Mandya
ಕಾವೇರಿ ಪ್ರಾಧಿಕಾರ ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ

ಮಂಡ್ಯ: ರೈತ ರಕ್ಷಣಾ ಸಮಿತಿ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಒಗ್ಗೂಡಿ ಕಾವೇರಿ ಪ್ರಾಧಿಕಾರದ ಆದೇಶವನ್ನು ವಿರೋಧಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ಪ್ರತಿಭಟನೆ ನಡೆಸಿದರು,
ನಗರದ ಸರ್ ಎಂ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಮುಂದುವರಿದ ಪ್ರತಿಭಟನೆಯಲ್ಲಿ ಜಿಲ್ಲಾ ರೈತ ರಕ್ಷಣಾ ಸಮಿತಿ ಕಾರ್ಯದರ್ಶಿ ಸುನಂದ ಜಯರಾಮ್ ಮಾತನಾಡಿ, ರಾಜ್ಯ ಸರ್ಕಾರ ನಾಲೆಯಲ್ಲಿ ನೀರು ಹರಿಸುವ ಕೆಲಸ ಮಾಡಲಿಲ್ಲ. ಕುಡಿಯಲಿಕ್ಕೆ ಆಗಲಿ ಜನ- ಜನ ಜಾನುವಾರುಗಳಿಗೆ ನೀರನ್ನ ಹರಿಸದಿರುವುದು ಖಂಡನೆಯವಾದದ್ದು ಎಂದು ಆರೋಪಿಸಿದರು,
ಪ್ರಸ್ತುತ ಬೆಳೆಯ ನಷ್ಟ ಕಳೆದ ಬಾರಿಯ ಬೆಳೆಯು ಕೂಡ ನಷ್ಟವಾಗಿದ್ದು, ರೈತ ಸಂಕಷ್ಟ ದಿನಗಳನ್ನು ಎದುರಿಸುವಂಥಾಗಿದೆ. ರಾಜ್ಯ ಸರ್ಕಾರ ಬೆಳೆ ನಷ್ಟದ ಪರಿಹಾರವನ್ನು ಕೊಡಬೇಕಾಗಿದೆ ಎಂದು ಅವರು ಆಗ್ರಹಿಸಿದರು,
ಪ್ರತಿಭಟನೆಯಲ್ಲಿ ಮುಖಂಡರಾದ ಕೆ.ಬೋರಯ್ಯ, ಶಂಕರೇಗೌಡ ತುಳಸಿದರ್ ಬೋರ್ವೆಲ್ ನಾರಾಯಣ್, ಮಂಜುನಾಥ್, ಮುದ್ದೇಗೌಡ ಎಂ.ವಿ, ಕೃಷ್ಣ, ಫಯಾಜ್, ಇಂಡುವಾಳು ಬಸವರಾಜು, ನಾರಾಯಣ್ ಸ್ವಾಮಿ ಸೇರಿದಂತೆ ಇತರರು ಭಾಗವಹಿಸಿದ್ದರು.
Mandya
ಜನಮಿತ್ರ ಫಲಶೃತಿ: ಹೆಬ್ಬಾಡಿಹುಂಡಿ ಗ್ರಾಮದ ಸ್ಮಶಾನ ಜಾಗದ ರಸ್ತೆ ಬೇಲಿಗೆ ಸಿಗ್ತು ಉತ್ತರ

ಮಂಡ್ಯ: ಪೂರ್ವಿಕರ ಕಾಲದಿಂದಲೂ ಗ್ರಾಮದ ಸ್ಮಶಾನ, ಧನ ಕರುಗಳು ಕುಡಿಯಲು ಕೆರೆಕಟ್ಟೆ ಹಾಗೂ ಜಮೀನುಗಳಿಗೆ ತೆರಳಲು ಬಳಸುತ್ತಿದ್ದ ರಸ್ತೆಗೆ ಅಡ್ಡಲಾಗಿ ರೈತನೋರ್ವ ತಂತಿ ಬೇಲಿ ಹಾಕಿಕೊಂಡಿದ್ದಕ್ಕೆ ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ಮದ್ಯೆದಲ್ಲಿಯ ಮೃತನ ಶವ ಸುಟ್ಟ ಘಟನೆಗೆ ಸಂವಂಧಿಸಿದಂತೆ ಜನಮಿತ್ರ ಪತ್ರಿಕೆ ಹಾಗೂ ಡಿಜಿಟಲ್ ವರದಿಗೆ ಫಲಶೃತಿ ದೊರೆತಿದೆ.
