Connect with us

Mandya

ಶಿಕ್ಷಕರು ನಿಂತ ನೀರಾಗಬಾರದು ಆಳವಾದ ಜ್ಞಾನಾರ್ಜನೆ ಹೊಂದುವ ಮೂಲಕ ಇಂದಿನ ಸ್ಪರ್ಧಾತ್ಮಕ ಯುಗಕ್ಕೆ ಮಕ್ಕಳನ್ನು ಸಿದ್ದತೆ ಮಾಡುವ ಕೆಲಸ ಮಾಡಬೇಕು – ಶಾಸಕ ಹೆಚ್.ಟಿ.ಮಂಜು

Published

on

ಶಿಕ್ಷಕರು ನಿಂತ ನೀರಾಗಬಾರದು ಆಳವಾದ ಜ್ಞಾನಾರ್ಜನೆ ಹೊಂದುವ ಮೂಲಕ ಇಂದಿನ ಸ್ಪರ್ಧಾತ್ಮಕ ಯುಗಕ್ಕೆ ಮಕ್ಕಳನ್ನು ಸಿದ್ದತೆ ಮಾಡುವ ಕೆಲಸ ಮಾಡಬೇಕು ಎಂದು ಶಾಸಕ ಹೆಚ್.ಟಿ.ಮಂಜು ಕರೆ ನೀಡಿದರು
ಅವರು ಪಟ್ಟಣದ ಶಿಕ್ಷಕರ ಭವನದಲ್ಲಿ ಅಖಿಲ ಕರ್ನಾಟಕ ಶಿಕ್ಷಕರ ಪರಿಷತ್ತಿನ ತಾಲ್ಲೂಕು ಘಟಕ ಏರ್ಪಡಿಸಿದ್ದ ಪ್ರತಿಭಾನ್ವಿತ ಶಿಕ್ಷಕರಿಗೆ ಅಭಿನಂದನಾ ಸಮಾರಂಭದಲ್ಲಿ‌ ಭಾಗವಹಿಸಿ ಮಾತನಾಡಿದರು.

ಅಖಿಲ ಕರ್ನಾಟಕ ಶಿಕ್ಷಕರ ಪ್ರತಿಭಾ ವೇದಿಕೆ ನಮ್ಮ ತಾಲ್ಲೂಕು ಅಲ್ಲದೇ ಬೇರೆ ತಾಲ್ಲೂಕಿನ ಉತ್ತಮ ಶಿಕ್ಷಕರನ್ನು ಗುರುತಿಸಿ ಅವರಿಗೆ ಗೌರವಿಸುವ ಕೆಲಸ ಮಾಡುತ್ತಿರುವುದು ಸಂತಸದ ವಿಷಯ. ಶಿಕ್ಣಕರು ತಮ್ಮ ಸೇವಾವಧಿಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶ್ತಮಿಸಬೇಕು. ಆ ಮೂಲಕ ಉತ್ತಮ ಸಮಾಜದ ನಿರ್ಮಾಣಕ್ಕೆ ನಾವು ನೀಡುವ ಕೊಡುಗೆ ಎಂದರು.

ಸಮಾಜಸೇವಕ ಹಾಗೂ ಆರ್.ಟಿ.ಓ ಅಧಿಕಾರಿ ಮಲ್ಲಿಕಾರ್ಜುನ್ ಮಾತನಾಡಿ ಸಾರಿಗೆ ಇಲಾಖೆಯಲ್ಲಿ‌ ನವಂಬರ್ ಮಾಹೆ ಪೂರ್ತಿ ವಾಯು ಮಾಲಿನ್ಯ ತಪಾಸಣಾ ಕಾರ್ಯಕ್ರಮ ಇದ್ದು ಶಿಕ್ಚಕ ಸಮೂಹ ಅದರ ಸದುಪಯೋಗ ಪಡಿಸಿಕೊಳ್ಳಬೇಕು.
ಶಿಕ್ಷಕರು ನಾವು ಮಾಡುವ ತಪ್ಪುಗಳನ್ನು ತಿಳಿಸುವ,ತಿದ್ದುವ ಕೆಲಸ ಮಾಡುವ ಮೂಲಕ ಸಮಾಜದ ಸುಧಾರಣೆ ಮಾಡುವ ಕೆಲಸ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸೀತಾರಾಮು, ಸಮನ್ವಯಾಧಿಕಾರಿ ಮಂಜುನಾಥ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಶಿವರಾಮೇಗೌಡ, ಹಿರಿಯ ಉಪಾಧ್ಯಕ್ಷ ಆನಂದ್ ಕುಮಾರ್, ತಾಲ್ಲೂಕು ಪ್ರಾಥಮಿಕ ಶಾಲಾ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪದ್ಮೇಶ್ ಮಾತನಾಡಿದರು.

