Connect with us

Location

ಬಗೆಯದಷ್ಟು ಬಯಲಿಗೆ ಕರಾಮುವಿವಿ ಹಗರಣ

Published

on

ಬಗೆಯದಷ್ಟು ಬಯಲಿಗೆ ಕರಾಮುವಿವಿ ಹಗರಣ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಲಂಚಾವತಾರ ಬಗೆದಷ್ಟು ಬಯಲಿಗೆ ಬಂದಿದೆ.

ಹಣ ಕೊಟ್ಟರೆ ಪರೀಕ್ಷೆಯಲ್ಲಿ ನಕಲು ಮಾಡಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ವಿದ್ಯಾರ್ಥಿಯೊಬ್ಬ ಪ್ರಾಧ್ಯಾಪಕರ ಜೊತೆ ಮಾತನಾಡಿರುವ ಆಡಿಯೋ ವೈರಲ್ ಎಲ್ಲೆಡೆ ಆಗುತ್ತಿದೆ.

ಎಂಎಸ್ಸಿ ಪ್ರಶ್ನೆ ಪತ್ರಿಕೆಗೆ 1500 ರೂ., ಎಂಎ ಮತ್ತು ಎಂಕಾಮ್ ಪ್ರಶ್ನೆ ಪತ್ರಿಕೆಗೆ 1 ಸಾವಿರ ರೂಪಾಯಿ ಕೊಟ್ಟರೆ ಪರೀಕ್ಷೆಯಲ್ಲಿ ನಕಲು ಮಾಡಲು ಅವಕಾಶ ಮಾಡಿಕೊಡಲಾಗುತ್ತದೆ. ಹಣ ಕೊಡದ ವಿದ್ಯಾರ್ಥಿಗಳನ್ನು ಬೇರೆ ಪರೀಕ್ಷಾ ಕೊಠಡಿಯಲ್ಲಿ ಕೂರಿಸಿ ಪರೀಕ್ಷೆ ಬರೆಸುತ್ತಾರೆ. ಈ ಸಂಬಂಧ ವಿವಿ ಪ್ರಾಧ್ಯಾಪಕರ ಜೊತೆ ವಿದ್ಯಾರ್ಥಿಯೊಬ್ಬ ಮಾತನಾಡಿರುವ ಆಡಿಯೋ ವೈರಲ್ ಆಗುವ ಮೂಲಕ ವಿವಿಯ ಲಂಚಾವತಾರ ಬಯಲಿಗೆ ಬಂದಿದೆ.

ಆಡಿಯೋದಲ್ಲಿ ಇರುವಂತೆ, ಚಿತ್ರದುರ್ಗ ಪರೀಕ್ಷಾ ಕೇಂದ್ರದಲ್ಲಿ ಒಂದು ಸೆಮಿಸ್ಟರ್ಗೆ ಮೂರು ಸಾವಿರ ರೂಪಾಯಿ ಲಂಚ ಪಡೆದು ಕಾಪಿ ಹೊಡೆಯಲು ಅವಕಾಶ ಮಾಡಿಕೊಡಲಾಗುತ್ತದೆ. ಹಣ ಕೊಡದ ವಿದ್ಯಾರ್ಥಿಗಳನ್ನು ಪ್ರತ್ಯೇಕ ರೂಮ್ನಲ್ಲಿ ಕೂರಿಸಿ ಪರೀಕ್ಷೆ ಬರೆಸುವ ಮೂಲಕ ಟಾರ್ಗೆಟ್ ಮಾಡಲಾಗುತ್ತದೆ.

ಚಿತ್ರದುರ್ಗ ಕೇಂದ್ರ ಬೇಡ ಎಂದು ದಾವಣಗೆರೆ ಪರೀಕ್ಷಾ ಕೇಂದ್ರ ತೆಗೆದುಕೊಂಡೆ. ಆದರೆ, ಚಿತ್ರದುರ್ಗಕ್ಕಿಂತ ಹೆಚ್ಚು ಲಂಚಾವತಾರ ಇಲ್ಲಿದೆ. ಚಿತ್ರದುರ್ಗದಲ್ಲಿ ಒಂದು ಸೆಮೆಸ್ಟರ್ಗೆ 1 ಸಾವಿರ ಕೇಳಿದರೆ, ದಾವಣಗೆರೆಯಲ್ಲಿ ಒಂದು ವಿಷಯಕ್ಕೆ 1 ಸಾವಿರ ಕೇಳಿದ್ದಾರೆ ಎಂದು ಆಡಿಯೋದಲ್ಲಿ ಕೇಳಿ ಬಂದಿದೆ

