Connect with us

Cinema

ಸುಮಲತಾರನ್ನು ಅನ್‌ಫಾಲೋ ಮಾಡಿದ ದರ್ಶನ್‌; ಟ್ವೀಟ್‌ ಮೂಲಕ ಟಕ್ಕರ್‌ ಕೊಡ್ಡ ಲೇಡಿ ರೆಬೆಲ್‌

Published

on

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದರ್ಶನ್‌, ಸುಮಲತಾ ಅಂಬರೀಶ್‌ ನಡುವೆ ದಿಢೀರ್‌ ಮನಸ್ಥಾಪ ಉಂಟಾಗಿದೆ ಎಂಬ ಊಹಾಪೋಹಗಳ ನಡುವೆ, ದರ್ಶನ್‌ ನಡೆ ಈಗ ಅಭಿಮಾನಿಗಳಲ್ಲಿ ಭಾರೀ ಅಚ್ಚರಿ ಮೂಡಿಸಿದೆ.

ದರ್ಶನ್‌ ತಮ್ಮ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ಸುಮಲತಾ ಅಂಬರೀಷ್‌, ಅಭಿಷೇಕ್‌ ಅಂಬರೀಷ್‌, ಅವಿವಾ ಬಿದ್ದಪ್ಪ ಸೇರಿದಂತೆ ಆರು ಮಂದಿ ಆಪ್ತರನ್ನು ಅನ್‌ಫಾಲೋ ಮಾಡಿ, ಅಭಿಮಾನಿಗಳಿಗೆ ಬಿಗ್‌ ಶಾಕ್‌ ಕೊಟ್ಟಿದ್ದಾರೆ.

ಅನ್‌ಫಾಲೋ ಮಾಡಿದ ಬೆನ್ನಲ್ಲೇ ಸುಮಲತಾ ಅಂಬರೀಷ್‌ ಅವರು ಪೋಸ್ಟ್‌ವೊಂದನ್ನು ಹಾಕಿದ್ದು, ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.

ಬೆಸ್ಟ್‌ ಆಕ್ಟಿಂಗ್‌ ಆಸ್ಕರ್‌ ಅವಾರ್ಡ್‌ ಯಾರಿಗೆ ಹೋಗುತ್ತೆ ಅಂದ್ರೆ.. ಯಾರು ಸತ್ಯವನ್ನು ತಿರುಚುತ್ತಾರೋ, ತಮ್ಮದೇ ತಪ್ಪನ್ನು ಇಟ್ಟುಕೊಂಡು ಬೇರೆಯವರ ಮೇಲೆ ಹಾಕಿ ನೋವು ಮಾಡೋದು, ತಮ್ಮ ಮೇಲಿನ ನಿಂದನೆಯನ್ನು ಬೇರೆಯವರ ಮೇಲೆ ಹಾಕೋದು, ಗೂಬೆ ಕೂರಿಸೋದು ಮಾಡಿ ತಮ್ಮನ್ನು ತಾವು ಹೀರೋ ಎಂಬಂತೆ ಬಿಂಬಿಸಿಕೊಳ್ಳುವುದು ಎಂದು ಸುಮಲತಾ ಪೋಸ್ಟ್‌ ಮಾಡಿದ್ದಾರೆ.

ಈ ಬೆಳವಣಿಗೆಯಿಂದ ದರ್ಶನ್‌ ಅಭಿಮಾನಿಗಳಿಗೆ ಶಾಕ್‌ ಎದುರಾಗಿದ್ದು, ಅಂಬರೀಷ್‌ ಫ್ಯಾಮಿಲಿ ಮೇಲೆ ನಟ ದರ್ಶನ್‌ಗೆ ಬೇಸರ ತಂದಿದೆಯಾ ಎಂಬ ಪ್ರಶ್ನೆ ಮೂಡಿದೆ.

