Hassan
ಕಾಫಿ ಬೆಲೆ ಏರಿಕೆ ಎಂಬ ಮರೀಚಿಕೆ

ಹಾಸನ: ೨೦೨೩-೨೪ ರ ಕಾಫಿ ಹಂಗಾಮಿನಲ್ಲಿ ದರ ಏರಿಕೆಯಾದರೂ ಬೆಳೆಗಾರರಿಗೆ ದಕ್ಕದ ಕಾಫಿ ಬೆಲೆ ಮರೀಚಿಕೆಯಾಗಿದೆ ಎಂದು ಕರ್ನಾಟಕ ಗ್ರೋವರ್ಸ್ ಫೆಡರೇಷನ್ ನಿರ್ದೇಶಕ ಟಿ.ಪಿ. ಸುರೇಂದ್ರ ಬೇಸರವ್ಯಕ್ತಪಡಿಸಿದರು.
ಪತ್ರಿಕಾ ಗೋಷ್ಟಿಯಲ್ಲಿ ಬುಧವಾರ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಬಹುತೇಕ ಎಲ್ಲಾ ಮಾಧ್ಯಮಗಳಲ್ಲಿ “ಗಗನಕ್ಕೇರಿದ ಕಾಫಿ ಬೆಲೆ ಕಾಫಿಗೆ ದಾಖಲೆ ಬೆಲೆ ಬೆಳೆಗಾರರಿಗೆ ತುರದೆ ಇತ್ಯಾದಿ ಶೀರ್ಷಿಕೆಗಳಡಿಯಲ್ಲಿ ಬಹುತೇಕ ವರ್ಣರಂಜಿತ ವರದಿಗಳೇ ಪಾಟವಾಗುತ್ತಿರುವುದು ದುರಾದೃಷ್ಟಕರ. ಕಾಫಿ ಬೆಲೆ ಕಳೆದ ೩೦ ವರ್ಷಗಳ ಅತ್ಯಧಿಕ ಮಟ್ಟ ತಲುಪಿದ್ದು ದಾಖಲೆಗಳಲ್ಲಿ ನಮೂದು ಮಾಡಲು ಮಾತ್ರ ಸೂಕ್ತವೇ ಹೊರತು ವಾಸ್ತವ ಪರಿಸ್ಥಿತಿ ಇದಕ್ಕೆ ವ್ಯತಿರಿಕ್ತವಾಗಿದೆ. ತೀವ್ರವಾದ ಹವಾಮಾನ ವೈಪರೀತ್ಯದ ಪರಿಣಾಮವನುಡಾಗುತವಾಗಿ ಕಾಫಿ ಉತ್ಪಾದಿಸುವ ಪ್ರಮುಖ ದೇಶಗಳಲ್ಲಿ ಉತ್ಪಾದನೆ ಕುಂಟಿತವಾದ ಪ್ರಯುಕ್ತ ಕಾಫಿ ಬೆಲೆ ಏರಿಕೆ ಕಂಡಿದ್ದು ವಾಸ್ತವ. ಈವರೆಗೆ ಜಾಗತಿಕ ಮಾರುಕಟ್ಟೆಯಲ್ಲಿ (ನ್ಯೂಯಾರ್ಕ್ ಹಾಗೂ ಲಂಡನ್) ವಹಿವಾಟಿನಲ್ಲಿ ಮುಂಚೂಣಿಯಲ್ಲಿದ್ದ ಕಾಫಿ ವಹಿವಾಟು ಕೇವಲ ಕಾಲ್ಪನಿಕ ವಹಿವಾಟು ಮಾತ್ರವಾಗಿತ್ತು. ಬಹುತೇಕ ವಹಿವಾಟು ಬೇಡಿಕೆ ಹಾಗೂ ಸರಬರಾಜು ಆಧಾರದಲ್ಲಿ ನೆಡೆಯುವುದರಿಂದ ಕಾಫಿ ಉತ್ಪಾದನೆಯಲ್ಲಿ ಹಾಗೂ ದಾಸ್ತಾನಿನಲ್ಲಿ ಉಂಟಾಗಬಹುದಾದ ಸಣ್ಣ ಪ್ರಮಾಣದ ಏರುಪೇರುಗಳನ್ನು ಅಂತಾರಾಷ್ಟ್ರೀಯ ವಹಿವಾಟುದಾರರು ಈ ಕಾಲ್ಪನಿಕ ವಹಿವಾಟಿನ ಮಿತಿಯೊಳಗೆ ಹೇಗೊ ಸರಿದೂಗಿಸಿಕೊಂಡು ಆದಷ್ಟು ವಾಸ್ತವ ಮೌಲ್ಯಕ್ಕಿಂತ ಕಡಿಮೆ ಮೌಲ್ಯದ ದರ ನಿಗದಿಮಾಡಿ ವಹಿವಾಟು ಮಾಡುತ್ತಿದ್ದಾರೆ ಎಂದರು. ಆದರೆ ಈ ಮೊದಲು ನಾವು ಪ್ರಸ್ತಾಪಿಸಿದಂತೆ ಜಾಗತಿಕ ಮಟ್ಟದಲ್ಲಿ ಉಂಟಾದ ತೀವ್ರ ಹವಾಮಾನ ವೈಪರೀತ್ಯ ಹಾಗೂ ಕಾಫಿ ಉತ್ಪಾದನೆ ಹಾಗೂ ನಿರ್ವಹಣಾ ವೆಚ್ಚದಲ್ಲಿ ವಿಪರೀತ ಏರಿಕೆ ಮತ್ತು ಮಾರುಕಟ್ಟೆಯಲ್ಲಿ ಕಾಫಿಗೆ ಹೆಚ್ಚಾಗಿರುವ ಬೇಡಿಕೆ. ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಕಾಲ್ಪನಿಕ ವಹಿವಾಟಿಗೆ ತೀವ್ರವಾದ ಹಿನ್ನೆಡೆಯಾಗಿ ಈಗ ವಾಸ್ತವವಾಗಿ ಉತ್ಪನ್ನಗಳ ವಹಿವಾಟು ಅನಿವಾರ್ಯವಾಗಿರುತ್ತದೆ. ಈ ಕಾರಣದಿಂದಾಗಿ ಕಾಫಿಯ ಅಲಭ್ಯತೆ ಹಾಗೂ ಮಾರುಕಟ್ಟೆಯಲ್ಲಿ ಗಣನೀಯ ಪ್ರಮಾಣದ ಬೇಡಿಕೆ ಹಿನ್ನೆಲೆಯಲ್ಲಿ ೨೦೨೩-೨೪ ರ ಬೆಲೆ ಏರಿಕೆ ಮಾರ್ಚ್ ತಿಂಗಳು ಹಾಗೂ ನಂತರದಲ್ಲಿ ಸರ್ವಕಾಲಿಕ ದಾಖಲೆ ಬೆಲೆಯ ಮಾರಾಟವಾಗಿದೆ. ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಇದು ದಾಖಲೆ ಬೆಲೆ ಹೌದಾದರೂ ಇದರ ನೇರ ಫಲಾನುಭವಿ ಬೆಳೆಗಾರ ಅಲ್ಲ. ಜಾಗತಿಕ ಮಟ್ಟದಲ್ಲಿ ಭಾರತದ ಕಾಫಿಯ ಗುಣಮಟ್ಟ ಉತ್ತಮವಾಗಿದ್ದರೂ ನಮ್ಮ ಉತ್ಪಾದನೆ ಪ್ರಮಾಣ ಶೇ. ೫ ರ ಕಡಿಮೆ, ವಿಶ್ವದ ಮಾರುಕಟ್ಟೆಯ ದಿಗ್ಗಜರ ಐಸಿಯ ಗುಣಮಟ್ಟ ಉತ್ತಮವಾಗಿದ್ದರೂ ಅವರಿಂದಲೇ ನಿಯಂತ್ರಿಸಲ್ಪಡುತ್ತಿದೆ. ಜಗತ್ತಿನಾದ್ಯಂತ ಕಾಫಿ ಸೇವಿಸುವ ಗ್ರಾಹಕರು ನೀಡುವ ಮೌಲ್ಯಕ್ಕೂ ಹಾಗೂ ಶ್ರಮವಹಿಸಿ ಉತ್ತಮ ಗುಣಮಟ್ಟ ಉತ್ಪಾದಿಸುವ ಬೆಳೆಗಾರನಿಗೆ ಸಿಗುವ ದರಕ್ಕೂ ಶೇ. ೯೦ ರಷ್ಟು ಅಂತರವಿದೆ. ಅಂದರೆ ಜಾಗತಿಕವಾಗಿ ಒಟ್ಟಾರೆ ಕಾಫಿ ವಹಿವಾಟಿನ ಪ್ರಮಾಣದ ಶೇ. ೧೦ ಕ್ಕಿಂತಲೂ ಕಡಿಮೆ ಮೌಲ್ಯ ಬೆಳೆಗಾರನ ಕೈ ಸೇರುತ್ತಿದೆ ಎಂದು ಹೇಳಿದರು.
