Kodagu
ಕಡಂಗದಲ್ಲಿ ಎಸ್ವೈಎಸ್ ರಾಜ್ಯ ಜ್ಯೂಬಿಲಿ ಜರ್ನಿ ಕಾರ್ಯಕ್ರಮ

ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (ಎಸ್ವೈಎಸ್) ೩೦ನೇ ವಾರ್ಷಿಕ ಮಹಾ ಸಮ್ಮೇಳನದ ಪ್ರಯುಕ್ತ “ಪರಂಪರೆಯ ಪ್ರತಿನಿಧಿಗಳಾಗೋಣ”ಎಂಬ ಧ್ಯೇಯ ವಾಕ್ಯದಡಿಯಲ್ಲಿ ೨೦೨೪ ರ ಜನವರಿ ೨೪ ರಂದು ಮಂಗಳೂರಿನಲ್ಲಿ ನಡೆಯಲಿರುವ ಮಹಾ ಸಮ್ಮೇಳನದ ಪ್ರಚಾರಾರ್ಥ ಎಸ್ವೈಎಸ್ ಕೊಡಗು ಜಿಲ್ಲಾ ಸಮಿತಿ ಆಯೋಜಿಸಿದ್ದ ರಾಜ್ಯ ಸಮಿತಿ ನಾಯಕರ ಜ್ಯೂಬಿಲಿ ಜರ್ನಿ ಕಾರ್ಯಕ್ರಮವು ಕಡಂಗ ಬದ್ರಿಯಾ ಮದರಸ ಸಭಾಂಗಣದಲ್ಲಿ ಯಶಸ್ವಿಯಾಗಿ ಜರುಗಿತು.
ಎಸ್ವೈಎಸ್ ೩೦ ನೇ ವಾರ್ಷಿಕ ಮಹಾ ಸಮ್ಮೇಳನದ ಪ್ರಯುಕ್ತ ಸಮಾಜ ಸೇವೆ, ಸಾಮಾಜಿಕ ಕಾರ್ಯಕ್ರಮಗಳನ್ನು ವಿವಿಧ ಘಟಕಗಳಲ್ಲಿ ಹಮ್ಮಿಕೊಂಡಿದ್ದು, ಅವುಗಳೆಲ್ಲವನ್ನೂ ಕಾರ್ಯರೂಪಕ್ಕೆ ತಂದು ಯಶಸ್ವಿಗೊಳಿಸಿ ಸೇವಾ ಮನೋಭಾವವಿರುವ ಉತ್ತಮ ಶಿಸ್ತುಬದ್ದ ಕಾರ್ಯಕರ್ತರನ್ನು ಒಗ್ಗೂಡಿಸುವ ಮನೋಭಾವದಿಂದ ಮಂಗಳೂರಿನಲ್ಲಿ ನಡೆಯುವ ಮಹಾ ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆ ಎಸ್ವೈಎಸ್ ರಾಜ್ಯಾಧ್ಯಕ್ಷ ಹಫೀಲ್ ಸಅದಿ ಕೊಳಕೇರಿ ಕರೆ ನೀಡಿದರು.
ಎಸ್ವೈಎಸ್ ರಾಜ್ಯ ಕೋಶಾಧಿಕಾರಿ ಅಡ್ವಕೇಟ್ ಹಂಝತ್ ಉಡುಪಿ ಮಾತನಾಡಿ ಎಸ್ವೈಎಸ್ ೩೦ನೇ ಮಹಾ ಸಮ್ಮೇಳನ ಅಭೂತಪೂರ್ಣ ಯಶಸ್ವಿಗೊಳಿಸುವಂತೆ ಪ್ರತಿಯೊಬ್ಬ ಕಾರ್ಯಕರ್ತನು ಹುಮ್ಮಸಿನಿಂದ ಶ್ರಮಿಸ ಬೇಕೆಂದರು.
