Kodagu
ಕೊಡಗು ಜಿಲ್ಲೆಯ ಮಳೆ ವಿವರ(ಮಿಲಿ ಮೀಟರ್ಗಳಲ್ಲಿ
ಮಡಿಕೇರಿ ಜು.15(ಕರ್ನಾಟಕ ವಾರ್ತೆ):-ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 58.85 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 8.87 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1188.07 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 575.20 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 88.25 ಮಿ.ಮೀ. ಕಳೆದ ವರ್ಷ ಇದೇ ದಿನ 15.70 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1739.21 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1089.11 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 48.25 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.20 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1221.25 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 464.71 ಮಿ.ಮೀ. ಮಳೆಯಾಗಿತ್ತು.
ಪೆÇನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 33.02 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 5.05 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1132.69 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 394.44 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 76.85 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 5.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1036.01 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 484.81 ಮಿ.ಮೀ. ಮಳೆಯಾಗಿತ್ತು.
ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 47.90 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 16.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 811.20 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 442.95 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 88.80, ನಾಪೋಕ್ಲು 55.20, ಸಂಪಾಜೆ 89, ಭಾಗಮಂಡಲ 120, ವಿರಾಜಪೇಟೆ 48, ಅಮ್ಮತ್ತಿ 48.50, ಹುದಿಕೇರಿ 34, ಶ್ರೀಮಂಗಲ 38, ಪೊನ್ನಂಪೇಟೆ 42, ಬಾಳೆಲೆ 18.09, ಸೋಮವಾರಪೇಟೆ ಕಸಬಾ 94.40, ಶನಿವಾರಸಂತೆ 46, ಶಾಂತಳ್ಳಿ 140, ಕೊಡ್ಲಿಪೇಟೆ 27, ಕುಶಾಲನಗರ 29.60, ಸುಂಟಿಕೊಪ್ಪ 66.20 ಮಿ.ಮೀ.ಮಳೆಯಾಗಿದೆ.
ಹಾರಂಗಿ ಜಲಾಶಯದ ನೀರಿನ ಮಟ್ಟ (15-07-2024) ವರದಿ
**************
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2854.77 ಅಡಿಗಳು. ಕಳೆದ ವರ್ಷ ಇದೇ ದಿನ 2842.74 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 37.40 ಮಿ.ಮೀ., ಕಳೆದ ವರ್ಷ ಇದೇ ದಿನ 5.60 ಮಿ.ಮೀ., ಇಂದಿನ ನೀರಿನ ಒಳಹರಿವು 8666 ಕ್ಯುಸೆಕ್, ಕಳೆದ ವರ್ಷ ಇದೇ ದಿನ 1162 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 5933 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 50 ಕ್ಯುಸೆಕ್.
Kodagu
ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ: ಅಪ್ಪಚೆಟ್ಟೋಳಂಡ ಡಿಯಾ ಗೆ ಪ್ರಶಸ್ತಿ
ವರದಿ: ಝಕರಿಯ ನಾಪೋಕ್ಲು
ನಾಪೋಕ್ಲು: ಕರ್ನಾಟಕ ರಾಜ್ಯ ಮಕ್ಕಳ ಕಲ್ಯಾಣ ಸಮಿತಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಪ್ರಯುಕ್ತ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ನಾಪೋಕ್ಲು ಬಳಿಯ ಬಲ್ಲಮಾಟಿ ಗ್ರಾಮದ ಅಪ್ಪಚೆಟ್ಟೋಳಂಡ ಎ.ಎಂ. ಡಿಯಾ ಪಾಲ್ಗೊಂಡು ಪ್ರಥಮ ಸ್ಥಾನ ಗಳಿಸಿ ಪ್ರಶಸ್ತಿ ಪಡೆದಿದ್ದಾರೆ.
ಕೊಡಗಿನ ಜವಾಹರ್ ನವೋದಯ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಯಾಗಿರುವ ಡಿಯಾ ಬಲ್ಲಮಾವಟಿ ಗ್ರಾಮದ ಅಪ್ಪಚೆಟ್ಟೊಳಂಡ ಮಿಥುನ್ ಮಾಚಯ್ಯ ಹಾಗೂ ನೀನಾ ಮಾಚಯ್ಯ ದಂಪತಿಗಳ ಪುತ್ರಿಯಾಗಿದ್ದಾರೆ.
Kodagu
ಕೊಡಗು ಎನ್.ಐ.ಎಂ.ಎ ಗೆ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ
ಮಡಿಕೇರಿ: ಕೊಡಗು ಜಿಲ್ಲೆಯ ನಿಮಾ 2022-24 ಸಾಲಿನಲ್ಲಿ ತೋರಿದ ಸರ್ವಾಂಗೀಣ ಚಟುವಟಿಕೆಗಳಿಗೆ ರಾಜ್ಯದ 34 ಶಾಖೆಗಳ ಪೈಕಿ ಪ್ರಥಮ ಸ್ಥಾನವನ್ನು ಪಡೆದ ಹಿರಿಮೆಗೆ ಪಾತ್ರವಾಯಿತು.
ರಾಣಿಬೆನ್ನೂರು ನಲ್ಲಿ ನಡೆದ ಎನ್.ಐ.ಎಂ.ಎ ರಾಜ್ಯ ಸಮಿತಿ ಸಭೆಯಲ್ಲಿ ಕೊಡಗು ಜಿಲ್ಲೆಯ ನಿಮಾ, ಪ್ರಥಮ ಸ್ಥಾನ ಪಡೆದುಕೊಂಡಿರುವ ಅಧಿಕೃತ ಘೋಷಣೆ ಮಾಡಲಾಯಿತು.
