Connect with us

Mandya

ಕಾವೇರಿ ಉಳಿಸಿದ ದೇವೇಗೌಡರ ಮಗ ಹೊರಗಿನವರಾ: ಸಂಸದ ಪ್ರತಾಪ್‌ಸಿಂಹ ಕಿಡಿ

Published

on

ಮಂಡ್ಯ :  ಅಲಹಾಬಾದ್‌ನಲ್ಲಿ ಹುಟ್ಟಿದ ಇಂದಿರಾಗಾಂಧಿ ಚಿಕ್ಕಮಗಳೂರು, ಇಟಲಿಯಲ್ಲಿ ಹುಟ್ಟಿದ ಸೋನಿಯಾ ಗಾಂಧಿ ಬಳ್ಳಾರಿ, ದೆಹಲಿಯಲ್ಲಿ ಹುಟ್ಟಿದ ರಾಹುಲ್‌ಗಾಂಧಿ ವಯನಾಡಿಗೆ ಹೋಗಬಹುದು, ಮೈಸೂರಲ್ಲಿ ಹುಟ್ಟಿದ ಸಿದ್ದರಾಮಯ್ಯ ಬಾದಾಮಿಗೂ ಓಡಿ ಹೋಗಬಹುದು ಆದರೆ, ಕಾವೇರಿ ಉಳಿಸಿದ ದೇವೇಗೌಡರ ಮಗ ಹೊರಗಿನವರು ಆಗುತ್ತಾರಾ ಎಂದು ಸಂಸದ ಪ್ರತಾಪ್‌ಸಿಂಹ ಕಿಡಿಕಾರಿದರು.

ನಗರದ ಹೊರವಲಯದಲ್ಲಿರುವ ಅಮರಾವತಿ ಹೋಟೆಲ್‌ನ ಸಭಾಂಗಣದಲ್ಲಿ ಶುಕ್ರವಾರ ನಡೆದ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಸಮ್ಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜೂ.4 ರಂದು ಮೋದಿ ಮತ್ತೊಮ್ಮೆ ಪ್ರಧಾನಿ ಆಗಿ ಆಯ್ಕೆ ಆಗುತ್ತಾರೆ. ಕಾಂಗ್ರೆಸ್‌ನವರ ಸ್ಥಿತಿ 40 ಸ್ಥಾನ ದಾಟುವುದು ಕಷ್ಟವಾಗಿದೆ. ದೇಶ ಕಾಯಲು ಮೋದಿ, ಕಾವೇರಿ ಕಾಯಲು ಕುಮಾರಣ್ಣ ಆಯ್ಕೆ ಆಗಬೇಕು. ಮೋದಿ ಸಂಪುಟದಲ್ಲಿ ಎಚ್ಡಿಕೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ, ಅಲಹಾಬಾದ್‌ನಲ್ಲಿ ಹುಟ್ಟಿದ ಇಂದಿರಾಗಾಂಧಿ ಚಿಕ್ಕಮಗಳೂರು, ಇಟಲಿಯಲ್ಲಿ ಹುಟ್ಟಿದ ಸೋನಿಯಾ ಗಾಂಧಿ ಬಳ್ಳಾರಿ, ದೆಹಲಿಯಲ್ಲಿ ಹುಟ್ಟಿದ ರಾಹುಲ್‌ಗಾಂಧಿ ವಯನಾಡಿಗೆ ಹೋಗಬಹುದು. ಮೈಸೂರಲ್ಲಿ ಹುಟ್ಟಿದ ಸಿದ್ದರಾಮಯ್ಯ ಬಾದಾಮಿಗೆ ಓಡಿ ಹೋಗಬಹುದು. ಕಾವೇರಿ ಉಳಿಸಿದ ದೇವೇಗೌಡರ ಮಗ ಹೊರಗಿನವರು ಹೇಗೆ ಆಗುತ್ತಾರೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಬಂತು ಬರಗಾಲ ಕಾಲಿಟ್ಟಿತು, ಕುಮಾರಸ್ವಾಮಿ, ಯಡಿಯೂರಪ್ಪ ಸಿಎಂ ಆದಾಗ ರಾಜ್ಯ ಸಮೃದ್ಧವಾಗಿತ್ತು. ಸಿದ್ದರಾಮಯ್ಯ ಸಿಎಂ ಆದಾಗ ರಾಜ್ಯದಲ್ಲಿ ಬರಗಾಲ ಕಾಲಿಟ್ಟಿದೆ. ಕಾವೇರಿ ವಿಚಾರದಲ್ಲಿ ಹಿನ್ನಡೆ ಆದಾಗ ಸಚಿವ ಚಲುವರಾಯಸ್ವಾಮಿ ಧ್ವನಿ ಎತ್ತಲಿಲ್ಲ. ಸ್ಟಾಲಿನ್ ಜತೆಗೆ ಹೊಂದಾಣಿಕೆ ಮಾಡಿಕೊಂಡು ಕಾವೇರಿ ವಿಚಾರದಲ್ಲಿ ಎದೆಗಾರಿಕೆ ತೋರಲಿಲ್ಲ ಎಂದು ಆಕ್ರೋಶವ್ಯಕ್ತಪಡಿಸಿದರು.

