Mandya
ಎಚ್.ಡಿ.ಕುಮಾರಸ್ವಾಮಿಗೆ ಮತ ನೀಡಲು ಅಬ್ಬಾಸ ಅಲಿ ಬೋಹ್ರಾ ಮನವಿ

ಮಂಡ್ಯ : ಎನ್ಡಿಎ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅರ್ಹತೆ ಮತ್ತು ಅಭಿವೃದ್ಧಿ ಚಿಂತನೆ ಇರುವುದರಿಂದ ಎಲ್ಲ ವರ್ಗದ ಜನರು ಎಚ್ಡಿಕೆ ಅವರಿಗೆ ಮತ ನೀಡಬೇಕು ಎಂದು ಕೇಂದ್ರದ ವಕ್ಫ್ ಕೌನ್ಸಿಲ್ ಮಾಜಿ ಸದಸ್ಯ ಅಬ್ಬಾಸ್ ಆಲಿ ಬೋಹ್ರಾ ಮನವಿ ಮಾಡಿದರು.
ಎಚ್.ಡಿ.ಕುಮಾರಸ್ವಾಮಿ ಅವರು ಸಂಸದರಾಗಿ ಆಯ್ಕೆಯಾದರೆ ಕೇಂದ್ರದಲ್ಲಿ ಕ್ಯಾಬಿನೆಟ್ ದರ್ಜೆಯ ಸಚಿವರಾಗಲಿದ್ದು, ಆ ಮೂಲಕ ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ಅನುಕೂಲವಾಗುತ್ತದೆ. ಅಲ್ಲದೆ, ಕಾವೇರಿ ಸಮಸ್ಯೆಯನ್ನು ಬಗೆಹರಿಸಲಿದ್ದಾರೆ. ಆದ್ದರಿಂದ ಅವರನ್ನು 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಮತದಾರರು ಅತಿ ಹೆಚ್ಚಿದ್ದರೂ ನಿರ್ಣಾಯಕ ಹಿಂದುಳಿದ ವರ್ಗ, ದಲಿತರು, ಅಲ್ಪಸಂಖ್ಯಾತರು, ಶೋಷಿತ ವರ್ಗದವರು ಆಗಿದ್ದಾರೆ. ಈ ಎಲ್ಲ ವರ್ಗದ ಮತದಾರರು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಮುಖ್ಯಮಂತ್ರಿ, ರೈತ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರ ಪರವಾಗಿ ಮತ ಚಲಾಯಿಸಿದರೆ ನೂರಕ್ಕೆ ನೂರರಷ್ಟು ಗೆಲುವು ಸಾಧಿಸುವರು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಂಡ್ಯ ಜಿಲ್ಲೆಯ ಹಿರಿಯ ರಾಜಕಾರಣಿಗಳಾದ ನಿತ್ಯ ಸಚಿವ ದಿ.ಕೆ.ವಿ.ಶಂಕರಗೌಡ, ಎಚ್.ಕೆ.ವೀರಣ್ಣಗೌಡ, ಎಂ.ಕೆ.ಶಿವನಂಜಪ್ಪ, ಕೆ.ಎನ್.ನಾಗೇಗೌಡ, ಎಸ್.ಡಿ.ಜಯರಾಂ ಅವರು ಸೇರಿದಂತೆ ಅನೇಕ ರಾಜಕಾರಣಿಗಳು ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿಪಥದತ್ತ ಕೊಂಡೊಯ್ದಿದ್ದಾರೆ. ಅದೇರೀತಿ ಎಚ್.ಡಿ.ಕುಮಾರಸ್ವಾಮಿ ಅವರು ಹಿರಿಯ ರಾಜಕಾರಣಿಗಳಂತೆ ಅವರ ಮಾದರಿಯಲ್ಲಿ ಜಿಲ್ಲೆಯನ್ನು ಅಭಿವೃದ್ಧಿ ಮಾಡುವರು ಎಂದು ಭರವಸೆ ನೀಡಿದರು.
