Connect with us

Location

ಬಗೆಯದಷ್ಟು ಬಯಲಿಗೆ ಕರಾಮುವಿವಿ ಹಗರಣ

Published

on

ಬಗೆಯದಷ್ಟು ಬಯಲಿಗೆ ಕರಾಮುವಿವಿ ಹಗರಣ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಲಂಚಾವತಾರ ಬಗೆದಷ್ಟು ಬಯಲಿಗೆ ಬಂದಿದೆ.

ಹಣ ಕೊಟ್ಟರೆ ಪರೀಕ್ಷೆಯಲ್ಲಿ ನಕಲು ಮಾಡಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ವಿದ್ಯಾರ್ಥಿಯೊಬ್ಬ ಪ್ರಾಧ್ಯಾಪಕರ ಜೊತೆ ಮಾತನಾಡಿರುವ ಆಡಿಯೋ ವೈರಲ್ ಎಲ್ಲೆಡೆ ಆಗುತ್ತಿದೆ.

ಎಂಎಸ್ಸಿ ಪ್ರಶ್ನೆ ಪತ್ರಿಕೆಗೆ 1500 ರೂ., ಎಂಎ ಮತ್ತು ಎಂಕಾಮ್ ಪ್ರಶ್ನೆ ಪತ್ರಿಕೆಗೆ 1 ಸಾವಿರ ರೂಪಾಯಿ ಕೊಟ್ಟರೆ ಪರೀಕ್ಷೆಯಲ್ಲಿ ನಕಲು ಮಾಡಲು ಅವಕಾಶ ಮಾಡಿಕೊಡಲಾಗುತ್ತದೆ. ಹಣ ಕೊಡದ ವಿದ್ಯಾರ್ಥಿಗಳನ್ನು ಬೇರೆ ಪರೀಕ್ಷಾ ಕೊಠಡಿಯಲ್ಲಿ ಕೂರಿಸಿ ಪರೀಕ್ಷೆ ಬರೆಸುತ್ತಾರೆ. ಈ ಸಂಬಂಧ ವಿವಿ ಪ್ರಾಧ್ಯಾಪಕರ ಜೊತೆ ವಿದ್ಯಾರ್ಥಿಯೊಬ್ಬ ಮಾತನಾಡಿರುವ ಆಡಿಯೋ ವೈರಲ್ ಆಗುವ ಮೂಲಕ ವಿವಿಯ ಲಂಚಾವತಾರ ಬಯಲಿಗೆ ಬಂದಿದೆ.

ಆಡಿಯೋದಲ್ಲಿ ಇರುವಂತೆ, ಚಿತ್ರದುರ್ಗ ಪರೀಕ್ಷಾ ಕೇಂದ್ರದಲ್ಲಿ ಒಂದು ಸೆಮಿಸ್ಟರ್ಗೆ ಮೂರು ಸಾವಿರ ರೂಪಾಯಿ ಲಂಚ ಪಡೆದು ಕಾಪಿ ಹೊಡೆಯಲು ಅವಕಾಶ ಮಾಡಿಕೊಡಲಾಗುತ್ತದೆ. ಹಣ ಕೊಡದ ವಿದ್ಯಾರ್ಥಿಗಳನ್ನು ಪ್ರತ್ಯೇಕ ರೂಮ್ನಲ್ಲಿ ಕೂರಿಸಿ ಪರೀಕ್ಷೆ ಬರೆಸುವ ಮೂಲಕ ಟಾರ್ಗೆಟ್ ಮಾಡಲಾಗುತ್ತದೆ.

ಚಿತ್ರದುರ್ಗ ಕೇಂದ್ರ ಬೇಡ ಎಂದು ದಾವಣಗೆರೆ ಪರೀಕ್ಷಾ ಕೇಂದ್ರ ತೆಗೆದುಕೊಂಡೆ. ಆದರೆ, ಚಿತ್ರದುರ್ಗಕ್ಕಿಂತ ಹೆಚ್ಚು ಲಂಚಾವತಾರ ಇಲ್ಲಿದೆ. ಚಿತ್ರದುರ್ಗದಲ್ಲಿ ಒಂದು ಸೆಮೆಸ್ಟರ್ಗೆ 1 ಸಾವಿರ ಕೇಳಿದರೆ, ದಾವಣಗೆರೆಯಲ್ಲಿ ಒಂದು ವಿಷಯಕ್ಕೆ 1 ಸಾವಿರ ಕೇಳಿದ್ದಾರೆ ಎಂದು ಆಡಿಯೋದಲ್ಲಿ ಕೇಳಿ ಬಂದಿದೆ

ದಾವಣಗೆರೆ ರೀಜನಲ್ ಸೆಂಟರ್ನ ಕೊಠಡಿಯೊಂದರಲ್ಲಿ 36 ಮಂದಿ ಇದ್ದರು. ಯಾರು ಎಲ್ಲಿ ಬೇಕಾದರೂ ಕುಳಿತುಕೊಳ್ಳಬಹುದಾಗಿತ್ತು. ನೋಂದಣಿ ಸಂಖ್ಯೆ ಏನೂ ಇಲ್ಲ. ಇದನ್ನು ಪರೀಕ್ಷಾ ಸಂಯೋಜಕರಲ್ಲಿ ಪ್ರಶ್ನಿಸಿದಾಗ, ಬೆಳಗ್ಗೆಯಿಂದ ನಾನು ತಿಂಡಿ ತಿಂದಿಲ್ಲ, ಅದನ್ನು ವಿಚಾರ ಮಾಡುತ್ತಿದ್ದೇನೆ ಎಂದು ಹೇಳಿದ್ದಾಗಿ ವಿದ್ಯಾರ್ಥಿ ಹೇಳುವುದನ್ನು ಆಡಿಯೋದಲ್ಲಿ ಕೇಳಬಹುದು

ಒಟ್ಟಾರೆಯಾಗಿ ದಿನೇ ದಿನೇ ಮುಕ್ತ ವಿವಿಯ ಅಕ್ರಮಗಳು ಒಂದೊಂದೇ ಬೆಳಕಿಗೆ ಬರುತ್ತಿದ್ದು ಈ ಬಗ್ಗೆ ವಿವಿಯ ವಿಸಿ ತುಟಿ ಬಿಚ್ಚದಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಇನ್ನಾದರೂ ಸರ್ಕಾರ ಈ ಬಗ್ಗೆ ಇನ್ನೂ ಕ್ರಮ ತೆಗೆದುಕೊಳ್ಳುತ್ತಾ ಕಾದು ನೋಡಬೇಕಿದೆ