೨೦೨೪ ರಲ್ಲಿ ಲಭಿಸಿರುವ ಈ ದರ ಏರಿಕೆ ಎಂಬುದು ಬೆಳೆಗಾರರಿಗೆ ಕೇವಲ ಆಮ್ಲಜನಕದ ರೀತಿ ಸಹಾಯವಾಗಬಹುದಷ್ಟೆ. ಕಳೆದ ೩ ದಶಕದಿಂದ ಸತತವಾಗಿ ಹಲವಾರು ಸವಾಲುಗಳನ್ನು ಎದುರಿಸಿ ತೋಟಗಳನ್ನು ನಿರ್ವಹಿಸಿಕೊಂಡು ಬಂದಿದ್ದ ಬೆಳೆಗಾರರು ಕಳೆದ ಕೆಲವು ವರ್ಷಗಳಿಂದ ಬಹುತೇಕ ಭರವಸೆಯನ್ನೇ ಕಳೆದುಕೊಂಡಿದ್ದರು. ೨೦೨೩-೨೪ ರಲ್ಲಿಯೂ ಕೂಡ ನಿರೀಕ್ಷಿತ ಪ್ರಮಾಣದ ಫಸಲು ಇರಲಿಲ್ಲ. ಈ ಸಂದರ್ಭದಲ್ಲಿ ಈ ಬೆಲೆ ಏರಿಕೆ ಎಂಬುದು ಬೆಳೆಗಾರರಲ್ಲಿ ಒಂದು ಭರವಸೆ ಮೂಡಿಸುವಲ್ಲಿ ಸಹಕಾರಿಯಾಗಿದೆ ಅಷ್ಟೆ. ಈ ಬೆಲೆ ಏರಿಕೆಯಿಂದಾಗಿ ಬೆಳೆಗಾರರಿಗೆ ವೈಯಕ್ತಿಕವಾಗಿ ಹಾಗೂ ಕಾಫಿ ಉದ್ಯಮಕ್ಕೆ ಸಮಗ್ರವಾಗಿ ಯಾವುದೇ ಗಮನಾರ್ಹವಾದಂತಹ ಬದಲಾವಣೆಯಾಗಲಿ, ಪ್ರಗತಿಯಾಗಲಿ ಈವರೆವಿಗೂ ಕಂಡುಬಂದಿಲ್ಲ ಎಂದು ಬೇಸರವ್ಯಕ್ತಪಡಿಸಿದರು.
ಮಾಧ್ಯಮಗಳ ಹಾಗೂ ಜನಸಾಮಾನ್ಯರ ದೃಷ್ಟಿಯಲ್ಲಿ “ಕಾಫಿಗೆ ದಾಖಲೆ ಬೆಲೆ” ಎಂಬುದು ಸಂಚಲನ ಸೃಷ್ಟಿಸುವ ವರದಿ. ಆದರೆ ವಾಸ್ತವವಾಗಿ ಅಂತಾರಾಷ್ಟ್ರೀಯ ವಹಿವಾಟಿನ ಚುಕ್ಕಾಣಿ ಹಿಡಿದಿರುವ ಅತ್ಯಂತ ಪ್ರಬಲ ವ್ಯಾಪಾರಿಗಳ ಕೈಯಲ್ಲಿ ಕಾಫಿ ವ್ಯಾಪಾರವೆಂಬುದು ಬೆಳೆಗಾರರ ಬದುಕನ್ನು ನಿರ್ಧರಿಸುವ ಅಂಶವಾಗಿದೆ. ಯಾವುದೇ ವಹಿವಾಟು ನಡೆಸುವ ಉಧ್ಯಮಿ ಪಡೆದ ಲಾಭದ ಭಾಗವನ್ನು ಬೆಳೆಗಾರರು ನಿರೀಕ್ಷಿಸಲು ಆಸಾಧ್ಯ. ಮುಂದಿನ ದಿನಗಳಲ್ಲಿ ಹವಾಮಾನ ವೈಪರೀತ್ಯ ಇದೇ ರೀತಿ ಮುಂದುವರೆದಲ್ಲಿ ಹಾಗೂ ಈಗ ಇರುವ ಸಮಸ್ಯೆಗಳಾದ ತೀವ್ರವಾದ ಕಾರ್ಮಿಕರ ಕೊರತೆ, ವನ್ಯಜೀವಿ ಹಾವಳಿ, ಬ್ಯಾಂಕ್ ಸಾಲದ ಹೊರೆ ಹಾಗೂ ನಿರ್ವಹಣಾ ವೆಚ್ಚದಲ್ಲಿ ತೀವ್ರ ಏರಿಕೆ ಕಂಡಿದೆ. ಮುಂದಿನ ವರ್ಷದ ಕಾಫಿ ಉತ್ಪಾದನೆಯ ಮೇಲೆ ಈ ಅನಾವೃಷ್ಟಿಯ ಕರಿನೆರಳು ಯಾವ ಪ್ರಮಾಣದಲ್ಲಿ ಪರಿಣಾಮ ಬೀರಬಹುದು ಎಂಬುದನ್ನು ಊಹಿಸಲೂ ಭಯವಾಗುತ್ತದೆ. ಪಶ್ಚಿಮ ಘಟ್ಟಗಳ ನಿತ್ಯಹರಿದ್ವರ್ಣ ಕಾಡುಗಳ ಸಂರಕ್ಷಣೆಯಲ್ಲಿ ಕಾಫಿ ಕೃಷಿಯ ಕೊಡುಗೆ ಅಪಾರವಾದದ್ದು. ಸಾಂಪ್ರದಾಯಿಕ ನೆರಳಿನಾಶ್ರಯದ ಕಾಫಿ ಉತ್ಪಾದನೆ ನಮ್ಮ ಕೃಷಿಯ ರೀತಿಯಾಗಿರುವುದರಿಂದ ಕಾಫಿ ಬೆಳೆಗಾರರು ನೆಟ್ಟು ಬೆಳೆಸಿದ ಕೋಟ್ಯಾಂತರ ಮರಗಳು ಇಂದು ಪಶ್ಚಿಮ ಘಟ್ಟಗಳನ್ನು ಇನ್ನಷ್ಟು ಹಸಿರಾಗಿಸಿ ಕಾಫಿ ಕೃಷಿಗೆ ಅನಿವಾರ್ಯವಾಗಿರುವ ನೀರಾವರಿಗಾಗಿ ಪ್ರತೀ ಬೆಳೆಗಾರರು ನಿರ್ಮಿಸಿಕೊಂಡಿರುವ ಕೆರೆಗಳು ಊಹಾತೀತ ಪ್ರಮಾಣದ ಜಲಸಂಪತ್ತನ್ನು ಭೂಮಿಗೆ ಮರುಪೂರಣ ಮಾಡುವಲ್ಲಿ ಹಾಗೂ ಅತ್ಯಂತ ಸೂಕ್ಷ್ಮವಾದ ಜಲಸಂರಕ್ಷಣಾ ಕಾರ್ಯಕ್ಕೆ ತಮ್ಮದೇ ಕೊಡುಗೆ ನೀಡಿವೆ. ಯಾವುದೇ ಬೃಹತ್ ಕೈಗಾರಿಕೆ ಹಾಗೂ ಉತ್ಪಾದನಾ ಘಟಕಗಳನ್ನು ಹೊಂದಿರದ ಕಾಫಿ ನಾಡಿನಲ್ಲಿ ಕೌಶಲ್ಯ ಹಾಗೂ ಕೌಶಲ್ಯ ರಹಿತ ಕಾರ್ಮಿಕರಿಗೆ ವರ್ಷಪೂರ್ತಿ ಉದ್ಯೋಗ ಸೃಷ್ಟಿಯಲ್ಲಿ ಕಾಫಿ ಕೃಷಿ ಮುಂಚೂಣಿಯಲ್ಲಿದೆ. ಈಗ ದೇಶದ ವಿವಿಧ ರಾಜ್ಯಗಳಿಂದ ನಮ್ಮ ಭಾಗಕ್ಕೆ ವಲಸೆ ಬಂದ ಕಾರ್ಮಿಕರೂ ಕೂಡ ಕಾಫಿ ತೋಟಗಳಲ್ಲಿ ತಮ್ಮ ಬದುಕು ಕಟ್ಟಿಕೊಂಡಿರುತ್ತಾರೆ.
ಇಷ್ಟೆಲ್ಲಾ ಸಮಸ್ಯೆಗಳ ಸುಳಿಯಲ್ಲಿ ಮಲೆನಾಡಿನ ಕಾಫಿ ಬೆಳೆಗಾರರು ನಲುಗಿಹೋಗಿದ್ದರೂ ಕೂಡ ಬಹಳ ಹಿಂದಿನಿಂದಲೂ ಸರ್ಕಾರದ ನೆರವು ಅಥವಾ ಅನುಧಾನಕ್ಕೆ ಕಾಯದೆ ಬಹುತೇಕ ಊರುಗಳಲ್ಲಿ ಶಾಲೆ, ಆಸ್ಪತ್ರೆ, ಸಮುದಾಯ ಭವನ ಇತ್ಯಾದಿ ಸಾರ್ವಜನಿಕರ ಉಪಯೋಗಕ್ಕೆ ಬೇಕಾಗುವ ಸವಲತ್ತುಗಳನ್ನು ಉಧಾರವಾದ ಕೊಡುಗೆಗಳ ಮೂಲಕ ಸಹಕಾರಗೊಳಿಸಿದ್ದಾರೆ ಎಂದರು. ಹೀಗಿರುವಾಗ ಸಮಾಜ ಹಾಗೂ ಸರ್ಕಾರದಿಂದ ಅಥವಾ ಸರ್ಕಾರದಿಂದ ನಿರ್ದೇಶಿತವಾದ ಸಂಸ್ಥೆಗಳಿಂದ ಇನ್ನೂ ಹೆಚ್ಚಿನ ಸಹಕಾರ, ಬೆಂಬಲ, ಮಾರ್ಗದರ್ಶನ ದೊರೆತಲ್ಲಿ ಕಾಫಿ ನಾಡಿನ ಸಮಗ್ರ ಬೆಳೆಗಾರರ ಸಮುದಾಯ ತನ್ನ ಅಭಿವೃದ್ಧಿಯಷ್ಟೆ ಅಲ್ಲದೆ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಹಾಗೂ ಶ್ರೇಯಸ್ಸಿಗಾಗಿ ಇನ್ನೂ ಹೆಚ್ಚಿನ ರೀತಿಯಲ್ಲಿ ತೊಡಗಿಸಿಕೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪ್ಲಾಂಟರ್ಸ್ ಸಂಘದ ಅಧ್ಯಕ್ಷ ಎ.ಎಸ್. ಪರಮೇಶ್, ಗೌರವ ಕಾರ್ಯದರ್ಶಿ ಕೆ.ಬಿ. ಲೋಹಿತ್, ಉಪಾಧ್ಯಕ್ಷ ಮಂಜುನಾಥ್ ಶೆಟ್ಟಿ, ಖಜಾಂಚಿ ಎಂ.ಜೆ. ಸಚಿನ್ ಇತರರು ಉಪಸ್ಥಿತರಿದ್ದರು.