ಪ್ರಸ್ತುತ ಬರ, ನೀರಿನ ಸಮಸ್ಯೆಯಿಂದ ರೈತರು ಕಂಗಾಲಾಗಿದ್ದಾರೆ. ಕೆಆರ್ಎಸ್ ಅಣೆಕಟ್ಟೆಯಲ್ಲಿ ನೀರಿಲ್ಲ. ಬೆಳೆಗಳಿಗೆ ನೀರಿಲ್ಲದಿರುವುದರಿಂದ ಇಲ್ಲಿನ ಜನರು ಪರದಾಡುವ ಸ್ಥಿತಿ ಎದುರಾಗಿದೆ. ರಾಜ್ಯದಲ್ಲಿ ಸರ್ಕಾರ ಇದ್ದರೂ ಸಹ ರೈತರ ಸಮಸ್ಯೆಗೆ ಯಾವ ರೀತಿಯಲ್ಲೂ ಸ್ಪಂದಿಸುತ್ತಿಲ್ಲ. ಶುದ್ಧ ಕುಡಿಯು ನೀರು ಸಿಗದಿರುವುದರಿಂದ ಕಲುಷಿತ ನೀರಿನ ಮೊರೆ ಹೋಗಿದ್ದಾರೆ. ಇದರಿಂದ ಕಾಲರಾ, ಡೆಂಗ್ಯೂ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳು ಜನರನ್ನು ಬಾಧಿಸುತ್ತಿದ್ದು, ಈ ಕಾಯಿಲೆಗಳು ಕೊರೊನಾಗಿಂತ ಮಾರಕವಾಗಿವೆ ಎಂದು ಆತಂಕ ಪಟ್ಟರು.
ರೈತರು ಬೆಳೆನಷ್ಟದಿಂದ, ಸಾಲಗಾರರಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ತಮಿಳುನಾಡಿನ ಓಲೈಕೆಗಾಗಿ ಕಾವೇರಿ ನೀರನ್ನು ಕದ್ದುಮುಚ್ಚಿ ಅಲ್ಲಿಗೆ ಹರಿಸಿ, ಇಲ್ಲಿನ ರೈತರ ಬೆನ್ನಿಗೆ ಚೂರಿ ಹಾಕಿದ್ದಾರೆ. ತಮಿಳುನಾಡಿನಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆ ಇಲ್ಲ. ಆದರೆ, ಇಲ್ಲಿನ ಜನ-ಜಾನುವಾರುಗಳಿಗೆ ಕುಡಿಯುವುದಕ್ಕೆ ನೀರು ಸಿಗುತ್ತಿಲ್ಲ ಇದರ ಪರಿಣಾಮದಿಂದ ಜನರು ಹಾಗೂ ಜಾನುವಾರುಗಳು ಸತ್ತರೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ ಎಂದು ಎಚ್ಚರಿಕೆ ನೀಡಿದರು.
ಜನರಿಗೆ ಕಾವೇರಿ ನೀರಿನ ವಿಚಾರದಲ್ಲಿ ಮೋಸ ಮಾಡಿರುವ ಕಾಂಗ್ರೆಸ್ಸಿಗರಿಗೆ ಮಂಡ್ಯ ಜಿಲ್ಲೆಯ ಮತದಾರದ ಬಳಿ ಮತ ಕೇಳುವ ನೈತಿಕ ಹಕ್ಕಿಲ್ಲ. ಈ ಕಾವೇರಿ ಹೋರಾಟಕ್ಕೆ ದೇವೇಗೌಡರು. ಮಾದೇಗೌಡರು ಎಚ್.ನಂಜೇಗೌಡರು ಕಾವೇರಿ ತಜ್ಞರಾಗಿ ಕಾವೇರಿ ನೀರು ಉಳಿಸುವಲ್ಲಿ ಅವರ ಪಾತ್ರ ಹೆಚ್ಚಾಗಿದೆ. ಅನೇಕ ಹೋರಾಟಗಾರರು ಕಾವೇರಿಗಾಗಿ ಜೈಲಿಗೆ ಹೋಗಿದ್ದಾರೆ. ಇದರಲ್ಲಿ ಎಷ್ಟೋ ಮಂದಿ ಕಂಗಾಲಾಗಿ ಮೃತಪಟ್ಟಿದ್ದು, ಕಾವೇರಿ ಉಳಿವಿಗಾಗಿ ಮಾಜಿ ಪ್ರಧಾನಿ ದೇವೇಗೌಡ, ಎಚ್.ನಂಜೇಗೌಡರು ಸಂಸತ್ನಲ್ಲಿ ನೂರಾರು ಬಾರಿ ದನಿ ಎತ್ತಿದ್ದಾರೆ. ದಿ.ಜಿ.ಮಾದೇಗೌಡರು ಮೂರು ದಶಕಗಳ ಕಾಲ ಕಾವೇರಿ ನೀರಿಗಾಗಿ ಹೋರಾಟ ಮಾಡಿದ್ದಾರೆ. ಪ್ರಸ್ತುತ ಕಾವೇರಿ ರಕ್ಷಣೆಯನ್ನು ಕಾಂಗ್ರೆಸ್ ಸರ್ಕಾರದಿಂದ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು.
