Connect with us

Hassan

ಕುರುಬ ಸಮಾಜಕ್ಕೆ ದೇವೇಗೌಡರ ಕೊಡುಗೆ ಅಪಾರ

Published

on

ಕುರುಬ ಸಮಾಜಕ್ಕೆ ದೇವೇಗೌಡರ ಕೊಡುಗೆ ಅಪಾರ

ಮೈತ್ರಿ ಅಭ್ಯರ್ಥಿಗೆ ಮತ ನೀಡಿ: ನವೀಲೆ ಅಣ್ಣಪ್ಪ ಮನವಿ

ಹಾಸನ: ಇಲ್ಲಿವರೆಗೂ ಜಿಲ್ಲೆಯಲ್ಲಿ ಇತಿಹಾಸ ನೋಡಿದರೇ ಕುರುಬ ಸಮುದಾಯವನ್ನು ಓಟ್ ಬ್ಯಾಂಕಿಗಾಗಿ ಕಾಂಗ್ರೆಸ್ ಬಳಸಿಕೊಳ್ಳುತ್ತಿದ್ದು, ನಮ್ಮ ಸಮುದಾಯಕ್ಕೆ ದೇವೇಗೌಡರ ಕೊಡುಗೆ ಅಪಾರವಾಗಿರುವುದರಿಂದ ಈ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಮತ ಹಾಕುವಂತೆ ಬಿಜೆಪಿ ಮಾಜಿ ಅಧ್ಯಕ್ಷ ನವೀಲೆ ಅಣ್ಣಪ್ಪ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಇದೇ ತಿಂಗಳ ೨೬ ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಎನ್.ಡಿ.ಎ. ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಪ್ರಜ್ವಲ್ ರೇವಣ್ಣ ಅವರಿಗೆ ಹಾಸನ ಲೋಕಸಭಾ ಕ್ಷೇತ್ರದ ನನ್ನ ಕುರುಬ ಸಮುದಾಯದ ಎಲ್ಲಾ ಬಾಂಧವರು ಮತ ನೀಡಬೇಕೆಂದು ತಮ್ಮಲ್ಲಿ ಕಳಕಳಿಯ ಮನವಿ ಮಾಡಿಕೊಳ್ಳುತ್ತೇವೆ. ಹೊಳೆನರಸೀಪುರ ತಾಲೂಕು ಅಣ್ಣೇಚಾಕನಹಳ್ಳಿ ದೊಡ್ಡೇಗೌಡರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿದ್ದು ಇದೇ ಮಾಜಿ ಪ್ರಧಾನಿ ದೇವೇಗೌಡರು. ಆದರೆ ಪ್ರಸ್ತುತ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರ ತಾತ, ದಿ.ಪುಟ್ಟಸ್ವಾಮಿಗೌಡರು, ೧೯೯೯ರ ವಿಧಾನಸಭೆ ಚುನಾವಣೆಯಲ್ಲಿ ಹೆಚ್.ಡಿ. ರೇವಣ್ಣ ಅವರನ್ನು ಸೋಲಿಸಲಾಗದೆ ನಮ್ಮ ಕುರುಬ ಸಮುದಾಯವನ್ನೇ ಅಸ್ತ್ರ ಮಾಡಿಕೊಂಡು ದೊಡ್ಡೇಗೌಡರನ್ನು ಹೊಳೆನರಸೀಪುರದಿಂದ ಕಣಕ್ಕಿಳಿಸುವ ಮೂಲಕ ರೇವಣ್ಣ ಅವರನ್ನು ಸೋಲಿಸಿದರು. ಪುಟ್ಟಸ್ವಾಮಿಗೌಡರು ಅದೇ ವರ್ಷ ನಡೆದ ಲೋಕಸಭೆ ಚುನಾವಣೆಯಲ್ಲಿ ಗೆದ್ದರು ಎಂದರು. ೨೦೦೪ರ ವಿಧಾನಸಭೆ ಚುನಾವಣೆಯಲ್ಲಿ ನಿಮ್ಮ ಪರವಾಗಿದ್ದ ದೊಡ್ಡೇಗೌಡರ ಏಳಿಗೆ/ಜನಪ್ರಿಯತೆ ಸಹಿಸಲಾಗದೆ ಅವರಿಗೆ ಟಿಕೆಟ್ ತಪ್ಪಿಸಿ, ಹಾಲಿ ಲೋಕಸಭೆ ಸದಸ್ಯರಾಗಿದ್ದರೂ ಅದೇ ಹೊಳೆನರಸೀಪುರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಿದ್ದರು. ಆದರೆ ಪುಟ್ಟಸ್ವಾಮಿಗೌಡರು, ರೇವಣ್ಣ ಅವರ ವಿರುದ್ಧವೇ ೩೨ ಸಾವಿರ ಮತಗಳ ಅಂತರದಿಂದ ಹೀನಾಯವಾಗಿ ಸೋತರು. ಹಾಸನ ಜಿಲ್ಲೆಯಲ್ಲಿ ಏಕೈಕ ಕುರುಬ ಸಮುದಾಯದ ಶಾಸಕ ಹಾಗೂ ನಾಯಕನನ್ನು ತುಳಿದಿದ್ದು, ಬಲಿ ಪಡೆದಿದ್ದು ಇದೇ ಶ್ರೇಯಸ್ ಪಟೇಲ್ ಅವರ ತಾತ ಪುಟ್ಟಸ್ವಾಮಿಗೌಡರು ಎಂಬುದನ್ನು ರಾಜಕೀಯ ಇತಿಹಾಸ ಹೇಳುತ್ತಿದೆ ಎಂದು ಹೇಳಿದರು.

