Mandya
ಎಚ್.ಡಿ.ಕುಮಾರಸ್ವಾಮಿಗೆ ಮತ ನೀಡಲು ಅಬ್ಬಾಸ ಅಲಿ ಬೋಹ್ರಾ ಮನವಿ
ಮಂಡ್ಯ : ಎನ್ಡಿಎ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅರ್ಹತೆ ಮತ್ತು ಅಭಿವೃದ್ಧಿ ಚಿಂತನೆ ಇರುವುದರಿಂದ ಎಲ್ಲ ವರ್ಗದ ಜನರು ಎಚ್ಡಿಕೆ ಅವರಿಗೆ ಮತ ನೀಡಬೇಕು ಎಂದು ಕೇಂದ್ರದ ವಕ್ಫ್ ಕೌನ್ಸಿಲ್ ಮಾಜಿ ಸದಸ್ಯ ಅಬ್ಬಾಸ್ ಆಲಿ ಬೋಹ್ರಾ ಮನವಿ ಮಾಡಿದರು.
ಎಚ್.ಡಿ.ಕುಮಾರಸ್ವಾಮಿ ಅವರು ಸಂಸದರಾಗಿ ಆಯ್ಕೆಯಾದರೆ ಕೇಂದ್ರದಲ್ಲಿ ಕ್ಯಾಬಿನೆಟ್ ದರ್ಜೆಯ ಸಚಿವರಾಗಲಿದ್ದು, ಆ ಮೂಲಕ ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ಅನುಕೂಲವಾಗುತ್ತದೆ. ಅಲ್ಲದೆ, ಕಾವೇರಿ ಸಮಸ್ಯೆಯನ್ನು ಬಗೆಹರಿಸಲಿದ್ದಾರೆ. ಆದ್ದರಿಂದ ಅವರನ್ನು 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಮತದಾರರು ಅತಿ ಹೆಚ್ಚಿದ್ದರೂ ನಿರ್ಣಾಯಕ ಹಿಂದುಳಿದ ವರ್ಗ, ದಲಿತರು, ಅಲ್ಪಸಂಖ್ಯಾತರು, ಶೋಷಿತ ವರ್ಗದವರು ಆಗಿದ್ದಾರೆ. ಈ ಎಲ್ಲ ವರ್ಗದ ಮತದಾರರು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಮುಖ್ಯಮಂತ್ರಿ, ರೈತ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರ ಪರವಾಗಿ ಮತ ಚಲಾಯಿಸಿದರೆ ನೂರಕ್ಕೆ ನೂರರಷ್ಟು ಗೆಲುವು ಸಾಧಿಸುವರು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಂಡ್ಯ ಜಿಲ್ಲೆಯ ಹಿರಿಯ ರಾಜಕಾರಣಿಗಳಾದ ನಿತ್ಯ ಸಚಿವ ದಿ.ಕೆ.ವಿ.ಶಂಕರಗೌಡ, ಎಚ್.ಕೆ.ವೀರಣ್ಣಗೌಡ, ಎಂ.ಕೆ.ಶಿವನಂಜಪ್ಪ, ಕೆ.ಎನ್.ನಾಗೇಗೌಡ, ಎಸ್.ಡಿ.ಜಯರಾಂ ಅವರು ಸೇರಿದಂತೆ ಅನೇಕ ರಾಜಕಾರಣಿಗಳು ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿಪಥದತ್ತ ಕೊಂಡೊಯ್ದಿದ್ದಾರೆ. ಅದೇರೀತಿ ಎಚ್.ಡಿ.ಕುಮಾರಸ್ವಾಮಿ ಅವರು ಹಿರಿಯ ರಾಜಕಾರಣಿಗಳಂತೆ ಅವರ ಮಾದರಿಯಲ್ಲಿ ಜಿಲ್ಲೆಯನ್ನು ಅಭಿವೃದ್ಧಿ ಮಾಡುವರು ಎಂದು ಭರವಸೆ ನೀಡಿದರು.