Hassan
ಎದುರು ಮನೆಯ ಚಂದ್ರಕಲಾ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಗಂಗಮ್ಮ ಮನವಿ

ಹಾಸನ: ಆಲೂರು ತಾಲೂಕಿನಲ್ಲಿರುವ ಆಶಾ ಬಡಾವಣೆಯ ಎದುರು ಮನೆಯಾಕೆ ಚಂದ್ರಕಲಾ ಎಂಬುವರಿಂದ ಪ್ರತಿನಿತ್ಯ ಕಿರುಕುಳ ಕೊಡಲಾಗುತ್ತಿದೆ ಎಂದು ನಿವಾಸಿ ಗಂಗಮ್ಮ ಗಂಭೀರವಾಗಿ ಆರೋಪಿಸಿದರು. ಇದೆ ವೇಳೆ ಕಾಂಗ್ರೆಸ್ ಮುಖಂಡ ಸಿದ್ದಪ್ಪ ಮಾತನಾಡಿ ಆಕೆಯ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ತಮ್ಮ ಅಳಲು ತೋಡಿಕೊಂಡ ಅವರು, ನಾನು ಆಶಾ ಬಡಾವಣೆಯ ನಿವಾಸಿಯಾಗಿದ್ದು, ನಮ್ಮ ಮನೆಯ ಎದುರೇ ಕಳೆದ ಒಂದು ವರ್ಷಗಳ ಹಿಂದೆ ಬಾಡಿಗೆಗೆ ಬಂದಿದ್ದು, ದಲಿತ ವರ್ಗದವರಿಗೆ ಸೇರಿದವರಾಗಿದ್ದಾರೆ. ಇತರೆ ಜನಾಂಗದಿಂದ ಹಣ ವಸೂಲಿ ಮಾಡುವುದು, ಕೊಡದೆ ಇದ್ದರೇ ಅವರ ಮೇಲೆ ದೂರು ನೀಡುವುದಾಗಿದೆ. ಜೊತೆಗೆ ಜಗಳ ಮಾಡಿ ದಬ್ಬಾಳಿಕೆ ಮಾಡಿದ್ದಾರೆಂದು ಜಾತಿ ಧ್ವೇಷವನಿಟ್ಟುಕೊಂಡು ಅಲ್ಲಿಯ ಬಡಾವಣೆಯವರಿಗೆ ಕಿರುಕುಳ ಕೊಡಲಾಗುತ್ತಿದೆ ಎಂದು ದೂರಿದರು.
ಚಂದ್ರಕಲಾ ಎಂಬುವರು ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಆದರೂ ನಾವು ಯಾವುದೇ ಜಾತಿಭೇದ ಮಾಡುವುದಿಲ್ಲ. ಚಂದ್ರಕಲಾ ಅವರ ಮನೆ ನಮ್ಮ ಮನೆಯ ಎದುರೆ ಇದ್ದು ನಾವು ಒಕ್ಕಲಿಗ ಸಮುದಾಯಕ್ಕೆ ಸೇರಿದ್ದು, ವಿನಾಕಾರಣ ನಮ್ಮ ವಿರುದ್ದ ಇಲ್ಲಸಲ್ಲದ ಆರೋಪ ಮಾಡಿ ಪ್ರತಿದಿನ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಚಂದ್ರಕಲಾ ಅವರು ಪ್ರತಿದಿನ ಮಾನಸಿಕ ಹಾಗೂ ದೈಹಿಕವಾಗಿ ತೊಂದರೆ ನೀಡುತ್ತಿದ್ದು ಹಲವಾರು ಬಾರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರು ಯಾವುದೇ ಪ್ರಯೋಜನವಾಗಿಲ್ಲ. ಬೆಳಗ್ಗೆಯಿಂದ ಸಂಜೆಯವರೆಗೂ ಬಾಯಿಗೆ ಬಂದಂತೆ ಬೈಯುವುದು ಮನೆಯ ಮೇಲೆ ಮಣ್ಣು ಎಸೆಯುವುದು ಸಾಮಾನ್ಯವಾಗಿದೆ ಎಂದರು.