ಹಾಸನ ಜಿಲ್ಲೆಯಲ್ಲಿ ಕುರುಬ ಸಮುದಾಯ ಅಂದು ಕಳೆದುಕೊಂಡ ಶಾಸಕರ ಸ್ಥಾನವನ್ನು ಇಂದೂ ಪಡೆಯಲು ಸಾಧ್ಯವಾಗಿಲ್ಲ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಶ್ರೇಯಸ್ ಪಟೇಲ್, ಪುಟ್ಟಸ್ವಾಮಿಗೌಡ ಮೊಮ್ಮಗ ಆಗಿದ್ದು, ಇವರಿಗೆ ಕುರುಬ ಸಮುದಾಯ ಬೆಂಬಲ ಕೊಡುವುದು ವಿಪರ್ಯಾಸ. ಕೊಡಲೂ ಬಾರದು ಎಂದು ಮನವಿ ಮಾಡಿಕೊಳ್ಳುತ್ತೇವೆ. ಮಾಜಿ ಪ್ರಧಾನಿ ದೇವೇಗೌಡರು, ಈ.ದೊಡ್ಡೇಗೌಡರನ್ನು ೧೯೮೬ರಲ್ಲಿ ನೇರವಾಗಿ ವಿಧಾನಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಿದ್ದರು. ಹಾಗೂ ಮಲ್ನಾಡು ಆಸ್ಪತ್ರೆಯ ಡಾ.ದೊಡ್ಡೇಗೌಡ ಅವರನ್ನು ೧೦ ವರ್ಷಗಳ ಕಾಲ ಕೆಪಿಎಸ್ಸಿ ಅಧ್ಯಕ್ಷರನ್ನಾಗಿ ಮಾಡಿದ್ದರು. ಇದು ದೇವೇಗೌಡರು ಕುರುಬ ಸಮಾಜಕ್ಕೆ ಮಾಡಿರುವ ಕೊಡುಗೆ ಮತ್ತು ರಾಜಕೀಯ ಸ್ಥಾನಮಾನ ಅಲ್ಲವೇ ಎಂದರು. ಬೇಲೂರು ತಾಲೂಕಿನ ಹೇಮಾವತಿ ಮಂಜುನಾಥ್ ಅವರನ್ನು ಹಾಸನ ಜಿಪಂ ಅಧ್ಯಕ್ಷರನ್ನಾಗಿ ಮಾಡಿದ್ದರು. ಅರಸೀಕೆರೆ ತಾಲೂಕು ಹುಚ್ಚೇಗೌಡರನ್ನು ಜಿಪಂ ಅಧ್ಯಕ್ಷರನ್ನಾಗಿ ಮಾಡಿದರು. ಬಿಳಿ ಚೌಡಯ್ಯ ಅವರನ್ನು ಉಪಾಧ್ಯಕ್ಷರನ್ನಾಗಿ ಮಾಡಿದ್ದರು. ಈ ಅಧಿಕಾರ ನೀಡಿದ್ದು, ಇದೇ ದೇವೇಗೌಡರು ಹಾಗೂ ಜೆಡಿಎಸ್ ಪಕ್ಷ ಅಲ್ಲವೇ, ಬಿಜೆಪಿ ಪಕ್ಷ ಅಧಿಕಾರದಲ್ಲಿದ್ದಾಗ ಸಮಾಜದ ಮುಖಂಡರಾದ ನವಿಲೆ ಅಣ್ಣಪ್ಪ ಅವರನ್ನು ಹುಡಾ ಅಧ್ಯಕ್ಷರನ್ನಾಗಿ ಮಾಡಿದ್ದರು. ಆದರೆ ಇದೇ ಶ್ರೇಯಸ್ ಪಟೇಲ್ ಅವರು ಉಸ್ತುವಾರಿ ಸಚಿವ ರಾಜಣ್ಣ ಅವರಿಗೆ ಬೇರೆ ಸಮುದಾಯದವರನ್ನು ಹುಡಾ ಅಧ್ಯಕ್ಷರನ್ನಾಗಿ ಮಾಡಿ ಎಂದು ಶಿಫಾರಸ್ಸು ಪತ್ರ ಕೊಟ್ಟಿದ್ದಾರೆ. ಆಗ ಜಿಲ್ಲೆಯ ಕುರುಬ ಸಮುದಾಯದ ನಾಯಕರು ನಿಮ್ಮ ನೆನಪಿಗೆ ಬರಲಿಲ್ಲವೇ ಎಂದು ಕೇಳ ಬಯಸುತ್ತೇವೆ. ಒಟ್ಟಾರೆ ಇಲ್ಲಿವರೆಗೂ ಜಿಲ್ಲೆಯ ರಾಜಕೀಯ ಇತಿಹಾಸ ನೋಡಿದಾಗ ಕುರುಬ ಸಮುದಾಯಕ್ಕೆ ದೇವೇಗೌಡರ ಕೊಡುಗೆ ಅಪಾರ ಮತ್ತು ನ್ಯಾಯ ಒದಗಿಸಿದ್ದಾರೆ. ಇಂದು ಓಟ್ ಬ್ಯಾಂಕ್ಗಾಗಿ ಕುರುಬ ಸಮುದಾಯವನ್ನು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ನಾಯಕರಿಗೆ ನಮ್ಮ ಸಮುದಾಯ ದವರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಬಾರದು ಎಂದು ಮನವಿ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು.

