Connect with us

Hassan

ಕೋಮುವಾದಿ ಧ್ವೇಷದ ವಿಷಬೀಜವನ್ನು ಚಿಗುರಿನಲ್ಲೆ ಹೊಡೆದು ಹಾಕಿ ಸೌಹಾರ್ದತಾ ಮಾನವ ಸರಪಳಿಯಲ್ಲಿ ರೂಪ ಹಾಸನ್ ಕರೆ

Published

on

ಹಾಸನ : ಧಮನ ನೀತಿಗೆ ನಾವು ತಲೆ ತಗ್ಗಿಸುವುದಿಲ್ಲ. ಕೋಮುವಾದಿ ಧ್ವೇಷದ ವಿಷ ಬೀಜವನ್ನು ಚಿಗುರಿನಲ್ಲೆ ಇಲ್ಲವೇ ಮೊಳಕೆಯಲ್ಲೆ ಹೊಡೆದು ಹಾಕಬೇಕು ಎಂದು ಹಿರಿಯ ಸಾಹಿತಿ ರೂಪ ಹಾಸನ್ ಕರೆ ನೀಡಿದರು.

ನಗರದ ಹೇಮಾವತಿ ಗಾಂಧಿ ಹುತಾತ್ಮ ದಿನದ ಅಂಗವಾಗಿ ಪ್ರತಿಮೆ ಬಳಿ ವಿವಿಧ ಸಂಘ ಸಂಸ್ಥೆ, ಪ್ರಗತಿಪರ ಮುಖಂಡರು, ವಿವಿಧ ಸಂಘಟನೆಗಳು, ರೈತರು, ಧಾರ್ಮಿಕ ಅಲ್ಪಸಂಖ್ಯಾತ ಸಂಘಟನೆಗಳು ಸೇರಿ ಮಂಗಳವಾರದಂದು ಸಂಜೆ ಹಮ್ಮಿಕೊಳ್ಳಲಾಗಿದ್ದ ಸೌಹಾರ್ದತಾ ಮಾನವ ಸರಪಳಿ ಹಾಗೂ ಸಭೆಯಲ್ಲಿ ಉದ್ದೇಶಿಸಿ ಮಾತನಾಡಿದ ಅವರು, ಇಂದು ವಿವೇಕ ಅವಿವೇಕ, ಸತ್ಯ-ಅಸತ್ಯ, ವಿಚಾರ-ವಿಕಾರಗಳ ನಡುವಿನ ಅಂತರ ಕಡಿಮೆಯಾಗುತ್ತಿದೆ. ಆದರೆ ಮನುಷ್ಯ-ಮನುಷ್ಯರ ನಡುವಿನ ’ಕಂದರ’ ಹೆಚ್ಚಾಗುತ್ತಿದೆ. ಈ ಕಂದರದ ಒಳಗಿಂದ ಬರುತ್ತಿರುವ ಕರುಳ ಬಳ್ಳಿಯ ಕರೆ ಕ್ಷೀಣ ದನಿಯಾಗುತ್ತಿದೆ. ಹೊರಗಿನ ಅನುಚಿತ ಗೂಳಿಗದ್ದಲದಲ್ಲಿ ಕರುಳಬಳ್ಳಿಯ ಮಾನವೀಯ ಕರೆ ಕೇಳಿಸದಂತಾಗಿದೆ. ಇಂಥ ಕಳವಳಕಾರಿ ವಾತಾವರಣದಲ್ಲಿ ಸೌಹಾರ್ದವನ್ನು ಮುನ್ನೆಲೆಗೆ ತರಲು ಎಲ್ಲ ಕ್ಷೇತ್ರಗಳ ಮಾನವೀಯ ಮನಸ್ಸುಗಳು ಮುಂದಾಗಬೇಕಾಗಿದೆ ಎಂದರು. ಸೌಹಾರ್ದ ಎಂದರೆ ಪಕ್ಷಪಾತವಲ್ಲ. ಪೂರ್ವಾಗ್ರಹವಲ್ಲ. ಇದು ಎಲ್ಲಾ ವಲಯದ ಅವಿವೇಕಗಳನ್ನು ಮೀರಿದ ವಿವೇಕದ ಹಾದಿ. ಶಾಂತಿ, ಸಮಾಧಾನ ಮತ್ತು ಸಮಾನ ಮನಸ್ಥಿತಿಯ ಸಾಮಾಜಿಕ ಮೌಲ್ಯಪರ ಮತ್ತು ವಿರೋಧಿ ನೆಲೆಗಳಲ್ಲಿರುವ ವೈರುಧ್ಯಗಳನ್ನು ಒಂದಾಗಿಸುವ ಪ್ರಕ್ರಿಯೆಯ ಪ್ರತೀಕವೇ ಸೌಹಾರ್ದ. ಸಂವಿಧಾನದ ಆಶಯಗಳಿಗೆ ಬದುಕುತ್ತೀವಿ ಎಂದು ಹೇಳಿದರು.

ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ಮತ್ತು ಹಿರಿಯ ಪತ್ರಕರ್ತರಾದ ವೆಂಕಟೇಶ್ ಮಾತನಾಡಿ, ಪ್ರಗತಿಪರ ಮುಖಂಡರು, ವಿವಿಧ ಸಂಘಟನೆಗಳು, ರೈತರು, ಧಾರ್ಮಿಕ ಅಲ್ಪಸಂಖ್ಯಾತ ಸಂಘಟನೆಗಳು ಸೌಹಾರ್ದತಾ ಮಾನವ ಸರಪಳಿಗೆ ಸಹಕಾರ ನೀಡಿದ್ದು, ಪ್ರಸ್ತೂತದಲ್ಲಿ ದೇಶವನ್ನು ಹೊಡೆಯುವುದಕ್ಕೆ ಕೇಂದ್ರ ಸರಕಾರವೇ ಮುಂದಾಗಿದೆ. ನಮ್ಮದು ಮತದಾನದ ಪ್ರಜಾಪ್ರಭುತ್ವ. ಯಾವುದೇ ಜಾರಿ, ಧರ್ಮದ ಪರವಾಗಿಲ್ಲ. ಇಂದು ಸಂವಿಧಾನದ ಆಶಯವನ್ನು ಗಾಳಿಗೆ ತೂರಿ ಒಂದೆ ಭಾಷ ಪರವಾಗಿ ಆಡಳಿತ ನಡೆಸಲಾಗುತ್ತಿದೆ ಎಂದರು. ಮಹಾತ್ಮ ಗಾಂಧಿ ಹತ್ಯೆಯಾದ ಮೇಲೆ ಒಂದೆ ಪದ ಹೇಳುವುದು ಹೇ ರಾಮ್ ಎಂದು ಸಾವನಪ್ಪುತ್ತಾರೆ. ಇಂದು ಜೈಶ್ರೀರಾಮ್ ಎಂದು ಈ ದೇಶವನ್ನು ಹಾಳು ಮಾಡಲು ದೊಡ್ಡ ಗುಂಪು ನಿಂತು ಬಿಟ್ಟಿದೆ. ಇದು ದೇಶದ ಸಂವಿಧಾನಕ್ಕೆ, ದೇಶದ ಐಕ್ಯತೆಗೆ ಬಾರಿ ಅಪಾಯವಿದೆ. ಸೌಹಾರ್ಧ ಪರಂಪರೆಯನ್ನು ಎತ್ತಿ ಹಿಡಿಯಲು ಈ ಸೌಹಾರ್ಧತಾ ಮಾನವ ಸರಪಳಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ನಮ್ಮ ಭಾರತಕ್ಕೆ ಬಹುದೊಡ್ಡ ಸೌಹಾರ್ದ ಪರಂಪರೆಯಿದೆ. ಬಹು ಸಂಸ್ಕೃತಿ, ಬಹುಭಾಷೆ ಮತ್ತು ಬಹು ಧರ್ಮಗಳ ಎಲ್ಲರೂ ಪರಸ್ಪರ ಸೌಹಾರ್ದದಿಂದ ಬದುಕುತ್ತ, ಆರೋಗ್ಯಕರ ಸಮಾಜ ನಿರ್ಮಾಣ ಮಾಡಬೇಕೆಂಬ ಬದ್ಧತೆಯಿಂದ ಅನೇಕ ಸಾಧಕರು ಶ್ರಮಿಸಿದ್ದಾರೆ. ಜಾತಿ, ಮತ ಧರ್ಮಗಳನ್ನು ಮೀರಿ ಒಟ್ಟಾಗಿ ಜೀವಿಸಿದ ಸೋದರತ್ವದ ಮೌಲ್ಯವನ್ನು ಪ್ರತಿನಿಧಿಸಿದ್ದಾರೆ. ವಿವಿಧ ಹಬ್ಬಾದಿ ಆಚರಣೆಗಳನ್ನು ಒಟ್ಟಾಗಿ ಮಾಡಿ ಸಂಭ್ರಮಿಸಿದ ನಿದರ್ಶನಗಳಿಗೂ ನಮ್ಮ ದೇಶವು ಉತ್ತಮ ಸಾಕ್ಷಿ ಸ್ವರೂಪಿಯಾಗಿದೆ. ಬಹುತ್ವದ ಬದುಕಿನ ಮಾದರಿಯಾಗಿ ವಿಶ್ವಕ್ಕೆ ದಾರಿತೋರಿಸಿದೆ. ನಮ್ಮ ಕರ್ನಾಟಕವು ಇಂತಹ ಸೌಹಾರ್ದ ಪರಂಪರೆಯನ್ನು ಉನ್ನತ ಮಟ್ಟದಲ್ಲಿ ಬಂದ ಆದರ್ಶ ರಾಜ್ಯವಾಗಿದೆ ಎಂದು ಹೇಳಿದರು. ಭಾರತ ಭಾರತವಾಗಿರಬೇಕು. ಧರ್ಮವು ರಾಷ್ಟ್ರೀಯತೆಗೆ ಮಾನದಂಡವಲ್ಲ. ಅದು ಮನುಷ್ಯ ಮನುಷ್ಯನ ನಡುವಿನ ವಯಕ್ತಿಕ ಸಂಬಂಧ. ಮನಸ್ಸಿನಲ್ಲಿ ಪರಧರ್ಮದ ಬಗ್ಗೆ ಕೆಟ್ಟದಾಗಿ ಯೋಚಿಸಬಾರದು. ಎಲ್ಲಾ ಧರ್ಮಗಳನ್ನು ಸಮದೃಷ್ಠಿಯಲ್ಲಿ ನೋಡಿ ಬೇರೆ ಧರ್ಮದಲ್ಲಿರುವ ಒಪ್ಪಿತ ವೈಶಿಷ್ಟ್ಯಗಳನ್ನು ಎಲ್ಲಾ ಧರ್ಮಿಯರು ಅಳವಡಿಸಿಕೊಳ್ಳಬೇಕು ಎಂದರು. ಹಲವು ದಶಕಗಳಿಂದಲೂ ಕರ್ನಾಟಕವನ್ನು ‘ಸರ್ವ ಜನಾಂಗದ ಶಾಂತಿಯ ತೋಟ’ ಎಂದು ಹೆಮ್ಮೆಯಿಂದ ಕರೆಯುತ್ತಾ ಬಂದ ಹಿರಿಮೆಗೆ ಈಗಾಗಲೇ ಗಂಭೀರ ಧಕ್ಕೆ ಬಂದೊದಗಿರುವುದು ನಿಚ್ಚಳವಾಗಿದೆ ಎಂದು ಎಚ್ಚರಿಸಿದರು.