ಪ್ರಸ್ತುತ ಬರ, ನೀರಿನ ಸಮಸ್ಯೆಯಿಂದ ರೈತರು ಕಂಗಾಲಾಗಿದ್ದಾರೆ. ಕೆಆರ್ಎಸ್ ಅಣೆಕಟ್ಟೆಯಲ್ಲಿ ನೀರಿಲ್ಲ. ಬೆಳೆಗಳಿಗೆ ನೀರಿಲ್ಲದಿರುವುದರಿಂದ ಇಲ್ಲಿನ ಜನರು ಪರದಾಡುವ ಸ್ಥಿತಿ ಎದುರಾಗಿದೆ. ರಾಜ್ಯದಲ್ಲಿ ಸರ್ಕಾರ ಇದ್ದರೂ ಸಹ ರೈತರ ಸಮಸ್ಯೆಗೆ ಯಾವ ರೀತಿಯಲ್ಲೂ ಸ್ಪಂದಿಸುತ್ತಿಲ್ಲ. ಶುದ್ಧ ಕುಡಿಯು ನೀರು ಸಿಗದಿರುವುದರಿಂದ ಕಲುಷಿತ ನೀರಿನ ಮೊರೆ ಹೋಗಿದ್ದಾರೆ. ಇದರಿಂದ ಕಾಲರಾ, ಡೆಂಗ್ಯೂ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳು ಜನರನ್ನು ಬಾಧಿಸುತ್ತಿದ್ದು, ಈ ಕಾಯಿಲೆಗಳು ಕೊರೊನಾಗಿಂತ ಮಾರಕವಾಗಿವೆ ಎಂದು ಆತಂಕ ಪಟ್ಟರು.
ರೈತರು ಬೆಳೆನಷ್ಟದಿಂದ, ಸಾಲಗಾರರಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ತಮಿಳುನಾಡಿನ ಓಲೈಕೆಗಾಗಿ ಕಾವೇರಿ ನೀರನ್ನು ಕದ್ದುಮುಚ್ಚಿ ಅಲ್ಲಿಗೆ ಹರಿಸಿ, ಇಲ್ಲಿನ ರೈತರ ಬೆನ್ನಿಗೆ ಚೂರಿ ಹಾಕಿದ್ದಾರೆ. ತಮಿಳುನಾಡಿನಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆ ಇಲ್ಲ. ಆದರೆ, ಇಲ್ಲಿನ ಜನ-ಜಾನುವಾರುಗಳಿಗೆ ಕುಡಿಯುವುದಕ್ಕೆ ನೀರು ಸಿಗುತ್ತಿಲ್ಲ ಇದರ ಪರಿಣಾಮದಿಂದ ಜನರು ಹಾಗೂ ಜಾನುವಾರುಗಳು ಸತ್ತರೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ ಎಂದು ಎಚ್ಚರಿಕೆ ನೀಡಿದರು.

ಜನರಿಗೆ ಕಾವೇರಿ ನೀರಿನ ವಿಚಾರದಲ್ಲಿ ಮೋಸ ಮಾಡಿರುವ ಕಾಂಗ್ರೆಸ್ಸಿಗರಿಗೆ ಮಂಡ್ಯ ಜಿಲ್ಲೆಯ ಮತದಾರದ ಬಳಿ ಮತ ಕೇಳುವ ನೈತಿಕ ಹಕ್ಕಿಲ್ಲ. ಈ ಕಾವೇರಿ ಹೋರಾಟಕ್ಕೆ ದೇವೇಗೌಡರು. ಮಾದೇಗೌಡರು ಎಚ್.ನಂಜೇಗೌಡರು ಕಾವೇರಿ ತಜ್ಞರಾಗಿ ಕಾವೇರಿ ನೀರು ಉಳಿಸುವಲ್ಲಿ ಅವರ ಪಾತ್ರ ಹೆಚ್ಚಾಗಿದೆ. ಅನೇಕ ಹೋರಾಟಗಾರರು ಕಾವೇರಿಗಾಗಿ ಜೈಲಿಗೆ ಹೋಗಿದ್ದಾರೆ. ಇದರಲ್ಲಿ ಎಷ್ಟೋ ಮಂದಿ ಕಂಗಾಲಾಗಿ ಮೃತಪಟ್ಟಿದ್ದು, ಕಾವೇರಿ ಉಳಿವಿಗಾಗಿ ಮಾಜಿ ಪ್ರಧಾನಿ ದೇವೇಗೌಡ, ಎಚ್.ನಂಜೇಗೌಡರು ಸಂಸತ್ನಲ್ಲಿ ನೂರಾರು ಬಾರಿ ದನಿ ಎತ್ತಿದ್ದಾರೆ. ದಿ.ಜಿ.ಮಾದೇಗೌಡರು ಮೂರು ದಶಕಗಳ ಕಾಲ ಕಾವೇರಿ ನೀರಿಗಾಗಿ ಹೋರಾಟ ಮಾಡಿದ್ದಾರೆ. ಪ್ರಸ್ತುತ ಕಾವೇರಿ ರಕ್ಷಣೆಯನ್ನು ಕಾಂಗ್ರೆಸ್ ಸರ್ಕಾರದಿಂದ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು.