ಎಸ್ವೈಎಸ್ ರಾಜ್ಯ ಮಾಧ್ಯಮ ಸಲಹೆಗಾರ ಹಸೈನಾರ್ ಆನೆಮಹಲ್ ಮಾತನಾಡಿ ಕಾರ್ಯಕ್ರಮದ ಯಶಸ್ವಿಗೆ ಸಾಮಾಜಿಕ ಜಾಲತಾಣಗಳಾದ ವಾಟ್ಸ್ ಆಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್ಗಳನ್ನು ಸದುಪಯೋಗ ಪಡಿಸಿಕೊಂಡು ಪ್ರಚಾರಪಡಿಸಬೇಕೆಂದರು.
ರಾಜ್ಯ ಕಾರ್ಯದರ್ಶಿ ಸ್ವಾದಿಖ್ ಮಾಸ್ಟರ್, ದಅವಾ ವಿಭಾಗ ಕಾರ್ಯದರ್ಶಿ ಸಯ್ಯದ್ ಶಾಫಿ ನಈಮಿ ತಂಗಳ್,ಸಾAತ್ವನ ವಿಭಾಗ ಕಾರ್ಯದರ್ಶಿ ಕೊಡಗು ಜಿಲ್ಲಾ ಉಸ್ತುವಾರಿ ಅಬ್ದುಲ್ ರಹ್ಮಾನ್ ರಝ್ವಿ ಕಲ್ಕಟ್ಟ, ಸಯ್ಯದ್ ಇಲ್ಯಾಸ್ ಅಲ್ ಹೈದರೂಸಿ ತಂಗಳ್ ಎಮ್ಮೆಮಾಡು ಹಾಗೂ ಮತ್ತಿತರ ರಾಜ್ಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸುವಂತೆ ಕರೆನೀಡಿ ಮಾತನಾಡಿದರು.
ಮೊದಲಿಗೆ ಕಡಂಗ ಮುಖ್ಯ ರಸ್ತೆಯಿಂದ ರಾಜ್ಯ ನಾಯಕರುಗಳಿಗೆ ಬದ್ರಿಯಾ ಮಸೀದಿ,ಕೆಎಂಜೆ,ಎಸ್ ವೈ ಎಸ್,ಎಸ್ಎಸ್ಎಫ್, ಮದರಸ ವಿದ್ಯಾರ್ಥಿಗಳು, ಸುನ್ನಿ ಸಂಘ ಕುಟುಂಬದ ಸದಸ್ಯರು ದಫ್ ಪ್ರದರ್ಶನದ ಮೂಲಕ ಅದ್ದೂರಿ ಸ್ವಾಗತ ಕೋರಿದರು.
ಜಿಲ್ಲಾಧ್ಯಕ್ಷ ಅಬ್ದುಲ್ ಹಮೀದ್ ಮುಸ್ಲಿಯರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುನೀರ್ ಮಲ್ಹರಿ, ಮುಜೀಬ್, ಶಂಸುದ್ದಿನ್ ಅಮ್ಜದಿ,ಬದ್ರಿಯಾ ಜಮಾಅತ್ ಅಧ್ಯಕ್ಷ ಅಬ್ದುಲ್ ರೆಹಮಾನ್ ಅರಫಾ,ಕೆಎಂಜೆ ಕಡಂಗ ಅಧ್ಯಕ್ಷ ಸುಲೈಮಾನ್, ಎಸ್ವೈಎಸ್ ಅಧ್ಯಕ್ಷ ಅಶ್ರಫ್,ಸಲಾಂ,ಹನೀಫ್ ರಹ್ಮನಿ,ಅಶ್ರಫ್ ಸಖಾಫಿ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಎಸ್ವೈಎಸ್ ಕೊಡಗು ಜಿಲ್ಲಾ ಕಾರ್ಯದರ್ಶಿ ಅಹಮದ್ ಮದನಿ ಸ್ವಾಗತಿಸಿ ಯಾಕೂಬ್ ಮಾಸ್ಟರ್ ವಂದಿಸಿದರು.
