State
ಪತ್ರಕರ್ತ ಪ್ರಭುಲಿಂಗ ನೀಲೂರೆ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ
ಬೆಂಗಳೂರು: ವಿಜಯ ಕರ್ನಾಟಕ ಉಪ ಸಂಪಾದಕರಾಗಿ ಕಲಬುರ್ಗಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಭುಲಿಂಗ ನೀಲೂರೆ(52) ಅವರು ನಿಧನರಾಗಿದ್ದು, ಪತ್ನಿ, ಇಬ್ಬರು ಪುತ್ರಿಯರು ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.
ಉಷಾಕಿರಣ, ವಿಜಯವಾಣಿ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಅವರು ಸದ್ಯ ವಿಜಯಕರ್ನಾಟಕ ಪತ್ರಿಕೆಯಲ್ಲಿದ್ದರು. ಕಲಬುರ್ಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು.

ಕೆಯುಡಬ್ಲೂೃಜೆ ಸಂತಾಪ:
ಕ್ರೀಯಾಶೀಲ ಪತ್ರಕರ್ತರಾಗಿದ್ದ ಪ್ರಭುಲಿಂಗ ನೀಲೂರೆ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು, ಸಾಹಿತಿ, ಸಂಘಟಕನನ್ನು ಕಳೆದುಕೊಂಡಂತಾಗಿದೆ ಎಂದು ಶೋಕಿಸಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ತಗಡೂರು ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ.
Special
ಗೃಹಲಕ್ಷ್ಮಿ ಯೋಜನೆಯಲ್ಲಿ 1.04 ಲಕ್ಷ ಅನರ್ಹ ಫಲಾನುಭವಿಗಳ ಪತ್ತೆ: ಸರ್ಕಾರದಿಂದ ಪರಿಶೀಲನೆ!
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ಅನರ್ಹರಿಗೆ ಹಣ ಪಾವತಿಯಾಗಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಸುಮಾರು 1.04 ಲಕ್ಷ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಪಟ್ಟಿಯಿಂದ ತೆಗೆದುಹಾಕಲು ಸರ್ಕಾರ ಕ್ರಮ ಕೈಗೊಂಡಿದೆ. ಯೋಜನೆಯ ದುರುಪಯೋಗದಿಂದ ಸುಮಾರು ₹100 ಕೋಟಿ ಸಾರ್ವಜನಿಕ ಹಣ ಅನರ್ಹ ಖಾತೆಗಳಿಗೆ ಜಮೆಯಾಗಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಏಕೆ ಪರಿಶೀಲನೆ?
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲಿಸಲು ಆದೇಶಿಸಿದೆ. ಮೃತ ವ್ಯಕ್ತಿಗಳ ಹೆಸರಿನಲ್ಲಿ, ಅರ್ಹತೆ ಕಳೆದುಕೊಂಡವರ ಹೆಸರಿನಲ್ಲಿ ಅಥವಾ ತಪ್ಪು ದಾಖಲೆಗಳ ಆಧಾರದ ಮೇಲೆ ಕೆಲವರು ಯೋಜನೆಯ ಪ್ರಯೋಜನ ಪಡೆಯುತ್ತಿರುವ ಬಗ್ಗೆ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪರಿಶೀಲನೆ ನಡೆಸಲಾಗುತ್ತಿದೆ.
ಈಗಾಗಲೇ ನಡೆದ ಕ್ರಮಗಳು:
ಹಿಂದೆಯೂ ಸರ್ಕಾರ ವಿವಿಧ ಜಿಲ್ಲೆಗಳಲ್ಲಿ ಪರಿಶೀಲನೆ ನಡೆಸಿ ಅನರ್ಹ ಫಲಾನುಭವಿಗಳನ್ನು ಪತ್ತೆಹಚ್ಚಿತ್ತು. ಕೆಲವು ಸಂದರ್ಭಗಳಲ್ಲಿ ಮೃತ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗಿರುವುದು ಕಂಡುಬಂದಿದ್ದು, ಆ ಹಣವನ್ನು ವಾಪಸ್ ಪಡೆಯುವ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಧಿಕಾರಿಗಳು ಮಾಸಿಕ ಪರಿಶೀಲನೆ ವ್ಯವಸ್ಥೆಯನ್ನು ಬಲಪಡಿಸಿದ್ದಾರೆ.

