Mysore
ಕಕ್ಕರಹಟ್ಟಿ ಗ್ರಾಮದಲ್ಲಿ ಚಿರತೆ ದಾಳಿಗೆ ಎಮ್ಮೆ ಕರು ಬಲಿ; ಆತಂಕದಲ್ಲಿ ಗ್ರಾಮಸ್ಥರು

ನಂಜನಗೂಡು : ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಎಮ್ಮೆ ಕರುವಿನ ಮೇಲೆ ಚಿರತೆ ದಾಳಿ ನಡೆಸಿ, ಎಮ್ಮೆ ಕರುವನ್ನು ಬಲಿ ಪಡೆದಿರುವ ಘಟನೆ ನಂಜನಗೂಡು ತಾಲೂಕಿನ ಕಕ್ಕರಹಟ್ಟಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹೊರವಲಯದಲ್ಲಿ ತೋಟದ ಮನೆಯಲ್ಲಿ ವಾಸವಿರುವ ಚಿನ್ನಂಬಳ್ಳಿ ಗ್ರಾಮದ ಮರಿಸ್ವಾಮಿ ಗೌಡ ಎಂಬುವವರ ಜಮೀನಿನಲ್ಲಿ ಮುಂಜಾನೆಯ ಸಮಯದಲ್ಲಿ ಚಿರತೆ ಕೊಟ್ಟಿಗೆಗೆ ನುಗ್ಗಿ ದಾಳಿ ನಡೆಸಿದೆ.
ಎಮ್ಮೆ ಕರುವಿನ ಮೇಲೆ ದಾಳಿ ನಡೆಸಿ ಅರೆಬೆರೆ ತಿಂದು ಬಿಸಾಡಿ ಹೋಗಿದೆ. ಜಮೀನಿನ ಸುತ್ತಮುತ್ತಲು ಚಿರತೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಗ್ರಾಮಸ್ಥರು ಆತಂಕದಲ್ಲಿದ್ದಾರೆ.
ಜಮೀನುಗಳಿಗೆ ರೈತರು ತೆರಳಲು ಭಯಭೀತಿಯಲ್ಲಿದ್ದಾರೆ.
ಈ ಭಾಗದಲ್ಲಿ ಚಿರತೆಯ ಕಾಟ ಹೆಚ್ಚಾಗಿದ್ದು, ಸಾಕು ಪ್ರಾಣಿಗಳ ಮೇಲೆ ಚಿರತೆ ದಾಳಿ ನಡೆಸುತ್ತಿದೆ. ಈ ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಬೋನು ಇಟ್ಟು ಚಿರತೆಯನ್ನು ಸೆರೆ ಹಿಡಿಯಬೇಕು ಹಾಗೂ ರೈತನಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
Mysore
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ಪ್ರಕರಣ ತುರ್ತು ಕ್ರಮಕ್ಕೆ ಡಿಸಿ ಜಿ ಲಕ್ಷ್ಮೀಕಾಂತ ರೆಡ್ಡಿ ಸೂಚನೆ

ಮೈಸೂರು: ಅನುಸೂಚಿತ ಜಾತಿ, ಪಂಗಡಗಳ ಜನರ ಮೇಲಿನ ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ.ಸಂಬಂಧಿಸಿದ ದೂರುಗಳ ಕುರಿತು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಇಲ್ಲಿನ ಪಡುವಾರಳ್ಳಿಯಲ್ಲಿರುವ ಬಾಬು ಜಗಜೀವನ ರಾಮ್ ಭವನ ಸಭಾಂಗಣದಲ್ಲಿ ಶುಕ್ರವಾರ ನಡೆದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ (ದೌರ್ಜನ್ಯ ತಡೆ) ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸಂಬಂಧ ಇರುವ ಪ್ರಕರಣಗಳ ಬಗ್ಗೆ ಸಂಪೂರ್ಣ ಮಾಹಿತಿಯೊಂದಿಗೆ ಸಭೆಗೆ ಆಗಮಿಸಬೇಕು ಹಾಗೂ ಆ ಸಮಸ್ಯೆ ಸಂಬಂಧ ಬಗೆಹರಿಸಲು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ತಾತ್ಸಾರದ ಮನೋಭಾವನೆಯಿಂದ ಕೆಲಸ ನಿರ್ವಹಿಸಿದರೆ ಅಂತಹ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಸಮುದಾಯದ ಮುಖಂಡರು ಹಾಗೂ ಜಿಲ್ಲಾ ಮಟ್ಟದ ಸಮಿತಿಯು ಸದಸ್ಯರನ್ನು ಠಾಣೆ ವ್ಯಾಪ್ತಿಯ ಕುಂದು ಕೊರತೆಗಳ ಸಭೆಗೆ ಆಹ್ವಾನಿಸಿ ಇದರಿಂದ ಸ್ಥಳೀಯವಾಗಿ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.
ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಅನುದಾನದಲ್ಲಿ ಜಿಲ್ಲೆಯಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನಗಳ ನಿರ್ವಹಣೆಯನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಿರ್ವಹಣಾ ಸಮಿತಿಯ ಮೂಲಕ ಸಮರ್ಪಕವಾಗಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಮೈಸೂರು ನಗರದಲ್ಲಿ ಅಕ್ರಮ ಮದ್ಯ ಮಾರಾಟ ಬಗ್ಗೆ ದೂರುಗಳು ಬಂದರೆ ಅಬಕಾರಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾನೂನು ರೀತಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ಈ ವೇಳೆ ಮಾತನಾಡಿದ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಜನರ ಮೇಲೆ ಹಲ್ಲೆ, ದೌರ್ಜನ್ಯಗಳು ನಡೆದರೆ ತಕ್ಷಣವೇ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಹಾಗೂ ಪ್ರತಿ ಪೊಲೀಸ್ ಠಾಣೆಯಲ್ಲಿಯೂ ಕುಂದು ಕೊರತೆ ಸಭೆ ನಡೆಸಲಾಗುತ್ತಿದೆ ಎಂದು ಸಭೆಯಲ್ಲಿ ತಿಳಿಸಿದರು.
Mysore
ಫುಟ್ಪಾತ್ ವ್ಯಾಪಾರಿಗಳ ತೆರವುಗೊಳಿಸಿ ಇಲ್ಲವೆ ಅವರಿಗೆ ಸೂಕ್ತ ಸ್ಥಳ ನಿಗಧಿಪಡಿಸಿ

ಮೈಸೂರು: ಹೋಟೆಲ್ ಉದ್ಯಮಕ್ಕೆ ತಲೆ ನೋವಾಗಿರುವ ಫುಟ್ ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಬೇಕು. ಇಲ್ಲವೆ ಅವರಿಗೆ ಸೂಕ್ತ ಸ್ಥಳ ನಿಗದಿಪಡಿಸಬೇಕು ಎಂದು ಮೈಸೂರು ಹೋಟೆಲ್ ಮಾಲೀಕರು, ಪಾಲಿಕೆ ಆರೋಗ್ಯಾಧಿಕಾರಿಗಳನ್ನು ಒತ್ತಾಯಿಸಿದರು.
ಇಲ್ಲಿನ ಖಾಸಗಿ ಹೋಟೆಲ್ನಲ್ಲಿ ಗುರು ವಾರ ನಗರಪಾಲಿಕೆ ಆರೋಗ್ಯಾಧಿಕಾರಿ ಡಾ.ವೆಂಕಟೇಶ್, ಆಹಾರ ಸುರಕ್ಷಣಾ ಅಧಿಕಾರಿ ಡಾ.ಎಸ್.ಎಲ್.ರವೀಂದ್ರ ಅವರೊಂದಿಗೆ ನಡೆದ ಆಹಾರ ಸುರಕ್ಷತೆ ಹಾಗೂ ಉದ್ದಮ ನವೀಕರಣ ಕುರಿತ ಸಂವಾದ ಕಾರ್ಯಕ್ರಮ ದಲ್ಲಿ ಫುಟ್ಪಾತ್ ವ್ಯಾಪಾರವೆಂಬುದು ದೊಡ್ಡ ಮಾಫಿಯಾ ಆಗಿ ಬೆಳೆದಿದೆ. ಪಾಲಿಕೆ ಅಧಿಕಾರಿಗಳು ಫುಟ್ ಪಾತ್ ವ್ಯಾಪಾರಿಗಳನ್ನು ಟಚ್ ಮಾಡಲು ಸಾಧ್ಯವಿಲ್ಲ. ಫುಟ್ಪಾತ್ ವ್ಯಾಪಾರಿಗಳಿಂದ ಸರ್ಕಾರಕ್ಕೆ ಲಕ್ಷ ಲಕ್ಷ ತೆರಿಗೆ ಕಟ್ಟುವ ಹೋಟೆಲ್ ಉದ್ಯಮ ನಷ್ಟದತ್ತ ಸಾಗುವಂತಾಗಿದೆ ಆದ್ದರಿಂದ ಕೂಡಲೇ ಎಲ್ಲೆಂದರಲ್ಲಿ ವ್ಯಾಪಾರ ನಡೆಸುವ ಫುಟ್ ಪಾತ್ ವ್ಯಾಪಾರಿ ಗಳನ್ನು ತೆರವುಗೊಳಿಸಿ, ಇಲ್ಲವೆ ಅವರಿಗೆ ಸೂಕ್ತ ಸ್ಥಳ ನೀಡಿ ಎಂದು ಮನವಿ ಮಾಡಲಾಯಿತು.