ವರದಿ : ಝಕರಿಯಾ ನಾಪೋಕ್ಲು
Kodagu
ಹುಲಿ ದಾಳಿಗೆ ಕರು ಬಲಿ

ಸಿದ್ದಾಪುರ :-
ಹುಲಿ ದಾಳಿಗೆ ಒಂದುವರೆ ವರ್ಷದ ಕರು ಬಲಿಯಾಗಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಚೆನ್ನಯ್ಯನ ಕೋಟೆ ಗ್ರಾಮದ ಕಾಫಿ ತೋಟದಲ್ಲಿ ನಡೆದಿದೆ.
ಗ್ರಾಮದ ಸಿ. ಟಿ. ಪೊನ್ನಪ್ಪ ಎಂಬುವರ ಮೇಯಲು ಬಿಟ್ಟ ಕರು ಹಸುವಿನ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿದೆ.ಕಳೆದ ತಿಂಗಳ ಅಂತರದಲ್ಲಿ ಮಾಲ್ದಾರೆ,ಚೆನ್ನಯ್ಯನ ಕೋಟೆ , ಗ್ರಾಮ ವ್ಯಾಪ್ತಿಯಲ್ಲಿ ಐದು ಹಸುಗಳು ಹುಲಿ ದಾಳಿಗೆ ಬಲಿಯಾಗಿವೆ ಇದರಿಂದ ಸ್ಥಳೀಯರು ಜೀವಭಯದಲ್ಲಿ ಸಂಚಾರ ಮಾಡುವಂತಾಗಿದೆ.
ಹುಲಿಯನ್ನು ಶೀಘ್ರ ಸೆರೆ ಹಿಡಿಯುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ
ಈ ಭಾಗದಲ್ಲಿ ಹುಲಿಯ ಚಲನವಲನ ಪರಿಶೀಲಿಸಲು ಕ್ಯಾಮರಾ ಅಳವಡಿಸಲಾಗಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಶನಿವಾರವೂ ಕಾರ್ಯಾಚರಣೆ ನಡೆಯಲಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದರೆ
ಕಾರ್ಯಾಚರಣೆಯಲ್ಲಿ ಆರ್,ಎಫ್,ಒ, ಗಂಗಾಧರ್, ನೇತೃತ್ವದಲ್ಲಿ ಡಿಆರ್ಎಫ್ಒ ಶಶಿ,
ರಾಜೇಶ್, ವಾಚರ್ ಸುನೀಲ್,
ಆರ್ಆರ್ಟಿ ತಂಡದ ಶಂಕರ್,ಮುತ್ತ, ರಂಜಿತ್, ಭರತ್, ರೋಷನ್, ಪ್ರದೀಪ್, ಇದ್ದರು
Kodagu
ಬಿರುನಾಣಿ ವ್ಯಾಪ್ತಿಯಲ್ಲಿ ಹುಲಿ ಸೆರೆಗೆ ಕಾರ್ಯಚರಣೆ

ಶ್ರೀಮಂಗಲ : ದಕ್ಷಿಣ ಕೊಡಗಿನ ಅರಣ್ಯದಂಚಿನ ಗ್ರಾಮಗಳಲ್ಲಿ ಜಾನುವರುಗಳನ್ನು ಬಲಿ ಪಡೆಯುತ್ತಿರುವ ಹಾಗೂ ಜನರಿಗೂ ಆತಂಕ ಸೃಷ್ಟಿಸಿರುವ ಹುಲಿಯನ್ನು ಸೆರೆ ಹಿಡಿಯಲು ಶನಿವಾರದಿಂದ ಬಿರುನಾಣಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತೆರಾಲು ಗ್ರಾಮದಲ್ಲಿ ಆರಂಭವಾಗಲಿದೆ.
ದಕ್ಷಿಣ ಕೊಡಗಿನ ಅರಣ್ಯ ದಂಚಿನ ಗ್ರಾಮಗಳು ಹಾಗೂ ನೆರೆಯ ಗ್ರಾಮಗಳಲ್ಲಿ ಹುಲಿ ನಿರಂತರವಾಗಿ ಜಾನುವಾರುಗಳನ್ನು ಕಬಳಿಸುತ್ತಿದ್ದೂ, ಮಾನವನ ಮೇಲೆಯು ಹುಲಿ ದಾಳಿ ಮಾಡುವ ಆತಂಕದ ಛಾಯೆ ಜನರಲ್ಲಿ ಮೂಡಿಸಿದೆ.