Continue Reading
Click to comment

Leave a Reply

Your email address will not be published. Required fields are marked *

Kodagu

ಶನಿವಾರಸಂತೆಯಲ್ಲಿ ನೂತನವಾಗಿ ನಿರ್ಮಿಸಿರುವ ಬಸ್ ನಿಲ್ದಾಣ ಉದ್ಘಾಟಿಸಿದ ರಾಮಲಿಂಗಾರೆಡ್ಡಿ

Published

on

ಮಡಿಕೇರಿ: ಶನಿವಾರಸಂತೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬಸ್ ನಿಲ್ದಾಣಕ್ಕೆ ರಾಷ್ಟ್ರದ ಪ್ರಥಮ ಸೇನಾ ಮಹಾದಂಡನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವತಿಯಿಂದ ಶನಿವಾರಸಂತೆಯಲ್ಲಿ 105 ಲಕ್ಷ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಬಸ್ ನಿಲ್ದಾಣ ಲೋಕಾರ್ಪಣೆಗೊಳಿಸಿ ಸಚಿವರು ಮಾತನಾಡಿದರು.

ಶನಿವಾರಸಂತೆ ಗ್ರಾಮದಲ್ಲಿ ಹುಟ್ಟಿ ಬೆಳೆದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಸೇನಾ ಕ್ಷೇತ್ರದಲ್ಲಿನ ಸೇವೆಯನ್ನು ಸ್ಮರಿಸಿ ಕಾರ್ಯಪ್ಪ ಅವರ ಹೆಸರಿಡಲು ಮುಂದಾಗಲಾಗಿದೆ. ಆ ನಿಟ್ಟಿನಲ್ಲಿ ಕ್ಯಾಬಿನೆಟ್ ಅನುಮೋದನೆ ಪಡೆಯಲಾಗುವುದು ಎಂದು ಸಚಿವರು ಹೇಳಿದರು.

ಶನಿವಾರಸಂತೆ ಬಸ್ ನಿಲ್ದಾಣದ ಆವರಣದಲ್ಲಿ ಕಾಂಕ್ರೀಟ್ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಚಿವರು ತಿಳಿಸಿದರು.

ಕೊಡ್ಲಿಪೇಟೆಯಲ್ಲೂ ಸಹ ಜಾಗ ನೀಡಿದಲ್ಲಿ ಬಸ್ ನಿಲ್ದಾಣ ನಿರ್ಮಿಸಲಾಗುವುದು. ಆ ನಿಟ್ಟಿನಲ್ಲಿ ಜಾಗ ಒದಗಿಸುವಂತೆ ಊರಿನ ಪ್ರಮುಖರನ್ನು ಕೋರಿದರು.

ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ 670 ಕೋಟಿ ಗೂ ಹೆಚ್ಚು ಮಹಿಳೆಯರು ಬಸ್ ಸಂಚಾರ ಮಾಡಿದ್ದಾರೆ. ಇದು ದಾಖಲೆ ಎಂದು ರಾಮಲಿಂಗಾರೆಡ್ಡಿ ಅವರು ತಿಳಿಸಿದರು.

ಸರ್ಕಾರ 10 ಸಾವಿರ ಚಾಲಕರು ಮತ್ತು ನಿರ್ವಾಹಕರನ್ನು ನೇಮಕಾತಿ ಮಾಡಿದ್ದು, ಇದರಲ್ಲಿ 9 ಸಾವಿರ ಮಂದಿ ನಿರ್ವಾಹಕರು ಮತ್ತು ಚಾಲಕರನ್ನು ನೇರ ನೇಮಕಾತಿ ಮಾಡಲಾಗಿದೆ. ಒಂದು ಸಾವಿರ ಚಾಲಕರು ಮತ್ತು ನಿರ್ವಾಹಕರನ್ನು ‘ಅನುಕಂಪದ ಆಧಾರದ ಮೇಲೆ’ ಅರ್ಹರನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಈ ಹಿಂದೆ 5,800 ಬಸ್‍ಗಳು ಹಾಗೂ ಪ್ರಸಕ್ತ ವರ್ಷ 2 ಸಾವಿರ ಬಸ್ಸುಗಳು ಒಟ್ಟು 7,800 ಕೆಎಸ್‍ಆರ್‍ಟಿಸಿ ಬಸ್‍ಗಳು ಸಂಚರಿಸುತ್ತವೆ. ಪ್ರತೀ ವರ್ಷ ಕಾಲಾನು ಕಾಲಕ್ಕೆ ಹೊಸ ಬಸ್‍ಗಳನ್ನು ಖರೀದಿಸಿ, ಬಸ್ಸು ಓಡಾಟಕ್ಕೆ ಅವಕಾಶ ಮಾಡಲಾಗಿದೆ ಎಂದು ತಿಳಿಸಿದರು.


ಬರುವ ಬಜೆಟಿನಲ್ಲಿ ಸಾರಿಗೆ ಸಂಪರ್ಕಕ್ಕೆ ಇನ್ನಷ್ಟು ಹೆಚ್ಚಿನ ಒತ್ತು ನೀಡಲಾಗಿದ್ದು, ಜಿಲ್ಲೆಗೂ ಸಹ ಸಾರಿಗೆ ಇಲಾಖೆಯಲ್ಲಿ ಆಗಬೇಕಿರುವ ಕೆಲಸಗಳಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಕೊಡಗು ಜಿಲ್ಲೆಗೆ ಹೆಚ್ಚಿನ ಬಸ್ಸು ಸೌಕರ್ಯ ಕಲ್ಪಿಸಲಾಗುವುದು ಎಂದು ಸಚಿವರು ವಿವರಿಸಿದರು.

ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಸಂಭವಿಸುವ ಪವಿತ್ರ ತೀರ್ಥೋದ್ಭವ ಜಾತ್ರೆಗೆ ಸರ್ಕಾರದಿಂದ ಮೂರು ವರ್ಷದಿಂದ ಅನುದಾನ ನೀಡಲಾಗುತ್ತಿದೆ. ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಕಾಳಜಿಯಿಂದ ಅನುದಾನ ನೀಡಲಾಗುತ್ತಿದೆ ಎಂದು ಮುಜರಾಯಿ ಸಚಿವರು ಆದ ರಾಮಲಿಂಗಾರೆಡ್ಡಿ ಅವರು ಹೇಳಿದರು.

ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಹಿರಿಯರೊಬ್ಬರು ಶನಿವಾರಸಂತೆಯಲ್ಲಿ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ನಿರ್ಮಿಸಬೇಕು ಎಂದು ಮನವಿ ಮಾಡಿದ ಹಿನ್ನೆಲೆ, ಆ ಸಂದರ್ಭದಲ್ಲಿ ಭರವಸೆ ನೀಡಲಾಗಿತ್ತು. ಎಲ್ಲರ ಆಶೀರ್ವಾದದಿಂದ ಜಯ ಗಳಿಸಿದ ನಂತರ ಅಂದಿನ ಜಿಲ್ಲಾಧಿಕಾರಿ ಆಗಿದ್ದ ಡಾ.ಬಿ.ಸಿ.ಸತೀಶ ಅವರು ಜಾಗ ಗುರುತಿಸಿದ್ದರು. ಅದರಂತೆ ಮಾನ್ಯ ಸಾರಿಗೆ ಸಚಿವರಲ್ಲಿ ಮನವಿ ಮಾಡಿದಾಗ ತಕ್ಷಣವೇ 105 ಲಕ್ಷ ರೂ ಅನುದಾನ ಬಿಡುಗಡೆ ಮಾಡಿ, ಭೂಮಿ ಪೂಜೆ ನೆರವೇರಿಸಲಾಗಿತ್ತು. ಅದರಂತೆ ಒಂದು ವರ್ಷದಲ್ಲಿಯೇ ನಿರ್ಮಾಣ ಮಾಡಲಾಗಿರುವುದು ವಿಶೇಷವೇ ಸರಿ ಎಂದು ಹೇಳಿದರು.


ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರು ಹುಟ್ಟಿದ ಊರಿನಲ್ಲಿ ಬಸ್ ನಿಲ್ದಾಣಕ್ಕೆ ಕಾರ್ಯಪ್ಪ ಹೆಸರಿಡಬೇಕೆಂದು ಅಧಿವೇಷನದಲ್ಲಿ ಗಮನ ಸೆಳೆಯಲಾಗಿತ್ತು. ಅದರಂತೆ ಸಚಿವರು ಒಪ್ಪಿಗೆ ನೀಡಿದ್ದಾರೆ ಎಂದು ಡಾ.ಮಂತರ್ ಗೌಡ ಅವರು ನುಡಿದರು.

ಈ ಜಾಗವನ್ನು ಗ್ರಾ.ಪಂ.ಅವರು ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಡಾ.ಮಂತರ್ ಗೌಡ ಅವರು ಕೊಡ್ಲಿಪೇಟೆಯಲ್ಲಿ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ನಿರ್ಮಾಣ ಮಾಡಬೇಕು. ಕುಶಾಲನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಅಗತ್ಯ ಅನುದಾನ ನೀಡುವಂತೆ ಸಾರಿಗೆ ಸಚಿವರಲ್ಲಿ ಶಾಸಕರಾದ ಡಾ.ಮಂತರ್ ಗೌಡ ಅವರು ಮನವಿ ಮಾಡಿದರು.

ಕೊಡಗು ಜಿಲ್ಲೆಗೆ ಪ್ರತ್ಯೇಕ ಕೆಎಸ್‍ಆರ್‍ಟಿಸಿ ವಿಭಾಗೀಯ ಕಚೇರಿ ಆರಂಭಿಸಬೇಕು ಎಂದು ಶಾಸಕರು ಮನವಿ ಮಾಡಿದರು.

ಕೊಡಗು ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಬಸ್‍ಗಳ ಸಂಚಾರಕ್ಕೆ ಅವಕಾಶ ಮಾಡಬೇಕು. ಚಾಲಕರು ಮತ್ತು ನಿರ್ವಾಹಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಿಸುವಂತಾಗಬೇಕು ಎಂದು ಶಾಸಕರಾದ ಡಾ.ಮಂತರ್‍ಗೌಡ ಅವರು ಕೋರಿದರು.

ಈಗಾಗಲೇ ಕೆಎಸ್‍ಆರ್‌ಟಿಸಿ ಬಸ್‍ಗಳಿಗೆ ಕೆಎ.12 ನಂಬರ್ ನೋಂದಣಿ ಸಂಖ್ಯೆಯನ್ನು ಸಚಿವರು ಕೊಡಿಸಿದ್ದಾರೆ ಎಂದು ಶಾಸಕರು ಕೃತಜ್ಞತೆ ಸಲ್ಲಿಸಿದರು.

ಜಿಲ್ಲೆಯ ದೇವಾಲಯಗಳ ಅಭಿವೃದ್ಧಿಗೆ ಇನ್ನಷ್ಟು ಹೆಚ್ಚಿನ ಅನುದಾನ ಒದಗಿಸುವಂತೆ ಶಾಸಕರಾದ ಡಾ.ಮಂತರ್ ಗೌಡ ಅವರು ಸಚಿವರಲ್ಲಿ ಮನವಿ ಮಾಡಿದರು.

ಶನಿವಾರಸಂತೆ ಗ್ರಾ.ಪಂ.ಅಧ್ಯಕ್ಷರಾದ ಗೀತಾ ಹರೀಶ್ ಅವರು ಮಾತನಾಡಿ, ಶನಿವಾರಸಂತೆಯಲ್ಲಿ ನಡೆಯುವ ಸಂತೆಗೆ ವ್ಯಾಪಾರ ವಹಿವಾಟಿಗಾಗಿ ಸುತ್ತಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಸಂತೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಅಗತ್ಯ ಅನುದಾನ ಬಿಡುಗಡೆಗೆ ಶಾಸಕರಲ್ಲಿ ಕೋರಿದರು.
ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ ಅವರು ಮಾತನಾಡಿ ಶನಿವಾರಸಂತೆಯಲ್ಲಿ ಬಸ್ ನಿಲ್ದಾಣ ನಿರ್ಮಾಣ ಮಾಡಬೇಕು ಎಂದು ಹಲವು ದಶಕಗಳ ಕನಸಾಗಿತ್ತು. ಅದು ನನಸಾಗಿದೆ ಎಂದರು.

ಶಾಸಕರಾದ ಡಾ.ಮಂತರ್ ಗೌಡ ಅವರು ಅಭಿವೃದ್ಧಿ ಕೆಲಸದಲ್ಲಿ ಪಕ್ಷಾತೀತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸ್ವಾಮೀಜಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕೊಡಿಪೇಟೆಯಲ್ಲಿ ಬಸ್ ನಿಲ್ದಾಣ ನಿರ್ಮಾಣ ಮಾಡುವಂತಾಗಬೇಕು ಎಂದು ಸಚಿವರಲ್ಲಿ ಸದಾಶಿವ ಸ್ವಾಮೀಜಿ ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.

