Connect with us

Mandya

ಕಾಡು ಹಂದಿ ದಾಳಿಗೆ ವ್ಯಕ್ತಿ ದುರ್ಮರಣ : ಮಿಮ್ಸ್ ಶವಗಾರದ ಎದುರು ಪ್ರತಿಭಟನೆ

Published

on

ಮಂಡ್ಯ :- ಕಾಡು ಹಂದಿ ದಾಳಿ ಮಾಡಿದ ಹಿನ್ನೆಲೆಯಲ್ಲಿ ವ್ಯಕ್ತಿ ಯೊಬ್ಬ ಸಾವನಪ್ಪಿದ ಘಟನೆ ಮಂಡ್ಯ ನಾಗಮಂಗಲ ರಸ್ತೆಯ ಚಿಕ್ಕ ಯಗಟಿ ಬಳಿ ನಡೆದಿದೆ.

ಚಿಂದಗಿರಿದೊಡ್ಡಿ ಗ್ರಾಮದ ಪುಟ್ಟಸ್ವಾಮಿರ ಮಗ ಶಿವ (48) ಸಾವನಪ್ಪಿದ ದುರ್ದೈವಿ ಯಾಗಿದ್ದಾನೆ.

ಗುರುವಾರ ಸಂಜೆ ವೇಳೆ ಚಿಕ್ಕಯಗಟಿ ಬಳಿ ಮಂಡ್ಯ- ನಾಗಮಂಗಲ ರಸ್ತೆಯಲ್ಲಿ ಬೈಕಿನಲ್ಲಿ ಬರುತ್ತಿದ್ದಾಗ ಏಕಾಏಕಿ ಕಾಡು ಹಂದಿ ದಾಳಿ ಮಾಡಿದೆ, ಕೆಳಕ್ಕೆ ಬಿದ್ದ ಶಿವು ಎಡ ತೊಡೆ ಮತ್ತು ಮರ್ಮಾಂಗಕ್ಕೆ ಗುದ್ದಿದ ಪರಿಣಾಮ ತೀವ್ರ ರಕ್ತಸ್ರಾವಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ನಾಗಮಂಗಲ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮಿಮ್ಸ್ ಆಸ್ಪತ್ರೆಗೆ ರವಾನಿಸಿದ್ದರು
ಮರಣೋತ್ತರ ಪರೀಕ್ಷೆ ನಡೆಯುವ ಮಿಮ್ಸ್ ಶವಗಾರದ ಬಳಿ ಶುಕ್ರವಾರ ಬೆಳಿಗ್ಗೆ ಜಮಾಯಿಸಿದ ಮೃತನ ಸಂಬಂಧಿಕರು ಹಾಗೂ ಚಿಂದಗಿರಿ ದೊಡ್ಡಿ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು.
ಸುದ್ದಿ ತಿಳಿದ ಶಾಸಕ ರವಿಕುಮಾರ ಗಣಿಗ ಸ್ಥಳಕ್ಕೆ ಬರುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮರಣೋತ್ತರ ಪರೀಕ್ಷೆಗೆ ಅವಕಾಶ ಮಾಡಿ ಕೊಟ್ಟರು.

ಮಧ್ಯಾಹ್ನದ ವೇಳೆಗೆ ಶಾಸಕರು ಆಗಮಿಸಿದಾಗ ಅಲೆಮಾರಿ ಬುಡಕಟ್ಟು ಮಹಾಸಭಾ ಮತ್ತು ಮಂಡ್ಯ ಜಿಲ್ಲಾ ಉಳುವ ಸಮಾಜದ ಆಶ್ರಯದಲ್ಲಿ ಕೆಲ ಕಾಲ ಪ್ರತಿಭಟನೆ ನಡೆಸಿದ ಸಂಬಂಧಿಕರು ಸೂಕ್ತ ಪರಿಹಾರ ದೊರಕಿಸಿ ಕೊಡುವಂತೆ ಒತ್ತಾಯಿಸಿದರು.
ಅಲೆಮಾರಿ ಸಮುದಾಯಕ್ಕೆ ಸೇರಿದ ಮೃತ ವ್ಯಕ್ತಿಯ ಕುಟುಂಬಕ್ಕೆ ಆಸ್ತಿ ಇಲ್ಲ, ಕೂಲಿ ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದರು, ಆದರೆ ದುರಂತದಲ್ಲಿ ಮನೆ ನಿರ್ವಹಣೆ ಮಾಡುತ್ತಿದ್ದ ಶಿವು ಸಾವನಪ್ಪಿರುವುದರಿಂದ ಕುಟುಂಬ ಬೀದಿಗೆ ಬಿದ್ದಂತಾಗಿದೆ, ಅವರ ಬದುಕು ಮೂರಾಬಟ್ಟೆಯಾಗಿದೆ ಎಂದು ಪ್ರತಿಭಟನಾಕಾರರು ಹೇಳಿದರು.