ಇದೆ ವೇಳೆ ಅಂತರಾಷ್ಟ್ರೀಯ ಚಿತ್ರಕಲಾವಿದ ಕೆ.ಟಿ. ಶಿವಪ್ರಸಾದ್, ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ಸಂಚಾಲಕ ಅಂಬೂಗ ಮಲ್ಲೇಶ್, ಕ್ರೈಸ್ತ ಮುಖಂಡರಾದ ಸುರೇಶ್, ಜೀವನ್ ಪ್ರಕಾಶ್, ಹಿರಿಯ ಪತ್ರಕರ್ತರಾದ ವೆಂಕಟೇಶ್, ಅಜಾದ್ ಟಿಪ್ಪು ಸಂಘರ್ಷ ಸಮಿತಿ ಅಧ್ಯಕ್ಷ ಮುಬಾಶೀರ್ ಅಹಮದ್, ಜೈಭೀಮ್ ಬ್ರಿಗೇಡ್ ಅಧ್ಯಕ್ಷ ರಾಜೇಶ್, ಸೌಹಾರ್ದ ವೇದಿಕೆಯ ಜಿಲ್ಲಾ ಸಂಚಾಲಕ ಎಂ.ಜಿ. ಪೃಥ್ವಿ, ನವೀನ್ ಕುಮಾರ್, ಮಲೆನಾಡು ಮೆಹಬೂಬ್, ಸಮೀರ್, ಚೇತನ್, ಅರವಿಂದ್, ಅಜ್ಜಾಂ ಖಾನ್, ಅಮ್ಜಾದ್ ಖಾನ್ ಇತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Hassan