ದೇವೇಗೌಡರು ಅಲ್ಪಸಂಖ್ಯಾತ ಸಮುದಾಯದ ಮಿರಾಜುದ್ದೀನ್ ಪಟೇಲ್ ಹಾಗೂ ಸಿ.ಎಂ.ಇಬ್ರಾಹಿಂ ಅವರನ್ನು ಜಾ.ದಳ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ. ಪ್ರತಿ ಬಾರಿ ಜನತಾದಳ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗ ನಾಲ್ಕರಿಂದ ಐದು ಮಂದಿ ಅಲ್ಪಸಂಖ್ಯಾತರನ್ನು ಕ್ಯಾಬಿನೆಟ್ ದರ್ಜೆಯ ಮಂತ್ರಿಯನ್ನಾಗಿ ಮಾಡಿದ್ದಾರೆ. ಈ ಹಿಂದೆ ರೋಷನ್ ಬೇಗ್ ರಂತಹ ಅಲ್ಪಸಂಖ್ಯಾತ ನಾಯಕರಿಗೆ ರಾಜ್ಯದಲ್ಲಿ ಅತ್ಯುನ್ನತ ಗೃಹಖಾತೆಯನ್ನು ನೀಡಿದ್ದಾರೆ. ಇದೇ ರೀತಿ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರು ಅಲ್ಪಸಂಖ್ಯಾತರಿಗಾಗಿ ಅಪಾರ ಕೊಡುಗೆಗಳನ್ನು ಕೊಟ್ಟಿದ್ದಾರೆ ಎಂದು ವಿವರಿಸಿದರು.
ಅಲ್ಪಸಂಖ್ಯಾತರ ಭವಿಷ್ಯಕ್ಕಾಗಿ ಪ್ರಾದೇಶಿಕ ಪಕ್ಷ ಬಹಳ ಅನಿವಾರ್ಯವಾಗಿದ್ದು, ಕೇವಲ ಓಟ್ ಬ್ಯಾಂಕ್ಗಾಗಿ ಅಲ್ಪಸಂಖ್ಯಾತರನ್ನು ಬಳಸಿಕೊಳ್ಳುವ ಕಾಂಗ್ರೆಸ್ ಪಕ್ಷ ಸಮುದಾಯಕ್ಕೆ ಯಾವುದೇ ಕೊಡುಗೆ ಕೊಟ್ಟಿಲ್ಲ. ರಾಜ್ಯದ ಶೇ.80 ರಷ್ಟು ಮುಸ್ಲಿಮರು ಕಾಂಗ್ರೆಸ್ಗೆ ಮತ ಕೊಟ್ಟಿದ್ದಾರೆ. 9 ಮಂದಿ ಮುಸ್ಲಿಂ ಸಮುದಾಯದ ಶಾಸಕರು ರಾಜ್ಯದಲ್ಲಿ ಕಾಂಗ್ರೆಸ್ನಿಂದ ಆಯ್ಕೆಯಾಗಿದ್ದಾರೆ. ಆದರೆ ಮಂತ್ರಿ ಸ್ಥಾನ ಕೊಟ್ಟಿರುವುದು. ಕೇವಲ ಎರಡು ಮಂದಿಗೆ ಮಾತ್ರ. ಅದು ಕೂಡ ದುರ್ಬಲ ಖಾತೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಮಡಿವಾಳ ಸಂಘದ ಅಧ್ಯಕ್ಷ ರವಿ, ಮುಖಂಡರಾದ ಮಹಂತಪ್ಪ, ರಾ.ಸಿ.ಸಿದ್ದರಾಜು, ವಸಂತಕುಮಾರ್, ಮಹೇಶ್ ಇದ್ದರು.