ಈಗಾಗಲೇ ಶ್ರೀಮಂಗಲ, ಟಿ. ಶೆಟ್ಟಿಗೇರಿ, ಈಸ್ಟ್ ಮತ್ತು ವೆಸ್ಟ್ ನೆಮ್ಮಲೆ,ಕುರ್ಚಿ, ಬೀರುಗ, ಬಾಡಗರಕೇರಿ,ಪರಕಟಕೇರಿ, ತೆರಾಲು ಗ್ರಾಮಗಲ್ಲಿ ಹುಲಿಯ ಉಪಟಳ ಹೆಚ್ಚಾಗಿದೆ. ಆದ್ದರಿಂದ ದುಬಾರೆ ಸಾಕಾನೆ ಶಿಬಿರದಿಂದ ಎರಡು ಸಾಕಾನೆಗಳನ್ನು ಕಾರ್ಯಚರಣೆಯಲ್ಲಿ ತೊಡಗಿಸಿಕೊಳ್ಳಲು ನಿರ್ಧರಿಸಲಾಗಿದೆ.
ಮುಖ್ಯಮಂತ್ರಿ ಗಳ ಕಾನೂನು ಸಲಹಾಗಾರರು ಹಾಗೂ ವಿರಾಜಪೇಟೆ ಕ್ಷೇತ್ರ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ರಾಜ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಅವರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಯ ಗಂಭೀರತೆ ಮನವರಿಕೆ ಮಾಡಿದ ಬೆನ್ನಲ್ಲೇ ಹುಲಿ ಕಾರ್ಯಾಚರಣೆಗೆ ಅನುಮತಿ ನೀಡಲಾಗಿದ್ದು ಕಾರ್ಯಾಚರಣೆಯಲ್ಲಿ ಶಾರ್ಪ್ ಶೂಟರ್ ಗಳು, ಅರವಳಿಕೆ ತಜ್ಞರು ಹಾಗೂ ಪಶುವೈದ್ಯಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಸ್ಥಳಕ್ಕೆ ಆಗಮಿಸಿ ಕಾರ್ಯಚರಣೆ ಸಿದ್ಧತೆ ಪರಿಶೀಲಿಸಿದ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಅವರು ಮಾಹಿತಿ ನೀಡಿದರು.
ಸ್ಥಳಕ್ಕೆ ಈಗಾಗಲೇ ದುಬಾರೆ ಸಾಕಾನೆ ಶಿಬಿರದಿಂದ ಶ್ರೀರಾಮ ಹಾಗೂ ಗೋಪಿ ಎಂಬ ಎರಡು ಸಾಕಾನೆಗಳನ್ನು ಕಾರ್ಯಾಚರಣೆಗೆ ಕರೆತರಲಾಗಿದೆ. ಅಗತ್ಯವಾದರೆ ಕಾರ್ಯಾಚರಣೆಗೆ ಹೆಚ್ಚಿನ ಸಾಕಾನೆಗಳನ್ನು ಬಳಸಿಕೊಳ್ಳಲಾಗುವುದು ಎಂದು ಹೇಳಿದರು.