ಇನ್ನು ಈ ಪೋಸ್ಟ್‌ ಭಾರೀ ವೈರಲ್‌ ಆಗಿದ ಬೆನ್ನಲ್ಲೇ ಮತ್ತೊಂದು ಪೋಸ್ಟ್‌ ಹಂಚಿಕೊಂಡಿರುವ ಸುಮಲತಾ ತಾಯಿ ಹಾಗೂ ಮಗನ ಮಧ್ಯೆ ಬಿರುಕು ತರಬೇಡಿ ಎಂದು ಕೇಳಿಕೊಂಡಿದ್ದಾರೆ.

ಟ್ವೀಟ್‌ನಲ್ಲೇನಿದೆ.: ನನ್ನ ಹಿಂದಿನ ಒಂದು ಪೋಸ್ಟ್‌ ಕುರಿತು ಅನಗತ್ಯವಾದ ವಿವಾದ ಸೃಷ್ಟಿಯಾಗಿರುವುದರಿಂದ ಈ ಸ್ಪಷ್ಟನೆ ನೀಡಲು ನಾನು ಇಚ್ಛಿಸುತ್ತೇನೆ. ನನ್ನ ಪೋಸ್ಟ್‌ ಯಾರನ್ನಾದರೂ ಗುರಿಯಾಗಿಸಿ ಮಾಡಲಾದದ್ದಲ್ಲ; ಅದು ಸರಳವಾಗಿ ಹಂಚಿಕೊಂಡ ವಿಷಯ ಮಾತ್ರ.

ಯಾರು ನನ್ನನ್ನು ಫಾಲೋ ಮಾಡುತ್ತಾರೆ ಅಥವಾ ಅನ್‌ಫಾಲೋ ಮಾಡುತ್ತಾರೆ ಎಂಬುದನ್ನು ಗಮನಿಸುವ ಅಭ್ಯಾಸ ಹೊಂದಿಲ್ಲ. ಮಾಧ್ಯಮಗಳಲ್ಲಿ ಈ ವಿಷಯದ ಬಗ್ಗೆ ಸುದ್ದಿಗಳು ಬಂದ ಬಳಿಕವೇ ನನಗೂ ಈ ಬೆಳವಣಿಗೆ ತಿಳಿಯಿತು.

ನಿಜಕ್ಕೂ, ದರ್ಶನ್ ಅವರು ಇನ್‌ಸ್ಟಾಗ್ರಾಂ ಮತ್ತು ಟ್ವಿಟರ್‌ನಲ್ಲಿ ಯಾರನ್ನೂ ಫಾಲೋ ಮಾಡುತ್ತಿಲ್ಲ. ಇದು ಅವರ ವೈಯಕ್ತಿಕ ಆಯ್ಕೆ, ಮತ್ತು ಅದನ್ನು ಎಲ್ಲರೂ ಗೌರವಿಸಬೇಕು. ಇದನ್ನು ಬೇರೆ ರೀತಿಯಲ್ಲಿ ಅರ್ಥೈಸುವುದು ಅಗತ್ಯವಿಲ್ಲ.

ತಾಯಿ-ಮಗನ ಸಂಬಂಧದಲ್ಲಿ ಅನಗತ್ಯವಾದ ವಿವಾದಗಳನ್ನು ಸೃಷ್ಟಿಸಬೇಡಿ ಎಂದು ಎಲ್ಲರಲ್ಲಿ ಮನವಿ ಮಾಡುತ್ತೇನೆ. ನನ್ನ ಪೋಸ್ಟ್‌ ಯಾರನ್ನೂ ಉದ್ದೇಶಿಸಿಲ್ಲ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ.

ನಾನು ನನ್ನ ಕುಟುಂಬ ಹಾಗೂ ಆಪ್ತರ ವಿಚಾರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಎಳೆದು ತರುವ ಅಭ್ಯಾಸವನ್ನು ಎಂದಿಗೂ ಹೊಂದಿಲ್ಲ ಎಂದು ಬರದುಕೊಂಡಿದ್ದಾರೆ.

