Connect with us

Mysore

ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಆರ್ ಕೃಷ್ಣಮೂರ್ತಿ ರವರ ಕಾರ್ ಟೈರ್ ಬ್ರಷ್ಟಾಗಿ ಅಪಘಾತವಾಗಿದೆ.

Published

on

ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಆರ್ ಕೃಷ್ಣಮೂರ್ತಿ ರವರು ತಮ್ಮ ಕ್ಷೇತ್ರದಿಂದ ಮೈಸೂರಿನ ಮನೆಗೆ ಚುನಾವಣಾ ಪ್ರಚಾರ ಮುಗಿಸಿ ರಾತ್ರಿ 11-48 ರ ಸಮಯದಲ್ಲಿ ಕಾರ್ ಟೈರ್ ಬ್ರಷ್ಟಾಗಿ ಅಪಘಾತವಾಗಿದೆ.

ಶಾಸಕರಾದ ಎ.ಆರ್.ಕೃಷ್ಣಮೂರ್ತಿ ಅವರು ಹಾಗೂ ಶಾಸಕರ ಆಪ್ತ ಸಹಾಯಕ ಹೊಂಗನೂರು ಚೇತನ್ ಮತ್ತು ವಾಹನ ಚಾಲಕ ಸತೀಶ್ ದೇವರ ಆರ್ಶೀವಾದದಿಂದ ಆಶ್ಚರ್ಯಕರವಾಗಿ ಅಪಾಯದಿಂದ ಪಾರಾಗಿದ್ದಾರೆ. ಎಂದು ಮಾಹಿತಿ ನೀಡಿದ್ದಾರೆ

Continue Reading

Mysore

ಮೈಸೂರು ದಸರಾ: ಮಹಿಳಾ ಉದ್ಯಮಿ ಉಪಸಮಿತಿಗೆ ಎಸ್. ರಂಗನಾಥ ಸಂಚಾಲಕರಾಗಿ ನೇಮಕ

Published

on

ಮೈಸೂರು: ​2025 ರ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ದಸರಾ ವಸ್ತು ಪ್ರದರ್ಶನದ ಉಪಸಮಿತಿಗಳಲ್ಲಿ ಒಂದಾದ ಮಹಿಳಾ ಉದ್ಯಮಿ ಉಪಸಮಿತಿ-2025 ಕ್ಕೆ ಎಸ್. ರಂಗನಾಥ ಅವರು ಸಂಚಾಲಕರಾಗಿ ಆಯ್ಕೆಯಾಗಿದ್ದಾರೆ.

​ಮೈಸೂರು ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯುಬ್ ಖಾನ್ ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಸ್. ರಂಗನಾಥ ಅವರು ಪ್ರಸ್ತುತ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಜಂಟಿ ಕಾರ್ಯದರ್ಶಿ ಹಾಗೂ ಹೊಯ್ಸಳ ಕರ್ನಾಟಕ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Continue Reading

Mysore

ನಿಮ್ಮ ಎಲ್ಲಾ ತುರ್ತು ಸಂದರ್ಭಗಳಲ್ಲಿ 112 ಸಂಪರ್ಕಿಸಿ: ಸಿ.ಎಂ.ರವೀಂದ್ರ

Published

on

ವರದಿ: ಮಹದೇವಸ್ವಾಮಿ ಪಟೇಲ್

ನಂಜನಗೂಡು: ನಿಮ್ಮ ಎಲ್ಲಾ ಸಮಸ್ಯೆಗಳಿಗೆ ನೇರವಾಗಿ ನಮ್ಮನ್ನು ಸಂಪರ್ಕಿಸಿ ಎಂದು ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ ಸಿ.ಎಂ.ರವೀಂದ್ರ ತಿಳಿಸಿದರು.

ನಂಜನಗೂಡು ನಗರದ ಟಿಚರ್ಸ್ ಕಾಲೋನಿಯಲ್ಲಿ ಮೈಸೂರು ಜಿಲ್ಲಾ ಪೊಲೀಸ್, ನಂಜನಗೂಡು ಪಟ್ಟಣ ಪೊಲೀಸ್ ಠಾಣೆ, ನಂಜನಗೂಡು ಉಪ ವಿಭಾಗ ವತಿಯಿಂದ ಮನೆಮನೆಗೆ ಪೊಲೀಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕುಟುಂಬ ಸಂಭ್ರಮ, ಸ್ನೇಹ ಬಳಗ ಮತ್ತು ಪೊಲೀಸ್ ಇಲಾಖೆ ನಂಜನಗೂಡು ಟೌನ್ ಇವರ ವತಿಯಿಂದ ಸರಗಳ್ಳತನ ಅಪರಾಧ ತಡೆ ಇನ್ನಿತರ ವಿಚಾರಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ. ಸಾರ್ವಜನಿಕರಿಗೆ ಕಾನೂನು ಅರಿವು ಮೂಡಿಸುವುದು ನಮ್ಮ ಕರ್ತವ್ಯ ಎಂದರು.

