Kodagu
ಕೊಡಗು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಂದರ್ ರಾಜ್ ವರ್ಗಾವಣೆ
Kodagu
ದೇವಸ್ಥಾನದ ಪ್ರತಿಷ್ಠೆ-ಅಷ್ಟಬಂಧ ಬ್ರಹ್ಮಕಲೋತ್ಸವ – ಗಣ್ಯರಿಗೆ ಆಹ್ವಾನ
ಪೊನ್ನಂಪೇಟೆ : ಪೊನ್ನಂಪೇಟೆ ತಾಲೂಕು ಬಾಳೆಲೆಯ ದೇವನೂರು ಗ್ರಾಮದ ಶ್ರೀ ಮಹಾದೇವರ ದೇವಸ್ಥಾನದ ಪ್ರತಿಷ್ಠೆ-ಅಷ್ಟಬಂಧ ಬ್ರಹ್ಮಕಲೋತ್ಸವವನ್ನು ಫೆಬ್ರವರಿ 22ನೇ ದಿನಾಂಕದಿಂದ 25ನೇ ದಿನಾಂಕದವರೆಗೆ ಹಮ್ಮಿಕೊಳ್ಳಲಾಗಿದೆ.
ಈ ಸಮಾರಂಭಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗು ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು, ಜಿಲ್ಲಾ ಉಸ್ತುವಾರಿ ಹಾಗು ಸಣ್ಣ ನೀರಾವರಿ ಸಚಿವರಾದ ಬೋಸರಾಜುರವರನ್ನು ಹಾಗು ಸಾರಿಗೆ ಮತ್ತು ಮುಜರಾಯಿ ಸಚಿವರಾದ ಶ್ರೀ ರಾಮಲಿಂಗಾ ರೆಡ್ಡಿ ಯವರನ್ನು, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಹಾಗು ಕೊಡಗು ಜಿಲ್ಲಾ ಪಂಚಾಯತಿ ಸದಸ್ಯರು ಕೊಡಗು ಜಿಲ್ಲಾ ಹಿಂದುಳಿದ ವರ್ಗದ ಅಧ್ಯಕ್ಷರಾದ ಬಾನಂಡ ಪ್ರತ್ಯು, ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷರಾದ ಆದೇಂಗಡ ವಿನು ಉತ್ತಪ್ಪ, ಉಸ್ತುವಾರಿ ಆದೇಂಗಡ ವಾಸು ಬೆಳ್ಯಪ್ಪನವರು ಮತ್ತು ಆದೇಂಗಡ ಚಿಟ್ಟಿ ರಮೇಶ್’ರವರು ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಸಚಿವರಿಗೆ ಶಾಸಕ ಎ.ಎಸ್ ಪೊನ್ನಣ್ಣ ರವರು, ಕಾವೇರಿ ತಾಯಿಯ ಮೂರ್ತಿಯನ್ನು ಉಡುಗೊರೆಯಾಗಿ ನೀಡಿದರು.