ಜನಮಿತ್ರ ವರದಿಯಿಂದ ಎಚ್ಚತ್ತ ತಾಲ್ಲೂಕು ಆಡಳಿತ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಗ್ರಾಮಕ್ಕೆ ದೌಡಾಯಿಸಿ, ರಸ್ತೆಯ ಇಕ್ಕೆಲಗಳ ಇಬ್ಬರೂ ರೈತರಿಂದ ಹತ್ತು, ಹತ್ತು ಅಡಿ ಜಾಗವನ್ನು ಸ್ಮಶಾಬದ ರಸ್ತೆಗೆ ಬಿಡಿಸಿ ಸಫಲತೆ ಕಂಡಿದೆ.
ಜನಮಿತ್ರ ವರದಿಯಿಂದ ಎಚ್ಚೆತ್ತ ತಾಲ್ಲೂಕು ಆಡಳಿತ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ನೇತೃತ್ವದಲ್ಲಿ ಗ್ರಾಮಕ್ಕೆ ತೆರಳಿದ್ದ ಅಧಿಕಾರಿಗಳ ತಂಡ, ಸ್ಮಶಾನ ಹಾಗೂ ಜನ ಜಾನುವಾರುಗಳ ಕುಡಿಯುವ ನೀರಿಗಾಗಿ ತೆರಳುವ ರಸ್ತೆಯ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ್ದಾರೆ.
ರಸ್ತೆಯ ಎರಡೂ ಬದಿಯಲ್ಲಿನ ರೈತರಾದ ಅಂಧಾನಿಗೌಡ ಹಾಗೂ ಯಶೋಧಮ್ಮ ರವರಿಂದ ತಲಾ ಹತ್ತು ಹತ್ತು ಅಡಿ ಜಾಗವನ್ನು ಸ್ಮಶಾನದ ರಸ್ತೆಗೆ ಬಿಟ್ಟುಕೊಡುವಂತೆ ಮನವಲೈಸಿದ್ದಾರೆ.
ತಾಲ್ಲೂಕು ಆಡಳಿತದ ಮದ್ಯಸ್ಥಿಕೆಯಿಂದಾಗಿ ಇದೀಗ ಹೆಬ್ಬಾಡಿಹುಂಡಿ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದು, ಜನಮಿತ್ರ ಪತ್ರಿಕೆ ಹಾಗೂ ಜನಮಿತ್ರ ಡಿಜಿಜಿಟಲ್ ನ್ಯೂಸ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
Mandya
ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ : ಸಚಿವ ಚೆಲುವರಾಯಸ್ವಾಮಿ

ನಾಗಮಂಗಲ : ಸರ್ಕಾರವು ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಆ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಸಚಿವ ಚೆಲುವರಾಯಸ್ವಾಮಿ ತಿಳಿಸಿದರು.
ಅವರು ಪಟ್ಟಣದ ಕಾಂಗ್ರೆಸ್ ಕಚೇರಿಯ ಮುಂಬಾಗದಲ್ಲಿ ಅಂಗವಿಕಲರಿಗೆ 2024 -25 ನೇ ಸಾಲಿನ ಶಾಸಕರ ಪ್ರದೇಶ ಅಭಿವೃದ್ಧಿ ನಿಧಿಯಿಂದ ತ್ರಿಚಕ್ರ ವಾಹನ ಸಮಾರಂಭದಲ್ಲಿ ಭಾಗವಹಿಸಿ ಸುಮಾರು 25 ಫಲಾನುಭವಿಗಳಿಗೆ ವಾಹನ ವಿತರಣೆ ಮಾಡುತ್ತ ಮಾತನಾಡಿದರು.