Continue Reading
Click to comment

Leave a Reply

Your email address will not be published. Required fields are marked *

Hassan

ಸಂಭ್ರಮದಿಂದ ನಡೆದ ವೀರಭದ್ರೇಶ್ವರ ಸ್ವಾಮಿಯ 46ನೇ ಜಾತ್ರಾ ಮಹೋತ್ಸವ

Published

on

ಆಲೂರು: ತಾಲ್ಲೂಕಿನ ಅಡವಿ ಬಂಟೆನಹಳ್ಳಿ ಗ್ರಾಮದಲ್ಲಿ ಶ್ರೀ ದೇವೀರಮ್ಮ ಶ್ರೀ ವೀರಭದ್ರೇಶ್ವರ ಸ್ವಾಮಿಯವರ 46ನೇ ವರ್ಷದ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ನಡುವೆ ಸಂಭ್ರಮದಿಂದ ನಡೆಯಿತು.

ಮಾ.13ರ ಗುರುವಾರ ರಾಮೇಶ್ವರ ಹಳ್ಳದಲ್ಲಿ ಶ್ರೀ ದೇವೀರಮ್ಮ ಶ್ರೀ ವೀರಭದ್ರೇಶ್ವರ ಸ್ವಾಮಿಯವರಿಗೆ ಗಂಗಾಸ್ನಾನ ಏರ್ಪಡಿಸಲಾಗಿತ್ತು. ಶ್ರೀ ಕ್ರೋಧಿನಾಮ ಸಂವತ್ಸರೇ ಉತ್ತರಾಯಣೇ ಶಿಶಿರ ಋತು ಫಾಲ್ಗುಣ ಶುಕ್ಲ ಪಕ್ಷ 1927 ಗತಕಲಿ 5101 ದಿನಾನಿ14 ಪೂರ್ವ ಭಾದ್ರಪದ ಉತ್ತರ ಪಲ್ಗುಣಿ ನಕ್ಷತ್ರ ಪೂರ್ಣಿಮೆಯ ಮಾ. 14 ರ ಶುಕ್ರವಾರ ಬೆಳಿಗ್ಗೆ 8-00 ಗಂಟೆಗೆ ಗ್ರಾಮದ ದೇವಸ್ಥಾನದಲ್ಲಿ ಶ್ರೀ ದೇವೀರಮ್ಮನವರ ಮೂಲಸ್ಥಾನದಲ್ಲಿ ಅಂಕುರಾರ್ಪಣ ರುದ್ರಾಭಿಷೇಕ ಮತ್ತು ಮಹಾಮಂಗಳಾರತಿಯನ್ನು ಏರ್ಪಡಿಸಿ ಮತ್ತು ಸಂಜೆ 3-00 ಗಂಟೆಗೆ ಶ್ರೀ ಮಳೆಮಲ್ಲೇಶ್ವರ ಸ್ವಾಮಿಯವರ ಬೆಟ್ಟದಲ್ಲಿ ಶ್ರೀ ದೇವೀರಮ್ಮ- ಶ್ರೀ ವೀರಭದ್ರೇಶ್ವರ ಸ್ವಾಮಿಯವರಿಗೆ ರುದ್ರಾಭಿಷೇಕ ನಡೆಯಿತು, ಸಂಜೆ 7-30 ಗಂಟೆಗೆ ಸರಿಯಾಗಿ ಶ್ರೀ ಮಳೆಮಲ್ಲೇಶ್ವರ ಸ್ವಾಮಿಯವರ ಬೆಟ್ಟದಿಂದ ಶ್ರೀ ದೇವೀರಮ್ಮ ಶ್ರೀ ವೀರಭದ್ರೇಶ್ವರ ಸ್ವಾಮಿಯವರ ಮುತ್ತಿನ ಮಂಟಪ ಉತ್ಸವ ನಂದಿಧ್ವಜ, ವೀರಭದ್ರ ಕುಣಿತ, ಕೋಲಾಟ, ಡೊಳ್ಳು ಕುಣಿತ ಹಾಗೂ ವಿವಿಧ ವಾದ್ಯದೊಂದಿಗೆ ಮೆರವಣಿಗೆ ಮೂಲಕ ಗ್ರಾಮಕ್ಕೆ ಆಗಮನ ರಾತ್ರಿ 8-30 ರಿಂದ 10-30ರವರೆಗೆ ಅರ್ಚನೆ ಮಹಾಮಂಗಳಾರತಿ ಕಾರ್ಯಕ್ರಮ ನಡೆದವು.
ರಾತ್ರಿ 10-30 ಗಂಟೆಯಿಂದ ನಂದಿಧ್ವಜದೊಂದಿಗೆ ಶ್ರೀ ದೇವೀರಮ್ಮ ಸ್ವಾಮಿಯವರ ಉತ್ಸವ ಜರುಗಿದವು.

ಮಾ.15ರ ಶನಿವಾರ ಬೆಳಗ್ಗೆ 5-30 ಗಂಟೆಯಿಂದ ಕಳಸ ಶ್ರೀ ದೇವೀರಮ್ಮ ಶ್ರೀ ವೀರಭದ್ರೇಶ್ವರ ಸ್ವಾಮಿಯವರ ಮೆರವಣಿಗೆಯೊಂದಿಗೆ ಕೆಂಡೋತ್ಸವ ಕಾರ್ಯಕ್ರಮ ಸಾವಿರಾರು ಭಕ್ತರ ಸಮ್ಮುಖದಲ್ಲಿ ಜರುಗಿತು. ಹೊತ್ತ ಭಕ್ತರು ಕೆಂಡ ಹಾಯ್ದರು. ಹರಕೆ ಹೊತ್ತ ಭಕ್ತರು ಕೆಂಡ ತುಳಿದು ತಮ್ಮ ಭಕ್ತಿ ಸಮರ್ಪಿಸಿದರು.

ಜಾತ್ರಾ ಮಹೋತ್ಸವ ಅಂಗವಾಗಿ ರಾತ್ರಿ “ರಾಜಾ ಸತ್ಯವ್ರತ ಅಥವಾ ಶನಿಪ್ರಭಾವ ” ಎಂಬ ಸುಂದರ ಪೌರಾಣಿಕ ನಾಟಕವನ್ನು ಏರ್ಪಡಿಸಲಾಗಿತ್ತು. ಮಾ.16 ನೇ ಭಾನುವಾರ ಬೆಳಿಗ್ಗೆ 9-00 ಗಂಟೆಯಿಂದ ಭೂತಪ್ಪನವರ ಸೇವಾ ಕಾರ್ಯಗಳು ನಡೆದವು.

