Kodagu
ಸಿಎನ್ಸಿ 2ನೇ ಹಂತದ ಪಾದಯಾತ್ರೆ ಮುಕ್ತಾಯ : ಅ.7 ರಿಂದ 3ನೇ ಹಂತ ಆರಂಭ

ಮಡಿಕೇರಿ : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ 9 ಪ್ರಮುಖ ಬೇಡಿಕೆಗಳ ಕುರಿತು ಕೊಡವ ಜನಜಾಗೃತಿ ಮೂಡಿಸುತ್ತಾ ಸರ್ಕಾರದ ಗಮನ ಸೆಳೆಯಲು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಡೆಸುತ್ತಿರುವ 5 ಹಂತಗಳ ಪಾದಯಾತ್ರೆಯಲ್ಲಿ 2ನೇ ಹಂತದ ಪಾದಯಾತ್ರೆ ವಿರಾಜಪೇಟೆ ತಾಲ್ಲೂಕಿನ “ಚೆಂಬೆಬೆಳಿಯೂರಿನ” ಎಡೆನಾಲ್ನಾಡ್ ಮಂದ್ನಲ್ಲಿ ಮುಕ್ತಾಯಗೊಂಡಿತು.
ಮೂರನೇ ಹಂತದ ಪಾದಯಾತ್ರೆ ಅ.7 ರಂದು ಬೆಳಗ್ಗೆ 10 ಗಂಟೆಗೆ ಕಂಗಳತ್ತನಾಡ್ (ಗೊಣಿಕೊಪ್ಪ-ಮಾಯಮುಡಿ)ನಿಂದ ಆರಂಭಗೊಳ್ಳಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
“ಚೆಂಬೆಬೆಳಿಯೂರಿನ” ಎಡೆನಾಲ್ನಾಡ್ ಮಂದ್ನಲ್ಲಿ ಕೊಡವ ಜಾಗೃತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಸಿಎನ್ಸಿ ಸಂಘಟನೆ ಅತ್ಯಂತ ತಾಳ್ಮೆಯಿಂದ ಸುದೀರ್ಘ ಹೋರಾಟ ನಡೆಸುವ ಮೂಲಕ ಕೊಡವರಿಗೆ ಸಾಂವಿಧಾನಿಕವಾಗಿ ದೊರಕಬೇಕಾದ ಹಕ್ಕುಗಳ ಪರ ಪ್ರತಿಪಾದಿಸುತ್ತಾ ಬಂದಿದೆ ಎಂದರು.
ಈ ಪಾದಯಾತ್ರೆ ಹೆಚ್ಚು ಪರಿಣಾಮ ಬೀರಿದ್ದು, ಎರಡು ಹಂತಗಳನ್ನು ಈಗಾಗಲೇ ಮುಗಿಸಿದ್ದೇವೆ. ಇನ್ನು ಉಳಿದಿರುವ ಮೂರು ಹಂತಗಳಲ್ಲಿ ಎಲ್ಲರನ್ನೂ ಭೇಟಿಯಾಗಿ ಕೊಡವ ಲ್ಯಾಂಡ್ ಪರ ಹಕ್ಕೊತ್ತಾಯವನ್ನು ಮಂಡಿಸಲಾಗುವುದು ಎಂದು ನಾಚಪ್ಪ ಹೇಳಿದರು.
