಮದ್ ಷರೀಫ್ ರವರ ಸಂಬಂಧಿ ಕಳವಾರು ನಿವಾಸಿ ಮಯ್ಯದ್ದಿ ಇಮ್ರಾನ್ ಮತ್ತು ತಾನು ಸೇರಿ ಈ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಆರೋಪಿತರಿಂದ ಸುಮಾರು 27 ಲಕ್ಷ ರೂ. ಮೌಲ್ಯದ 222 ಗ್ರಾಂ ತೂಕದ ಚಿನ್ನ, 20,000‌ರೂ. ನಗದು, 50,000 ರೂ. ಮೌಲ್ಯದ ಸ್ಕೂಟರ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿರುತ್ತದೆ. ಆರೋಪಿತರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

Continue Reading

Trending

error: Content is protected !!