ಮಾ.14 ರ ಶುಕ್ರವಾರ ರಾತ್ರಿಯಿಂದ ಮಾ.15ರ ಶನಿವಾರ ರಾತ್ರಿವರೆಗೆ ಎಲ್ಲಾ ಭಕ್ತಾದಿಗಳಿಗೂ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.

ಬೇಲೂರು: ಟಿ.ವಿ.ಮಾಧ್ಯಮಗಳ ಹೊಡೆತಕ್ಕೆ ಸಿಲುಕಿ ನಲುಗಿರುವ ನಾಟಕ ಕಲೆ ಇಂದಿಗೂ ಜೀವಂತವಾಗಿದೆ ಎಂದರೆ, ಇದಕ್ಕೆ ಗ್ರಾಮೀಣ ಪ್ರದೇಶದ ಜನರ ಪ್ರೋತ್ಸಾಹ ಹಾಗೂ ಆಸಕ್ತಿಯೇ ಕಾರಣವಾಗಿದೆ ಎಂದು ಶಾಸಕ ಹೆಚ್.ಕೆ ಸುರೇಶ್ ತಿಳಿಸಿದರು.

ತಾಲೂಕಿನ ಹಗರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೇರಿದ ಅಡವಿ ಬಂಟೆನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ 46ನೇ ವರ್ಷದ ಶ್ರೀ ದೇವೀರಮ್ಮ ಶ್ರೀ ವೀರಭದ್ರೇಶ್ವರ ಸ್ವಾಮಿಯವರ ಜಾತ್ರಾ ಮಹೋತ್ಸವದ ಪ್ರಯುಕ್ತ ಏರ್ಪಡಿಸಿದ್ದ ರಾಜಾ ಸತ್ಯವ್ರತ ಅಥವಾ ಶನಿಪ್ರಭಾವ ” ಎಂಬ ಸುಂದರ ಪೌರಾಣಿಕ ನಾಟಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು, ಇಂದಿನ ದಿನಮಾನಗಳಲ್ಲಿ ಟಿವಿ, ಮೊಬೈಲ್‌ ಹಾವಳಿಯಿಂದ ಪೌರಾಣಿಕ ನಾಟಕಗಳು ನಶಿಸುತ್ತಿವೆ. ಗ್ರಾಮೀಣ ಭಾಗದ ಕಲಾಭಿಮಾನಿಗಳು ಪೌರಾಣಿಕ ನಾಟಕಗಳನ್ನು ಉಳಿಸಿ ಬೆಳೆಸುವಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕೆಂದು ಕರೆ ನೀಡಿದರು. ಬಂಟೆನಹಳ್ಳಿಯ ಗ್ರಾಮಕ್ಕೆ ಅರಣ್ಯ ಇಲಾಖೆಯಿಂದ ಆಗುತ್ತಿರುವ ಸಮಸ್ಯೆಯನ್ನು ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಈ ಬಗ್ಗೆ ಸದನದಲ್ಲೂ ಕೂಡ ಸರ್ಕಾರವನ್ನ ಗಮನ ಸೆಳೆಯುವಂತಹ ಕೆಲಸ ಮಾಡುತ್ತೇನೆ ಎಂದರು.

ವೇದಿಕೆ ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ನವೀನ್, ಬಿಜೆಪಿ ಮುಖಂಡ ಡಿಶಾಂತ್ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಮುತ್ತಣ್ಣ, ಪೃಥ್ವಿರಾಜ್, ವಕೀಲರಾದ ವೀರಭದ್ರೇಗೌಡ, ಗ್ರಾಮದ ಮುಖಂಡರಾದ ಸಿದ್ದಮಲ್ಲೇಗೌಡ, ಬಸವರಾಜ್, ವಿರುಪಾಕ್ಷ, ಜಯಣ್ಣ ಗ್ರಾಮಸ್ಥರು ಹಾಗೂ ಭಕ್ತರು ಹಾಜರಿದ್ದರು.

Continue Reading

Hassan

ಛತ್ರಪತಿ ಶಿವಾಜಿ ತತ್ವ ಆದರ್ಶ ಅನುಸರಿಸಿ: ಸಂಸದ ಶ್ರೇಯಸ್ ಪಟೇಲ್

Published

on

ಹಾಸನ : ಇಡೀ ದೇಶಕ್ಕೆ ಮಾದರಿಯಾದ ಛತ್ರಪತಿ ಶಿವಾಜಿ ಮಹಾರಾಜರ ತತ್ವ ಆದರ್ಶಗಳನ್ನು ಎಲ್ಲರೂ ಅನುಸರಿಸಬೇಕು ಎಂದು ಸಂಸದ ಶ್ರೇಯಸ್ ಪಟೇಲ್ ಕರೆ ನೀಡಿದರು.