ಪ್ರಮುಖರಾದ ಎಚ್.ಎಸ್.ಚಂದ್ರಮೌಳಿ ಅವರು ಮಾತನಾಡಿ, ಶಾಸಕರ ಅಭಿವೃದ್ಧಿ ಕೆಲಸಗಳಿಗೆ ಸದಾ ಕೈಜೋಡಿಸಲಾಗಿದೆ. ಶಾಸಕರು ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಜನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದರು.

25 ವರ್ಷಗಳಿಂದ ಆಗದ ಕೆಲಸ, 25 ತಿಂಗಳಲ್ಲಿ ಆಗಿರುವುದು ಮೆಚ್ಚಲೇಬೇಕು ಎಂದು ಎಚ್.ಎಸ್.ಚಂದ್ರಮೌಳಿ ಅವರು ನುಡಿದರು. ಗುತ್ತಿಗೆದಾರರಾದ ರೇವಣ್ಣ ಪ್ರಸಾದ್ ಅವರನ್ನು ಇದೇ ಸಂದರ್ಭದಲ್ಲಿ ಶಾಲೂ, ಫಲ ತಾಂಬೂಲ ನೀಡಿ ಸನ್ಮಾನಿಸಲಾಯಿತು.

ವಿಧಾನಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ತಾಲ್ಲೂಕು ಘಟಕದ ಅಧ್ಯಕ್ಷರಾದ ಜಿ.ಎಂ.ಕಾಂತರಾಜು, ವಿ.ಪಿ.ಶಶಿಧರ, ಜಾನ್ಸನ್, ಕೆಎಸ್‍ಆರ್‍ಟಿಸಿ ಪುತ್ತೂರು ವಿಭಾಗದ ನಿಯಂತ್ರಣಾಧಿಕಾರಿ ಎಂ.ಪಿ.ಶ್ರೀಹರಿಬಾಬು, ಮಡಿಕೇರಿ ಕೆಎಸ್‍ಆರ್‍ಟಿಸಿ ಘಟಕ ವ್ಯವಸ್ಥಾಪಕರಾದ ಈರಸಪ್ಪ, ಪ್ರಮುಖರಾದ ಲಕ್ಷ್ಮಣ, ಕೆ.ಪಿ.ಚಂದ್ರಕಲಾ, ಜನಾರ್ಧನ, ಶರತ್ ಶೇಖರ್, ತಹಶೀಲ್ದಾರರಾದ ಕೃಷ್ಣಮೂರ್ತಿ, ಇತರರು ಇದ್ದರು.

ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ವಿಘ್ನೇಶ್ವರ ಬಾಲಿಕ ಪ್ರೌಢ ಶಾಲೆಯ ವಿದ್ಯಾರ್ಥಿನೀಯರು ರೈತಗೀತೆ ಹಾಡಿದರು. ರೋಷಿ ಪ್ರಾರ್ಥಿಸಿದರು. ಜಯಕುಮಾರ ಸ್ವಾಗತಿಸಿದರು. ಜಸಿಂತಾ ನಿರೂಪಿಸಿದರು.

ಶನಿವಾರ ಸಂತೆಯಲ್ಲಿನ ಬಸ್ ನಿಲ್ದಾಣದಲ್ಲಿರುವ ಸೌಲಭ್ಯಗಳು: ಸಂಚಾರ ನಿಯಂತ್ರಕರ ಕೊಠಡಿ, ಪ್ರಯಾಣಿಕರ ನಿರೀಕ್ಷಣಾ ಅಂಕಣ, ಸಿಬ್ಬಂದಿ ವಿಶ್ರಾಂತಿ ಕೊಠಡಿ, ಶುದ್ಧ ಕುಡಿಯುವ ನೀರಿನ ಸೌಲಭ್ಯ, ಉಪಹಾರ ಗೃಹ-01, ವಾಣಿಜ್ಯ ಮಳಿಗೆ-02, ಶೌಚಾಲಯ ಒಳಗೊಂಡಿದೆ.

Continue Reading

Kodagu

ಫೆ.10ಕ್ಕೆ ವಿದ್ಯುತ್ ವ್ಯತ್ಯಯ

Published

on

ಮಡಿಕೇರಿ : 66/33/11 ಕೆ.ವಿ ಎಂಯುಎಸ್‍ಎಸ್ ಮಗ್ಗುಲ, ವಿರಾಜಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಾಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಇದೇ ಫೆ. 10 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮೂರ್ನಾಡು 33/11 ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಪಾರಾಣೆ, ನಾಪೋಕ್ಲು, ಮೂರ್ನಾಡು, ಹೊದ್ದೂರು ಹಾಗೂ ಮರಗೋಡು ಫೀಡರ್‍ಗಳಲ್ಲಿ ವಿದ್ಯುತ್ ವ್ಯತ್ಯಾಯವಾಗಲಿದ್ದು ಈ ಫೀಡರ್‌ಗಳಿಂದ  ಹೊರಹೊಮ್ಮುವ ಮೂರ್ನಾಡು, ಮರಗೋಡು, ಹಾಕತ್ತೂರು, ಹೊಸ್ಕೇರಿ, ಹೊದ್ದೂರು, ನರಿಯಂದಡ, ನಾಪೋಕ್ಲು, ಕುಂಜಿಲ, ಎಮ್ಮೆಮಾಡು, ಬಲ್ಲಮಾವಟಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ಸಮಯ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.


ಹಾಗೆಯೇ 66/33 ಕೆ.ವಿ ವಿರಾಜಪೇಟೆ ವಿದ್ಯುತ್ ವಿತರಣಾ ಉಪಕೇಂದ್ರ ಮಗ್ಗುಲದಲ್ಲಿ ಫೆಬ್ರುವರಿ 10 ರಂದು ಬೆಳಗ್ಗೆ 10 ರಿಂದ 06 ಗಂಟೆ ವರೆಗೆ ತುರ್ತು ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ವಿರಾಜಪೇಟೆ, ಸಿದ್ದಾಪುರ ಮತ್ತು ಅಮ್ಮತ್ತಿ ಶಾಖಾ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಾಯ ಉಂಟಾಗಲಿದೆ. ಆದ್ದರಿಂದ ವಿರಾಜಪೇಟೆ ಪಟ್ಟಣ, ಬಿಟ್ಟಂಗಾಲ, ಬಿ.ಶೆಟ್ಟಿಗೇರಿ, ಕೆದಮುಳ್ಳೂರು, ಕಾಕೋಟುಪರಂಬು, ಕದನೂರು, ಆರ್ಜಿ, ಬೇಟೋಳಿ, ಸಿದ್ದಾಪುರ ಪಟ್ಟಣ, ಮಾಲ್ದಾರೆ, ಗುಹ್ಯ, ಅಮ್ಮತ್ತಿ, ಚೆಂಬೆಬೆಳ್ಳೂರು, ಹಾಲುಗುಂದ, ಕಣ್ಣಂಗಾಲ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.

