Chamarajanagar
ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ :ದೇವಸ್ಥಾನದ ಅರ್ಚಕರು,ಹಿಂದಿ ಪಂಡಿತರಾದ ಶ್ರೀನಿವಾಸ ಮೂರ್ತಿ ರವರಿಗೆ ಸನ್ಮಾನ
ವರದಿ : ಸುನೀಲ್ ಪ್ರಶಾಂತ್
ಕೊಳ್ಳೇಗಾಲ:ಕರ್ನಾಟಕ ರಾಜ್ಯ ರೈತ ಸಂಘದ ಗ್ರಾಮ ಶಾಖೆಯ ಮೊದಲ ವರ್ಷದ ವಾರ್ಷಿಕೋತ್ಸವದಲ್ಲಿ ಹಿಂದಿ ಪಂಡಿತರಾದ ಶ್ರೀನಿವಾಸ ಮೂರ್ತಿ ರವರಿಗೆ ಸನ್ಮಾನ ಮಾಡಿರುವ ಬಗ್ಗೆ ಹಾಗೂ ಇತರೆ ವಿಚಾರ ಗಳ ಬಗ್ಗೆ,
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಸಿಂಗಾನಲ್ಲೂರು ಗ್ರಾಮದ ರೈತ ಸಂಘದ ಮೊದಲ ವರ್ಷದ ವಾರ್ಷಿಕೋತ್ಸವದಲ್ಲಿ ರೈತ ಸಂಘದ ಬೋರ್ಡಿಗೆ ಪುಷ್ಪಾರ್ಚನೆ ಮಾಡಿ ರಸ್ತೆಯುದ್ದಕ್ಕೂ ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಗ್ರಾಮದ ಜನಾರ್ದನ ದೇವಸ್ಥಾನದ ಮುಂಭಾಗ ಸಭೆ ನಡೆಸಿ ದೇವಸ್ಥಾನದ ಅರ್ಚಕರು,ಹಿಂದಿ ಪಂಡಿತರು ಆದ ಶ್ರೀನಿವಾಸ ಮೂರ್ತಿ ರವರನ್ನು ಆತ್ಮೀಯವಾಗಿ ಕರೆಯಿಸಿಕೊಂಡು ಅವರಿಗೆ ಸನ್ಮಾನಿಸಲಾಯಿತು.
ನಂತರ ಮಾಜಿ ಯೋಧ ಮರಿಯಾ ಜೋಸೆಫ್ ಮಾತನಾಡಿ ನಮ್ಮ ಪ್ರಜಾ ಪ್ರಭುತ್ವ ವ್ಯವಸ್ಥೆ ಒಳಗೆ ಸಂವಿಧಾನ ಬದ್ಧವಾಗಿ ನಮಗೆ ದೊರಕಬಹುದಾದ ಮೂಲಭೂತ ಸೌಕರ್ಯಗಳನ್ನು ಪಡೆಯಬೇಕಾದರೆ ಹೋರಾಟ ಮಾಡಿ ಮೂಲಭೂತ ಸೌಲಭ್ಯಪಡೆಯ ಬೇಕಾದ ಪರಿಸ್ಥಿತಿ ಒಳಗೆ ನಾವು ಬದುಕುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

ಹನೂರು ತಾಲ್ಲೂಕು ಅಧ್ಯಕ್ಷ ಆರ್ ಅರ್ಪುದರಾಜ್ ಮಾತನಾಡಿ ರಾಜಕಾರಣಿಗಳು ಅವರ ಧೆಯೋದ್ದೇಶಗಳಿಗೆ ರಾಜಕಾರಣಕ್ಕೆ ಬರುತ್ತಿದ್ದಾರೆ ಹೊರತು ರೈತಕುಲ ಹಾಗೂ ನಾಗರೀಕರಿಗೆ ಸೌಲಭ್ಯಗಳನ್ನು ಒದಗಿಸಲು ಬರುತ್ತಿಲ್ಲ ಎಂದು ಆರೋಪಿಸಿದರು.