ನಾವು ಯಾವುದೇ ತಂಟೆತಕರಾರು ಮಾಡದಿದ್ದರೂ ಇಲ್ಲಸಲ್ಲದ ನೆಪವೊಡ್ಡಿ ಜಗಳಕ್ಕೆ ಬರುತ್ತಿದ್ದಾರೆ. ಇವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಿ ನ್ಯಾಯ ಒದಗಿಸಬೇಕು ಎಂದು ಗಂಗಮ್ಮ ಇದೆ ವೇಳೆ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ದಲಿತ ಮುಖಂಡರಾದ ಸಿದ್ದಪ್ಪ, ಮೋಹನ್, ಚಂದ್ರು, ಚಂದ್ರಶೇಖರ್, ಧರ್ಮ ಇತರರು ಉಪಸ್ಥಿತರಿದ್ದರು.
Hassan
ದಲಿತ ಅಧಿಕಾರಿ ವಿರುದ್ಧ ದೌರ್ಜನ್ಯ ನಿಲ್ಲಿಸದಿದ್ದರೆ ವ್ಯವಸ್ಥೆ ವಿರುದ್ಧ ಹೋರಾಟ: ಎಂ.ಆರ್.ವೆಂಕಟೇಶ್

ಹಾಸನ: ಶೋಷಿತ ಸಮಾಜದ ಸರ್ಕಾರಿ ಅಧಿಕಾರಿ ರಾಮಚಂದ್ರ ಅವರ ಮೇಲೆ ದೌರ್ಜನ್ಯ ಮತ್ತು ಮಾನಸಿಕ ಕಿರುಕುಳ ನೀಡುತ್ತಿರುವ ಸೂಕ್ಷ್ಮವಾದ ವಿಚಾರವಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಹಿಂಸೆ ಕೊಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಫಾಯಿ ಕರ್ಮಚಾರಿ ಆಯೋಗದ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಎಂ.ಆರ್. ವೆಂಕಟೇಶ್ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಬೇಲೂರು ಶಾಸಕರ ಹಿಂಬಾಲಕರಾದ ವಿನಯ್ ಎಂಬುವರಿಂದ ಹಿಂಸೆ ಮಾಡಲಾಗುತ್ತಿದೆ ಎಂಬುದು ಆಡಿಯೋದಲ್ಲಿ ಹೇಳಿದೆ. ರಾಮಚಂದ್ರ ಅವರು ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಅವರಿಗೆ ಮಾನಸಿಕವಾಗಿ ಹಿಂಸೆ ನೀಡಲಾಗುತ್ತಿದೆ. ಲ್ಲೆಯಲ್ಲಿ ದಲಿತ ಅಧಿಕಾರಿಗಳಿಗೆ ಕಿರುಕುಳ ಕೊಡುವುದು ಹೊಸದೇನಲ್ಲ. ಬೇಲೂರಿನ ಶಾಸಕರು ಹಾಗೂ ಕೆಲ ಹಿರಿಯ ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದು, ರಾಮಚಂದ್ರ ಅವರೆ ವರ್ಗಾವಣೆ ಮಾಡಿಕೊಂಡು ಹೋಗಲಿ ಎನ್ನುವ ಉದ್ದೇಶದಿಂದ ಇದರಲ್ಲಿ ದೊಡ್ಡ ಹುನ್ನಾರ ನಡೆಸಿದೆ ಎಂದು ಆರೋಪಿಸಿದರು.
ಈ ಜಿಲ್ಲೆಯಲ್ಲಿ ದಲಿತ ಯಾವ ಅಧಿಕಾರಿಗಳಿಗೂ ರಕ್ಷಣೆ ಇಲ್ಲ. ಶಾಸಕರು ಮತ್ತು ಮಂತ್ರಿಗಳು ಯಾರು ಬೇಕಾದರೂ ಆಗಬಹುದು. ಆದರೇ ಕಷ್ಟುಪಟ್ಟು ಓದಿದವರು ಮಾತ್ರ ಅಧಿಕಾರಿಗಳು ಆಗಲು ಸಾಧ್ಯ. ಅಧಿಕಾರಿಗಳಿಗೆ ನಾವುಗಳು ಗೌರವ ಕೊಡಬೇಕು. ಯಾವ ಅಧಿಕಾರಿಗಳು ಭ್ರಷ್ಠಾಚಾರ ಮಾಡುತ್ತಾರೆ ಅವರನ್ನ ಶಿಕ್ಷಸಲಿ. ನ್ಮಮ ಸಮುದಾಯದ ಅಧಿಕಾರಿಗಳ ಪರ ನಾವು ನಿಲ್ಲಲೇಬೇಕು. ಇಂತಹ ಪ್ರಕರಣಗಳು ಮತ್ತೆ ನಡೆಯಬಾರದು ಎಂದರು.