Continue Reading

Kodagu

ಕೊಡವ ಭಾಷೆ ಸಂಸ್ಕೃತಿಯ ಮುಂದಿನ ಪೀಳಿಗೆಗೆ ಹಸ್ತಾಂತರವಾಗಬೇಕು: ಎ.ಎಸ್.ಪೊನ್ನಣ್ಣ

Published

on

ಮಡಿಕೇರಿ : ಕೊಡವ ಸಾಹಿತ್ಯ ಹಾಗೂ ಸಂಸ್ಕøತಿಯ ಮೇಲೆ ಎಲ್ಲೆಡೆ ಆಸಕ್ತಿ-ಅಭಿಮಾನ ಹುಟ್ಟಿಸುವ ಉದ್ದೇಶದಿಂದ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯು ನೂತನವಾಗಿ ಆರಂಭಿಸಿರುವ ‘ಕೊಡವ ಪುಸ್ತಕ ಪತ್ತಾಯ’ ಯೋಜನೆಯು ಶ್ಲಾಘನಿಯ ಎಂದು ಶಾಸಕರು ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಮೆಚ್ಚುಗೆಯ ನುಡಿಗಳನ್ನಾಡಿದರು.
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ವೀರಾಜಪೇಟೆಯಲ್ಲಿರುವ ಶಾಸಕರ ಗೃಹಕಚೇರಿಯಲ್ಲಿ ಇದೇ ಮೊದಲಿಗೆ ಸ್ಥಾಪಿಸಿದ ‘ಕೊಡವ ಪುಸ್ತಕ ಪತ್ತಾಯ’ವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ಅಕಾಡೆಮಿಯ ಇಂತಹ ಯೋಜನೆಯು ಕೊಡವ ಸಾಹಿತ್ಯ-ಸಂಸ್ಕøತಿಯನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವಲ್ಲಿ ಸಹಕಾರಿಯಾಗಲಿದೆ ಎಂದರು.
 ಒಂದು ಭಾಷೆಯಿದ್ದರೆ ಮಾತ್ರ ಸಂಬಂಧಪಟ್ಟ ಜನಾಂಗ ಹಾಗೂ ಸಂಸ್ಕøತಿ ಉಳಿಯಲು ಸಾಧ್ಯ. ಹಿಂದಿನ ಕಾಲದಲ್ಲಿ ನಮ್ಮ ಹಿರಿಯರಿಗೆ ಯಾವುದೇ ಅನುಕೂಲತೆಗಳು ಇರಲಿಲ್ಲ. ಇಂತಿದ್ದರೂ ಕೊಡವ ಭಾಷೆ, ಸಾಹಿತ್ಯ, ಸಂಸ್ಕøತಿಯನ್ನು ಉಳಿಸಿಕೊಂಡು ಬಂದಿದ್ದಾರೆಂದರೆ, ಅವನ್ನೆಲ್ಲ ನಾವು ನಮ್ಮ ಮುಂದಿನ ಪೀಳಿಗೆಗೆ ಸಾಂಪ್ರದಾಯಿಕವಾಗಿ ಮುಂದುವರಿಸುವ ಕಾರ್ಯ ಆಗಬೇಕು. ಕೊಡವ ಪುಸ್ತಕ ಪತ್ತಾಯವನ್ನು ಎಲ್ಲಾ ಐನ್‍ಮನೆಗಳಲ್ಲಿ, ಮನೆ ಮನೆಗಳಲ್ಲಿ ಸ್ಥಾಪಿಸುವ ಗುರಿ ಇಟ್ಟುಕೊಂಡಿರುವುದು ಸಂತಸದ ವಿಷಯ. ಎಲ್ಲಾರೂ ಇದಕ್ಕೆ ಸಹಕರಿಸುವಂತಾಗಲಿ ಎಂದರು.
ಪುಸ್ತಕ ಪತ್ತಾಯ ಪ್ರತಿಯೊಬ್ಬರ ಪ್ರತಿಷ್ಠೆಯ ವಿಷಯವಾಗಲಿ: ಮಹೇಶ್ ನಾಚಯ್ಯ
ಕೊಡವ ಭಾಷೆಯು ಉತ್ತಮ ಮೌಲ್ಯಗಳನ್ನು ಹೊಂದಿರುವ, ಸಂಪದ್ಬರಿತವಾಗಿರುವ ಭಾಷೆಯಾಗಿದೆ. ಕೊಡವ ಭಾಷೆಯು ತನ್ನದೇ ಆದ ಕಲೆ, ಜಾನಪದ, ಸಂಸ್ಕೃತಿ, ಸಾಹಿತ್ಯ ಹಾಗೂ ಒಂದು ಜೀವನ ಕ್ರಮವನ್ನು ರೂಪಿಸಿರುವ ಭಾಷೆಯಾಗಿದ್ದು ಇದರ ಬಳಕೆ ವೃದ್ಧಿಯಾಗಬೇಕು ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ಹೆಳಿದರು.
ಕೊಡವ ಭಾಷೆಯಲ್ಲಿ ಮತ್ತುಷ್ಟು ಸಾಹಿತ್ಯ ರೂಪುಗೊಳ್ಳಬೇಕು. ಸಾಹಿತಿಗಳಿಗೆ ಉತ್ತಮವಾದ ವೇದಿಕೆ ಸೃಷ್ಟಿಯಾಗಬೇಕಾಗಿದೆ. ಇದಕ್ಕಾಗಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯು ರೂಪಿಸಿರುವ “ಕೊಡವ ಪುಸ್ತಕ ಪತ್ತಾಯ” ಮುಂದಿನ ದಿನಗಳಲ್ಲಿ ಕೊಡವ ಸಾಹಿತ್ಯವನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ. ಕೊಡವ ಭಾಷೆಯ ಬರಹಗಾರರು, ಸಾಹಿತಿಗಳ ಸಾಹಿತ್ಯಪರ ಚಿಂತನೆ ಜಿವಂತವಾಗಿರಲು ದಾರಿದೀಪವಾಗಲಿದೆ. ಕೊಡವ ಪುಸ್ತಕ ಪತ್ತಾಯವನ್ನು ಮುಂದಿನ ದಿನಗಳಲ್ಲಿ ಪ್ರತೀಯೊಂದು ಕೊಡವ ಸಮಾಜಗಳಲ್ಲಿ, ಭಾಷಿಕರ ಸಮಾಜಗಳಲ್ಲಿ, ಬಲ್ಯಮನೆ, ಮುಂದುಮನೆ, ಐನ್‍ಮನೆಗಳಲ್ಲಿ, ದೇವನೆಲೆಗಳಲ್ಲಿ ಸ್ಥಾಪಿಸುವ ಉದ್ದೇಶವನ್ನು ಹೊಂದಿದೆ. ಲೇಖಕರ ಪುಸ್ತಕಗಳು ಒಂದೆಡೆ ಹೇಳಕೇಳದವರಿಲ್ಲದೆ ಬಿದ್ದುಕೊಂಡಿರುವ ಕಾಲಘಟ್ಟದಲ್ಲಿ ಪುಸ್ತಕ ಪತ್ತಾಯವು ಅದಕ್ಕೆಲ್ಲ ಮರುಜೀವ ಕೊಡುವ ಕಾಲ ಸನ್ನಿಹಿತವಾಗಿದೆ. ಸಾಹಿತ್ಯಾಭಿಮಾನಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಆ ಮೂಲಕ ಕೊಡಗಿನಲ್ಲಿ ಪುಸ್ತಕ ಪತ್ತಾಯಕ್ಕೆ ಪ್ರತಿಯೊಬ್ಬರ ಮನೆಯಲ್ಲಿ ಒಂದಿಷ್ಟು ಜಾಗ ಮಾಡಿಕೊಂಡರೆ ಕ್ರಮೇಣ ಎಲ್ಲಾರಲ್ಲಿ ಪುಸ್ತಕ ಪ್ರೇಮ ಉಂಟಾಗಿ ಜ್ಞಾನ ಭಂಡಾರವೂ ವೃದ್ಧಿಸಲು ಅನುಕೂಲ ಆಗುತ್ತದೆ ಎಂದರು.
ನಮ್ಮ ಹಿರಿಯರಲ್ಲಿ ಜಾನಪದ ಸಾಹಿತ್ಯದ ಅರಿವಿತ್ತು. ಅದರಿಂದಾಗಿ ಪಟ್ಟೋಲೆ ಪಳಮೆಯಂತಹ ಕೃತಿ ಸೃಷ್ಟಿಯಾಗಲು ಸಾಧ್ಯವಾಗಿದೆ. ಕೊಡವ ಸಾಹಿತ್ಯ ಕ್ಷೇತ್ರವನ್ನು ಅಂದಿನ ಕಾಲಮಾನದಲ್ಲಿ ಉತ್ತುಂಗಕ್ಕೆ ಏರಿಸಿದವರು ನಡಿಕೇರಿಯಂಡ ಚಿಣ್ಣಪ್ಪ, ಹರದಾಸ ಅಪ್ಪನೆರವಂಡ ಅಪ್ಪಚ್ಚಕವಿ, ಐಚೆಟ್ಟಿರ ಮಾ. ಮುತ್ತಣ್ಣ, ಬಾಚಮಡ ಡಿ.ಗಣಪತಿ, ಮಂಡಿರ ಜಯ ಅಪ್ಪಣ್ಣ, ಬೊವ್ವೇರಿಯಂಡ ನಂಜಮ್ಮ ಚಿಣ್ಣಪ್ಪ… ಇಂತಹವರು. ಅವರೆಲ್ಲರ ಸಾಹಿತ್ಯವು ಇಂದಿಗೂ ಜಿವಂತವಾಗಿದೆ. ಇವರೆಲ್ಲರ ಸಾಹಿತ್ಯವನ್ನು ಜಿವಂತವಾಗಿರಿಸಲು ‘ಕೊಡವ ಪುಸ್ತಕ ಪತ್ತಾಯ’ವು ಸಹಕಾರಿಯಾಗಲಿದೆ ಎಂದರು.
ಕೊಡಗಿನ ಹಲವು ಮನೆಗಳಲ್ಲಿ ಮನೆ ಕಟ್ಟುವಾಗಲೇ ಮದ್ಯದ ಬಾಟಲಿಗಳನ್ನು ಶೇಖರಿಸಿ ಒಂದೆಡೆ ಇಟ್ಟುಕೊಳ್ಳಲು ಕಪಾಟುಗಳನ್ನು ಮಾಡಿಕೊಳ್ಳುವ ಸಂಸ್ಕøತಿ ಬೆಳೆಯುತ್ತಿದೆ. ಇದರೊಂದಿಗೆ ಪ್ರತೀ ಮನೆಗಳಲ್ಲಿ ಪುಸ್ತಕಗಳನ್ನು ಶೇಖರಿಸಿ ಒಂದೆಡೆ ಇಟ್ಟುಕೊಳ್ಳಲು ಪುಸ್ತಕ ಪತ್ತಾಯ ಸ್ಥಾಪಿಸುವ ಬಗ್ಗೆ ಪ್ರತಿಯೊಬ್ಬರು ಚಿಂತಿಸುವಂತಾಗಬೇಕು. ‘ಮದ್ಯದ ಪತ್ತಾಯ’ವು ಯಾರೊಬ್ಬರ ಪ್ರತಿಷ್ಠೆಯಾಗಬಾರದು, ಪುಸ್ತಕ ಪತ್ತಾಯ ಪ್ರತಿಯೊಬ್ಬರ ಪ್ರತಿಷ್ಠೆಯಾಗಬೇಕು ಎಂದರು.
ಅಕಾಡೆಮಿ ಕಾರ್ಯಕ್ರಮವು ಎಲ್ಲರ ಒಗ್ಗಟ್ಟಿಗೆ ಕಾರಣವಾಗಿದೆ: ಅರುಣ್ ಮಾಚಯ್ಯ
ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಚೆಪ್ಪುಡಿರ ಅರುಣ್ ಮಾಚಯ್ಯ ತಮ್ಮ ಮಾತಿನಲ್ಲಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ಉತ್ತಮ ಕಾರ್ಯಕ್ರಮಗಳು ನಡೆಯುತ್ತಿದೆ. ಇದರಿಂದಾಗಿ ಎಲ್ಲಾ ಜನಾಂಗಗಳ ಒಗ್ಗಟ್ಟಿಗೆ ಕಾರಣವಾಗಿದೆ. ಕೊಡವ ಭಾಷೆಯ ಬಳಕೆ ಅಧಿಕವಾಗಬೇಕು. ವಿದೇಶದಲ್ಲಿರುವ ನಮ್ಮ ಮಕ್ಕಳಿಗೆ ಕೊಡವ ಭಾಷೆ-ಸಾಹಿತ್ಯದ ಅಭಿರುಚಿಯನ್ನು ಪೋಷಕರು ಕಲಿಸುವಂತಾಗಬೇಕು ಎಂದರು.