ಇದೇ ಸಂದರ್ಭದಲ್ಲಿ ಗ್ರಾಮೀಣ ಸಂಘದ ಜಿಲ್ಕಾದ್ಯಕ್ಷ ಹೇಮಣ್ಣ, ಪದವೀಧರ ಶಿಕ್ಷಕರ ಸಂಘದ ಅಧ್ಯಕ್ಷ ಮಹೇಶ್, ಸಮಾಜಸೇವಕ ಯೋಗೇಶ್, ತಾಲ್ಲೂಕು ಕಸಾಪ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ, ತಾಲ್ಲೂಕು ಎಸ್ಸಿ ಎಸ್ಟಿ ನೌಕರರ ಸಂಘದ ಅಧ್ಯಕ್ಷ ಕಟ್ರಯೋಗೇಶ್, ಸಾವಿತ್ರಿಬಾಯಿ ಪುಲೆ ಜಿಲ್ಲಾದ್ಯಕ್ಷೆ ಸರಸ್ವತಿ, ಆರ್.ಎಸ್.ಮೂರ್ತಿ, ಸೇರಿದಂತೆ ನೂರಾರು ಶಿಕ್ಷಕರು ಹಾಜರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಅಪರಿಚಿತ ವಾಹನ ಡಿಕ್ಕಿ: ಫಿಲ್ಡ್ ಆಫೀಸರ್ ಸ್ಥಳದಲ್ಲೇ ಸಾವು

Published

on

ಮದ್ದೂರು: ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಫೀಲ್ಡ್‌ಮನ್‌ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ದೊಡ್ಡಹೊಸಗಾವಿ ಗ್ರಾಮದ ಬಳಿ ಗುರುವಾರ ನಡೆದಿದೆ.

ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನೆ ಫೀಲ್ಡ್‌ಮನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ್(40) ಎಂಬುವರೇ ಅಪಘಾತದಲ್ಲಿ ಮೃತರಾದ ವ್ಯಕ್ತಿಯಾಗಿದ್ದಾರೆ.

ಮಂಡ್ಯ ನಗರದ ಚಾಮುಂಡೇಶ್ವರಿನಗರ ಬಡಾವಣೆಯಲ್ಲಿ ವಾಸವಾಗಿದ್ದ ಮಂಜುನಾಥ್ ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮುಗಿಸಿ ವಾಪಸ್ಸು ಬರುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ಹೇಳಲಾಗುತ್ತಿದೆ.
ಈ ಅಪಘಾತದಲ್ಲಿ ಮಂಜುನಾಥ್ ಅವರಿಗೆ ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Mandya

ಗಜೇಂದ್ರ ಮೋಕ್ಷ ಕೊಳದ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Published

on

ಮಂಡ್ಯ ನಗರದ ಆನೆಕೆರೆ ಬೀದಿಯ ಕಾಳಿಕಾಂಬ ವೃತ್ತದ ಬಳಿಯಿರುವ ಐತಿಹಾಸಿಕ ಕೊಳವಾದ ಗಂಜೇಂದ್ರ ಮೋಕ್ಷ ಕೊಳದ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಅಚೀವರ್ಸ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಸಾತನೂರು ಮತ್ತು ರೋಟರಿ ಸಂಸ್ಥೆ ,ಒನ್ ಇಂಡಿಯ ಟಿವಿ ಚಾನೆಲ್ ಹಾಗೂ ಜೈ ಕರ್ನಾಟಕ ಪರಿಷತ್ ಇವರ ಸಹಯೋಗದಲ್ಲಿ ರೋಟರಿ ಅಧ್ಯಕ್ಷೆ ಅನುಪಮ ರವರು,1 ಇಂಡಿಯ ಟಿವಿ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.

ಇಂಡಿಯಾ ಟಿವಿ ಸಂಸ್ಥಾಪಕರಾದ ಜೈಕುಮಾರ್ ಹಾಗೂ ಜೈ ಕರ್ನಾಟಕ ಪರಿಷತ್ ರಾಜ್ಯಧ್ಯಕ್ಷರಾದ ಬೋರ್ ವೆಲ್ ನಾರಾಯಣ್ ರವರ ನೇತೃತ್ವದಲ್ಲಿ ಕರ್ನಾಟಕವೆಂಬ ನಾಮಕರಣದ 50ನೇ ಸುವರ್ಣ ಸಂಭ್ರಮದ ಸವಿ ನೆನಪಿಗಾಗಿ ಅಚೀವರ್ಸ್ ಶಾಲಾ ಮಕ್ಕಳಿಂದ ಕನ್ನಡ ಜಾಥಾ ಮತ್ತು ಐತಿಹಾಸಿಕ ಇತಿಹಾಸವುಳ್ಳ ಗಜೇಂದ್ರ ಮೋಕ್ಷ ಕೊಳವನ್ನು ಉಳಿಸುವ ಸಲುವಾಗಿ ಕನ್ನಡ ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿತ್ತು.