ಮಂಡ್ಯ ರೈತರ ಹಿತ ಕಾಯುವ ಕೆಲಸವನ್ನು ಕಾಂಗ್ರೆಸ್‌ ಸರ್ಕಾರವಾಗಲಿ ಇಲ್ಲಿನ ಇದೇ ಪಕ್ಷದ ನಾಯಕರಾಗಲಿ ಮಾಡಲಿಲ್ಲ. ಆದರೆ, ಕಾವೇರಿ ವಿಚಾರದಲ್ಲಿ ಸಂಸತ್ತಿನಲ್ಲಿ ಧ್ವನಿ ಎತ್ತಿದ್ದು ದೇವೇಗೌಡರು, ಈಗ ಎಚ್‌ಡಿಡಿ ಮಗ ಅಭ್ಯರ್ಥಿ ಆಗಿದ್ದಾರೆ. ಅವರ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಲಿ. ಈಗಾಗಲೇ ಎಚ್‌ಡಿಕೆ ಅವರು 2 ಲಕ್ಷ ಮತದ ಅಂತರದಲ್ಲಿ ಗೆದ್ದಾಗಿದೆ ಎಂದು ಟಾಂಗ್‌ ನೀಡಿದರು.

ಜಿಲ್ಲೆಯಲ್ಲಿ ಅಂಬರೀಷ್ ನಂತರ ಮಂಡ್ಯಕ್ಕೆ ಕೇಂದ್ರ ಸಚಿವ ಸ್ಥಾನ ಸಿಗಲಿದೆ. ದೇವೇಗೌಡರ ಇರಲಿಲ್ಲ ಎಂದರೆ ಚಲುವರಾಯಸ್ವಾಮಿ ಜಿಪಂ ಸದಸ್ಯ ಕೂಡ ಆಗುತ್ತಿರಲಿಲ್ಲ ನೆನಪಿರಲಿ? ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಕುಮಾರಣ್ಣ ಗೆಲ್ಲಿಸಬೇಕು. ಹಾಗಾಗಿ ಮೈತ್ರಿ ಪಕ್ಷದ ಕಾರ್ಯಕರ್ತರು, ಮುಖಂಡರು ಹಾಗೂ ನಾಯಕರು ಹಲಗಲಿರುಳು ಶ್ರಮಿಸಬೇಕು ಎಂದು ಮನವಿ ಮಾಡಿದರು.

ಚುಂಚಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಜಾತಿಗಣತಿ ಅನ್ಯಾಯ ವಿರೋಧಿಸಿದರೂ ನೀವು ಸ್ಪಂದಿಸಲಿಲ್ಲ. ಅವತ್ತು ನಿಮಗೆ ಒಕ್ಕಲಿಗ ಸ್ವಾಮೀಜಿ ಬಗ್ಗೆ ಗೌರವ ಬರಲಿಲ್ವಾ? ಇವತ್ತು ಒಕ್ಕಲಿಗರ ಮೇಲೆ ಪ್ರೀತಿ ಬಂದಿದೆಯಾ? ಕಾಂಗ್ರೆಸ್ 135 ಸೀಟ್ ಗೆಲ್ಲಲು ಕಾರಣರಾದ ಡಿ.ಕೆ.ಶಿವಕುಮಾರ್ ಅವರನ್ನು ಏಕೆ ಸಿಎಂ ಆಗಲು ಬಿಡಲಿಲ್ಲ. ಸಿದ್ದರಾಮಯ್ಯಗೆ ಒಕ್ಕಲಿಗರ ಮೇಲೆ ಪ್ರೀತಿ ಇಲ್ಲವೇ? ಜೆಡಿಎಸ್ ಪಕ್ಷ ಸಾಕಷ್ಟು ಒಕ್ಕಲಿಗರಿಗೆ ಅವಕಾಶ ಮಾಡಿಕೊಟ್ಟಿದೆ. ಒಕ್ಕಲಿಗ ನಾಯಕತ್ವ ಬೆಳೆಸಿದ್ದು ದೇವೇಗೌಡರು. ಇವರು ಸಮುದಾಯದ ಪ್ರಶ್ನಾತೀತ ನಾಯಕ. ಕಾವೇರಿ ಕಾಯಲು ಕುಮಾರಸ್ವಾಮಿ ಅವರನ್ನು ಕಳುಹಿಸೋಣ ಎಂದರು.

