Connect with us

Chamarajanagar

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಚೇರ್ ನೀಡಿದ ಗ್ರಾಪಂ ಸದಸ್ಯ ಗುರುಲಿಂಗಯ್ಯ

Published

on

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ-2 ಗೆ ಗ್ರಾಮ ಪಂಚಾಯತಿ ಸದಸ್ಯ ಗುರುಲಿಂಗಯ್ಯ ಕೆಸ್ತೂರು ಗ್ರಾಮ ಪಂಚಾಯತಿ 15 ನೇ ಹಣಕಾಸಿನಲ್ಲಿ 30 ಚೇರ್ ಗಳನ್ನು ಒದಗಿಸಿಕೊಟ್ಟಿದ್ದಾರೆ.

ವಿದ್ಯಾರ್ಥಿಗಳು ಚೇರ್ ನಲ್ಲಿ ಕೂತು ಅಧ್ಯಾಯನ ಮಾಡಲಿ. ವಿದ್ಯಾರ್ಥಿಗಳ ಹಿತಾ ದೃಷ್ಟಿಯಿಂದ ಚೇರ್ ಗಳನ್ನು ಪಂಚಾಯತಿ ಅನುದಾನದಲ್ಲಿ ನೀಡಲಾಗಿದೆ ಎಂದರು.

ಈ ಶಾಲೆಯು ಪರಿಶಿಷ್ಟರ ಕಾಲೋನಿಯಲ್ಲಿದ್ದು ಶೋಷಿತರ ಮಕ್ಕಳು ಚೆನ್ನಾಗಿ ಓದಬೇಕು ಅವರಿಗೆ ಯಾವುದೇ ಮೂಲಭೂತ ಸಮಸ್ಯೆಗಳು ಇರಬಾರದು ಡಾ ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ನಾವೆಲ್ಲರೂ ಅವರ ಮಾರ್ಗದಲ್ಲಿ ನಡೆಯಬೇಕಿದೆ. ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಂತ ಭಿನ್ನವಾಗಿರಬೇಕು.‌ ಪೋಷಕರು ದಯವಿಟ್ಟು ನಿಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಸರ್ಕಾರಿ ಶಾಲೆಗಳನ್ನು ಉಳಿಸಬೇಕಾಗಿದೆ ಖಾಸಗಿ ಶಾಲೆಗಿಂತ ಸರ್ಕಾರಿ ಶಾಲೆಯಲ್ಲಿಯೇ ಗುಣಮಟ್ಟ ಶಿಕ್ಷಣವನ್ನು ನೀಡಲಾಗುತ್ತದೆ.

ನಮಗೆ ಸಹಕಾರ ನೀಡಿದ ಗ್ರಾಮಪಂಚಾಯತಿ ಅಧ್ಯಕ್ಷಕರಿಗೆ, ಎಲ್ಲಾ ಸದಸ್ಯರಿಗೆ ಹಾಗೂ ಅಭಿವೃದ್ಧಿ ಅಧಿಕಾರಿ ಮಹದೇವಸ್ವಾಮಿ ಸಹಕಾರದಿಂದ ಈ ಶಾಲೆಗೆ ಚೇರ್ ಗಳನ್ನು ನೀಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಕೆ.ಚಿನ್ನಸ್ವಾಮಿ, ಮುಖ್ಯೋಪಾಧ್ಯಾಯರಾದ ಸಿದ್ದರಾಜು, ಶಿಕ್ಷಕರಾದ ನಂಜಯ್ಯ, ರಾಜೇಶ್, ಯುವ ಮುಖಂಡ ಮನೋಹರ್ ಹಾಗೂ ಇತರರು ಹಾಜರಿದ್ದರು.

Continue Reading

Chamarajanagar

ಬೇಗೂರು ಕರ್ನಾಟಕ ಗ್ರಾಮೀಣ ಬ್ಯಾಂಕ್ ಮುಂದೆ ರೈತ ಸಂಘಟನೆಯಿಂದ ಪ್ರತಿಭಟನೆ

Published

on

ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರು ಕರ್ನಾಟಕ ಗ್ರಾಮೀಣ ಬ್ಯಾಂಕ್ ನಿಂದ ರೈತರಿಗೆ ಸಾಲ ವಸೂಲಿಗೆ ಬಗ್ಗೆ ನೋಟಿಸ್ ನೀಡಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಬ್ಯಾಂಕ್ ಮುಂಭಾಗ ರೈತ ಸಂಘ ಗಳಿಂದ ಪ್ರತಿಭಟನೆ