ದೇವೇಗೌಡರು ಅಲ್ಪಸಂಖ್ಯಾತ ಸಮುದಾಯದ ಮಿರಾಜುದ್ದೀನ್ ಪಟೇಲ್ ಹಾಗೂ ಸಿ.ಎಂ.ಇಬ್ರಾಹಿಂ ಅವರನ್ನು ಜಾ.ದಳ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ. ಪ್ರತಿ ಬಾರಿ ಜನತಾದಳ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗ ನಾಲ್ಕರಿಂದ ಐದು ಮಂದಿ ಅಲ್ಪಸಂಖ್ಯಾತರನ್ನು ಕ್ಯಾಬಿನೆಟ್ ದರ್ಜೆಯ ಮಂತ್ರಿಯನ್ನಾಗಿ ಮಾಡಿದ್ದಾರೆ. ಈ ಹಿಂದೆ ರೋಷನ್ ಬೇಗ್ ರಂತಹ ಅಲ್ಪಸಂಖ್ಯಾತ ನಾಯಕರಿಗೆ ರಾಜ್ಯದಲ್ಲಿ ಅತ್ಯುನ್ನತ ಗೃಹಖಾತೆಯನ್ನು ನೀಡಿದ್ದಾರೆ. ಇದೇ ರೀತಿ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರು ಅಲ್ಪಸಂಖ್ಯಾತರಿಗಾಗಿ ಅಪಾರ ಕೊಡುಗೆಗಳನ್ನು ಕೊಟ್ಟಿದ್ದಾರೆ ಎಂದು ವಿವರಿಸಿದರು.
ಅಲ್ಪಸಂಖ್ಯಾತರ ಭವಿಷ್ಯಕ್ಕಾಗಿ ಪ್ರಾದೇಶಿಕ ಪಕ್ಷ ಬಹಳ ಅನಿವಾರ್ಯವಾಗಿದ್ದು, ಕೇವಲ ಓಟ್ ಬ್ಯಾಂಕ್ಗಾಗಿ ಅಲ್ಪಸಂಖ್ಯಾತರನ್ನು ಬಳಸಿಕೊಳ್ಳುವ ಕಾಂಗ್ರೆಸ್ ಪಕ್ಷ ಸಮುದಾಯಕ್ಕೆ ಯಾವುದೇ ಕೊಡುಗೆ ಕೊಟ್ಟಿಲ್ಲ. ರಾಜ್ಯದ ಶೇ.80 ರಷ್ಟು ಮುಸ್ಲಿಮರು ಕಾಂಗ್ರೆಸ್ಗೆ ಮತ ಕೊಟ್ಟಿದ್ದಾರೆ. 9 ಮಂದಿ ಮುಸ್ಲಿಂ ಸಮುದಾಯದ ಶಾಸಕರು ರಾಜ್ಯದಲ್ಲಿ ಕಾಂಗ್ರೆಸ್ನಿಂದ ಆಯ್ಕೆಯಾಗಿದ್ದಾರೆ. ಆದರೆ ಮಂತ್ರಿ ಸ್ಥಾನ ಕೊಟ್ಟಿರುವುದು. ಕೇವಲ ಎರಡು ಮಂದಿಗೆ ಮಾತ್ರ. ಅದು ಕೂಡ ದುರ್ಬಲ ಖಾತೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಮಡಿವಾಳ ಸಂಘದ ಅಧ್ಯಕ್ಷ ರವಿ, ಮುಖಂಡರಾದ ಮಹಂತಪ್ಪ, ರಾ.ಸಿ.ಸಿದ್ದರಾಜು, ವಸಂತಕುಮಾರ್, ಮಹೇಶ್ ಇದ್ದರು.
