Connect with us

Agriculture

ಜೀವನೋಪಾಯಕ್ಕಾಗಿ ಮಾಡಿರುವ ಭೂ ಒತ್ತುವರಿದಾರರು ಆತಂಕಪಡುವ ಅಗತ್ಯ ಇಲ್ಲ

Published

on

ಚಿಕ್ಕಮಗಳೂರು: ಜೀವನೋಪಾಯಕ್ಕಾಗಿ ಮಾಡಿರುವ ಭೂ ಒತ್ತುವರಿದಾರರು ಆತಂಕಪಡುವ ಅಗತ್ಯ ಇಲ್ಲ ಎಂದು ಶೃಂಗೇರಿ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಟಿ.ಡಿ.ರಾಜೇಗೌಡ ಭರವಸೆ ನೀಡಿದರು.ಇಂದು ನಗರದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒತ್ತುವರಿ ಸಮಸ್ಯೆ ಸಂಬಂಧ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ಲೋಕಸಭೆ ಮಾಜಿ ಸದಸ್ಯ ಜಯಪ್ರಕಾಶ್ ಹೆಗ್ಡೆ, ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ತಾವೂ ಹಾಗೂ ಜಿಲ್ಲೆಯ ಎಲ್ಲಾ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೇ ಅವರನ್ನು ಭೇಟಿ ಮಾಡಿ ಸಮಸ್ಯೆಯನ್ನು ಮನವರಿಕೆ ಮಾಡಿದ್ದೀವೆ ಎಂದು ಹೇಳಿದರು.


ಬಹಳಷ್ಟು ಉಹಾಪೋಹಗಳು ಭೂ ಒತ್ತುವರಿ ಬಗ್ಗೆ ಹರಿದಾಡುತ್ತಿದ್ದು, ಕೆಲವರು ರಾಜಕೀಯ ದುರುದ್ದೇಶದಿಂದ ಸುಳ್ಳು ಅಪಪ್ರಚಾರ ಮಾಡುತ್ತಾ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ಈಗಾಗಲೇ ಸರ್ಕಾರ ಒತ್ತುವರಿ ತೆರವು ಕಾರ್ಯವನ್ನು ಸ್ಥಗಿತಗೊಳಿಸಿ ಆದೇಶಿಸಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರ ಹಿತಾಸಕ್ತಿಗೆ ಅನುಗುಣವಾಗಿ ಅರಣ್ಯ ಇಲಾಖೆಗೆ ಸೂಕ್ತ ನಿರ್ದೇಶನವನ್ನು ನೀಡಿದ್ದಾರೆ. ಜತೆಗೆ ಕಾನೂನಿನ ಚೌಕಟ್ಟಿನಡಿಯಲ್ಲಿ ಅರ್ಹ ಪ್ರಕರಣಗಳಿಗೆ ಹಕ್ಕುಪತ್ರ ನೀಡುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಒತ್ತುವರಿ ಸಮಸ್ಯೆ ಬಹಳಷ್ಟು ವರ್ಷಗಳ ಸಮಸ್ಯೆಯಾಗಿದೆ. ಸ್ವಾತಂತ್ರ್ಯ ಪೂರ್ವದಿಂದ ಇಲ್ಲಿಯವರೆಗೂ ಜನಸಂಖ್ಯೆಯಲ್ಲಿ ಭಾರೀ ಪ್ರಮಾಣದ ಬದಲಾವಣೆಯಾಗಿದೆ. ಇದರಿಂದ ಜೀವನೋಪಾಯಕ್ಕಾಗಿ ಒತ್ತುವರಿಯೂ ನಡೆದಿದೆ. ಅರಣ್ಯವೂ ಕ್ಷೀಣಿಸಿದೆ ಎಂದು ತಿಳಿಸಿದರು.

