Connect with us

Location

ಕಾವೇರಿ ವಿಚಾರದಲ್ಲಿ ಪ್ರಧಾನಿ ಮಧ್ಯಸ್ಥಿಕೆ ವಹಿಸಿ ಇತ್ಯರ್ಥಗೊಳಿಸಲಿ; ಸಿಎಂ ಸಿದ್ದರಾಮಯ್ಯ

Published

on

ಮೈಸೂರು: ಕಾವೇರಿ ವಿವಾದ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ರಾಜ್ಯ ಸರ್ಕಾರ ಸಿದ್ಧವಿದ್ದು,
ಪ್ರಧಾನಿ ನರೇಂದ್ರ‌ ಮೋದಿ ಮಧ್ಯಪ್ರವೇಶ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯ‌ಮಗಳೊಂದಿಗೆ ಮಾತನಾಡಿದ ಅವರು,
ಕಾವೇರಿ ವಿವಾದವನ್ನು ಕೋರ್ಟ್ ಹೊರಗೆ ತೀರ್ಮಾನ ಮಾಡಿಕೊಳ್ಳಲು ಅವಕಾಶ ಇದೆ. ಇದನ್ನೇ ನಾವು ಅನೇಕ ಬಾರಿ ಕೇಳಿದ್ದೇವೆ‌. ನಾನು ಪ್ರಧಾನಿ ಅವರಿಗೆ ಪತ್ರ ಬರೆದಿದ್ದೇನೆ. ಮಾನಿ ಪ್ರಧಾನಿ ಎಚ್.ಡಿ.ದೇವೇಗೌಡರೂ ಪತ್ರ ಬರೆದಿದ್ದಾರೆ. ಆದರೆ, ಇಲ್ಲಿಯವರೆಗೂ ಪ್ರಧಾನಿ ನರೇಂದ್ರ ಮೋದಿ‌‌ ಮಧ್ಯ ಪ್ರವೇಶಿಸಿಲ್ಲ.
ಈಗ ಬಿಜೆಪಿ- ಜೆಡಿಎಸ್ ಮೈತ್ರಿ ಆಗಿದೆ.
ಈ ಕಾರಣಕ್ಕಾದರೂ ದೇವೇಗೌಡರ ಮಾತು ಕೇಳ್ತಾರಾ ನೋಡೋಣ ಎಂದು ಹೇಳಿದರು.

ಕಾವೇರಿ ನೀರು ವಿಚಾರ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಪ್ರಧಾನಿಗೆ ಪತ್ರ ಬರೆದಿರುವುದನ್ನು ನಾವು ಸ್ವಾಗತಿಸುತ್ತೇವೆ.
ಈಗ ಅವರದು ಬಿಜೆಪಿ ಜತೆಗೆ ಹೊಸ ಪ್ರೇಮ.
ಅವರು ಸಮಸ್ಯೆ ಬಗೆಹರಿಸುವ ಕಾರ್ಯ ಮಾಡಲಿ.
ಆದರೆ ಸರ್ಕಾರ ಸರಿಯಾದ ನಿರ್ಧಾರ ಕೈಗೊಳ್ಳಲಿಲ್ಲ ಎಂಬುದನ್ನು ಪತ್ರದಲ್ಲಿ ಉಲ್ಲೇಖಿಸಿರುವುದನ್ನು ನಾವು ಒಪ್ಪುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರ ಎಲ್ಲ ಹಂತದಲ್ಲೂ ನಾಡಿನ ಜನರ ರಕ್ಷಣೆಗೆ ಬದ್ಧವಾಗಿಯೇ ಇದೆ. ಕಾನೂನು ತಜ್ಞರು ಸರಿಯಾಗಿ ವಾದ ಮಾಡಿಲ್ಲ ಎಂಬ ಆರೋಪ ಸುಳ್ಳು. ಹಿಂದಿನ ಎಲ್ಲಾ ಸರ್ಕಾರಗಳು ಇದ್ದಾಗಲೂ ಇದ್ದ ಲೀಗಲ್ ಟೀಮ್ ಈಗಲೂ ಇರೋದು. ಅವರೇ ವಾದ ಮಾಡಿದ್ದಾರೆ.
ಕಾನೂನು ತಜ್ಞರಲ್ಲಿ ಯಾವ ಬದಲಾವಣೆ ಆಗಿಲ್ಲ.
ಹೀಗಾಗಿ ಸಮರ್ಥ ವಾದ ಮಂಡಿಸಿಲ್ಲ ಎಂಬುದರಲ್ಲಿ ಅರ್ಥವಿಲ್ಲ‌ ಎಂದು ತಿಳಿಸಿದರು.