ಪೊಲೀಸ್ ಇಲಾಖೆ ವ್ಯವಸ್ಥಿತವಾದಂತಹ ಕೆಲಸ ಮಾಡುತ್ತಿದೆ ಎಂದು ನನಗೆ ಅನಿಸುತ್ತಿಲ್ಲ. ಸಿಸಿ ಕ್ಯಾಮಾರ, ಸಾಕ್ಷಿ ಆಧರಿಸಿ ಆರೋಪಿಗಳನ್ನು ಬಂಧಿಸಬೇಕು. ಉದ್ದೇಶ ಪೂರ್ವಕವಾಗಿ ದಲಿತ ಅಧಿಕಾರಿಗಳಿಗೆ ತೊಂದರೆ ಕೊಟ್ಟಂತಹ ವೇಳೆ ಜಿಲ್ಲಾಡಳಿತ ಆಗಲಿ ಸರಕಾರಿ ಆಗಲಿ ತನಿಖೆ ಮಾಡಿ ಕ್ರಮ ಜರುಗಿಸಲು ಮುಂದಾಗಬೇಕು. ಇದರಲ್ಲಿ ಯಾವ ದುರುದ್ದೇಶವಿಲ್ಲ. ದಲಿತ ಅಧಿಕಾರಿ ಎಂದು ಈ ರೀತಿ ಮಾಡಬಾರದು ಎಂದು ಸಲಹೆ ನೀಡಿದರು.
ಮುಂದಿನ ದಿನಗಳಲ್ಲಿ ನಮ್ಮ ಸಂಘಟನೆ ಜೊತೆ ಚರ್ಚೆ ಮಾಡಿ ಶಾಸಕರ ಮತ್ತು ಈ ವ್ಯವಸ್ಥೆ ವಿರುದ್ಧ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಸಿದರು. ಜಿಲ್ಲೆಯಲ್ಲಿ ಯಾವುದೇ ಸಮುದಾಯದ ಸರ್ಕಾರಿ ಅಧಿಕಾರಿಗಳಿಗೆ ಭದ್ರತೆ ಇಲ್ಲದಾಗಿದೆ. ಬೇಲೂರಿನ ಶಾಸಕ ಸುರೇಶ್ ಅವರು ತಮ್ಮ ನಡವಳಿಕೆಯನ್ನು ತಿದ್ದಿಕೊಳ್ಳಬೇಕು ಎಂದರು.
Hassan
ಸಮಾಜದಲ್ಲಿ ಹೆಣ್ಣಿನ ಸ್ಥಾನಮಾನ ದೊಡ್ಡದು: ಫಾದರ್ ಆಲ್ಡಿನ್ ಡಿಸೋಜಾ

ವರದಿ: ಸತೀಶ್ ಚಿಕ್ಕಕಣಗಾಲು
ಆಲೂರು : ಸಮಾಜದಲ್ಲಿ ಹೆಣ್ಣಿನ ಸ್ಥಾನಮಾನ ದೊಡ್ಡದು. ಎಲ್ಲಾ ಸ್ತರಗಳಲ್ಲೂ ಕೆಲಸ ಮಾಡುತ್ತಿರುವ ಹೆಣ್ಣು ಅಬಲೆಯಾಗಿ ಉಳಿದಿಲ್ಲ ಎಂದು ಸಿಎಂಎಸ್ಎಸ್ಎಸ್ ನ ನಿಯೋಜಿತ ನಿರ್ದೇಶಕ ಫಾದರ್ ಆಲ್ಡಿನ್ ಡಿಸೋಜಾ ಹೇಳಿದರು.
ತಾಲೂಕಿನ ಮಗ್ಗೆ ಗ್ರಾಮದಲ್ಲಿ ಗ್ರಾಮ ಪಂಚಾಯಿತಿಗೆ ಸೇರಿದ ಸಮುದಾಯ ಭವನದಲ್ಲಿ ಸಿ.ಎಂ.ಎಸ್.ಎಸ್.ಎಸ್ ಸಂಸ್ಥೆ, ಅಮರ ಜ್ಯೋತಿ ಮಹಾಸಂಘ ಮತ್ತು ಸ್ನೇಹಾಜ್ಯೋತಿ ಮಹಾಸಂಘಗಳ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ತಾಯಿ, ಪತ್ನಿ, ಸಹೋದರಿ ಸೇರಿದಂತೆ ವಿವಿಧ ಪಾತ್ರಗಳನ್ನು ಸಮರ್ಥವಾಗಿ ನಿಭಾಯಿಸುವ ಮಹಿಳೆಗೆ ನಮ್ಮ ವಿಶೇಷ ಸ್ಥಾನವಿದೆ. ಆಕೆಯ ತ್ಯಾಗ ಮತ್ತು ಹೋರಾಟದ ಮನೋಭಾವ ಎಲ್ಲರಿಗೂ ಮಾದರಿಯಾದುದು ಎಂದು ಹೇಳಿದರು.