Mandya
ಮಳವಳ್ಳಿ ವಸತಿ ಶಾಲೆಯ ದುರ್ಘಟನೆ : ಎಚ್ಡಿಕೆ ಕಳವಳ

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ಟಿ.ಕಾಗೇಪುರ ಗ್ರಾಮದ ಖಾಸಗಿ ವಸತಿ ಶಾಲೆ ಕಲುಷಿತ ಆಹಾರ ಸೇವನೆಯಿಂದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮಂಡ್ಯ ಸಂಸ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಅಸ್ವಸ್ಥ ಮಕ್ಕಳ ಆರೋಗ್ಯದ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಸಂಬಂಧ ಮಳವಳ್ಳಿ ತಹಶೀಲ್ದಾರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಸಚಿವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳ ಆರೋಗ್ಯ ಪರಿಸ್ಥಿತಿಯನ್ನು ವಿಚಾರಿಸಿಕೊಂಡಿದ್ದಾರೆ.
ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ಆಹಾರದ ಬಗ್ಗೆ ಜಾಗ್ರತೆಯಿಂದ ಇರಬೇಕು. ಮಕ್ಕಳಿಗೆ ನೀಡಲಾಗುವ ಆಹಾರದ ಬಗ್ಗೆ ಕಟ್ಟೆಚ್ಚರ ವಹಿಸಬೇಕು ಎಂದು ಸ್ಪಷ್ಟ ನೀಡಿರುವ ಸಚಿವರು, ಮೃತಪಟ್ಟಿರುವ ವಿದ್ಯಾರ್ಥಿ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಸರ್ಕಾರಿ ಅಥವಾ ಖಾಸಗಿ ವಸತಿ ಶಾಲೆಗಳಲ್ಲಿ ಆಹಾರದ ಬಗ್ಗೆ ಅಧಿಕಾರಿಗಳು, ಸಂಬಂಧಪಟ್ಟ ಸಿಬ್ಬಂದಿ ಎಚ್ಚರಿಕೆ ವಹಿಸಬೇಕು. ಈ ಬಗ್ಗೆ ಕಠಿಣ ನಿಗಾ ಇಡಬೇಕು ಎಂದು ತಹಶೀಲ್ದಾರ್ ಅವರಿಗೆ ಸಚಿವರು ಸೂಚನೆ ನೀಡಿದ್ದಾರೆ.
ಘಟನೆ ಬಗ್ಗೆ ನನಗೆ ಮಾಹಿತಿ ಬಂದಾಗ ನನಗೆ ತೀವ್ರ ಆಘಾತ ಉಂಟಾಯಿತು. ಈ ವಸತಿ ಶಾಲೆಯಲ್ಲಿ ಬಹುತೇಕ ಹೊರರಾಜ್ಯಗಳ ಮಕ್ಕಳೇ ಇದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲಾ ಮಕ್ಕಳಿಗೆ ಸೂಕ್ತ ಚಿಕಿತ್ಸೆ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಕೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mandya
ವೈರಮುಡಿ ಉತ್ಸವದಲ್ಲಿ ಲೋಪವಾಗದಂತೆ ಎಚ್ಚರ ವಹಿಸಬೇಕು : ಎನ್.ಚಲುವರಾಯಸ್ವಾಮಿ

ಮಂಡ್ಯ : ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗುವ ಮೇಲುಕೋಟೆ ವೈರಮುಡಿ ಉತ್ಸವದಲ್ಲಿ ಯಾವುದೇ ಲೋಪವಾದಂತೆ ಎಚ್ಚರಿಕೆ ವಹಿಸಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವೈರಮುಡಿ ಉತ್ಸವದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಏಪ್ರಿಲ್ 2 ರಿಂದ 14 ರವರೆಗೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದೆ. ಏಪ್ರಿಲ್ 7 ರಂದು ನಡೆಯಲಿರುವ ವೈರಮುಡಿ ಉತ್ಸವದಲ್ಲಿ ಲಕ್ಷಾಂತರ ಭಕ್ತಾಧಿಗಳು ಭಾಗವಹಿಸಲಿದ್ದಾರೆ ಎಂದರು.
ಬೇಸಿಗೆ ಬಿಸಿಲಿನ ತಾಪ ಹೆಚ್ಚಿದ್ದು, ಭಕ್ತಾಧಿಗಳಿಗೆ ಮುಖ್ಯವಾಗಿ ಕುಡಿಯುವ ನೀರು ಸೇರಿದಂತೆ ಎಲ್ಲಾ ಮೂಲಭೂತ ವ್ಯವಸ್ಥೆಗಳಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದರು.