ಮೊಬೈಲ್ ಬಳಕೆಯಿಂದ ದುಷ್ಪರಿಣಾಮ ಬೀರುತ್ತಿದ್ದು, ಮಕ್ಕಳಿಗೆ ಪೋಷಕರು ಮೊಬೈಲ್ ಕೊಡಬಾರದು. ಸಾಧ್ಯವಾದಷ್ಟು ಮನೆಗಳ ಮುಂದೆ ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಿಕೊಳ್ಳಬೇಕು. ಅಪರಿಚಿತ ವ್ಯಕ್ತಿಗಳು ಕಂಡಾಗ ತಕ್ಷಣವೇ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಮನೆಯಿಂದ ಎರಡ್ಮೂರು ದಿನಗಳ ಕಾಲ ಹೊರಗಡೆ ಹೋದ ಸಂದರ್ಭದಲ್ಲಿ ನಿಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಬೇಕು. ಅಲ್ಲದೇ ನಿಮ್ಮ ತುರ್ತು ಸಂದರ್ಭಗಳಿಗೆ 112ಗೆ ಕರೆ ಮಾಡಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತುರ್ತು ಸೇವೆಗಳು, ಮನೆ ಕಳ್ಳತನ, ಸರಕಳ್ಳತನ, ಸೈಬರ್ ಅಪರಾಧ, ಆನ್‌ಲೈನ್‌ ವಂಚನೆ, ಮಾದಕ ವಸ್ತುಗಳ ಬಗ್ಗೆ, ಕಾನೂನು ಅರಿವು ಮತ್ತು ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಎಎಸ್ಐ ದೇವರಾಜು, ಮಂಜುನಾಥ್, ಲಿಂಗೇಗೌಡರು, ಸಿಬ್ಬಂದಿಗಳಾದ ಕೃಷ್ಣ, ಮುರುಳಿಧರ್, ತಿಮ್ಮಯ್ಯ, ಶಿವಕುಮಾರ್, ವೈ.ಎಂ. ಮಹೇಶ್, ಬೀರಪ್ಪ, ಭರತ್, ಶಿವರಾಂ, ಸೈಯದ್ ಅರ್ಕುಡ, ನೇತ್ರಾವತಿ, ಸುಷ್ಮಿತಾ ಸೇರಿದಂತೆ ಸಾರ್ವಜನಿಕರು ಹಾಜರಿದ್ದರು.

Continue Reading

Mysore

ದೌರ್ಜನ್ಯ ತಡೆಗೆ ಕೆಪಿಎ- ಸಾವಿತ್ರಿಬಾ ಫುಲೆ ಸಂಸ್ಥೆ ನಡುವೆ ಒಡಂಬಡಿಕೆ

Published

on

ಮೈಸೂರು: ದೌರ್ಜನ್ಯರಹಿತ ಸಮಾಜ ನಿರ್ಮಾಣಕ್ಕಾಗಿ ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಭಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಗಳ ನಡುವೆ ಒಡಂಬಡಿಕೆ ಏರ್ಪಟ್ಟಿದ್ದು, ಎರಡೂ ಸಂಸ್ಥೆಗಳ ಮುಖ್ಯಸ್ಥರು ಒಡಂಬಡಿಕೆಗೆ ಸಹಿ ಹಾಕಿದರು.

ಈ ವೇಳೆ ಮಾತನಾಡಿದ ಕರ್ನಾಟಕ ಪೊಲೀಸ್ ಅಕಾಡೆಮಿ ನಿರ್ದೇಶಕ ಎಸ್.ಎಲ್.ಚೆನ್ನಬಸವಣ್ಣ, ಕೇಂದ್ರ ಸರ್ಕಾರದ ಪ್ರತಿಷ್ಠಿತ ಸಂಸ್ಥೆಯಾದ ಸಾವಿತ್ರಿಭಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯೊಡನೆ ಒಡಂಬಡಿಕೆೆ ವಿಶಿಷ್ಟವಾಗಿದೆ.

ಪ್ರಸ್ತುತ ಸಮಾಜದಲ್ಲಿ ಮಹಿಳೆಯರು ಮತ್ತು ಮಕ್ಕಳು ಎದುರಿಸುತ್ತಿರುವ ಸವಾಲುಗಳು, ಸಮಸ್ಯೆಗಳ ನಿರ್ವಹಣೆಯಲ್ಲಿ ಪೊಲೀಸ್ ಇಲಾಖೆಯ ಪಾತ್ರ, ಕಾನೂನುಗಳು ಹಾಗೂ ಸಂಬಂಧಪಟ್ಟ ಪ್ರಚಲಿತ ವಿದ್ಯಮಾನಗಳ ಕುರಿತು ಪೊಲೀಸ್ ಇಲಾಖೆಗೆ ಸೇರ್ಪಡೆಯಾಗುವ ಅಧಿಕಾರಿಗಳಿಗೆ ಹಾಗೂ ಕರ್ತವ್ಯನಿರತ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿ ಅವರನ್ನು ಸಂವೇದನಾಶೀಲರನ್ನಾಗಿ ಮಾಡಲು ಬಹಳ ಸಹಕಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಾವಿತ್ರಿಭಾಯಿ ಫುಲೆ ಸಂಸ್ಥೆಯ ಬೆಂಗಳೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಪಿ.ಜೆ.ಫಿಲಿಪ್ಸ್ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ವರದಿಯಾಗುತ್ತಿರುವ ಮಹಿಳೆಯರ ಮತ್ತು ಮಕ್ಕಳ ದೌರ್ಜನ್ಯಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿಮೆ ಮಾಡುವುದು, ರಾಜ್ಯವನ್ನು ದೌರ್ಜನ್ಯಮುಕ್ತ ಮಾಡುವಲ್ಲಿ ಪೊಲೀಸ್ ಇಲಾಖೆಯೊಂದಿಗೆ ಕೈ ಜೋಡಿಸುವುದು ಒಡಂಬಡಿಕೆಯ ಉದ್ದೇಶ ಎಂದರು.

ಸಂಸ್ಥೆ ಬೆಂಗಳೂರು ಪ್ರಾದೇಶಿಕ ಕೇಂದ್ರದ ಉಪ ನಿರ್ದೇಶಕ ಲೋಕೇಶ್, ಕೆಪಿಎ ಅಧಿಕಾರಿಗಳು, ಬೋಧಕರು ಹಾಜರಿದ್ದರು.

Continue Reading

Trending

error: Content is protected !!