Sports
ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಕನ್ನಡಿಗ ಕೆ.ಎಲ್.ರಾಹುಲ್
Sports
ನಾಳೆಯಿಂದ ಪ್ಲೇ ಆಫ್ ಹಣಾಹಣಿ
ಮುಂಬೈ: ಜಿದ್ದಾಜಿದ್ದಿಯಿಂದ ಕೂಡಿದ್ದ 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ.
10 ತಂಡಗಳ ಪೈಕಿ ಬೆಂಗಳೂರು, ಗುಜರಾತ್, ಹೈದರಾಬಾದ್ ಹಾಗೂ ರಾಜಸ್ಥಾನ್ ತಂಡಗಳು ಈ ಬಾರಿಯ ಪ್ಲೇ ಆಫ್ ಪ್ರವೇಶಿಸಿವೆ. ಉಳಿದ ಆರು ತಂಡಗಳು ಐಪಿಎಲ್ ಅಭಿಯಾನ ಮುಗಿಸಿವೆ.
ದ್ವಿತೀಯ ಸುತ್ತಿನಲ್ಲಿ, ಅಂದರೆ ಪ್ಲೇ ಆಫ್ ಸುತ್ತಿನಲ್ಲಿ ಒಟ್ಟು ನಾಲ್ಕು ಮ್ಯಾಚ್ಗಳು ನಡೆಯಲಿದೆ. ಪ್ಲೇ ಆಫ್ ಸುತ್ತಿನಲ್ಲಿ ಮೊದಲು ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಇದಾದ ಬಳಿಕ ಎಲಿಮಿನೇಟರ್ ಪಂದ್ಯ ನಡೆಯಲಿದೆ.
ಮೇ.26 ರಂದು ಅಗ್ರ ಎರಡು ತಂಡಗಳಾದ ಹಾಲಿ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ಧರ್ಮಶಾಲಾದಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ.

ಈ ಪಂದ್ಯದಲ್ಲಿ ಗೆದ್ದ ತಂಡ ಮೇ.31ರಂದು ಅಹಮದಾಬಾದ್ನಲ್ಲಿ ನಡೆಯಲಿರುವ ಫೈನಲ್ ಪಂದ್ಯಕ್ಕೆ ನೇರವಾಗಿ ಎಂಟ್ರಿ ಕೊಡಲಿದೆ. ಸೋತ ತಂಡಕ್ಕೆ ಮತ್ತೊಂದು ಅವಕಾಶ ಇರುತ್ತದೆ.
ಮೇ.27 ರಂದು ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಎಲಿಮಿನೇಟರ್ ಪಂದ್ಯದಲ್ಲಿ ಕಾದಾಟ ನಡೆಸಲಿವೆ.
ಈ ಪಂದ್ಯ ನ್ಯೂ ಚಂಢೀಗಡದಲ್ಲಿ ನಡೆಯಲಿದ್ದು, ಗೆದ್ದ ತಂಡ ಕ್ವಾಲಿಫೈಯರ್ -2ಕ್ಕೆ ಲಗ್ಗೆ ಇಡಲಿದೆ. ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ. ಹಾಗೆಯೇ ಗೆಲ್ಲುವ ತಂಡ ಮೊದಲ ಕ್ವಾಲಿಫೈಯರ್ನಲ್ಲಿ ಸೋತ ತಂಡದೊಡನೆ ದ್ವಿತೀಯ ಕ್ವಾಲಿಫೈಯರ್ ಪಂದ್ಯವಾಡಲಿದೆ.
ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್ಗೆ ಪ್ರವೇಶಿಸುತ್ತದೆ. ಮೇ.31 ರಂದು ನಡೆಯಲಿರುವ ಫೈನಲ್ನಲ್ಲಿ ಮೊದಲ ಕ್ವಾಲಿಫೈಯರ್ ಹಾಗೂ ದ್ವಿತೀಯ ಕ್ವಾಲಿಫೈಯರ್ನಲ್ಲಿ ಗೆದ್ದ ತಂಡಗಳು ಮುಖಾಮುಖಿಯಾಗಲಿದೆ.
