Mysore
ಕುಂಭಮೇಳ ಮನಸ್ಸು ಮತ್ತು ಕಲ್ಪನೆಯ ಮೇಲೆ ಅದ್ಭುತ ಪ್ರಭಾವ ಬೀರಿದೆ

ತಿ.ನರಸೀಪುರ: ಜಾತಿ, ಮತ, ಪ್ರದೇಶದ ಎಲ್ಲಾ ಲೌಕಿಕ ಅಡೆತಡೆಗಳನ್ನು ಲೆಕ್ಕಿಸದೆ ಕುಂಭಮೇಳವು ಸಾಮಾನ್ಯ ಭಾರತೀಯರ ಮನಸ್ಸು ಮತ್ತು ಕಲ್ಪನೆಯ ಮೇಲೆ ಅದ್ಭುತ ಪ್ರಭಾವ ಬೀರಿದೆ ಎಂದು ಮಂಗಳವಾರ (ಫೆ.11) ಕೈಲಾಸ ಆಶ್ರಮದ ಶ್ರೀ ಜಯೇಂದ್ರ ತೀರ್ಥ ಸ್ವಾಮೀಜಿ ಹೇಳಿದರು.
ತ್ರಿವೇಣಿ ಸಂಗಮದಲ್ಲಿ ಸೋಮವಾರದಿಂದ ಆರಂಭವಾಗಿರುವ 13 ನೇ ಕುಂಭಮೇಳದ ಎರಡನೇ ದಿನವಾದ ಮಂಗಳವಾರ ಯಾಗಶಾಲೆ ಪ್ರವೇಶ ಕಾರ್ಯಕ್ರಮದ ಪೂಜಾ ಕೈಂಕರ್ಯ ನೆರವೇರಿಸಿ ಆಶೀರ್ವಚನ ನೀಡಿ ಅವರು ಮಾತನಾಡಿದರು.
ಕುಂಭಮೇಳ ಎಂಬ ಧಾರ್ಮಿಕ ಕಾರ್ಯಕ್ರಮವು ಹಿಂದೂಗಳಿಗೆ ಧಾರ್ಮಿಕವಾಗಿ ಅತ್ಯಂತ ಮಹತ್ವದ್ದಾಗಿದೆ. ಪ್ರತಿ ಕುಂಭಮೇಳ ಸಂದರ್ಭದಲ್ಲೂ ಲಕ್ಷಾಂತರ ಹಿಂದೂಗಳು ಆಚರಣೆಗಳಲ್ಲಿ ಭಾಗವಹಿಸುತ್ತಾರೆ. ಕುಂಭಮೇಳವು ವಿಶ್ವದಲ್ಲೇ ಅತಿ ಹೆಚ್ಚು ಧಾರ್ಮಿಕ ಸಭೆಗಳು ನಡೆಯುವ ಸ್ಥಳ. ಹಿಂದೂ ಪುರಾಣಗಳ ಪ್ರಕಾರ, ಒಬ್ಬ ವ್ಯಕ್ತಿಯು ತನ್ನ ಪಾಪಗಳನ್ನು ಬಿಡಿಸಿ ಜನನ ಮತ್ತು ಪುನರ್ಜನ್ಮದ ವಿಷ ಚಕ್ರದಿಂದ ನಿರ್ವಾಣ ಸಾಧಿಸಲು ಜಗತ್ತಿನ ಏಕೈಕ ಸಮಯ ಮತ್ತು ಸ್ಥಳ ಇದು. ವ್ಯಕ್ತಿಯ ಎಲ್ಲಾ ಪಾಪಗಳನ್ನು ತೊಳೆಯುತ್ತದೆ ಎಂದು ಹೇಳಲಾಗುವ ಪವಿತ್ರ ಗಂಗೆಯಲ್ಲಿ ಸ್ನಾನ ಮಾಡಿ. ದೀಪ ಬೆಳಗಿಸಿ ಮತ್ತು ಆಸೆಯನ್ನು ಸಲ್ಲಿಸಿದರೆ ಅವು ನಿಜವಾಗುತ್ತವೆ. ಪವಿತ್ರ ನೀರಿನಲ್ಲಿ ಪವಿತ್ರ ಸ್ನಾನ ಮಾಡಲು ಮತ್ತು ಹಿಂದೆ ಮಾಡಿದ ಎಲ್ಲಾ ಪಾಪ ತೊಳೆಯಲು ಅವರಿಗೆ ಅವಕಾಶ ಕೊಡುತ್ತದೆ ಹಾಗೂ ತ್ರಿವೇಣಿ ಸಂಗಮದ ನೀರಿನಲ್ಲಿ ಪವಿತ್ರ ಸ್ನಾನ ಮಾಡುವುದರಿಂದ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂದು ನಂಬಲಾಗಿದೆ ಎಂದು ತಿಳಿಸಿದರು.