ಅರ್ಹ ಫಲಾನುಭವಿಗಳಿಗೆ ಯಾವುದೇ ತೊಂದರೆ ಇಲ್ಲ:
ಸರ್ಕಾರ ಸ್ಪಷ್ಟಪಡಿಸಿರುವಂತೆ, ಈ ಕ್ರಮದ ಉದ್ದೇಶ ಯೋಜನೆಯ ಸೌಲಭ್ಯವನ್ನು ಕೇವಲ ಅರ್ಹ ಮಹಿಳೆಯರಿಗೆ ತಲುಪಿಸುವುದಾಗಿದೆ. ನಿಜವಾದ ಫಲಾನುಭವಿಗಳ ಪಾವತಿಗೆ ಯಾವುದೇ ಅಡ್ಡಿಯಾಗುವುದಿಲ್ಲ. ಅರ್ಹತೆ ಹೊಂದಿರುವ ಮಹಿಳೆಯರು ತಮ್ಮ ದಾಖಲೆಗಳು ಸರಿಯಾಗಿರುವುದನ್ನು ಖಚಿತಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಯೋಜನೆಯ ಪಾರದರ್ಶಕತೆಗೆ ಒತ್ತು:
ಸರ್ಕಾರ ವಿವಿಧ ಇಲಾಖೆಗಳ ಮಾಹಿತಿಯನ್ನು ಒಟ್ಟುಗೂಡಿಸಿ ಏಕೀಕೃತ ಡೇಟಾಬೇಸ್ ನಿರ್ಮಿಸಲು ಯೋಜಿಸಿದೆ. ಇದರ ಮೂಲಕ ಫಲಾನುಭವಿಗಳ ಮಾಹಿತಿ ಪರಿಶೀಲನೆ ಸುಲಭವಾಗಲಿದ್ದು, ಭವಿಷ್ಯದಲ್ಲಿ ಅನರ್ಹರಿಗೆ ಸೌಲಭ್ಯ ಸಿಗುವುದನ್ನು ತಡೆಯಲು ನೆರವಾಗಲಿದೆ.
ಒಟ್ಟಾರೆ, ಗೃಹಲಕ್ಷ್ಮಿ ಯೋಜನೆಯ ಪಾರದರ್ಶಕತೆ ಮತ್ತು ಸಾರ್ವಜನಿಕ ಹಣದ ಸಮರ್ಪಕ ಬಳಕೆಯನ್ನು ಖಚಿತಪಡಿಸಲು ಸರ್ಕಾರ ಈ ಮಹತ್ವದ ಪರಿಶೀಲನಾ ಅಭಿಯಾನವನ್ನು ಆರಂಭಿಸಿದೆ.
Politics
ಕಾಂಗ್ರೆಸ್ ಹೈಕಮಾಂಡ್ ಸಿಎಂ ಬದಲಾವಣೆಗೆ ನಿರ್ಧಾರ: ವಿಜಯೇಂದ್ರ ವ್ಯಂಗ್ಯ
Politics
ಸಿಎಂ ಬದಲಾವಣೆ ಕುರಿತು ಸುರ್ಜೇವಾಲ ಸ್ಪಷ್ಟನೆ
-
Special23 hours agoKVAFSU ನೇಮಕಾತಿ 2026: 96 ಬೋಧನಾ ಹುದ್ದೆಗಳಿಗೆ ಅರ್ಜಿ ಆಹ್ವಾನ
-
Mysore16 hours agoಹೊಲದಲ್ಲಿ ಕಳೆ ಕೀಳುತ್ತಿದ್ದ ವೇಳೆ ಸಿಡಿಲು ಬಡಿದು ಮಹಿಳೆ ಸಾ*ವು
-
Kodagu17 hours agoರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ
-
Kodagu16 hours agoವರ್ಕ್ಶಾಪ್ ಮಾಲೀಕರ ಸಂಘದ ಅಧ್ಯಕ್ಷರಾಗಿ ಮಣಿಕಂಠನ್ ಆಯ್ಕೆ
-
Chamarajanagar17 hours agoಕೋಡಿಮೋಳೆ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
-
Kodagu16 hours agoಬ್ಯಾಡಗೊಟ್ಟ, ದೊಡ್ಡಕುಂದ ಸೇರಿದಂತೆ ವಿವಿಧೆಡೆ ಮೇ.30 ರಂದು ವಿದ್ಯುತ್ ವ್ಯತ್ಯಯ
-
Chikmagalur15 hours agoಜಯಪುರದಲ್ಲಿ ಮನೆ ಕಳ್ಳತನ : ₹2.04 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ದೋಚಿಕೆ
-
Kodagu17 hours agoಉತ್ತರ ಕೊಡಗು ಮುಸ್ಲಿಂ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಎಚ್.ಮುಸ್ತಫ ಹಾಜಿ, ಉಪಾಧ್ಯಕ್ಷರಾಗಿ ಎಂ.ಬಿ.ಕೌಸರ್ ಆಯ್ಕೆ