ಬಂದ್, ಪ್ರತಿಭಟನೆ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ.ಪ್ರತಿಭಟನೆನಿಂದ ಇನ್ನೊಬ್ಬರಿಗೆ ತೊಂದರೆ ಆಗಬಾರದು. ಪ್ರತಿಭಟನೆ ಹೇಗೆ ಸಂವಿಧಾನಾತ್ಮಕ ಹಕ್ಕು ಹಾಗೆಯೇ ಸಾಮಾನ್ಯ ಜನರಿಗೂ ಹಕ್ಕು ಇರುತ್ತದೆ.
ಹಾಗಾಗಿ ಅವರ ಹಕ್ಕಿಗೆ ಧಕ್ಕೆ ತರಬೇಡಿ.
ಜನರಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕಾಗಿ 144 ಸೆಕ್ಷನ್ ಜಾರಿ ಮಾಡಿದ್ದೇವೆ. ಜನರ ಹಕ್ಕನ್ನು ರಕ್ಷಿಸಿಸುವುದು ಸರ್ಕಾರದ ಕರ್ತವ್ಯ.
ಅದೇ ಕೆಲಸವನ್ನು ನಾವು ಮಾಡಿದ್ದೇವೆ ಎಂದು
144 ಸೆಕ್ಷನ್ ಸಮರ್ಥಸಿಕೊಂಡರು.

ನಾನು ಚಾಮರಾಜನಗರಕ್ಕೆ ಹೋಗೋದೇ ಗಟ್ಟಿ ಆಗೋಕೆ: ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತೆ ಅನ್ನೋ‌ ವಿಚಾರ ಸುಳ್ಳು.
ನಾನು ಗಟ್ಟಿಯಾಗಿದ್ದೇನೆ, ಗಟ್ಟಿಯಾಗೇ ಇರುತ್ತೇನೆ.
ನೀವು ನನ್ನನ್ನು ವೀಕ್ ಮಾಡಲು ಯತ್ನಿಸುತ್ತೀರ.
ಚಾಮರಾಜನಗರಕ್ಕೆ ಹೋದರೆ ಅಧಿಕಾರ ಹೋಗುತ್ತೆ ಅನ್ನುವ ಅಪವಾದವೇ ಈಗ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Continue Reading
Click to comment

Leave a Reply

Your email address will not be published. Required fields are marked *

Mandya

ಅಪರಿಚಿತ ವಾಹನ ಡಿಕ್ಕಿ: ಫಿಲ್ಡ್ ಆಫೀಸರ್ ಸ್ಥಳದಲ್ಲೇ ಸಾವು

Published

on

ಮದ್ದೂರು: ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಫೀಲ್ಡ್‌ಮನ್‌ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ದೊಡ್ಡಹೊಸಗಾವಿ ಗ್ರಾಮದ ಬಳಿ ಗುರುವಾರ ನಡೆದಿದೆ.

ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನೆ ಫೀಲ್ಡ್‌ಮನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ್(40) ಎಂಬುವರೇ ಅಪಘಾತದಲ್ಲಿ ಮೃತರಾದ ವ್ಯಕ್ತಿಯಾಗಿದ್ದಾರೆ.

