Hassan
ಆಲೂರಿನಲ್ಲಿ ಕೆಂಪೇಗೌಡ ಜಯಂತಿ ಆಚರಣೆ
Hassan
ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ; ಸರ್ಕಾರಿ ಗೌರವದೊಂದಿಗೆ ಅಂತಿಮ ವಿದಾಯ
ಹಾಸನ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ಅವರು ಸೋಮವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಪಂಚಭೂತಗಳಲ್ಲಿ ಲೀನರಾದರು.
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ಸಮೀಪದ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸಾವಿರಾರು ಜನರ ಕಂಬನಿಯ ನಡುವೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿತು.

ರಾಜಕೀಯದಿಂದ ಸದಾ ದೂರವಿದ್ದರೂ ದೇವೇಗೌಡ ಕುಟುಂಬದ ಬೆನ್ನೆಲುಬಾಗಿ ಗುರುತಿಸಿಕೊಂಡಿದ್ದ ಚೆನ್ನಮ್ಮ ಅವರ ಅಗಲಿಕೆ ರಾಜ್ಯದ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಶೋಕದ ಛಾಯೆ ಮೂಡಿಸಿತು. ಅಂತಿಮ ದರ್ಶನಕ್ಕಾಗಿ ವಿವಿಧ ಪಕ್ಷಗಳ ನಾಯಕರು, ಸ್ವಾಮೀಜಿಗಳು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಆಗಮಿಸಿ ಗೌರವ ನಮನ ಸಲ್ಲಿಸಿದರು.
ಸರ್ಕಾರಿ ಗೌರವದೊಂದಿಗೆ ಅಂತಿಮ ನಮನ:
ಗಣ್ಯರು ಪುಷ್ಪನಮನ ಸಲ್ಲಿಸಿದ ಬಳಿಕ ಪೊಲೀಸ್ ಪಡೆ ಮೂರು ಸುತ್ತು ಕುಶಾಲತೋಪು ಸಿಡಿಸಿ ಸರ್ಕಾರಿ ಗೌರವ ವಂದನೆ ಸಲ್ಲಿಸಿತು. ರಾಷ್ಟ್ರಗೀತೆ ಮೊಳಗಿದ ಬಳಿಕ ಎರಡು ನಿಮಿಷ ಮೌನಾಚರಣೆ ನಡೆಸಲಾಯಿತು. ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಧ್ವಜವನ್ನು ದೇವೇಗೌಡರ ಕುಟುಂಬಕ್ಕೆ ಹಸ್ತಾಂತರಿಸಿದರು.
ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಕಾಲಿಗೆ ನಮಸ್ಕರಿಸಿ ಗೌರವ ಸಲ್ಲಿಸಿದ ದೃಶ್ಯ ಗಮನ ಸೆಳೆಯಿತು.

ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ:
ಸರ್ಕಾರಿ ಗೌರವಗಳ ಬಳಿಕ ಕುಟುಂಬ ಸದಸ್ಯರು ಹಾಗೂ ಅರ್ಚಕರ ಸಮ್ಮುಖದಲ್ಲಿ ಅಂತಿಮ ಪೂಜಾ ವಿಧಿವಿಧಾನಗಳು ನೆರವೇರಿದವು. ವೇದಘೋಷ, ಸ್ತೋತ್ರ ಪಠಣಗಳ ನಡುವೆ ಪಾರ್ಥಿವ ಶರೀರವನ್ನು ಪಲ್ಲಕ್ಕಿಯಲ್ಲಿ ಮೂರು ಸುತ್ತು ಮೆರವಣಿಗೆ ನಡೆಸಲಾಯಿತು.
ಬಳಿಕ ಹಿರಿಯ ಪುತ್ರ ಎಚ್.ಡಿ. ರಮೇಶ್ ಅವರು ಸಂಪ್ರದಾಯದಂತೆ ಅಂತ್ಯಕ್ರಿಯೆಯ ವಿಧಿವಿಧಾನ ನೆರವೇರಿಸಿದರು. ಗಂಗಾಜಲ ಸಿಂಪಡಿಸಿ ಸ್ಥಳವನ್ನು ಶುದ್ಧೀಕರಿಸಿದ ನಂತರ ಪಾರ್ಥಿವ ಶರೀರವನ್ನು ಸಮಾಧಿಗೆ ಇಳಿಸಿ ಅಂತಿಮ ಸಂಸ್ಕಾರ ನಡೆಸಲಾಯಿತು.
ರಾಜಕೀಯ, ಧಾರ್ಮಿಕ ಗಣ್ಯರ ಉಪಸ್ಥಿತಿ:
ಚೆನ್ನಮ್ಮ ಅವರಿಗೆ ಅಂತಿಮ ನಮನ ಸಲ್ಲಿಸಲು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಎಚ್.ಡಿ. ಕುಮಾರಸ್ವಾಮಿ, ವಿ. ಸೋಮಣ್ಣ ಹಾಗೂ ಶಿವರಾಜ್ ಸಿಂಗ್ ಚೌಹಾಣ್, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಕೆ.ಜೆ. ಜಾರ್ಜ್, ಕೆ.ಹೆಚ್. ಮುನಿಯಪ್ಪ ಸೇರಿದಂತೆ ಹಲವು ಸಚಿವರು, ಸಂಸದರು, ಶಾಸಕರು ಹಾಗೂ ವಿವಿಧ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

ಅದೇ ರೀತಿ ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ನಂಜಾವಧೂತ ಶ್ರೀ, ರಂಭಾಪುರಿ ಶ್ರೀ ಸೇರಿದಂತೆ ವಿವಿಧ ಮಠಗಳ ಸ್ವಾಮೀಜಿಗಳು ಭಾಗವಹಿಸಿ ಅಂತಿಮ ನಮನ ಸಲ್ಲಿಸಿದರು.
Hassan
ಬೂತ್ ಮಟ್ಟದಲ್ಲಿ ಬಿಜೆಪಿ ಸಂಘಟನೆಗೆ ಒತ್ತು ನೀಡಿ: ಬಿ.ವೈ. ವಿಜಯೇಂದ್ರ ಕರೆ
Hassan
“ಪ್ರಧಾನಿಯಾಗುವ ಮಟ್ಟಕ್ಕೆ ಬೆಳೆಸಿದ್ದು ರಂಗನಾಥನ ಆಶೀರ್ವಾದ, ಶಕ್ತಿ ತುಂಬಿದ್ದು ಚೆನ್ನಮ್ಮ”: ಎಚ್ಡಿಡಿ
ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತಮ್ಮ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆಯ ವೇಳೆ ಭಾವುಕರಾಗಿ ಕಣ್ಣೀರಿಟ್ಟರು. ಹರದನಹಳ್ಳಿಯ ಮಾವಿನಕೆರೆ ಸಮೀಪದ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿತು.
ಅಂತಿಮ ವಿಧಿವಿಧಾನಗಳ ಸಂದರ್ಭದಲ್ಲಿ ಮಾತನಾಡಿದ ದೇವೇಗೌಡರು, “ನನ್ನ ಪತ್ನಿ ಅನ್ನಪೂರ್ಣೆ. ಅವರನ್ನು ರಂಗನಾಥಸ್ವಾಮಿಯ ಪಾದಕ್ಕೆ ಕಳುಹಿಸುತ್ತಿದ್ದೇನೆ. ನನ್ನ ರಾಜಕೀಯ ಜೀವನದ ಪ್ರತಿಯೊಂದು ಹಂತದಲ್ಲೂ ಅವರು ನನಗೆ ಅಪಾರ ಬೆಂಬಲ ನೀಡಿದರು. ಅವರ ಸಹಕಾರ ಮತ್ತು ತ್ಯಾಗವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ,” ಎಂದು ಭಾವುಕರಾದರು.

