Mysore
ಸೈನಿಕ ಹುಳು ಬಾದೆ ತಡೆಗಟ್ಟಲು ರೈತರಿಗೆ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಅವರಿಂದ ಮಾಹಿತಿ
ಪಿರಿಯಾಪಟ್ಟಣ: ಮುಸುಕಿನ ಜೋಳ ಬೆಳೆಗೆ ಸೈನಿಕ ಹುಳು ಕಾಟ ಎದುರಾದ ವೇಳೆ ರೈತರು ಮುಂಜಾಗ್ರತ ಕ್ರಮವಾಗಿ ಕೃಷಿ ಇಲಾಖೆ ಮಾರ್ಗದರ್ಶನದ ಅನುಸಾರ ಔಷಧಿ ಸಿಂಪಡಿಸುವಂತೆ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ವೈ.ಪ್ರಸಾದ್ ತಿಳಿಸಿದರು.
ಪಿರಿಯಾಪಟ್ಟಣ ತಾಲೂಕಿನ ವಿವಿದೆಡೆ ರೈತರು ಜಮೀನಿನಲ್ಲಿ ಬೆಳೆದ ಮುಸುಕಿನ ಜೋಳಕ್ಕೆ ಸೈನಿಕ ಹುಳು ಬಾದೆ ಹೆಚ್ಚಾದ ಹಿನ್ನೆಲೆ ಭೇಟಿ ನೀಡಿ ಹತೋಟಿ ಕ್ರಮಗಳ ಬಗ್ಗೆ ರೈತರಿಗೆ ಮಾಹಿತಿ ನೀಡಿ ನವಿಲೂರು ಗ್ರಾಮದಲ್ಲಿ ಅವರು ಮಾತನಾಡಿದರು, ತಾಲ್ಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಮುಸುಕಿನ ಜೋಳವು ಪ್ರಮುಖ ಬೆಳೆಯಾಗಿದ್ದು ತಾಲ್ಲೂಕಿನಾದ್ಯಂತ ಉತ್ತಮ ಮಳೆಯಾದ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಮುಸುಕಿನ ಜೋಳ ಬಿತ್ತನೆ ಮಾಡಲಾಗಿದೆ ಈಗಾಗಲೇ ಬಿತ್ತನೆಯಿಂದ ಹಿಡಿದು 20-25 ದಿನದ ಬೆಳೆವರೆಗೂ ಅಲ್ಲಲ್ಲಿ ಸೈನಿಕ ಹುಳುವಿನ ಬಾಧೆ ಕಂಡು ಬಂದಿದೆ ಈ ನಿಟ್ಟಿನಲ್ಲಿ ರೈತರಿಗಾಗಿ ಸೈನಿಕ ಹುಳು ಬಾದೆ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ಬಗ್ಗೆ ಅಗತ್ಯ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಫಾಲ್ ಸೈನಿಕ ಹುಳು ಹಸಿರು ಬಣ್ಣದಲ್ಲಿದ್ದು ತಲೆಯ ಮೇಲ್ಭಾಗದಲ್ಲಿ ತಲೆಕೆಳಗಾದ ಙ ಚಿಹ್ನೆಯನ್ನು ಹೊಂದಿರುತ್ತದೆ, ಇದರ ಉದರದ 8 ಮತ್ತು 9ನೇ ಭಾಗದಲ್ಲಿ ನಾಲ್ಕು ಉಬ್ಬಿದ ಕಪ್ಪು ಚುಕ್ಕೆಗಳು ಚಚ್ಚೌಕಕಾರದ ರೀತಿಯಲ್ಲಿ ಕಂಡುಬರುತ್ತದೆ, ಒಂದುವರೆ ಇಂಚು ಉದ್ದದ ಹುಳುವು ಪತಂಗಗಳಾಗಿ ಸಾವಿರಾರು ಸಂಖ್ಯೆಗಳಲ್ಲಿ ಆಹಾರವನ್ನು ಹುಡುಕಿಕೊಂಡು ಬಹಳ ದೂರ ಸಾಗಿ ಆಹಾರ ಬೆಳೆಯಿರುವ ಪ್ರದೇಶಗಳಲ್ಲಿ ಗಿಡಗಳ ಎಲೆಗಳ ಮೇಲೆ ಮೊಟ್ಟೆಗಳನ್ನು ಇಡುತ್ತವೆ,