ದಾವಣಗೆರೆ ರೀಜನಲ್ ಸೆಂಟರ್ನ ಕೊಠಡಿಯೊಂದರಲ್ಲಿ 36 ಮಂದಿ ಇದ್ದರು. ಯಾರು ಎಲ್ಲಿ ಬೇಕಾದರೂ ಕುಳಿತುಕೊಳ್ಳಬಹುದಾಗಿತ್ತು. ನೋಂದಣಿ ಸಂಖ್ಯೆ ಏನೂ ಇಲ್ಲ. ಇದನ್ನು ಪರೀಕ್ಷಾ ಸಂಯೋಜಕರಲ್ಲಿ ಪ್ರಶ್ನಿಸಿದಾಗ, ಬೆಳಗ್ಗೆಯಿಂದ ನಾನು ತಿಂಡಿ ತಿಂದಿಲ್ಲ, ಅದನ್ನು ವಿಚಾರ ಮಾಡುತ್ತಿದ್ದೇನೆ ಎಂದು ಹೇಳಿದ್ದಾಗಿ ವಿದ್ಯಾರ್ಥಿ ಹೇಳುವುದನ್ನು ಆಡಿಯೋದಲ್ಲಿ ಕೇಳಬಹುದು

ಒಟ್ಟಾರೆಯಾಗಿ ದಿನೇ ದಿನೇ ಮುಕ್ತ ವಿವಿಯ ಅಕ್ರಮಗಳು ಒಂದೊಂದೇ ಬೆಳಕಿಗೆ ಬರುತ್ತಿದ್ದು ಈ ಬಗ್ಗೆ ವಿವಿಯ ವಿಸಿ ತುಟಿ ಬಿಚ್ಚದಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಇನ್ನಾದರೂ ಸರ್ಕಾರ ಈ ಬಗ್ಗೆ ಇನ್ನೂ ಕ್ರಮ ತೆಗೆದುಕೊಳ್ಳುತ್ತಾ ಕಾದು ನೋಡಬೇಕಿದೆ

Continue Reading
Click to comment

Leave a Reply

Your email address will not be published. Required fields are marked *

Hassan

ಖಾಲಿ ಅಂಗಡಿಯಲ್ಲಿ ಕಳವು ಯತ್ನ ಒಳ ನುಗ್ಗಲು ಅಡ್ಡಿಯಾದ ಬೆಂಕಿ: ತನಿಖೆಗೆ ಮೂರು ತಂಡ ರಚನೆ

Published

on

ಅರಕಲಗೂಡು: ಪಟ್ಟಣದ ಜ್ಯುವೆಲ್ಲರಿ ಅಂಗಡಿಯಲ್ಲಿ ಚಿನ್ನಾಭರಣ ಕಳವಿಗೆ ಶನಿವಾರ ಮುಂಜಾನೆ ವಿಫಲ ಯತ್ನ ನಡೆದಿದೆ. ಪೇಟೆ ರಸ್ತೆಯಲ್ಲಿರುವ ಮಾತಾಜಿ ಜ್ಯುವೆಲ್ಲರ‍್ಸ್ ಶಾಪ್‌ನ ಗೋಡೆಯನ್ನು ಹಿಂಬದಿಯಿಂದ ಕೊರೆದು ಒಳನುಗ್ಗಿ ಆಭರಣ ದೋಚಲು ಕಳ್ಳರು ಖತಾರ್ನಾಕ್ ಪ್ಲಾನ್ ಮಾಡಿದ್ದಾರೆ. ಆದರೆ ಅದು ಸಾಧ್ಯವಾಗಿಲ್ಲ.

ಖದೀಮರು ಬಂದ ಉದ್ದೇಶ ಈಡೇರಲು ಬೆಂಕಿ ಅಡ್ಡಿಯಾಗಿದೆ. ಒಬ್ಬರು ಒಳ ಹೋಗುವಷ್ಟು ಅಗಲಕ್ಕೆ ಗೋಡೆ ಕೊರೆದ ಬಳಿಕ ಗ್ಯಾಸ್ ಕಟರ್‌ನಿಂದ ಗೋಡೆಗೆ ಹೊಂದಿಕೊಂಡಂತೆ ಇದ್ದ ಪ್ಲೇವುಡ್ ಕತ್ತರಿಸಿ ಒಳ ಪ್ರವೇಶಿಸಲು ಯತ್ನಿಸಿದ್ದಾರೆ. ಆದರೆ ಗ್ಯಾಸ್‌ಕಟರ್‌ನಿಂದ ಹೊತ್ತಿಕೊಂಡ ಬೆಂಕಿಯ ಉರಿ ಹೆಚ್ಚಾಗಿ ವ್ಯಾಪಿಸಿದ್ದರಿಂದ ಒಳ ಪ್ರವೇಶಿಸಲಾಗದೆ ಎಸ್ಕೇಪ್ ಆಗಿದ್ದಾರೆ.