ಜಾಥ ಉದ್ಘಾಟಿಸಿ ಮಾತಾನಾಡಿದ ಶಾಸಕ ಪಿ.ರವಿಕುಮಾರ್ ಗೌಡ, ಗಜೇಂದ್ರ ಮೋಕ್ಷ ಕೊಳವನ್ನು ಉಳಿಸುವ ಜವಾಬ್ದಾರಿಯನ್ನು ತೆಗೆದುಕೊಂಡು ಮುಂದಿನ ದಿನಗಳಲ್ಲಿ ಕೊಳದ ಅಭಿವೃದ್ಧಿ ಮಾಡಿ ಆಕರ್ಷಣೀಯ ಸ್ಥಳವನ್ನಾಗಿ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಪೇಟೆಬೀದಿ ಯಿಂದ ಪ್ರಾರಂಭ ಆದ ಜಾಥಾ ಸಂಜಯ ವೃತ್ತದಿಂದ ಆರ್.ಪಿ ರಸ್ತೆಯ ಮೂಲಕ ಹಾದುಹೋಗಿ,ನೂರಡಿ ರಸ್ತೆಯ ಮೂಲಕ ವಿವಿ ರಸ್ತೆಯನ್ನ ಆದುಹೋಗಿ ಮಹಾವೀರ ಸರ್ಕಲ್ ಬಳಿ ಕನ್ನಡ ಸರಪಳಿಯನ್ನು ರೂಪಿಸಿ,ಸಿಲ್ವರ್ ಜ್ಯುಬಿಲಿ ಪಾರ್ಕ್ ಬಳಿ ನಾಡಗೀತೆ ಯೊಟ್ಟಿಗೆ ಕಾರ್ಯವನ್ನು ಮುಕ್ತಾಯಗೊಳಿಸಲಾಯಿತು.

ಈ ವೇಳೆ ನೇಗಿಲಯೋಗಿ ಟ್ರಸ್ಟ್ ಅಧ್ಯಕ್ಷರಾದ ರಮೇಶ್, ಅನುಪಮ, ನಾರಾಯಣ್ ಸ್ವಾಮಿ,ಲಕ್ಕಪ್ಪ ಅಚೀವರ್ಸ್ ಶಾಲೆಯ ಪ್ರಾಂಶುಪಾಲರಾದ ವಿದ್ಯ ಹಾಗೂ ಅಡ್ಮಿನ್ ಆದ ರಾಮ್ ಸಿಂಗ್ ಜಗದೀಶ್ ಹಾಗೂ ಶಿಕ್ಷಕರು ಮತ್ತು ಇನ್ನಿತರರು ಉಪಸ್ಥಿತರಿದ್ದರು

ವರದಿ- ಮೋಹನ್ ರಾಗಿಮುದ್ದನಹಳ್ಳಿ

 

Continue Reading

Mandya

ತುಂಬಕೆರೆ ಗ್ರಾಮದ ಪ್ರಾಚೀನ ಶಾಂತೇಶ್ವರ ದೇವಾಲಯದ ಬಳಿ ಸಂರಕ್ಷಣಾ ಅಭಿಯಾನ

Published

on

ವಿಶ್ವ ಪರಂಪರೆ ಸಪ್ತಾಹದ ಅಂಗವಾಗಿ ಇಂದು ಇಂದು ಮಂಡ್ಯ ತಾಲೂಕಿನ ತುಂಬಕೆರೆ ಗ್ರಾಮದ ಪ್ರಾಚೀನ ಶಾಂತೇಶ್ವರ ದೇವಾಲಯದ ಬಳಿ ಸಂರಕ್ಷಣಾ ಅಭಿಯಾನದ ಅಂಗವಾಗಿ ಸ್ವಚ್ಛಗೊಳಿಸಲಾಯಿತು.

ನಮ್ಮ ಇತಿಹಾಸ ಗತವೈಭವವನ್ನು ಸಾರುವ ಇಂತಹ ಪ್ರಾಚೀನ ಸ್ಮಾರಕಗಳನ್ನು ಸಂರಕ್ಷಿಸಬೇಕು* ಎಂದು ಮಂಡ್ಯ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿಗಳಾದ ಎಂ.ಎಸ್ ವೀಣಾ ಅವರು ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಜನಪ್ರತಿನಿಧಿಗಳಾದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಮುಂದೆ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ನಮ್ಮ ನಡಿಗೆ ಪರಂಪರೆ ಎಡೆಗೆ ಘೋಷವಾಕ್ಯದೊಂದಿಗೆ ಕಾರ್ಯಕ್ರಮವನ್ನು ನಡೆಸಲಾಯಿತು.

Continue Reading

Trending