Continue Reading
Click to comment

Leave a Reply

Your email address will not be published. Required fields are marked *

Mandya

ಡಿ.17ಕ್ಕೆ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತ್ಯುತ್ಸವದಲ್ಲಿ ರಾಷ್ಟ್ರಪತಿ ಭಾಗಿ : ಡಾ. ಕುಮಾರ

Published

on

ಮಂಡ್ಯ : ಮಳವಳ್ಳಿಯಲ್ಲಿ ಹಮ್ಮಿಕೊಂಡಿರುವ ಆದಿ ಜಗದ್ಗರು ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ಡಿ.17 ರಂದು ಸನ್ಮಾನ್ಯ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಆಗಮಿಸುತ್ತಿದ್ದು, ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಡಾ.ಕುಮಾರ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸನ್ಮಾನ್ಯ ರಾಷ್ಟ್ರಪತಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆ ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಷ್ಟ್ರಪತಿಗಳ ಕರ್ತವ್ಯದಲ್ಲಿ ಲೋಪ ಆಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ಅವರು ಸಂಚರಿಸುವ ರಸ್ತೆ ಸಂಪೂರ್ಣವಾಗಿ ದುರಸ್ತಿಗೊಳಿಸಬೇಕು. ರಸ್ತೆಗಳ ಸ್ವಚ್ಛತೆ ಮಾಡಬೇಕು. ಆಂಬ್ಯುಲೆನ್ಸ್ ಹಾಗೂ ತಜ್ಞ ವೈದ್ಯರ ಸೇವೆ ಒದಗಿಸಬೇಕು ಎಂದು ಹೇಳಿದರು.

ಹೆಲಿಪ್ಯಾಡ್ ಸುತ್ತಾ ಬ್ಯಾರಿಕೇಡ್ ಹಾಕಬೇಕು, ಗ್ರೀನ್ ರೂಮ್ ನಿರ್ಮಾಣ ಸೇರಿದಂತೆ ಕಾರ್ಯಕ್ರಮದಲ್ಲಿ ಯಾವುದೇ ವಿದ್ಯುತ್ ಅಡಚಣೆ ಆಗದಂತೆ ಚೆಸ್ಕಾಂ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಕಾರ್ಯಕ್ರಮದ ಸ್ಧಳದಲ್ಲಿ ಹಾಗೂ ಪ್ರವಾಸಿ ಮಂದಿರದಲ್ಲಿ ಇಂಟರ್ನೆಟ್ ಸಂಪರ್ಕ ಹಾಗೂ ಕಂಪ್ಯೂಟರ್ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಎಂದರು.

ಕಾರ್ಯಕ್ರಮ ನಡೆಯುವ ಸ್ಥಳ, ಹೆಲಿಪ್ಯಾಡ್ ಸ್ಥಳಗಳಲ್ಲಿ ಅಗ್ನಿ ಶಾಮಕ ದಳದ ವಾಹನ ನಿಯೋಜಿಸಬೇಕು. ರಾಷ್ಟ್ರಪತಿಗಳ ಆಗಮಿಸುವ ಹಿನ್ನೆಲೆಯಲ್ಲಿ ಯಾವುದೇ ಲೋಪ ದೋಷಗಳನ್ನು ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪ್ರಮುಖ ಇಲಾಖೆಗಳಿಂದ ಸ್ಟಾಲ್ ಗಳ ನಿರ್ಮಾಣ ಮಾಡುವಂತೆ ಹಾಗೂ ಅಲ್ಲಿ ಅಗತ್ಯವಾಗಿ ಬೇಕಾಗಿರುವ ಕುಡಿಯುವ ನೀರು ಹಾಗೂ ಶೌಚಾಲಯದ ವ್ಯವಸ್ಥೆ ಮಾಡಲು ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದ ಮೂರ್ತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