ಈ ಘಟನೆಯ ಬಳಿಕ ಮುಂಜಾನೆ 4.43 ಗಂಟೆಗೆ ಅಂಗಡಿ ಮಾಲೀಕರ ಸಂಬಂಧಿಕರು ಕರೆ ಮಾಡಿ ಶಾಪ್ ಬಳಿ ಬೆಂಕಿ ಹೊತ್ತಿಕೊಂಡಿರುವುದನ್ನು ತಿಳಿಸಿದ್ದಾರೆ. ಕೂಡಲೇ ಹೋಗಿ ಶೆಟರ್ ತೆರೆದು ನೋಡಿದಾಗ ಇನ್ನೂ ಕೂಡ ಬೆಂಕಿ ಉರಿಯುತ್ತಿತ್ತು. ಬೆಳಿಗ್ಗೆ ಮಳಿಗೆಯ ಗೋಡೆಯನ್ನು ಹಿಂಬದಿಯಿಂದ ಕೊರೆದಿರುವುದು ಗೊತ್ತಾಗಿದೆ.
ಬೆಂಕಿ ಉರಿ ರಭಸಕ್ಕೆ ಸಿಸಿ ಕ್ಯಾಮೆರಾ ಹಾನಿಯಾಗಿವೆ. ವ್ಯಾಪಾರ ಮುಗಿದ ಬಳಿಕ ಆಭರಣ ಎನ್ನವನ್ನೂ ಪ್ಯಾಕ್ ಮಾಡಿ ಮನೆಗೆ ತೆಗೆದುಕೊಂಡು ಹೋಗಿದ್ದರಿಂದ ಯಾವುದೇ ವಸ್ತು ಕಳ್ಳತನ ಆಗಿಲ್ಲ ಎಂದು ಮಾಲೀಕರು ತಿಳಿಸಿದ್ದಾರೆ. ಈ ಸಂಬಂಧ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂರು ತಂಡ ರಚನೆ: ಸುದ್ದಿ ತಿಳಿದ ಕೂಡಲೇ ಸ್ಥಳೀಯ ಠಾಣೆ ವೃತ್ತ ನಿರೀಕ್ಷಕ ಕೆ.ಎಂ.ವಸಂತ್ , ಪಿಎಸ್‌ಐ ಕಾವ್ಯ ಹಾಗೂ ಸಿಬ್ಬಂದಿ, ಶ್ವಾನದಳ ಸ್ಥಳಕ್ಕೆ ಭೇಟಿ ನೀಡಿ ಕೂಲಂಕಷ ಪರಿಶೀಲನೆ ನಡೆಸಿದರು. ಮತ್ತೊಂದೆಡೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಎಸ್‌ಪಿ ಮೊಹಮದ್ ಸುಜೀತಾ ಅವರು, ಹೊಳೆನರಸೀಪುರ ಎಎಸ್‌ಪಿ ಶಾಲೂ ಹಾಗೂ ಸಿಪಿಐ ವಸಂತ್ ಅವರ ಮಾರ್ಗದರ್ಶನದಲ್ಲಿ, ಸ್ಥಳೀಯ ಪಿಎಸ್‌ಐ ನೇತೃತ್ವದಲ್ಲಿ ಪ್ರತ್ಯೇಕವಾಗಿ ಮೂರು ತನಿಖಾ ತಂಡಗಳನ್ನು ರಚನೆ ಮಾಡಿದ್ದಾರೆ.

ಈ ತಂಡವು ಈ ಹಿಂದೆ ಜಿಲ್ಲೆಯ ವಿವಿಧೆಡೆ ಇದೇ ರೀತಿ ಗೋಡೆ ಕೊರೆತು ಚಿನ್ನಾಭರಣ ಕಳವಿಗೆ ಯತ್ನ ಮಾಡಿದ್ದ ಪ್ರಕರಣಗಳ ಪರಿಶೀಲನೆಯಲ್ಲಿ ತೊಡಗಿದೆ.