ರೈತ ಮುಖಂಡ ಲೂರ್ದುಸ್ವಾಮಿ ಮಾತನಾಡಿ ಜಮ್ಮುವಿನಲ್ಲಿ ವ್ಯವಸಾಯ ಮಾಡುವ ರೈತನಿಗೆ ತೊಂದರೆ ಆದರೆ ಕೊಳ್ಳೇಗಾಲದಲ್ಲಿರುವ ನಾವು ರೈತನ ಬೆಂಬಲವಾಗಿ ಹೋರಾಟ ಮಾಡಬೇಕು ಆಗಾದಾಗಾ ಮಾತ್ರ ರೈತರ ಸಮಸ್ಯೆ ಬಗೆಹರಿಸಲು ಸಾಧ್ಯ ಎಂದು ತಿಳಿಸಿದರು.
ಶೈಲೇಂದ್ರ ಮಾತನಾಡಿ ಪ್ರತಿ ಗ್ರಾಮ ಪಂಚಾಯಿತಿಗಳು ನಡೆಸುವ ಗ್ರಾಮ ಸಭೆಗೆ ಇಲ್ಲಿಯವರೆಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳನ್ನು ಕರೆಯಿಸಿ ಆಯಾ ಇಲಾಖೆಗಳ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡುತ್ತಿಲ್ಲ ಅಂದರೆ ಲೋಕಾಯುಕ್ತದ ಜವಾಬ್ದಾರಿ, ಆರ್ ಟಿ ಐ ಜವಾಬ್ದಾರಿ ಬಗ್ಗೆ ಗ್ರಾಮ ಪಂಚಾಯಿತಿ ಗ್ರಾಮ ಸಭೆಗಳಲ್ಲಿ ಮೇಲ್ಕಂಡ ಇಲಾಖೆಗಳನ್ನು ಕರೆಯಿಸಿ ಮಾಹಿತಿ ಒದಗಿಸಿದರೆ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಸಾಧ್ಯ ಎಂದು ಮಾತನಾಡಿದರು.
ಸಭೆಯಲ್ಲಿ ಸಿಂಗಾನಲ್ಲೂರು ಗ್ರಾಮ ಶಾಖೆಯ ಅಧ್ಯಕ್ಷ ಬೆಟ್ಟೇಗೌಡ,ದೊಡ್ಡಿಂದುವಾಡಿ ಗ್ರಾಮ ಶಾಖೆಯ ವಸಂತ ಕುಮಾರ್,ಮೋಳೆ ರಾಜು, ತಾಲ್ಲೂಕು ಕಾರ್ಯದರ್ಶಿ ಪೆರಿಯನಾಯಗಂ, ಭಾಸ್ಕರ್, ಕುಟ್ಟಿ,ಸೂರಾಪುರ ವಾಸು,ಸತ್ತೇಗಾಲ ಕಛೇರಿ ಮಹದೇವ, ರವಿ, ಸುರೇಂದ್ರ, ರಾಜಣ್ಣ, ನಾಗೇಂದ್ರ,,ತನು, ಸಿಂಗಾನಲ್ಲೂರು ಗ್ರಾಮದ ಹಾಗೂ ದೊಡ್ಡಿಂದುವಾಡಿ ಗ್ರಾಮದ ಹೋರಾಟಗಾರರು ಭಾಗವಹಿಸಿದ್ದರು.
Chamarajanagar
ಅಪರಿಚಿತ ಶವ : ವಾರಸುದಾರರ ಪತ್ತೆಗೆ ಸಹಕರಿಸಲು ಮನವಿ
ಚಾಮರಾಜನಗರ: ಬೇಡರಪುರ ಗ್ರಾಮದ ಬಳಿಯಿರುವ ಪ್ರೇಸ್ಟೀಜ್ ಫ್ಯಾಕ್ಟರಿಯ ಬಳಿ ಅಪರಿಚಿತ ಶವ ಪತ್ತೆಯಾಗಿದ್ದು, ವಾರಸುದಾರರ ಸುಳಿವಿಗೆ ಸಹಕರಿಸಲು ಕೋರಲಾಗಿದೆ.