ದೊಡ್ಡಕಣಗಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ

Published

on

ವರದಿ: ಸತೀಶ್ ಚಿಕ್ಕಕಣಗಾಲು

ಆಲೂರು: ತಾಲ್ಲೂಕಿನ ದೊಡ್ಡಕಣಗಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 12 ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ ನಡೆಯಿತು. ಎಲ್ಲಾ ಸ್ಥಾನಗಳಿಗೆ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಕುಮಾರ್‌ ಅವರು ಅವಿರೋಧ ಆಯ್ಕೆ ಘೋಷಿಸಿದರು.

ಸಾಮಾನ್ಯ ಕ್ಷೇತ್ರದಿಂದ ಕೆ.ಕೆ. ಜಯರಾಮ, ಹೆಚ್‌.ಎಂ. ನಾರಾಯಣ, ಕೆ.ಟಿ. ಬೋರೇಗೌಡ, ಸುಬ್ಬೇಗೌಡ, ವೆಂಕಟೇಗೌಡ, ಮಹಿಳಾ ಕ್ಷೇತ್ರದಿಂದ ಶಕುಂತಲ, ಪ್ರತಿಮ, ನಂಜಶೆಟ್ಟಿ (ಹಿಂದುಳಿದ ವರ್ಗ ಎ), ಕೆ. ಜಗದೀಶ್‌ (ಹಿಂದುಳಿದ ವರ್ಗ ಬಿ), ರಂಗಸ್ವಾಮಿ (ಪ.ಜಾ.) ಹಾಗು ಪರಿಶಿಷ್ಟ ಪಂಗಡದ ಒಂದು ಸ್ಥಾನಕ್ಕೆ ಯಾರೂ ಅರ್ಜಿ ಸಲ್ಲಿಸದ ಹಿನ್ನಲೆಯಲ್ಲಿ ಸ್ಥಾನ ಖಾಲಿಯಿದೆ. ಸಾಲಗಾರರಲ್ಲದ ಕ್ಷೇತ್ರದಿಂದ ಕೆ.ಸಿ. ಸಂತೋಷ್‌ ಅವರು ಆಯ್ಕೆಯಾದರು. 2030ರ ಫೆ. 9ರ ವರೆಗೆ ಚುನಾಯಿತರು ನಿರ್ದೇಶಕರಾಗಿ ಮುಂದುವರೆಯುತ್ತಾರೆ.

ತಾಲ್ಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಕುಮಾರ್‌, ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

ಈ ಸಂದರ್ಭದಲ್ಲಿ ಹಾಸನ ಜಿಲ್ಲಾ ಹೆಚ್‌ಡಿಸಿಸಿ ಬ್ಯಾಂಕ್‌ ನಿರ್ದೇಶಕ ಕಬ್ಬಿನಹಳ್ಳಿ ಜಗದೀಶ್‌, ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಕುಮಾರಸ್ವಾಮಿ, ನಂಜೇಶ್‌ ಸೇರಿದಂತೆ ಗ್ರಾಮದ ಹಿರಿಯ ಮುಖಂಡರು ಹಾಜರಿದ್ದರು.