Continue Reading

Cinema

ಲಾಂಗ್‌ ಹಿಡಿದು ರೀಲ್ಸ್‌ ಪ್ರಕರಣ: ಬಿಗ್‌ಬಾಸ್‌ ಖ್ಯಾತಿಯ ರಜತ್‌ ಮತ್ತೆ ಬಂಧನ

Published

on

ಬೆಂಗಳೂರು: ಲಾಗ್‌ ಹಿಡಿದು ರೀಲ್ಸ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಬಿಗ್‌ಬಾಸ್‌ ಖ್ಯಾತಿಯ ರಜತ್‌ನನ್ನು ಬುಧವಾರ ಬಂಧಿಸಲಾಗಿದೆ.

ರೀಲ್ಸ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ರಜತ್‌ಗೆ ಪೊಲೀಸರು ನೋಟಿಸ್‌ ನೀಡಿದ್ದರು. ರೀಲ್ಸ್‌ಗೆ ಬಳಸಿದ್ದ ಮಚ್ಚು ಸಿಗದ ಹಿನ್ನೆಲೆಯಲ್ಲಿ ಎರಡು ಬಾರಿ ನೋಟಿಸ್‌ ನೀಡಿದ್ದು. ಆದರೆ ರಜತ್‌ ಪೊಲೀಸ್‌ ವಿಚಾರಣೆಗೆ ಗೈರಾಗಿದ್ದಕ್ಕೆ ಅಸಮಾಧಾನಗೊಂಡಿದ್ದ ಕೋರ್ಟ್‌ ಎನ್‌ಬಿಡಬ್ಲ್ಯೂ ಜಾರಿ ಮಾಡಿತ್ತು.

ಈ ಹಿನ್ನೆಲೆಯಲ್ಲಿ ಕೋರ್ಟ್‌ ಸೂಚನೆ ಮೇರೆಗೆ ಬಸವೇಶ್ವರನಗರ ಠಾಣೆ ಪೊಲೀಸರು ರಜತ್‌ನನ್ನು ಬಂಧಿಸಿದ್ದಾರೆ.

Continue Reading

Cinema

ಬಾಲಿವುಡ್‌ ಭಾಯ್‌ ಜಾನ್‌ಗೆ ಮತ್ತೆ ಕೊಲೆ ಬೆದರಿಕೆ ಸಂದೇಶ: ಆತಂಕದಲ್ಲಿ ಫ್ಯಾನ್ಸ್‌

Published

on

ಮುಂಬೈ: ಬಾಲಿವುಡ್‌ನ ಭಾಯ್‌ ಜಾನ್‌ ಎಂದೇ ಹೆಸರುವಾಸಿಯಾಗಿರುವ ನಟ ಸಲ್ಮಾನ್‌ ಖಾನ್‌ಗೆ ಇಂದು (ಸೋಮವಾರ) ಮತ್ತೆ ಕೊಲೆ ಬೆದರಿಕೆ ಸಂದೇಶ ರವಾನೆಯಾಗಿದ್ದು, ಫ್ಯಾನ್ಸ್‌ ಆತಂಕಕ್ಕೆ ಒಳಗಾಗಿದ್ದಾರೆ.

ಮುಂಬೈನ್‌ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ಗೆ ನುಗ್ಗಿ ಅವರ ಕಾರನ್ನು ಸ್ಫೋಟಿಸುವ ಮೂಲಕ ಸಲ್ಮಾನ್‌ಖಾನ್‌ ಕೊಲೆ ಮಾಡುತ್ತೇವೆ ಎಂದು ವರ್ಲಿಯಲ್ಲಿರುವ ಸಾರಿಗೆ ಇಲಾಖೆ ವಾಟ್ಸಪ್‌ ನಂಬರ್‌ಗೆ ಸಂದೇಶ ಬಂದಿದೆ.