ಒಂದು ಹೆಣ್ಣು ಪತಂಗವು ಸರಾಸರಿ 150 ರಿಂದ 200 ಹಸಿರು ಮಿಶ್ರಿತ ಮೊಟ್ಟೆಗಳನ್ನು ಗರಿಯ ತಳಭಾಗದಲ್ಲಿ ಗುಂಪು ಗುಂಪಾಗಿ ಇಡುತ್ತವೆ, 4-5 ದಿನಗಳ ನಂತರ ಮೊಟ್ಟೆ ಒಡೆದು ಮರಿಗಳು ಹೊರಬಂದು 18-28 ದಿನಗಳವರೆಗೆ ಬೆಳೆಗಳಿಗೆ ಹಾನಿ ಮಾಡುತ್ತವೆ ಮತ್ತು 7-13 ದಿನಗಳಲ್ಲಿ ಮಣ್ಣಿನಲ್ಲಿ ಕೋಶಾ ವ್ಯಸ್ಥೆಯಲ್ಲಿರುತ್ತವೆ, ಒಟ್ಟು
30-45 ದಿನಗಳಲ್ಲಿ ಸೈನಿಕ ಹುಳು ಜೀವನ ಚಕ್ರವನ್ನು ಪೂರ್ಣಗೊಳಿಸುತ್ತವೆ, ಈ ಕೀಟವು ಹಗಲು ವೇಳೆಯಲ್ಲಿ ಮಣ್ಣು ಕಾಂಡದ ಮಧ್ಯ ಮತ್ತು ಗರಿಗಳ ತಳ ಭಾಗದಲ್ಲಿ ವಾಸಿಸುತ್ತವೆ ಸಂಜೆಯ ವೇಳೆ ಹುಳುಗಳು ಚಟುವಟಿಕೆ ಪ್ರಾರಂಭಿಸಿ ಬೆಳೆಯ ಎಲೆಯನ್ನು ಸಂಪೂರ್ಣವಾಗಿ ತಿಂದು ಹಾಕುತ್ತವೆ ತೀವ್ರವಾಗಿ ಹಾನಿಗೊಳಗಾದ ಬೆಳೆಯಲ್ಲಿ ಎಲೆಯ ದಿಂಡು ಕಾಣಸಿಗುತ್ತವೆ ಎಂದು ಮಾಹಿತಿ ನೀಡಿ
ಕೃಷಿ ಇಲಾಖೆ ಸೂಚಿಸಿದ ಔಷಧಿ ಸಿಂಪಡಿಸುವ ಮೂಲಕ ರೋಗ ಹತೋಟಿಗೆ ತರಬಹುದು ಹೆಚ್ಚಿನ ಮಾಹಿತಿಗಾಗಿ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರದಲ್ಲಿನ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದರು.
ವರದಿ: ಬೆಕ್ಕರೆ ಸತೀಶ್ ಆರಾಧ್ಯ
Mysore
ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದಲ್ಲಿ 2.5 ಲಕ್ಷ ಹಣ ಸಂಗ್ರಹ
ಮೈಸೂರು: ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ತುಂಬಾ ಯಶಸ್ವಿಯಾಗಿ ಪೂರ್ಣಗೊಂಡಿತು. ಒಟ್ಟಾರೆಯಾಗಿ 2.5 ಲಕ್ಷ ರೂಪಾಯಿ ಸಂಗ್ರಹವಾಗಿದೆ ಎಂದು ರಂಗಾಯಣದ ನಿರ್ದೇಶಕ ಸತೀಶ್ ತಿಪಟೂರು ಅವರು ತಿಳಿಸಿದರು.
ರಂಗಾಯಣದ ಬಿ.ವಿ. ಕಾರಂತ್ ರಂಗ ಚಾವಡಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು . ಆರಂಭವಾದ ಮೊದಲೆರಡು ದಿನಗಳಲ್ಲಿ ಸಾರ್ವಜನಿಕರ ಸಂಖ್ಯೆಯು ಕಡಿಮೆಗೊಂಡಿದ್ದು. ತದನಂತರ ಕೊನೆಯದಿನದ ವರೆಗೂ ಕಲಾಮಂದಿರ ವರೆತು ಪಡಿಸಿ ಶೇ.80. 90 ರಂಗಾಯಣ ಕಲಾಪ್ರೇಕ್ಷರಿಂದ ತುಂಬಿ ತುಳುಕಿತು ವಾರಾಂತ್ಯ [ ಶನಿವಾರ ಮತ್ತು ಭಾನುವಾರ] ದಿನಗಳಲ್ಲಿ ಕಲಾಮಂದಿರನು ಸೇರಿ ಶೇ 100 ಸಾರ್ವಜನಿಕರಿಂದ ಕಂಗೊಳಿಸಿತು ಎಂದು ಹೇಳಿದರು.