ಮಂಡ್ಯ ನಗರದ ಚಾಮುಂಡೇಶ್ವರಿನಗರ ಬಡಾವಣೆಯಲ್ಲಿ ವಾಸವಾಗಿದ್ದ ಮಂಜುನಾಥ್ ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮುಗಿಸಿ ವಾಪಸ್ಸು ಬರುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ಹೇಳಲಾಗುತ್ತಿದೆ.
ಈ ಅಪಘಾತದಲ್ಲಿ ಮಂಜುನಾಥ್ ಅವರಿಗೆ ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Chamarajanagar

ಯಳಂದೂರುಇಂದು ಕಾಲೇಜಿನ ಸಭಾಂಗಣದಲ್ಲಿ ಸಂತ ಕವಿಕನಕದಾಸರ ಜಯಂತಿ ಕಾರ್ಯಕ್ರಮ

Published

on

ಶ್ರೀ ವೈ ಎಂ ಮಲ್ಲಿಕಾರ್ಜುನ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಯಳಂದೂರುಇಂದು ಕಾಲೇಜಿನ ಸಭಾಂಗಣದಲ್ಲಿ ಸಂತ ಕವಿಕನಕದಾಸರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು ಸದರಿ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ವಿಜಯ ಅವರು ಅಧ್ಯಕ್ಷತೆ ವಹಿಸಿದ್ದರು ಇಂದಿನ ಕಾರ್ಯಕ್ರಮವನ್ನು ಕುರಿತು ಇತಿಹಾಸ ವಿಭಾಗದ ಮುಖ್ಯಸ್ಥರಾದ ಶ್ರೀ ಮಹಂತೇಶ್ ಅವರು ಕನಕದಾಸರ ಜೀವನ ಚರಿತ್ರೆ ಅವರ ಸಾಹಿತ್ಯ ಸೇವೆ ಮತ್ತು ಭಾರತೀಯ ಸಂತ ಪರಂಪರೆಯಲ್ಲಿ ಕನಕದಾಸರ ಸ್ಥಾನ ಶ್ರೇಷ್ಠವಾದದ್ದು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು ಅಲ್ಲದೆ ತಿಮ್ಮಪ್ಪನಾಯಕನಾಗಿದ್ದ ಕನಕದಾಸರು ಕನಕ ನಾಯಕರ ಬಗ್ಗೆ ಆನಂತ್ರದ ಅವರ ಜೀವನ ಮತ್ತು ಅವರ ಸಾಧನೆಗಳನ್ನು ಎಳೆ ಎಳೆಯಾಗಿ ವಿದ್ಯಾರ್ಥಿಗಳಿಗೆ ತಿಳಿಸಿ ಹೇಳಿದ ಅವರು


ಕನ್ನಡ ಸಾಹಿತ್ಯದ ಅಶ್ವಿನಿ ದೇವತೆಗಳಲ್ಲಿ ಪುರಂದರದಾಸರಿಗೆ ಯಾವ ಮಟ್ಟದ ಶ್ರೇಷ್ಠತೆಯು ಅಷ್ಟೇ ಶ್ರೇಷ್ಠತೆಯು ಕನಕದಾಸರಿಗೂ ಲಭ್ಯವಾಗಿದೆ ಎಂದರೆ ಅತಿಶಯೋಕ್ತಿಯಲ್ಲ ಎಂದು ನುಡಿದರು ಸಾಮಾಜಿಕವಾಗಿ ತನ್ನನ್ನೇ ಸಮಾಜಕ್ಕೆ ಒಟ್ಟಿಕೊಂಡ ಕನಕದಾಸರು ಸಾಕಷ್ಟು ತರತಮಗಳಿಗೆ ಒಳಗಾದರೂ ಎದೆಗೊಂದದೆ ವ್ಯಾಸರಾಯರ ಶ್ರೇಷ್ಠ ಶಿಷ್ಯ ಪರಂಪರೆಯಲ್ಲಿ ಅಗ್ರಗಣ್ಯರಾಗಿ ರೂಪಗೊಂಡದ್ದು ನಿಜಕ್ಕೂ ಪ್ರಾಚಸ್ಮರಣೀಯ ಎಂದು ತಿಳಿಸಿದರು
ನಳಚರಿತ್ರೆ ಮೋಹನತರಂಗಿಣಿ ರಾಮಧಾನ್ಯ ಚರಿತೆಕೀರ್ತನೆಗಳು ಊಹಾಭೋಗಗಳು ಮುಂಡಿಗೆಗಳು ಇತ್ಯಾದಿ ಸಾಹಿತ್ಯ ಪ್ರಕಾರಗಳಲ್ಲಿ ಕಾವ್ಯಗಳನ್ನು ರಚಿಸಿ ಕನ್ನಡ ಸಾಹಿತ್ಯವನ್ನು ಮಾತ್ರವಲ್ಲ ಇಡೀ ದಾಸ ಸಂತತಿಯಲ್ಲಿ ಅಗ್ರಗಣ್ಯ ದಾಸವರೇಣ್ಯರೆನಿಸಿ ಕೀರ್ತಿಗೆ ಭಾಜನರಾದರು.


ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರು ಕನಕದಾಸರು ಭಾರತೀಯ ಸಂತ ಪರಂಪರೆಯಲ್ಲಿ ಅತ್ಯಂತ ವಿಶಿಷ್ಟವಾದ ದಾಸರಾಗಿದ್ದಾರೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾ ಆತ್ಮ ಯಾವ ಕುಲ ಜೀವ ಯಾವ ಕುಲ’ ಜಲವೇ ಸಕಲ ಕುಲಕ್ಕೆ ತಾಯಲ್ಲವೇ
ಜಲದ ನೆಲೆಯ ನೀನಾದರೂ ಬಲ್ಲಿರಾ ‘
ತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳ ‘
ಇತ್ಯಾದಿ ಕೀರ್ತನೆಗಳಲ್ಲದೆ ಅನೇಕ ಸಾಹಿತ್ಯ ಪ್ರಕಾರಗಳಲ್ಲಿ ಅವರ ಸಲ್ಲಿಸಿದ ಸೇವೆ ಅನನ್ಯವಾಗುವುದು ಎಂದು ತಿಳಿಸಿದರು ಸಾಮಾನ್ಯ ಪಾಳೇಗಾರನಾಗಿದ್ದನಾಯಕನಾಗಿ ಅನಂತರ ಕನಕದಾಸರಾಗಿ ಪರಿವರ್ತನೆ ಹೊಂದಿದ್ದೆ ಒಂದು ವಿಸ್ಮಯದ ಸಂಗತಿ ಎಂಬ ಅಂಶವನ್ನು ತಿಳಿಸಿದರು.ಎಲ್ಲ ಕಾಲಕ್ಕೂ ಸಲ್ಲಬಹುದಾದ ಅವರ ರಾಮಧಾನ್ಯ ಚರಿತೆ ಅಂದಿನ ಕಾಲದ ಅದ್ಭುತ ಕಲಾಕೃತಿಗಳಲ್ಲಿ ಒಂದು ಎಂದು ತಿಳಿಸಿದರು
ರಾಗಿ ಮತ್ತು ಭತ್ತವನ್ನು ಕಾವ್ಯದ ವಸ್ತುವನ್ನಾಗಿಸಿ ಅದರ ಹಿನ್ನೆಲೆಯಲ್ಲಿ ಸಮಾಜದಲ್ಲಿದ್ದ ಮೇಲು-ಕೀಳು ತರತಮ ಭಾವಗಳಿಗೆ ಆ ಕೃತಿಯ ಮೂಲಕ ಅವರು ಕೊಟ್ಟ ಸಂದೇಶ ಅತ್ಯಂತ ವಿಶೇಷವಾದದ್ದು ಎಂಬ ಅಂಶವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು ಎಲ್ಲರೂ ಎಲ್ಲ ಕಾಲಕ್ಕೂ ಓದಲೇಬೇಕಾದ ಅವರ ಸಾಹಿತ್ಯದ ಅನನ್ಯತೆಯನ್ನು ನಾವು ತಿಳಿದುಕೊಳ್ಳಲು ಪ್ರಯತ್ನಿಸಬೇಕು ಎಂದು ಹೇಳುವ ಮೂಲಕ ಕನಕ ಜಯಂತಿಯ ಶುಭಾಶಯಗಳು
ಕೋರಿದರು.ಐಕ್ಯೂ ಎಸಿ ಸಂಚಾಲಕರಾದ ವಿಕಾಸ್ ರವರು ಕಾರ್ಯಕ್ರಮವನ್ನು
ಅಚ್ಚುಕಟ್ಟಾಗಿ ನಿರೂಪಿಸಿದರು ಮತ್ತು ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ
ತೆರೆ ಎಳೆಯಲಾಯಿತು
ಕಾರ್ಯಕ್ರಮದಲ್ಲಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಶ್ವೇತಾ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ದಾಕ್ಷಾಯಿಣಿ ಕನ್ನಡ ವಿಭಾಗದ ಮುಖ್ಯಸ್ಥರಾದ
ಶ್ರೀಮತಿ ಪದ್ಮಹಾಗೂ ಅಧ್ಯಾಪಕರಾದ ಪುಷ್ಪ ಕುಮಾರ್ ಕಚೇರಿ ಸಿಬ್ಬಂದಿಗಳು ಎಲ್ಲರೂ ಹಾಜರಿದ್ದರು