3ನೇ ಹಂತದ ಪಾದಯಾತ್ರೆ : ಅ.7 ರಂದು ಬೆಳಗ್ಗೆ 10 ಗಂಟೆಗೆ ಕಂಗಳತ್ತನಾಡ್ (ಗೊಣಿಕೊಪ್ಪ-ಮಾಯಮುಡಿ) 3.00 ಗಂಟೆಗೆ ಅರ್ಕೇರಿನಾಡ್ (ಬಾಳೆಲೆ) (ಪೊನ್ನಂಪೇಟೆ ತಾಲೂಕು), ಅ.8 ರಂದು ಬೆಳಗ್ಗೆ 10 ಗಂಟೆಗೆ ಕಿರ್ನಾಲ್ನಾಡ್ (ಕರ್ಗೂರ್-ಬೆಸಗೂರ್), 3 ಗಂಟೆಗೆ ಪತ್ತ್ ಕಟ್ನಾಡ್ (ಬೆಕ್ಕೆಸೆಡ್ಲೂರ್-ಕಾನೂರ್) (ಪೊನ್ನಂಪೇಟೆ ತಾಲೂಕು), ಅ.9 ರಂದು ಬೆಳಗ್ಗೆ 10 ಗಂಟೆಗೆ ತೊಡನಾಡ್ (ಕುಮಟೂರ್-ಶ್ರೀಮಂಗಲ), 2:30 ಗಂಟೆಗೆ, ಕುರ್ಚಿನಾಡ್ (ಕುರ್ಚಿ-ಬೀರುಗ) (ಪೊನ್ನಂಪೇಟೆ ತಾಲೂಕು), ಅ.10 ರಂದು ಬೆಳಗ್ಗೆ 10 ಗಂಟೆಗೆ ಮರೆನಾಡ್, ಪಾಕೇರಿನಾಡ್, ಐವತ್ನಾಡ್, ಪೊನಾಡ್ ಈ ನಾಲ್ಕು ನಾಡು ಮಂದ್ಗಳಲ್ಲಿ ಸಭೆ (ಬಾಡಗರ ಕೇರಿ-ತೆರಾಲ್-ಬಿರುನಾಣಿ) (ಪೊನ್ನಂಪೇಟೆ ತಾಲ್ಲೂಕು), ಅ.11 ರಂದು ಬೆಳಗ್ಗೆ 10 ಗಂಟೆಗೆ ತಾಳೆರಿನಾಡ್ (ಟಿ.ಶೆಟ್ಟಿಗೇರಿ), 2.30 ಗಂಟೆಗೆ ಅಂಜಿಗೇರಿನಾಡ್ (ಹುದಿಕೇರಿ-ಬೇಗೂರು) (ಪೊನ್ನಂಪೇಟೆ ತಾಲೂಕು) ನಲ್ಲಿ ನಡೆಯಲಿದೆ ಎಂದು ನಾಚಪ್ಪ ಹೇಳಿದರು.
Kodagu
ಮೂರ್ನಾಡು ಮಡಿಕೇರಿ ಮುಖ್ಯ ರಸ್ತೆಯಲ್ಲಿ ಕಾರು ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ-ಕಾರು ಚಾಲಕ ಗಂಭೀರ

ನಾಪೋಕ್ಲು : ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಮೂರ್ನಾಡು ಮಡಿಕೇರಿ ಮುಖ್ಯರಸ್ತೆಯ ಮುತ್ತಾರುಮುಡಿ ಎಂಬಲ್ಲಿ ನಡೆದಿದೆ.
ಮೂರ್ನಾಡು ಕಡೆಯಿಂದ ಮಡಿಕೇರಿಗೆ ತೆರಳುತ್ತಿದ್ದ ಕಾರು ಹಾಗೂ ಮಡಿಕೇರಿ ಕಡೆಯಿಂದ ಮೂರ್ನಾಡು ಮಾರ್ಗವಾಗಿ ವಿರಾಜಪೇಟೆಗೆ ತೆರಳುತ್ತಿದ್ದ ಖಾಸಗಿ ಬಸ್ಸಿನ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಹಾಗೂ ಬಸ್ಸಿನ ಮುಂಭಾಗ ಜಖಂಗೊಂಡಿದ್ದು ಕಾರು ಚಾಲಕ ಎಮ್ಮೆಮಾಡು ಗ್ರಾಮದ ನಿವಾಸಿ ಇಬ್ರಾಹಿಂ ಸಅದಿ ಎಂಬುವವರಿಗೆ ಗಂಭೀರ ಗಾಯವಾಗಿದ್ದು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Crime
ಗಾಂಜಾ ಮಾರಾಟ ಮಾಡುತ್ತಿದ್ದ ಅಸ್ಸಾಂ ವ್ಯಕ್ತಿ ಬಂಧನ

ವಿರಾಜಪೇಟೆ : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಸರಬರಾಜು ಮಾಡುತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.