ಹೋಟೆಲ್ ಮಾಲೀಕರ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ನಗರಪಾಲಿಕೆ ಆರೋಗ್ಯಾಧಿಕಾರಿ ಡಾ.ವೆಂಕಟೇಶ್, ಫುಟ್ ಪಾತ್ ವ್ಯಾಪಾರಿಗಳ ಸರ್ವೆ ಕಾರ್ಯ ನಡೆಯುತ್ತಿದೆ. ಸ್ವಚ್ಛ ಸರ್ವೇಕ್ಷಣೆ ಮುಗಿದ ಕೂಡಲೇ ಪರವಾನಗಿ ಇಲ್ಲದ ಫುತ್ ಪಾತ್ ವ್ಯಾಪಾರಿ ಗಳನ್ನು ಪೊಲೀಸ್ ಭದ್ರತೆಯೊಂದಿಗೆ ತೆರವುಗೊಳಿಸುವ ಹಾಗೂ ಅವರಿಗೆ ಸೂಕ್ತಸ್ಥಳ ಸೂಚಿಸುವ ಅಭಿಯಾನ ನಡೆಸಲಾ ಗುವುದು ಎಂದು ಭರವಸೆ ನೀಡಿದರು.
ಹಾಗೆಯೇ ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಬಳಕೆ ಕಡಿಮೆ. ಸಾಧ್ಯವಾದಷ್ಟು ನಿಮ್ಮ ಹೋಟೆಲ್ ಲೋಗೋ ಇರುವ ಬಟ್ಟೆ ಬ್ಯಾಗ್ ಗಳನ್ನು ಬಳಸಿ, ಸಾಕಾಣಿಕೆ ದಾರರಿಗೆ ಹಾಗೂ ಪೌರಕಾರ್ಮಿಕರಿಗೆ ನೀಡುವ ಆಹಾರ ತ್ಯಾಜ್ಯವನ್ನು ಪ್ಲಾಸ್ಟಿಕ್ ನಿಂದ ಬೇರ್ಪಡಿಸಿ ನೀಡಿ. ಎಲ್ಲೆಂದರಲ್ಲಿ ಆಹಾರ ತ್ಯಾಜ್ಯ ಹಾಗೂ ಪ್ಲಾಸ್ಟಿಕ್ ಬಿಸಾಡಿದ್ದರೆ ಕೂಡಲೇ ಮಾಹಿತಿ ನೀಡಿ. ಮುಂದಿನ ತಿಂಗಳು ಉದ್ಯಮ ಪರವಾನಗಿ ನವೀಕರಣ ಇನ್ನಿತರೆ ಲೈಸೆನ್ಸ್ಗಳ ಅಭಿಯಾನವನ್ನು ನಡೆಸಲಿದ್ದು, ಹೋಟೆಲ್ ಮಾಲೀಕರು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.