ಬೆದರಿಕೆ ಸಂದೇಶ ರವಾನಿಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ಇದೀಗ ವರ್ಲಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಬೆದರಿಕೆಯ ಹೊಣೆಯನ್ನೂ ಯಾರು ಸಹ ಹೊತ್ತುಕೊಂಡಿಲ್ಲ. ಇನ್ನು ನಟ ಸಲ್ಮಾನ್‌ ಖಾನ್‌ ಅವರಾಗಲಿ ಹಾಗೂ ಅವರ ಕುಟುಂಬಸ್ಥರಾಗಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಈ ಹಿಂದೆಯೂ ಹಲವು ಬಾರಿ ಸಲ್ಮಾನ್‌ ಖಾನ್‌ಗೆ ಬೆದರಿಕೆಗಳು ಬಂದಿದ್ದವು. ಗ್ಯಾಂಗ್‌ಸ್ಟರ್‌ ಬಿಷ್ಣೋಯ್‌ ಮತ್ತು ಗೋಲ್ಡಿ ಬ್ರಾರ್‌ ಗ್ಯಾಂಗ್‌ನಿಂದ ಬೆದರಿಕೆಗಳು ಬಂದಿವೆ.

ಈ ಹಿನ್ನೆಲೆಯಲ್ಲಿ ನಟ ಸಲ್ಮಾನ್‌ ಖಾನ್‌ ಮನೆಯ ಸುತ್ತಮತ್ತ ಹಲವು ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

Continue Reading

Cinema

ಸುದೀಪ್‌ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌: ಏ.16ರಿಂದ ಶುರುವಾಗಲಿದೆ ‘ಬಿಲ್ಲ ರಂಗ ಭಾಷಾ’

Published

on

‘ಏಪ್ರಿಲ್‍ 16’ ಎಂದಷ್ಟೇ ಬರೆದು ಕಿಚ್ಚ ಸುದೀಪ್‌ ಮೂರು ಫೋಟೋಗಳನ್ನು ಕೆಲವು ದಿನಗಳ ಹಿಂದೆ ಸೋಷಿಯಲ್‍ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಏಪ್ರಿಲ್‍.16ರಂದು ಏನು ಎಂದು ಅಭಿಮಾನಿಗಳು ಹುಳ ಬಿಟ್ಟುಕೊಂಡರು. ಕೆಲವರು ಚಿತ್ರದ ಮುಹೂರ್ತವಿರಬಹುದು ಎಂದರೆ, ಇನ್ನೂ ಕೆಲವರು ಇನ್ನೇನೋ ಘೋಷಣೆ ಇರಬಹುದು ಅಂದುಕೊಂಡರು.

ಈಗ ಏಪ್ರಿಲ್‍.16ಕ್ಕೆ ಏನಾಗಲಿದೆ ಎಂದು ಸ್ವತಃ ಸುದೀಪ್‍ ಹೇಳಿಕೊಂಡಿದ್ದಾರೆ. ‘ಏಪ್ರಿಲ್‍.16ರಂದು ಏನಾಗಲಿದೆ ಎಂಬ ಕುತೂಹಲವಿರುವವರಿಗೆ, ಅಂದು ನಮ್ಮ ‘ಬಿಲ್ಲ ರಂಗ ಭಾಷಾ’ ಚಿತ್ರ ಪ್ರಾರಂಭವಾಗಲಿದೆ’ ಎಂದು ಸೋಷಿಯಲ್‍ ಮೀಡಿಯಾದಲ್ಲಿ ಘೋಷಿಸಿದ್ದಾರೆ. ಇದನ್ನು ಕೇಳಿ ಅಭಿಮಾನಿಗಳು ಬಹಳ ಖುಷಿಯಾಗಿದ್ದಾರೆ.