ಕುಂಭಮೇಳವು ಒಂದು ಐತಿಹಾಸಿಕ ಹಿಂದೂ ಧಾರ್ಮಿಕ ಉತ್ಸವ ಮತ್ತು ತೀರ್ಥಯಾತ್ರೆಯಾಗಿದ್ದು, ಇದನ್ನು ವಿಶ್ವದ ಅತಿದೊಡ್ಡ ಶಾಂತಿಯುತ ಸಭೆ ಎಂದು ಪರಿಗಣಿಸಲಾಗಿದೆ. ಭಾರತದ ನಾಲ್ಕು ಪರ್ಯಾಯ ಸ್ಥಳಗಳಾದ ಹರಿದ್ವಾರ, ಪ್ರಯಾಗ್ರಾಜ್ (ಅಲಹಾಬಾದ್), ನಾಸಿಕ್ ಮತ್ತು ಉಜ್ಜಯಿನಿಯಲ್ಲಿ ಪ್ರತಿ ಹನ್ನೆರಡು ವರ್ಷಗಳಿಗೊಮ್ಮೆ ನಡೆಯುವ ಕುಂಭಮೇಳವು ಪವಿತ್ರ ನದಿಗಳಲ್ಲಿ ಪವಿತ್ರ ಸ್ನಾನ ಮಾಡಲು ಪ್ರಪಂಚದಾದ್ಯಂತದ ಲಕ್ಷಾಂತರ ಯಾತ್ರಿಕರನ್ನು ಆಕರ್ಷಿಸುತ್ತದೆ,
ಪಾಪಗಳನ್ನು ಶುದ್ಧೀಕರಿಸಿ, ಮೋಕ್ಷಕ್ಕೆ ಸಹಾಯ ಮಾಡುತ್ತದೆ ಎಂದು ಹೇಳಲಾಗುವ ಈ ಧಾರ್ಮಿಕ ಸ್ನಾನವು ಹಬ್ಬದ ಆಧ್ಯಾತ್ಮಿಕ ಅರ್ಥಕ್ಕೆ ಅತ್ಯಗತ್ಯ. ಕುಂಭಮೇಳದ ಮೂಲವನ್ನು ಪ್ರಾಚೀನ ಪುರಾಣಗಳಿಂದ, ನಿರ್ದಿಷ್ಟವಾಗಿ ಸಮುದ್ರ ಮಂಥನದ ಕಥೆಯಿಂದ ಹೇಳಬಹುದಾಗಿದೆ, ಇದು ಒಳ್ಳೆಯದು ಮತ್ತು ಕೆಟ್ಟದ್ದರ ನಡುವಿನ ಶಾಶ್ವತ ಹೋರಾಟವನ್ನು ಪ್ರತಿನಿಧಿಸುತ್ತದೆ. ಪ್ರಾರ್ಥನೆಗಳು, ಸಾಂಸ್ಕೃತಿಕ ಉತ್ಸವಗಳು ಮತ್ತು ತಪಸ್ವಿಗಳು ಮತ್ತು ಯಾತ್ರಿಕರ ವೈವಿಧ್ಯಮಯ ಸಭೆಗಳ ಕ್ರಿಯಾತ್ಮಕ ಮಿಶ್ರಣದೊಂದಿಗೆ ಕುಂಭಮೇಳವು ಭಾರತದ ಶ್ರೀಮಂತ ಆಧ್ಯಾತ್ಮಿಕ ಸಂಪ್ರದಾಯ ಮತ್ತು ನಂಬಿಕೆಯನ್ನು ಅನುಸರಿಸುವ ಪ್ರಬಲ ಸಂಕೇತವಾಗಿದೆ ಎಂದು ತಿಳಿಸಿದರು.