Continue Reading

Hassan

ಫೆ.11 ರಿಂದ 13 ವರೆಗೆ ರೇಣುಕಾ ಯಲ್ಲಮ್ಮ ದೇವಿಯ 18ನೇ ವರ್ಷದ ಜಾತ್ರಾ ಮಹೋತ್ಸವ

Published

on

ಬೇಲೂರು: ಬೇಲೂರಿನ ಚನ್ನಾಪುರ ರಸ್ತೆಯಲ್ಲಿರುವ ಕೋವಿಪೇಟೆಯಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿಯ 18ನೇ ವರ್ಷದ ಜಾತ್ರಾ ಮಹೋತ್ಸವ ಫೆ. 11 ರಿಂದ ಫೆ.13ರ ವರೆಗೂ ನಡೆಯಲಿದೆ, ಪ್ರತಿಯೊಬ್ಬ ಭಕ್ತರು ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ದೇಗುಲದ ಪ್ರಧಾನ ಅರ್ಚಕ ರವಿಸ್ವಾಮಿ ತಿಳಿಸಿದ್ದಾರೆ.

ಜಾತ್ರಾ ಮಹೋತ್ಸವ ನಿಮಿತ್ತ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಫೆ.11 ಮಂಗಳವಾರ ಸಂಜೆ 6.00 ಗಂಟೆಗೆ ಗಂಗಪೂಜೆ ಮತ್ತು ಕಳಸ ಸ್ಥಾಪನೆ, ಪಂಚಾಮೃತ, ಅಭಿಷೇಕ, ಗಣ ಹೋಮ, ನವಗ್ರಹ ಹೋಮ ಚಂಡಿ ಹೋಮ, ದುರ್ಗಾ ಹೋಮ, ಜಯಾವಿ ಹೋಮಗಳು ನಡೆಯುತ್ತದೆ.

ಫೆ.12 ರ ಬುಧವಾರ ಬೆಳಗ್ಗೆ 8.00 ಗಂಟೆಗೆ 12.30 ವರೆಗೂ ಬೇಲೂರಿನ ವಿಷ್ಣು ಸಮುದ್ರದಲ್ಲಿ (ಅಷ್ಟಮ್ಮನಕೆರೆ) “ಗಂಗಾ ಪೂಜೆ’ ನಂತರ ನಗರದ ಪ್ರಮುಖ ಬೀದಿಗಳಲ್ಲಿ ವೀರಗಾಸೆ ಕುಣಿತ, ಡೊಳ್ಳು ಕುಣಿತ, ನಂದಿ ಧ್ವಜ ಮತ್ತು ಚೌಡಿಕೆ ಪದಗಳೊಂದಿಗೆ ಹಲವು ವಾದ್ಯ ಗೋಷ್ಠಿಯೊಂದಿಗೆ 101 ಕುಂಭಾಷೇಕಗಳೊಂದಿಗೆ ಪ್ರಷಾಲಂಕಾರಗೊಂಡ ಶ್ರೀ ರೇಣುಕಾ ಅಮ್ಮನವರ ಪಲ್ಲಕ್ಕಿ ಮೆರವಣಿಗೆ ಮತ್ತು ಬೆಳಗ್ಗೆ 11.30 ಕ್ಕೆ “ಶ್ರೀ ರೇಣುಕಾ ಯಲ್ಲಮ್ಮನವರ ಕೆಂಡೋತ್ಸವ” ನಡೆಯುತ್ತದೆ. ನಂತರ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ಇರುತ್ತದೆ. “ಮದ್ಯಾಹ್ನ 1-00 ಗಂಟೆಗೆ ಅನ್ನ ಸಂತರ್ಪಣೆ” ನಡೆಯುತ್ತದೆ.

ಫೆ.13 ರ ಬೆಳಿಗ್ಗೆ 8.00 ರಿಂದ ಶ್ರೀ ಹುಚ್ಚಂಗಿ ಅಮ್ಮನವರ ಜಾತ್ರಾ ಮಹೋತ್ಸವ ಉತ್ಸವ” ಬೆಳಗ್ಗೆ 10.30 ರಿಂದ ಸಂಜೆ 6.00 ರವರೆಗೆ ದೇವಿಗೆ ಹರಕೆ ಸೇವೆ ಇರುತ್ತದೆ.