ಮೃತನ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಬೇಕು, ಕುಟುಂಬದ ಜೀವನ ಭದ್ರತೆಗಾಗಿ ಮೃತರ ಪುತ್ರ ಶ್ರೀನಿವಾಸ್ ಗೆ ಖಾಯಂ ಸರ್ಕಾರಿ ಉದ್ಯೋಗ ನೀಡಬೇಕು, ಮೃತನ ಪತ್ನಿ ಅನಾರೋಗ್ಯ ಪೀಡಿತರಾಗಿದ್ದು ಇವರಿಗೆ ಮಾಸಿಕ ಪಿಂಚಣಿ ನೀಡಬೇಕು ಎಂದು ಒತ್ತಾಯಿಸಿದರು.

ಮೃತರ ಸಂಬಂಧಿಕರ ಬೇಡಿಕೆಗೆ ಸ್ಪಂದಿಸಿದ ಶಾಸಕ ರವಿಕುಮಾರ್ ಗಣಿಗ ಅರಣ್ಯ ಇಲಾಖೆ ವತಿಯಿಂದ 15 ಲಕ್ಷ ಪರಿಹಾರ ನೀಡಲಾಗುವುದೆಂದು ಘೋಷಿಸಿದರು.
ಪರಿಹಾರದ ಹಣವನ್ನು ಮೂರು ನಾಲ್ಕು ದಿನಗಳ ನಂತರ ನೀಡಲಾಗುವುದು, ಖಾಯಂ ಸರಕಾರಿ ಉದ್ಯೋಗ ನೀಡಲು ಅವಕಾಶ ಇಲ್ಲದ ಪರಿಣಾಮ, ಯಾವುದಾದರೂ ಸರ್ಕಾರಿ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಉದ್ಯೋಗ ದೊರಕಿಸಿ ಕೊಡುವ ಭರವಸೆ ನೀಡಿದರು.

ಅಷ್ಟೇ ಅಲ್ಲದೆ ಮೃತನ ಕುಟುಂಬಕ್ಕೆ ವೈಯಕ್ತಿಕವಾಗಿ 50 ಸಾವಿರ ಪರಿಹಾರ ನೀಡಿದರು. ಇದೇ ವೇಳೆ ಸಹಾಯಕ ಅರಣ್ಯ ಅಧಿಕಾರಿ ಶಿವರಾಮು ಹಾಜರಿದ್ದರು.
ಅಖಿಲ ಕರ್ನಾಟಕ ಕುಳುವ ಮಹಾಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕಿರಣ್ ಕುಮಾರ್ ಕೊತ್ತಗೆರೆ, ಗೌರವಾಧ್ಯಕ್ಷ ರಾಮ ಶೆಟ್ಟಿ ಹನಕೆರೆ, ರಾಜ್ಯ ಉಪಾಧ್ಯಕ್ಷ ವೆಂಕಟೇಶ್ ರಾಮನಗರ, ಕೃಷ್ಣಕುಮಾರ್ ಗಣಂಗೂರು, ರವಿ ಕೊಡಗಹಳ್ಳಿ, ಟೆಂಪೋ ರಾಮಕೃಷ್ಣ, ಸಂದೀಪ್ ಕೆ. ವಿ ನೇತೃತ್ವ ವಹಿಸಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಜನಮಿತ್ರ ಫಲಶೃತಿ: ಹೆಬ್ಬಾಡಿಹುಂಡಿ ಗ್ರಾಮದ ಸ್ಮಶಾನ ಜಾಗದ ರಸ್ತೆ ಬೇಲಿಗೆ ಸಿಗ್ತು ಉತ್ತರ