Continue Reading

Agriculture

ಮೆಕ್ಕೆಜೋಳಕ್ಕೆ ₹3,000 ಕನಿಷ್ಠ ಬೆಂಬಲ ಬೆಲೆ ಬೇಕು ಇಲ್ಲದಿದ್ದರೆ ಕಬ್ಬು ಬೆಳೆಗಾರರಂತೆ ಹೋರಾಟ : ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಎಚ್ಚರಿಕೆ

Published

on

ಬೆಂಗಳೂರು :  ಮೆಕ್ಕೆಜೋಳ ಬೆಳೆಗಾರರ ಹಿತಾಸಕ್ತಿಗಾಗಿ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರು ಎಚ್ಚರಿಸಿದ್ದಾರೆ. ಸರ್ಕಾರವು ಮೆಕ್ಕೆಜೋಳಕ್ಕೆ ₹3,000 ಕನಿಷ್ಠ ಬೆಂಬಲ ಬೆಲೆ (MSP) ನಿಗದಿ ಮಾಡದಿದ್ದರೆ, ಕಬ್ಬು ಬೆಳೆಗಾರರಂತೆ ರೈತರು ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಹಿನ್ನೆಲೆ:
ಇತ್ತೀಚಿನ ವರ್ಷಗಳಲ್ಲಿ ಮೆಕ್ಕೆಜೋಳದ ಮಾರುಕಟ್ಟೆ ಬೆಲೆ ನಿರಂತರ ಕುಸಿತ ಕಂಡಿದ್ದು, ರೈತರು ನಷ್ಟದ ಬಲೆಯಲ್ಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಉತ್ಪಾದನಾ ವೆಚ್ಚ ಹೆಚ್ಚಾಗಿರುವುದರಿಂದ ₹3,000 MSP ನೀಡುವುದು ನ್ಯಾಯಸಮ್ಮತ ಎಂದು ರೈತ ಸಂಘಟನೆಗಳು ಆಗ್ರಹಿಸುತ್ತಿವೆ.

“ರೈತರ ದುಡಿಮೆ ಗೌರವಿಸಲ್ಪಡಬೇಕು. ಸರ್ಕಾರವು ಮೆಕ್ಕೆಜೋಳದ ಬೆಲೆ ಸ್ಥಿರಪಡಿಸದಿದ್ದರೆ, ಕಬ್ಬು ಬೆಳೆಗಾರರ ಶೈಲಿಯ ಹೋರಾಟ ಅನಿವಾರ್ಯವಾಗಲಿದೆ. ರೈತರ ಹಿತಕ್ಕಾಗಿ ನಾವು ಹೋರಾಟಕ್ಕೆ ಸಿದ್ಧರಾಗಿದ್ದೇವೆ,” ಎಂದು ರೇಣುಕಾಚಾರ್ಯ ಅವರು ಹೇಳಿಕೆ ನೀಡಿದ್ದಾರೆ.

ಮುಖ್ಯ ಬೇಡಿಕೆಗಳು:
ಮೆಕ್ಕೆಜೋಳಕ್ಕೆ ಕನಿಷ್ಠ ₹3,000 MSP ನಿಗದಿ
ರೈತರಿಗೆ ಸಮಯಕ್ಕೆ ಸರಿಯಾದ ಪಾವತಿ ಖಾತರಿ
ಮಾರುಕಟ್ಟೆಯಲ್ಲಿ ಖರೀದಿ ಕೇಂದ್ರಗಳ ಸಂಖ್ಯೆಯ ಹೆಚ್ಚಳ

ರೈತರ ಶ್ರಮಕ್ಕೆ ನ್ಯಾಯ ದೊರಕಿಸಲು ಸರ್ಕಾರವು ಶೀಘ್ರ ಕ್ರಮ ಕೈಗೊಳ್ಳಬೇಕು ಎಂಬುದು ರೈತ ನಾಯಕರ ಸ್ಪಷ್ಟ ಸಂದೇಶ. ಸರ್ಕಾರದ ನಿರ್ಧಾರವನ್ನು ಎದುರು ನೋಡುತ್ತಿರುವ ರೈತರ ನಂಬಿಕೆ ಈಗ ಸರ್ಕಾರದ ಮುಂದಿನ ಹೆಜ್ಜೆಯ ಮೇಲೆ ಅವಲಂಬಿತವಾಗಿದೆ.