Mandya
ಕಾವ್ಯಗಳ ಮಹತ್ವವನ್ನು ಯುವ ಜನಾಂಗ ಹಾಗೂ ವಿದ್ಯಾರ್ಥಿಗಳಿಗೆ ತಲುಪಿಸಬೇಕು : ಪ್ರೊ.ಶಂಕರೇ ಗೌಡ
ಮಂಡ್ಯ: ಪ್ರಾಚೀನ ಶ್ರೇಷ್ಠ ಕಲೆಯಾದ ಗಮಕ ಸಾಹಿತ್ಯ ದ ಮಹತ್ವವನ್ನು ಇವತ್ತು ಜನರಿಗೆ, ವಿದ್ಯಾರ್ಥಿ ಗಳಿಗೆ ತಲುಪಿಸುವ ಕ್ರಮದ ಬಗ್ಗೆ ಕನ್ನಡ ಪರ ಹೋರಾಟ ಸಂಘಟನೆಗಳು ಮತ್ತು ಸಾಹಿತ್ಯ ಪ್ರೇಮಿಗಳು ತಮ್ಮನ್ನು ಕಾಳಜಿಯಿಂದ ತೊಡಗಿಸಿಕೊಳ್ಳಬೇಕಾದ ಅಗತ್ಯತೆ ಹೆಚ್ಚಾಗಿದೆ ಎಂದು ನಿವೃತ್ತ ಪ್ರಾಶುಪಾಲ ಪ್ರೊ. ಎಸ್. ಬಿ. ಶಂಕರೇ ಗೌಡ ಅಭಿಪ್ರಾಯಪಟ್ಟರು
ನಗರದ ಕರ್ನಾಟಕ ಸಂಘದ ಕೆ. ವಿ. ಶಂಕರೇಗೌಡ ಸಭಾಂಗಣ ದಲ್ಲಿ ಹಿರಿಯ ಗಮಕಿ ಗಾಯಕ ಕಲಾಶ್ರೀ ವಿದ್ಯಾಶಂಕರ್ ನೇತೃತ್ವದ ಶ್ರೀ ರಂಜಿನಿ ಕಲಾವೇದಿಕೆ, ಕರ್ನಾಟಕ ಸಂಘ, ಪುತಿನ ಟ್ರಸ್ಟ್, ಜೈ ಕರ್ನಾಟಕ ಪರಿಷತ್, ಎಲ್ಲರೂಳಗೊಂದಾಗೂ, ಮಂಕುತಿಮ್ಮ ಟ್ರಸ್ಟ್, ನಂಜಮ್ಮ ಮೋಟೆಗೌಡ ಚಾರಿಟಬಲ್ ಟ್ರಸ್ಟ್ ನ ಸಹಯೋಗದಲ್ಲಿ ಆಯೋಜಿಸಿದ್ದ 2 ದಿನಗಳ ವಿಶಿಷ್ಟ ಕಾವ್ಯಗಳ ಗಮಕ ಸಂಭ್ರಮ ಕಾರ್ಯಕ್ರಮ ದ ಸಮಾರೋಪ ಭಾಷಣ ದಲ್ಲಿ ಅಭಿಪ್ರಾಯಿಸಿದರು.

ಕರ್ನಾಟಕ ಕದ ಸಾಹಿತ್ಯ ಸಂಪತ್ತು, ಸಂಸ್ಕೃತಿ ಅತ್ಯಂತ ಶ್ರೇಷ್ಠ ವಾಗಿದ್ದು ಗಮಕ ಕಲೆಯ ಮೂಲಕ ಸಾಹಿತ್ಯದ ಸೊಬಗು, ಮಹತ್ವದ ಕುರಿತು ಎಲ್ಲರನ್ನು ತಲುಪಿ ಎಲ್ಲಸ್ರು ಕನ್ನಡ ಭಾಷೆಯ ಬಗ್ಗೆ ಜಾಗೃತಿ, ಅಭಿಮಾನ ಬೆಳೆಸಿಕೊಳ್ಳಬೇಕಾಗಿದೆ.
ಮುಂದುವರಿದ ತಾಂತ್ರಿಕ ಯುಗದಲ್ಲಿ ಓದುವ, ಆಲಿಸುವ ಆಸ್ವಾದಿಸುವ.ಪ್ರವೃತ್ತಿ, ತಾಳ್ಮೆ ಇಂದಿನ ಯುವ ಜನಾಂಗಕ್ಕೆ ವಿದ್ಯಾರ್ಥಿಗಳಿಗೆ ಇಲ್ಲವಾಗಿದೆ ಎಂದು ಬೇಸರಿಸಿದ ಅವರು ಇದನ್ನು ಹೋಗಲಾಡಿಸಲು ಮನೆ ಮನೆಗಳ್ಳಲ್ಲಿ ಗಮಕ, ಹಾಗೂ ಸಾಹಿತ್ಯ ಸಂಬಂಧಿತ ಕಾರ್ಯಕ್ರಮ ಗಳನ್ನು ಆಯೋಜಿಸಿ ಪೋಷಕರನ್ನು ಮತ್ತು ವಿದ್ಯಾರ್ಥಿ ಗಳಲ್ಲಿ ಆಸಕ್ತಿ ಮೂಡಿಸುವಂತಹ ಕಾರ್ಯವನ್ನು ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಶ್ರೀ ರಂಜಿನಿ ಕಲಾ ವೇದಿಕೆ ಯ ಕಾಳಜಿ ಮೆಚ್ಚುವಂತದ್ದು ಇಂತಹ ಕಾರ್ಯಕ್ರಮ ಗಳಿಗೆ ಕರ್ನಾಟಕ ಸಂಘ ಒತ್ತಾಸೆ ಯಾಗಿ ನಿಲ್ಲ ಲಿದೆ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಜೈ ಕರ್ನಾಟಕ ಪರಿಷತ್ ನ ರಾಜ್ಯಾಧ್ಯಕ್ಷ ಡಾ.ಎಸ್. ನಾರಾಯಣ್ ವಹಿಸಿದ್ದರು.