ಕೊಡವ ಭಾಷೆ ಹಾಗೂ ಸಂಸ್ಕೃತಿಯೂ ಇಂದಿನ ದಿನಗಳಲ್ಲಿ ಎಲ್ಲಾ ಜನಾಂಗವನ್ನು ಒಗ್ಗೂಡಿಸುತ್ತಿರುವುದಕ್ಕೆ ಪ್ರಸ್ತುತ ಅಕಾಡೆಮಿಯ ಕಾರ್ಯಕ್ರಮಗಳು ಕಾರಣ. ಇಂತಹ ಕಾರ್ಯಕ್ರಮಕ್ಕೆ ಎಲ್ಲರೂ ಬೆಂಬಲ ಸೂಚಿಸಬೇಕೆಂದರು.
ಕೊಡವ ಸಮಾಜ ಒಕ್ಕೂಟಗಳ ಅಧ್ಯಕ್ಷರಾದ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಮಾತನಾಡಿ, ಕುಟ್ಟ ಕೊಡವ ಸಮಾಜ ಹಾಗೂ ಬಾಳುಗೋಡು ಕೊಡವ ಫೆಡರೇಶನ್ನಿನಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಸ್ಥಾಪಿಸುವಂತೆ ಮನವಿ ಮಾಡಿದರು. ಪುಸ್ತಕ ಓದುವ ಅಭ್ಯಾಸವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು. ಮನೆಯಲ್ಲಿ ಕೊಡವ ಭಾಷೆಗೆ ಮಾತ್ರ ಅವಕಾಶ ನೀಡಬೇಕು ಎಂದರು.
ವೇದಿಕೆಯಲ್ಲಿ ಅಕಾಡೆಮಿ ಅಧ್ಯಕ್ಷರ ಶಾಲಾದಿನಗಳಲ್ಲಿ ಶಿಕ್ಷಕಿಯಾಗಿದ್ದ ಹಿರಿಯರಾದ ಕರ್ನಂಡ ಬೊಳ್ಳಮ್ಮ ನಾಣಯ್ಯ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಆಶೀರ್ವದಿಸಿದರು.
ಸೋಮವಾರಪೇಟೆ ಕೊಡವ ಸಮಾಜದ ಅಧ್ಯಕ್ಷರಾದ ಮಾಳೇಟಿರ ಅಭಿಮನ್ಯುಕುಮಾರ್ ತಮ್ಮ ಮಾತಿನಲ್ಲಿ, ಅಕಾಡೆಮಿಯ ವತಿಯಿಂದ ಸೋಮವಾರಪೇಟೆ ಕೊಡವ ಸಮಾಜದಲ್ಲಿ ಪುಸ್ತಕ ಪತ್ತಾಯ ಸ್ಥಾಪಿಸುವುದಕ್ಕೆ ತಮ್ಮ ಸಹಕಾರವನ್ನು ನೀಡಿ, ಸೋಮವಾಪೇಟೆ ವಿಭಾಗದಲ್ಲಿ ಕೊಡವ ಭಾಷೆ-ಸಾಹಿತ್ಯ, ಸಂಸ್ಕøತಿಪರ ಕಾರ್ಯಕ್ರಮಗಳಿಗೆ ನಮ್ಮ ಸಹಕಾರವಿದೆ ಎಂದರು.
ಮಾದಾಪುರ ಕೊಡವ ಸಮಾಜದ ಅಧ್ಯಕ್ಷರಾದ ಮಂಡೇಪಂಡ ಮನು ಮೇದಪ್ಪ ಮಾತನ್ನಾಡಿ ಕೊಡವ ಪುಸ್ತಕ ಪತ್ತಾಯಕ್ಕೆ ತಮ್ಮ ಬೆಂಬಲ ಸೂಚಿಸಿದರು.
ಮೂರ್ನಾಡು ಕೊಡವ ಸಮಾಜದ ಅಧ್ಯಕ್ಷರಾದ ತೇಲಪಂಡ ಸುಬ್ಬಯ್ಯ, ಅಮ್ಮತ್ತಿ ಕೊಡವ ಸಮಾಜದ ಅಧ್ಯಕ್ಷ ಐನಂಡ ಪ್ರಕಾಶ್ ಗಣಪತಿ ಮಾತನಾಡಿ ಕೊಡವ ಪುಸ್ತಕ ಪತ್ತಾಯಕ್ಕೆ ತಮ್ಮ ಬೆಂಬಲ ಸೂಚಿಸಿದರು.
ಕೊಡವ ಭಾಷಿಕ ಸಮಾಜದ ವತಿಯಿಂದ ಎಲ್ಲಾ ಸಮಾಜಗಳ ಪರವಾಗಿ ಕೊಡವ ತಕ್ಕ್ ಜನಾಂಗಕಾರಡ ಒಕ್ಕೂಟದ ಪಡಿಞರಂಡ ಜಿ. ಅಯ್ಯಪ್ಪ, ಕೊಡವ ಭಾಷಿಕ ಸಮುದಾಯಗಳ ಅಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ ಮಾತನಾಡಿದರು.
ಕೊಡವ ಬಾಷೆಯನ್ನು ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಭಾಷೆ-ಸಾಹಿತ್ಯ, ಸಂಸ್ಕøತಿಯನ್ನು ಬೆಳೆಸಿದರೆ ಮಾತ್ರ ಜನಾಂಗ ಉಳಿಯಲು ಸಾಧ್ಯ ಎಂದರು. ಎಲ್ಲ ಜನಾಂಗಗಳ ಪರವಾಗಿ ‘ಕೊಡವ ಪುಸ್ತಕ ಪತ್ತಾಯ’ಕ್ಕೆ ಬೆಂಬಲ ಸೂಚಿಸಿದರು.
ಇದೇ ವೇಳೆ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಚೆಪ್ಪುಡಿರ ಅರುಣ್ ಮಾಚಯ್ಯ ಹಾಗೂ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ಅವರನ್ನು ಕೆಂಬಟ್ಟಿ ಸಮಾಜದ ವತಿಯಿಂದ ಸನ್ಮಾನಿಸಲಾಯಿತು.