ಕುಂಭಮೇಳವು ಪ್ರಾಚೀನ ಹಿಂದೂ ಸಾಹಿತ್ಯದಲ್ಲಿ, ವಿಶೇಷವಾಗಿ ಪುರಾಣಗಳಲ್ಲಿ ತನ್ನ ಬೇರುಗಳನ್ನು ಹೊಂದಿದೆ. ಈ ಹಬ್ಬದ ಮೂಲವು ಸಮುದ್ರ ಮಂಥನ ಅಥವಾ ಕ್ಷೀರ ಸಾಗರದ ಮಂಥನದ ಐತಿಹಾಸಿಕ ಕಥೆಗೆ ಸೇರಿದೆ. ಸಂಪ್ರದಾಯದ ಪ್ರಕಾರ, ದೇವರುಗಳು ಮತ್ತು ರಾಕ್ಷಸರು ಅಮರತ್ವದ ಅಮೃತವನ್ನು ಪಡೆಯಲು ಸಮುದ್ರ ಮಂಥನ ಮಾಡಿದರು. ಈ ಆಕಾಶ ಘಟನೆಯ ಸಮಯದಲ್ಲಿ, ಒಂದು ಉಗ್ರ ಯುದ್ಧ ಪ್ರಾರಂಭವಾಯಿತು ಮತ್ತು ಅಮೂಲ್ಯವಾದ ಅಮೃತದ ಹನಿಗಳು ಭೂಮಿಯ ಮೇಲಿನ ನಾಲ್ಕು ಸ್ಥಳಗಳಲ್ಲಿ ಬೀಳುತ್ತಿದ್ದವು, ಹರಿದ್ವಾರ, ಪ್ರಯಾಗರಾಜ್ , ನಾಸಿಕ್ ಮತ್ತು ಉಜ್ಜಯಿನಿ ಹಬ್ಬದ ಸಮಯದಲ್ಲಿ ಪವಿತ್ರ ನದಿಗಳಲ್ಲಿ ಸ್ನಾನ ಮಾಡುವುದರಿಂದ ಆತ್ಮದ ಅಶುದ್ಧತೆಯನ್ನು ಶುದ್ಧೀಕರಿಸುತ್ತದೆ ಎಂಬ ನಂಬಿಕೆಯೊಂದಿಗೆ ಈ ಸ್ಥಳಗಳು ಕುಂಭಮೇಳಕ್ಕೆ ಪವಿತ್ರ ಸ್ಥಳಗಳಾಗಿವೆ.ಅಂತೆಯೇ ದಕ್ಷಿಣದ ಪ್ರಯಾಗ್ ರಾಜ್ ಎಂದೇ ಕರೆಯಲಾಗುವ ತಿರುಮಕೂಡಲು ಸಹ ತನ್ನದೇ ಆದ ವೈಶಿಷ್ಟ್ಯಗಳಿಂದ ಕುಂಭಮೇಳ ಆಚರಣೆಗೆ ಯೋಗ್ಯವಾಗಿದೆ.ಇಲ್ಲಿನ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದರೆ ಬೇರಾವುದೇ ಸ್ತಳಗಳಲ್ಲಿ ಸ್ನಾನಮಾಡಿದ್ದಕ್ಕಿಂತ ಗುಲಗಂಜಿ ಗಾತ್ರದ ಪುಣ್ಯ ಹೆಚ್ಚು ಪ್ರಾಪ್ತಿಯಾಗಲಿದೆ ಎಂದು ವಿವರಿಸಿದರು.
ಶ್ರೀ ಕ್ಷೇತ್ರ ತೈಲೇಶ್ವರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಪೂರ್ಣಾನಂದ ಪುರಿ ಸ್ವಾಮಿ ಸ್ವಾಮೀಜಿ ಮಾತನಾಡಿ ಕುಂಭಮೇಳವು ಭಾರತದ ವೈವಿಧ್ಯಮಯ ಸಂಪ್ರದಾಯಗಳು, ಆಚರಣೆಗಳು ಮತ್ತು ಆಧ್ಯಾತ್ಮಿಕ ಆಚರಣೆಗಳನ್ನು ಆಚರಿಸುವ ಒಂದು ರೋಮಾಂಚಕಾರಿ ಸಾಂಸ್ಕೃತಿಕ ಉತ್ಸವವಾಗಿದೆ. ಇದು ವಿವಿಧ ಜನಸಂಖ್ಯೆಗಳ ನಡುವೆ ಧಾರ್ಮಿಕ ಭಾಷಣ, ಸಾಂಸ್ಕೃತಿಕ ವಿನಿಮಯ ಮತ್ತು ಸಾಮಾಜಿಕ ಸಂಪರ್ಕವನ್ನು ಸುಗಮಗೊಳಿಸುತ್ತದೆ. ಉತ್ಸವದ ಬೃಹತ್ ವ್ಯಾಪ್ತಿ ಮತ್ತು ಅದು ಪ್ರೇರೇಪಿಸುವ ಭಕ್ತಿಯು ಭಾಗವಹಿಸುವವರ ನಿರಂತರ ನಂಬಿಕೆ ಮತ್ತು ಒಗ್ಗಟ್ಟನ್ನು ಎತ್ತಿ ತೋರಿಸುತ್ತದೆ, ಇದು ಕುಂಭಮೇಳವನ್ನು ಭಾರತೀಯ ಆಧ್ಯಾತ್ಮಿಕ ಇತಿಹಾಸದಲ್ಲಿ ಒಂದು ವಿಶಿಷ್ಟ ಮತ್ತು ಮಹತ್ವದ ಘಟನೆಯನ್ನಾಗಿ ಮಾಡುತ್ತದೆ ಎಂದರು.
ಆದಿಚುಂಚನ ಗಿರಿ ಕ್ಷೇತ್ರದ ಪೀಠಾಧ್ಯಕ್ಷ ನಿರ್ಮಲಾನಂದ ಸ್ವಾಮೀಜಿಯವರನ್ನು ಪೂರ್ಣ ಕುಂಭ ಸ್ವಾಗತ ಕೋರಿ ಯಾಗ ಮಂಟಪಕ್ಕೆ ಕರೆತರಲಾಯಿತು.
ಮೈಸೂರು ಶಾಖಾ ಮಠದ ಸೋಮನಾಥೇಶ್ವರಸ್ವಾಮೀಜಿ, ಪುರಸಭೆ ಮಾಜಿ ಅಧ್ಯಕ್ಷ ಟಿ .ಎಂ ನಂಜುಂಡಸ್ವಾಮಿ, ಮಾಜಿ ಉಪಾಧ್ಯಕ್ಷ ಬಿ.ಮರಯ್ಯ, ಅಂಗಡಿ ಶೇಖರ್, ಫ್ಯಾನ್ಸಿ ಮೋಹನ್, ಲಕ್ಷ್ಮಣ,ಪಿ. ಸ್ವಾಮಿನಾಥ್ ಗೌಡ, ಮರಿದೇವ ಗೌಡ, ಆಲಗೂಡು ವೆಂಕಟರಮಶೆಟ್ಟಿ, ಟಿ ಸಿ ಫಣೀಶ್ ಕುಮಾರ್, ಸೋಮಣ್ಣ, ಚೇತನ್ ಬಸವರಾಜು ಮತ್ತಿತರಿದ್ದರು.
Mysore
ಏ.9 ರಂದು ಶ್ರೀಕಂಠೇಶ್ವರ ಸ್ವಾಮಿಯ ದೊಡ್ಡ ಜಾತ್ರೆ: ಪೂರ್ವ ಸಿದ್ಧತೆ ಕುರಿತು ದರ್ಶನ್ ದ್ರುವ ಸಭೆ

ವರದಿ: ಮಹದೇವಸ್ವಾಮಿ ಪಟೇಲ್
ನಂಜನಗೂಡು: ಶ್ರೀ ಶ್ರೀಕಂಠೇಶ್ವರ ಸ್ವಾಮಿಯ ದೊಡ್ಡ ಜಾತ್ರೆಯ ಏ.9 ರಂದು ಜರುಗುವ ಮಹೋತ್ಸವದ ಹಿನ್ನೆಲೆ ಇಂದು ಬುಧವಾರ 2 ನೇ ಹಂತದ ಪೂರ್ವಭಾವಿ ಸಭೆಯನ್ನು ಎಡಿಸಿ ಜಿಲ್ಲಾಧಿಕಾರಿಗಳು ಹಾಗೂ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅಧ್ಯಕ್ಷತೆಯಲ್ಲಿ ನಡೆದ ದೊಡ್ಡ ಜಾತ್ರೆ ಪೂರ್ವ ಸಿದ್ಧತಾ ಸಭೆ ನಡೆಸಲಾಯಿತು.
ನಗರದ ಶ್ರೀಕಂಠೇಶ್ವರ ಸ್ವಾಮಿಯ ಅನ್ನದಾಹೋಹ ಭವನದಲ್ಲಿ ಆಯೋಜಿಸಿದ್ದ ದೊಡ್ಡ ಜಾತ್ರೆಯ ಪ್ರಯುಕ್ತ ಅಧಿಕಾರಿಗಳು ಮತ್ತು ಏಳೂರು ಗ್ರಾಮಸ್ಥರ ಸಲಹೆ ಸೂಚನೆಗಳ 2 ನೇ ಹಂತ ಪೂರ್ವದ ಸಭೆ ಆಯೋಜಿಸಲಾಯಿತು.
ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ ಶ್ರೀಕಂಠೇಶ್ವರ ದೇವಸ್ಥಾನ ಸುತ್ತು, ಅಂಬೇಡ್ಕರ್ ಭವನ, ನಗರ ಸಭೆ, ಸೇರಿದಂತೆ ದೀಪದ ಅಲಂಕಾರಗಳನ್ನು ಅದ್ದೂರಿಯಾಗಿ ಮಾಡಬೇಕೆಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಅಧಿಕಾರಿಗೆ ಸೂಚನೆ ನೀಡಿದರು.
ರಥೋತ್ಸವ ಜರುಗಲಿರುವಗ ರಥದ ಚಕ್ರಗಳು, ರಥದ ಹಗ್ಗ, ರಸ್ತೆಗಳಲ್ಲಿ ಹಳ್ಪಳ ದಿಟ್ಟನೆಗಳನ್ನು, ಪರಿಶೀಲಿಸಬೇಕು, ಅಧಿಕಾರಿಗಳು ನಿಮ್ಮ ಜವಾಬ್ದಾರಿಯಿಂದ ಅವಘಡನೆ ನಡೆಯದೆ ಹಾಗೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಗಡಕ್ ಸೂಚನೆ ಶಾಸಕ ದರ್ಶನ್ ಧ್ರುವನಾರಾಯಣ್ ನೀಡಿದರು.
ಎಡಿಸಿ ಶಿವರಾಜ್ ಮಾತನಾಡಿ ಕ್ಷೇತ್ರದಲ್ಲಿ ಇಂತಹ ಶಾಸಕರಾದ ದರ್ಶನ್ ಧ್ರುವನಾರಾಯಣ್ ರವರು ಹೆಚ್ಚು ಸಹಕಾರ ಬೆಂಬಲ ಕೊಡುತ್ತಿದ್ದಾರೆ ಖುಷಿಯಾಗುತ್ತದೆ. ಆದ್ದರಿಂದ ಅಧಿಕಾರಿಗಳು ನಿಮ್ಮ ಜವಾಬ್ದಾರಿಯಿಂದ ಕೆಲಸಗಳನ್ನು ನಿರ್ವಹಿಸಬೇಕು
ಜಾತ್ರೆ ಕಳೆದು ವರ್ಷಕ್ಕಿಂತ ಅದ್ದೂರಿಯಾಗಿ ಅಲಂಕಾರ ಮಾಡಿ ಯಾವುದೇ ಇತರ ಘಟಕಗಳ ನಡುವೆ ಅದ್ದೂರಿಯಾಗಿ ಜಾತ್ರೆ ನಡೆಯಬೇಕು.
ದೇವಸ್ಥಾನ ಸುತ್ತ ಹಾಗೂ ತೇರು ಎಳೆಯುವಾಗ ಸಿಸಿಟಿವಿ ಅಳವಡಿಸಿರಬೇಕು. ರಥ ಚಕ್ರದ ಹಿಂಭಾಗದಲ್ಲಿ ಎದ್ದಿನ ಮರ ಕೊಡುವವರು ಜಾಗೃತಿ ಆಗಿರಬೇಕು ಅವರಿಗೆ ಟೀ ಶರ್ಟ್ ಕೊಡಬೇಕೆಂದು ದೇವಸ್ಥಾನ ಅಧಿಕಾರಿಗೆ ಸೂಚನೆ ನೀಡಿದರು
ಶಾಸಕರಿಂದ ಸಭಾಷ್ ಅದ್ದೂರಿಯಾಗಿ ನಡೆಯಿತು ಎಂದು ಅನಿಸಿಕೊಂಡರೆ ಸಂತೋಷವಾಗುತ್ತದೆ. ನಂಜುಂಡೇಶ್ವರ ಸ್ವಾಮಿ ನಮ್ಮ ಮನೆ ದೇವರು ಎಂದುಕೊಂಡು. ನಂಜುಂಡೇಶ್ವರ ಸ್ವಾಮಿಯ ಭಯಕ್ಕೆ ಶ್ರದ್ಧೆ ಇಟ್ಟು ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸಗಳನ್ನು ನಿರ್ವಹಿಸಿ ಎಂದು ಖಡಕ್ ಸೂಚನೆ ನೀಡಿದರು.
ಸಭೆಯಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ತಹಸೀಲ್ದಾರ್ ಶಿವಕುಮಾರ್ ಕಾಸ್ನರ್, ನಗರ ಸಭಾ ಅಧ್ಯಕ್ಷರಾದ ಶ್ರೀಕಂಠ ಸ್ವಾಮಿ, EO ಜಗದೀಶ್ , DYSP ರಘು , ನಗರಸಭಾ ಪೌರಯುಕ್ತರಾದ ವಿಜಯ್ ಸೇರಿದಂತೆ ವಿವಿಧ ಗ್ರಾಮದ ಯಜಮಾನರುಗಳು, ಮುಖಂಡರುಗಳು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Mysore
ಗುರುವಾರ ಮುಕ್ತ ವಿವಿ ಘಟಿಕೋತ್ಸವ ಸತೀಶ್ ಜಾರಕಿಹೊಳಿ ಗೆ ಗೌರವ ಡಾಕ್ಟರೇಟ್

ಮೈಸೂರು: ಕರ್ನಾಟಕ ಮುಕ್ತ ವಿಶ್ವ ವಿದ್ಯಾನಿಲಯದ 20ನೇ ಘಟಿಕೋತ್ಸವ ಸಮಾರಂಭವು ಮಾರ್ಚ್ 27 ರಂದು ಬೆಳಗ್ಗೆ 11 ಗಂಟೆಗೆ ವಿವಿ ಘಟಿಕೋತ್ಸವ ಭವನದಲ್ಲಿ ನಡೆಯಲಿದೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ಪ್ರಕಟಿಸಲಾಗಿದೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಘಟಿಕೋತ್ಸವದಲ್ಲಿ ಒಟ್ಟು 17,348 ಮಂದಿ ವಿವಿಧ ಪದವಿ ಪಡೆಯಲಿದ್ದು, ಒಟ್ಟು 54 ಚಿನ್ನದ ಪದಕ, 58 ನಗದು ಬಹುಮಾನ ನೀಡಲಾಗುವುದು ಎಂದರು.
ಈ ಸಾಲಿನಲ್ಲಿ 6402 ಪುರುಷರು, 10946 ಮಹಿಳೆಯರಿಗೆ ಪದವಿ ನೀಡಲಿದ್ದು, ವಿವಿಯ ಇತಿಹಾಸದಲ್ಲೇ ಅತ್ಯಧಿಕ ಮಂದಿ ಒಟ್ಟು 41 ಮಂದಿ ಪಿಎಚ್ ಡಿ ಪದವಿ ಪಡೆಯಲಿದ್ದಾರೆ. ಸ್ನಾತಕ, ಸ್ನಾತಕೋತ್ತರ ವಿಭಾಗದಲ್ಲಿ ಒಟ್ಟು 25109 ಮಂದಿ ಪರೀಕ್ಷೆಗೆ ಹಾಜರಾಗಿ 17307 ಮಂದಿ ತೇರ್ಗಡೆ ಹೊಂದಿ ಶೇ.68.92ರಷ್ಟು ಫಲಿತಾಂಶ ಬಂದಿದೆ ಎಂದು ತಿಳಿಸಿದರು.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಗೌರವ ಡಾಕ್ಟರೇಟ್ ನೀಡುತ್ತಿರುವ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ . ಮಾನವ ಬಂಧುತ್ವ ವೇದಿಕೆಯ ಸಾಮಾಜಿಕ ಕಾರ್ಯಕ್ಕೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ. ಅದರಂತೆ ಚಿತ್ರದುರ್ಗದ ಐಡಿಯಲ್ ಎಜುಕೇಶನ್ ಸೊಸೈಟಿ ಚೇರ್ಮನ್ ಸಿ.ಎಂ.ಇರ್ಫಾನುಲ್ಲಾ ಷರೀಫ್ ಅವರ ಶೈಕ್ಷಣಿಕ ಸೇವೆ ಹಾಗೂ ಕಲುಬುರಗಿಯ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಛೇರ್ಮನ್ ಡಾ.ದಾಕ್ಷಾಯಣಿ ಎಸ್.ಅಪ್ಪಾ ಅವರಿಗೆ ಈ ಬಾರಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುತ್ತಿದೆ ಎಂದು ಹೇಳಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಕೌಶಲ ಅಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಸಚಿವಾಲಯದ ಕಾರ್ಯದರ್ಶಿ ಅತುಲ್ ಕುಮಾರ್ ತಿವಾರಿ ಘಟಿಕೋತ್ಸವದ ಭಾಷಣ ಮಾಡುವರು ಎಂದು ಡಾ.ಶರಣಪ್ಪ ವಿ. ಹಲಸೆ ತಿಳಿಸಿದರು.
ಕುಲಸಚಿವರ ಕಚೇರಿಗೆ ಸಿಬ್ಬಂದಿ ನೋಟಿನ ಹಾರ ಹಾಕಿ ಪ್ರತಿಭಟಿಸಿದ ಪ್ರಕರಣ ಕುರಿತು ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.