ಶುಚಿತ್ವ ಕಾಪಾಡಿ: ಆಹಾರ ಸುರಕ್ಷತಾ ಅಧಿಕಾರಿ ಡಾ.ಎಸ್.ಎಲ್.ರವೀಂದ್ರ ಮಾತನಾಡಿ, ಹೋಟೆಲ್ಗಳಲ್ಲಿ ಶುಚಿತ್ವ ಕಾಪಾಡು ವುದರ ಜೊತೆಗೆ ಆಹಾರ ಪದಾರ್ಥ ಗಳನ್ನು ಕಡ್ಡಾಯವಾಗಿ ತೊಳೆದು ಬಳಸ ಬೇಕು. ಅದರಲ್ಲೂ ಮುಖ್ಯವಾಗಿ ಅಡುಗೆ ತಯಾರಕರು ಕೈ ತೊಳೆದು, ಆಹಾರ ಪದಾರ್ಥಗಳನ್ನು ಕಟ್ ಮಾಡಬೇಕು. ಕಟಿಂಗ್ ನಂತರವೂ ಕೈ ತೊಳೆಯಬೇಕು. ಆಹಾರಕ್ಕೆ ತಲೆ ಕೂದಲೂ ಬೀಳದಂತೆ ಮುನ್ನೆಚ್ಚರಿಕೆ ವಹಿಸಬೇಕು. ಹಾಗೆಯೇ ಆಹಾರ ಭದ್ರತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸ ಬೇಕು. ಪರವಾನಗಿಗಳು ಗ್ರಾಹಕರಿಗೆ ಕಾಣುವಂತೆ ಇರಿಸಬೇಕು ಎಂದು ಸಲಹೆ ನೀಡಿದರು. ಹಾಗೆಯೇ ಆನ್ಲೈನ್ ಮೂಲಕ ಉದ್ಯಮ ಪರವಾನಗಿ, ತೆರಿಗೆ ಕುರಿತು ಮಾಹಿತಿ ನೀಡ ಲಾಯಿತು. ಮೈಸೂರು ಹೋಟೆಲ್ ಮಾಲೀ
ಕರ ಸಂಘದ ಅಧ್ಯಕ್ಷ ಸಿ.ನಾರಾಯಣ ಗೌಡ, ಕಾರ್ಯದರ್ಶಿ ಎ.ಆರ್.ರವೀಂದ್ರ ಭಟ್, ಹೋಟೆಲ್ ಮಾಲೀಕರ ಸಂಘದ ಧರ್ಮದತ್ತಿ ಅಧ್ಯಕ್ಷ ರವಿಶಾಸ್ತ್ರಿ, ಉಪಾಧ್ಯಕ್ಷ ಸುರೇಶ್(ಉಗ್ರಯ್ಯ), ಕಾರ್ಯದರ್ಶಿ ಸುಬ್ರಹ್ಮಣ್ಯ ತಂತ್ರಿ, ಪತ್ತಿನ ಸಹಕಾರ ಸಂಘದ ಅದ್ಯಕ್ಷ ನಾರಾಯಣಹೆಗಡೆ ಮತ್ತಿತರರಿದ್ದರು.
Mysore
ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಅನ್ನೊದು ಅವರಿಗೆ ಗೊತ್ತಾಗಿದೆ – ಛಲವಾದಿ ನಾರಾಯಣಸ್ವಾಮಿ

ಮೈಸೂರು:
ಮೈಸೂರಿನಲ್ಲಿ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿಕೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ವರ್ಷ ಆಗಿದೆ.
ಅಧಿಕಾರಕ್ಕೆ ಬಂದ ತಕ್ಷಣ ಪೆಟ್ರೋಲ್ ಡೀಸೆಲ್, ಹಾಲು, ವಿದ್ಯುತ್ ಸೇರಿದಂತೆ ಎಲ್ಲಾ ವಸ್ತುಗಳು ಏರಕೆಯಾಗಿದೆ.
ಹಾಲಿನ ದರ ಮೂರು ಬಾರಿ ಏರಿಕೆಯಾಗಿದೆ.
ವಿದ್ಯುತ್ ನಾಲ್ಕು ಬಾರಿ ಏರಿಕೆಯಾಗುತ್ತಿದೆ.
ಗ್ಯಾರಂಟಿಯ ಹಣವನ್ನ ಮೂರು ತಿಂಗಳಿಗೆ ಒಂದು ಬಾರಿ ಕೊಡುತ್ತಿದ್ದಾರೆ.
5 ಗ್ಯಾರೆಂಟಿ ಹೆಸರು ಹೇಳಿಕೊಂಡು 5 ವರ್ಷ ಕಳೆಯುತ್ತಾರೆ.
ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಅನ್ನೊದು ಅವರಿಗೆ ಗೊತ್ತಾಗಿದೆ.
ಪರಿಶಿಷ್ಟ ವರ್ಗದ ಜನರಿಗೆ ಗ್ಯಾರೆಂಟಿ ಸಿಗುತ್ತಿಲ್ಲ.
40 ಸಾವಿರ ಕೋಟಿ ರೂಪಾಯಿ ಮೂರು ಬಜೆಟ್ ಗೆ ತೆಗೆದುಕೊಂಡಿದ್ದಾರೆ.