Continue Reading

Agriculture

ಸಕ್ಕರೆ ಕಾರ್ಖಾನೆಗಳ ಕಬ್ಬು ದರ ನಿಗದಿ: ರೈತರಿಗೆ ಸಿಹಿ ಸುದ್ದಿ : ಅಂತಿಮ ದರ ಪ್ರಕಟಣೆ

Published

on

ಇತ್ತೀಚಿಗೆ ನಡೆದ ಪ್ರತಿಭಟನೆಯ ಫಲವಾಗಿ ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತ ಮುಖಂಡರ ನಡುವೆ ಚರ್ಚೆ ನಡೆದಿದ್ದು, ರಾಜ್ಯ ಸರ್ಕಾರವು ಕಬ್ಬಿಗೆ ಹೊಸ ದರ ನಿಗದಿ ಮಾಡುವುದರ ಮೂಲಕ ರಾಜ್ಯದ ರೈತರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.

ಎಷ್ಟು ಹೆಚ್ಚಳ?

ಹೊಸ ದರದ ಪ್ರಕಾರ, ಪ್ರತಿ ಟನ್‌ ಕಬ್ಬಿಗೆ ₹3,300 ನಿಗದಿ ಮಾಡಲಾಗಿದೆ. ಹಿಂದಿನ ದರವಾದ ₹3,200 ಗೆ ಹೋಲಿಸಿದರೆ ₹100ರಷ್ಟು ಹೆಚ್ಚಳವಾಗಿದೆ. ಇದರಲ್ಲಿ ಕಾರ್ಖಾನೆಗಳು ₹50 ಹೆಚ್ಚುವರಿ ಪಾವತಿಸಲಿದ್ದು, ರಾಜ್ಯ ಸರ್ಕಾರವು ಒಂದು ಅವಧಿಯ ಪ್ರೋತ್ಸಾಹ ಧನವಾಗಿ ಮತ್ತೊಂದು ₹50 ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಇಳುವರಿ ಪ್ರಮಾಣವನ್ನು ಆಧರಿಸಿ ದರ ನಿಗದಿ ಮಾಡಲಾಗಿದ್ದು, ಶೇ.10.5 ಇಳುವರಿ ಪ್ರಮಾಣ ಇರುವ ಕಬ್ಬಿಗೆ ₹3,200 ಮತ್ತು ಶೇ.11.25 ಇಳುವರಿ ಪ್ರಮಾಣದ ಕಬ್ಬಿಗೆ ₹3,300 ದೊರೆಯಲಿದೆ. ಸಾಗಣೆ ಮತ್ತು ಕಟಾವು ವೆಚ್ಚಗಳನ್ನು ಹೊರತುಪಡಿಸಿ ಈ ದರ ನೀಡಲಾಗುತ್ತದೆ.

ಈ ನಿರ್ಧಾರದಿಂದ ರಾಜ್ಯದ ಕಬ್ಬು ರೈತರಿಗೆ ಆರ್ಥಿಕ ನೆರವಾಗಲಿದ್ದು, ಸಕ್ಕರೆ ಕಾರ್ಖಾನೆಗಳು ಸಹ ರೈತರೊಂದಿಗೆ ಸಹಕಾರದ ಮನೋಭಾವದಿಂದ ಕೆಲಸ ಮಾಡಲಿವೆ ಎಂದು ಸರ್ಕಾರ ಆಶಾಭಾವನೆ ವ್ಯಕ್ತಪಡಿಸಿದೆ

