Cinema
ಸ್ಟೇಟ್ ಅವಾರ್ಡ್ ತಿರಸ್ಕರಿಸಿದ ಕಿಚ್ಚ ಸುದೀಪ: ಕಾರಣ ಏನು ಗೊತ್ತಾ?

ಬೆಂಗಳೂರು: 2019ರ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಕನ್ನಡದ ಖ್ಯಾತನಟ ಕಿಚ್ಚ ಸುದೀಪ್ ಹಾಗೂ ನಟಿ ಅನುಪಮಾ ಗೌಡಗೆ ರಾಜ್ಯ ಪ್ರಶಸ್ತಿ ಘೋಷಿಸಿದೆ.
ಪೈಲ್ವಾನ್ ಸಿನಿಮಾದಲ್ಲಿನ ಅಭಿನಯಕ್ಕೆ ಸುದೀಪ್ಗೆ ಅತ್ಯುತ್ತಮ ನಟ ಪ್ರಶಸ್ತಿ ನೀಡುವುದಾಗಿ ಘೋಷಿಸಿತ್ತು. ಆದರೆ ಈ ಪ್ರಶಸ್ತಿಯನ್ನು ಒಪ್ಪದ ಕಿಚ್ಚ ಸುದೀಪ್ ಅತೀ ನಯವಾಗಿ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ.
ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು ನನಗಿಂತ ಹೆಚ್ಚು ಜನರು ಶ್ರಮ ಜೀವಿಗಳು ಚಿತ್ರರಂಗದಲ್ಲಿ ದುಡಿದಿದ್ದಾರೆ. ಅಂತವರಲ್ಲಿ ಒಬ್ಬರಿಗೆ ಈ ಗೌರವ ಸಲ್ಲಬೇಕು ಎಂದು ಅವರು ಭಾವಿಸಿದ್ದಾರೆ.
ಸುದೀಪ್ ಟ್ವೀಟ್ನಲ್ಲೇನಿದೆ?
ಗೌರವಾನ್ವಿತ ಕರ್ನಾಟಕ ಸರ್ಕಾರ ಮತ್ತು ತೀರ್ಪುಗಾರರ ಸದಸ್ಯರು, ಅತ್ಯುತ್ತಮ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿಯನ್ನು ಪಡೆದಿರುವುದು ನಿಜಕ್ಕೂ ಒಂದು ಸೌಭಾಗ್ಯ, ಮತ್ತು ಈ ಗೌರವಕ್ಕಾಗಿ ಗೌರವಾನ್ವಿತ ತೀರ್ಪುಗಾರರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಆದಾಗ್ಯೂ, ನಾನು ಹಲವಾರು ವರ್ಷಗಳಿಂದ ಪ್ರಶಸ್ತಿಗಳನ್ನು ಸ್ವೀಕರಿಸುವುದನ್ನು ನಿಲ್ಲಿಸಲು ಆಯ್ಕೆ ಮಾಡಿದ್ದೇನೆ, ನಾನು ಎತ್ತಿಹಿಡಿಯಲು ಉದ್ದೇಶಿಸಿರುವ ವಿವಿಧ ವೈಯಕ್ತಿಕ ಕಾರಣಗಳಿಗಾಗಿ ಮಾಡಿದ ನಿರ್ಧಾರವನ್ನು ನಾನು ವ್ಯಕ್ತಪಡಿಸಬೇಕು. ಅನೇಕ ಅರ್ಹ ನಟರು ಚಿತ್ರರಂಗಕ್ಕಾಗಿ ದುಡಿದಿದ್ದಾರೆ ಮತ್ತು ಈ ಪ್ರತಿಷ್ಠಿತ ಮನ್ನಣೆಯನ್ನು ನನಗಿಂತ ಹೆಚ್ಚು ಅವರಿಗೆ ನೀಡಬೇಕು. ಅವರಲ್ಲಿ ಒಬ್ಬರು ಅದನ್ನು ಸ್ವೀಕರಿಸುವುದನ್ನು ನೋಡುವುದು ನನಗೆ ಹೆಚ್ಚು ಸಂತೋಷವನ್ನು ನೀಡುತ್ತದೆ.
ಜನರನ್ನು ರಂಜಿಸುವ ನನ್ನ ಸಮರ್ಪಣೆ ಯಾವಾಗಲೂ ಪ್ರಶಸ್ತಿಗಳ ನಿರೀಕ್ಷೆಯಿಲ್ಲದೆಯೇ ಇರುತ್ತದೆ ಮತ್ತು ತೀರ್ಪುಗಾರರ ಈ ಅಂಗೀಕಾರವು ಶ್ರೇಷ್ಠತೆಗಾಗಿ ಶ್ರಮಿಸುವುದನ್ನು ಮುಂದುವರಿಸಲು ನನಗೆ ಗಮನಾರ್ಹವಾದ ಉತ್ತೇಜನವನ್ನು ನೀಡುತ್ತದೆ.