ಬೇಗೂರಿನ ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳು ಸಾಲ ಪಡೆದ ರೈತರಿಗೆ ನೋಟಿಸ್ ನೀಡಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿ ಗಳು ಬೇಗೂರಿನ ಕರ್ನಾಟಕ ಕಾವೇರಿ ಗ್ರಾಮೀಣ ಬ್ಯಾಂಕ್ ಮುಂಭಾಗ ಪ್ರತಿಭಟನೆ ನಡೆಸಿದರು. ಬೇಗೂರಿನ ಕರ್ನಾಟಕ ಕಾವೇರಿ ಗ್ರಾಮೀಣ ಬ್ಯಾಂಕ್ ಮುಂದೆ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.

ರೈತರಿಗೆ ಹಣ ಕಟ್ಟುವಂತೆ ನೋಟಿಸ್ ನೀಡಿ ಕಿರುಕುಳ

ಈ ಪ್ರತಿಭಟನೆ ವೇಳೆ ಮಾತನಾಡಿದ ರೈತ ಸಂಘದ ತಾಲೂಕು ಅಧ್ಯಕ್ಷ ವೀರನಪುರ ನಾಗಪ್ಪ, ಬೇಗೂರು ಸಮೀಪದ ಬೆಳಚಲವಾಡಿ ಗ್ರಾಮದ ನಂಜುಂಡಸ್ವಾಮಿ ಎಂಬ ರೈತ ಬೇಗೂರು ಕಾವೇರಿ ಗ್ರಾಮೀಣ ಬ್ಯಾಂಕ್ ನಲ್ಲಿ ಬೆಳೆ ಸಾಲ ಪಡೆದಿದ್ದಾರೆ. ಇವರಿಗೆ ಹೆಚ್ಚು ಪ್ರಮಾಣದಲ್ಲಿ ಬಡ್ಡಿ ವಿಧಿಸಿ ಹಣ ಕಟ್ಟುವಂತೆ ನೋಟಿಸ್ ನೀಡಿದ್ದಾರೆ. ಸಕಾಲಕ್ಕೆ ಮಳೆ ಬೀಳದೆ ರೈತರು ಬೆಳೆದ ಬೆಳೆಗಳು ಹಾನಿಗೊಳಗಾಗಿದೆ. ಜೊತೆಗೆ ಇದೆ ಸಮಯಕ್ಕೆ ಈ ಬ್ಯಾಂಕಿನವರು ಸಾಲ ವಸೂಲಿಗೆ ನೋಟಿಸ್ ನೀಡಿ ರೈತರಿಗೆ ಕಿರುಕುಳ ನೀಡುತ್ತಿದ್ದಾರೆ. ಬೆಳೆದ ಬೆಳೆಗೆ ಬೆಲೆ ಸಿಗದೆ ರೈತ ಆತ್ಮಹತ್ಯೆ ದಾರಿ ಹಿಡಿಯುವಂತಾಗಿದೆ. ಇಂತಹ ಸಂದರ್ಭದಲ್ಲಿ ಬ್ಯಾಂಕ್ ನವರು ನೋಟಿಸ್ ನೀಡುವ ಮೂಲಕ ಅವರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆಸಮಾಧಾನ ವ್ಯಕ್ತಪಡಿಸಿದರು.

ನಂತರ ಬೇಗೂರಿನ ಕರ್ನಾಟಕ ಗ್ರಾಮೀಣ ಬ್ಯಾಂಕ್.ವ್ಯವಸ್ಥಾಪಕರು ಈ ವಿಚಾರವಾಗಿ ಮುಖ್ಯ ಕಚೇರಿಯ ಗಮನಕ್ಕೆ ತಂದು ಬಡ್ಡಿ ಕಡಿಮೆ ಮಾಡಿಸಲು ಪ್ರಯತ್ನ ಪಡಲಾಗುವುದು ಎಂದು ಭರವಸೆ ನೀಡಿದರು.