ಹಳೆಯ ತಂಡವೇ ಜಿಲ್ಲೆಯಲ್ಲಿ ಮತ್ತೊಮ್ಮೆ ಸಕ್ರಿಯ ಆಗಿದೆಯೇ ಎಂಬುದರ ಜಾಡು ಹಿಡಿದು ಎಲ್ಲ ಹಂತಗಳಲ್ಲೂ ತನಿಖೆ ಮಾಡಲಾಗುತ್ತಿದೆ.

Continue Reading

Hassan

ರಾಜ್ಯ ಕಾಂಗ್ರೆಸ್ ಸರ್ಕಾರ ರೈತರನ್ನು ನಿರ್ಲಕ್ಷ್ಯ ಮಾಡಿದೆ: ಎ.ಎಸ್ ಪಾಟೀಲ್

Published

on

ಹಾಸನ: ಬೀದಿ ನಾಯಿಗಳ ಬಗ್ಗೆ ಕಾಳಜಿ ಹೊಂದಿರುವ ರಾಜ್ಯ ಕಾಂಗ್ರೆಸ್ ಸರಕಾರ ರೈತರನ್ನು ಸಂಪೂರ್ಣ ಕಡೆಗಣಿಸಿದ್ದು, ರೈತರು ಸಂಕಷ್ಟದಲ್ಲಿ ಇದ್ದರೂ ಕಣ್ಣು ಮುಚ್ಚಿ ಕುಳಿತಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್ .ಪಾಟೀಲ್ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.

ಹಾಸನ ಜಿಲ್ಲೆಯಲ್ಲಿ ಇಂದು ವಿವಿಧೆಡೆ ಹಾನಿಯಾಗಿರುವ ಮೆಕ್ಕೆ ಜೋಳ ಬೆಳೆದ ರೈತರ ಜಮೀನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಜಿಲ್ಲೆಯಲ್ಲಿ ಈ ಭಾರಿ ಸುಮಾರು 1 ಲಕ್ಷದ 10 ಸಾವಿರ ಹೆಕ್ಟೇರ್ ಜಾಮೀನಿನಲ್ಲಿ 500 ಕೋಟಿ ಮೌಲ್ಯದ ಬಿತ್ತನೆ ಜೋಳದ ಬೀಜವನ್ನು ರೈತರು ಖರೀದಿ ಮಾಡಿದ್ದಾರೆ. ಅಲ್ಲದೆ ಸುಮಾರು ಒಂದೂವರೆ ಸಾವಿರ ಕೋಟಿ ಮೌಲ್ಯದ ಔಷಧಿ ಹಾಗೂ ಗೊಬ್ಬರಗಳನ್ನು ಬಳಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು ಈ ಪೈಕಿ ಶೇಖಡಾ 50 ಕ್ಕಿಂತ ಹೆಚ್ಚು ಪ್ರದೇಶದಲ್ಲಿ ಬಿಳಿಸುಳಿ ರೋಗದಿಂದ ಬೆಳೆ ನಾಶವಾಗಿದೆ ಆದರೆ ಈ ವರೆಗೆ ಜಿಲ್ಲೆಗೆ ಕೃಷಿ ಸಚಿವರು ಅಥವಾ ಯಾವುದೇ ಕೃಷಿ ಇಲಾಖೆಯ ಪ್ರಮುಖ ಅಧಿಕಾರಿಗಳು ಭೇಟಿ ನೀಡದೆ ಇರುವುದು ರೈತರ ಮೇಲಿನ ಸರ್ಕಾರದ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದ ರೈತರ ರಾಜ್ಯದ ರೈತರ ಹಾಗೂ ಜನರ ಬಗ್ಗೆ ಕಾಳಜಿ ವಹಿಸಬೇಕಾದ ಸರ್ಕಾರ ಮನುಷ್ಯರನ್ನು ನಿರ್ಲಕ್ಷಿಸಿ ಬೆಂಗಳೂರಿನ ಬೀದಿ ನಾಯಿಗಳ ಆಹಾರಕ್ಕೆ ಪ್ರತಿನಿತ್ಯ 2 ಕೋಟಿ 88 ಲಕ್ಷ ರೂಪಾಯಿ ಹಣ ಖರ್ಚು ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಸುಮಾರು 26 ಲಕ್ಷ ಹಾಲು ಉತ್ಪಾದಕ ಕುಟುಂಬಗಳು ಇದ್ದು ಅವರಿಗೆ ಈ ಹಿಂದೆ ಇದ್ದ ಬಿಜೆಪಿ ಸರ್ಕಾರ ನೀಡುತ್ತಿದ್ದ ಐದು ರೂಪಾಯಿ ಪ್ರೋತ್ಸಾಹಧನದ ಸುಮಾರು 900 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದ್ದಾರೆ. ಹಸುಗಳ ಬಗ್ಗೆ ಹಾಗೂ ರೈತರ ಬಗ್ಗೆ ಕಾಳಜಿ ಸರ್ಕಾರ ಬಹುಮತ ನೀಡಿದ ರಾಜ್ಯದ ಜನರನ್ನು ನಿರ್ಲಕ್ಷ್ಯ ಮಾಡಿದೆ ಎಂದು ದೂರಿದರು.