ಕುಡಿಯುವ ನೀರು, ದಸೋಹ ಭವನದಲ್ಲಿ ಆಹಾರ ವಿತರಣೆ ಹಾಗೂ ಪ್ರಸಾದ ವಿತರಣೆ ಭಾಗಗಳಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳನ್ನು ನಿಯೋಜಿಸಿ ಪರೀಕ್ಷೆಗೆ ಒಳಪಡಿಸಿದ ನಂತರವೇ ವಿತರಣೆಯಾಗಬೇಕು.
ಮೇಲುಕೋಟೆಗೆ ವಿವಿಧ ಭಾಗಗಳಿಂದ ಸಂಪರ್ಕಿಸುವ ರಸ್ತೆಗಳ ದುರಸ್ತಿ ಕೆಲಸಗಳು ವೇಗವಾಗಿ ನಡೆಸಿ ಪೂರ್ಣಗೊಳಿಸಬೇಕು. ವಾಹನ ನಿಲುಗಡೆ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದರು.
ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣಯ್ಯ ಮಾತನಾಡಿ, ಕುಡಿಯುವ ನೀರಿನ ಟ್ಯಾಂಕರ್ ದೇವಸ್ಥಾನದ ಸುತ್ತಲೂ ,ಕಲ್ಯಾಣಿ, ಪಾರ್ಕಿಂಗ್ ಸ್ಥಳ ಸೇರಿದಂತೆ ಜನಸಂದಣಿ ಇರುವ ಸ್ಥಳಗಳಲ್ಲಿ ಟ್ಯಾಂಕರ್ ವ್ಯವಸ್ಥೆಯಾಗಬೇಕು ಭಕ್ತಾಧಿಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ ಎಂದರು.
ವೈರಮುಡಿ ಉತ್ಸವದಲ್ಲಿ ಭಾಗವಹಿಸುವ ಭಕ್ತಾಧಿಗಳಿಗೆ ದಸೋಹ ಭವನ ಪ್ರಾರಂಭವಾಗಿರುವ ಬಗ್ಗೆ ಮಾಹಿತಿ ನೀಡಲು ದೇವಸ್ಥಾನದ ಸುತ್ತಲೂ ಸೂಚನಾ ಪಲಕಗಳನ್ನು ಅಳವಡಿಸಿ, ದಸೋಹ ಭವನದಲ್ಲಿ ಜನಸಂದಣಿಯಾಗದಂತೆ ಬ್ಯಾರಿಕೇಡಿಂಗ್ ಆಗಬೇಕು. ದಸೋಹಕ್ಕೆ ಬೇಕಿರುವ ಆಹಾರ ಸಾಮಗ್ರಿಗಳ ದಾಸ್ತಾನು ಆಗಬೇಕು.
ದೇವಸ್ಥಾನ ಸುತ್ತ ಹೆಚ್ಚಿನ ಟ್ರನ್ಸ್ ಪರ್ಮರ್ ಬೇಕಿದ್ದಲ್ಲಿ ವ್ಯವಸ್ಥೆ ಮಾಡಿಕೊಳ್ಳಿ, ಅಗತ್ಯವಿರುವ ಕಡೆ ಹೆಚ್ಚಿನ ವಿದ್ಯುತ್ ದೀಪಗಳ ವ್ಯವಸ್ಥೆಯಾಗಬೇಕು. ಕಲ್ಯಾಣಿಗಳ ಸ್ವಚ್ಛತೆಯನ್ನು ಕೈಗೊಳ್ಳಿ ಎಂದರು.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಈ ಬಾರಿ 19 ಲಕ್ಷ ರೂ ವೆಚ್ಚದಲ್ಲಿ ಶಾಶ್ವತವಾಗಿ ಸಿ.ಸಿ.ಟಿ ವಿ ಅಳವಡಿಸಲಾಗುವುದು. ಇದನ್ನು ವೀಕ್ಷಿಸಲು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯಲ್ಲಿ ಅಗತ್ಯ ವ್ಯವಸ್ಥೆ ಮಾಡಲಾಗುವುದು.