ಶನಿವಾರದಿಂದ ಆರಂಭವಾಗುವ ಕಾರ್ಯಚರಣೆಯಲ್ಲಿ ಅರಣ್ಯ ಇಲಾಖೆಯ ಕ್ಷಿಪ್ರ ಕಾರ್ಯಚರಣೆ ತಂಡ (ಆರ್. ಆರ್. ಎಫ್) ಕಾಡಾನೆ ಕಾರ್ಯಚರಣೆ ತಂಡ (ಇ. ಎಲ್. ಎಫ್) ಹಾಗೂ ಈ ವ್ಯಾಪ್ತಿಯ ವಿವಿಧ ಅರಣ್ಯ ಇಲಾಖೆಯ ವಿಭಾಗದ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಹುಲಿ ಗೆಜ್ಜೆ ಗುರುತು ಪತ್ತೆ ಹಚ್ಚಿ ನಡೆಯಲಿರುವ ಕಾರ್ಯಚರಣೆಯಲ್ಲಿ, ಹುಲಿಯ ಇರುವಿಕೆ ಪತ್ತೆಹಚ್ಚಿ ಕಾರ್ಯಚರಣೆ ನಡೆಸಲಾಗುವುದು, ತಾಜಾ ಹೆಜ್ಜೆ ಗುರುತು, ಹುಲಿ ತೆರಲಿರುವ ಜಾಡು ಹಿಡಿದು ಕಾರ್ಯಚಾರಣೆ ಆರಂಭವಾಗಲಿದೆ. ಈ ಹಿಂದೆ ಶ್ರೀಮಂಗಲ ವ್ಯಾಪ್ತಿಯ ನೆಮ್ಮಲೆ, ಬಾಳೆಲೆ ವ್ಯಾಪ್ತಿಯ ದೇವನೂರಿನಲ್ಲಿ ಹುಲಿ ಸೆರೆ ಕಾರ್ಯಚರಣೆಯಲ್ಲಿ ಹುಲಿ ಕಾರ್ಯಚರಣೆ ತಂಡಕ್ಕೆ ಹುಲಿ ಪ್ರತ್ಯೇಕ್ಷವಾಗದ ಹಿನ್ನಲೆ ಹುಲಿಗೆ ಕಾರ್ಯಚರಣೆಯಿಂದ ಅದರ ಇರುವಿಕೆಗೆ ತೊಂದರೆಯಾಗಿ ಹುಲಿಯು ಅರಣ್ಯಕ್ಕೆ ವಾಪಸು ತೆರಳಿತ್ತು. ಈ ಬಾರಿ ಕಾರ್ಯಚರಣೆಯಲ್ಲಿ ಹುಲಿ ಪ್ರತ್ಯೇಕ್ಷವಾದಲ್ಲಿ ಹುಲಿಯನ್ನು ಅರವಳಿಕೆ ನೀಡಿ ಸೆರೆ ಹಿಡಿದು ಅದನ್ನು ಪುನರ್ವಸತಿ ಕೇಂದ್ರಕ್ಕೆ ರವಾನಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಂಕೇತ್ ಪೂವಯ್ಯ ತಿಳಿಸಿದರು.
ಈ ಸಂದರ್ಭ ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಟಿ. ಶೆಟ್ಟಿಗೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ತೀತಿರ ಪ್ರಭು, ಅರಣ್ಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು, ಮಾವುತರು ಕಾವಾಡಿಗರು ಹಾಜರಿದ್ದರಿರು.
Kodagu
ಜನಪರ ಪ್ರೀಮಿಯರ್ ಲೀಗ್-3 ಕ್ರಿಕೆಟ್ ಗೆ ಆಟಗಾರರ ಆಯ್ಕೆ

ಸಿದ್ದಾಪುರ : ಮಾಲ್ದಾರೆ ಜನಪರ ಕ್ರೀಡಾ ಮತ್ತು ಕಲಾ ಯುವಜನ ಸಂಘ ಇವರ ಆಶ್ರಯದಲ್ಲಿ ಜನಪರ ಪ್ರೀಮಿಯರ್ ಲೀಗ್-3 ಕ್ರಿಕೆಟ್ ಪಂದ್ಯಾವಳಿಗೆ 10 ಫ್ರಾಂಚೈಸಿಗಳಿಗೆ 100 ಕ್ಕೂ ಹೆಚ್ಚು ಆಟಗಾರರನ್ನು ಆಯ್ಕೆ ಮಾಡುವ ಹರಾಜು ಪ್ರಕ್ರಿಯೆ ಸಿದ್ದಾಪುರದ ಚರ್ಚೆ ಹಾಲ್ ಸಭಾಂಗಣದಲ್ಲಿ ನಡೆಯಿತು.