Continue Reading

Mysore

ಎಚ್‌.ಎನ್‌. ವಿಜಯ್ ರವರ 51 ನೇ ವರ್ಷದ ಹುಟ್ಟುಹಬ್ಬ ಸಂತಸ ತಂದಿದೆ: ಲಕ್ಕಿಕುಪ್ಪೆ ಸುಬ್ಬೇಗೌಡ

Published

on

ವರದಿ: ಎಸ್. ಬಿ.ಹರೀಶ್ ಸಾಲಿಗ್ರಾಮ

ಸಾಲಿಗ್ರಾಮ: ಹರದನಹಳ್ಳಿ  ಎನ್. ವಿಜಯ್ ರವರ 51 ನೇ ವರ್ಷದ ಹುಟ್ಟು ಹಬ್ಬ, ಈ ಭಾಗದ ಜನತೆಗೆ ಸಂತಸ ತಂದಿದೆ ಎಂದು ಲಕ್ಕಿಕುಪ್ಪೆ ಸುಬ್ಬೇಗೌಡ ತಿಳಿಸಿದ್ದಾರೆ.

ಮೈಸೂರು ಮುಡಾ ಮಾಜಿ ಅಧ್ಯಕ್ಷ ಎಚ್‌.ಎನ್‌. ವಿಜಯ್ ಅವರು ಹಾಂಗ್ ಕಾಂಗ್ ನಲ್ಲಿ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ನಡೆದ ಕೃಷಿಕ ಪ್ರಶಸ್ತಿಗೆ ಭಾಜನ ರಾಗಿರುವುದು ಹೆಮ್ಮೆಯ ವಿಷಯವಾಗಿದೆ. 500 ಕ್ಕೂ ಅಧಿಕ ನಿರುದ್ಯೋಗ ಯುವಕ, ಯುವತಿಯರಿಗೆ ಕೆಲಸ ನೀಡಿ, ಅವರ ಕುಟುಂಬ ನಿರ್ವಹಣೆಗೆ ದಾರಿ ದೀಪವಾಗಿದ್ದಾರೆ ಎಂದು ಹೇಳಿದರು.

ಬಡ ಜನತೆಗೆ ಹಣ ಸಹಾಯ ಮಾಡಿ ಬಡವರ ಬಂದು ಆಗಿರುವ ಎಚ್.ಎನ್. ವಿಜಯ್ ಅವರು ಹೆಚ್ಚಿನ ರೀತಿಯಲ್ಲಿ ಸಮಾಜ ಸೇವೆ ಮಾಡಿ ಈ ಊರಿನ ಕೀರ್ತಿಯನ್ನು ರಾಜ್ಯವೇ ಮೆಚ್ಚುವಂತೆ ಮಾಡಲಿ ಎಂದರು.

ಜುಲೈ .16 ರಂದು ನಡೆಯಲಿರುವ ಅವರ ಜನ್ಮ ದಿನದ ಪ್ರಯುಕ್ತ ಹರದನಹಳ್ಳಿ ಗ್ರಾಮದಲ್ಲಿ ಸೀಮಂತ ಕಾರ್ಯಕ್ರಮ ಪ್ರತಿಭಾ ಪುರಸ್ಕಾರ ಅನ್ನ ಸಂತರ್ಪಣೆ, ಆರೋಗ್ಯ ಶಿಬಿರ ಸೇರಿದಂತೆ ಹಲವಾರು ಕಾರ್ಯಕ್ರಮ ಗಳನ್ನು ಹಮ್ಮಿಕೊಂಡಿರುವುದು ವಿಶೇಷ ವಾಗಿದೆ ಎಂದು ತಿಳಿಸಿದರು.

Continue Reading

Trending

error: Content is protected !!