Continue Reading

Crime

ಖಾಸಗಿ ಶಾಲಾ ಶಿಕ್ಷಕಿ ಅಪಹರಣ ಪ್ರಕರಣ – ಕಿಡ್ನಾಪರ್ಸ್‌ನ್ನು ಪತ್ತೆ ಹಚ್ಚಿದ ಪೊಲೀಸರು

Published

on

ಹಾಸನ : ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿ ಬಳಿ ಖಾಸಗಿ ಶಾಲಾ ಶಿಕ್ಷಕಿ ಅಪಹರಣ ಪ್ರಕರಣ
ಕಿಡ್ನಾಪರ್ಸ್‌ನ್ನು ಪತ್ತೆ ಹಚ್ಚಿದ ಪೊಲೀಸರು
ನೆಲ್ಯಾಡಿ ಬಳಿ ತೆರಳುತ್ತಿದ್ದ ವೇಳೆ ಎಲ್ಲರೂ ಪೊಲೀಸರ ವಶಕ್ಕೆ


ಅರ್ಪಿತಳನ್ನು ರಕ್ಷಿಸಿ ಕಿಡ್ನಾಪ್ ಮಾಡಿದವರನ್ನು ವಶಕ್ಕೆ ಪಡೆದ ಪೊಲೀಸರು
ಹಾಸನ ನಗರ ಪೊಲೀಸ್ ಠಾಣೆಗೆ ಕರೆತರುತ್ತಿರುವ ಪೊಲೀಸರು
ಯುವತಿ ಅಪಹರಿಸಿ ಸೋಮವಾರಪೇಟೆ ಕಡೆ ಕರೆದೊಯ್ದಿದ್ದ ಖತರ್ನಾಕ್ ಕಿಡ್ನಾಪರ್ಸ್


ಪೊಲೀಸರಿಗೆ ಸಿಗದ ರೀತಿ ಪ್ಲಾನ್ ಮಾಡಿ ಅರ್ಪಿತಾಳನ್ನು ಕರೆದೊಯ್ಯಲು ಯತ್ನಿಸುತ್ತಿದ್ದ ರಾಮು ಮತ್ತು ತಂಡ
ಅಪರಹರಣಕ್ಕೊಳಗಾಗಿದ್ದ ಅರ್ಪಿತಾಳನ್ನು ರಕ್ಷಿಸಿ ರಾಮು ಮತ್ತು ತಂಡವನ್ನು ವಶಕ್ಕೆ ಪಡೆದು ಹಾಸನಕ್ಕೆ ಕರೆತರುತ್ತಿರುವ ಪೊಲೀಸರು

Continue Reading

Trending