Published

on

ಮಂಡ್ಯ: ಪೂರ್ವಿಕರ ಕಾಲದಿಂದಲೂ ಗ್ರಾಮದ ಸ್ಮಶಾನ, ಧನ ಕರುಗಳು ಕುಡಿಯಲು ಕೆರೆಕಟ್ಟೆ ಹಾಗೂ ಜಮೀನುಗಳಿಗೆ ತೆರಳಲು ಬಳಸುತ್ತಿದ್ದ ರಸ್ತೆಗೆ ಅಡ್ಡಲಾಗಿ ರೈತನೋರ್ವ ತಂತಿ ಬೇಲಿ ಹಾಕಿಕೊಂಡಿದ್ದಕ್ಕೆ ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ಮದ್ಯೆದಲ್ಲಿಯ ಮೃತನ ಶವ ಸುಟ್ಟ ಘಟನೆಗೆ ಸಂವಂಧಿಸಿದಂತೆ ಜನಮಿತ್ರ ಪತ್ರಿಕೆ ಹಾಗೂ ಡಿಜಿಟಲ್ ವರದಿಗೆ ಫಲಶೃತಿ ದೊರೆತಿದೆ.

ಜನಮಿತ್ರ ವರದಿಯಿಂದ ಎಚ್ಚತ್ತ ತಾಲ್ಲೂಕು ಆಡಳಿತ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಗ್ರಾಮಕ್ಕೆ ದೌಡಾಯಿಸಿ, ರಸ್ತೆಯ ಇಕ್ಕೆಲಗಳ ಇಬ್ಬರೂ ರೈತರಿಂದ ಹತ್ತು, ಹತ್ತು ಅಡಿ ಜಾಗವನ್ನು ಸ್ಮಶಾಬದ ರಸ್ತೆಗೆ ಬಿಡಿಸಿ ಸಫಲತೆ ಕಂಡಿದೆ‌.

ಜನಮಿತ್ರ ವರದಿಯಿಂದ ಎಚ್ಚೆತ್ತ ತಾಲ್ಲೂಕು ಆಡಳಿತ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ನೇತೃತ್ವದಲ್ಲಿ ಗ್ರಾಮಕ್ಕೆ ತೆರಳಿದ್ದ ಅಧಿಕಾರಿಗಳ ತಂಡ, ಸ್ಮಶಾನ ಹಾಗೂ ಜನ ಜಾನುವಾರುಗಳ ಕುಡಿಯುವ ನೀರಿಗಾಗಿ ತೆರಳುವ ರಸ್ತೆಯ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ್ದಾರೆ‌.

ರಸ್ತೆಯ ಎರಡೂ ಬದಿಯಲ್ಲಿನ ರೈತರಾದ ಅಂಧಾನಿಗೌಡ ಹಾಗೂ ಯಶೋಧಮ್ಮ ರವರಿಂದ ತಲಾ ಹತ್ತು ಹತ್ತು ಅಡಿ ಜಾಗವನ್ನು ಸ್ಮಶಾನದ ರಸ್ತೆಗೆ ಬಿಟ್ಟುಕೊಡುವಂತೆ ಮನವಲೈಸಿದ್ದಾರೆ.

ತಾಲ್ಲೂಕು ಆಡಳಿತದ ಮದ್ಯಸ್ಥಿಕೆಯಿಂದಾಗಿ ಇದೀಗ ಹೆಬ್ಬಾಡಿಹುಂಡಿ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದು, ಜನಮಿತ್ರ ಪತ್ರಿಕೆ ಹಾಗೂ ಜನಮಿತ್ರ ಡಿಜಿಜಿಟಲ್ ನ್ಯೂಸ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

Continue Reading

Mandya

ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ : ಸಚಿವ ಚೆಲುವರಾಯಸ್ವಾಮಿ

Published

on

ನಾಗಮಂಗಲ : ಸರ್ಕಾರವು ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಆ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಸಚಿವ ಚೆಲುವರಾಯಸ್ವಾಮಿ ತಿಳಿಸಿದರು.