ರೈತರ ನೆರವಿಗೆ ನಿಲ್ಲದ ಸರ್ಕಾರಗಳು

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈ ಕಟ್ಟಿ ಕುಳಿತು ಅಧಿಕಾರಿಗಳ ಮೂಲಕ ಸಾಲ ವಸೂಲಿಗೆ ಕುಮ್ಮಕ್ಕು ನೀಡುತ್ತಿವೆ. ಆದ್ದರಿಂದ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ನೊಂದ ರೈತರ ನೆರವಿಗೆ ನಿಲ್ಲಬೇಕು ಹಾಗೂ ಸಾಲದ ಬಡ್ಡಿ ಮನ್ನಾ ಮಾಡಿ ಕೇವಲ ಸಾಲದ ಹಣವನ್ನು ಮಾತ್ರ ಕಟ್ಟಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾಕಾರರ ಮನ ವಲಿಸಿದ ಲೀಡ್ ಬ್ಯಾಂಕ್ ವ್ಯವಸ್ಥಾಪಕಿ ಸುರೇಖಾ

ಈ ಸಮಸ್ಯೆ ಬಗ್ಗೆ ಮುಖ್ಯ ಕಚೇರಿಗೆ ಗಮನಕ್ಕೆ ತಂದು ಬಡ್ಡಿಕಡಿಮೆ ಮಾಡಲುಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು. ನಂತರ ಪ್ರತಿಭಟನ ಮಾಡುತಿದ್ದ ರೈತರು ಪ್ರತಿಭಟನೆ ಯನ್ನು ಕೈಬಿಟ್ಟರು.

ಈ ಸಂದರ್ಭದಲ್ಲಿ ,ಸಂಘದ ಜಿಲ್ಲಾ ಉಪಾಧ್ಯಕ್ಷ ಮಲಯ್ಯನಪುರ ಪುಟ್ಟೇಗೌಡ, ಹಸಿರು ಸೇನೆ ಅಧ್ಯಕ್ಷ ಕಮರಹಳ್ಳಿ ಪ್ರಸಾದ್, ಕಾರ್ಯದರ್ಶಿ ಯತವನ ಹಳ್ಳಿ ಸಿದ್ದರಾಜು, ಸೋಮಹಳ್ಳಿ ನವೀನ್, ಶಿವಕುಮಾರ್, ಹಕ್ಕಲಪುರ ಸ್ವಾಮಿ, ಪಡಗೂರು ಮಹದೇವ ಸ್ವಾಮಿ ಸೇರಿದಂತೆ ಹಲವು ಮಂದಿ ರೈತರು ಹಾಜರಿದ್ದರು

Continue Reading

Chamarajanagar

ಎಸ್ಎಸ್ಎಲ್ ಸಿ ಪತ್ರಿಕೆ-2 ಫಲಿತಾಂಶದಲ್ಲಿ ಕಬ್ಬಹಳ್ಳಿ ಸರ್ಕಾರಿ ಬಾಲಕರ ಪ್ರೌಢಶಾಲೆ ತಾಲೂಕಿಗೆ ಪ್ರಥಮ ಸ್ಥಾನ

Published

on

ಗುಂಡ್ಲುಪೇಟೆ: ಎಸ್ಎಸ್ಎಲ್ ಸಿ ಪತ್ರಿಕೆ-2 ಫಲಿತಾಂಶದಲ್ಲಿ ಸರ್ಕಾರಿ ಪ್ರೌಢಶಾಲೆಗಳ ಪೈಕಿ ಕಬ್ಬಹಳ್ಳಿ ಸರ್ಕಾರಿ ಬಾಲಕರ ಪ್ರೌಢಶಾಲೆ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದೆ.

ಕಬ್ಬಹಳ್ಳಿ ಶಾಲೆಯಲ್ಲಿ ಒಟ್ಟು 40 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, 35 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.6 ವಿದ್ಯಾರ್ಥಿಗಳು ಅತ್ಯುನ್ನತ ದರ್ಜೆಯಲ್ಲಿ ತೇರ್ಗಡೆಯಾಗಿದ್ದು,
ರಜತ್ 587 ಅಂಕಗಳನ್ನು ಗಳಿಸಿ ಶಾಲೆಗೆ ಮೊದಲ ಸ್ಥಾನ ಗಳಿಸಿದ್ದಾನೆ