ಅಸ್ಸಾಂ ರಾಜ್ಯದ ಅಬ್ದುಲ್ ಮಜೀದ್ (31) ಬಂಧಿತ ಆರೋಪಿ. ಆರೋಪಿಯನ್ನು 300 ಗ್ರಾಂ ಗಾಂಜಾದೊAದಿಗೆ ದಸ್ತಗಿರಿ ಮಾಡಿ ಕ್ರಮ ಕೈಗೊಳ್ಳಲಾಗಿದೆ.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುವ ಹಿನ್ನೆಲೆ ಮಾದಕ ವಸ್ತುಗಳ ಮಾರಾಟವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ವೀರಾಜಪೇಟೆ ಉಪವಿಭಾಗದ ಡಿವೈಎಸ್ಪಿ ಆರ್ ಮೋಹನ್ ಕುಮಾರ್ ಹಾಗೂ ಇತರ ಸಿಬ್ಬಂದಿಗಳ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ಡಿ. 4 ರಂದು ಕಡಂಗಮರೂರು-ಬೆಳ್ಳುಮಾಡು ಜಂಕ್ಷನ್ ಬಳಿ ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
Kodagu
ಅನುಮಾನಸ್ಪದವಾಗಿ ವೈದ್ಯನ ಮೃತದೇಹ ಪತ್ತೆ

ಮಡಿಕೇರಿ: ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 275 ರ
ಆನೆಕಾಡು ಬಳಿ ರಸ್ತೆ ಬದಿ ನಿಂತಿದ್ದ ಕಾರಿನಲ್ಲಿ ಪಿರಿಯಾಪಟ್ಟಣ ತಾಲೂಕು ಆಯುಷ್ ವೈದ್ಯಾಧಿಕಾರಿ ಡಾ.ಸತೀಶ್ ಮೃತದೇಹ ಅನುಮಾನಸ್ಪದವಾಗಿ ಪತ್ತೆಯಾಗಿದೆ.
ಮೂಲತಹ ಮಂಡ್ಯ ಜಿಲ್ಲೆ ಪಾಂಡವಪುರ ಬಳಿಯ ಶಿವಳ್ಳಿ ಗ್ರಾಮದವರಾದ ಡಾ. ಸತೀಶ್ (47) ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಕೊಣಸುಾರು ಗ್ರಾಮದ ಆಯುರ್ವೇದ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದು ಪಟ್ಟಣದ ತಾಲೂಕು ಆಯುರ್ವೇದ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ, ಘಟನೆ ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತರ ಕಡೆಯವವರಿಗೆ ಮಾಹಿತಿ ನೀಡಿದ್ದಾರೆ
-
Hassan1 month ago
ಮಲಗಿದಲ್ಲಿಯೇ ವ್ಯಕ್ತಿ ಸಾವು
-
Mysore1 month ago
KSRTC BUS – ಚಲಿಸುವಾಗ ನಿಯಂತ್ರಣ ತಪ್ಪಿ ಅಪಘಾತ
-
Mysore4 days ago
ಮುಖ್ಯ ಶಿಕ್ಷಕ ಮತ್ತು ಡಿ ದರ್ಜೆ ನೌಕರ, ಶಾಲಾ ಪ್ರವಾಸದ ಸಂದರ್ಭ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ – ಆರೋಪ
-
Hassan1 day ago
ಕಾಡಾನೆ ದಾಳಿಗೆ ಮೈಸೂರು ದಸರೆಯಲ್ಲಿ ಅಂಬಾರಿ ಹೊತ್ತು ಆನೆ ಅರ್ಜುನ ಬಲಿ
-
Crime3 weeks ago
ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
Hassan3 months ago
ಹಾಸನ-ಅರ್ಧ ಗಂಟೆಯಲ್ಲಿ 1 ಲೀಟರ್ ಮದ್ಯ ಕುಡಿಯುವ ಚಾಲೆಂಜ್- ಓರ್ವ ಸಾವು
-
Hassan1 week ago
ಜಿಲ್ಲಾಧಿಕಾರಿ ಕಛೇರಿ ಎಸ್ಡಿಎ ಆತ್ಮಹತ್ಯೆ
-
Mysore4 days ago
ಹಳೆ ಕಾಮಗಾರಿಗೆ ಗುದ್ದಲಿ ಪೂಜೆ ಮಾಡುವ ದರಿದ್ರ ನನಗೆ ಬಂದಿಲ್ಲ, ಹೊಸದಾಗಿ ತರುವ ತಾಕತ್ತು ನನಗೆ ಇದೆ – ಶಾಸಕ ಡಿ. ರವಿಶಂಕರ್