ಪ್ರತಿವರ್ಷದಂತೆ ಈ ವರ್ಷವು ಬಹುಭಾಷೆಯ ನಾಟಕಗಳು, ಚಲನಚಿತ್ರಗಳು, ಬೀದಿನಾಟಕಗಳು, ಜನಪದ ಉತ್ಸವ, ಪುಸ್ತಕ ಮೇಳ, ಕರಕುಶಲ ಮೇಳ ಮತ್ತು ಪ್ರಾತ್ಯಕ್ಷಿಕೆ, ದೇಸಿ ಆಹಾರ ಮೇಳ, ಚಿತ್ರಕಲಾ ಪ್ರದರ್ಶನ, ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಪ್ರೇಕ್ಷಕರ ಮೆಚ್ಚುಗೆಗೆ ಕಾರಣವಾದವು ಎಂದರು.
ಒಟ್ಟಾರೆಯಾಗಿ 6 ದಿನಗಳ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದಲ್ಲಿ 1.200 ಕ್ಕು ಹೆಚ್ಚು ಕಲಾವಿದರು ಭಾಗವಹಿಸಿ ವಿಬಿನ್ನವಾಗಿ ಕಲೆ ಸಾಂಸ್ಕೃತಿ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದಾರೆ ಎಂದು ಹೇಳಿದರು.
ಈ ವರ್ಷ ಬಹುರೂಪಿಯ ರಾಷ್ಟ್ರೀಯ ನಾಟಕೋತ್ಸವದಲ್ಲಿ ಬಹಳ ವಿಶೇಷವಾಗಿ ಮಕ್ಕಳ ಬಹುರೂಪಿ ವಿಶೇಷ ಕಾರ್ಯಕ್ರಮ ಆರಂಭಿಸಿದ್ದು. ಒಟ್ಟಾರೆಯಾಗಿ ಮಕ್ಕಳ ನಾಟಕವನ್ನು ಸುಮಾರು ಒಂದು ಸಾವಿರ ಮಕ್ಕಳು ವಿಕ್ಷಣೆ ಮಾಡಿದರು. ಚಲನಚಿತ್ರ ಮತ್ತು ಮಕ್ಕಳ ಚಲನಚಿತ್ರವನ್ನು ಎರಡು ಸಾವಿರ ಮಕ್ಕಳು ವಿಕ್ಷಿಸಿದ್ದಾರೆ ಎಂದು ತಿಳಿಸಿದರು.
ರಂಗಾಯಣದ ಉಪನಿರ್ದೇಶಕ ಡಾ. ಎಂ.ಡಿ. ಸುದರ್ಶನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನಸ್ವಾಮಿ, ಉಪಸ್ಥಿತರಿದ್ದರು.
Mysore
ಮೈಸೂರಿನಲ್ಲಿ ಸಾಂಸ್ಕೃತಿಕ ಕಾವೇರಿ ರಾಜ್ಯ ಸಮ್ಮೇಳನ
ಮೈಸೂರು: ಮೈಸೂರಿನಲ್ಲಿ ಸಂಸ್ಕೃತ ಕಾವೇರಿ ರಾಜ್ಯ ಸಮ್ಮೇಳನವನ್ನು ಫೆಬ್ರವರಿ 1 ಮತ್ತು 2 ರಂದು ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಆಯೋಜಿಸಲಾಗಿದೆ ಎಂದು ಕೃಷ್ಣ ರಾಜಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ಅವರು ತಿಳಿಸಿದರು.
ಈ ಕುರಿತು ನಗರದ ಪ್ರತಿಕಾಗೋಷ್ಠಿಯಲ್ಲಿ ಸೋಮವಾರ ಮತನಾಡಿದ ಅವರು ಯಾವುದೇ ಜಾತಿ ಧರ್ಮ ಬೇದವಿಲ್ಲದೆ ಎಲ್ಲರ ಮನೆಗಳಲ್ಲಿ ಸಂಸ್ಕೃತ ಪಾಠ ಶಾಲೆಗಳು ಆರಂಭ ಆಗಬೇಕು ಎಂಬ ದೃಷ್ಟಿಯಿಂದ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಹೇಳಿದರು.
ನಗರದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಫೆಬ್ರವರಿ 1 ರಂದು ಸಂಸ್ಕೃತಿಕ ಕಾವೇರಿ ರಾಜ್ಯ ಸಮ್ಮೇಳನವನ್ನು ಮೇಘಾಲಯದ ರಾಜ್ಯಪಾಲರಾದ ಸಿ.ಎಚ್. ವಿಜಯಶಂಕರ್ ಅವರು ಉದ್ಘಾಟನೆಯನ್ನು ನೆರವೇರಿಸುವರು. ಮೈಸೂರು ರಾಮಕೃಷ್ಣಾಶ್ರಮದ ಅಧ್ಯಕ್ಷರಾದ ಶ್ರೀ ಸ್ವಾಮಿ ಮುಕ್ತಿದಾನಂದಜಿ ಮಹರಾಜ್ ಕಾರ್ಯಕ್ರಮದ ಸಾನ್ನಿಧ್ಯ ವಹಿಸುವರು ಎಂದು ಹೇಳಿದರು.
ಸಂಸ್ಕ್ರತ ಕಾವೇರಿ ರಾಜ್ಯ ಸಮ್ಮೇಳನದ ಆಕರ್ಷಣೆಗಳು: ವಿಶೇಷ ಉಪನ್ಯಾಸ, ವಿವಿಧ ಗೋಷ್ಠಿಗಳು, ವಿಜ್ಞಾನ ಪ್ರದರ್ಶಿನ, ವಸ್ತು ಪ್ರದರ್ಶಿನ, ಪುಸ್ತಕ ಪ್ರದರ್ಶನ ಮತ್ತು ಮಾರಾಟ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಿದರು.
ಈ ಸಮ್ಮೇಳನದಲ್ಲಿ ಶೋಭಾಯಾತ್ರೆಯು ಫೆಬ್ರವರಿ 1 ರಂದು ಸಂಜೆ 5 ಗಂಟೆಗೆ ವಿದ್ಯಾರಂಣ್ಯ ಪುರಂ, ಚಾಮುಂಡಿಪುರಂ, ಮೂಲಕ ಗಣಪತಿ ಸಚ್ಚಿದಾನಂದ ಆಶ್ರಮದ ವರೆಗೂ ನಡೆಸಿ ನಂತರ ಸಾರ್ವಜನಿಕ ಸಭೆಯನ್ನು ಆಯೋಜಿಸಲಾಗಿದ್ದು ಸಂಸ್ಕೃತ ಭಾರತಿಯ ಅಖಿಲ ಭಾರತ ಉಪಾಧ್ಯಕ್ಷ ದಿನೇಶ್ ಕಾಮತ್ ಅವರಿ ಸಾರ್ವಜನಿಕ ಸಭೆ ಕುರಿತು ಭಾಷಣ ಮಾಡುವರು ಎಂದರು.
ಸಂಸದ ಯದುವೀರ್ ಒಡೆಯರ್ ಅವರು ಕಾರ್ಯಕ್ರಮದ ಗೌರವಾಧ್ಯಕ್ಷರಾಗಿ ಭಾಗವಹಿಸುವರು. ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಶ್ರೀ ದತ್ತ ವಿಜಯಾನಂದ ಸ್ವಾಮೀಜಿ,ಶ್ರೀ ಶರಚ್ಚಂದ್ರ ಸ್ವಾಮೀಜಿ, ಮೈಸೂರು ವಿವಿ.ಯ ಕುಲಪತಿ ಪ್ರೊ, ಲೋಕನಾಥ್, ಸಂಗೀತ ವಿವಿ.ಯ ಕುಲಪತಿ ಪ್ರೊ, ವಿ ನಾಗೇಶ್ ಬೆಟ್ಟಕೋಟೆ, ಸಂಸ್ಕೃತ ವಿವಿ.ಯ ಕುಲಪತಿ ಡಾ. ಅಹಲ್ಯ ಶರ್ಮ, ವಿಧಾನ ಪರಿಷತ್ ಸದಸ್ಯ ವಿವೇಕಾನಂದ, ಮಾಜಿ ಸಂಸದ ಪ್ರತಾಪ್ ಸಿಂಹ, ಶ್ರೀ ನಿಧಿ ಗ್ರೂಫ್ಸ್ ನ ಪ್ರಭಾಕರ್ ರಾವ್ ಉಪಸ್ಥಿತರಿರುತ್ತಾರೆ ಎಂದು ಹೇಳಿದರು.