ಎರಡನೇ ದಿನವಾದ ಶನಿವಾರ ರಾಜ್ಯದ 5 ಜಿಲ್ಲೆಗಳಿಂದ ಆಗಮಿಸಿದ್ದ ಖ್ಯಾತ ಗಮಕಿಗಳಿಂದ ತುಳಸಿ ರಾಮಾಯಣ, ಯುಗ ಸಂಧ್ಯಾ,ದಶಾವತಾರ, ಮಂಕುತಿಮ್ಮ ನ ಕಗ್ಗ ರನ್ನ ನ ಗದಾ ಯುದ್ಧ, ಕನಕದಾಸರ ಕೃತಿ ಗಾಯನ, ಗಿಟಾರ್ ವಾ ದನ, ವಿದ್ಯಾರ್ಥಿ ಗಳು ನಡೆಸಿಕೊಟ್ಟ ಜೈಮಿನಿ ಭಾರತದ ವೀರ ಲವ ವಾಚನ ವ್ಯಾ ಖ್ಯಾನ ಕಾರ್ಯಕ್ರಮ ಗಳು ಸೇರಿದ್ದ ಅಪಾರ ಸಂಖ್ಯೆಯ ರಸಿಕರನ್ನು ರಂಜಿಸುವಲ್ಲಿ ಯಶಸ್ವಿಯಾಯಿತು.
ಇದೇ ಸಂದರ್ಭದಲ್ಲಿ ಖ್ಯಾತ ಗಮಕಿ ವ್ಯಾಖ್ಯಾನ ಕಾರ ಡಾ. ಕೃ. ಪಾ. ಮಂಜುನಾಥ್ ಅವರನ್ನು ಆತ್ಮೀಯವಾಗಿ ಗೌರವಿಸಿ ಸನ್ಮಾನಿಸಲಾಯಿತು.
ವೇದಿಕೆಯ ಅಧ್ಯಕ್ಷ ಕಲಾಶ್ರೀ ವಿದ್ಯಾಶಂಕರ್ ಸ್ವಾಗತಿಸಿದರು. ನಾರಾಯಣ ಸ್ವಾಮಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
Mandya
ಜೈವಿಕ ಇಂಧನ ಪ್ರಾತ್ಯಕ್ಷಿಕೆ ಮಳಿಗೆ ಉದ್ಘಾಟಿಸಿದ ಡಾ.ನಿರ್ಮಲಾನಂದ ಸ್ವಾಮೀಜಿ
ಮಂಡ್ಯ : ಅದಿಚುಂಚನಗಿರಿ ಮಠದ ಜಗದ್ಗುರು ಡಾ.ನಿರ್ಮಲಾನಂದ ಸ್ವಾಮೀಜಿ ಅವರು ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯ ಮಂಡ್ಯ ದಲ್ಲಿ ಆಯೋಜಿಸಲಾಗಿರುವ ಕೃಷಿ ಮೇಳ-2025, ಮಂಡಳಿ, ಜೈವಿಕ ಇಂಧನ ಉದ್ಯಾನ, ಹಾಸನ, ಜೈವಿಕ ಇಂಧನ ಮಾಹಿತಿ, ಸಂಶೋಧನೆ ಹಾಗೂ ಪ್ರಾತ್ಯಕ್ಷಿಕೆ ಕೇಂದ್ರ, ಪಿಇಎಸ್ ಮಂಡ್ಯ ಸಹಯೋಗದಲ್ಲಿ ನಿರ್ಮಿಸಿರುವ ಜೈವಿಕ ಇಂಧನ ಪ್ರಾತ್ಯಕ್ಷಿಕೆ ಮಳಿಗೆಯನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶ್ರೀ ಗಳು ತಮ್ಮ ಆಶೀರ್ವಚನದಲ್ಲಿ ಮಾತನಾಡಿ, ಆಹಾರ ಮತ್ತು ಇಂಧನ ಭದ್ರತೆಯು ರಾಷ್ಟ್ರದ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸುತ್ತಿದ್ದು ಕೃಷಿಯು ಜೈವಿಕ ಇಂಧನಗಳ ಉತ್ಪಾದನೆಗೆ ಅಗತ್ಯ ಸಂಪನ್ಮೂಲಗಳನ್ನು ಒದಗಿಸುತ್ತಿದೆ ಎಂದು ತಿಳಿಸುತ್ತಾ ಕೃಷಿ ಹೇಗೆ ಲಾಭದಾಯಕವಾಗಿದೆ ಎಂಬುದಕ್ಕೆ ಬೆಂಗಳೂರಿನ ಒರ್ವ ಐಪಿಎಸ್ ಅಧಿಕಾರಿಯ ತಾಯಿ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡು ನಿರೂಪಿಸಿರುವುದನ್ನು ಉದಾಹರಿಸಿದರು.

ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಎಸ್ ಈ ಸುಧೀಂದ್ರ ಅವರು ನೂತನ ಮಂಡ್ಯ ಕೃಷಿ ವಿಶ್ವವಿದ್ಯಾಲಯದ ಪ್ರಪ್ರಥಮ ಕೃಷಿ ಮೇಳ – 2025 ರ ಘೋಷವಾಕ್ಯ ‘ ಸಮಗ್ರ ಕೃಷಿಯಿಂದ ಸುಸ್ಥಿರತೆ’ ಈ ಘೋಷ ವಾಕ್ಯವು ಕೃಷಿಯು ಜೈವಿಕ ಇಂಧನ ಕ್ಷೇತ್ರದ ಬೆಳವಣಿಗೆಯಲ್ಲಿ ಪೂರಕವಾಗಿರುವುದರ ಕುರಿತು ಅಭಿಪ್ರಾಯ ವ್ಯಕ್ತ ಪಡಿಸಿದರು. ರಾಷ್ಟ್ರದ ಜೈವಿಕ ಇಂಧನ ಉತ್ಪಾದನೆಯಲ್ಲಿ ಮಂಡ್ಯ ಜಿಲ್ಲೆಯು 1939 ರ ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಮೊಟ್ಟಮೊದಲ ಬಾರಿಗೆ ಬ್ರಿಟಿಷ್ ವಸಾಹತುವಾಗಿದ್ದ ಬಾಂಬೆ ಪ್ರೆಸಿಡೆನ್ಸಿ ಎಂದು ಕರೆಯಲ್ಪಡುತ್ತಿದ್ದ ಮುಂಬೈ ಯಲ್ಲಿನ ಸಾರ್ವಜನಿಕ ಸಾರಿಗೆ ರೆಡ್ ಬಸ್ ಗಳಿಗೆ ಎಥನಾಲ್ ಪೂರೈಕೆ ಮಾಡಿದ್ದನ್ನು ಪ್ರಸ್ಥಾಪಿಸಿ ಇಂದು ರಾಷ್ಟ್ರಮಟ್ಟದಲ್ಲಿ ಪೆಟ್ರೋಲ್ ನಲ್ಲಿ ಶೇ 20ರ ಮಿಶ್ರಣ ಗುರಿಯನ್ನು 2025 ರಲ್ಲಿ ಸಾಧಿಸಿರುವುದಕ್ಕೆ ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಕೊಡುಗೆಯು ಅಮೂಲ್ಯವಾಗಿದೆ ಎಂದು ತಿಳಿಸಿದರು.
ಜೈವಿಕ ಇಂಧನಗಳ ಕುರಿತ ಪ್ರಾತ್ಯಕ್ಷಿಕೆ ಮಳಿಗೆಯು ಮಂಡಳಿಯ ಪ್ರಸ್ತುತ ಚಾಲ್ತಿಯಲ್ಲಿರುವ ಜೈವಿಕ ಇಂಧನ ಕಾರ್ಯ ಯೋಜನೆಗಳು ಹಾಗೂ ಉದ್ದೇಶಿತ ನೂತನ ಜೈವಿಕ ಇಂಧನ ನೀತಿ ಮತ್ತು ಕಾರ್ಯಯೋಜನೆಗಳ ಅನುಷ್ಠಾನದ ದಿಕ್ಸೂಚಿಯಾಗಿದೆ ಎಂದು ತಿಳಿಸಿದರು. ಮಂಡಳಿಯ ಅಧ್ಯಕ್ಷರು ಮಂಡಳಿ ಕೈಗೊಂಡಿರುವ ಜೈವಿಕ ಇಂಧನ ಕಾರ್ಯಕ್ಷೇತ್ರಗಳ ಕುರಿತು ಅರಿವು, ಜಾಗೃತಿ ಮತ್ತು ಪ್ರಾತ್ಯಕ್ಷಿಕೆಗಳು ಮುಂದಿನ ದಿನಗಳಲ್ಲಿ ಜೈವಿಕ ಇಂಧನಗಳ ಉತ್ಪಾದನೆಯಲ್ಲಿ ಪ್ರಮುಖವಾಗಿ ಅಗತ್ಯ ಸಂಪನ್ಮೂಲಗಳ ಶೇಖರಣೆ, ಸಂಗ್ರಹಣೆ, ಸಾಗಣೆಯಲ್ಲಿ ರೈತರು, ಉತ್ಪಾದನಾ ಘಟಕಗಳ ನಿರ್ಮಾಣದಲ್ಲಿ ಬಂಡವಾಳ ಹೂಡಿಕೆದಾರರು ಮತ್ತು ಬಳಕೆದಾರರ ನಡುವೆ ಸಹಯೋಗ ಏರ್ಪಡಿಸುವ ಸೇತುವೆಗಳಾಗಲಿವೆ ಎಂದು ಅಭಿಪ್ರಾಯ ಪಟ್ಟರು.