ಒಟ್ಟು 87%ಫಲಿತಾಂಶ ಈ ಶಾಲೆಗೆ ಬಂದಿದ್ದು, ಈ ಫಲಿತಾಂಶ ಉತ್ತಮವಾಗಿ ಮೂಡಿ ಬರಲು ಶಿಕ್ಷಕರ ಕಾರ್ಯ ಹೆಚ್ಚಿನದ್ದಾಗಿದೆ. ಪ್ರತಿ ದಿನ ಸಂಜೆ ತರಗತಿಗಳನ್ನು ತೆಗೆದುಕೊಂಡು ಉತ್ತಮ ರೀತಿಯ ಬೋಧನೆ ಮಾಡಿ ವಿದ್ಯಾರ್ಥಿಗಳ ಸಾಧನೆಗೆ ಶಿಕ್ಷಕರ ಶ್ರಮ ಬಹುಮುಖ್ಯವಾಗಿದೆ. ಶಾಲೆಯ ಮುಖ್ಯ ಶಿಕ್ಷಕರಾದ ಉಮೇಶ್ ಸಹ ಶಿಕ್ಷಕರಾದ ಪ್ರಶಾಂತ್, ವಿಜಯ್ ಕುಮಾರ್, ನಾಗೇಶ್, ಚೈತನ್ಯ, ಕವಿತಾ, ಶೃತಿ ಈ ಎಲ್ಲಾ ಶಿಕ್ಷಕರ ಶ್ರಮ ಸಾರ್ಥಕವಾಗಿದೆ. ಗ್ರಾಮಸ್ಥರು ಮತ್ತು ಪೋಷಕರ ಸಹಕಾರವೂ ಕಾರಣವಾಗಿದೆ.

ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ ಕಬ್ಬಹಳ್ಳಿಯಲ್ಲಿನ ವಿಧ್ಯಾರ್ಥಿಗಳ ಫಲಿತಾಂಶದಲ್ಲಿ 87%. ಸಮಾಜ ಕಲ್ಯಾಣ ಇಲಾಖೆಯ ಬಾಲಕರ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಕ್ಕೆ 87% ಲಭಿಸಿದೆ.15 ವಿದ್ಯಾರ್ಥಿಗಳಲ್ಲಿ 13 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು .3 ವಿದ್ಯಾರ್ಥಿಗಳು ಅತ್ಯುನ್ನತ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರನ್ನು ಇಲಾಖೆಯ ಸಹಾಯಕ ನಿರ್ದೇಶಕರಾದ ಮೋಹನ್ ಕುಮಾರ್, ಮೇಲ್ವಿಚಾರಕರಾದ ಪೃಥ್ವಿರಾಜ್‌ ಎಚ್ ಎಮ್.ಹಾಗೂ ಸಿಬ್ಬಂದಿ ಮತ್ತು ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.

Continue Reading

Chamarajanagar

ಎಸ್‌ಡಿವಿಎಸ್‌  ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಆಚರಣೆ

Published

on

ಯಳಂದೂರು: ತಾಲೂಕು ಕಾನೂನುಗಳ ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನ ಸೊಸೈಟಿ ಚಾಮರಾಜನಗರ ವತಿಯಿಂದ ಪಟ್ಟಣದ ಎಸ್ ಡಿ ವಿ ಎಸ್ ವಿದ್ಯಾಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಯಳಂದೂರಿನ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಸುಜಾತಾ ರವರು ಉದ್ಘಾಟಿಸಿ ಮಾತನಾಡಿದರು.

ಮಹೇಶ್ ರವರು ಯೋಜನಾ ನಿರ್ದೇಶಕರು ಬಾಲಕಾರ್ಮಿಕ ಯೋಜನಾ ಸೊಸೈಟಿ ಚಾಮರಾಜನಗರ, ಹಿರಿಯ ಕಾರ್ಮಿಕ ನಿರೀಕ್ಷಕ ಪ್ರಸಾದ್ , ಸಿದ್ದಶೆಟ್ಟಿ ಮಕ್ಕಳ ರಕ್ಷಣಾ ಘಟಕ ಚಾಮರಾಜನಗರ, ಮುಖ್ಯ ಶಿಕ್ಷಕ ವೀರಭದ್ರ ಸ್ವಾಮಿ, ಶಿಕ್ಷಕರಾದ ಶಿವಮೂರ್ತಿ ಗುಂಬಳ್ಳಿ ಬಸವರಾಜು ಮಹದೇವ ಸೇರಿದಂತೆ ಇತರರು ಇದ್ದರು.

Continue Reading

Trending

error: Content is protected !!