ಸುಮಾರು 35 ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯಾಗಿದ್ದು, 158 ಸೆಂ.ಮೀ ಎತ್ತರ, ಕೋಲು ಮುಖ, ತೆಳ್ಳನೆ ಶರೀರ, ಎಣ್ಣೆಗೆಂಪು ಮೈ ಬಣ್ಣ ಹೊಂದಿದ್ದು, ಕುರುಚಲು ಗಡ್ಡ, ಕಪ್ಪು ಮೀಸೆ ಹಾಗೂ ಕಪ್ಪು, ಬಿಳಿ ಮಿಶ್ರಿತ ತಲೆ ಕೂದಲು ಇರುತ್ತದೆ. ಕಪ್ಪು, ಹಸಿರು ಮತ್ತು ಬಿಳಿ ಮಿಶ್ರಿತ ಗೆರೆಗಳುಳ್ಳ ತುಂಬು ತೋಳಿನ ಶರ್ಟ್ ಧರಿಸಿದ್ದು, ಎದೆಯ ಭಾಗದಲ್ಲಿ ಎಸು ಎಂಬ ಹಚ್ಚೆ ಇರುತ್ತದೆ.

ಇವರ ವಾರಸದಾರರು ಇದ್ದಲ್ಲಿ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Chamarajanagar
ಡಾ.ಬಿ.ಆರ್. ಅಂಬೇಡ್ಕರ್ ಯುವಕರ ಸಂಘದ ನಾಮಫಲಕ ಉದ್ಘಾಟನೆ
ಚಾಮರಾಜನಗರ: ತಾಲೂಕಿನ ನಾಗವಳ್ಳಿ ಗ್ರಾಮದಲ್ಲಿ ನೂತನವಾಗಿ ನೊಂದಣಿಯಾದ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದ ನಾಮಫಲಕ ಉದ್ಘಾಟನೆಯನ್ನು ಗ್ರಾಮದ ಯಜಮಾನರು ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಗ್ರಾಮದ ಯಜಮಾನರು, ಗ್ರಾಮ ಪಂಚಾಯಿತಿ ಸದಸ್ಯರು, ಬೌದ್ಧವಿಹಾರದ ಉಪಾಸಕರು, ಗ್ರಾಮದ ಮುಖಂಡರು, ಯುವಕರು ಹಾಗೂ ಗ್ರಾಮಸ್ಥರು ಹಾಜರಿದ್ದರು.
Chamarajanagar
ಕಠಿಣ ಶ್ರಮದಿಂದ ಗೆಲುವು ಖಚಿತ: ಡಾ. ಶಾಂತರಾಜು
ಚಾಮರಾಜನಗರ: ಕಠಿಣ ಪರಿಶ್ರಮದಿಂದ ಕ್ರೀಡೆಯನ್ನು ಅಭ್ಯಾಸ ಮಾಡಿದರೆ ಗೆಲುವು ಖಚಿತವಾಗಲಿದೆ ಎಂದು ಚಾ.ನಗರ ವಿವಿ ದೈಹಿಕ ಶಿಕ್ಷಣದ ನಿರ್ದೇಶಕ ಡಾ.ಶಾಂತರಾಜು ಸಲಹೆ ನೀಡಿದರು.