Mandya

ಮಂಡ್ಯ ಇತಿಹಾಸದಲ್ಲಿ ಮೈಶುಗರ್‌ ಶಾಲೆಗೆ ವಿಶೇಷ ಸ್ಥಾನವಿದೆ : ಎಲ್ಲರೂ ಸೇರಿ ಶಾಲೆ ಉಳಿಸೋಣ – ಹೆಚ್‌ಡಿಕೆ

Published

on

ಮಂಡ್ಯ: ಸುಮಾರು ಹದಿನೈದು ತಿಂಗಳಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಇಲ್ಲಿನ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ತಮ್ಮ ಸಂಸದರ ವೇತನವನ್ನೇ ನೀಡಿದರು.

ಈ ಮೊದಲು ನೀಡಿದ್ದ ಭರವಸೆಯಂತೆ ಶನಿವಾರ ಬೆಳಗ್ಗೆ ಶಾಲೆಗೆ ಭೇಟಿ ನೀಡಿದ ಸಚಿವರು, 19,94,200 ಮೊತ್ತದ ಚೆಕ್‌ ಅನ್ನು ಶಾಲೆಯ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಶಿಕ್ಷಕರು ಸಚಿವರಿಗೆ ಧನ್ಯವಾದ ಹೇಳಿದರು. ಇದಕ್ಕೆ ಸ್ಪಂದಿಸಿದ ಸಚಿವರು, ವೇತನವಿಲ್ಲದೆ ಕೆಲಸ ಮಾಡುವುದು ಕಷ್ಟ. ನೀವು ನೋವು ನನಗೆ ಅರ್ಥವಾಗಿದೆ. ಹೀಗಾಗಿ ನಿಮ್ಮ ಕಷ್ಟಕ್ಕೆ ಸ್ಪಂದಿಸುತ್ತೇನೆ ಎಂದು ಮಾತು ಕೊಟ್ಟಿದ್ದೆ. ನಿಮಗೆ ಕೊಟ್ಟ ಮಾತು ಉಳಿಸಿಕೊಂಡಿದ್ದೇನೆ ಎಂದು ತಿಳಿಸಿದರು.

 

ಇದು ಐತಿಹಾಸಿಕ ಶಾಲೆ. ಮಂಡ್ಯದ ಇತಿಹಾಸದಲ್ಲಿ ಈ ಶಾಲೆಗೂ ಒಂದು ಸ್ಥಾನವಿದೆ. ಹೀಗಾಗಿ ಶಾಲೆ ಸಂಕಷ್ಟಕ್ಕೆ ಸಿಲುವುದು ನನಗೆ ಇಷ್ಟವಿಲ್ಲ. ಈ ಶಾಲೆಯನ್ನು ಉಳಿಸುವ ಬಗ್ಗೆ ರಾಜ್ಯ ಸರ್ಕಾರಕ್ಕೂ ಮನವಿ ಮಾಡುತ್ತೇನೆ. ಪಿಯುಸಿವರೆಗೆ ಈ ಶಾಲೆಯಲ್ಲಿ ಶಿಕ್ಷಣ ದೊರೆಯಲಿ. ನಾನು ಕೂಡ ಶಾಲೆಯ ಉಳಿವಿಗೆ ಕೈ ಜೋಡಿಸುತ್ತೇನೆ. ಆದಿಚುಂಚನಗಿರಿ ಶ್ರೀಗಳೊಂದಿಗೂ ಈ ಬಗ್ಗೆ ಮಾತಾಡಿದ್ದೇನೆ. ಒಂದೇ ರಾತ್ರಿಯಲ್ಲಿ ಅಭಿವೃದ್ಧಿ ಮಾಡುತ್ತೇನೆ ಎಂದು ನಾನು ಹೇಳಲ್ಲ. ಹಂತ ಹಂತವಾಗಿ ಶಾಲೆಯ ಅಭಿವೃದ್ಧಿ ಮಾಡೋಣ. ಈ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡಲಿ ಎಂದು ಕೇಳುತ್ತೇನೆ. ಮಂಡ್ಯದಲ್ಲಿ ಮೈಶುಗರ್ ಶಾಲೆಯೇ ನಂಬರ್ ಓನ್ ಶಾಲೆ ಆಗಿರಬೇಕು ಎಂಬುದು ನನ್ನ ಆಶಯವಾಗಿದೆ ಎಂದು ಕೇಂದ್ರ ಸಚಿವರು ಹೇಳಿದರು.