ಅವರು ಪಟ್ಟಣದ ಕಾಂಗ್ರೆಸ್ ಕಚೇರಿಯ ಮುಂಬಾಗದಲ್ಲಿ ಅಂಗವಿಕಲರಿಗೆ 2024 -25 ನೇ ಸಾಲಿನ ಶಾಸಕರ ಪ್ರದೇಶ ಅಭಿವೃದ್ಧಿ ನಿಧಿಯಿಂದ ತ್ರಿಚಕ್ರ ವಾಹನ ಸಮಾರಂಭದಲ್ಲಿ ಭಾಗವಹಿಸಿ ಸುಮಾರು 25 ಫಲಾನುಭವಿಗಳಿಗೆ ವಾಹನ ವಿತರಣೆ ಮಾಡುತ್ತ ಮಾತನಾಡಿದರು.

ಅಂಗವಿಕಲರು ದಿನನಿತ್ಯದ ತಮ್ಮ ವ್ಯವಹಾರಿಕ ಕಾರ್ಯನಿಮಿತ್ತ ಕೆಲಸಗಳಿಗೆ ತ್ರಿಚಕ್ರ ವಾಹನ ಬಳಸುವ ಮುಖಾಂತರ ಸರ್ಕಾರದ ಇಂತಹ ಸೌವಲತ್ತುಗಳನ್ನು ಸದುಪಯೋಗ ಮಾಡಿಕೊಂಡು ಇತರೆ ಚಟುವಟಿಕೆಗಳಲ್ಲಿ ಈ ವಾಹನಗಳನ್ನು ಬಳಸದಂತೆ ತಮ್ಮ ಸ್ವಂತ ವಾಹನಗಳಾಗಿ ಬಳಸಿಕೊಳ್ಳುವ ಮುಖಾಂತರ ಸರ್ಕಾರದ ಯೋಜನೆಗಳನ್ನು ಪಡೆದು ಅನುಕೂಲ ಮಾಡಿಕೊಳ್ಳುವಂತೆ ಈ ಸಂದರ್ಭದಲ್ಲಿ ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಜೇಶ್ ಕೃಷಿ ವಿವಿ ಆಡಳಿತ ಮಂಡಳಿ ನಿರ್ದೇಶಕರಾದ ದಿನೇಶ್. ಎಚ್ ಟಿ ಕೃಷ್ಣೆ ಗೌಡ. ಪುರಸಭಾ ಅಧ್ಯಕ್ಷರು ಗಣ್ಯರು ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.

Continue Reading

Mandya

ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ತಿಳಿಸಿ

Published

on

ಮಂಡ್ಯ : ಈ ಚಿತ್ರದಲ್ಲಿರುವ ವ್ಯಕ್ತಿ ಇಂದು (ಮಾ.14) ರಂದು ಮಂಡ್ಯ ರೈಲು ನಿಲ್ದಾಣದಲ್ಲಿ ರೈಲುಗಾಡಿಯಿಂದ ಬಿದ್ದು ಗಾಯಗೊಂಡಿರುತ್ತಾರೆ.

ಸದರಿಯವರ ಹೆಸರು ಮತ್ತು ವಿಳಾಸ ಪತ್ತೆಯಾಗಿರುವುದಿಲ್ಲ ಯಾವುದಾದರೂ ಪೊಲೀಸ್ ಠಾಣೆಯಲ್ಲಿ ಮನುಷ್ಯ ಕಾಣೆಯಾದ ಪ್ರಕರಣ ದಾಖಲಾಗಿದ್ದಲ್ಲಿ, ಅಥವ ಇವರ ಬಗ್ಗೆ ಮಾಹಿತಿ ಗೊತ್ತಿದ್ದಲ್ಲಿ ಮಾಹಿತಿ ನೀಡಲು
ರೈಲ್ವೆ ಹೊರ ಉಪ ಠಾಣೆ ಮಂಡ್ಯ ಕೋರಿದೆ.

Continue Reading

Trending

error: Content is protected !!