ಈ ಕಾರ್ಯಕ್ರಮದ ಸಮಾರೋಪ ಸಮಾರಂಭವು ಫೆಬ್ರವರಿ 2 ರಂದು ಸಂಜೆ 5 ಗಂಟೆಗೆ ನಡೆಯಲಿದ್ದು, ಸಂಸ್ಕೃತ ಭಾರತಿಯ ಅಖಿಲ ಭಾರತೀಯ ಸಂಘಟನಾ ಕಾರ್ಯದರ್ಶಿಗಳಾದ ಜಯಪ್ರಕಾಶ್ ಗೌತಮ್ ಅವರು ಸಮಾರೋಪ ಭಾಷಣ ಮಾಡುವರು ಎಂದು ತಿಳಿಸಿದರು.
ಸಂಸ್ಕೃತ ಭಾರತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಭಟ್, ಅಖಿಲ ಭಾರತ ಪ್ರಚಾರ ಪ್ರಮುಖರಾದ ಡಾ,ಸಚಿನ್ ಕಟಾಳೆ, ರಾಜ್ಯ ಕಾರ್ಯದರ್ಶಿ ಗುರುರಾವ್ ಕುಲಕರ್ಣಿ, ರಾಜ್ಯದ ಸಂಸ್ಕೃತ ಪ್ರಧ್ಯಾಪಕರು ಸಂಸ್ಕೃತ ಸಾಹಿತಿಗಳು, ವಿದ್ಯಾರ್ಥಿಗಳು ಉಪಸ್ಥಿತರಿರುವರು ಎಂದು ಹೇಳಿದರು.
ಸಂಸ್ಕೃತ ಭಾರತಿ ಕರ್ನಾಟಕ ಸಮ್ಮೇಳನದ ಸಂಚಾಲಕ ಡಾ. ಬಿ.ಜೆ. ಭಾಗ್ಯಲಕ್ಷ್ಮಿ, ಸಂಸ್ಕೃತ ಕಾವೇರಿ ಸ್ವಾಗತ ಸಮಿತಿಯ ಕಾರ್ಯದರ್ಶಿ ಅ.ಮ. ಭಾಸ್ಕರ ಅವರು ಉಪಸ್ಥಿತರಿದ್ದರು.
Mysore
ಖೋ-ಖೋ ವಿಶ್ವಕಪ್ನಲ್ಲಿ ಮೈಸೂರಿನ ಕುವರಿ ಕಮಾಲ್: ಜನವರಿ 21ರಂದು ತಿ.ನರಸೀಪುರದಲ್ಲಿ ಚೈತ್ರೋತ್ಸವ
ತಿ.ನರಸೀಪುರ: ಇದೇ ಜನವರಿ 19 ರಂದು ನವದೆಹಲಿಯ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ನೇಪಾಳ ನಡುವಿನ ಖೋ-ಖೋ ವಿಶ್ವಕಪ್ 2025ರ ಫೈನಲ್ಸ್ನಲ್ಲಿ ಭಾರತ ತಂಡದ ಗೆದ್ದು ಬೀಗಿತ್ತು.
ಈ ವಿಶ್ವಕಪ್ ವಿಜೇತ ಮಹಿಳಾ ತಂಡದಲ್ಲಿ ಮೈಸೂರಿನ ಯುವತಿ ಚೈತ್ರ ಉತ್ತಮ ಪ್ರದರ್ಶನ ನೀಡುವ ಮೂಲಕ ಗಮನ ಸಳೆದಿದ್ದರು.
ಮೂಲತಃ ಮೈಸೂರು ಜಿಲ್ಲೆಯ ನರಸೀಪುಪರ ತಾಲೂಕಿನ ಚೈತ್ರಾ ಅವರ ಸಾಧನೆ ಕೊಂಡಾಡಲು ಚೈತ್ರೋತ್ಸವ ಕಾರ್ಯಕ್ರಮಕ್ಕೆ ಟಿ ನರಸೀಪುರದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಇದೇ ಜನವರಿ 21ರಂದು ಟಿ ನರಸೀಪುರಕ್ಕೆ ಚೈತ್ರಾ ಅವರು ಆಗಮಿಸುತ್ತಿದ್ದು, ಈ ವೇಳೆ ಚೈತ್ರಗೆ ಅದ್ದೂರಿ ಸ್ವಾಗತ ಕೋರಲು ಸಿದ್ಧತೆ ನಡೆಸಲಾಗಿದೆ.