ಫಾದರ್ ರಾಜೇಂದ್ರ ಮಾತನಾಡಿ, ಹೆಣ್ಣು ಸಮಾಜದ ಕಣ್ಣಾಗುವ ಮೂಲಕ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಿದ್ದಾರೆ. ಎಲ್ಲಾ ರಂಗಗಳಲ್ಲೂ ಮಹಿಳೆಯರಿಂದು ಭಾಗವಹಿಸುತ್ತಿರುವುದನ್ನು ನಾವು ಕಾಣಬಹುದಾಗಿದೆ ಎಂದರು.
ಸಿಎಂಎಸ್ಎಸ್ಎಸ್ ನ ಪಿ.ಆರ್. ಒ ನಿರೀಕ್ಷ ಮಾತನಾಡಿ, ಮಹಿಳೆಯರು ಸಾಮಾಜಿಕ ಆರ್ಥಿಕ, ರಾಜಕೀಯ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಶಕ್ತರಾಗಬೇಕೆಂಬ ಉದ್ದೇಶದಿಂದ ಸಿ.ಎಂ.ಎಸ್.ಎಸ್.ಎಸ್ ಸಂಸ್ಥೆಯು ಹಮ್ಮಿಕೊಂಡಿರುವ ಕಾರ್ಯಕ್ರಮಗಳಾದ ಮಹಿಳಾ ಸಬಲೀಕರಣ, ವಿಕಲ ಚೇತರನ್ನು ಮುಖ್ಯವಾಹಿನಿಗೆ ತರುವುದು, ಆರೋಗ್ಯ ಮತ್ತು ಶಿಕ್ಷಣ, ಕೌಶಲ್ಯ ಅಭಿವೃದ್ದಿ ಮತ್ತು ಪರಿಸರ ಸಂರಕ್ಷಣೆಗಳಿಗೆ ಸಂಬಂಧಿಸದಂತೆ ಕಾರ್ಯಕ್ರಮಗಳನ್ನು ಆಯೋಜಿಸುತ್ತದೆ. ಪ್ರತಿಯೊಬ್ಬ ಮಹಿಳೆಯು ಇವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಈ ಕಾರ್ಯಕ್ರಮದಲ್ಲಿ ಗ್ರಾಮದ ಲಕ್ಷ್ಮಿ, ಆಶ್ವಿನಿ, ರೂಪ, ಪಾಲಾಕ್ಷ, ನಸ್ತೀನ್ ಅಕ್ತರ್, ಸಿಸ್ಟರ್. ಮೇರಿ ಜೆರಾಲ್ಡಿನ್, ಪರಮೇಶ್, ಜೀವನ್ ಜೋಯಲ್, ಜಯಮ್ಮ ಸೇರಿದಂತೆ ಇನ್ನಿತರರು ಹಾಜರಿದ್ದರು.
-
Mandya7 hours ago
ಜನಮಿತ್ರ ಫಲಶೃತಿ: ಹೆಬ್ಬಾಡಿಹುಂಡಿ ಗ್ರಾಮದ ಸ್ಮಶಾನ ಜಾಗದ ರಸ್ತೆ ಬೇಲಿಗೆ ಸಿಗ್ತು ಉತ್ತರ
-
Hassan14 hours ago
ಹಾಸನದಲ್ಲಿ ಭಾರೀ ಮಳೆ: ಅಪಾರ ಪ್ರಮಾಣದ ಬೆಳೆ ಹಾನಿ
-
Mandya10 hours ago
ಜೆಎಸ್ಎಸ್ ಕಾಲೇಜಿನಲ್ಲಿ ಪತ್ರಿಕಾ ಬರಹ ಕುರಿತು ಕಾರ್ಯಾಗಾರ
-
Kodagu11 hours ago
ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ
-
Mandya9 hours ago
ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ತಿಳಿಸಿ
-
Hassan13 hours ago
ಕ್ಷಯ ಮುಕ್ತ ಭಾರತವನ್ನಾಗಿ ಮಾಡಲು ಎಲ್ಲಾರೂ ಕೈಜೋಡಿಸಿ: ಡಿಸಿ ಸಿ. ಸತ್ಯಭಾಮ
-
Kodagu10 hours ago
ನಿವೃತ್ತ ಶಿಕ್ಷಕಿಯಿಂದ ಕಕ್ಕಬ್ಬೆ ಯುವಕಪಾಡಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಚಾರಣ ಭಾಗ್ಯ
-
Kodagu7 hours ago
ಮಡಿಕೇರಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲೈಬಸ್ ಸಂಚಾರ