ಕುಟುಂಬದವರ ನಿರ್ಧಾರದಂತೆ ಚೆನ್ನಮ್ಮ ಅವರ ಸಮಾಧಿಯನ್ನು ರಂಗನಾಥಸ್ವಾಮಿಯ ಸಾನಿಧ್ಯದಲ್ಲೇ ನಿರ್ಮಿಸಲಾಗಿದೆ ಎಂದು ಅವರು ತಿಳಿಸಿದರು. ಈ ಹಿಂದೆ ಬೇರೆ ಸ್ಥಳದಲ್ಲಿ ಸಮಾಧಿ ಮಾಡುವ ಆಲೋಚನೆ ಇದ್ದರೂ, ಮಕ್ಕಳು ಮತ್ತು ಕುಟುಂಬದವರ ಅಭಿಪ್ರಾಯದಂತೆ ಈ ಸ್ಥಳವನ್ನು ಆಯ್ಕೆ ಮಾಡಲಾಗಿದೆ ಎಂದರು.
“ನಾನು ದೇಶದ ಪ್ರಧಾನಿಯಾಗುವ ಮಟ್ಟಕ್ಕೆ ಬೆಳೆಯಲು ರಂಗನಾಥಸ್ವಾಮಿಯ ಆಶೀರ್ವಾದ ಹಾಗೂ ನನ್ನ ಪತ್ನಿಯ ಬೆಂಬಲವೇ ಪ್ರಮುಖ ಕಾರಣ. ನನ್ನ ಪ್ರತಿಯೊಂದು ಹೆಜ್ಜೆಯಲ್ಲೂ ಅವರು ನನಗೆ ಶಕ್ತಿ ತುಂಬಿದರು. ಇಂದು ಅವರನ್ನು ಅಗಲುತ್ತಿರುವುದು ತುಂಬಾ ನೋವುಂಟು ಮಾಡಿದೆ,” ಎಂದು ದೇವೇಗೌಡರು ಗದ್ಗದಿತರಾಗಿ ಹೇಳಿದರು.

ಮಳೆಯ ಆತಂಕ ವ್ಯಕ್ತವಾಗಿದ್ದರೂ ಯಾವುದೇ ಅಡಚಣೆ ಇಲ್ಲದೆ ಅಂತ್ಯಕ್ರಿಯೆ ನೆರವೇರಿತು. ಈ ವೇಳೆ ಕುಟುಂಬಸ್ಥರು, ರಾಜಕೀಯ ಮುಖಂಡರು, ಅಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಅಂತಿಮ ನಮನ ಸಲ್ಲಿಸಿದರು.
-
State10 hours agoಚೆನ್ನಮ್ಮ ಅಂತ್ಯಕ್ರಿಯೆ: ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಲು ಪ್ರಜ್ವಲ್ ರೇವಣ್ಣಗೆ ಅನುಮತಿ
-
Kodagu6 hours agoಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಕುಶಾಲನಗರದ ಐಎಎಸ್ ಅಧಿಕಾರಿ ಎಸ್.ಎಸ್. ನಕುಲ್ ನೇಮಕ
-
Hassan4 hours agoಪಂಚಭೂತಗಳಲ್ಲಿ ಲೀನರಾದ ಚೆನ್ನಮ್ಮ ದೇವೇಗೌಡ
-
Chikmagalur24 hours agoಆನ್ಲೈನ್ ಟ್ರೇಡಿಂಗ್ ಹೆಸರಿನಲ್ಲಿ ₹14.67 ಲಕ್ಷ ವಂಚನೆ: ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲು
-
National10 hours agoಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ
-
Politics3 hours agoಬಿಡದಿ ಟೌನ್ಶಿಪ್ ಭೂಸ್ವಾಧೀನಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್; PIL ವಜಾ
-
Kodagu22 hours ago“ಭಾಗಮಂಡಲ ಕಾಮಗಾರಿಗೆ ₹3 ಕೋಟಿ: ಪೊನ್ನಣ್ಣ ಕೋರಿಕೆಗೆ ಅನುದಾನ”
-
Kodagu6 hours agoಇಂದಿನಿಂದ ಪುಷ್ಯ ಮಳೆ : ಉತ್ತಮ ಮಳೆ ನಿರೀಕ್ಷೆಯಲ್ಲಿ ಜಿಲ್ಲೆಯ ರೈತರು