ಪರೀಕ್ಷಾಂಗ ಕುಲಸಚಿವ ಎಚ್.ವಿಶ್ವನಾಥ್, ಕುಲಸಚಿವ ಡಾ.ಪ್ರವೀಣ, ಶೈಕ್ಷಣಿಕ ಡೀನ್ ಪ್ರೊ.ಲಕ್ಷ್ಮಿ, ಬಿಒಎಂ ಸದಸ್ಯರು ಉಪಸ್ಥಿತರಿದ್ದರು.
ಕೋಟ್
ಕಳೆದ ಎರಡು ವರ್ಷಗಳಲ್ಲಿ 86 ಸಾವಿರ ಅಭ್ಯರ್ಥಿಗಳು ವಿವಿಧ ಕೋರ್ಸ್ಗಳಿಗೆ ಪ್ರವೇಶ ಪಡೆದಿದ್ದರು. ಈ ವರ್ಷ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು, ಮಾ.31ರವರೆಗೂ ಪ್ರವೇಶಕ್ಕೆ ಅವಕಾಶವಿದೆ.
– ಪ್ರೊ.ಶರಣಪ್ಪ ವಿ.ಹಲಸೆ, ಮುಕ್ತ ವಿವಿ ಕುಲಪತಿ
Mysore
ಎವರೆಸ್ಟ್ ಶಿಖರ ಏರಿದ ಅನುಭವ ಪುಸ್ತಕ ಬರೆಯುತ್ತಿರುವ ಡಾ. ಉಷಾ ಹೆಗ್ಡೆ

ಮೈಸೂರು: ಜೀವಸಹಿತ ವಾಪಸ್ ಬರುವ ಬಗ್ಗೆ ಅನುಮಾನದ ಮನಸ್ಥಿತಿಯಲ್ಲಿಯೇ ಹಿಮಾಲಯದ ಮೌಂಟ್ ಎವರೆಸ್ಟ್ ಶಿಖರವನ್ನು ಏರಿದೆ. ಮೌಂಟ್ ಎವರೆಸ್ಟ್ ಏರಿದ ತಮ್ಮ ಸಾಧನೆಯ ಹಾದಿ ಹಾಗೂ ಸಿದ್ಥತೆಗಳ ಕುರಿತು ಪುಸ್ತಕ ಬರೆಯುತ್ತಿರುವುದಾಗಿ ಮೈಸೂರಿನ ಜೆಎಸ್ಎಸ್ ದಂತ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಉಷಾ ಹೆಗ್ಡೆ ಅವರು ತಿಳಿಸಿದರು.
ಇಲ್ಲಿನ ಊಟಿ ರಸ್ತೆಯಲ್ಲಿರುವ ಜೆಎಸ್ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ಹಾಗೂ ಬೆಂಗಳೂರಿನ ಇನ್ ಸ್ಟಿಟ್ಯೂಟ್ ಆಫ್ ಮೀಡಿಯಾ ಸ್ಟಡೀಸ್ ಆಂಡ್ ರಿಸರ್ಚ್ (ಐಎಂಎಸ್ಆರ್) ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಪತ್ರಿಕೋದ್ಯಮದ ವಿದ್ಯಾರ್ಥಿಗಳಿಗೆ ಪತ್ರಿಕಾ ಬರಹ ಕೌಶಲ ಕುರಿತು ಎರಡು ದಿನಗಳ ಕಾರ್ಯಾಗಾರದಲ್ಲಿ ಬುಧವಾರ ಅವರು ಅಣುಕು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಮೌಂಟ್ ಎವರೆಸ್ಟ್ ಶಿಖರ ಏರುವ ಮುನ್ನ ಸಾಕಷ್ಟು ಸಿದ್ಧತೆಗಳನ್ನು ನಡೆಸಿದ್ದೆ. ದೈಹಿಕವಾಗಿ ಫಿಟ್ ಆಗಿದ್ದೆ. ಮನೆಯಲ್ಲಿ ಮೊದಲು ಬೇಡ ಎಂದಿದ್ದರು. ಆದರೆ, ನಾನು ಪಡೆಯುತ್ತಿದ್ದ ತರಬೇತಿ ನೋಡಿ ಉತ್ತೇಜನ ನೀಡಿದರು. ಮನೆಯವರ ಬೆಂಬಲ ಇಲ್ಲದಿದ್ದರೆ
ಮೌಂಟ್ ಎವರೆಸ್ಟ್ ಶಿಖರ ಏರಲು ಸಾಧ್ಯವಾಗುತ್ತಿರಲಿಲ್ಲ ಎಂದು ಅವರು ತಿಳಿಸಿದರು.