ನಗರದ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಭಾನುವಾರದಂದು ಆಯೋಜಿಸಿದ್ದ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿವಾಜಿ ಅವರ ಧೈರ್ಯ, ಶೌರ್ಯ, ನೇರ ನುಡಿಯನ್ನು ಎಲ್ಲರೂ ಮೆಚ್ಚಲೇಬೇಕು. ಶಿವಾಜಿ ಅವರು ಒಂದು ಸಮಾಜಕ್ಕೆ ಸೀಮಿತವಾದವರಲ್ಲ. ಇಡೀ ದೇಶಕ್ಕೆ ಮಾದರಿಯಾದ ಕ್ರಾಂತಿವೀರರು. ಮುಂದಿನ ಪೀಳಿಗೆಯವರು, ನಾವು ಅವರು ಹಾಕಿಕೊಟ್ಟ ದಾರಿಯಲ್ಲಿ ಸಾಗೋಣ ಎಂದು ಹೇಳಿದರು.

ಬೆಂಗಳೂರಿನ ಗೋಸಾಯಿ ಮಠದ ಮಂಜುನಾಥ ಸ್ವಾಮೀಜಿ ಮಾತನಾಡಿ, ಛತ್ರಪತಿ ಶಿವಾಜಿಯವರು ಕೇವಲ ಮರಾಠ ಸಮಾಜಕ್ಕೆ ಸೀಮಿತವಲ್ಲ, ಇಡೀ ವಿಶ್ವಕ್ಕೆ ಆದರ್ಶ ಪುರುಷರಾಗಿದ್ದಾರೆ. ಶಿವಾಜಿ ರಾಷ್ಟ್ರ ನಾಯಕ, ಸ್ವರಾಜ್ಯ ಸ್ಥಾಪಕರಾಗಿದ್ದಾರೆ. ಭಾರತೀಯರೆಲ್ಲರೂ ಒಂದೇ ಎಂಬ ಉದಾತ್ತ ಆದರ್ಶ ಕೊಟ್ಟಿರುವ ಮಹಾಪುರುಷರಲ್ಲಿ ಶಿವಾಜಿ ಅವರೂ ಒಬ್ಬರು. ಶಿವಾಜಿವನ್ನು ನಾಲ್ಕು ಗೋಡೆಗೆ ಸೀಮಿತಗೊಳಿಸದೆ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಅನುಷ್ಟಾನಕ್ಕೆ ತರಬೇಕು ಎಂದು ಹೇಳಿದರು.

ಶಾಸಕ ಹೆಚ್.ಪಿ. ಸ್ವರೂಪ್ ಮಾತನಾಡಿ, ಶಿವಾಜಿಯವರು ವೀರ ಯೋಧರಾಗಿದ್ದು, ವಿಶ್ವ ಪ್ರಸಿದ್ಧರಾಗಿದ್ದಾರೆ. ಶಿವಾಜಿ ಅವರ ಪುತ್ತಳಿಯನ್ನು ಹಾಸನದಲ್ಲಿ ಶೀಘ್ರದಲ್ಲೇ ಅನಾವರಣ ಮಾಡೋಣ ಹಾಗೂ ಮರಾಠ ಸಮುದಾಯದ ಮಕ್ಕಳಿಗೆ ವಸತಿ ನಿಲಯವನ್ನು ನಿರ್ಮಾಣ ಮಾಡಿಕೊಡುವುದರ ಕುರಿತು ನೀವು ಕೂಡ ಮನವಿ ಮಾಡಿದ್ದೀರಿ ಅದನ್ನು ಶೀಘ್ರದಲ್ಲೇ ಶಾಸಕರ ನಿಧಿಯಿಂದ ಮಾಡಿಕೊಡುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮಕ್ಕೂ ಮೊದಲು ೩೯೮ನೇ ಶ್ರೀ ಶಿವ ಛತ್ರಪತಿ ಶಿವಾಜಿ ಮಹಾರಾಜರ ಜಯಂತೋತ್ಸವದ ಅಂಗವಾಗಿ ಶ್ರೀ ಅಂಬಾಭವಾನಿ ಕಲ್ಯಾಣ ಮಂಟಪ, ಅಗ್ರಹಾರ, ಹಾಸನದಲ್ಲಿ ಬೆಳಗ್ಗೆ ಒಂಬತ್ತು ಗಂಟೆಗೆ ಪೂಜಾ ಕಾರ್ಯಕ್ರಮಗಳನ್ನು ಮುಗಿಸಿ ಇಲ್ಲಿಂದ ಮೆರವಣಿಗೆ ಹೊರಟು ಹಳೆ ಬಸ್ ಸ್ಟ್ಯಾಂಡ್ ರಸ್ತೆ ಮಾರ್ಗವಾಗಿ ಕಲಾಭವನವರೆಗೆ ಮೆರವಣಿಗೆ ನಡೆಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಎಚ್.ಪಿ. ತಾರಾನಾಥ್, ಹಾಸನ ಜಿಲ್ಲಾ ನೌಕರರ ಸಂಘದ ಗೌವಾಧ್ಯಕ್ಷರಾದ ಈ. ಕೃಷ್ಣೇಗೌಡ, ವಕೀಲರಾದ ವಿಜಯಕುಮಾರ್ ನಾರ್ವೆ, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತಿನ ಹಾಸನ ಜಿಲ್ಲಾಧ್ಯಕ್ಷರಾದ ಎನ್ ಲೀಲಾಕುಮಾರ್, ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಎ.ವಿ. ರುದ್ರಪ್ಪಾಜಿರಾವ್ ಫೋರ್ಪಡೆ, ಗೌರವಾಧ್ಯಕ್ಷ ಹೆಚ್.ಜೆ. ತುಳಜಿರಾವ್ ಠಾಣ್ಗೆ, ಖಜಾಂಚಿ ಪ್ರಕಾಶ್, ನಿರ್ದೇಶಕ ಸುರೇಶ್ ಇತರರು ಉಪಸ್ಥಿತರಿದ್ದರು. ಯದೀಶ್ ಅವರು ಕಾರ್ಯಕ್ರಮ ನಿರೂಪಿಸಿದರು.

Continue Reading

Hassan

ಏ.12, 13ರಂದು ಹಾಸನದಲ್ಲಿ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿ

Published

on

ಹಾಸನ: ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಟಿ.ವಿ. ಶಿವಾನಂದ್ ತಗಡೂರು ಸೂಚನೆಯಂತೆ ಏಪ್ರಿಲ್ 12 ಮತ್ತು 13 ರಂದು ನಗರದ ಸರಕಾರಿ ಕಲಾ ಕಾಲೇಜು ಮತ್ತು ಸರಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಮೆಂಟ್ ನಡೆಸಲು ಹಾಸನ ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಸಭೆ ನಡೆಸಿ ಯಶಸ್ವಿಯಾಗಿ ನಡೆಸಲು ನಿರ್ಧರಿಸಲಾಯಿತು.

ಸಭೆಯ ಅಧ್ಯಕ್ಷತೆವಹಿಸಿದ್ದ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಟಿ.ವಿ. ಶಿವಾನಂದ್ ತಗಡೂರು ಮಾತನಾಡಿ, ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಹಾಸನದಲ್ಲಿ ಆಯೋಜಿಸಲು ತೀರ್ಮಾನ ಮಾಡಲಾಗಿದ್ದು, ಕಳೆದ ವರ್ಷ ಮಂಗಳೂರಿನಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನು ಬಹಳ ಅಚ್ಚುಕಟ್ಟಾಗಿ ಆಯೋಜನೆ ಮಾಡಲಾಗಿತ್ತು. ಅದಕ್ಕಿಂತ ಬಿನ್ನವಾಗಿ ಇಲ್ಲಿ ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಲು ಆಲೂಚನೆ ಇಟ್ಟುಕೊಂಡು ನಿರ್ಧರಿಸಲಾಗಿದೆ. ಕೊಪ್ಪಳದಲ್ಲಿ ನಡೆದ ಸಮ್ಮೇಳನದಲ್ಲಿ ಮದನ್ ಗೌಡರು ತಿಳಿಸಿದ್ದರು. ಏಪ್ರಿಲ್ ೧೨ ಮತ್ತು ೧೩ನೇ ದಿನಾಂಕದಂದು ಹಾಸನದಲ್ಲಿ ಏರ್ಪಡು ಮಾಡಲು ಭಾನುವಾರದಂದು ನಡೆದ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದರು.