ಅಂಗವಿಕಲರು ದಿನನಿತ್ಯದ ತಮ್ಮ ವ್ಯವಹಾರಿಕ ಕಾರ್ಯನಿಮಿತ್ತ ಕೆಲಸಗಳಿಗೆ ತ್ರಿಚಕ್ರ ವಾಹನ ಬಳಸುವ ಮುಖಾಂತರ ಸರ್ಕಾರದ ಇಂತಹ ಸೌವಲತ್ತುಗಳನ್ನು ಸದುಪಯೋಗ ಮಾಡಿಕೊಂಡು ಇತರೆ ಚಟುವಟಿಕೆಗಳಲ್ಲಿ ಈ ವಾಹನಗಳನ್ನು ಬಳಸದಂತೆ ತಮ್ಮ ಸ್ವಂತ ವಾಹನಗಳಾಗಿ ಬಳಸಿಕೊಳ್ಳುವ ಮುಖಾಂತರ ಸರ್ಕಾರದ ಯೋಜನೆಗಳನ್ನು ಪಡೆದು ಅನುಕೂಲ ಮಾಡಿಕೊಳ್ಳುವಂತೆ ಈ ಸಂದರ್ಭದಲ್ಲಿ ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಜೇಶ್ ಕೃಷಿ ವಿವಿ ಆಡಳಿತ ಮಂಡಳಿ ನಿರ್ದೇಶಕರಾದ ದಿನೇಶ್. ಎಚ್ ಟಿ ಕೃಷ್ಣೆ ಗೌಡ. ಪುರಸಭಾ ಅಧ್ಯಕ್ಷರು ಗಣ್ಯರು ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.
Mandya
ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ತಿಳಿಸಿ

ಮಂಡ್ಯ : ಈ ಚಿತ್ರದಲ್ಲಿರುವ ವ್ಯಕ್ತಿ ಇಂದು (ಮಾ.14) ರಂದು ಮಂಡ್ಯ ರೈಲು ನಿಲ್ದಾಣದಲ್ಲಿ ರೈಲುಗಾಡಿಯಿಂದ ಬಿದ್ದು ಗಾಯಗೊಂಡಿರುತ್ತಾರೆ.
ಸದರಿಯವರ ಹೆಸರು ಮತ್ತು ವಿಳಾಸ ಪತ್ತೆಯಾಗಿರುವುದಿಲ್ಲ ಯಾವುದಾದರೂ ಪೊಲೀಸ್ ಠಾಣೆಯಲ್ಲಿ ಮನುಷ್ಯ ಕಾಣೆಯಾದ ಪ್ರಕರಣ ದಾಖಲಾಗಿದ್ದಲ್ಲಿ, ಅಥವ ಇವರ ಬಗ್ಗೆ ಮಾಹಿತಿ ಗೊತ್ತಿದ್ದಲ್ಲಿ ಮಾಹಿತಿ ನೀಡಲು
ರೈಲ್ವೆ ಹೊರ ಉಪ ಠಾಣೆ ಮಂಡ್ಯ ಕೋರಿದೆ.
-
Mandya6 hours ago
ಜನಮಿತ್ರ ಫಲಶೃತಿ: ಹೆಬ್ಬಾಡಿಹುಂಡಿ ಗ್ರಾಮದ ಸ್ಮಶಾನ ಜಾಗದ ರಸ್ತೆ ಬೇಲಿಗೆ ಸಿಗ್ತು ಉತ್ತರ
-
Hassan14 hours ago
ಹಾಸನದಲ್ಲಿ ಭಾರೀ ಮಳೆ: ಅಪಾರ ಪ್ರಮಾಣದ ಬೆಳೆ ಹಾನಿ
-
Mandya10 hours ago
ಜೆಎಸ್ಎಸ್ ಕಾಲೇಜಿನಲ್ಲಿ ಪತ್ರಿಕಾ ಬರಹ ಕುರಿತು ಕಾರ್ಯಾಗಾರ
-
Kodagu11 hours ago
ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ
-
Hassan13 hours ago
ಕ್ಷಯ ಮುಕ್ತ ಭಾರತವನ್ನಾಗಿ ಮಾಡಲು ಎಲ್ಲಾರೂ ಕೈಜೋಡಿಸಿ: ಡಿಸಿ ಸಿ. ಸತ್ಯಭಾಮ
-
Kodagu9 hours ago
ನಿವೃತ್ತ ಶಿಕ್ಷಕಿಯಿಂದ ಕಕ್ಕಬ್ಬೆ ಯುವಕಪಾಡಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಚಾರಣ ಭಾಗ್ಯ
-
Mandya8 hours ago
ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ತಿಳಿಸಿ
-
Kodagu6 hours ago
ಮಡಿಕೇರಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲೈಬಸ್ ಸಂಚಾರ