ವಿರಾಜಪೇಟೆಯ ಪಂಜರಪೇಟೆ ಕೊಡವ ಕೇರಿ ಅಧ್ಯಕ್ಷ ವಾಂಚಿರ ಟಿ.ನಾಣಯ್ಯ, ಪರದಂಡ ವಿಠಲ ಹಾಗೂ ಪದಾಧಿಕಾರಿಗಳು, ಕೆಂಬಟ್ಟಿ ಸಮಾಜದ ಬಿಲ್ಲಿರಿಕುಟ್ಟಡ ಪ್ರಭು ಅಯ್ಯಪ್ಪ, ಚೋಕುಟ್ಟಡ ಚಿಮ್ಮ ಅಯ್ಯಪ್ಪ, ಕಾರ್ಯಧ್ಯಕ್ಷ ಬಾಳೆಕುಟ್ಟಡ ಉದಯ ಮಾದಪ್ಪ ಮತ್ತಿತರರು ಆಗಮಿಸಿ ಕೊಡವ ಪುಸ್ತಕ ಪತ್ತಾಯಕ್ಕೆ ಬೆಂಬಲ ಸೂಚಿಸಿದರು.
ಬಣ್ಣ ಸಮಾಜದ ಅಧ್ಯಕ್ಷರಾದ ಬೀಕಚಂಡ ಪುಟ್ಟ ಬೆಳ್ಯಪ್ಪ ಹಾಗೂ ಸಮಾಜ ಬಾಂಧವರು ಹಾಜರಿದ್ದರು. ಕುಡಿಯ ಸಮಾಜದ ಕುಡಿಯರ ಕೆ.ಮುತ್ತಪ್ಪ ಹಾಗೂ ಜನಾಂಗ ಭಾಂದವರು ಉಪಸ್ಥಿತರಿದ್ದರು.
ಸಾಹಿತಿಗಳಾದ ಪಿ.ವೈಲೇಶ್, ಉಳುವಂಗಡ ಕಾವೇರಿ ಉದಯ, ಕೊಟ್ಟಿಯಂಡ ಜೀವನ್ ಚಿಣ್ಣಪ್ಪ, ಪ್ರೊ.ಪಟ್ಟಡ ಎ. ಪೂವಣ್ಣ, ತಾತಂಡ ಪ್ರಭಾ ನಾಣಯ್ಯ, ಕರೋಟಿರ ಶಶಿ ಸುಬ್ರಮಣಿ, ಅಮ್ಮಣಿಚಂಡ ಗಂಗಮ್ಮ ಬೆಳ್ಯಪ್ಪ, ಅಜ್ಜಿನಿಕಂಡ ಪ್ರಮೀಳ ನಾಚಯ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಅರೆಕಾಡ್-ಹೊಸ್ಕೇರಿ ಕೊಡವ ಅಸೋಸಿಯೇಶನ್ ಅಧ್ಯಕ್ಷರಾದ ಕುಕ್ಕೆರ ಜಯಚಿಣ್ಣಪ್ಪ ಹಾಗೂ ಪದಾಧಿಕಾರಿಗಳು, ಹಿರಿಯ ಶಿಕ್ಷಕರಾದ ಬೀನಂಡ ಎಸ್.ಪೂಣಚ್ಚ, ಪ್ರಗತಿ ಶಾಲೆಯ ಸ್ಥಾಪಕ ಮಾದಂಡ ಎಸ್.ಪೂವಯ್ಯ, ಪಾಲೇಂಗಡ ಅಮಿತ್ ಭೀಮಯ್ಯ, ಚೇಂದಂಡ ವಸಂತ ಇದ್ದರು.
ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯರಾದ ಪುತ್ತರಿರ ಪಪ್ಪು ತಿಮ್ಮಯ್ಯ, ಪೊನ್ನಿರ ಯು.ಗಗನ್, ಕುಡಿಯರ ಕಾವೇರಪ್ಪ, ನಾಯಿಂದರ ಆರ್.ಶಿವಾಜಿ, ಚೆಪ್ಪುಡಿರ ಎಸ್.ಉತ್ತಪ್ಪ, ನಾಪಂಡ ಗಣೇಶ್ ಉಪಸ್ಥಿತರಿದ್ದರು. ಮೊಳ್ಳೆಕುಟ್ಟಡ ದಿನು ಬೋಜಪ್ಪ, ಚೊಟ್ಟೆಯಂಡ ಎ. ಸಂಜು ಕಾವೇರಪ್ಪ ಸಂಚಾಲಕರಾಗಿ ಕಾರ್ಯ ನಿರ್ವಹಿಸಿದರು.
ಆರಂಭದಲ್ಲಿ ಮೇಚಂಡ ಅಚ್ಚಪ್ಪ ತಂಡದವರಿಂದ ಶಾಸಕರು, ಅಕಾಡೆಮಿ ಅಧ್ಯಕ್ಷರು, ಮುಖ್ಯ ಅತಿಥಿಗಳು ಹಾಗೂ ನೆರೆದಿದ್ದ ಸಾಹಿತ್ಯಾಭಿಮಾನಿಗಳನ್ನು ಶಾಸಕರ ಮನೆಯಿಂದ ದುಡಿಕೊಟ್ಟ್ ಪಾಟ್, ತಳಿಯತಕ್ಕಿ ಬೊಳಕಿನ ಮೂಲಕ ಕಾರ್ಯಕ್ರಮ ನಡೆದ ಸ್ಥಳಕ್ಕೆ ಕರೆತಂದರು.
ವೀರಾಜಪೇಟೆ ಕೊಡವ ಸಮಾಜ ಪೊಮ್ಮಕ್ಕಡ ಒಕ್ಕೂಟದಿಂದ ಸ್ವಾಗತ ನೃತ್ಯ, ಉಮ್ಮತಾಟ್ ಪ್ರದರ್ಶನ ನಡೆಯಿತು. ಸದಸ್ಯೆ ಉದ್ದಪಂಡ ವಿಮಲ ಮಂದಣ್ಣ ಪ್ರಾರ್ಥಿಸಿದರು. ಅಕಾಡೆಮಿ ಸದಸ್ಯ ನಾಪಂಡ ಸಿ.ಗಣೇಶ್ ಸ್ವಾಗತಿಸಿದರು. ಸದಸ್ಯರಾದ ಕಂಬೆಯಂಡ ಡೀನ ಬೋಜಣ್ಣ, ಪುತ್ತರಿರ ಪಪ್ಪು ತಿಮ್ಮಯ್ಯ ನಿರೂಪಿಸಿದರು. ಅಕಾಡೆಮಿ ಸದಸ್ಯರಾದ ಕೊಂಡಿಜಮ್ಮನ ಎಂ.  ಬಾಲಕೃಷ್ಣ ವಂದಿಸಿದರು.
Continue Reading

Trending

error: Content is protected !!