ಯಾರು ಪತ್ರಕರ್ತರ ಸಂಘದ ಸದಸ್ಯರಾಗಿದ್ದಾರೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಒಂದೊಂದು ತಂಡ ಭಾಗವಹಿಸಲು ಅವಕಾಶ ಇರುತ್ತದೆ. ಪ್ರತಿಯೊಬ್ಬರ ಐಡಿ ಕಾರ್ಡ್ ಪರೀಕ್ಷೆ ಮಾಡಲಾಗುದು. ಹೊರ ಜಿಲ್ಲೆಯಿಂದ ಬರುವ ಪತ್ರಕರ್ತ ಕ್ರೀಡಾಪಟುಗಳಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಕ್ರೀಡಾಕೂಟ ಯಶಸ್ವಿಗೆ ಜಿಲ್ಲಾ ಸಮಿತಿ, ಉಪ ಸಮಿತಿ ಮಾಡಿಕೊಂಡು ಆವರವರ ಜವಬ್ಧಾರಿಯನ್ನು ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ವಹಿಸಿಕೊಡಲಿದೆ. ಪ್ರಾರಂಭದ ದಿನದಲ್ಲಿ ಮೊದಲ ಆಟ ಸೆಲೆಬ್ರೆಟಿ ಕ್ರಿಕೆಟ್ ನಡೆಯಲಿದೆ. ಮಂಗಳೂರಿನಲ್ಲಿಯೂ ಕೂಡ ಸೆಲಬ್ರಿಟಿ ಜನಪ್ರತಿನಿಧಿಗಳಿಂದ ಆಟೋಟ ನಡೆದಿತ್ತು. ಒಟ್ಟಾರೆ ರಾಜ್ಯ ಮಟ್ಟದ ಈ ಕ್ರಿಕೆಟ್ ಕ್ರೀಡಾಕೂಟವನ್ನು ಯಶಸ್ವಿಗೊಳಿಸುವಂತೆ ಕರೆ ನೀಡಿ ಮನವಿ ಮಾಡಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂರ್ಘದ ಅಧ್ಯಕ್ಷ ಕೆ.ಹೆಚ್. ವೇಣುಕುಮಾರ್ ಮಾತನಾಡಿ, ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸುವ ಕ್ರಿಕೆಟ್ ಕ್ರೀಡಾಪಟುಗಳಿಗೆ ವಸತಿ ಸೌಲಭ್ಯ, ಊಟದ ವ್ಯವಸ್ಥೆ ಸೇರಿದಂತೆ ಎಲ್ಲಾ ಸಿದ್ಧತೆಗಳನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಾಡುತ್ತಿದೆ. ಕ್ರಿಕೆಟ್ ಪಂದ್ಯಾವಳಿಗೆ ವಿಶೇಷವಾಗಿ ರಾಜ್ಯ ಸಭಾಪತಿ ಯೂ.ಟಿ. ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಆಗಮಿಸಲಿದ್ದಾರೆ. .

ಸಭೆಯಲ್ಲಿ ರಾಜ್ಯ ಪತ್ರಕರ್ತರ ಸಂಘದ ಕಾರ್ಯಕಾರಣಿ ಸದಸ್ಯ ಹೆಚ್.ಬಿ. ಮದನ್ ಗೌಡ, ಮಾಜಿ ಅಧ್ಯಕ್ಷರಾದ ಮಂಜುನಾಥ್, ರವಿನಾಕಲಗೂಡು, ಬಿ.ಆರ್. ಉದಯಕುಮಾರ್, ಪ್ರಸನ್ನಕುಮಾರ್, ಕಾರ್ಯದರ್ಶಿ .ಪಿ.ಎ. ಶ್ರೀನಿವಾಸ್, ಕುಮಾರ್, ನಟರಾಜು, ಜಿ. ಪ್ರಕಾಶ್, ಹೆತ್ತೂರ್ ನಾಗರಾಜು, ಜ್ಞಾನೇಶ್, ಕುಶ್ವಂತ್, ಕೃಷ್ಣ, ನಾಗರಾಜು, ಮಂಜು, ಮೆಹಾಬೂಬ್, ದಯಾನಂದ್, ಶರತ್ ಇತರರು ಉಪಸ್ಥಿತರಿದ್ದರು.

Continue Reading

Trending

error: Content is protected !!