ಕೊಡಗು ಜಿಲ್ಲೆಯಿಂದ ರಾಜ್ಯ ಪ್ರತಿನಿಧಿಗಳಾದ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ.ಶ್ಯಾಮ ಪ್ರಸಾದ್ ಪಿ.ಎಸ್ ಹಾಗೂ ಕೊಡಗು ಜಿಲ್ಲಾ ಅಧ್ಯಕ್ಷ ಡಾ.ರಾಜಾರಾಮ.ಎ.ಆರ್.ಜಿಲ್ಲೆಯ ಪರವಾಗಿ ಪ್ರಶಸ್ತಿ ಪಡೆದುಕೊಂಡರು.
ಕೊಡಗು ಜಿಲ್ಲೆಯ ನೀಮಾ ಮಹಿಳಾ ಘಟಕ ಕೂಡ ಮಹಿಳಾ ವಿಭಾಗದಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದುಕೊಂಡಿತು.
25ನೇ ವರ್ಷದ ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಇರುವ ಕೊಡಗು ನೀಮಾ ಈ ವರ್ಷದಲ್ಲಿ ಸಾರ್ವಜನಿಕರಿಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದು ನಿಮಾ ಕೊಡಗು ಘಟಕದ ಅಧ್ಯಕ್ಷ ಡಾ. ರಾಜಾರಾಂ ತಿಳಿಸಿದ್ದಾರೆ.
Kodagu
ಜನವರಿ 26 ರಂದು ಲೋಕಾಪ೯ಣೆಯಾಗಲಿದೆ ಮತ್ತೆ ವಸಂತ
ಮಡಿಕೇರಿ : ಉಪನ್ಯಾಸಕಿ ಮತ್ತು ಲೇಖಕಿ ಕೆ. ಜಯಲಕ್ಷ್ಮಿ ಅವರು ಬರೆದಿರುವ ಮತ್ತೆ ವಸಂತ ಹೆಸರಿನ ಕಥಾ ಸಂಕಲನ ಇದೇ ಜನವರಿ 26 ರಂದು ಲೋಕಾರ್ಪಣೆಯಾಗಲಿದೆ.
ನಗರದ ರೆಡ್ ಬ್ರಿಕ್ಸ್ ಇನ್ ಸಭಾಂಗಣದಲ್ಲಿ ಜನವರಿ 26 ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ಮತ್ತೆ ವಸಂತ ಕಥಾ ಸಂಕಲನವನ್ನು ಆಕಾಶವಾಣಿಯ ಉದ್ಘೋಷಕ ಸುಬ್ರಾಯ ಸಂಪಾಜೆ ಲೋಕಾರ್ಪಣೆ ಮಾಡಲಿದ್ದಾರೆ.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷ ಟಿ. ಪಿ ರಮೇಶ್ ಅಧ್ಯಕ್ಷತೆಯ ಕಾರ್ಯಕ್ರಮದಲ್ಲಿ ಶಕ್ತಿ ಪತ್ರಿಕೆಯ ಸಂಪಾದಕ
ಜಿ . ಚಿದ್ವಿಲಾಸ್, ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಎಚ್ ಟಿ., ಬೆಳ್ತಂಗಡಿಯ ಎನ್. ಜಯಪ್ರಕಾಶ್ ಶರ್ಮ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಮತ್ತೆ ವಸಂತ ಕಥಾ ಸಂಕಲನದ ಕಥೆಗಾರ್ತಿ ಜಯಲಕ್ಷ್ಮಿ ತಿಳಿಸಿದ್ದಾರೆ.
-
Chamarajanagar19 hours ago
Hannur|ಒಂದೇ ಹುದ್ದೆಗಾಗಿ ಇಬ್ಬರು ಅಧಿಕಾರಿಗಳ ಜಟಾಪಟಿ
-
Hassan21 hours ago
Hassan| ಕಾಡಾನೆ ದಾಳಿಗೆ ಕಾರ್ಮಿಕ ಬ*ಲಿ
-
State14 hours ago
ಯಲ್ಲಾಪುರ, ಸಿಂಧನೂರಿನಲ್ಲಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ 3ಲಕ್ಷ ಪರಿಹಾರ ಘೋಷಿಸಿದ ಸಿಎಂ
-
National - International13 hours ago
ಪನಾಮಾ ಕಾಲುವೆ ವಿವಾದ: ಟ್ರಂಪ್ ಹೇಳಿಕೆ ತಿರಸ್ಕರಿಸಿದ ಪನಾಮಾ ಅಧ್ಯಕ್ಷ ಜೋಸ್ ರೌಲ್
-
Chamarajanagar10 hours ago
ಜ.23ರಂದು ಚಾಮರಾಜನಗರ ಪಟ್ಟಣದ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Hassan16 hours ago
ಕಾಡಾನೆ ದಾಳಿಯಿಂದ ವೃದ್ದ ಸಾ*ವು ಪ್ರಕರಣ
-
National - International11 hours ago
ರಾಜ್ಯದಲ್ಲಿ ಪ್ರತ್ಯೇಕ ಎರಡು ಕಡೆ ಅಪಘಾತ: ಮೃತರಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ
-
Hassan17 hours ago
ಮೊಟ್ಟ ಮೊದಲ ಬೃಹತ್ ಎಜುಕೇಷನ್ ಎಕ್ಸ್ ಪೋ 2025 ರ ಪ್ರಚಾರ ವಾಹನಕ್ಕೆ ಚಾಲನೆ