Connect with us

State

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಬೆಂಗಳೂರು ವಿವಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವತಿಯಿಂದ ಜನತಂತ್ರ ವ್ಯವಸ್ಥೆಯಲ್ಲಿ ಮಾಧ್ಯಮ ಮತ್ತು ಪತ್ರಕರ್ತರು ಎನ್ನುವ ವಿಷಯದ ಬಗ್ಗೆ ಏರ್ಪಡಿಸಿದ್ದ ಸಂವಾದ

Published

on

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಬೆಂಗಳೂರು ವಿವಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವತಿಯಿಂದ ಜನತಂತ್ರ ವ್ಯವಸ್ಥೆಯಲ್ಲಿ ಮಾಧ್ಯಮ ಮತ್ತು ಪತ್ರಕರ್ತರು ಎನ್ನುವ ವಿಷಯದ ಬಗ್ಗೆ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮವನ್ನು ಬೆಂಗಳೂರು ನಗರ ವಿವಿ ಪ್ರೊ.ಲಿಂಗರಾಜ ಗಾಂಧಿ ಉದ್ಘಾಟಿಸಿದರು.
ಹಿರಿಯ ಪತ್ರಕರ್ತ ಮತ್ತು ಸಾಮಾಜಿಕ ಚಿಂತಕ ಸುಧೀಂದ್ರ ಕುಲಕರ್ಣಿ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಹಿರಿಯ ಪತ್ರಕರ್ತ ಅನಂತ ಚಿನಿವಾರ್ , ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಪ್ರೊ.ಎನ್.ನರಸಿಂಹಮೂರ್ತಿ ಕೆ ಯು ಡ ಬ್ಲೂೃ ಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಭಾಗವಹಿಸಿದ್ದರು.

Continue Reading
Click to comment

Leave a Reply

Your email address will not be published. Required fields are marked *

State

ಧರ್ಮಸ್ಥಳ ವಿಚಾರದಲ್ಲಿ ಅಪಪ್ರಚಾರ: ಯೂಟ್ಯೂಬರ್‌ಗಳ ಆದಾಯದ ಕೆದಕುತ್ತಿರುವ ಇಡಿ ಅಧಿಕಾರಿಗಳು

Published

on

ಬೆಂಗಳೂರು/ಮಂಗಳೂರು: ಧರ್ಮಸ್ಥಳ ವಿಚಾರದಲ್ಲಿ ಅಪಪ್ರಚಾರ ಮಾಡಲು ಯೂಟ್ಯೂಬರ್‌ಗಳಿಗೆ ವಿದೇಶದಿಂದ ಹಣ  ಹರಿದುಬಂದಿದೆ ಎಂಬ ಆರೋಪಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಕೇಂದ್ರ ಗೃಹ ಸಚಿವಾಲಯಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪತ್ರ ಬರೆದಿರೋ ಬೆನ್ನಲ್ಲೇ ದಾಖಲೆಗಳ ಪರಿಶೀಲನೆ ಮಾಡುವಂತೆ ಜಾರಿ ನಿರ್ದೇಶನಾಲಯಕ್ಕೆ ಅಮಿತ್ ಶಾ  ಸೂಚನೆ ನೀಡಿದ್ದಾರೆ. ಹೀಗಾಗಿ, ಬೆಂಗಳೂರಿನ ಇ.ಡಿ.ಅಧಿಕಾರಿಗಳು ಈಗ ಯೂಟ್ಯೂಬರ್‌ಗಳ ಆದಾಯದ ಮೂಲ ಕೆದಕಲು ಮುಂದಾಗಿದ್ದಾರೆ.

ಈ ಕುರಿತು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಪ್ರತಿಕ್ರಿಯೆ ನೀಡಿದ್ದು, ದೇವಸ್ಥಾನದ ಪಾವಿತ್ರ್ಯತೆ ಉಳಿಸುವ ಸಲುವಾಗಿ ಗೃಹ ಸಚಿವರಿಗೆ ಪತ್ರ ಬರೆದಿದ್ದೇನೆ. ಯಾವುದೇ ವ್ಯಕ್ತಿಗತವಾಗಿ ನಾನು ಪತ್ರ ಬರೆದಿಲ್ಲ ಎಂದಿದ್ದಾರೆ.