ಚಾ.ನಗರ ವಿವಿಯ ಆವರಣದಲ್ಲಿ ಕ್ರೀಡಾಪಟುಗಳಿಗೆ ಶುಭ ಹಾರೈಸಿ ಮಾತನಾಡಿದರು. ಡಿ.10 ರಿಂದ 14 ರ ವರೆಗೆ ಆಂಧ್ರಪ್ರದೇಶದಲ್ಲಿ ನಡೆಯಲಿರುವ ದಕ್ಷಿಣ ಭಾರತ ಅಂತರ ವಿಶ್ವವಿದ್ಯಾನಿಲಯದ ವಾಲಿಬಾಲ್ ಪಂದ್ಯಾವಳಿಯಲ್ಲಿ ಚಾಮರಾಜನಗರ ವಿಶ್ವವಿದ್ಯಾನಿಲಯದ ತಂಡವು ಭಾಗವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವಿವಿಯ ಹಣಕಾಸು ಅಧಿಕಾರಿ ನಾಗೇಶ್ ಮಾತನಾಡಿ ಕ್ರೀಡಾಪಟುಯಲ್ಲಿ ಸೋಲು ಗೆಲುವು ಸಹಜ ಆದರೆ ಭಾಗವಹಿಸುವುದು ಬಹಳ ಮುಖ್ಯ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ತಂಡದ ತರಬೇತುದಾರ ಜಯಶಂಕರ್, ಪುಟ್ಟರಾಜು, ತಂಡದ ಮ್ಯಾನೇಜರ್ ಡಾ.ಶಂಕರ್, ಕ್ರೀಡಾ ಸಲಹಾ ಸಮಿತಿ ಸದಸ್ಯ ಜಿ ಬಂಗಾರು, ತಂಡದ ನಾಯಕ ಕಿರಣ್, ಕ್ರೀಡಾ ವಿದ್ಯಾರ್ಥಿಗಳಾದ ರಾಹುಲ್, ಅಭಿ, ವಿಕಾಸ್, ಯಶವಂತ್ ನಾಯಕ್, ಕಾರ್ತಿಕ್ ಯಶವಂತ್, ಮಹದೇವಪ್ರಸಾದ್, ಸಿದ್ದರಾಜು, ಸಂಜಯ್, ಪ್ರವೀಣ್ ಇತರ ವಿದ್ಯಾರ್ಥಿಗಳು ಹಾಜರಿದ್ದರು.
-
State11 hours agoಡಿವೈಡರ್ಗೆ ಕಾರ್ ಡಿಕ್ಕಿ, ಹೊತ್ತಿ ಉರಿದ ಕಾರಿನೊಳಗೆ ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನ
-
State23 hours agoSSLC ಪಾಸ್ ಆದವರಿಗೆ ಸರ್ಕಾರಿ ನೌಕರಿ ಚಾನ್ಸ್! ಸಂಪೂರ್ಣ ಮಾಹಿತಿ ಇಲ್ಲಿದೆ…
-
Hassan7 hours agoನಗರದ ಇಂಜಿನಿಯರ್ ಕಾಲೇಜು ಆವರಣದಲ್ಲಿ ಸರ್ಕಾರಿ ಸೇವೆಗಳ ಸಮರ್ಪಣ ಸಮಾವೇಶ
-
National24 hours agoಪಲಾಶ್ ಮುಚ್ಚಲ್ರೊಂದಿಗೆ ಮದುವೆ ಮುಂದೂಡಿದ ನಂತರ ಮೊದಲ ಪೋಸ್ಟ್ ಹಂಚಿಕೆಕೊಂಡ ಸ್ಮೃತಿ ಮಂದಾನ
-
Chikmagalur13 hours agoಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಹ*ತ್ಯೆ
-
Hassan10 hours agoಅಂಬೇಡ್ಕರ್ ತತ್ತ್ವ, ಸಿದ್ಧಾಂತಗಳು ಶಾಶ್ವತ: ಸಂಸದ ಶ್ರೇಯಸ್ ಪಟೇಲ್
-
Politics23 hours agoಡಿಕೆ ಬ್ರದರ್ಸ್ಗೆ ನೋಟಿಸ್ ಜಾರಿ ಮಾಡಿದ ದೆಹಲಿ ಪೊಲೀಸರು
-
Mysore11 hours agoಡ್ರೋನ್ ಕ್ಯಾಮರದ ರೆಕ್ಕೆ ತಗಲಿ ಶಾಸಕ ಅನಿಲ್ ಚಿಕ್ಕಮಾದು ಮುಖಕ್ಕೆ ಗಾಯ