ಶಿಕ್ಷಕರ ಕಷ್ಟ ತಿಳಿದು ನಾನು ಬಹಳ ನೊಂದಿದ್ದೆ. 15 ತಿಂಗಳಿಂದ ಸಂಬಳ ಇಲ್ಲದೇ ಕೆಲಸ ಮಾಡುವುದು ಎಂದರೆ ಸುಲಭವಲ್ಲ. ಆ ಸಂಕಷ್ಟದ ಕಾಲದಲ್ಲಿಯೂ ಅವರು ಮಕ್ಕಳಿಗೆ ವಿದ್ಯೆ ಕಲಿಸಿದ್ದಾರೆ. ಹೀಗಾಗಿ ಎಲ್ಲಾ ಶಿಕ್ಷಕರಿಗೆ ಅಭಿನಂದನೆ ಹೇಳುತ್ತೇನೆ ಎಂದು ಸಚಿವರು ಹೇಳಿದರು.

ಶಾಲೆ ಅಭಿವೃದ್ಧಿ ಎಲ್ಲರ ಕರ್ತವ್ಯ. ನನ್ನ ಕೈಲಾದದ್ದನ್ನು ನಾನು ಮಾಡುತ್ತೇನೆ. ಮಕ್ಕಳ ಅನುಕೂಲಕ್ಕೆ ಎರಡು ಶಾಲಾ ಬಸ್ ಬೇಕು ಎಂದು ಮನವಿ ಮಾಡಿದ್ದಾರೆ. ಮೈಶುಗರ್ ಶಾಲೆಯಲ್ಲಿ ಎಲ್‌ಕೆಜಿಯಿಂದ ಪಿಯುವರೆಗೆ ಉಚಿತ ಶಿಕ್ಷಣ ನೀಡಲು ಹೇಳಿದ್ದೇನೆ. ಈ ಬಗ್ಗೆ ಚುಂಚನಗಿರಿ ಶ್ರೀಗಳ ಬಳಿ ಮನವಿ ಮಾಡಿದ್ದೇನೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸಂಸತ್‌ ಕಲಾಪ ಮುಗಿದ ಬಳಿಕ ಶ್ರೀಗಳ ಮಾರ್ಗದರ್ಶನದಲ್ಲಿ ಚರ್ಚೆ ಮಾಡುತ್ತೇವೆ. ಕಾಂಗ್ರೆಸ್ ನಾಯಕರಿಗೂ ಈ ಬಗ್ಗೆ ಹೇಳುತ್ತೇನೆ. ಶಾಲೆ ವಿಷಯದಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ. ಮೈಶುಗರ್ ಶಾಲೆ ಉಳಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಕೇಂದ್ರ ಸಚಿವರು ಪ್ರತಿಪಾದಿಸಿದರು.

ರಾಜ್ಯ ಸರ್ಕಾರದ ಬಗ್ಗೆ ನಾನು ಚರ್ಚೆ ಮಾಡಲ್ಲ:

ರಾಜ್ಯ ಕಾಂಗ್ರೆಸ್‌ ಸರ್ಕಾರದ ಬಗ್ಗೆ ನಾನು ಈಗ ಚರ್ಚೆ ಮಾಡಲ್ಲ. ನೆರೆ ರಾಜ್ಯದ ರಾಜ್ಯಪಾಲರು ಕಾರ್ಕಳಕ್ಕೆ ಬಂದಿದ್ದರು. ಆಗ ವಕೀಲ ಹೆಣ್ಣುಮಕ್ಕಳು ಶೌಚಾಲಯ ಕಟ್ಟಲು ಒಂದು ಕೋಟಿ ಕೇಳಿದ್ದೆ. ರಾಜ್ಯ ಸರ್ಕಾರ ಒಂದು ವರ್ಷದಿಂದ ಹಣವನ್ನು ಕೊಟ್ಟಿಲ್ಲ. ನಿಮ್ಮ ಕಾಲದಲ್ಲಿ ಕೇಳಿದಾಗ ಎಲ್ಲಾ ಕೊಟ್ಟಿದ್ದೀರಾ ಎಂದರು. ಇಂದು ಹಾಸನದಲ್ಲಿ ದೊಡ್ಡ ಜಾಹಿರಾತು ಕೊಟ್ಟಿದ್ದಾರೆ. ನಮ್ಮ ಕಾಲದಲ್ಲಿ ಬಿಡುಗಡೆಯಾದ ಹಣದ ಕಾಮಗಾರಿಗೆ ಟೇಪ್ ಕಟ್ ಮಾಡಲು ಹೋಗಿದ್ದಾರೆ. ಈ‌ ಸರ್ಕಾರದ ಮೇಲೆ ಟೀಕೆ ಮಾಡಲು ಸರ್ಕಾರ ಜನರ ನಂಬಿಕೆಯನ್ನು ಉಳಿಸಿಕೊಂಡಿಲ್ಲ. ಕೇಂದ್ರ ಸರ್ಕಾರ ಮೇಲೆ ಕೇವಲ ರಾಜಕೀಯಕ್ಕಾಗಿ ಟೀಕೆ ಮಾಡುತ್ತಿದ್ದಾರೆ. ಅದು ಬೇಕಿಲ್ಲ. ನಮ್ಮನ್ನು ಪ್ರಧಾನಮಂತ್ರಿಗಳ ಮುಂದೆ ನಿಲ್ಲಬೇಕು ಅಂತಾರೆ. ಮೊದಲು ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ ಎಂದು ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡರು.

ಎಂಎಸ್‌ಪಿ ಬೆಲೆ ನಿಗದಿ ವಿಚಾರದಲ್ಲಿ ಉಂಟಾಗಿರುವ ಸಮಸ್ಯೆಯನ್ನು ರಾಜ್ಯ ಸರಕಾರ ಬಗೆಹರಿಸಿಕೊಳ್ಳಲಿ. ಮೊದಲು ನೀವು ಖರೀದಿ ಕೇಂದ್ರ ತೆರೆಯಿರಿ. ಆ ಬಳಿಕ ಕೇಂದ್ರವನ್ನು ಕೇಳಿ. ಎಂಎಸ್‌ಪಿ ಬೆಲೆಯನ್ನು ಕಾರ್ಯರೂಪಕ್ಕೆ ತರುವುದು ರಾಜ್ಯದ ಕರ್ತವ್ಯ. ಇವರು ಕೇಂದ್ರ ಸರ್ಕಾರ ಅನುದಾನ ಪಡೆಯಲು ಕೋರ್ಟ್‌ಗೆ ಹೋಗಬೇಕು ಅಂತಾರೆ. ನಾನು ಸಿಎಂ ಆಗಿದ್ದಾಗ ಕೋರ್ಟ್‌ಗೆ ಹೋಗಲಿಲ್ಲ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ 4.5 ಸಾವಿರ ಕೋಟಿ ಸಾಲವನ್ನು ನಾನು ತೀರಿಸಿದ್ದೇನೆ. ನನ್ನ ಕಾಲದ ಸಾಲವನ್ನು ಇವರೇನು ತೀರಿಸಿಲ್ಲ ಎಂದು ಅವರು ವಾಗ್ದಾಳಿ ನಡೆಸಿದರು.

ವಾಚ್ ಹೇಗೆ ಖರೀದಿ ಮಾಡಿದ್ದಾರೆ ಎನ್ನೋದೇ ಮುಖ್ಯ:

ಸಿಎಂ, ಡಿಸಿಎಂ ಅವರಿಬ್ಬರೂ ಎಷ್ಟು ಲಕ್ಷ ಬೆಲೆ ವಾಚ್ ಕಟ್ಟಿದ್ದಾರೆ ಎನ್ನೋದು ಮುಖ್ಯವಲ್ಲ. ವಾಚ್‌ನ್ನು ಹೇಗೆ ಖರೀದಿ ಮಾಡಿದ್ದಾರೆ ಎನ್ನೋದೇ ಮುಖ್ಯ. ಅವರ ದುಡಿಮೆ ದುಡ್ಡಿನಲ್ಲಿ ಖರೀದಿ ಮಾಡಿದ್ದಾರಾ ಹೇಗೆ ಎನ್ನೋದು ಮುಖ್ಯ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಕೇಂದ್ರ ಸಚಿವರು ಉತ್ತರಿಸಿದರು.