Kodagu
ದೇಶದ ಯುವಜನತೆಯು ಸಂಘಟಿತರಾಗಿ ಕೈ ಜೋಡಿಸಿದಾಗ ಮಾತ್ರ ವ್ಯಸನ ಮುಕ್ತ ಆರೋಗ್ಯಕರ ಸಮಾಜವನ್ನು ನಿರ್ಮಿಸಲು ಸಾಧ್ಯ: ಡಾ. ಜ಼ಮೀರ್ ಅಹಮದ್
ಕುಶಾಲನಗರ: ದೇಶದ ಯುವಜನತೆಯು ಸಂಘಟಿತರಾಗಿ ಕೈ ಜೋಡಿಸಿದಾಗ ಮಾತ್ರ ವ್ಯಸನ ಮುಕ್ತ ಆರೋಗ್ಯಕರ ಸಮಾಜವನ್ನು ನಿರ್ಮಿಸಲು ಸಾಧ್ಯ ಎಂದು ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕರಾದ ಡಾ. ಜ಼ಮೀರ್ ಅಹಮದ್ ಅಭಿಪ್ರಾಯಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಇವರ ವತಿಯಿಂದ ಶ್ರೀ ಸದ್ಗುರು ಪ್ರೌಢಶಾಲೆ, ಕೂಡಿಗೆ ಇಲ್ಲಿ ಆಯೋಜಿಸಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಅವರು, ಮಾನವೀಯ ಮೌಲ್ಯ, ಸಂಸ್ಕಾರ, ಸನ್ನಡತೆ, ಸಮಾಜದಲ್ಲಿ ಉತ್ತಮ ಗೌರವವನ್ನು ತಂದುಕೊಡುತ್ತದೆ. ಯಾವುದೇ ವ್ಯಕ್ತಿ ವ್ಯಸನಗಳಿಗೆ ಬಲಿಯಾದರೆ ಶಾರೀರಿಕವಾಗಿ ಮತ್ತು ಮಾನಸಿಕವಾಗಿ ಸ್ಥಿಮಿತತೆ ಕಳೆದುಕೊಂಡು ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ವಿದ್ಯಾರ್ಥಿ ಸಮುದಾಯವು ಮಾದಕ ಪದಾರ್ಥಗಳ ದಾಸ್ಯಕ್ಕೊಳಗಾಗಿ ತಮ್ಮ ಆರೋಗ್ಯ ಹಾಳು ಮಾಡಿಕೊಳ್ಳಬಾರದು. ಮಾದಕ ವ್ಯಸನದ ಸುಳಿಗೆ ಸಿಲುಕಿದರೆ, ಸುಲಭದಲ್ಲಿ ಅದರಿಂದ ಹೊರಬರಲು ಸಾಧ್ಯವಿಲ್ಲ.

ವ್ಯಸನಿಗಳಿಂದ ಆತನ ಕುಟುಂಬ ಹಾಗೂ ಸಮಾಜವು ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಕ್ಷಣಿಕ ಸುಖಕ್ಕೆ ಬದುಕನ್ನು ಬಲಿಕೊಡದೆ ದುಶ್ಚಟಗಳ ದುಷ್ಪರಿಣಾಮ ಅರಿತು ಎಚ್ಚರದಿಂದಿದ್ದು ದೇಶದ ಸನ್ನಡತೆಯ ನಾಗರೀಕರಾಗಿ ಬದುಕು ನಡೆಸಬೇಕು. ಮಾದಕ ವಸ್ತುಗಳ ಜಾಲಕ್ಕೆ ಯುವ ಜನರು ಬಲಿಯಾಗದಂತೆ ಎಚ್ಚರ ವಹಿಸಲು ಜಾಗೃತಿ ಕಾರ್ಯಕ್ರಮಗಳನ್ನು ಕಾಲಕಾಲಕ್ಕೆ ರೂಪಿಸುತ್ತಿರಬೇಕು. ಯಾವುದೇ ರೀತಿಯ ದುಶ್ಚಟಗಳನ್ನು ತ್ಯಜಿಸುವಂತೆ ಜನಜಾಗೃತಿ ಮೂಡಿಸಲು ಮುಂದಾಗಬೇಕು ಎಂದು ನುಡಿದರು.
ಇದೇ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಪುಷ್ಮ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಯುವ ಸಮುದಾಯದ ಭವಿಷ್ಯ ಹಾಗೂ ದೇಶದ ಅಭಿವೃದ್ಧಿಗೆ ಮಾರಕವಾಗಿರುವ ಮಾದಕ ವಸ್ತುವನ್ನು ದೂರ ಸರಿಸಿ ಉನ್ನತ ಶಿಕ್ಷಣ ಹಾಗೂ ಸದೃಢ ಭವಿಷ್ಯ ರೂಪಿಸಲು ಒತ್ತು ನೀಡಬೇಕು. ವ್ಯಸನದ ದುಷ್ಪರಿಣಾಮಗಳ ಬಗ್ಗೆ ಸಮಾಜಕ್ಕೆ ನೈಜ ಅರಿವು ಮೂಡಿಸಲು ಸಾಧ್ಯವಾದಲ್ಲಿ ಮಾದಕ ವಿರೋಧಿ ದಿನಾಚರಣೆ ಅರ್ಥಪೂರ್ಣವಾಗುವುದು ಎಂದರು.

ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಚ್ಯುತ್, ಸುಮಲತಾ, ರೇಣುಕಾ, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Kodagu
ಮಡಿಕೇರಿ – ರಕ್ಷಣಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
ಮಡಿಕೇರಿ : ಮಕ್ಕಳ ರಕ್ಷಣಾ ಘಟಕ, ಮಡಿಕೇರಿ ಕಚೇರಿಯಲ್ಲಿ ಹೊಸದಾಗಿ ಸೃಜಿಸಿರುವ ರಕ್ಷಣಾಧಿಕಾರಿ (ಅಸಾಂಸ್ಥಿಕ) ಹುದ್ದೆಯನ್ನು ಹೊರಗುತ್ತಿಗೆ ಆಧಾರದ ಮೇಲೆ ಸೋಶಿಯಲ್ ವರ್ಕ್, ಸೋಶಿಯಾಲಾಜಿ ಮನಃಶಾಸ್ತ್ರ, ಸಮುದಾಯ ಅಭಿವೃದ್ಧಿ ಮಹಿಳಾ ಅಧ್ಯಯನ, ಗೃಹ ವಿಜ್ಞಾನ ಇವುಗಳಲ್ಲಿ ಯಾವುದಾದರೊಂದರಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
ಕಂಪ್ಯೂಟರ್ ಜ್ಞಾನ ಇರಬೇಕು. ಮಕ್ಕಳ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷ ಅನುಭವದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಗೌರವ ಧನ ರೂ.27,804 ಆಗಿರುತ್ತದೆ. ಇಚ್ಛೆಯುಳ್ಳ ಅಭ್ಯರ್ಥಿಗಳು ತಮ್ಮ ಸ್ವ ವಿವರ ಹಾಗೂ ಶೈಕ್ಷಣಿಕ ಪ್ರಮಾಣ ಪತ್ರಗಳ ನಕಲುಗಳೊಂದಿಗೆ ಅರ್ಜಿಯನ್ನು ಫೆಬ್ರವರಿ, 13 ರೊಳಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಾಂತಿ ನಿಲಯ, ಕಾನ್ವೆಂಟ್ ಜಂಕ್ಷನ್, ಮಡಿಕೇರಿ, ಕೊಡಗು ಜಿಲ್ಲೆ(ದೂ.ಸಂ.08272-228800) ಈ ವಿಳಾಸಕ್ಕೆ ಸಲ್ಲಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅವರು ಕೋರಿದ್ದಾರೆ.
-
Politics14 hours agoಆಡಳಿತ- ವಿಪಕ್ಷಗಳ ಜಿದ್ದಾಜಿದ್ದಿಗೆ ಬಲಿಯಾದ ವಿಧಾನ ಪರಿಷತ್ ಕಲಾಪ
-
Kodagu20 hours agoಕಾರೆಕೆರೆ ಕಾವಲು: 47 ದಲಿತ ಕುಟುಂಬಗಳಿಗೆ ಭೂಮಿ ಮಂಜೂರಿಗೆ ಆಗ್ರಹ
-
Kodagu20 hours agoಕೋಮು ಸಾಮರಸ್ಯ ಮೂಡಿಸುವಲ್ಲಿ ಉರೂಸ್ ಕೊಡುಗೆ ಅಪಾರ
-
National16 hours agoಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಭೂಪೇಂದ್ರ ಯಾದವ್ಗೆ ಎಚ್ಡಿಕೆ ಮನವಿ
-
Hassan17 hours ago2027 ರ ಅಂತ್ಯಕ್ಕೆ ಎತ್ತಿನಹೊಳೆ ನೀರು ಹರಿಸಲು ಕ್ರಮ: ಕೃಷ್ಣ ಬೈರೇಗೌಡ
-
Hassan12 hours agoಪ್ರತ್ಯೇಕ ಪ್ರಕರಣ: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ
-
Mysore16 hours agoಜಿಲ್ಲಾ ಪೊಲೀಸರಿಂದ ಗೋದಾಮು, ಕೈಗಾರಿಕಾ ಶೋಧ
-
Chamarajanagar16 hours agoಬೆಳಗಿನ ವೇಳೆ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ರೈತರಿಂದ ಪ್ರತಿಭಟನೆ