ಕಳೆದ ವರ್ಷ ಸುದೀಪ್‍ ಹುಟ್ಟುಹಬ್ಬದಂದು ಹೊಸ ಸುದ್ದಿಯೊಂದನ್ನು ಘೋಷಿಸುವುದಾಗಿ ಹೇಳಿದ್ದರು ನಿರ್ದೇಶಕ ಅನೂಪ್‍ ಭಂಡಾರಿ. ಅದರಂತೆ, ಅದು ‘ಬಿಲ್ಲ ರಂಗ ಭಾಷಾ’ ಚಿತ್ರದ ಅಧಿಕೃತ ಘೋಷಣೆಯಾಗಿತ್ತು. ಆದರೆ, ಸುದೀಪ್‍ ಆ ನಂತರ ‘ಬಿಗ್‍ ಬಾಸ್‍’, ‘ಮ್ಯಾಕ್ಸ್’, ಸಿಸಿಎಲ್‍ನಲ್ಲಿ ಬ್ಯುಸಿಯಾಗಿದ್ದರಿಂದ ಚಿತ್ರವು ವಿಳಂಬವಾಯಿತು. ಈಗ ಕೊನೆಗೂ ಚಿತ್ರ ಏಪ್ರಿಲ್‍.16ಕ್ಕೆ ಪ್ರಾರಂಭವಾಗುತ್ತಿದೆ.

‘ಬಿಲ್ಲ ರಂಗ ಭಾಷಾ ತಮ್ಮ ಜೀವನದಲ್ಲೇ ದೊಡ್ಡ ಚಿತ್ರವಾಗಲಿದೆ ಎಂದು ಸುದೀಪ್ ಕೆಲವು ತಿಂಗಳುಗಳ ಹಿಂದೆ ಹೇಳಿಕೊಂಡಿದ್ದರು. ’ವಿಕ್ರಾಂತ್ ರೋಣ’ ನಂತರ ಒಂದು ತಂಡವಾಯಿತು. ನಮಗೆ ನಮ್ಮ ಮೇಲೆ ನಂಬಿಕೆ ಬಂತು. ಈಗ ‘ಬಿಲ್ಲ ರಂಗ ಭಾಷಾ’ ಮಾಡುವುದಕ್ಕೆ ಕೈ ಹಾಕಿದ್ದೇವೆ. ಈ ಚಿತ್ರ ನನ್ನ ಮತ್ತು ಅನೂಪ್‍ ಚಿತ್ರಜೀವನದಲ್ಲೇ ದೊಡ್ಡ ಸಿನಿಮಾ ಆಗಲಿದೆ. ಚಿತ್ರಕ್ಕೆ ಸಾಕಷ್ಟು ರೀಸರ್ಚ್ ಕೆಲಸದ ಅವಶ್ಯಕತೆ ಇತ್ತು. ಅದಕ್ಕೆ ಸಾಕಷ್ಟು ಸಮಯವಾಯಿತು. ಇದೊಂದು ಅಪರೂಪದ ಚಿತ್ರವಾಗಲಿದೆ’ ಎಂದು ಅವರು ಹೇಳಿದ್ದರು.

ಇದೊಂದು ಪ್ಯಾನ್‍ ಇಂಡಿಯಾ ಚಿತ್ರವಾಗಿದ್ದು, ತೆಲುಗಿನಲ್ಲ ‘ಹನುಮಾನ್’ ಎಂಬ ಬ್ಲಾಕ್‌ ಬಸ್ಟರ್‌ ಚಿತ್ರವನ್ನು ನಿರ್ಮಿಸಿದ್ದ ನಿರಂಜನ್‍ ರೆಡ್ಡಿ ಮತ್ತು ಚೈತನ್ಯ ರೆಡ್ಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರದ ಕಲಾವಿದರು ಮತ್ತು ತಂತ್ರಜ್ಞರ ಹೆಸರುಗಳನ್ನು ಚಿತ್ರತಂಡ ಸದ್ಯದಲ್ಲೇ ಘೋಷಿಸಲಿದೆ.

Continue Reading

Trending

error: Content is protected !!