ಸಾಗರಮಾತಾ ಕೃಪೆ ಇಲ್ಲದಿದ್ದರೆ ಹಿಮಾಲಯ ಏರಲು ಸಾಧ್ಯವಾಗುವುದಿಲ್ಲ. ಪರ್ವತಾರೋಹಣಕ್ಕೆ ಮನಸ್ಸು ಧೃಡವಾಗಿರಬೇಕು. ಎವರೆಸ್ಟ್ ಶಿಖರ ಏರುವಾಗ ಹಾಗೂ ಇಳಿಯುವಾಗ ಅನೇಕ ಶವಗಳನ್ನು ನೋಡಿದೆ. ಶಿಖರ ಏರಿ ವಾಪಸ್ ಇಳಿಯುವಾಗಲೇ ಸವಾಲುಗಳು, ಅಪಾಯಗಳು ಹೆಚ್ಚು ಎಂದು ಅವರು ತಿಳಿಸಿದರು.
ಇಡೀ ದೇಶವನ್ನು ಸೈಕಲ್ ನಲ್ಲಿ ಸುತ್ತಬೇಕು ಎಂಬ ಆಸೆ ಇದೆ ಎಂದು ಅವರು ತಿಳಿಸಿದರು.
ಮೈಸೂರು ಮಹಾನಗರ ಪಾಲಿಕೆಯ ಸ್ಚಚ್ಛ ಮೈಸೂರು ರಾಯಭಾರಿಯಾಗಿರುವ ಅವರು ಪ್ರತಿಯೊಬ್ಬರಿಂದಲೂ ಸ್ವಚ್ಚ ಮೈಸೂರು ಅಭಿಯಾನ ಆರಂಭವಾಗಬೇಕು ಎಂದರು.
ಪತ್ರಿಕೋದ್ಯಮ ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಡಾ.ಉಷಾ ಹೆಗ್ಡೆ ಅವರು ಉತ್ತರಿಸಿದರು.
ಅಸ್ಸಾಂ ಕೇಂದ್ರೀಯ ವಿಶ್ವವಿದ್ಯಾನಿಲಯದ ವಿಶ್ರಾಂತ ಸಹ ಕುಲಪತಿ ಪ್ರೊ.ಕೆ.ವಿ.ನಾಗರಾಜ್, ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ತ್ರಿವೇಣಿ, ಸುವರ್ಣ ಎಸ್.ಕಂಬಿ ಅವರು ಉಪಸ್ಥಿತರಿದ್ದರು.
-
Kodagu21 hours ago
ಬೇಳೂರು ಬಾಣೆಯಲ್ಲಿ ಸ್ಟೇರಿಂಗ್ ಲಾಕ್ : ಕಾರು ಪಲ್ಟಿ
-
Kodagu18 hours ago
ಕೊಡಗಿನ ಭರವಸೆಯ ಪ್ರತಿಭೆ ವರ್ತ ಕಾಳಿ ಕಿರುಚಿತ್ರದ ನಿರ್ದೇಶಕ: ಕೃತಾರ್ಥ ಮಂಡೆಕುಟ್ಟಂಡ
-
State14 hours ago
ಬಿಜೆಪಿ ಶೋಕಾಸ್ ನೋಟಿಸ್ ಕುರಿತು ಶಾಸಕ ಎಸ್ಟಿಎಸ್ ಫಸ್ಟ್ ರಿಯಾಕ್ಷನ್
-
Mysore17 hours ago
ಎಲ್ಲಾ ಪಕ್ಷದವರ ಮೇಲೂ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ: ಯತೀಂದ್ರ ಸಿದ್ದರಾಮಯ್ಯ
-
Mandya13 hours ago
ಎಂ.ಕೆ.ಸೋಮಶೇಖರ್ಗೆ ರಾಜ್ಯಮಟ್ಟದ ಛಾಯಗ್ರಾಹಕ ಹಾಗೂ ಕಲಾವಿದ ಪ್ರಶಸ್ತಿ ಪ್ರಧಾನ
-
State11 hours ago
ಬಿಜೆಪಿಯಿಂದ ಆರು ವರ್ಷಗಳ ಕಾಲ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ
-
Mandya16 hours ago
ಭೂ ದಾಖಲೆ ಹೊಂದಿರುವವರನ್ನು ಓಕ್ಕಲೆಬ್ಬಿಸಬೇಡಿ : ಎನ್ ಚೆಲುವರಾಯಸ್ವಾಮಿ
-
Hassan15 hours ago
1 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನರೆವೇರಿಸಿದ ಸ್ವರೂಪ್ ಪ್ರಕಾಶ್