ಈ ಪ್ರಪ್ರಥಮ ಕೃಷಿ ಮೇಳದಲ್ಲಿ ಆಯೋಜಿಸಲಾಗಿರುವ ಜೈವಿಕ ಇಂಧನ ಮಳಿಗೆಯು ಇಡೀ ರಾಜ್ಯದ ರೈತರು ಹಾಗೂ ದೇಶ ವಿದೇಶಗಳಲ್ಲಿನ ಬಂಡವಾಳ ಹೂಡಿಕೆದಾರರಿಗೆ ಈ ಹಸಿರು ಇಂಧನ ಕ್ಷೇತ್ರದಲ್ಲಿ ಭಾಗಿಯಾಗಿ, ಈ ಕ್ಷೇತ್ರದ ಉನ್ನತೀಕರಣ ಹಾಗೂ ವಾಣಿಜ್ಯೀಕರಣದಲ್ಲಿ ಪಾಲುದಾರರಾಗಲಿ ಎಂದು ಆಶಿಸುತ್ತಾ, ಈ ಕೃಷಿ ಮೇಳ ಹಾಗೂ ಜೈವಿಕ ಇಂಧನ ಮಳಿಗೆಯ ಉದ್ದೇಶಗಳು ಸಫಲವಾಗಲಿ ಎಂದು ಆಶಿಸಿದರು.
ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್, ಸೂಪರಿಟೆಂಡೆಂಟ್ ಆಫ್ ಪೋಲಿಸ್ ಮಲ್ಲಿಕಾರ್ಜುನ್ ಬಲದಂಡಿ, ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ್.ಎಲ್, ಕ.ಸ.ಸೇ, ಜೈವಿಕ ಇಂಧನ ಉದ್ಯಾನದ ಸಂಯೋಜಕ ಡಾ.ಎ.ಸಿ.ಗಿರೀಶ್, ಬಿಆರ್ ಐಡಿಸಿ ಸಂಯೋಜಕರಾದ ಡಾ.ರೂಪೇಶ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
Mandya
ಡಿ.17ಕ್ಕೆ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತ್ಯುತ್ಸವದಲ್ಲಿ ರಾಷ್ಟ್ರಪತಿ ಭಾಗಿ : ಡಾ. ಕುಮಾರ
ಮಂಡ್ಯ : ಮಳವಳ್ಳಿಯಲ್ಲಿ ಹಮ್ಮಿಕೊಂಡಿರುವ ಆದಿ ಜಗದ್ಗರು ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ಡಿ.17 ರಂದು ಸನ್ಮಾನ್ಯ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಆಗಮಿಸುತ್ತಿದ್ದು, ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಡಾ.ಕುಮಾರ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸನ್ಮಾನ್ಯ ರಾಷ್ಟ್ರಪತಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆ ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಷ್ಟ್ರಪತಿಗಳ ಕರ್ತವ್ಯದಲ್ಲಿ ಲೋಪ ಆಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ಅವರು ಸಂಚರಿಸುವ ರಸ್ತೆ ಸಂಪೂರ್ಣವಾಗಿ ದುರಸ್ತಿಗೊಳಿಸಬೇಕು. ರಸ್ತೆಗಳ ಸ್ವಚ್ಛತೆ ಮಾಡಬೇಕು. ಆಂಬ್ಯುಲೆನ್ಸ್ ಹಾಗೂ ತಜ್ಞ ವೈದ್ಯರ ಸೇವೆ ಒದಗಿಸಬೇಕು ಎಂದು ಹೇಳಿದರು.