ವೇಳಾಪಟ್ಟಿ ಹೀಗಿದೆ:
ಮೇ.26: ಕ್ವಾಲಿಫೈಯರ್ 1-ಆರ್ಸಿಬಿ v/s ಜಿಟಿ
ಸ್ಥಳ: ಎಚ್ಪಿಸಿಎ ಸ್ಟೇಡಿಯಂ, ಧರ್ಮಶಾಲಾ
ಮೇ 27: ಎಲಿಮಿನೇಟರ್- ಎಸ್ಆರ್ಹೆಚ್ ವರ್ಸಸ್ ಆರ್ಆರ್-ಸ್ಥಳ: ಮಹಾರಾಜ ಯಾದವೀಂದ್ರ ಸಿಂಗ್ ಸ್ಟೇಡಿಯಂ, ಮುಲ್ಲನ್ಪುರ್ (ನ್ಯೂ ಚಂಡೀಗಢ್)
ಮೇ.29: ಕ್ವಾಲಿಫೈಯರ್ 2- ಕ್ವಾಲಿಫೈಯರ್ 1ರಲ್ಲಿ
ಸೋತ ತಂಡ ವರ್ಸಸ್ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡ, ಸ್ಥಳ: ನ್ಯೂ ಚಂಡೀಗಢ್)
ಮೇ .31: ಫೈನಲ್: ಕ್ವಾಲಿಫೈಯರ್ 2ವರ್ಸಸ್ ಕ್ವಾಲಿಫೈಯರ್ 2ನಲ್ಲಿ ಗೆದ್ದ ತಂಡ. ಸ್ಥಳ: ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್.
Sports
ಅಹಮದಾಬಾದ್ನಲ್ಲಿ ಸಿಎಸ್ಕೆಗೆ ಸೋಲು: ಗಾಯಕ್ವಾಡ್ಗೆ 24 ರೂ. ಲಕ್ಷ ದಂಡ
National
IPL ನೀತಿ ಸಂಹಿತೆ ಉಲ್ಲಂಘನೆ: ಹಾರ್ದಿಕ್ ಪಾಂಡ್ಯಗೆ ಶೇ. 10% ದಂಡ, 1 ಡಿಮೆರಿಟ್ ಅಂಕ
ಕೋಲ್ಕತ್ತಾ: ಹಾರ್ದಿಕ್ ಪಾಂಡ್ ಅವರಿಗೆ ಐಪಿಎಲ್ ನೀತಿ ಸಂಹಿತೆ ಉಲ್ಲಂಘನೆ ಕಾರಣವಾಗಿ ದಂಡ ವಿಧಿಸಲಾಗಿದೆ. ಮುಂಬೈ ಇಂಡಿಯನ್ಸ್ಗೆ ನಾಯಕನಾಗಿರುವ ಪಾಂಡ್ಯ ಅವರಿಗೆ ಪಂದ್ಯ ಶುಲ್ಕದ ಶೇ.10% ದಂಡ ಹಾಗೂ 1 ಡಿಮೆರಿಟ್ ಅಂಕ ನೀಡಲಾಗಿದೆ.
ಈ ಘಟನೆ ಕೆಕೆಆರ್ ವಿರುದ್ಧ ನಡೆದ ಪಂದ್ಯದಲ್ಲಿ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಸಂಭವಿಸಿದೆ. ಫೀಲ್ಡಿಂಗ್ ವೇಳೆ ಅಸಮಾಧಾನಗೊಂಡ ಪಾಂಡ್ಯ ಅವರು ವಿಕೆಟ್ ಬೇಲ್ಸ್ಗೆ ಬಾಲ್ನಿಂದ ಹೊಡೆದು ಕೋಪ ವ್ಯಕ್ತಪಡಿಸಿದ್ದು, ಇದರಿಂದ Code of Conduct 2.2 ಉಲ್ಲಂಘನೆಯಾಗಿದೆ ಎಂದು ತಿಳಿಸಲಾಗಿದೆ.
ಪಂದ್ಯದಲ್ಲಿ ಕೆಕೆಆರ್ 148 ರನ್ ಗುರಿಯನ್ನು ಬೆನ್ನಟ್ಟಿ 4 ವಿಕೆಟ್ಗಳಿಂದ ಗೆಲುವು ಸಾಧಿಸಿತು.
-
State18 hours agoಗೃಹಲಕ್ಷ್ಮೀ ಯೋಜನೆಯಲ್ಲಿ ಬದಲಾವಣೆ
-
Kodagu23 hours agoದಿ ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ
-
Hassan21 hours agoಜಿಲ್ಲಾಧಿಕಾರಿಯ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಪದಾಧಿಕಾರಿಗಳಿಂದ ತಹಸೀಲ್ದಾರ್ಗೆ ಮನವಿ
-
Hassan2 hours ago2025-26ರ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ : ಫುಟ್ಬಾಲ್ನಲ್ಲಿ ಹಾಸನ ಜಿಲ್ಲೆಗೆ ರನ್ನರ್-ಅಪ್ ಗೌರವ
-
Chamarajanagar20 hours agoಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು ಜೀವಿತ ಪ್ರಮಾಣ ಪತ್ರ ಸಲ್ಲಿಸಲು ಮನವಿ
-
Mysore7 hours agoಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ .
-
Hassan23 minutes ago“ರಾಜ್ಯದ ಸಾಲ ₹10 ಲಕ್ಷ ಕೋಟಿ ತಲುಪಲಿದೆ”: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ
-
Kodagu21 hours agoಬೇಡು ಹಬ್ಬ : ಮದ್ಯ ಮಾರಾಟ ನಿಷೇಧ