ಉಪ ಲೋಕಾಯುಕ್ತರು ಹೇಳಿಕೆಗೆ ಸೀಮಿತವಾಗಿದ್ದಾರೆ:

ಸರಕಾರಿ ಇಲಾಖೆಗಳಲ್ಲಿ 63% ಭ್ರಷ್ಟಾಚಾರ ಆರೋಪ ಮಾಡಿರುವ ಉಪ ಲೋಕಾಯುಕ್ತರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು; ಉಪ ಲೋಕಾಯುಕ್ತರಿಗೆ ಒಂದ್ ನಮಸ್ಕಾರ. ಉಪ ಲೋಕಾಯುಕ್ತರಾಗಿ ಅವರು ಏನ್ ಕೆಲಸ ಮಾಡ್ತಿದ್ದಾರೆ? ಅವರ ಜವಬ್ದಾರಿ ಏನು? ಮಾಧ್ಯಮ ಮುಂದೆ ಹೇಳಿಕೆ ನೀಡಲಷ್ಟೇ ಅವರಿಗೆ ಅಧಿಕಾರ ನೀಡಲಾಗಿದೆಯಾ? ಇಲ್ಲಾ ದಾಖಲೆಗಳನ್ನ ಸಂಗ್ರಹಿಸಿ ಕ್ರಮ ತೆಗೆದುಕೊಳ್ಳಲಿಕ್ಕೆ ಅಧಿಕಾರ ನೀಡಲಾಗಿದೆಯಾ? ಯಾರ ಕಾಲದಲ್ಲಿ ಭ್ರಷ್ಟಾಚಾರ ನಡೆಯುತ್ತಿತ್ತು ಅನ್ನೋದು ಬೇರೆ ಚರ್ಚೆ. ಭ್ರಷ್ಟಾಚಾರ ಗೊತ್ತಿದ್ದೂ ಉಪ ಲೋಕಾಯುಕ್ತರು ಹೇಳಿಕೆಗೆ ಸೀಮಿತವಾಗಿದ್ದಾರೆ. ಹೀಗಾದರೆ ಪ್ರಯೋಜನವೇನು? ಎಂದು ಅಭಿಪ್ರಾಯಪಟ್ಟರು.

2019ರ ಭ್ರಷ್ಟಾಚಾರ ಬಗ್ಗೆ ಉಪ ಲೋಕಾಯುಕ್ತರು ಮಾತಾನಾಡಿದ್ದಾರೆಂದು ಸಿಎಂ ಟ್ವಿಟ್ ಮಾಡಿದ್ದಾರೆಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಅಧಿಕಾರಕ್ಕೆ ಬಂದು 3 ವರ್ಷ ಆಗಿದೆ. ಈ ಮೂರು ವರ್ಷದ ಆಡಳಿತ ಎಷ್ಟು ಪರಿಶುದ್ಧ, ಪಾರದರ್ಶಕವಾಗಿದೆ ಎಂಬ ಬಗ್ಗೆ ವರದಿ ಮಾಡಿಸಲಿ ಎಂದು ಒತ್ತಾಯಿಸಿದರು.

Continue Reading

Mandya

ತಂಬಾಕು ಮುಕ್ತ ಗ್ರಾಮಕ್ಕಾಗಿ ಸಂಕಲ್ಪ

Published

on

ಶ್ರೀರಂಗಪಟ್ಟಣ : ತಾಲೂಕಿನ ತರಿಪುರ ಗ್ರಾಮವನ್ನು ತಂಬಾಕು ಮುಕ್ತ ಗ್ರಾಮವನ್ನಾಗಿಸಲು ಆಯ್ಕೆ ಮಾಡಿದ್ದು, ಇದಕ್ಕಾಗಿ ಗ್ರಾಮದ ಮುಖಂಡರ ಹಾಗೂ ಸಾರ್ವಜನಿಕರ ಸಹಕಾರ ಅಗತ್ಯವಾಗಿ ಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ್ ಹೇಳಿದರು.