ನನ್ನನ್ನು ಆಯ್ಕೆ ಮಾಡಿದ್ದಕ್ಕಾಗಿ ನಾನು ಪ್ರತಿಯೊಬ್ಬ ಜ್ಯೂರಿ ಸದಸ್ಯರಿಗೆ ಕೃತಜ್ಞನಾಗಿದ್ದೇನೆ, ಏಕೆಂದರೆ ಈ ಗುರುತಿಸುವಿಕೆ ಸ್ವತಃ ನನ್ನ ಪ್ರತಿಫಲವಾಗಿದೆ. ನನ್ನ ನಿರ್ಧಾರವು ಯಾವುದೇ ನಿರಾಶೆಗೆ ಕಾರಣವಾಗಬಹುದಾದ ತೀರ್ಪುಗಾರರ ಸದಸ್ಯರು ಮತ್ತು ರಾಜ್ಯ ಸರ್ಕಾರಕ್ಕೆ ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ ಮತ್ತು ನೀವು ನನ್ನ ಆಯ್ಕೆಯನ್ನು ಗೌರವಿಸುತ್ತೀರಿ ಮತ್ತು ನಾನು ಆಯ್ಕೆ ಮಾಡಿದ ಹಾದಿಯಲ್ಲಿ ನನ್ನನ್ನು ಬೆಂಬಲಿಸುತ್ತೀರಿ ಎಂದು ನಾನು ನಂಬುತ್ತೇನೆ.
ಮತ್ತೊಮ್ಮೆ, ನನ್ನ ಕೆಲಸವನ್ನು ಗುರುತಿಸಿ ಈ ಪ್ರಶಸ್ತಿಗೆ ಪರಿಗಣಿಸಿದ್ದಕ್ಕಾಗಿ ತೀರ್ಪುಗಾರರ ಗೌರವಾನ್ವಿತ ಸದಸ್ಯರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಸುದೀರ್ಘವಾಗಿ ಬರೆದುಕೊಂಡು ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ ಬಾದ್ಶಾ ಕಿಚ್ಚ ಸುದೀಪ.
Cinema
ಶೀಘ್ರವೇ ಫ್ಯಾನ್ ಮೀಟ್: ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟ ಜೂ. ಎನ್ಟಿಆರ್

ಟಾಲಿವುಡ್ ಅಂಗಳದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದ್ದ ನಟ ಅಲ್ಲು ಅರ್ಜುನ್ ಅವರ ಪುಷ್ಪ-2 ಸಿನಿಮಾ ರಿಲೀಸ್ ವೇಳೆ ಉಂಟಾದ ಅವಘಡದ ಹಿನ್ನೆಲೆಯಲ್ಲಿ ಮತ್ತೊಬ್ಬ ಸೂಪರ್ಸ್ಟಾರ್ ಟಾಲಿವುಡ್ನ ಜೂ. ಎನ್ಟಿಆರ್ ಅವರು ಅಭಿಮಾನಿಗಳೊಂದಿಗೆ ಸಂವಾದ ನಡೆಸಲು ಸಜ್ಜಾಗಿದ್ದಾರೆ.
ಈ ಬಗ್ಗೆ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಅವರು, ಎನ್ಟಿಆರ್ ಅಭಿಮಾನಿಗಳು ಅವರಿಗೆ ತೋರಿಸುತ್ತಿರುವ ಅಪಾರ ಪ್ರೀತಿ ಮತ್ತು ಗೌರವಕ್ಕಾಗಿ ಆಳವಾದ ಕೃತಜ್ಞರಾಗಿರಬೇಕು.
https://x.com/Fukkard/status/1886761589061108183
ಅವರನ್ನು ಭೇಟಿಯಾಗಲು ಅವರ ಉತ್ಸುಕತೆಯನ್ನು ಅರ್ಥಮಾಡಿಕೊಂಡ ಅವರು, ಶೀಘ್ರದಲ್ಲೇ ತಮ್ಮ ಅಭಿಮಾನಿಗಳೊಂದಿಗೆ ಸುಸಂಘಟಿತ ಕೂಟವೊಂದರಲ್ಲಿ ವೈಯಕ್ತಿಕವಾಗಿ ಸಂವಾದ ನಡೆಸಲು ನಿರ್ಧರಿಸಿದ್ದಾರೆ.