ಇನ್ನೂ, ಶಾಸಕ ಭರತ್ ಶೆಟ್ಟಿ ಮಾತಾಡಿ, ಎನ್‌ಐಎ ಅಥವಾ ಇಡಿ ತನಿಖೆಯಾದರೆ ಯಾರೆಲ್ಲರ ಬ್ಯಾಂಕ್ ಖಾತೆಗಳಿಗೆ ಎಷ್ಟೆಲ್ಲ ಹಣ ಎಲ್ಲೆಲ್ಲಿಂದ ಬಂದಿದೆ ಎಂದು ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್ ಹಾಗೂ ಯೂಟ್ಯೂಬರ್ ಸಮೀರ್ ವಿರುದ್ಧ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಎಸ್‌ಪಿಗೆ ದೂರು ನೀಡಿದ್ದಾರೆ. ಮತ್ತೊಂದು ಭಜರಂಗದಳ ಕಾರ್ಯಕರ್ತ ತೇಜಸ್ ಗೌಡ ಸಹ ಡಿಜಿ ಕಚೇರಿಯಲ್ಲಿ ಸಮೀರ್ ವಿರುದ್ಧ ದೂರು ದಾಖಲಿಸಿದ್ದಾರೆ.

Continue Reading

Hassan

ಹಾಸನ ಮಹಾನಗರ ಪಾಲಿಕೆಗೆ ಸರ್ಕಾರದಿಂದ ಆಗಿರುವ ಅನ್ಯಾಯದ ಬಗ್ಗೆ ಸದನದಲ್ಲಿ ಶಾಸಕ ಸ್ವರೂಪ್ ಪ್ರಕಾಶ್ ಧ್ವನಿ

Published

on

ಬೆಂಗಳೂರು: ಹಾಸನ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಿರುವ ಸರ್ಕಾರ ಅದಕ್ಕನುಗುಣವಾಗಿ ಅನುದಾನ ನೀಡದೆ ವಂಚನೆ ಮಾಡಿದೆ ಎಂದು ಶಾಸಕ ಸ್ವರೂಪ ಪ್ರಕಾಶ್ ತಿಳಿಸಿದರು.

ಅಧಿವೇಶನದಲ್ಲಿ ಇಂದು ಈ ಬಗ್ಗೆ ಮಾತನಾಡಿದ ಅವರು, ಕಳೆದ ಅಧಿವೇಶನದಲ್ಲಿ ಹಾಸನ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಿದ್ದು ಸಂತೋಷದ ವಿಚಾರ ಇದಕ್ಕೆ ನಾವು ಕೂಡ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದೆವು ಆದರೆ ಕೇವಲ ನಾಮಕಾವಸ್ಥೆಗೆ ಮೇಲ್ದರ್ಜೆಗೇರಿಸಿ ಅನುದಾನ ನೀಡದೆ ಇದ್ದರೆ ಕೆಲಸ ಮಾಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಮಹಾನಗರ ಪಾಲಿಕೆಗಾಗಿ ಹಾಸನದ ಸುತ್ತಮುತ್ತಲ 37 ಹಳ್ಳಿಗಳನ್ನು ನಗರಸಭೆಗೆ ಸೇರಿಸಿಕೊಂಡಿದೆ ಆದರೆ ಅವರಿಗೆ ನೀಡಬೇಕಾಗಿರುವ ಸೌಲಭ್ಯಗಳಲ್ಲಿ ವಂಚನೆ ಮಾಡಿದಂತಾಗಿದೆ. ಈ ಹಿಂದೆ ಗ್ರಾಮ ಪಂಚಾಯಿತಿಗಳಲ್ಲಿ ಇದ್ದ ಗ್ರಾಮಗಳು ಇದೀಗ ಮಹಾನಗರ ಪಾಲಿಕೆಗೆ ಒಳಗೊಂಡಿವೆ. ಅದಕ್ಕನುಗುಣವಾಗಿ ಅವರು ಕೂಡ ಹತ್ತುಪಟ್ಟು ಹೆಚ್ಚು ಕಂದಾಯ ಕಟ್ಟುತ್ತಿದ್ದಾರೆ. ಆದರೆ ಆ ಗ್ರಾಮಗಳನ್ನು ಮಹಾನಗರ ಪಾಲಿಕೆ ಹಂತದಲ್ಲಿ ಅಭಿವೃದ್ಧಿಪಡಿಸಲು ಆಗುತ್ತಿಲ್ಲ. ಈ ಹಿಂದೆ ಸರ್ಕಾರ ಅನುದಾನ ನೀಡುವ ಭರವಸೆ ನೀಡಿ ಇದೀಗ ಪೌರಾಡಳಿತ ಇಲಾಖೆಗೆ ಮುಂದಿನ ಮೂರು ವರ್ಷಗಳು ಯಾವುದೇ ನೇಮಕಾತಿ ಅಥವಾ ಹಣ ಬಿಡುಗಡೆ ಮಾಡಲು ಆಗುವುದಿಲ್ಲ ಎಂಬ ಪತ್ರವನ್ನು ಹೊರಡಿಸಿದೆ ಇದರಿಂದ ನಮಗೆ ತುಂಬಾ ಅನ್ಯಾಯವಾಗಿದೆ ಎಂದು ತಮ್ಮ ಅಳಲು ತೋಡಿಕೊಂಡರು.