ಸಿದ್ದರಾಮಯ್ಯ ಇಷ್ಟೊಂದು ಕನಿಷ್ಟ ಅಂದುಕೊಂಡಿರಲಿಲ್ಲ.
ಕನಿಷ್ಟ ಅನಿಷ್ಟವಾಗಿದೆ.
ಕಳೆದ 5 ವರ್ಷಗಳಲ್ಲಿ ಸಾಕಷ್ಟು ತಪ್ಪುಗಳಾಗಿತ್ತು.
ಅದನ್ನ ತಿದ್ದಿಕೊಂಡು ಒಳ್ಳೆಯ ಅಧಿಕಾರ ಕೊಡಬಹುದಿತ್ತು.
ಕರ್ನಾಟಕದಲ್ಲಿ ಹಣ ಮಾಡಿ ದೇಶದಲ್ಲಿ ಕಾಂಗ್ರೆಸ್ ಕಾಪಾಡಬೇಕಾದ ಪರಿಸ್ಥಿತಿ ಬಂದಿದೆ.
ಮೈಸೂರು:
ಹನಿಟ್ರ್ಯಾಪ್ ಬಗ್ಗೆ ಸೂಕ್ತ ತನಿಖೆಯಾಗಬೇಕು.
ಹನಿಟ್ರ್ಯಾಪ್ ಎಂದರೇನು ಎಂದು ಜನ ತಲೆ ಕೆಡಿಸಿಕೊಂಡಿದ್ದಾರೆ.
ರಾಜೇಂದ್ರ ರಾಜಣ್ಣ ಹೊಸ ವಿಚಾರ ತೆಗೆದಿದ್ದಾರೆ.
ನನ್ನ ಮೇಲೆ ಕೊಲೆಗೆ ಯತ್ನ ನಡೆದಿದೆ ಎಂದು ಹೇಳಿದ್ದಾರೆ.
ದೇಶದ ಮುಂದೆ ಕಾಂಗ್ರೆಸ್ ಬೆತ್ತಲಾಗಿದೆ.
ಡಿ.ಕೆ ಶಿವಕುಮಾರ್ ಯಾವುದೇ ಕಾರಣಕ್ಕೂ ಡಿಸಿಎಂ ಸ್ಥಾನದಲ್ಲಿ ಮುಂದುವರೆಯ ಬಾರದು
ತಕ್ಷಣ ರಾಜೀನಾಮೆ ನೀಡಬೇಕು.
ಸಿಎಂ ಸಿದ್ದರಾಮಯ್ಯ ಡಿಸಿಎಂ ಶಿವಕುಮಾರ್ ಅವರನ್ನು ಉಚ್ಚಾಟನೆ ಮಾಡಲಿ.
ಸಿಎಂ ಕೈಯಲ್ಲಿ ಡಿಸಿಎಂ ಅವರನ್ನು ಉಚ್ಚಾಟನೆ ಮಾಡಲು ಸಾಧ್ಯವಿಲ್ಲದಿದ್ದರೆ ಶಿವಕುಮಾರ್ ಗೆ ಸಿಎಂ ಸ್ಥಾನ ಕೊಟ್ಟು ಬಿಡಲಿ.
ಮೈಸೂರು:
ಬಿಜೆಪಿಯಿಂದ ಉಚ್ಚಾಟನೆಯಾಗ್ತಾರಾ ಎಸ್.ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್.
ಮಹತ್ವದ ಸುಳಿವು ನೀಡಿದ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ.
ಹೈಕಮಾಂಡ್ ಟೆಸ್ಟ್ ಆಟ ಬಿಟ್ಟಿದೆ.
ನೆಕ್ಷ್ಟ್ ಏನಿದ್ರು ಟಿ ಟ್ವೆಂಟ್ ಮ್ಯಾಚ್ ಆಡುತ್ತೆ.
ನೆಕ್ಷ್ಟ್ ವಿಕೆಟ್ ಎಸ್ ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್.
ಮೈಸೂರಿನಲ್ಲಿ ಛಲವಾದಿ ನಾರಾಯಣಸ್ವಾಮಿ ಹೇಳಿಕೆ.
ಮೈಸೂರು:
ರಾಜೇಂದ್ರ ರಾಜಣ್ಣ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ.
ಯಾರ ಕಿವಿಗೆ ಹೂ ಇಡುತ್ತಿದ್ದಾರೆ ಗೊತ್ತಿಲ್ಲ.