ಯಾವುದೇ ಕಾನೂನು ಮತ್ತು ಸುವ್ಯವಸ್ಥೆ ಅಥವಾ ವ್ಯವಸ್ಥಾಪನಾ ಸವಾಲುಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆ ಮತ್ತು ಇತರ ಸಂಬಂಧಿತ ಅಧಿಕಾರಿಗಳಿಂದ ಎಲ್ಲಾ ಅಗತ್ಯ ಅನುಮತಿಗಳನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಈ ಈವೆಂಟ್ ಅನ್ನು ನಿಖರವಾಗಿ ಯೋಜಿಸಲಾಗುವುದು. ಅಂತಹ ಕಾರ್ಯಕ್ರಮವನ್ನು ಆಯೋಜಿಸಲು ಸಮಯ ತೆಗೆದುಕೊಳ್ಳುವುದರಿಂದ, ಇದನ್ನು ತಡೆರಹಿತ ಮತ್ತು ಸ್ಮರಣೀಯ ಅನುಭವವನ್ನಾಗಿ ಮಾಡಲು ಅಗತ್ಯ ವ್ಯವಸ್ಥೆಗಳ ಮೂಲಕ ನಾವು ಕೆಲಸ ಮಾಡುವಾಗ ತಾಳ್ಮೆಯಿಂದಿರಲು ನಾವು ಅಭಿಮಾನಿಗಳಿಗೆ ವಿನಂತಿಸುತ್ತೇವೆ.
ಈ ಹಿನ್ನೆಲೆಯಲ್ಲಿ, ಪಾದ ಯಾತ್ರೆಯಂತಹ ದೈಹಿಕವಾಗಿ ಶ್ರಮದಾಯಕ ಪ್ರಯತ್ನಗಳನ್ನು ತೆಗೆದುಕೊಳ್ಳಬೇಡಿ ಎಂದು ಎನ್ಟಿಆರ್ ತಮ್ಮ ಅಭಿಮಾನಿಗಳನ್ನು ಕೋರಿದ್ದಾರೆ. ಅವರ ಪ್ರೀತಿಯೇ ನನಗೆ ಜಗತ್ತು ಎಂದು ಅವರು ಭಾವಿಸಿದ್ದಾರೆ. ಅಭಿಮಾನಿಗಳ ಆರೋಗ್ಯ ಮತ್ತು ಯೋಗಕ್ಷೇಮವೇ ತನ್ನ ಪ್ರಮುಖ ಆದ್ಯತೆ ಎಂದು ಅವರು ಪುನರುಚ್ಚರಿಸುತ್ತಾರೆ ಎಂದು ಎನ್ಟಿಆರ್ ಕಚೇರಿಯಿಂದ ಅಧಿಕೃತ ಹೇಳಿಕೆ ಬಿಡುಗಡೆಯಾಗಿದೆ.
ಸದ್ಯ WAR-2 ಚಿತ್ರದಲ್ಲಿ ನಟಿಸುತ್ತಿರುವ ಎನ್ಟಿಆರ್, ಬಾಲಿವುಡ್ ನಟ ರಿತಿಕ್ ರೋಷನ್ ಜೊತೆಗೆ ತೆರೆ ಹಂಚಿಕೊಂಡಿದ್ದಾರೆ.
Cinema
ರುದ್ರನಾದ ರೆಬೆಲ್ ಸ್ಟಾರ್: ಕಣ್ಣಪ್ಪ ಚಿತ್ರದ ಪ್ರಭಾಸ್ ಲುಕ್ ರಿವೀಲ್

ಬಹಳ ಕುತೂಹಲ ಮೂಡಿಸಿದ್ದ ಟಾಲಿವುಡ್ನ ಪೌರಾಣಿಕ ಕಥೆಯನ್ನಾಧರಿಸಿ ನಿರ್ಮಾಣವಾಗುತ್ತಿರುವ ಕಣ್ಣಪ್ಪ ಚಿತ್ರದಿಂದ ಬಿಗ್ ಅಪ್ಡೇಟ್ ಸಿಕ್ಕಿದೆ.
ಪ್ಯಾನ್ ಇಂಡಿಯಾ ಸಿನಿಮಾವಾಗಿ ಮೂಡಿಬರುತ್ತಿರುವ ಈ ಚಿತ್ರದಲ್ಲಿ ನಟ ವಿಷ್ಣು ಮಂಚು ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ದೊಡ್ಡ ತಾರಾಂಗಣವನ್ನೇ ಹೊಂದಿರುವ ಈ ಚಿತ್ರದಲ್ಲಿ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ನಟಸಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಈ ಬಗ್ಗೆ ಚಿತ್ರತಂಡವೇ ಅಪ್ಡೇಟ್ ನೀಡಿದ್ದು, ಪ್ರಭಾಸ್ ಅಭಿಮಾನಿಗಳ ನಿರೀಕ್ಷೆಯನ್ನು ಉಸಿಗೊಳಿಸಿಲ್ಲ.