ಹೆಲಿಪ್ಯಾಡ್ ಸುತ್ತಾ ಬ್ಯಾರಿಕೇಡ್ ಹಾಕಬೇಕು, ಗ್ರೀನ್ ರೂಮ್ ನಿರ್ಮಾಣ ಸೇರಿದಂತೆ ಕಾರ್ಯಕ್ರಮದಲ್ಲಿ ಯಾವುದೇ ವಿದ್ಯುತ್ ಅಡಚಣೆ ಆಗದಂತೆ ಚೆಸ್ಕಾಂ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಕಾರ್ಯಕ್ರಮದ ಸ್ಧಳದಲ್ಲಿ ಹಾಗೂ ಪ್ರವಾಸಿ ಮಂದಿರದಲ್ಲಿ ಇಂಟರ್ನೆಟ್ ಸಂಪರ್ಕ ಹಾಗೂ ಕಂಪ್ಯೂಟರ್ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಎಂದರು.
ಕಾರ್ಯಕ್ರಮ ನಡೆಯುವ ಸ್ಥಳ, ಹೆಲಿಪ್ಯಾಡ್ ಸ್ಥಳಗಳಲ್ಲಿ ಅಗ್ನಿ ಶಾಮಕ ದಳದ ವಾಹನ ನಿಯೋಜಿಸಬೇಕು. ರಾಷ್ಟ್ರಪತಿಗಳ ಆಗಮಿಸುವ ಹಿನ್ನೆಲೆಯಲ್ಲಿ ಯಾವುದೇ ಲೋಪ ದೋಷಗಳನ್ನು ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪ್ರಮುಖ ಇಲಾಖೆಗಳಿಂದ ಸ್ಟಾಲ್ ಗಳ ನಿರ್ಮಾಣ ಮಾಡುವಂತೆ ಹಾಗೂ ಅಲ್ಲಿ ಅಗತ್ಯವಾಗಿ ಬೇಕಾಗಿರುವ ಕುಡಿಯುವ ನೀರು ಹಾಗೂ ಶೌಚಾಲಯದ ವ್ಯವಸ್ಥೆ ಮಾಡಲು ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದ ಮೂರ್ತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
-
Mysore23 hours agoಡಿ.14ರಂದು ‘ಮೈಸೂರು ಭವಿಷ್ಯದ ಅಭಿವೃದ್ಧಿ’ ಸಾರ್ವಜನಿಕ ಸಂವಾದ
-
Hassan24 hours agoನಾವು ತೆರೆದ ಪುಸ್ತಕ ಎಲ್ಲವನ್ನೂ ಎದುರಿಸೋದಕ್ಕೆ ಸಿದ್ಧರಿದ್ದೇವೆ: ಸಿಎಂ ಸಿದ್ದರಾಮಯ್ಯ
-
Mysore22 hours agoಪಠ್ಯದಿಂದ ಡಾ.ಅಂಬೇಡ್ಕರ್ ಹೊರಗಿಡುವ ಹುನ್ನಾರ: ಪ್ರೊ.ಪ್ರಸನ್ನಕುಮಾರ್ ಕೆರಗೋಡು ಶಂಕೆ
-
Chamarajanagar23 hours agoಕಠಿಣ ಶ್ರಮದಿಂದ ಗೆಲುವು ಖಚಿತ: ಡಾ. ಶಾಂತರಾಜು
-
Kodagu23 hours agoಪುತ್ತರಿ ಹಿನ್ನೆಲೆ “ಲಕ್ಡಿಕೋಟೆ ಕೊಡವ ಯುದ್ಧ ಸ್ಮಾರಕ”ದಲ್ಲಿ ಕೊಡವ ಯೋಧರಿಗೆ ಗೌರವ ನಮನ ಸಲ್ಲಿಸಿದ ಸಿಎನ್ಸಿ
-
Mandya24 hours agoಜಾಮಿಯಾ ಮಸೀದಿಯೊಳಗೆ ನುಗ್ಗಲು ಪ್ರಯತ್ನಿಸಿರುವ ಘಟನೆ ಪೂರ್ವನಿಯೋಜಿತ : ನದೀಮ್ ಅಹಮದ್
-
Hassan22 hours agoಕ್ರೀಡೆಯು ಪರಿಪೂರ್ಣ ವ್ಯಕ್ತಿತ್ವಕ್ಕೆ ನಾಂದಿಯಾಗಬಲ್ಲದು : ಡಾ. ಅಕ್ಷಯ್ ಎಸ್. ಗೌಡ.
-
Mandya23 hours agoಡಿ.7 ರಂದು ದೆಹಲಿಯಲ್ಲಿ ಕುವೆಂಪು ಅವರ ಸಾಧನೆ ಮತ್ತು ಕೊಡುಗೆ ವಿಚಾರ ಸಂಕಿರಣ: ಎಚ್.ಕೆ.ರಾಮು