Continue Reading

Agriculture

ರೈತರಿಗೆ ಸಿಹಿ ಸುದ್ದಿ : ಬೆಳೆ ನಷ್ಟ ಪರಿಹಾರ ದರ ಪರಿಷ್ಕರಣೆಗೆ ಸರ್ಕಾರದ ನಿರ್ಧಾರ

Published

on

Crop Loss Compensation Increase : ಕರ್ನಾಟಕ ರಾಜ್ಯದಲ್ಲಿ ಒಟ್ಟು ಅಂದಾಜು 5.20 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ ಎಂದು ಅಂದಾಜು ಮಾಡಲಾಗಿದ್ದು, SDRF ಮಾರ್ಗ ಸೂಚಿಯ ಪ್ರಕಾರ ಸದ್ಯಕ್ಕೆ ನೀಡುತ್ತಿರುವ ಪರಿಹಾರವು ರೈತರಿಗೆ ಸಾಲುವುದಿಲ್ಲ ಎಂಬ ಅಭಿಪ್ರಾಯದ ಹಿನ್ನಲೆಯಲ್ಲಿ ಸರ್ಕಾರವು ಪರಿಹಾರ ಮೊತ್ತ ಪರಿಷ್ಕರಣೆಗೆ ನಿರ್ಧಾರ ತೆಗೆದುಕೊಂಡಿದೆ.

ಈ ನಿರ್ಧಾರವನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ವರ್ಷ ಉತ್ತಮ ಮುಂಗಾರು ಮಳೆ ಆದ ಕಾರಣ ರೈತರು ಸರಿಯಾದ ಸಮಯಕ್ಕೆ ಬಿತ್ತನೆ ಮಾಡಿದ್ದರು. ಆದರೆ ಇದರ ಮಧ್ಯೆ ಮೂರರಿಂದ ನಾಲ್ಕು ವಾರ ಸರಿಯಾದ ಮಳೆ ಬರೆದ ಕಾರಣ ಹಲವಾರು ಕಡೆಯಲ್ಲಿ ಬೆಳೆ ಒಣಿಗಿದ್ದವು.

ಇದರಿಂದಾಗಿ ರೈತರು ಮರು ಬಿತ್ತನೆ ಮಾಡಿದರು. ಇದರ ಬೆನ್ನಲ್ಲೇ ಜುಲೈ ಮತ್ತು ಅಗಸ್ಟ್ ತಿಂಗಳಿನಲ್ಲಿ ಅತಿವೃಷ್ಟಿ ಮಳೆಯಾದ ಕಾರಣ ರಾಜ್ಯದ್ಯಂತ ಹಲವಾರು ಕಡೆ ವ್ಯಾಪಕ ಬೆಳೆ ಹಾನಿಯಾಗಿದೆ. ಇದರಿಂದಾಗಿ ರೈತರು ನಷ್ಟ ಹಾಗೂ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದು, ಇದರಿಂದಾಗಿ ಪರಿಹಾರ ಮೊತ್ತವನ್ನು ಹೆಚ್ಚಳ ಮಾಡಲು ಸರ್ಕಾರ ನಿರ್ಧಾರ ತೆಗೆದುಕೊಂಡಿದೆ.

ಪರಿಹಾರ ಮೊತ್ತ ಪರಿಷ್ಕರಣೆ ಅಂತಿಮ ಯಾವಾಗ?

ಕೃಷಿ ಇಲಾಖೆ ಮತ್ತು ಕಂದಾಯ ಇಲಾಖೆ ವತಿಯಿಂದ ನಷ್ಟದ ಜಂಟಿ ಸಮೀಕ್ಷೆ ನಡೆಯುತ್ತಿದ್ದು, ಗರಿಷ್ಠ 10 ದಿನದ ಒಳಗಾಗಿ ಸಮೀಕ್ಷೆ ಕಾರ್ಯ ಮುಗಿಸಿ ವರದಿ ಸಲ್ಲಿಸಲು ಸರ್ಕಾರ ಆದೇಶ ನೀಡಿದೆ. ಇದರ ನಂತರ ಪರಿಷ್ಕೃತ ಪರಿಹಾರ ಮೊತ್ತ ಬಿಡುಗಡೆಯಾಗಲಿದೆ.

Continue Reading

Trending

error: Content is protected !!