ಕಣ್ಣಪ್ಪ ಚಿತ್ರದಲ್ಲಿ ಪ್ರಭಾಸ್ ಅವರು ರುದ್ರನಾಗಿ ತೆರೆಗೆ ಅಪ್ಪಳಿಸಲಿದ್ದಾರೆ. ಈ ಬಗ್ಗೆ ಪೋಸ್ಟರ್ ಒಂದನ್ನು ಹಂಚಕೊಂಡಿರುವ ಚಿತ್ರತಂಡ ಶಿವನ ಆಜ್ಞೆಯಂತೆ ನಡೆಯುವವ ಎಂದು ಬರೆದುಕೊಂಡಿದ್ದಾರೆ.
ಈ ಪೋಸ್ಟರ್ ಅನ್ನು ಪ್ರಭಾಸ್ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಪ್ರಭಾಸ್ ಲುಕ್ ನೋಡಿ ಅಭಿಮಾನಿಗಳೆಲ್ಲರೂ ಫಿದಾ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸದ್ಯ ಸಖತ್ ವೈರಲ್ ಆಗಿದೆ.
ಇನ್ನು ಈ ಕಣ್ಣಪ್ಪ ಚಿತ್ರವನ್ನು ಮೋಹನ್ ಬಾಬು ನಿರ್ಮಾಣ ಮಾಡುತ್ತಿದ್ದು, ಮುಖೇಶ್ ಕುಮಾರ್ ಸಿಂಗ್ ಅವರು ಆಕ್ಷನ್ ಕಟ್ ಹೇಳಿದ್ದಾರೆ. ವಿಶೇಷ ಎಂಬಂತೆ ಶಿವನ ಪಾತ್ರದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಕಾಣಿಸಿಕೊಂಡಿದ್ದಾರೆ.
ಇದೇ ಏಪ್ರಿಲ್ 25ಕ್ಕೆ ಚಿತ್ರ ರಿಲೀಸ್ ಆಗಲಿದೆ ಎಂದು ಹೇಳಲಾಗುತ್ತಿದೆ.
Cinema
ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖ್ಯಾತ ನಟ ಶಿವರಾಜ್ ಕುಮಾರ್ ಅವರ ಬೆಂಗಳೂರಿನ ನಾಗವಾರದಲ್ಲಿನ ನಿವಾಸಕ್ಕೆಸೋಮವಾರ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ಮೇಲೆ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಯಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು ತಿಳಿಸಿದ್ದರು.
ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.
-
State11 hours ago
ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ
-
Kodagu9 hours ago
ಕೊಡವಾಮೆ ಬಾಳೋ ಪಾದಯಾತ್ರೆ: ಮಧ್ಯ ಮಾರಾಟ ನಿಷೇಧ
-
Chamarajanagar9 hours ago
ಚಿಕ್ಕಮಗಳೂರು: ನಕ್ಸಲ್ ರವೀಂದ್ರಗೆ ಸೇರಿದ್ದು ಎನ್ನಲಾದ ಬಂದೂಕು ಪತ್ತೆ?
-
Kodagu13 hours ago
ಫೆ.7 ರ ಕೊಡವ ಪಾದಯಾತ್ರೆಗೆ ಸಿಎನ್ ಸಿ ಬೆಂಬಲ
-
Kodagu8 hours ago
ಕೊಟ್ಟಮುಡಿ ಝೀನತ್ ಯುವಕ ಸಂಘ ಅಧ್ಯಕ್ಷರಾಗಿ ಸೌಕತ್ ಆಯ್ಕೆ
-
Hassan7 hours ago
ಆಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ
-
Sports9 hours ago
ಏಕದಿನ ಮಾದರಿಗೆ ದಿಢೀರ್ ನಿವೃತ್ತಿ ಘೋಷಿಸಿದ ಆಸೀಸ್ ಆಲ್ರೌಂಡರ್ ಸ್ಟೋಯ್ನಿಸ್
-
Hassan6 hours ago
ಎಂಸಿಇ ಕಾಲೇಜು ಉಪಾಧ್ಯಕ್ಷರಿಗೆ ವೀರಶೈವ ಲಿಂಗಾಯತ ಮಹಾಸಭಾದಿಂದ ಸನ್ಮಾನ