ಕಲ್ಯಾಣಿಗಳ ಬಳಿ ನುರಿತ ಈಜುಗಾರರನ್ನು ನೇಮಿಸಬೇಕು. ಕಲ್ಯಾಣಿ ಯ ಹತ್ತಿರ ವಿದ್ಯುತ್ ದೀಪಗಳು ಹಾಗೂ ಹೆಣ್ಣು ಮಕ್ಕಳಿಗೆ ಬಟ್ಟೆ ಬದಲಾಯಿಸಲು ಶೆಡ್ ಗಳ ನಿರ್ಮಾಣವಾಗಬೇಕು ಎಂದರು.
ಸಭೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದಮೂರ್ತಿ, ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Mandya
ಹೆಚ್ಐವಿ ಸೋಂಕಿತರನ್ನು ತಾರತಮ್ಯ ಮಾಡುವುದು ಅಪರಾಧ: ಶ್ರೀವಿನಾಯಕ್

ಶ್ರೀರಂಗಪಟ್ಟಣ : ಹೆಚ್ಐವಿ ಸೋಂಕಿತರನ್ನು ಯಾವುದೇ ಕ್ಷೇತ್ರದಲ್ಲಿ ತಾರತಮ್ಯ ಮಾಡುವುದು ಅಪರಾಧವಾಗಿದ್ದು, ಕಾಯ್ದೆ ಉಲ್ಲಂಘಿಸಿದಲ್ಲಿ 6 ತಿಂಗಳು ಜೈಲು ಹಾಗೂ 2 ಲಕ್ಷದವರೆಗೆ ದಂಡ ವಿಧಿಸಬಹುದಾಗಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕದ ಜಿಲ್ಲಾ ಮೇಲ್ವಿಚಾರಕ ಶ್ರೀವಿನಾಯಕ್ ಹೇಳಿದರು.
ಅವರು ಪಟ್ಟಣದ ಕೋರುನ್ ಇಂಡಿಯಾ ಗಾರ್ಮೆಂಟ್ಸ್ ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕ ಮಂಡೆ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಶ್ರೀರಂಗಪಟ್ಟಣದ ವತಿಯಿಂದ ಗಾರ್ಮೆಂಟ್ ನ ಆಡಳಿತ ವಿಭಾಗದ ಅಧಿಕಾರಿಗಳಿಗಾಗಿ ಹೆಚ್ಐವಿ ಏಡ್ಸ್ ನಿಯಂತ್ರಣ ಕಾಯ್ದೆ 2017 ಕುರಿತು ಏರ್ಪಡಿಸಿದ ತರಬೇತಿ ಕಾರ್ಯಗಾರ ಉದ್ದೇಶಿಸಿ ಮಾತನಾಡಿದರು.
ಹೆಚ್ಐವಿ ಏಡ್ಸ್ ರೋಗ ಲಕ್ಷಣ,ಚಿಕಿತ್ಸೆ ಕುರಿತು ಮಾಹಿತಿ ನೀಡಿದ ಅವರು ಹೆಚ್ಐವಿ ಸೋಂಕು ಹರಡುವುದು ಶೇಕಡ 90ರಷ್ಟು ಅಸುರಕ್ಷಿತ ಲೈಂಗಿಕ ಸಂಪರ್ಕದಿಂದಲೇ ಬರುತ್ತದೆ ಸಂಸ್ಕರಿಸದ ಸೂಜಿ,ಸಿರಿಂಜಗಳು, ಸೋಂಕಿತ ರಕ್ತವನ್ನು ಪಡೆಯುವುದರಿಂದ ಹಾಗೂ ಸೋಂಕಿತ ತಾಯಿಯಿಂದ ಮಗುವಿಗೆ ಹರಡುವ ಪ್ರಮಾಣ ಶೇ10 ರಷ್ಟಿದ್ದು ಹಾಗಾಗಿ ಹೆಚ್ಐವಿ ಏಡ್ಸ್ ನಿಯಂತ್ರಿಸಲು ಯುವಜನತೆ ಮದುವೆಯಾಗುವ ತನಕ ಬ್ರಹ್ಮಚರ್ಯ ಪಾಲಿಸುವಂತೆ ತಿಳಿಸಿದರು.