ಯತ್ನಾಳ್ ಉಚ್ಚಾಟನೆ ವಿಚಾರ.
ಯತ್ನಾಳ್ ನನಗೆ ಬಹಳ ಆತ್ಮೀಯರು.
ಮೈಕ್ ಮುಂದೆ ನಿಂತಾಗ ಮಾತನಾಡುಬಿಡುತ್ತಾರೆ.
ಪಕ್ಷವನ್ನೇ ಸಾಕಷ್ಟು ಬಾರಿ ಅವರಿಗೆ ತಪ್ಪು ತಿದ್ದುಕೊಳ್ಳಲು ಅವಕಾಶ ಕೊಟ್ಟಿತ್ತು.
ಇದು ಬೇರೆಯವರಿಗೆ ಎಚ್ಚರಿಕೆ ಗಂಟೆ.
ನಮ್ಮ ಪಕ್ಷ ಕಾರ್ಯಕರ್ತರಿಂದ ಉಳಿದಿದೆ ಹೊರತು ನಾಯಕರಿಂದಲ್ಲ.
ಈ ಪಕ್ಷ ಕಾರ್ಯಕರ್ತರ ಪಕ್ಷ.
ನಮ್ಮಲ್ಲಿ ಹುಲಿ ಯಾರು ಇಲ್ಲ.
ಹುಲಿ ಎಂದರೆ ಕಾಡಿಗೆ ಕಳುಹಿಸಿಬಿಡುತ್ತಾರೆ.
ಹೈಕಮಾಂಡ್ ನಿರ್ಧಾರವನ್ನ ಯಾರು ವಿರೋಧ ಮಾಡಬಾರದು.
ಯತ್ನಾಳ್ ಪರವಾಗಿ ನಾವಿದ್ದೇವೆ ಎಂದು ಯಾರ ಹೇಳಬಾರದು.
ಅಡ್ಜಸ್ಟಮೆಂಟ್ ರಾಜಕಾರಣಕ್ಕೆ ಹೈಕಮಾಂಡ್ ಬ್ರೇಕ್ ಹಾಕುತ್ತೆ.
ಮೈಸೂರಿನಲ್ಲಿ ಛಲವಾದಿ ನಾರಾಯಣಸ್ವಾಮಿ ಹೇಳಿಕೆ.
-
Hassan22 hours ago
ನನ್ನ ರಕ್ಷಿಸಿ, ಆಸ್ತಿ ಉಳಿಸಿಕೊಡಿ: ಡಿಸಿ ಕಛೇರಿ ಮುಂದೆ ವೃದ್ಧೆ ಅಳಲು
-
Chamarajanagar21 hours ago
ಗುಂಡ್ಲುಪೇಟೆ ಪಟ್ಟಣದ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಜಯಕುಮಾರ್ ಅಧಿಕಾರ ಸ್ವೀಕಾರ
-
Kodagu22 hours ago
ಭೀಕರ ರಸ್ತೆ ಅಪಘಾತ – ಬೈಕ್ ಸವಾರ ದುರ್ಮರಣ
-
Hassan22 hours ago
ಹೊಸಕೋಟೆ ಸಹಕಾರ ಸಂಘಕ್ಕೆ 12ಜನ ನೂತನ ನಿರ್ದೇಶಕರ ಆಯ್ಕೆ
-
Mysore21 hours ago
ಜಿಡಿ ಹರೀಶ್ಗೌಡ ಸಹಕಾರ ಸಂಘದ ಭ್ರಷ್ಟಾಚಾರ ಮುಚ್ಚಿಹಾಕಲು ಪ್ರತಿಭಟನೆ ಮಾಡುತ್ತಿದ್ದಾರೆ: ಎಚ್.ಪಿ.ಮಂಜುನಾಥ್
-
Mysore21 hours ago
ನಂಜನಗೂಡು ದೊಡ್ಡ ಜಾತ್ರೆ: ಭಕ್ತರಿಗೆ ಸೂಕ್ತ ಸೌಲಭ್ಯ ಒದಗಿಸುವಂತೆ ದರ್ಶನ್ ಧ್ರುವ ಸೂಚನೆ
-
State17 hours ago
ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಜಸ್ಟ್ 4ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ : ಹೇಗೆ ಅರ್ಜಿ ಸಲ್ಲಿಸುವುದು?
-
State23 hours ago
Nation First, Party next, Self last: ಯತ್ನಾಳ್ ಹೀಗೇಳಿದ್ದೇಕೆ?