ಈಗಾಗಲೇ ಹಾಸನ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಾರಿ ಮಳೆ ಆಗುತ್ತಿದ್ದು ರಸ್ತೆಗಳು ಗುಂಡಿಮಯವಾಗಿದೆ ಆದರೆ ಅವುಗಳನ್ನು ಮುಚ್ಚಲು ಹಣವಿಲ್ಲದೆ ಪರದಾಡುವಂಥಾಗಿದೆ, ಕೆಲವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಶಾಸಕರು ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆಯನ್ನು ಹಾಕುತ್ತಿದ್ದು ನಮ್ಮ ಕ್ಷೇತ್ರಕ್ಕೆ ಹೋಗಿ ಕೆಲಸ ಮಾಡಲು ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಇದನ್ನು ಮನಗಂಡು ಆಡಳಿತ ಪಕ್ಷದ ಮುಖ್ಯಮಂತ್ರಿಗಳು ಹಾಗೂ ಸಂಬಂಧಿಸಿದ ಸಚಿವರು ಹೆಚ್ಚಿನ ಅನುದಾನ ನೀಡಿ ಹೊಸದಾಗಿ ಶಾಸಕರಾಗಿರುವ ನಮಗೆ ಹೆಚ್ಚಿನ ಕೆಲಸ ಮಾಡಲು ಪ್ರೋತ್ಸಾಹ ನೀಡಬೇಕು ಎಂದು ಮನವಿ ಮಾಡಿದರು.

Continue Reading

State

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ| ಅತಿಕ್ರಮವಾಗಿ ಅರಣ್ಯದಲ್ಲಿ ಶವಗಳನ್ನು ಹೂತಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು: ಈಶ್ವರ್‌ ಖಂಡ್ರೆ

Published

on

ಬೆಂಗಳೂರು/ಮಂಗಳೂರು: ಅರಣ್ಯದೊಳಗೆ ಅತಿಕ್ರಮ ಪ್ರವೇಶ ಮಾಡಿ, ಶವ ಹೂತಿರುವುದು ಎಸ್‌ಐಟಿ ತನಿಖೆಯಿಂದ ಸಾಬೀತಾದರೆ, ಅರಣ್ಯ ಸಂರಕ್ಷಣಾ ಕಾಯಿದೆ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು  ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದರು.

ನಗರದಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮೀಸಲು ಅರಣ್ಯದಲ್ಲಿ ಯಾವುದೇ ಅರಣ್ಯೇತರ ಚಟುವಟಿಕೆ ನಡೆಸಲು ಅವಕಾಶ ಇಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಅಥವಾ ಸಾರ್ವಜನಿಕ ಉದ್ದೇಶಕ್ಕೆ ಅರಣ್ಯ ಭೂಮಿ ಬಳಕೆ ಮಾಡಬೇಕಾದಲ್ಲಿ ನಿಯಮಾನುಸಾರ ಕ್ಲಿಯರೆನ್ಸ್ ಅನುಮತಿ (ಎಫ್‌ಸಿ) ಪಡೆಯಬೇಕಾಗುತ್ತದೆ ಎಂದು ಸ್ಪಷ್ಟನೆ ನೀಡಿದರು.

ಅರಣ್ಯದಲ್ಲಿ ಅಕ್ರಮವಾಗಿ ಶವ ಸಂಸ್ಕಾರ ಮಾಡಿರುವುದು ಈಗ ನಡೆಯುತ್ತಿರುವ ಎಸ್‌ಐಟಿ ತನಿಖೆಯಿಂದ ಸಾಬೀತಾದರೆ ನಿಯಮಾನುಸಾರ ಕ್ರಮ ಆಗುತ್ತದೆ ಎಂದು ಹೇಳಿದರು.

Continue Reading

Trending

error: Content is protected !!