ಈ ಸಂಬಂಧ ಟಿ ನರಸೀಪುರ ತಾಲ್ಲೂಕಿನ ಸರ್ವ ಸಂಘಟನೆಗಳಿಂದ ಸುದ್ದಿಗೋಷ್ಠಿ ನಡೆಸಿದ್ದು, ಭಾರತ ಮಹಿಳಾ ಖೋ ಖೋ ತಂಡದಲ್ಲಿ ನಮ್ಮ ತಾಲ್ಲೂಕಿನ ಕ್ರೀಡಾಪಟು ಚೈತ್ರ ಆಟವಾಡಿದ್ದಾರೆ. ಇದು ನಮ್ಮ ತಾಲ್ಲೂಕಿಗೆ ಹೆಮ್ಮೆಯ ವಿಷಯ. ಭಾರತ ಮಹಿಳಾ ಖೋ ಖೋ ತಂಡಕ್ಕೆ ವಿಶ್ವಕಪ್ ಸಿಕ್ಕಿದೆ. ಜನವರಿ 21ರಂದು ಟಿ ನರಸೀಪುರಕ್ಕೆ ಚೈತ್ರ ಆಗಮಿಸುತ್ತಿದ್ದಾರೆ.ಈ ವೇಳೆ ಖಾಸಗಿ ಬಸ್ ನಿಲ್ದಾಣದಿಂದ ವಿದ್ಯೋದಯ ಕಾಲೇಜು ವೃತ್ತದವರೆಗೆ ಅದ್ದೂರಿ ಮೆರವಣಿಗೆ ನಡೆಯಲಿದೆ. ಟಿ ನರಸೀಪುರ ತಾಲ್ಲೂಕಿನ ಸರ್ವ ಸಂಘಟನೆಗಳು ಮೆರವಣಿಗೆಯಲ್ಲಿ ಭಾಗಿಯಾಗಲಿವೆ ಎಂದು ಮುಖಂಡರು ಮಾಹಿತಿ ನೀಡಿದರು.
-
Mysore22 hours ago
ಮೈಸೂರು ಮಹಾರಾಜರಿಗೆ ಮದುವೆ ಆಮಂತ್ರಣ ನೀಡಿದ ಡಾಲಿ
-
Sports21 hours ago
ಪಾಕಿಸ್ತಾನಕ್ಕೆ ಎಚ್ಚರಿಕೆ ಕೊಟ್ಟ ಸುರೇಶ್ ರೈನಾ
-
Sports20 hours ago
Kho Kho world cup 2025: ಭಾರತ ಮಹಿಳಾ ಹಾಗೂ ಪುರುಷ ತಂಡಗಳೇ ಚಾಂಪಿಯನ್
-
National - International20 hours ago
ಮಹಾ ಕುಂಭಮೇಳ ದರ್ಶನಕ್ಕಾಗಿ ಹುಬ್ಬಳ್ಳಿಯಿಂದ ವಿಶೇಷ ರೈಲು ವ್ಯವಸ್ಥೆ : ಈ ದಿನ ಮಾತ್ರ!
-
Mysore23 hours ago
ತಾಲೂಕು ಕಚೇರಿಗಳು ಪ್ರಾರಂಭವಾಗಲು ಒತ್ತಾಯ: ಹೊಸೂರು ಕುಮಾರ್
-
Hassan7 hours ago
ಅನುಮತಿ ಪಡೆಯೇ ಚಿತ್ರೀಕರಣ ಉಪಕರಣ ತಂದಿಟ್ಟಿದ್ದಕ್ಕೆ ದಂಡ ವಿಧಿಸಿಧ್ದ ಅರಣ್ಯ ಇಲಾಖೆ
-
Hassan7 hours ago
ಹಾಸನ : ಆನ್ಲೈನ್ ಗೇಮ್ಗೆ ಯುವಕ ಬಲಿ
-
Mysore23 hours ago
ಪ್ಲಾಸ್ಟಿಕ್ ತ್ಯಾಜ್ಯ ಕಾನನ ಪ್ರವೇಶಿಸದಂತೆ 2 ಹಂತದ ತಪಾಸಣೆ: ಈಶ್ವರ ಖಂಡ್ರೆ