ಅವರು ತಾಲೂಕಿನ ಮಹದೇವಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ತರಿಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ತಂಬಾಕು ಮುಕ್ತ ಯುವ ಅಭಿಯಾನ 3.0 ಕಾರ್ಯಕ್ರಮಡಿಯಲ್ಲಿ ತರಿಪುರ ಗ್ರಾಮವನ್ನು ತಂಬಾಕು ಮುಕ್ತ ಗ್ರಾಮವನ್ನಾಗಿಸಲು ಆಯೋಜಿಸಿದ್ದ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿದರು.

ತಂಬಾಕು ಮುಕ್ತ ಹಳ್ಳಿ ಅಭಿಯಾನವು ಸಾರ್ವಜನಿಕರ ಆರೋಗ್ಯ ಸುಧಾರಣೆಗಾಗಿ, ಸಮುದಾಯದ ಸಹಭಾಗಿತ್ವದೊಂದಿಗೆ ತಂಬಾಕಿನಿಂದ ಮುಕ್ತವಾದ ವಾತಾವರಣ ನಿರ್ಮಿಸುವ ಗುರಿ ಹೊಂದಲಾಗಿದೆ ಜತೆಗೆ ತಂಬಾಕಿನಿಂದಾಗುವ ಕ್ಯಾನ್ಸರ್, ಹೃದಯ ಸಂಬಂಧಿ ರೋಗಗಳು ಮತ್ತು ಇತರ ಆರೋಗ್ಯ ಸಮಸ್ಯೆಗಳ ಬಗ್ಗೆ ಜನರಿಗೆ ತಿಳಿಸುವುದು ಸೇರಿದಂತೆ ಕೋಟ್ಪ ಕಾಯ್ದೆ ಜಾರಿ ಮತ್ತು ತಂಬಾಕು ವ್ಯಸನ ಮುಕ್ತ ಕೇಂದ್ರಗಳ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವುದು ಒಳಗೊಂಡಿದೆ ಇದಕ್ಕಾಗಿ ಗ್ರಾಮದ ಎಲ್ಲ ಮುಖಂಡರು,ಯುವಕ ಮಿತ್ರರರು, ಸಾರ್ವಜನಿಕರು ಸಹಕರಿಸಿ ತಂಬಾಕು ಮುಕ್ತ ಗ್ರಾಮವನ್ನಾಗಿಸಲು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕೆಂದು ಸಲಹೆ ನೀಡಿದರು.

ನಂತರ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎನ್.ಕೃಷ್ಣೇಗೌಡ ಮಾತನಾಡಿ, ಗ್ರಾಮದಲ್ಲಿರುವ ಎಲ್ಲಾ ಅಂಗಡಿ ಮಾಲೀಕರು ತಂಬಾಕು ಮುಕ್ತ ಗ್ರಾಮವನ್ನು ಘೋಷಿಸಲು ಸಹಕರಿಸಬೇಕೆಂದರು. ಗ್ರಾ.ಪಂ. ಅಧ್ಯಕ್ಷರು ಹಾಗೂ ಸದಸ್ಯರು ಮುಕ್ತ ಮನಸ್ಸಿನಿಂದ ಈ ಕಾರ್ಯಕ್ರಮಕ್ಕೆ ಸಹಕರಿಸುವುದಾಗಿ ತಿಳಿಸಿದರು.

ನಂತರ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಮೋಹನ್ ಪ್ರತಿಜ್ಞಾವಿಧಿ ಬೋಧಿಸಿದರು. ಸದರಿ ಪೂರ್ವ ಭಾವಿ ಸಭೆಯಲ್ಲಿ ಗ್ರಾ. ಪಂ. ಅಧ್ಯಕ್ಷೆ ಪ್ರೇಮ,ಸದಸ್ಯೆ ಸುಗುಣ, ಮಾಜಿ ಸದಸ್ಯೆ ರೂಪ,ಕಾರ್ಯದರ್ಶಿ ಕೃಷ್ಣಪ್ಪ ,ಬಿಲ್ ಕಲೆಕ್ಟರ್ ಸುಭಾಷ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶಶಿಕಲಾ,ಅಂಗನವಾಡಿ ಕಾರ್ಯಕರ್ತೆ ಯಶೋಧ,ಆಶಾ ಕಾರ್ಯಕರ್ತೆ ಲಕ್ಷ್ಮಿ, ನಂದಿನಿ,ಪೂರ್ಣಿಮಾ ಹಾಗೂ ಸ್ತ್ರೀಶಕ್ತಿ ಸಂಘದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Continue Reading

Trending

error: Content is protected !!