ಈ ಎಲ್ಲಾ ಕಾರ್ಯಕ್ರಮಗಳಿಗೆ ಭಕ್ತಾದಿಗಳು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಆಗಮಿಸಿ ತನು, ಮನ, ಧನ ಸಹಾಯದೊಂದಿಗೆ ಸಹಕರಿಸಿ ಶ್ರೀ ದೇವಿಯವರ ಕೃಪೆಗೆ ಪಾತ್ರರಾಗಬೇಕಾಗಿ ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Continue Reading

Hassan

ಕಳಪೆ ಗುಣಮಟ್ಟದ ಉಪ್ಪು ತಯಾರಿಸಿದ ಕಂಪನಿಗೆ ಒಂದು ಲಕ್ಷ ರೂ. ದಂಡ

Published

on

ಚಾಮರಾಜನಗರ, ಫೆ.06:- ಕಳಪೆ ಗುಣಮಟ್ಟದ ಉಪ್ಪು ತಯಾರಿಸಿದ್ದ ತಮಿಳುನಾಡಿನ ಕಂಪನಿಯೊಂದಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ನ್ಯಾಯನಿರ್ಣಾಯಕ ಅಧಿಕಾರಿ ಗೀತ ಹುಡೇದ ಅವರು 1 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

ಹನೂರು ಪಟ್ಟಣದ ಬಂಡಳ್ಳಿ ರಸ್ತೆಯಲ್ಲಿರುವ ಶ್ರೀ ಮಹದೇಶ್ವರ ಸ್ಟೋರ್ ಗೆ ಕಳೆದ 2024ರ ಜುಲೈ 29ರಂದು ಕೊಳ್ಳೇಗಾಲ ತಾಲ್ಲೂಕಿನ ಆಹಾರ ಸುರಕ್ಷತಾಧಿಕಾರಿ ಶ್ರೀನಿವಾಸ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಅಂಗಡಿಯಲ್ಲಿ ಸಂಶಯಾಸ್ಪದವಾಗಿ ಕಂಡು ಬಂದ ವಿ.ಕೆ.ಎಸ್.ಟ್ರೂ ಸಾಲ್ಟ್ (VKS TRUE SALT) ಎಂಬ ಹೆಸರಿನ ಉಪ್ಪಿನ ಆಹಾರ ಮಾದರಿಯನ್ನು ಸಂಗ್ರಹಿಸಿ ಮೈಸೂರಿನ ವಿಭಾಗೀಯ ಆಹಾರ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದರು.

ಸದರಿ ಉಪ್ಪಿನ ಮಾದರಿಯು ವಿಶ್ಲೇಷಣಾ ವರದಿಯಿಂದ ಕಳಪೆ ಗುಣಮಟ್ಟ (ಸಬ್ ಸ್ಟ್ಯಾಂಡರ್ಡ್) ಎಂದು ದೃಡಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಗಳು ಹಾಗೂ ನ್ಯಾಯನಿರ್ಣಯಾಧಿಕಾರಿಗಳ ನ್ಯಾಯಾಲಯದಲ್ಲಿ ಪ್ರಕರಣ ಸಂಬಂಧ ಮೊಕದ್ದಮೆ ಹೂಡಲಾಗಿತ್ತು.

ಹೆಚ್ಚುವರಿ ಜಿಲ್ಲಾಧಿಕಾರಿಗಳು ಹಾಗೂ ನ್ಯಾಯನಿರ್ಣಾಯಕ ಅಧಿಕಾರಿಗಳಾದ ಗೀತಾ ಹುಡೇದ ಅವರು ಪ್ರಕರಣದ ವಿಚಾರಣೆ ನಡೆಸಿ ತಯಾರಕರಾದ ತಮಿಳುನಾಡಿನ ತೂತುಕುಡಿಯ ವಿ.ಕೆ.ಎಸ್. ಪುಡ್ ಪ್ರಾಡಕ್ಟ್ಸ್ ಕಂಪನಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ಹಾಗೂ ನಿಯಮ ನಿಬಂಧನೆ 2011ರ ರಿತ್ಯಾ ಸೆಕ್ಷನ್ 51 ರಡಿಯಲ್ಲಿ ಒಂದು ಲಕ್ಷ ರೂ. ದಂಡ ವಿಧಿಸಿ ಫೆಬ್ರವರಿ 3 ರಂದು ಆದೇಶಿಸಿದ್ದಾರೆ.

Continue Reading

Trending

error: Content is protected !!