ನಂತರ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ್ ಮಾತನಾಡಿ, ಜಿಲ್ಲೆಯಲ್ಲಿ ಹೆಚ್ಐವಿ ನಿಯಂತ್ರಣ ಸಲುವಾಗಿ ಎಲ್ಲಾ ಸಮುದಾಯಗಳಿಗೆ ಹಾಗೂ ಯುವ ಪೀಳಿಗೆಗೆ ಮಾಹಿತಿ ನೀಡುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಇಂದಿನ ಯುವ ಜನಾಂಗ ಏಡ್ಸ್ ನಂತಹ ಖಾಯಿಲೆಗೆ ತುತ್ತಾಗುತ್ತಿರುವುದು ಕಳವಳಕಾರಿ ಸಂಗತಿ ಯುವಕರು ತಮ್ಮ ಜೀವನ ಹಾಳು ಮಾಡಿಕೊಳ್ಳದೆ ದೇಹ ಮತ್ತು ಮನಸ್ಸನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಏಡ್ಸ್ ಗೆ ಚಿಕಿತ್ಸೆ ಸಾಧ್ಯ ಆದರೆ ಸಂಪೂರ್ಣ ಗುಣ ಮುಖರಾಗಲು ಅಸಾಧ್ಯ. ಈ ಕಾರಣದಿಂದ ರೋಗಕ್ಕೆ ತುತ್ತಾಗದಂತೆ ಎಚ್ಚರ ವಹಿಸಬೇಕು. ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡಿಕೊಳ್ಳಬೇಕೆಂದರು.
ನಂತರ ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಮೋಹನ್ ಮಾತನಾಡಿ, ಏಡ್ಸ್ ರೋಗ ನಿಯಂತ್ರಿಸಲು ಸಾಧ್ಯವಿದ್ದು ಪ್ರತಿಯೊಬ್ಬರಿಗೂ ಇದರ ಬಗ್ಗೆ ತಿಳುವಳಿಕೆ ಅಗತ್ಯವಾಗಿದೆ ಎಂದರು.
ಕಾರ್ಯಗಾರದಲ್ಲಿ ಹೆಚ್.ಆರ್ ಮ್ಯಾನೇಜರ್ ಸುಭಾಷ್ ಬಿ,ಶೃತಿ, ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಮೇಘನಾ, ಎಂ&ಇ ರಘು ಪ್ರಸಾದ್, ಆರೋಗ್ಯ ನಿರೀಕ್ಷಣಾಧಿಕಾರಿ ಚಂದನ್ ಎಂ ಸಿ, ಶುಶ್ರೂಷಕಿ ರೇಖಾ ಹಾಗೂ ಆಡಳಿತ ವಿಭಾಗದ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.
-
Chamarajanagar21 hours ago
ಕಾಂಗ್ರೆಸ್ ಗೆ ಭರ್ಜರಿ ಗೆಲುವು
-
Uncategorized20 hours ago
ಕಾಡಾನೆ ಸೆರೆ ಕಾರ್ಯಾಚರಣೆ ಯಶಸ್ವಿ: ಪುಂಡಾನೆ ಸೆರೆ ಹಿಡಿದ ಕ್ಯಾಪ್ಟನ್ ಪ್ರಶಾಂತ್ ಅಂಡ್ ಟೀಮ್
-
Chamarajanagar21 hours ago
ಕಾರು ಅಪಘಾತ ಇಬ್ಬರು ಸ್ಥಳದಲ್ಲೇ ಮೃತ
-
Chikmagalur23 hours ago
ಹತ್ತು ಲಕ್ಷ ಮೌಲ್ಯದ 11 ಬೈಕ್ ಕದ್ದಿದ್ದ ಕಳ್ಳನ ಬಂಧನ
-
National - International13 hours ago
ಪಾಕ್ನ 90 ಮಂದಿ ಸೈನಿಕರನ್ನು ಹತ್ಯೆ ಮಾಡಿದ್ದೇವೆ ಎಂದ ಬಲೂಚ್ ಲಿಬರೇಶನ್ ಆರ್ಮಿ
-
Kodagu14 hours ago
ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಬಾಲಕಿ ಮೃ*ತ
-
Chamarajanagar15 hours ago
ತಲೆಯಲ್ಲಿ ಕೂದಲಿಲ್ಲ ಎಂದು ನಿಂದಿಸಿದ ಪತ್ನಿ: ಮನನೊಂದ ಪತಿ ಆತ್ಮ*ಹತ್ಯೆ
-
Mandya18 hours ago
ಮಳವಳ್ಳಿ ವಸತಿ ಶಾಲೆಯ ದುರ್ಘಟನೆ : ಎಚ್ಡಿಕೆ ಕಳವಳ