ಮಾಲ್ದಾರೆ, ಚೆನ್ನಯ್ಯನ ಕೋಟೆ, ಪಾಲಿಬೆಟ್ಟ, ಗ್ರಾಮದ 100ಕ್ಕೂ ಹೆಚ್ಚು ಕ್ರಿಕೆಟಿಗರು ಹರಾಜಿನಲ್ಲಿ ಭಾಗವಹಿಸಿದ್ದರು, ಪ್ರತಿ ಫ್ರಾಂಚೈಸಿ ತಮ್ಮ ಬಿಡ್ ಹಣದ ಆಧಾರದ ಮೇಲೆ 10 ರಿಂದ 11 ಆಟಗಾರರನ್ನು ಆಯ್ಕೆ ಮಾಡಿದೆ.
ಜನಪರ ಸಂಘದ ಅಧ್ಯಕ್ಷ ಭಾವ ಮಾಲ್ದಾರೆ ಮಾತನಾಡಿ ಮೇ 19,20,ರಂದು ಲೀಗ್ ಮಾದರಿಯ ಪಂದ್ಯಾಟ ಎರಡು ದಿನ ನಡೆಯಲಿದ್ದು ಎಲ್ಲಾ ಪಂದ್ಯಗಳು ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ನಡೆಯಲಿವೆ ಹಾಗೂ ಕೊನೆಯ ದಿನ ಸಾಧಕರಿಗೆ ಸನ್ಮಾನ, ಹಲವಾರು ಕಾರ್ಯಕ್ರಮದ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು
ಈ ಸಂದರ್ಭ ವಿರಾಜಪೇಟೆ ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷ ರಜಿತ್ ಕುಮಾರ್ ,ಸಾಮಾಜಿಕ ಕಾರ್ಯಕರ್ತ ಮುಸ್ತಫಾ,
ಸಾಗರ್ ಸಂಘದ ಅಧ್ಯಕ್ಷ ರದೀಶ್, ಪ್ರಮುಖರಾದ ರವೀಂದ್ರ ಭಾವೆ, ಹಮೀದ್,ಜನಪರ ಸಂಘದ ಕಾರ್ಯದರ್ಶಿ ವಿನಿಲ್, ಮಾಜಿ ಅಧ್ಯಕ್ಷ ಅಂಟೋನಿ, ಮಂಜು, ಮುಂತಾದವರು ಹಾಜರಿದ್ದರು.
-
Mandya22 hours ago
ಪತ್ನಿಯ ಶೀಲ ಶಂಕಿಸಿ ಪತಿಯಿಂದಲೇ ಬರ್ಬರ ಹತ್ಯೆ…!
-
Chamarajanagar22 hours ago
ಅಂಬಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನವೀನ್ ಅವಿರೋಧ ಆಯ್ಕೆ
-
Kodagu18 hours ago
ಹಾತೂರುವಿನಲ್ಲಿ ಮಾರುತಿ ಓಮ್ನಿ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ.
-
Chamarajanagar22 hours ago
ಬೋನಿಗೆ ಬಿದ್ದ 3 ನೇ ಚಿರತೆ
-
Kodagu15 hours ago
ನಾಪೋಕ್ಲು ಬೇತು ಗ್ರಾಮದಲ್ಲಿ ನಿವೃತ ಸೈನಿಕನ ಮನೆಗೆ ಕನ್ನ ಹಾಕಿದ ಚೋರರು -ಕೋವಿ,ಬೆಳ್ಳಿಯಪೀಚೆಕತ್ತಿ ಕದ್ದು ಪರಾರಿ
-
Chamarajanagar13 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Chikmagalur16 hours ago
ಅಕ್ರಮ ಸಂಬಂಧಕ್ಕಾಗಿ ಪತಿಯನ್ನ ಕೊಂದ ಸತಿ
-
Mysore10 hours ago
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